kpcc ಚಟುವಟಿಕೆ

[19/02, 10:12 AM] +91 90088 29855: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶನಿವಾರ ನೀಡಿದ ಪ್ರತಿಕ್ರಿಯೆ...
[19/02, 10:15 AM] +91 90088 29855: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಶನಿವಾರ ಬೆಳಗ್ಗೆ ವಾಕಿಂಗ್ ಮಾಡಿದಾಗ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಎಂಎಲ್ಸಿ ಎಸ್. ರವಿ ಮತ್ತಿತರರು ಜತೆಗಿದ್ದರು.
[19/02, 11:58 AM] +91 90088 29855: *ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶನಿವಾರ ನೀಡಿದ ಪ್ರತಿಕ್ರಿಯೆ:*
ನಾವು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಯನ್ನು ಎರಡು ದಿನ ಪೂರೈಸಿದ್ದು, ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟವನ್ನು ಮುಂದುವರಿಸುತ್ತೇವೆ.
ನಾವು ಬಚ್ಚಲು ಬಾಯಿ ಈಶ್ವರಪ್ಪನ ರಾಜೀನಾಮೆ ಕೇಳುತ್ತಿಲ್ಲ. ಅವನನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ನಮ್ಮ ಆಗ್ರಹ ಈಡೇರುವವರೆಗೂ ನಾವು ಅಧಿವೇಶನ ನಡೆಯಲು ಬಿಡುವುದಿಲ್ಲ.

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ, ಈಗ ದೊಡ್ಡ ಸಾಧನೆ ಮಾಡಿರುವಂತೆ ಬೀಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದೆ. ರಾಷ್ಟ್ರಗೀತೆ, ಧ್ವಜ, ಪ್ರಜಾಪ್ರಭುತ್ವ, ಸಂವಿಧಾನ ನೀಡಿದ್ದೇವೆ.

ನಾವು ಅಧಿವೇಶನದ ಸಮಯದಲ್ಲಿ ರಾಷ್ಟ್ರಧ್ವಜ ಹಾರಿಸಿ ತಪ್ಪು ಮಾಡಿದ್ದರೆ ನಮ್ಮ ಮೇಲೆ ಕೇಸ್ ದಾಖಲಿಸಲಿ. ಕಾನೂನು ಕ್ರಮ ಕೈಗೊಳ್ಳಲಿ. ಇನ್ನು ಯಾಕೆ ದಾಖಲಿಸಿಲ್ಲ? ಅದಕ್ಕಿಂತ ಮೊದಲು ದೇಶದ ಧ್ವಜಕ್ಕೆ ಅಪಮಾನ ಮಾಡಿರುವ ಈತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿ. 

ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಸೋಮವಾರ ಈತನನ್ನು ವಜಾಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸುತ್ತೇವೆ.

ನಂತರ ಹಳ್ಳಿ, ಹಳ್ಳಿಗೂ ಹೋಗಿ ಜನರ ಮಧ್ಯೆ ಹೋರಾಟ ಮಾಡುತ್ತೇವೆ.

ಈಶ್ವರಪ್ಪ ದೊಡ್ಡ ಸಾಧನೆ ಮಾಡಿರುವಂತೆ ಅವರಿಗೆ ಸ್ವಾಗತ ಕೋರಲು ಐನೂರು ಮಂದಿ ಸೇರಿದ್ದಾರಂತೆ. ಸಂತೋಷ ಅವರು ಏನಾದರೂ ಮಾಡಿಕೊಳ್ಳಲಿ.

ಆದರೆ ದೇಶದ್ರೋಹದ ಹೇಳಿಕೆ ಕೊಟ್ಟ ಈಶ್ವರಪ್ಪನ ವಿರುದ್ಧ ಪ್ರಕರಣ ದಾಖಲಿಸದೆ, ಅವರ ಹೇಳಿಕೆ ವಿರುದ್ಧ ಕಪ್ಪು ಬಾವುಟ ಹಾರಿಸಲು ಹೋದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಾನು ಎಸ್ಪಿ ಹಾಗೂ ಡಿಜಿ ಜೊತೆ ಮಾತನಾಡುತ್ತೇನೆ. ಅವರು ಪೊಲೀಸ್ ಸಮವಸ್ತ್ರ ಕಳಚಿ ಕೇಸರಿ ಬಟ್ಟೆ ಧರಿಸಿ ಬಿಜೆಪಿಯ ಕಾರ್ಯಕರ್ತರಾಗಿ ಕೆಲಸ ಮಾಡುವಂತೆ ಹೇಳುತ್ತೇನೆ.

ಈಶ್ವರಪ್ಪನಿಗೆ ಸ್ವಾಗತ ಕೋರಲು ಐನೂರು ಜನ ಸೇರಬಹುದಂತೆ, ಅವರ ವಿರುದ್ಧ ಪ್ರಕರಣವಿಲ್ಲವಂತೆ, ಆದರೆ ಪ್ರತಿಭಟನೆ ಮಾಡಲು ಹೋದ 15-20 ಮಂದಿ ವಿರುದ್ಧ ಪ್ರಕರಣವಂತೆ. ಇದೆಂಥ ನ್ಯಾಯ?

ನಾವು ಪಾದಯಾತ್ರೆ ಮಾಡಿದಾಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದರು, ಬಿಜೆಪಿಯ ಹಲವು ನಾಯಕರು ಸಾವಿರಾರು ಜನ ಸೇರಿಸಿ ಕಾರ್ಯಕ್ರಮ ಮಾಡಲಿಲ್ಲವೇ? ಅವರ ವಿರುದ್ಧ ಯಾಕೆ ಕೇಸ್ ಹಾಕಿಲ್ಲ?

ಮುಖ್ಯಮಂತ್ರಿಗಳು ನಿಷ್ಪಕ್ಷಪಾತರಾಗಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರೂ ಅವರ ಕೈಗೊಂಬೆಯಾಗಿದ್ದಾರೆ. ಅವರು ಮುಖ್ಯಮಂತ್ರಿ ಕೆಲಸ ಮಾಡುತ್ತಿಲ್ಲ. ಅವರ ಮೊದಲ ಆದ್ಯತೆ ಅವರ ಪಕ್ಷದ ಅಜೆಂಡಾ.

ಸಂವಿಧಾನದ ಮೇಲೆ ಪ್ರಮಾಣ ಮಾಡಿ, ಈಗ ಅದರಂತೆ ಅವರು ನಡೆದುಕೊಳ್ಳುತ್ತಿಲ್ಲ.

*ಮೇಕೆದಾಟು ಪಾದಯಾತ್ರೆ ಪುನಾರಂಭ*

ಇದೇ 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸುತ್ತಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ನಾವು ತಯಾರಿ ಮಾಡಿಕೊಳ್ಳುತ್ತಿದ್ದು ಬೆಳಗ್ಗೆ ಎದ್ದು ನಡೆಯುತ್ತಿದ್ದೇವೆ.

ರಾಜ್ಯ ಹಾಗೂ ರಾಷ್ಟ್ರದ ಹಿತಕ್ಕಾಗಿ ನಾವು ಹೋರಾಟ ಮಾಡುತ್ತಿದ್ದು, ಬೆಂಗಳೂರು ಜನರ ಕುಡಿಯುವ ನೀರಿಗೆ, ರೈತರ ಹಿತಕ್ಕೆ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ.

ಬಿಜೆಪಿಯವರಿಗೆ ರಾಜ್ಯದ ನೀರಾವರಿ ವಿಚಾರವಾಗಿ ಆಸಕ್ತಿ ಇಲ್ಲ. ಅವರಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದರೂ ಅವರು ಯಾವಾಗ ಬೇಕಾದರೂ ಕೆಲಸ ಆರಂಭಿಸಬಹುದು. ಈ ಯೋಜನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದು, ಕೇವಲ ಹೇಳಿದರೆ ಸಾಲದು. ಅಧಿಸೂಚನೆ ಹೊರಡಿಸಿ, ಜಾಗ ವಶಪಡಿಸಿಕೊಳ್ಳಬೇಕು, ಭೂಮಿ ಪೂಜೆ ಮಾಡಬೇಕು.
[19/02, 4:17 PM] +91 90088 29855: ಕನ್ನಡ ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ಪ್ರೇಮ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಶನಿವಾರ ಭೇಟಿ ಮಾಡಿದರು.
[19/02, 4:26 PM] +91 90088 29855: ಏಕ್ ಲವ್ ಯಾ ಚಿತ್ರ ವೀಕ್ಷಣೆಗೆ ಆಹ್ವಾನ ನೀಡಿದರು.
[19/02, 8:42 PM] +91 90088 29855: ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸಭೆಯಲ್ಲಿ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಶಾಸಕರನ್ನು ಮೊಗಶಾಲೆಯಲ್ಲಿ ಶನಿವಾರ ಸಂಜೆ ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಇದ್ದರು.

Post a Comment

Previous Post Next Post