*ಪ್ರತಿ ಜಿಲ್ಲೆಯಲ್ಲಿ ನರೇಗಾ ಹಬ್ಬ*, : CM, ಶಾಂತಾವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವವನ್ನು ಉದ್ಘಾಟನೆ

[14/03, 10:49 AM] Gurulingswami. Holimatha. Vv. Cm: ಬೆಂಗಳೂರು, ಮಾರ್ಚ್ 14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು  ಶಾಂತಾವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನ ಹಾಗೂ  ಜನ್ಮ ಶತಮಾನೋತ್ಸವ ಆಚಾರಣೆ  ಸಮಿತಿ ಆಯೋಜಿಸಿದ್ದ ಶಾಂತಾವೇರಿ  ಗೋಪಾಲಗೌಡರ ಜನ್ಮಶತಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.
[14/03, 4:26 PM] Gurulingswami. Holimatha. Vv. Cm: ಮುಖ್ಯಮಂತ್ರಿಗಳಿಂದ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

*ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಎರಡು ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಮಾರ್ಚ್ 14: ಜನ್ಮಶತಮಾನೋತ್ಸವವನ್ನು ಇಡೀ ವರ್ಷ ಆಚರಣೆ ಮಾಡುವ ತೀರ್ಮಾನ ಸರ್ಕಾರ ಮಾಡಿದೆ. ಹಾಗೂ  ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ ಹಾಗೂ  ಶ್ರೇಷ್ಠ ಶಾಸಕ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲು    ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಘೋಷಿಸಿದರು.

 ಅವರು ಇಂದು  ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನ ಹಾಗೂ  ಜನ್ಮ ಶತಮಾನೋತ್ಸವ ಆಚಾರಣೆ  ಸಮಿತಿ ಆಯೋಜಿಸಿದ್ದ ಶಾಂತವೇರಿ  ಗೋಪಾಲಗೌಡರ ಜನ್ಮಶತಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. 

ಗೋಪಾಲಗೌಡರ ಕುರಿತ  ಕೃತಿಗಳನ್ನು ಮುದ್ರಿಸಿ, ನಾಡಿನಾದ್ಯಂತ ಎಲ್ಲಾ ಗ್ರಂಥಾಲಯಗಳಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದರು.  ಶಿವಮೊಗ್ಗ ಜಿಲ್ಲೆಯಲ್ಲಿ ಭೂ ಸುಧಾರಣೆಗಾಗಿ ನಡೆದಿರುವ ಹೋರಾಟದ ಬಗ್ಗೆ ಪುಸ್ತಕವನ್ನು ಸರ್ಕಾರದ ವತಿಯಿಂದ ಜನ್ಮದಿನೋತ್ಸವದ ಅಂಗವಾಗಿ ಹೊರತಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. 


ಸರ್ಕಾರದ ಆಡಳಿತ ಮತ್ತು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಅವರ ವಿಚಾರಧಾರೆಗಳು ಮಾರ್ಗದರ್ಶಕವಾಗಿವೆ.  ಶಾಂತವೇರಿ ಗೋಪಾಲಗೌಡರು ಯಾವುದಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರೋ,   ತ್ಯಾಗ ಮಾಡಿದರೋ ಆ ಮೌಲ್ಯಗಳನ್ನು ಎತ್ತಿಹಿಡಿಯಲು ಎಲ್ಲಾ ಪ್ರಯತ್ನ ಗಳನ್ನು ಮಾಡೋಣ ಎಂದು ಮುಖ್ಯ ಮಂತ್ರಿಗಳು ಕರೆ ನೀಡಿದರು.  

*ಜನಪರ ವೈಚಾರಿಕತೆಯೇ ಅವರ ಆಸ್ತಿ*
ಶಾಂತವೇರಿ ಗೋಪಾಲಗೌಡರು ನಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರ ಸಮಕಾಲೀನರು, ಸಮಾನಮನಸ್ಕರು ಹಾಗೂ ಸಮ ಹೋರಾಟಗಾರರು ಆಗಿದ್ದರು. ತಮ್ಮದೇ ಆದ ವ್ಯಕ್ತಿತ್ವ ಹೊಂದಿ ದೀರ್ಘಕಾಲ ತಮ್ಮ ವೈಚಾರಿಕ ಕ್ರಾಂತಿಯಿಂದ ನಮ್ಮನ್ನೆಲ್ಲರನ್ನು ಸೆಳೆದಿದ್ದ ಶಾಂತವೇರಿ ಗೋಪಾಲ ಗೌಡರು ಅಪರೂಪದ ವ್ಯಕ್ತಿ. ರಾಜಕಾರಣಕ್ಕೆ ವಿಶ್ವಾಸಾರ್ಹತೆ ಉಳಿದಿದ್ದರೆ   ಇವರಂಥ ನಾಯಕರಿಂದ. ಅವರು ಆದರ್ಶ ಬದುಕನ್ನು ಬದುಕಿದ್ದರು. ಇಂದಿನ ದಿನಗಳಲ್ಲಿ  ರಾಜಕಾರಣಿಗಳನ್ನು ಅವರ ಆಸ್ತಿ ಏನು ಎಂದು ನೋಡುತ್ತೇವೆ.  ಆದರೆ, ಶಾಂತವೇರಿ ಗೋಪಾಲಗೌಡರ ಆಸ್ತಿ- ಜನರಿಗೆ ಅಗತ್ಯವಿರುವ  ವ್ಯವಸ್ಥೆ ಹಾಗೂ ಅದಕ್ಕೆ ಪೂರಕವಾದ ವೈಚಾರಿಕತೆ. ಜನಪರ ವೈಚಾರಿಕತೆಯೇ ಅವರ ಆಸ್ತಿ.  ಅವರ ವಿಚಾರ, ತತ್ವ ಆದರ್ಶಗಳು ಎಲ್ಲಿಯವರೆಗೆ ಇವೆ, ಅಲ್ಲಿಯವರೆಗೆ ಶಾಂತವೇರಿ ಗೋಪಾಲಗೌಡರು ನಮ್ಮ ನಡುವೆ ಜೀವಂತವಾಗಿರುತ್ತಾರೆ ಎಂದರು. 

ಸ್ವಾಮಿ ವಿವೇಕಾನಂದರು ಹೇಳಿದನಂತೆ ಸಾಧಕನಿಗೆ ಸಾವು, ಅಂತ್ಯವಲ್ಲ- ಸಾವಿನ ನಂತರವೂ ಬದುಕುವವನು ಸಾಧಕ ಎಂಬಂತೆ ಬದುಕಿದರು.  ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ನಮ್ಮ ಚಿಂತನೆ, ಪ್ರೇರಣೆ, ಭವಿಷ್ಯದ ನಿರ್ಮಾಣದಲ್ಲಿ ಶಾಂತವೇರಿ ಗೋಪಾಲಗೌಡರು ಸದಾ ಕಾಲ ನಮಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಇಂದಿಗೂ ನಮ್ಮೊಂದಿಗೆ ಜೀವಂತವಾಗಿದ್ದು,  ದಾರಿದೀಪವಾಗಿದ್ದಾರೆ ಎಂದರು. 

*ಪ್ರಬಲ ನಾಯಕತ್ವ*
 ಗೇಣಿದಾರರಿಗೆ, ಉಳುವವನಿಗೆ ಭೂಮಿ ಇರಬೇಕು ಎಂದು  ನಡೆದ ಹೋರಾಟಗಳಲ್ಲಿ ಪ್ರಬಲವಾದ ನಾಯಕತ್ವ ಅಗತ್ಯವಿತ್ತು. ಅದನ್ನು ಶಾಂತವೇರಿ ಗೋಪಾಲಗೌಡರು ಒದಗಿಸಿಕೊಟ್ಟರು. ರಾಮ್ ಮನೋಹರ್ ಲೋಹಿಯಾ ಹಾಗೂ ಜಯಪ್ರಕಾಶ್ ನಾರಾಯಣ್ ಅವರ ಸಮಾಜವಾದಿ ವಿಚಾರಧಾರೆಯಿಂದ ಸಣ್ಣ ವಯಸ್ಸಿನಲ್ಲಿಯೇ  ಪ್ರಭಾವಿತರಾಗಿ, ಅದನ್ನು ಚಳವಳಿ ರೂಪದಲ್ಲಿ ಹಲವರೊಂದಿಗೆ ಇವರೂ ಸೇರಿ ಕರ್ನಾಟಕದಲ್ಲಿ ದೊಡ್ಡ ಕ್ರಾಂತಿಯನ್ನು ತಂದರು. ವಿಪರ್ಯಾಸವೆಂದರೆ ಅವರ ತಂದೆಯವರಿಗಿದ್ದ ಮೂರು ಎಕರೆ ಗೇಣಿ ಜಮೀನು ಸಹ ಉಳಿಯಲಿಲ್ಲ. ಸ್ವಂತ ಜಮೀನು ಇಲ್ಲದಿದ್ದರೂ, ಇತರೆ ಗೇಣಿದಾರರಿಗೆ ಅವರ ಹಕ್ಕನ್ನು ಕೊಡಿಸಬೇಕು, ಬದುಕಿನಲ್ಲಿ ಶಾಶ್ವತವಾದ  ಭದ್ರತೆ ಕೊಡಿಸಲು ಭೂ ಸುಧಾರಣಾ  ಕಾನೂನು ಜಾರಿಗೆ ತರಲು ನಿಸ್ವಾರ್ಥವಾಗಿ   ಹೋರಾಡಿದರು. 
 ಇವೆಲ್ಲವೂ ನಮ್ಮ ಮನವನ್ನು ಕಲಕುತ್ತವೆ. ಆ ದಾರಿಯನ್ನು ನಾವೆಲ್ಲರೂ ನಡೆಯಬೇಕೆಂಬ ಹಂಬಲವನ್ನು ಉಂಟುಮಾಡುತ್ತದೆ ಎಂದರು. 

*ಶ್ರೇಷ್ಠ ವಾಗ್ಮಿ*
 ಅವರು ಕರ್ನಾಟಕದ ರಾಜಕಾರಣ ಅಷ್ಟೇ ಅಲ್ಲ, ರಾಜ್ಯದ ರೈತರ ಬದುಕಿನಲ್ಲಿ ತಮ್ಮ ಹೆಜ್ಜೆ ಗುರುತು ಗಳನ್ನು ಬಿಟ್ಟು ಹೋಗಿದ್ದಾರೆ. ಸದನದ ಒಳಗೆ ಅವರ ವಾಕ್ಚಾತುರ್ಯ, ಪ್ರತಿಭೆ ಅತ್ಯಂತ ಪರಿಣಾಮಕಾರಿ ವಾದಮಂಡನೆ, ಇಂದೂ ಕೂಡ ಕರ್ನಾಟಕದ ವಿಧಾನಸಭೆಯ ನಡವಳಿಯಲ್ಲಿ ಅತ್ಯಂತ ಶ್ರೇಷ್ಠ ವಾಗ್ಮಿಗಳ ಪೈಕಿ ಶಾಂತವೇರಿ ಗೋಪಾಲಗೌಡರು ಅಚ್ಚಳಿಯದೆ ಉಳಿದಿದ್ದಾರೆ. ಅವರ ಇಡೀ ಬದುಕನ್ನು ಜನರಿಗಾಗಿ ಗಂಧದ ಕೊರಡಿನಂತೆ ತೇದಿದ್ದಾರೆ. ತೀರ್ಥಹಳ್ಳಿ ಸ್ಫೂರ್ತಿದಾಯಕ ಪುಣ್ಯ ಭೂಮಿ. ಕುವೆಂಪು, ಕಡಿದಾಳ ಮಂಜಪ್ಪ,  ಶಾಂತವೇರಿ ಗೋಪಾಲ ಗೌಡರು ಜನಿಸಿದ ನೆಲ. ಅತಿ ಶೀಘ್ರ ದಲ್ಲಿಯೇ ಅಲ್ಲಿಗೆ ಭೇಟಿ ನೀಡಿ ಪ್ರೇರಣೆ ಪಡೆಯುವ ಇಂಗಿತವಿದೆ ಎಂದರು.


ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.
[14/03, 7:28 PM] Gurulingswami. Holimatha. Vv. Cm: ನರೇಗಾ ಹಬ್ಬ  ಉದ್ಘಾಟಿಸಿದ ಮುಖ್ಯಮಂತ್ರಿಗಳು

*ಬಡತನದ ನಿರ್ಮೂಲನೆಗೆ ನರೇಗಾ ಅಸ್ತ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಮಾರ್ಚ್ 14:  
ಬಡತನದ ನಿರ್ಮೂಲನೆಯಲ್ಲಿ ನರೇಗಾ ಎನ್ನುವ ಅಸ್ತ್ರ  ಬಹಳ ದೊಡ್ಡ ಪಾತ್ರವ್ನನು ನಿರ್ವಹಿಸಲಿದೆ. ನರೇಗಾದಡಿ ಹಲವಾರು ಯೋಜನೆಗಳನ್ನು ಸೇರ್ಪಡೆಗೊಳಿಸಬೇಕು.    ಒಂದು ವರ್ಷದ  ದುಡಿಮೆಯನ್ನು ಸಂಭ್ರಮಿಸಲು ಆಚರಿಸುವ ನರೇಗಾ ಹಬ್ಬ  ರಾಜ್ಯದ ಹಬ್ಬ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.

ಅವರು ಇಂದು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ  ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್  ಹಾಲ್‍ನಲ್ಲಿ ಆಯೋಜಿಸಿದ್ದ  ನರೇಗಾ ಹಬ್ಬ 2022 ನ್ನು   ಉದ್ಘಾಟಿಸಿ ಮಾತನಾಡಿದರು.

*ಅಧಿಕಾರ  ವಿಕೇಂದ್ರೀಕರಣ ಜೇನುತುಪ್ಪದಂತಿರಬೇಕು:*
ಮಹಾತ್ಮಾ ಗಾಂಧಿಯವರಿಂದ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮೂಡಿತು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಗ್ರಾಮ ಸ್ವರಾಜ್ಯದ ಜೊತೆಗೆ  ಸೌಕರ್ಯಗಳಿರುವ ಗ್ರಾಮ ಸುರಾಜ್ಯವಿರಬೇಕು, ಅಭಿವೃದ್ಧಿಶೀಲ ಗ್ರಾಮಗಳಾಗಬೇಕು ಎಂದರು. ಮೊದಲು ಸ್ವರಾಜ್ಯ ನಂತರ ಸುರಾಜ್ಯದ ಕಲ್ಪನೆ ಮೂಡಿದೆ. ಅಧಿಕಾರ  ವಿಕೇಂದ್ರೀಕರಣಗೊಳಿಸದಿದ್ದರೆ ಆಡಳಿತ  ಹೆಪ್ಪುಗಟ್ಟುತ್ತದೆ. ಅಧಿಕಾರ  ವಿಕೇಂದ್ರೀಕರಣ ಜೇನುತುಪ್ಪದಂತಿರಬೇಕು.  ವಿಧಾನಸಭೆಯನ್ನು ಬಿಟ್ಟರೆ ನೇರವಾಗಿ  ಫಲಾನುಭವಿಗೆ ತಲುಪಬೇಕು. ರಾಜಕೀಯ ವಿಕೇಂದ್ರೀಕರಣವಾಗಿದೆ. ಆಡಳಿತ  ವಿಕೇಂದ್ರೀಕರಣವೂ ಸ್ವಲ್ಪಮಟ್ಟಿಗೆ ಆಗಿದೆ.  ಅಭಿವೃದ್ಧಿಗೆ  ಬೇಕಾಗಿರುವ ಆರ್ಥಿಕ ಸ್ವಾತಂತ್ರ್ಯ ನಮಗೆ ಅಗತ್ಯ ಎಂದರು.  

*ಗ್ರಾಮೀಣಾಭಿವೃದ್ಧಿಯಲ್ಲಿ ಕರ್ನಾಟಕ ಪ್ರಗತಿಶೀಲ ರಾಜ್ಯ:*
ಸಂವಿಧಾನದ ವಿಕೇಂದ್ರೀಕರಣದ ಆಶಯದಂತೆ ನಡೆಯಲು ಇತರೆ ರಾಜ್ಯಗಳಗೆ ಹೋಲಿಸಿದರೆ, ಕರ್ನಾಟಕ ಬಹಳಷ್ಟು ಪ್ರಗತಿ ಸಾಧಿಸಿದೆ.  ಸಂವಿಧಾನದ 73 ರ ತಿದ್ದುಪಡಿಯಾದ ಮೇಲೆ ನಮ್ಮದೇ ಪಂಚಾಯತ್ ರಾಜ್ ಕಾನೂನನ್ನು  ನಾವು ಮಾಡಿಕೊಂಡಿದ್ದೇವೆ.   ನರೇಗಾದಲ್ಲಿ ಕೆಲಸ ಮಾಡುವವರು ಆರ್ಥಿಕತೆಯನ್ನು  ಮುನ್ನಡೆಸುತ್ತಿದ್ದಾರೆ ಎಂದರು. ವ್ಯವಸ್ಥೆಯ ಕೆಳಹಂತದಲ್ಲಿರುವವರ  ದುಡಿಮೆಯಿಂದ  ದೇಶದ ಆರ್ಥಿಕತೆ ಬೆಳೆಯುತ್ತಿದೆ ಎಂದರು.

*ನರೇಗಾ - ಬದುಕಿಗೆ ಭರವಸೆ:*
ದುಡಿಮೆಯೇ ದೊಡ್ಡಪ್ಪ ಎಂಬುದರಲ್ಲಿ ನಂಬಿಕೆ ಇಟ್ಟು  ಈ ಬಾರಿಯ ಬಜೆಟ್‍ನಲ್ಲಿ ದುಡಿಯುವವರಿಗೆ, ದುಡಿಮೆಗೆ ಅಂದರೆ ಮಹಿಳೆಯರು, ರೈತರು, ಕೂಲಿಕಾರ್ಮಿಕರಿಗೆ  ಅತಿಹೆಚ್ಚು ಮಹತ್ವವನ್ನು ನೀಡಲಾಗಿದೆ. ತಲಾವಾರು ಆದಾಯ ಹೆಚ್ಚಾಗಿ ರಾಜ್ಯದ ಜಿಡಿಪಿ ಹೆಚ್ಚಾಗಲು ಇವರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.  ನರೇಗಾದಡಿ ಗುರಿ ಮೀರಿ ಸಾಧನೆಯನ್ನು ಮಾಡಿರುವುದಕ್ಕಾಗಿ ಅಭಿನಂದಿಸಿದ ಮುಖ್ಯಮಂತ್ರಿಗಳು 16 ಕೋಟಿ ರೂಕ್.ಗಳ  ಗುರಿ ನಿಗದಿ ಮಾಡಿಕೊಂಡಿರುವುದ್ದಕ್ಕಾಗಿ ಶ್ಲಾಘಿಸಿದರು.  ಈ ಮೂಲಕ ತಳಹಂತದ ಜನರಿಗೆ  ಬದುಕನ್ನು ಕೊಡಲಾಗುತ್ತಿದೆ. ಬದುಕಿಗೆ ನರೇಗಾ ಭರವಸೆಯಾಗಿದೆ. ದುಡಿಮೆಯ ಮುಖಾಂತರ ಬದುಕುವ ಏಕೈಕ ಯೋಜನೆ-  ನರೇಗಾ ಎಂದರು. ಜನರನ್ನು ಗುರುತಿಸಿ, ಸ್ಥಳದಲ್ಲಿಯೇ ಕೆಲಸ ನೀಡಿ, ಆಸ್ತಿಯ ನಿರ್ವಹಣೆ ಮಾಡಿ  ಗ್ರಾಮಗಳ ಅಭಿವೃದ್ಧಿಯನ್ನೂ ಮಾಡುತ್ತಿರುವುದು ನರೇಗಾ ಎಂದರು.
*ಶಾಲೆಗಳ ದುರಸ್ತಿಗೆ ನರೇಗಾ*:
ನರೇಗಾ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಿದರೆ, ಇಡೀ  ರಾಜ್ಯದ ಗ್ರಾಮೀಣಾಭಿವೃದ್ಧಿ ನಿರಂತರವಾಗಿ  ಆಗಲು ಸಾಧ್ಯ. 1000 ಅಂಗನವಾಡಿಗಳನ್ನು ಕಟ್ಟಲು ಬಜೆಟ್‍ನಲ್ಲಿ 50 ಕೋಟಿ ರೂ.ಗಳ ಅನುದಾನ ಮೀಸಲಿರಿಸಿದೆ.  ಅಗತ್ಯಬಿದ್ದರೆ, ಕೊರತೆಯಾಗದಂತೆ ಅನುದಾನ ಬಿಡುಗಡೆ ಳ್ಗೆ ವ್ಯವಸ್ಥೆ ಮಾಡಲಾಗುವುದು. ಈ ಗುರಿಯನ್ನು ನಾವು ಮುಟ್ಟಲೇಬೇಕು ಎಂದರು.  ಗ್ರಾಮೀಣಾಭಿವೃದ್ಧಿ ಸಚಿವ  ಕೆ.ಎಸ್.ಈಶ್ವರಪ್ಪನವರು ಶಾಲೆಗಳನ್ನು ಕಟ್ಟಲು ನರೇಗಾ ಅನುದಾನವನ್ನು ಬಳಕೆ ಮಾಡಬೇಕೆಂಬ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದು,    ಶಾಲೆಗಳ ದುರಸ್ತಿಗೆ ಈ ಯೋಜನೆಯಡಿ ಅವಕಾಶ ಮಾಡಿಕೊಟ್ಟರೆ ದೊಡ್ಡ ಪ್ರಮಾಣದಲ್ಲಿ  ದುಸ್ಥಿತಿಯಲ್ಲಿರುವ  ಶಾಲಾ ಕೊಠಡಿಗಳ ದುರಸ್ತಿ ಕೈಗೊಳ್ಳಬಹುದು. ಕೇಂದ್ರ ಸರ್ಕಾರ ನಮ್ಮ ಮನವಿಯನ್ನು ಪುರಸ್ಕರಿಸುವುದು ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

*ಪ್ರತಿ ಜಿಲ್ಲೆಯಲ್ಲಿ ನರೇಗಾ ಹಬ್ಬ*
 ಪ್ರತಿ ಜಿಲ್ಲೆಯಲ್ಲಿ ನರೇಗಾ ಹಬ್ಬ ಆಚರಿಸಬೇಕು. ಪ್ರತಿ ಗ್ರಾಮ ಪಂಚಾಯತಿ ಮೇಲೆ ಬರಬೇಕೆಂಬ ಉತ್ಸಾಹ ಮೂಡುತ್ತದೆ. ಕರ್ನಾಟಕ  ಜಲಶಕ್ತಿಯಲ್ಲಿ ಮೊದಲನೇ ಸ್ಥಾನದಲ್ಲಿದೆ.  ಜಲಜೀವನ್ ಮಿಷನ್ ನಡಿಯೂ ಪ್ರಗತಿ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಹಾಗೂ ಮುಂದಿನ ವರ್ಷಕ್ಕೆ ತಲಾ 25 ಲಕ್ಷ ಮನೆಗಳಿಗೆ ಮನೆ ಮನೆಗೆ ನಲ್ಲಿ ಸಂಪರ್ಕ ಒದಗಿಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದ್ದೇವೆ. ಅದಕ್ಕಾಗಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವೂ ಕೈಜೋಡಿಸಿದೆ ಎಂದರು.

Post a Comment

Previous Post Next Post