[28/03, 8:46 AM] Gurulingswami. Holimatha. Vv. Cm: *ಎಸ್ ಎಸ್.ಎಲ್ ಸಿ ಮಕ್ಕಳಿಗೆ ಶುಭ ಹಾರೈಸಿದ ಸಿಎಂ*
ಬೆಂಗಳೂರು, ಮಾರ್ಚ್ 28: ಇಂದಿನಿಂದ ಪ್ರಾರಂಭವಾಗುತ್ತಿರುವ ಎಸ್ ಎಸ್.ಎಲ್ ಸಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಹಾರೈಸಿದ್ದಾರೆ.
ಎಸ್ ಎಸ್.ಎಲ್ ಸಿ ಪರೀಕ್ಷೆ ಪ್ರತಿಯೊಬ್ಬರ ಜೀವನದಲ್ಲಿಯೂ ಬಹಳ ಪ್ರಮುಖ ಘಟ್ಟ. ಕೋವಿಡ್ ಕಾರಣದಿಂದ ಮಕ್ಕಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರಚಿಸಿಕೊಳ್ಳಬೇಕೆನ್ನುವುದು ನಮ್ಮ ಆಶಯ ಎಂದು ತಿಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದರು.
[28/03, 12:44 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಪ್ರಮೋದ್ ಸಾವಂತ್ ಅವರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸೇರಿದಂತೆ ಬಿಜೆಪಿ ರಾಜ್ಯಗಳ ಹಲವಾರು ಜನ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
[28/03, 1:41 PM] Gurulingswami. Holimatha. Vv. Cm: ಸ್ನೇಹಿತರೆ ಇಂದು ಮಧ್ಯಾಹ್ನ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಕೃಷಿ ಸಚಿವರಾದ ಶ್ರೀ ಬಿ ಸಿ ಪಾಟೀಲ್ ಅವರು ಮಾಧ್ಯಮ ಮಿತ್ರರಿಗೆ ಅವರು ಔತನ ಕೂಟವನ್ನು ಏರ್ಪಡಿಸಿದ್ದಾರೆ. ಅವರ ಪರವಾಗಿ ತಮಗೆ ಸ್ವಾಗತ.
ಸುರೇಶ್ ಗೌಡ
ಕೃಷಿ ಸಚಿವರ ಆಪ್ತ ಕಾರ್ಯದರ್ಶಿ
[28/03, 4:33 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ಲಿ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಿನರಲ್ಸ್ ಸಂಸ್ಥೆಯು ತನ್ನ ಲಾಭಾಂಶದ ೧೪೧ ಕೋಟಿ ರೂಪಾಯಿಯನ್ನು ಸರ್ಕಾರಕ್ಕೆ ಮತ್ತು ೧೦ ಕೋಟಿ ರೂಪಾಯಿ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಅಧ್ಯಕ್ಷ ಲಿಂಗಮೂರ್ತಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ಪಂಕಜ ಕುಮಾರ ಪಾಂಡೆ, ವ್ಯವಸ್ಥಾಪಕ ನಿರ್ದೇಶಕ ಬಿ ಬಿ ಕಾವೇರಿ ಮತ್ತು ಇತರರು ಉಪಸ್ಥಿತರಿದ್ದರು.
[28/03, 5:25 PM] Gurulingswami. Holimatha. Vv. Cm: ಬೆಂಗಳೂರು, ಮಾರ್ಚ್ 28: ಇಂದು *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ್ ಬೊಮ್ಮಾಯಿ ಅವರು* ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ ಕುಮಾರ್ ಪಾರ್ಕ್ ರಸ್ತೆಯ ಬಳಿ ಇರುವ ಹೊಟೇಲ್ ಅಶೋಕದಲ್ಲಿ ಆಯೋಜಿಸಿರುವ *ಸುವರ್ಣ ಮಹೋತ್ಸವ* *ಕಾರ್ಯಾಗಾರ – 2022ರ* *ಉದ್ಘಾಟನೆ,* ವಾರ್ಷಿಕ ವರದಿ ಬಿಡುಗಡೆ, *ನಿಗಮದ ಸಾಧನೆ ಅನಾವರಣ* ಹಾಗೂ *ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ* *ಚೆಕ್* *ಸಲ್ಲಿಕೆ* *ಕಾರ್ಯಕ್ರಮದಲ್ಲಿ ಪಾಲ್ಗೊಂಡು* *ಕಾರ್ಯಕ್ರಮವನ್ನುದ್ದೇಶಿಸಿ* ಮಾತನಾಡಿದರು
[28/03, 6:58 PM] Gurulingswami. Holimatha. Vv. Cm: ಸುಸ್ಥಿರ ಗಣಿಗಾರಿಕೆಗೆ ಸಮಗ್ರ ಯೋಜನೆಯನ್ನು ರೂಪಿಸಲು ಮುಖ್ಯಮಂತ್ರಿಗಳ ಸೂಚನೆ
ಬೆಂಗಳೂರು, ಮಾರ್ಚ್ 28 :
ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಅವರು ಸುಸ್ಥಿರ ಗಣಿಗಾರಿಕೆಗೆ ಸಮಗ್ರ ಯೋಜನೆಯನ್ನು ರೂಪಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಅವರು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ ಸುವರ್ಣ ಮಹೋತ್ಸವ ಕಾರ್ಯಾಗಾರ – 2022ರ ಉದ್ಘಾಟಿಸಿ ಮಾತನಾಡಿದರು.
ಗಣಿಗಾರಿಕೆಯಿಂದ ಪ್ರಕೃತಿಯ ಮೇಲಿನ ದಾಳಿಯನ್ನು ತಡೆಯಬೇಕು. ಮುಂದಿನ 50 ವರ್ಷಗಳ ಅವಧಿಯಲ್ಲಿ ಸುಸ್ಥಿರ ಗಣಿಗಾರಿಕೆಯಿಂದ ಹಂತಹಂತವಾಗಿ ಖನಿಜಗಳ ಬಳಕೆ ಹಾಗೂ ಅರಣ್ಯಗಳನ್ನು ಬೆಳೆಸುವ ಯೋಜನೆ ರೂಪಿಸಬೇಕು. ಪರಿಸರ ಸಂರಕ್ಷಣೆಯ ಜೊತೆಜೊತೆಗೆ ಖನಿಜ, ಮರಳು,ಕಲ್ಲು, ಕಬ್ಬಿಣ ಅದಿರುಗಳ ಸಮತೋಲಿತ ಬಳಕೆ ಬಗ್ಗೆ ಗಮನಹರಿಸಬೇಕು. ಪರಿಸರಕ್ಕೆ ಹಾನಿಯಾಗದಂತೆ ವೈಜ್ಞಾನಿಕ ರೀತಿಯಲ್ಲಿ ಗಣಿಗಾರಿಕೆ ಮಾಡಬೇಕು ಎಂದು ತಿಳಿಸಿದರು.
2022-23ರ ಆಯವ್ಯಯದಲ್ಲಿ ಅರಣ್ಯ ಜೀವಿಶಾಸ್ತ್ರ ವ್ಯವಸ್ಥೆಯ ಮೇಲೆ ಆಗಿರುವ ದಾಳಿಯ ದುಷ್ಪರಿಣಾಮವನ್ನು ಸರಿದೂಗಿಸಲು ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಹಸಿರು ಆಯವ್ಯಯವನ್ನು ರೂಪಿಸಿ 100 ಕೋಟಿ ರೂ. ಅನುದಾನವನ್ನ ಮೀಸಲಿಡಲಾಗಿದೆ ಎಂದು ತಿಳಿಸಿದರು.
ನಿಸರ್ಗ ಮತ್ತು ಮನುಷ್ಯ ಸೃಷ್ಟಿಯ ಭಾಗ. ಗಣಿಗಾರಿಕೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಈಗಿನ ತಂತ್ರಜ್ಞಾನದಿಂದ ಉಪಯುಕ್ತ ಸಂಪತ್ತಾಗಿ ಪರಿಣಮಿಸಿದೆ. ಗಣಿಗಾರಿಕೆಗೆ ದೊಡ್ಡ ಇತಿಹಾಸವಿದೆ. ಹಿಂದಿನವರು ನಿಸರ್ಗದ ಗಣಿಸಂಪತ್ತನ್ನು ಉಳಿಸಿಕೊಂಡು ಬಂದಿದ್ದಾರೆ. ಭವಿಷ್ಯದ ಜನಾಂಗಕ್ಕೆ ಈ ಸಂಪತ್ತನ್ನು ಕಾಪಿಡಬೇಕಿದೆ.ಆದ್ದರಿಂದ ಸುಸ್ಥಿರ ಗಣಿಗಾರಿಕೆ ಹೆಚ್ಚು ಒತ್ತು ನೀಡಬೇಕು ಎಂದರು.
ಒರಿಸ್ಸಾ, ಜಾರ್ಖಂಡ್, ಪಶ್ಚಿಮ ಬಂಗಾಳದ ಪ್ರದೇಶದಲ್ಲಿ ಟಾಟಾಕಂಪನಿ ಮೈನ್ಸ್ ನವರು ಸುಸ್ಥಿರ ಗಣಿಗಾರಿಕೆ ಮಾಡಿ, ಆ ಪ್ರದೇಶವನ್ನು ಅರಣ್ಯೀಕರಣ ಮಾಡಿ ಪ್ರಕೃತಿಯನ್ನು ಸಂರಕ್ಷಿಸಲಾಗಿರುವ ನಿದರ್ಶನವನ್ನು ಮುಖ್ಯಮಂತ್ರಿಗಳು ನೀಡಿದರು.
ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಉತ್ತಮವಾಗಿ ಕಾರ್ಯನಿರ್ವಹಿಸಲು ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ತಿಳಿಸಿದರು.
Post a Comment