[16/07, 6:05 PM] Karunakar. Khasale. Bjp. Media: 16-07-2022
ಪ್ರಕಟಣೆಯ ಕೃಪೆಗಾಗಿ
ಹಳೆ ಮೈಸೂರು, ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್, ಜೆಡಿಎಸ್
ಪಕ್ಷಗಳ ಹಲವು ಶಾಸಕರು ಬಿಜೆಪಿಗೆ- ಮಹೇಶ್ ಟೆಂಗಿನಕಾಯಿ
ಬೆಂಗಳೂರು: ಹಳೆ ಮೈಸೂರು ಹಾಗೂ ಕಲ್ಯಾಣ ಕರ್ನಾಟಕದ ಅನೇಕ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು, ನಾಯಕರು ಮತ್ತು ಹಿರಿಯರು ಈಗಾಗಲೇ ನಮ್ಮ ಹಿರಿಯರ ಸಂಪರ್ಕದಲ್ಲಿದ್ದಾರೆ. ಅವರನ್ನು ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೆ ಮೈಸೂರು ಹಾಗೂ ಕಲ್ಯಾಣ ಕರ್ನಾಟಕದ ಭಾಗವನ್ನು ಆರು ವಲಯಗಳನ್ನಾಗಿ ವಿಂಗಡಣೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ, ಹಳೆ ಮೈಸೂರು ಮತ್ತು ಬೆಂಗಳೂರು ವಲಯ ಎಂದು ವಿಂಗಡಿಸಲಾಗಿದೆ. ಹಳೆ ಮೈಸೂರು ಹಾಗೂ ಕಲ್ಯಾಣ ಕರ್ನಾಟಕದತ್ತ ವಿಶೇಷವಾಗಿ ಗಮನ ಹರಿಸುವ ಮೂಲಕ ಭಾರತೀಯ ಜನತಾ ಪಾರ್ಟಿಯ ಶಕ್ತಿಯನ್ನು ವೃದ್ಧಿಸುವ ಕೆಲಸವನ್ನು ಮಾಡಲು ನಿರ್ಧರಿಸಲಾಗಿದೆ ಎಂದರು.
ಕಲ್ಯಾಣ ಕರ್ನಾಟಕದ ಒಟ್ಟು 41 ಶಾಸಕರ ಪೈಕಿ 15 ಬಿಜೆಪಿ ಶಾಸಕರಿದ್ದಾರೆ. ಇದನ್ನು ದ್ವಿಗುಣಗೊಳಿಸುವ ಕಡೆ ಕಾರ್ಯತಂತ್ರ ರೂಪಿಸಲಾಗುವುದು. ಹಳೆ ಮೈಸೂರು ಭಾಗದಲ್ಲಿ 51ರ ಪೈಕಿ 9 ಸ್ಥಾನಗಳನ್ನು 2018ರಲ್ಲಿ ಬಿಜೆಪಿ ಗೆದ್ದಿತ್ತು. ಆ ಭಾಗದಲ್ಲೂ ವಿಶೇóಷ ಗಮನ ಕೊಡಬೇಕು. ಈ ಎರಡು ವಲಯಗಳಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಪಕ್ಷವು ಮಿಷನ್ 150 ತಲುಪಬೇಕು ಎಂದು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
ಮುಂಬರುವ 2023ರ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಮಿಷನ್ 150 ಬಗ್ಗೆ ಚಿಂತನ ಸಭೆಯು ನಿನ್ನೆ ನಡೆದಿದ್ದು, ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದ ಗೌಡ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದÀರ್ಶಿ ಸಿ.ಟಿ. ರವಿ, ರಾಜ್ಯ ಸಹ ಪ್ರಭಾರಿ ಶ್ರೀಮತಿ ಡಿ.ಕೆ.ಅರುಣಾ ಹಾಗೂ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆದಿದೆ ಎಂದು ತಿಳಿಸಿದರು.
50 ಜನ ಪ್ರಮುಖರು ಸಭೆಗೆ ಆಹ್ವಾನಿತರಾಗಿದ್ದರು. ರಾಜ್ಯ ಸರಕಾರವು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 1 ವರ್ಷ ಪೂರೈಸುವ ಸಂದರ್ಭದಲ್ಲಿ ಇದೇ 28ರಂದು ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳನ್ನು ಸೇರಿಸಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಅದೇ ರೀತಿ ಪ್ರತಿ ತಿಂಗಳು ಎರಡು ಸಮಾವೇಶಗಳನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸುವ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಮನ ಹಾಗೂ ಮನೆಗಳನ್ನು ಮುಟ್ಟಿಸುವ ಕೆಲಸ ಮಾಡಲಿದ್ದೇವೆ. ಇದರಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಗಳಿಗೆ ಕೇಂದ್ರದ ಅಮಿತ್ ಶಾ, ಜೆ.ಪಿ.ನಡ್ಡಾ ಸೇರಿದಂತೆ ಅನೇಕ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ರಾಜ್ಯದ ಆಯ್ದ 50 ವಿಧಾನಸಭಾ ಕ್ಷೇತ್ರಗಳಲ್ಲಿ ರ್ಯಾಲಿ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸವನ್ನು ನೆರವೇರಿಸುವರು. ಫಲಾನುಭವಿಗಳ ಸಭೆ ನಡೆಸಲಾಗುವುದು. ಈಗಾಗಲೇ ರಾಜ್ಯದಲ್ಲಿ ಮೂರು ತಂಡಗಳಲ್ಲಿ ಪ್ರವಾಸವನ್ನು ಮಾಡಿ 10 ವಿಭಾಗಗಳ ಅಧ್ಯಯನ ನಡೆಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ನೇತೃತ್ವದಲ್ಲಿ ಒಂದು ದಿನಕ್ಕೆ ಒಂದು ಜಿಲ್ಲೆ ನಮ್ಮ ಸಂಘಟನಾತ್ಮಕ 39 ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುವರು. ಅದರಲ್ಲಿ ಬೂತ್ ಪ್ರಮುಖರ ಸಮಾವೇಶ, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರದ ಸಮಾವೇಶ ನಡೆಸಲಿದ್ದೇವೆ ಎಂದು ವಿವರಿಸಿದರು.
ಪಕ್ಷದ 7 ಮೋರ್ಚಾಗಳ ಬೃಹತ್ ಸಮಾವೇಶವನ್ನು ರಾಜ್ಯದ ಬೇರೆ ಬೇರೆ ಭಾಗದಲ್ಲಿ ನಡೆಸಲಾಗುವುದು. ಬೂತ್ ಸಶಕ್ತಿಕರಣ ಅಭಿಯಾನ ಈಗಾಗಲೇ ನಡೆದಿರುತ್ತದೆ ಎಂದರು.
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಆಗಸ್ಟ್ 9ರಿಂದ 15 ತನಕ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ರಾಜ್ಯದ 312 ಮಂಡಲಗಳಲ್ಲಿ ನಡೆಸಲು ತೀರ್ಮಾನಿಸಿದ್ದು, ಕರ್ನಾಟಕದ ಲಕ್ಷಾಂತರ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವುದು ಹಾಗೂ ವಿಶೇಷವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಗಸ್ಟ್ 1-15 ತನಕ 224 ವಿಧಾನಸಭಾ ಕ್ಷೇತ್ರಗಳಲ್ಲಿ 75 ಕಿಮೀ ಬೈಕ್ ರ್ಯಾಲಿಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಪಿಎಸ್ಐ ನೇಮಕಾತಿ ಹಗರಣದ ತನಿಖೆ ಚುರುಕಾಗಿ ನಡೆಯುತ್ತಿದೆ. ಇದರಲ್ಲಿ ಸರಕಾರ ಮಧ್ಯಪ್ರವೇಶ ಮಾಡುತ್ತಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ನಿಗಮ, ಮಂಡಳಿ ನೇಮಕಾತಿ ಕುರಿತು ಚರ್ಚೆ ಆಗಿಲ್ಲ ಎಂದು ಅವರು ಉತ್ತರಿಸಿದರು.
ರಾಜ್ಯದ ಬಿಜೆಪಿ ಸರಕಾರವು ಭ್ರಷ್ಟಾಚಾರದ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ (ಜೀರೊ ಟಾಲರೆನ್ಸ್) ಹೊಂದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಸ್ಪಷ್ಟಪಡಿಸಿದರು.
ಭಾರತ್ ಜೋಡೋ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಎನ್. ರವಿಕುಮಾರ್ ಅವರು, ಇದು ಕಾಂಗ್ರೆಸ್ನವರ ಬಾಯಿಯಲ್ಲಿ ಭಗವದ್ಗೀತೆಯಂತಿದೆ. ಇಷ್ಟು ದಿನ ಭಾರತ್ ಥೋಡೊ ಅಭಿಯಾನ ಮಾಡಿದ್ದರು ಎಂದು ಟೀಕಿಸಿದರು. ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವುದು, ಜಾತಿ ಜಾತಿಗಳನ್ನು ಒಡೆಯುವುದು, ಭಯೋತ್ಪಾದನೆ ಬೆಳೆಸುವ ಮೂಲಕ ಭಾರತ ವಿಭಜನೆ ಕಾರ್ಯ ನಡೆದಿತ್ತು ಎಂದು ಆಕ್ಷೇಪಿಸಿದರು.
ಬಾಗಲಕೋಟೆ ಜಿಲ್ಲೆಯ ಕೆರೂರಿನ ಖಾಸಗಿ ಆಸ್ಪತ್ರೆಗೆ ಕಾಂಗ್ರೆಸ್ನ ಸಿದ್ದರಾಮಯ್ಯನವರು ನಿನ್ನೆ ಭೇಟಿ ಕೊಟ್ಟಿದ್ದಾಗ ಮುಸ್ಲಿಂ ಮಹಿಳೆಯೊಬ್ಬರಿಗೆ 2 ಲಕ್ಷ ನೀಡಿದ್ದು, ಮಹಿಳೆ ಅದನ್ನು ಸಿದ್ದರಾಮಯ್ಯರ ವಾಪಸ್ ಎಸೆದಿದ್ದಾರೆ. ಹಿಂದೂ ಕುಟುಂಬಕ್ಕೆ 50 ಸಾವಿರ ನೀಡಿದ್ದಾರೆ. ಹಿಂದೂ ಕುಟುಂಬಕ್ಕೆ 50 ಸಾವಿರ, ಮುಸ್ಲಿಂ ಕುಟುಂಬಕ್ಕೆ 2 ಲಕ್ಷ ಕೊಡುವುದೇಕೆ? ಇದು ಕಾಂಗ್ರೆಸ್ ಧೋರಣೆಯೇ? ಎಂದು ಪ್ರಶ್ನಿಸಿದರು.
ಈ ರೀತಿ ಸಮಾಜವನ್ನು ನೋಡುವ ದೃಷ್ಟಿಕೋನ ಕಾಂಗ್ರೆಸ್ನದು ಎಂದರಲ್ಲದೆ, ಕಾಂಗ್ರೆಸ್ನ ಈ ಧೋರಣೆಯನ್ನು ಖಂಡಿಸುತ್ತೇನೆ. ಕೂಡಲೇ ಸಿದ್ದರಾಮಯ್ಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಡಾ|| ಸಂದೀಪ್ ಕುಮಾರ್ ಕೆ.ಸಿ. ಅವರು ಉಪಸ್ಥಿತರಿದ್ದರು.
ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
[16/07, 7:12 PM] Karunakar. Khasale. Bjp. Media: 16.07.2022
ಪ್ರಕಟಣೆಯ ಕೃಪೆಗಾಗಿ
2023, 24ರ ಚುನಾವಣೆಗಳಲ್ಲಿ ಪ್ರಕೋಷ್ಠಗಳ ಪಾತ್ರ ಮಹತ್ವದ್ದು: ಭಾನುಪ್ರಕಾಶ್
ಬೆಂಗಳೂರು: 2023ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಇದರಲ್ಲಿ ಪ್ರಕೋಷ್ಠಗಳ ಪಾತ್ರ ಅತ್ಯಂತ ಮಹತ್ವದ್ದು ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ಭಾನುಪ್ರಕಾಶ್ ಅವರು ತಿಳಿಸಿದರು.
ನಗರದ ಜಕ್ಕೂರಿನ ವಿದ್ಯಾಶಿಲ್ಪಿ ಆವರಣದಲ್ಲಿ ಇಂದು ನಡೆದ ಬಿಜೆಪಿಯ 24 ಪ್ರಕೋಷ್ಠಗಳ ರಾಜ್ಯ ಸಂಚಾಲಕರು, ಸಹ ಸಂಚಾಲಕರು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು, ಸಂಕುಲನ ಪ್ರಮುಖರು ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿ ಬೆಳೆದುಬಂದ ದಾರಿಯ ಬಗ್ಗೆ ವಿವರಿಸಿದರು. ಚುನಾವಣಾ ಅವಧಿಯಲ್ಲಿ ಪ್ರಕೋಷ್ಠಗಳ ಪದಾಧಿಕಾರಿಗಳು ಮತ್ತು ಸದಸ್ಯರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕೋವಿಡ್ ಲಸಿಕೆ ನೀಡಿಕೆ, ಸೇವಾ ಕಾರ್ಯಗಳನ್ನು ಪಕ್ಷ ಹಮ್ಮಿಕೊಂಡಿತ್ತು. ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಪ್ರಯೋಜನ ಲಭಿಸಲು ಪಕ್ಷ ಶ್ರಮಿಸಿದೆ. ಇವೆಲ್ಲವುಗಳು ಪಕ್ಷದ ಮತಗಳಾಗಿ ಪರಿವರ್ತನೆ ಹೊಂದುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಪಕ್ಷ ಬೆಳೆಯುತ್ತ ಸಾಗಿದಂತೆ ಮೋರ್ಚಾಗಳನ್ನು ರಚಿಸಲಾಯಿತು. ಬಳಿಕ ಪ್ರಕೋಷ್ಠಗಳ ಮೂಲಕ ಪಕ್ಷ ವಿಸ್ತರಣೆ ಹೊಂದಿದೆ. ಇದೀಗ ಜಿಲ್ಲೆಗಳಿಗೆ ಪ್ರಕೋಷ್ಠಗಳ ಸಂಯೋಜಕರನ್ನು ನೇಮಿಸಲಾಗಿದೆ. ಪಕ್ಷವು ಸದೃಢವಾಗಿ ಬೆಳೆಯಲು ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಜನಸಂಘವು 1951ರಿಂದ ಪ್ರಾರಂಭಗೊಂಡು 1980ರಲ್ಲಿ ಭಾರತೀಯ ಜನತಾ ಪಾರ್ಟಿಯಾಗಿ ಮರುರೂಪುಗೊಂಡಿತು. ಬಿಜೆಪಿ ಬೆಳೆಯುತ್ತ ಸಾಗಿದ್ದು, ಇವತ್ತು ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ನುಡಿದರು.
ಪಕ್ಷವು ಕೇಂದ್ರ ಮಾತ್ರವಲ್ಲದೆ ಬೇರೆ ಬೇರೆ ರಾಜ್ಯಗಳಲ್ಲಿ ಅದು ಸರಕಾರವನ್ನು ರಚಿಸಿದೆ. ಪಕ್ಷವು ಗುಣಾತ್ಮಕ ವಿಚಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು. ಸಮರ್ಥರ ಆಯ್ಕೆ (ಪಿಕಪ್), ಪ್ರಶಿಕ್ಷಣ ನೀಡುವುದು, ಆದ್ಯತೆ ಕೊಡುವುದು ಮತ್ತು ಅವರನ್ನು ಮುಂದಿನ ದಿನಗಳಲ್ಲಿ ಪಕ್ಷದ ಉನ್ನತ ಹುದ್ದೆಗೆ ಆಯ್ಕೆ ಮಾಡಲಾಗುವುದು. ಎಲ್.ಕೆ.ಅಡ್ವಾಣಿ ಅವರು ಈ ರೀತಿ ಬೆಳೆಸಿದ್ದರಿಂದ ನರೇಂದ್ರ ಮೋದಿಜಿ ಅವರು ಇಂದು ದೇಶದ ಪ್ರಧಾನಿಯಾಗಿದ್ದು, ಅದೇ ರೀತಿ ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ಅನೇಕ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಕೋಷ್ಠಗಳ ಸಹ ಸಂಚಾಲಕ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಶಿವಯೋಗಿ ಸ್ವಾಮಿ, ಸಹ ಸಂಚಾಲಕ ಜಯತೀರ್ಥ ಕಟ್ಟಿ, ಶಾಸಕರು ಮತ್ತು ವಿವಿಧ ಪ್ರಕೋಷ್ಠಗಳ ಸಂಚಾಲಕರಾದ ಸಂಜೀವ ಮಠಂದೂರು, ಬಸವರಾಜ ಮತ್ತಿಮೋಡ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment