[27/07, 6:03 PM] Gurulingswami. Holimatha. Vv. Cm: ಮಂಗಳೂರಿನಲ್ಲಿ ಪ್ರವೀಣ್ ಹತ್ಯೆ ಪ್ರಕರಣ -
*ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜುಲೈ 27 :
ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು.
ಮಂಗಳೂರಿನಲ್ಲಿ ನಡೆದ ಪ್ರವೀಣ್ ಅವರ ಹತ್ಯೆ ನಿನ್ನೆ ಸಂಭವಿಸಿದ್ದು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು ಎಸ್ ಪಿಗಳೊಂದಿಗೆ ಮಾತನಾಡಲಾಗಿದೆ. ಕರ್ನಾಟಕ ಡಿಜಿಪಿ ಹಾಗೂ ಕೇರಳದ ಡಿಜಿಪಿಯವರೊಂದಿಗೆ ಮಾತನಾಡಿದ್ದಾರೆ. ಇಂದು ಕೂಡ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಡಿಜಿಯವರನ್ನು ಕರೆಸಿ ಸಂಪೂರ್ಣ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲಿಯೇ ಕೊಲೆಗೈದವರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಲಾಗುವುದು ಎಂದರು.
ಹಿಂದೆ ನಡೆದ ಮಂಗಳೂರು, ಡಿ.ಜಿ.ಹಳ್ಳಿ, ಶಿವಮೊಗ್ಗದ ಪ್ರಕರಣಗಳಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜನರಿಗೆ ಭರವಸೆ ನೀಡಲಾಗಿದೆ. ಅಲ್ಲದೇ ಘಟನೆಯ ಹಿಂದಿರುವ ವ್ಯಕ್ತಿಗಳು, ಸಂಘಟನೆಗಳು ಯಾರೇ ಇದ್ದರೂ ಅವರನ್ನು ಸದೆಬಡೆಯುವ ಕೆಲಸವನ್ನು ಮಾಡಲಾಗುವುದು. ಜನರು ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಹಾಗೂ ಈ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡದೇ ತನಿಖೆಗೆ ಎಲ್ಲರೂ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿಕೊಡುವ ಸಂದರ್ಭ ಬಂದರೆ ವಹಿಸಿಕೊಡಲು ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.
[27/07, 7:50 PM] Gurulingswami. Holimatha. Vv. Cm: ಬೆಂಗಳೂರು, ಜುಲೈ 27 : ರಾಜ್ಯದಲ್ಲಿ ನಡೆಯಲಿರುವ 2 ದಿನಗಳ ಮಂಥನ್ ಕಾರ್ಯಕ್ರಮದ ಕುರಿತು ಕೇಂದ್ರ ರಸ್ತೆ ಸಾರಿಗೆ, ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ನಡೆಸಿದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮಾತನಾಡಿದರು.
ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[27/07, 7:57 PM] Gurulingswami. Holimatha. Vv. Cm: ರಾಜ್ಯ *ಬಿಜೆಪಿ ಸರಕಾರದ* ಮೂರು ವರ್ಷ ಹಾಗೂ *ಬಸವರಾಜ ಬೊಮ್ಮಾಯಿ* ನೇತೃತ್ವದ ಸರಕಾರ 1 ವರ್ಷ ಪೂರೈಸಿದ ಹಿನ್ನಲೆಯಲ್ಲಿ ದಿನಾಂಕ 28 ರಂದು ನಡೆಯಲಿರುವ ಕಾರ್ಯಕ್ರಮಗಳ ಲೈವ ಲಿಂಕ್
ಬೆಳಗ್ಗೆ 10 ಗಂಟೆಗೆ ಸರಕಾರದ ಕಾರ್ಯಕ್ರಮ
Link : https://youtu.be/Du7faxQ6vMQ
ಮಧ್ಯಾಹ್ನ 12.30 ಕ್ಕೆ "ಜನೋತ್ಸವ ಸಮಾವೇಶ"
Link : https://youtu.be/_61h2ybwgp0
ಎಲ್ಲ ಚುನಾಯಿತ ಪ್ರತಿನಿಧಿಗಳು, ಪಕ್ಷದ ಜಿಲ್ಲಾ ಹಾಗೂ ಜಿಲ್ಲಾ ಅಧ್ಯಕ್ಷರ ಸಾಮಾಜಕ ಜಾಲತಾಣಗಳಲ್ಲಿ ಲೈವ ಮಾಡಬೇಕಾಗಿ ವಿನಂತಿ.
ಧನ್ಯವಾದಗಳು
Post a Comment