[18/07, 10:06 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸಚಿವರಾದ ಪ್ರಭು ಚೌಹಾಣ್, ಸುನಿಲ್ ಕುಮಾರ್ , ಬೈರತಿ ಬಸವರಾಜ್, ಮುಖ್ಯ ಸಚೇತಕ ಸತೀಶ್ ರೆಡ್ಡಿ ಮತ್ತು ಇತರರು ಉಪಸ್ಥಿತರಿದ್ದರು.
[18/07, 11:37 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧ ದಲ್ಲಿ ರಾಷ್ಟ್ರಪತಿ ಚುನಾವಣೆಗೆ ಮತದಾನಕ್ಕೂ ಮುನ್ನ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಬಿಜೆಪಿ ಸಚಿವರು ಮತ್ತು ಶಾಸಕರ ಜತೆ ಕಂಡುಬಂದದ್ದು ಹೀಗೆ....
[18/07, 12:46 PM] Gurulingswami. Holimatha. Vv. Cm: *ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ಸಾಧಿಸುವುದು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು ಜುಲೈ18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು
ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3 ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ. ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು.
ದೇಶಾದ್ಯಂತ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದೆ. ದೆಹಲಿ, ಸಂಸತ್ತಿನಲ್ಲಿ, ರಾಜ್ಯ ಸಭಾ, ಲೋಕಸಭಾ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳಲ್ಲಿ ನಡೆಯುತ್ತಿದೆ. ಎನ್.ಡಿ.ಎ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬಹಳಷ್ಟು ಸಹಮತ ಮತ್ತು ಸಂತೋಷ ದೇಶಾದ್ಯಂತ ಮೂಡಿಬಂದಿದೆ. ಎನ್.ಡಿ.ಎ ಮಿತ್ರ ಪಕ್ಷಗಳಷ್ಟೇ ಅಲ್ಲ ವಿರೋಧ ಪಕ್ಷದ ಲ್ಲಿಯೂ ಮುಕ್ತವಾಗಿ ಬೆಂಬಲ ಸೂಚಿಸಿದ್ದಾರೆ. ದ್ರೌಪದಿ ಮುರ್ಮು ಅವರು ಒಬ್ಬ ದಕ್ಷ ಆಡಳಿತಗಾರರಾಗಿ, ಮುನಿಸಿಪಾಲಿಟಿ ಉಪಾಧ್ಯಕ್ಷೆಯಾಗಿ,ಮಂತ್ರಿ, ಶಾಸಕರು ಮತ್ತು ರಾಜ್ಯಪಾಲರಾಗಿ ಅವರ ಸೇವೆ ಅಮೋಘವಾಗಿದೆ. ಬುಡಕಟ್ಟು ಸಮುದಾಯದಿಂದ ಬಂದವರು, ಉತ್ತಮ ಕೆಲಸ ಮಾಡಿದವರಿಗೆ ಅತ್ಯುನ್ನತ ಸ್ಥಾನ ಲಭಿಸುತ್ತಿದೆ. ಪ್ರಜಾಪ್ರಭುತ್ವದ ಹಿರಿಮೆ ಮತ್ತು ಗರಿಮೆ. ಇಂಥ ಕೆಲಸವನ್ನು ಎನ್.ಡಿ.ಎ.ಮುಖ್ಯಸ್ಥರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಯ್ಕೆ ಮಾಡಿ ಇದೀ ದೇಶದಲ್ಲಿ ಒಂದು ಸಂಚಲನ ಹಾಗೂ ಸಂದೇಶವನ್ನು ನೀಡಿದ್ದಾರೆ. ವಿರೋಧಪಕ್ಷದಲ್ಲಿರುವವರು ನಮ್ಮ ಕರ್ನಾಟಕದ ಜೆ.ಡಿ.ಎಸ್. ಮುಖ್ಯಸ್ಥರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಜಾರ್ಖಂಡ್ ಮುಕ್ತಿ ಮೋರ್ಚಾ, ವೈ. ಎಸ್.ಆರ್ ಪಕ್ಷ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ ಗೆಲ್ಲುವುದು ನಿಶ್ಚಿತ ಎಂದರು.
*ಹಾಲು, ಮೊಸರು ದರ ಏರಿಕೆ: ಮರುಪಾವತಿ ಪಡೆದರೆ ದರ ಹೆಚ್ವಿಸುವ ಅಗತ್ಯವಿಲ್ಲ:*
: ಬ್ರಾಂಡೆಡ್ ಹಾಗೂ ಪ್ಯಾಕೇಜ್ಡ್ ಹಾಲು , ಮೊಸರು ಮಾರುವವವರಿಗೆ ಮಾತ್ರ 5% ಜಿ.ಎಸ್.ಟಿ ಹಾಕಲಾಗಿದೆ. ಇದನ್ನು ಅವರು ಕ್ಲೇಮು ಮಾಡಲು ಅವಕಾಶವಿದೆ. ಮರುಪಾವತಿ ಪಡೆದರೆ ಅವರು ಇದನ್ನು ವಾಪಸ್ಸು ಪಡೆಯಬಹುದು. ಈಗಿನ ದರಕ್ಕಿಂತ ಹೆಚ್ಚಾಗಲು ಸಾಧ್ಯವಿಲ್ಲ. ಹೆಚ್ಚಳ ಮಾಡುವ ಅವಶ್ಯಕತೆ ಇಲ್ಲ. ಇದರ ಬಗ್ಗೆ ಬರುವ ದಿನಗಳಲ್ಲಿ ಗಮನಹರಿಸಲಾಗುವುದು. ಗ್ರಾಹಕರಿಗೆ ಅದನ್ನು ದಾಟಿಸಬಾರದು . ಇದನ್ನು ಜಿ.ಎಸ್.ಟಿ ಮಂಡಳಿಯಲ್ಲಿ ಚರ್ಚಿಸಿ, ಸೂಚನೆ ನೀಡಲಾಗುವುದು ಎಂದರು.
[18/07, 12:46 PM] Gurulingswami. Holimatha. Vv. Cm: *ಕಾಂಗ್ರೆಸ್ ಸೋಲಿನ ಭೀತಿಯಿಂದ ನರಳುತ್ತಿದೆ.*ಸಿಎಂ ಬೊಮ್ಮಾಯಿ*
ಬೆಂಗಳೂರು, ಜುಲೈ 18:
ಕಾಂಗ್ರೆಸ್ ಸೋಲಿನ ಭೀತಿಯಿಂದ ನರಳುತ್ತಿದೆ. ಕೆಳಮಟ್ಟದ ರಾಜಕೀಯವನ್ನು ಎಲ್ಲೆಡೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಷ್ಟ್ರಪತಿ ಅಭ್ಯರ್ಥಿಗೆ ಜೆ.ಡಿ.ಎಸ್ ಮುಖ್ಯಸ್ಥರು ಬೆಂಬಲ ವ್ಯಕ್ತಪಡಿದ್ದಾರೆ. ಕೆಲವು ವಿಚಾರಗಳಲ್ಲಿಯಾದಾರು ಕಾಂಗ್ರೆಸ್ ಒಳ್ಳೆಯ ತತ್ವಗಳನ್ನು ಪಾಲಿಸಬೇಕು. ರಾಷ್ಟ್ರೀಯ ಒಗ್ಗಟ್ಟಿನ ತತ್ವವನ್ನು ಪಾಲಿಸಬೇಕು ಎಂದು ಅಭಿಪ್ರಾಯ ಪಟ್ಟರು.
[18/07, 5:02 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಕೇಂದ್ರ ಪರಿಸರ ಖಾತೆಯು ಹೊರಡಿಸಿದ ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ಅಧಿಸೂಚನೆ ಕುರಿತು ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಸಚಿವರಾದ ಅರಗ ಜ್ಞಾನೇಂದ್ರ , ಆನಂದ ಸಿಂಗ್, ಶಿವರಾಮ ಹೆಬ್ಬಾರ, ಎಸ್ ಅಂಗಾರಾ, ಸಿಎಂ ರಾಜಕೀಯ ಕಾರ್ಯದರ್ಶಿ ಡಿಬೆನ್ ಜೀವರಾಜ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದ ಶಾಸಕರು ಉಪಸ್ಥಿತರಿದ್ದರು.
[18/07, 7:59 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸ್ವ ನಿಧಿ ಮಹೋತ್ಸವ ಆತ್ಮ ನಿರ್ಭರ ಬೀದಿಬದಿ ವ್ಯಾಪಾರಸ್ಥರ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಆಡಳಿತ ಅಧಿಕಾರಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ ಮತ್ತು ಇತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ತಲಾ ೧೦ ಸಾವಿರ ರೂಪಾಯಿ ಸ್ವ ನಿಧಿ ವಿತರಣೆ ಮಾಡಿ ಗೌರವಿಸಿದರು.
[18/07, 9:09 PM] Gurulingswami. Holimatha. Vv. Cm: ಬೆಂಗಳೂರು, ಜುಲೈ 18: *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು *ಬೃಹತ್ ಬೆಂಗಳೂರು* *ಮಹಾನಗರ ಪಾಲಿಕೆಯ* ವತಿಯಿಂದ *ಬಿ.ಬಿ.ಎಂ.ಪಿ. ಕೇಂದ್ರ* *ಕಛೇರಿಯ ಡಾ|| ರಾಜ್ ಕುಮಾರ್* *ಗಾಜಿನ ಮನೆ* ಇಲ್ಲಿ ಆಯೋಜಿಸಿರುವ *“ಸ್ವ-ನಿಧಿ ಮಹೋತ್ಸವ” ಆತ್ಮ* *ನಿರ್ಭರ* ಬೀದಿಬದಿ ವ್ಯಾಪಾರಸ್ಥರ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು *ಕಾರ್ಯಕ್ರಮವನ್ನುದ್ದೇಶಿಸಿ* ಮಾತನಾಡಿದರು
Post a Comment