ಜಮ್ಮು ಮತ್ತು ಕಾಶ್ಮೀರದ ಹಿರಿಯ ನಾಯಕರು, ಮಾಜಿ ಸಚಿವರು, ಶಾಸಕರು ಸೇರಿದಂತೆ ಹಲವು ನಾಯಕರು ಪಕ್ಷ ತೊರೆದಿದ್ದಾರೆ. ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷವೇ ಖಾಲಿಯಾಗಿದೆ. ಹಾಲಿ ಶಾಸಕರಾಗಿರುವ ಹಾಗೂ ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಕೆಲ ನಾಯಕರನ್ನು ಹೊರತುಪಡಿಸಿದರೆ ಇನ್ನುಳಿದ ಬಹುತೇಕ ನಾಯಕರು ರಾಜೀನಾಮೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವ ಅಬ್ದುಲ್ ಮಜೀದ್ ವಾನಿ, ಮನೋಹರ್ ಲಾಲ್ ಶರ್ಮಾ, ಘಾರು ರಾಮ್, ಮಾಜಿ ಶಾಸಕ ಬಲ್ವನ್ ಸಿಂಗ್ ಸೇರಿದಂತೆ ಒಟ್ಟು 64 ಹಿರಿಯ ನಾಯಕರು ಕಾಂಗ್ರೆಸ್ ತೊರೆದಿದ್ದಾರೆ.
ಯಾರೇ ಅಧ್ಯಕ್ಷರಾದರೂ ರಾಹುಲ್ಗೆ ಗುಲಾಮನಂತೆ ಇರಬೇಕು: ಆಜಾದ್ ಕಿಡಿ
ಕಾಂಗ್ರೆಸ್ನಲ್ಲಿ ಗುಲಾಮರಂತೆ ಇರಲು ಸಾಧ್ಯವಿಲ್ಲ. ಗುಲಾಮ್ ನಬಿ ಅಜಾದ್ ನಮ್ಮ ಧ್ವನಿಯಾಗಿದ್ದಾರೆ. ಅವರನ್ನು ನಾವು ಹಿಂಬಾಲಿಸುತ್ತೇವೆ. ಗುಲಾಮ್ ನಬಿ ಆಜಾದ್ಗೆ ಬೆಂಬಲ ನೀಡಲು ರಾಜೀನಾಮೆ ನೀಡಿದ್ದೇವೆ ಎಂದು ಹಿರಿಯ ನಾಯಕ ಹೇಳಿದ್ದಾರೆ. 64 ನಾಯಕರು ರಾಜೀನಾಮೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಪತನದತ್ತ ಸಾಗಿದೆ. ಇತರ ಪಕ್ಷಗಳಿಂದ ಮುಳುಗುತ್ತಿರುವ ಕಾಂಗ್ರೆಸ್ಗೆ ಯಾರೂ ಆಗಮಿಸುತ್ತಿಲ್ಲ. ಇರುವ ನಾಯಕರು ಇತರ ಪಕ್ಷ ಸೇರಿಕೊಳ್ಳುತ್ತಿದ್ದಾರೆ. ಇದು ಕಾಂಗ್ರೆಸ್ ಬುಡವನ್ನೇ ಅಲುಗಾಡಿಸುತ್ತಿದೆ.
ಗುಲಾಮ್ ನಬಿ ಆಜಾದ್ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ, ರಾಹುಲ್ ಗಾಂಧಿ ಅಸಮರ್ಥತೆ ಸೇರಿದಂತೆ ಹಲವು ವಿಚಾರಗಳ ಕುರಿತು ಆಕ್ರೋಶ ಹೊರಹಾಕಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕವೂ ಗುಲಾಮ್ ನಬಿ ಆಜಾದ್ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಸತತ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ತೊರೆದ ಹಿನ್ನೆಲೆಯಲ್ಲಿ ಸುದ್ದಿಗಾರರು ಹಾಗೂ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲಿ ಆಜಾದ್ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ಸಿನಲ್ಲಿರುವ ಶೇ.90 ಮಂದಿ ಕಾಂಗ್ರೆಸ್ಸಿ ಅಲ್ಲ. ಕಾಲೇಜಿನಲ್ಲಿರುವವರು, ಸಿಎಂಗಳ ಗುಮಾಸ್ತರನ್ನು ಆರಿಸಿ ಹುದ್ದೆ ನೀಡಲಾಗುತ್ತಿದೆ. ತಮ್ಮ ಇತಿಹಾಸವೇ ಗೊತ್ತಿಲ್ಲದ ವ್ಯಕ್ತಿಗಳ ಜತೆ ವಾದಕ್ಕಿಳಿಯಲು ನಾನು ಸಿದ್ಧನಿಲ್ಲ ಎಂದಿದ್ದಾರೆ. ಇತ್ತ ಕಾಂಗ್ರೆಸ್ ನಾಯಕರು ನಬಿ ನಡೆಯನ್ನು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ಬಗ್ಗೆ ತಪ್ಪು ಗ್ರಹಿಕೆ ಹೊಂದಿದ್ದೆ; ಅವರು ಮಾನವೀಯತೆ ತೋರಿದ್ದಾರೆ: ಆಜಾದ್
Post a Comment