ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಜನೋತ್ಸವಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಜನೋತ್ಸವಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು 

ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಲಿದೆ

 ಬಿಜೆಪಿ ಸರ್ಕಾರದ ೩ ವರ್ಷ ಹಾಗೂ ಬೊಮ್ಮಾಯಿ‌ ಸರ್ಕಾರದ  ಸರ್ಕಾರದ ಒಂದು ವರ್ಷದ ಸಾಧನೆಯನ್ನು ಜನರ ಮುಂದೆ ಇರಿಸಿ ಸಾಧನೆಗಳನ್ನು ಬಿಂಬಿಸುವ ಕಾರ್ಯಕ್ರಮ ಜನೋತ್ಸವ 

ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿಯಾಗಿತ್ತು

 ಆದರೆ ಕಾರಣಾಂತರಗಳಿಂದ ಆ ಜನೋತ್ಸವವನ್ನು ರದ್ದುಪಡಿಸಲಾಗಿತ್ತು 

ಆಗಸ್ಟ್ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿಯಾಗಿದೆ

 ಈ ಜನೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮುಖಂಡರನ್ನು ಆಹ್ವಾನಿಸುವ ಉದ್ದೇಶವಿದೆ

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳ ಬಿಜೆಪಿ ಮುಖಂಡರು ಶಾಸಕರು ಮಾಜಿ ಶಾಸಕರು ಭಾಗವಹಿಸಿದ್ದರು 

ಸಚಿವರಾದ ಆರ್ ಅಶೋಕ್, ಮುನಿರತ್ನ ,ಎಸ್ ಟಿ ಸೋಮಶೇಖರ್ , ಡಾ.ಕೆ ಸುಧಾಕರ್, ಬೈರತಿ ಬಸವರಾಜ್, ಶಾಸಕ ಮಸಾಲೆ ಜಯರಾಮ್, ಮಾಜಿ ಶಾಸಕ ಸಂಪಂಗಿ , ಮಂಜುನಾಥಗೌಡ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು

Post a Comment

Previous Post Next Post