[14/08, 11:30 AM] Gurulingswami. Holimatha. Vv. Cm: ಬೆಂಗಳೂರು ನಗರದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ 3 ಎಕರೆ 24 ಗುಂಟೆ ಜಮೀನು ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಪರವಾಗಿ ಸನ್ಮಾನಿಸಿ ಧನ್ಯವಾದ ಅರ್ಪಿಸಿದರು. ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ದಾಸನಪುರ ಹೋಬಳಿಯ ಕಮ್ಮಸಂದ್ರ ಗ್ರಾಮದಲ್ಲಿ ಜಮೀನು ಮಂಜೂರು ಮಾಡಿದ್ದಕ್ಕಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಮೇಟಿ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
[14/08, 12:32 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯುತ್ ಚಾಲಿತ ಬಸ್ ಗಳಿಗೆ ಹಸಿರು ನಿಶಾನೆ ನೀಡುವ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಆ ಬಸ್ ನಲ್ಲಿ ಸಂಚಾರ ಮಾಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕ ನಾಗರಾಜ ಯಾದವ, ಬಿಎಂಟಿಸಿ ಎಂಡಿ ಸತ್ಯವತಿ, ಸಾರಿಗೆ ನಿಗಮಗಳ ಪುನಶ್ಚೇತನಕ್ಕಾಗಿ ರಚಿಸಲಾಗಿರುವ ಸಮೀತಿಯ ಮುಖಸ್ಥ ಎಂ ಆರ್ ಶ್ರೀನಿವಾಸಮೂರ್ತಿ, ಸಾರಿಗೆ ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರು ಉಪಸ್ಥಿತರಿದ್ದರು.
[14/08, 1:13 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯುತ್ ಚಾಲಿತ ಬಸ್ ಗಳಿಗೆ ಹಸಿರು ನಿಶಾನೆ ನೀಡುವ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಆ ಬಸ್ ನಲ್ಲಿ ಸಂಚಾರ ಮಾಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕ ನಾಗರಾಜ ಯಾದವ, ಬಿಎಂಟಿಸಿ ಎಂಡಿ ಸತ್ಯವತಿ, ಸಾರಿಗೆ ನಿಗಮಗಳ ಪುನಶ್ಚೇತನಕ್ಕಾಗಿ ರಚಿಸಲಾಗಿರುವ ಸಮೀತಿಯ ಮುಖಸ್ಥ ಎಂ ಆರ್ ಶ್ರೀನಿವಾಸಮೂರ್ತಿ, ಸಾರಿಗೆ ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರು ಉಪಸ್ಥಿತರಿದ್ದರು.
[14/08, 1:19 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಕುರಿಗಾರರ ಬೇಡಿಕೆಗಳ ಕುರಿತು ಕುರುಬ ಸಮುದಾಯದ ಮುಖಂಡರು ಹಾಗೂ ಕುರುಬ ಸಂಘದ ಮುಖಂಡರ ಜತೆ ಸಭೆ ನಡೆಸಿದರು. ಸಭೆಯಲ್ಲಿ ಸಚಿವ ಎಂ ಟಿ ಬಿ ನಾಗರಾಜ, ಮಾಜಿ ಸಚಿವರಾದ ಎಚ್ ವಿಶ್ವನಾಥ, ಎಚ್ ಎಂ ರೇವಣ್ಣ ಮತ್ತು ಇತರರು ಉಪಸ್ಥಿತರಿದ್ದರು.
[14/08, 3:12 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಧನರಾದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ತಂದೆ ಬೈರತಿ ಅಂಜಿನಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಭೈರತಿ ಬಸವರಾಜ್ ಅವರಿಗೆ ಮುಖ್ಯಮಂತ್ರಿಗಳು ಸಾಂತ್ವನ ಹೇಳಿದರು.
[14/08, 6:42 PM] Gurulingswami. Holimatha. Vv. Cm: *ಶೀಘ್ರವೇ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆ: ಸಿಎಂ ಬಸವರಾಜ ಬೊಮ್ಮಾಯಿ*
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಬೆಂಗಳೂರು ನಗರದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಲು ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ನ ದಾಸನಪುರ ಹೋಬಳಿಯ ಕಮ್ಮಸಂದ್ರದಲ್ಲಿ 3 ಎಕರೆ 24 ಗುಂಟೆ ಜಮೀನು ಮಂಜೂರು ಮಾಡಿರುವುದಕ್ಕೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ನೂರಾರು ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ಜಮೀನು ಮಂಜೂರು ಮಾಡಿರುವುದು ಒಂದು ಭಾಗವಾಗಿದೆ. ಉತ್ತರ ಕರ್ನಾಟಕಕ್ಕೆ ಇನ್ನೂ ಸಾಕಷ್ಟು ಕೆಲಸ ಮಾಡಬೇಕಿದೆ. ಆ ಭಾಗದ ಜನರು ಬೆಂಗಳೂರಿಗೆ ಬಂದಾಗ ಉಳಿದುಕೊಳ್ಳಲು ಸೂಕ್ತ ವಸತಿ ವ್ಯವಸ್ಥೆ, ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರು ಹಬ್ಬ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸುಸಜ್ಜಿತ ಸಭಾಭವನ ಸೇರಿದಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವುದಾಗಿ ಅವರು ತಿಳಿಸಿದರು.
ಇದೇ ವೇಳೆ, ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜನರ ಭಾವನೆಗಳಿಗೆ ಸ್ಪಂದಿಸಿ, ನಮ್ಮ ಬೇಡಿಕೆಯನ್ನು ಈಡೇರಿಸಿ ಜಮೀನು ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕದ ಎಲ್ಲ ಸಂಘ ಸಂಸ್ಥೆಗಳ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಜಮೀನು ನೀಡುವ ಇಚ್ಛಾಶಕ್ತಿ ಯನ್ನು ಪ್ರದರ್ಶಿಸಿ ರುವ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಸಮಗ್ರ ಉತ್ತರ ಕರ್ನಾಟಕ ಜನತೆಯ ಪರವಾಗಿ ಅರ್ಪಿಸುವುದಾಗಿ ಮೇಟಿ ತಿಳಿಸಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹಾಗೂ ಆಸಕ್ತಿ ಹೊಂದಿರುವ ಮುಖ್ಯಮಂತ್ರಿಗಳು ನಮ್ಮ ಭಾಗದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು, ಅವರ ನಾಯಕತ್ವದಲ್ಲಿಯೇ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಉಪಾಧ್ಯಕ್ಷ ಬಸವರಾಜ ಬೀಳೂರು, ಮಹಾ ಸಂಸ್ಥೆಯ ನಿರ್ದೇಶಕರುಗಳಾದ ವಿ.ಎಸ್. ನೆಗಳೂರು, ಗಂಗಾಧರ ವಾಲಿ, ಗುರುಲಿಂಗಸ್ವಾಮಿ ಹೊಳಿಮಠ, ಶ್ರೀಧರ ಕಲ್ಲೂರ, ಅಯ್ಯನಗೌಡ ಬಿರಾದಾರ, ಲಿಂಗನಗೌಡ ಗೌಡರ, ಮಾರುತಿ ತೋಟದ, ಶಂಕರ ಪಾಗೋಜಿ ಹಾಗೂ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಂಗ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.
[14/08, 8:06 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಆಯೋಜಿಸಲಾಗಿದ್ದ ದೇಶವಿ ಭಜನೆಯ ದುರಂತ ಘಟನೆಗಳು ಎಂಬ ಪತ್ರಿಕಾ ವರದಿಗಳ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ರವಿಕುಮಾರ, ಕೇಶವ ಪ್ರಸಾದ, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಮತ್ತು ಇತರರು ಉಪಸ್ಥಿತರಿದ್ದರು.
[14/08, 8:21 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಅರಮನೆ ಮುಂಭಾಗ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಬೆಂಗಳೂರಿನಿಂದ ವರ್ಚುವಲ್ ಆಗಿ ಉದ್ಘಾಟನೆ ಮಾಡಿದರು.
[14/08, 9:18 PM] Gurulingswami. Holimatha. Vv. Cm: ಸಿಎಂ ಅಧ್ಯಕ್ಷತೆಯಲ್ಲಿ ಕುರಿಗಾರರ ಸಭೆ
*ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವನ್ನು ಮಾಂಸ ಉತ್ಪಾದನ ಒಕ್ಕೂಟವಾಗಿ ಪರಿವರ್ತಿಸಲು ಅಪೆಕ್ಸ್ ಸಂಸ್ಥೆ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಆಗಸ್ಟ್ 14: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವನ್ನು ಮಾಂಸ ಉತ್ಪಾದನ ಒಕ್ಕೂಟವಾಗಿ ಪರಿವರ್ತಿಸಲು ಅಪೆಕ್ಸ್ ಸಂಸ್ಥೆ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುರಿಗಾರರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಈ ಯೋಜನೆಗೆ ಈಗಾಗಲೇ ಡಿ.ಪಿ.ಆರ್ ಆಗಿದೆ. ಶೇ 25 %ರಷ್ಟು ಸಹಾಯಧನದ ಜೊತೆಗೆ ಶೇ 50% ರಷ್ಟು ಸಾಲ ನೀಡುವ ಸಂಬಂಧ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿರುವುದಾಗಿ ಅವರು ತಿಳಿಸಿದರು.
ಇದಕ್ಕಾಗಿ ಬಗ್ಗೆ ಕುರಿಗಾಹಿಗಳ ಒಕ್ಕೂಟ ಮತ್ತು ನಿಗಮ ಎರಡನ್ನೂ ಉಪಯೋಗಿಸಿಕೊಳ್ಳಬೇಕು. ಎರಡರ ಸಮನ್ವಯದೊಂದಿಗೆ ಮುನ್ನಡೆಯಬೇಕು. ಯೋಜನೆಯ ಅನುಷ್ಠಾನಕ್ಕೆ ರಚಿಸುವ ಅಪೆಕ್ಸ್ ಸಂಸ್ಥೆಯು ನಿಗಮದವರನ್ನೂ ಒಳಗೊಂಡಿರಬೇಕು. ಇದು ಮೊದಲ ಹಂತ. ಇನ್ನೂ ಸುಧಾರಣೆಗೆ ಅವಕಾಶಗಳಿವೆ. ಕೇಂದ್ರ ಸರ್ಕಾರದ ಎನ್.ಸಿ.ಡಿ.ಸಿ ಸಾಲ ಪಡೆಯಬಹುದು. 50 %ಸಾಲ, 25% ಸಹಾಯಧನವಾದರೆ ಇನ್ನುಳಿದ ಮೊತ್ತವನ್ನು ಕೊಡುಗೆ ರೂಪದಲ್ಲಿ ಪಡೆಯಬೇಕು. ಕೊಡುಗೆ ನೀಡುವ ವಿಚಾರದಲ್ಲಿ ಒಕ್ಕೂಟದ ಕೆಲಸ ಬಹಳ ಮುಖ್ಯ. ಕುರಿಗಾಹಿಗಳನ್ನು ಸದಸ್ಯರನ್ನಾಗಿಸಿಕೊಳ್ಳಬೇಕು ಹಾಗೂ ಅವರು ಬಡವರಿರುವುರಿಂದ ಬೇರೆಯೇ ಮಟ್ಟದಲ್ಲಿ ಸಹಾಯ ಮಾಡಬೇಕಾಗುತ್ತದೆ. ಇದಕ್ಕಾಗಿ ಸಹಕಾರಿ ಅಪೆಕ್ಸ್ ಬ್ಯಾಂಕ್ ನವರೊಂದಿಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಗಳು ತಿಳಿಸಿದರು.
ಇದು ಯಶಸ್ವಿಯಾಗಲು ಶೇ 25 % ರಷ್ಟು ಹೇಗೆ ಸಹಾಯ ಮಾಡಬಹುದೆಂದು ಚಿಂತನೆ ಮಾಡಬೇಕಾಗುತ್ತದೆ. ಸುಮಾರು 20 ಸಾವಿರ ಸಂಘಗಳಿಗೆ 1.25 ಲಕ್ಷ ಸಹಾಯಧನ ನೀಡಲಾಗುವುದು. 20 ಕುರಿ ಮತ್ತು ಮೇಕೆಗಳನ್ನು ನೀಡಲಾಗುವುದು. ಇದು ಯಶಸ್ವಿಯಾದರೆ, ಒಟ್ಟಾರೆ ಕುರಿ ಸಾಕಾಣಿಕೆ ಒಂದು ವರ್ಷದಲ್ಲಿ ಹೆಚ್ಚಳವಾಗಿ ಕುರಿ ಮಾಂಸ ಉತ್ಪಾದನೆ ಹೆಚ್ಚಾಗಬೇಕು. ಅವರಿಗೆ ಲಾಭ ದೊರಕಿದರೆ ಇನ್ನಷ್ಟು ಹುರುಪಿನಿಂದ ಕೆಲಸ ಮಾಡುತ್ತಾರೆ. ಅಪೆಕ್ಸ್ ಸಂಸ್ಥೆ ರಚಿಸಿ ಹಣ ಬಿಡುಗಡೆಯ ವಿಧಾನಗಳ ಬಗ್ಗೆ ರೂಪುರೇಷೆಗಳನ್ನು ಕಾಲಮಿತಿಯೊಳಗೆ ಸಿದ್ಧಪಡಿಸಲಾಗುವುದು ಎಂದರು.
*ನವೆಂಬರ್ ಒಳಗೆ ಫಲಾನುಭವಿಗಳ ಆಯ್ಕೆ*
ಯೋಜನೆಗೆ ವ್ಯಾಪಕವಾಗಿ ಪ್ರಚಾರವನ್ನು ಕೊಡಬೇಕು. ಅರ್ಜಿ ಹಾಕದೆಯೇ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಆಯ್ಕೆ ಮಾಡುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಬೇಕು. ಬಡವರಿಗೆ, ಬಿಸಿಲುಮಳೆ ಗಾಳಿಯಲ್ಲಿ ಕೆಲಸ ಮಾಡುವವರಿಗೆ ಸಣ್ಣ ಸಹಾಯ ಮಾಡುವ ಯೋಜನೆ ಇದಾಗಿದೆ. ನವೆಂಬರ್ ಒಳಗೆ ಆಯ್ಕೆಗಳನ್ನು ಪೂರ್ಣಗೊಳಿಸಿದರೆ, ಚೆಕ್ ಗಳನ್ನು ನೀಡಲು ಪ್ರಾರಂಭಿಸಬಹುದು. ಅನುಷ್ಠಾನ ಮಾಡುವ ನಿಟ್ಟಿನಲ್ಲಿ ನಿಗಮದವರು ಸೂಕ್ತ ಕೆಲಸ ಮಾಡಬೇಕು. ಎಷ್ಟು ಕುರಿ ಹೆಚ್ಚಾಗಿದೆ, ಅವುಗಳ ತೂಕದ ಮಾಪನವಾಗಬೇಕು.
ಸಂಘಟನೆಯನ್ನು ಬಲಪಡಿಸುವ ಕೆಲಸವೂ ಆಗಬೇಕಿದೆ ಎಂದರು.
*ಮೌಲ್ಯವೃದ್ಧಿ ಆಗಬೇಕು*
ಸುಲಭವಾಗಿ ಬ್ಯಾಂಕ್ ಖಾತೆ ತೆರೆದು ಕುರಿ ಸಾಕಾಣಿಕೆಗೆ ಸಹಕಾರಿ ಆಗಬೇಕು. ರಫ್ತುದಾರರೊಂದಿಗೆ ನೇರವಾಗಿ ಟೈ ಅಪ್ ಮಾಡುವುದು, ಒಪ್ಪಂದ ಮಾಡಿಕೊಳ್ಳುವುದು ಆಗಬೇಕು. ಕುರಿ ಮತ್ತು ಕುರಿ ಮಾಂಸ ದೊಡ್ಡ ಆರ್ಥಿಕತೆಯಾಗಬೇಕು. ಇದಕ್ಕೊಂದು ಹೊಸ ಆಯಾಮ ಸಿಗಲಿದೆ. ಕೆಎಂಎಫ್ ಕಟ್ಟಿದಂತೆಯೇ ಮಾಂಸ ಉತ್ಪಾದನೆ ದೊಡ್ಡ ಆರ್ಥಿಕತೆಯಾಗಬೇಕು. ಹಾಲು, ಮಾಂಸದ ಗುಣಮಟ್ಟ ಹೆಚ್ವಿಸುವುದಲ್ಲದೆ ಮೌಲ್ಯವೃದ್ಧಿ ಮಾಡುವಂತಾಗಬೇಕು. ಈ ಕುರಿತಂತೆ ೮ - ೧೦ ದಿನಗಳಲ್ಲಿ ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿಗಳು ಭರವಸೆ ನೀಡಿದರು.
*ಕುರಿಗಾಹಿಗಳಿಗೆ ಸ್ಥಿರವಾದ ಬದುಕು*
ಗ್ರಾಮೀಣ ಪ್ರದೇಶಗಳಲ್ಲಿ
ಗೋ ಮತ್ತು ಕುರಿ ಸಾಕಾಣಿಕೆ ಪ್ರಮುಖವಾದದ್ದು. ನಮ್ಮಲ್ಲಿ ಶೇ. ೭೦ ರಷ್ಟು ಬಯಲುಸೀಮೆ ಇದೆ. ಒಣ ಹವೆ ಹೆಚ್ಚಿದ್ದು,
ಹಸಿರು ಹುಲ್ಲು ಮೇಯುವ ಪ್ರಾಣಿಗಳ ಸಂಖ್ಯೆ ಇಲ್ಲಿ ಹೆಚ್ಚು.
ನಮ್ಮ ಆಸ್ತಿ ಇದು. ಇದರ ಅನುಗುಣವಾಗಿ ನಮ್ಮ ಆಹಾರ ಪದ್ಧತಿಯೂ ಇದೆ. ಕೋಳಿ ಮತ್ತು ಕುರಿಗೆ ಬೇಡಿಕೆ ಇದೆ. ಗೋವಿನ ಮಾಂಸಕ್ಕೆ ಧಾರ್ಮಿಕ ಮತ್ತಿತರ ಕಾರಣಗಳಿಂದ ಬೇಡಿಕೆ ಕಡಿಮೆ ಇದೆ. ಕುರಿ ಮಾಂಸ ವಿದೇಶಕ್ಕೆ ರಫ್ತು ಆಗುತ್ತದೆ. ಆದರೆ ಕುರಿಗಾಹಿಗೆ ಈ ಲಾಭ ಮುಟ್ಟುತ್ತಿಲ್ಲ. ಏಕೆಂದರೆ ಅವರು ಸಂಘಟಿತರಾಗಿಲ್ಲ. ಸಾಮಾಜಿಕವಾಗಿಯೂ ಸಮಾಜ ಅವರನ್ನು ಗುರುತಿಸದೆ ದೂರ ಇಟ್ಟಿದೆ. ಇದು ನಮ್ಮ ದುರ್ದೈವ. ಹಾಲುಮತ ಸಮಾಜದವರೊಂದಿಗೆ ನಮ್ಮ ತಂದೆಯವ ಕಾಲದಿಂದಲೂ ಆತ್ಮೀಯ ಸಂಬಂಧವಿದೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.
ಈ ಬಾರಿಯ ಆಯವ್ಯಯದಲ್ಲಿ ಕುರಿಗಾರಿಗಳಿಗೆ ಅನುಗ್ರಹ ಯೋಜನೆ ಪುನಃ ಜಾರಿ ಮಾಡಿದ್ದೇವೆ. ಕುರಿಗಳ ಹಟ್ಟಿ ನಿರ್ಮಿಸಲು ಅನುದಾನ ನೀಡಲಾಗಿದೆ.
ಇದರಿಂದ ೫-೬ ಲಕ್ಷ ಜನರಿಗೆ ಅನುಕೂಲವಾಗಲಿದೆ, ಸ್ಥಿರವಾದ ಬದುಕು ಸಿಗಲಿದೆ ಎಂದರು.
Post a Comment