ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅರಮನೆಯಲ್ಲಿ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯ ಸೆ.20ರಂದು ನಡೆಯಲಿದೆ.ಅರಮನೆ ಪಂಚಾಂಗದಂತೆ ಮಂಗಳವಾರ ವಿವಿಧ ಧಾರ್ಮಿಕ ಕಾರ್ಯ ಹಾಗೂ ಜೋಡಣೆ ನಡೆಯಲಿದ್ದು, ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪ್ರವಾಸಿಗರು ಹಾಗೂ ನಾಗರಿಕರಿಗೆ ಅರಮನೆ ಪ್ರವೇಶ ಇರುವುದಿಲ್ಲ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌.ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅರಮನೆಯಲ್ಲಿ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯ ಸೆ.20ರಂದು ನಡೆಯಲಿದೆ.

ಅರಮನೆ ಪಂಚಾಂಗದಂತೆ ಮಂಗಳವಾರ ವಿವಿಧ ಧಾರ್ಮಿಕ ಕಾರ್ಯ ಹಾಗೂ ಜೋಡಣೆ ನಡೆಯಲಿದ್ದು, ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪ್ರವಾಸಿಗರು ಹಾಗೂ ನಾಗರಿಕರಿಗೆ ಅರಮನೆ ಪ್ರವೇಶ ಇರುವುದಿಲ್ಲ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌.ಸುಬ್ರಹ್ಮಣ್ಯ ತಿಳಿಸಿದ್ದಾರೆ.ಈ ಬಾರಿ ದಸರಾ ಉತ್ಸವ ಸೆ.26ರಂದು ಆರಂಭವಾಗಿ ಅ.5ರಂದು ಕೊನೆಗೊಳ್ಳಲಿದೆ. 26ರಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದ ಖಾಸಗಿ ದರ್ಬಾರ್‌ ನಡೆಯಲಿದೆ. ಅಂದು ಬೆಳಿಗ್ಗೆ 10ರಿಂದ 1.30ರವರೆಗೆ, ಅ.4ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಆಯುಧಪೂಜೆ ಪ್ರಯುಕ್ತ ಹಾಗೂ ಅ.5ರ ವಿಜಯದಶಮಿಯಂದು ಸಂಪೂರ್ಣ ದಿನ ಪ್ರವೇಶ ಇರುವುದಿಲ್ಲ.


ಅ.20ರಂದು ಸಿಂಹಾಸನದ ವಿಸರ್ಜನೆ ನಡೆಯಲಿದ್ದು, ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.


ಅರಮನೆಯ ಭದ್ರತಾ ಕೊಠಡಿಯಲ್ಲಿರುವ ಸಿಂಹಾಸನದ 13 ಬಿಡಿ ಭಾಗಗಳನ್ನು ದರ್ಬಾರ್‌ ಹಾಲ್‌ಗೆ ತಂದು ಜೋಡಿಸಲಾಗುತ್ತದೆ. ಪ್ರತಿ ವರ್ಷದಂತೆ ಅರಮನೆಯ ಸಿಬ್ಬಂದಿ ಹಾಗೂ ಕುಶಲಕರ್ಮಿಗಳು ಸಿಂಹಾಸನ ಜೋಡಣೆ ನಡೆಸುವರು ಎಂದು ಮೂಲಗಳು ತಿಳಿಸಿವೆ.

Post a Comment

Previous Post Next Post