ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪೂಜೆ ಸಲ್ಲಿಸಿಕೆ ವಾರಣಾಸಿ ಕೋರ್ಟ್​ ಅನುಮತಿ


ವಾರಾಣಸಿ (ಉತ್ತರ ಪ್ರದೇಶ): ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪೂಜೆ ಸಲ್ಲಿಸಿಕೆ ವಾರಣಾಸಿ ಕೋರ್ಟ್​ ಅನುಮತಿ ನೀಡಿದೆ. ಮಸೀದಿ ಆವರಣದಲ್ಲಿ ಸಿಕ್ಕಿರುವ ಶೃಂಗಾರ ಗೌರಿ ಹಾಗೂ ಶಿವಲಿಂಗಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದೆ.

ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್‍ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲೆ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು.

ಮಸೀದಿಯ ಜಾಗದಲ್ಲಿ ಮಂದಿರ ಇದೆ ಎಂದು ಕೆಲವರು ವಾದಿಸಿದ್ದರು. ಇದು ಕಾಶಿ ವಿಶ್ವನಾಥನಿಗೆ ಸೇರಿರುವ ಜಾಗ ಎಂದು ಹಿಂದೂಗಳ ವಾದವಾಗಿದೆ. ಆದರೆ ಈ ವಾದದಲ್ಲಿ ಅರ್ಥವಿಲ್ಲ, ಇದು ಕೇವಲ ಮಸೀದಿ ಎನ್ನುವುದು ಮುಸ್ಲಿಮರ ಪ್ರತಿವಾದ.

ಈ ವಾದ-ವಿವಾದ- ಪ್ರತಿವಾದಗಳ ನಡುವೆಯೇ ತಮಗೆ ಪೂಜೆಗೆ ಅವಕಾಶ ನೀಡುವಂತೆ ಕೋರಿ ಮಹಿಳೆಯರು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಮೂರು ತಿಂಗಳಿಗೂ ಹೆಚ್ಚು ಕಾಲ ವಾದ-ಪ್ರತಿವಾದ ನಡೆದಿತ್ತು. ನಂತರ ಈ ಅರ್ಜಿಯ ತೀರ್ಪನ್ನು ಕೋರ್ಟ್​ ಕಾಯ್ದಿರಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ.

ಈ ಅರ್ಜಿಯನ್ನು ವಜಾ ಮಾಡಬೇಕು ಇದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಮಸೀದಿ ಪರ ವಕೀಲರು ಮಾಡಿದ ಮನವಿಯನ್ನು ಕೋರ್ಟ್​ ತಿರಸ್ಕರಿಸಿದೆ.

ಈ ಹಿನ್ನೆಲೆಯಲ್ಲಿ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆಯೇ, ಇಲ್ಲವೇ ಎನ್ನುವ ಬಗ್ಗೆ ಕೋರ್ಟ್ ವಿಚಾರಣೆ ನಡೆಸಿದ್ದು, ಇದೀಗ ತೀರ್ಪು ಪ್ರಕಟಗೊಂಡಿದೆ. ಈ ತೀರ್ಪಿಗೂ ಮುನ್ನ ಕೋರ್ಟ್​ ಆವರಣದಲ್ಲಿ ಜಮಾಯಿಸಿದ್ದ ಹಿಂದೂ ಭಕ್ತರು ಪೂಜೆ ಸಲ್ಲಿಸಿದ ಘಟನೆ ಕೂಡ ನಡೆದಿದೆ. ಅರ್ಜಿದಾರ ಮಹಿಳೆಯರಿಗೆ ಶಾಲು ಹಾಕಿ ಸನ್ಮಾನ ಕೂಡ ಮಾಡಲಾಯಿತು.

Post a Comment

Previous Post Next Post