ಸೆಪ್ಟೆಂಬರ್ 24, 2022 | , | 8:10PM |
ದೇಶದ ಸಾರ್ವಭೌಮತೆಗೆ ಧಕ್ಕೆ ತರಲು ಯತ್ನಿಸುವವರಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತಕ್ಕೆ ಸಂಪೂರ್ಣ ಸಾಮರ್ಥ್ಯವಿದೆ ಎಂದು ರಾಜನಾಥ್ ಸಿಂಗ್ ಪ್ರತಿಪಾದಿಸಿದ್ದಾರೆ.
@ರಾಜನಾಥಸಿಂಗ್ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ, ಶ್ರೀ ಸಿಂಗ್ ಅವರು ವಿಶ್ವದಲ್ಲಿ ಸೂಪರ್ ಪವರ್ ಆಗಲು ಸ್ವಾವಲಂಬಿಯಾಗಬೇಕೆಂದು ಒತ್ತಿ ಹೇಳಿದರು. ರಕ್ಷಣಾ ವಲಯದಲ್ಲಿ ಸ್ವಾವಲಂಬಿಯಾಗಲು ದೇಶಿಯ ರಕ್ಷಣಾ ಸಾಧನಗಳನ್ನು ತಯಾರಿಸಲು ಹಲವಾರು ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು. ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಭಾಗಿತ್ವವನ್ನು ಉತ್ತೇಜಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು. ರಕ್ಷಣಾ ಬಜೆಟ್ನ ಹೆಚ್ಚಿನ ಭಾಗವನ್ನು ದೇಶೀಯ ಮಾರಾಟಗಾರರಿಂದ ರಕ್ಷಣಾ ವಸ್ತುಗಳನ್ನು ಖರೀದಿಸಲು ಈಗ ಮೀಸಲಿಡಲಾಗಿದೆ ಎಂದು ಅವರು ಹೇಳಿದರು. ಈ ಆರ್ಥಿಕ ವರ್ಷದಲ್ಲಿ ಸುಮಾರು 85 ಸಾವಿರ ಕೋಟಿ ರೂಪಾಯಿಗಳನ್ನು ಈ ಉದ್ದೇಶಕ್ಕಾಗಿ ಮೀಸಲಿಡಲಾಗಿದೆ ಎಂದು ಶ್ರೀ ಸಿಂಗ್ ಹೇಳಿದರು. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಬಜೆಟ್ನ ನಾಲ್ಕನೇ ಒಂದು ಭಾಗವನ್ನು ಸಂಶೋಧನೆ ಮತ್ತು ಅಭಿವೃದ್ಧಿಗೆ ಮೀಸಲಿಡಲಾಗಿದೆ, ಇದು ಹೊಸ ರಕ್ಷಣಾ ತಂತ್ರಜ್ಞಾನಗಳು ಮತ್ತು ಆವಿಷ್ಕಾರಗಳನ್ನು ಅಭಿವೃದ್ಧಿಪಡಿಸಲು ದಾರಿ ಮಾಡಿಕೊಡುತ್ತದೆ ಎಂದು ಅವರು ಹೇಳಿದರು. ಅವರು ಹೇಳಿದರು,
Post a Comment