ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಯೋಜನೆಯನ್ನು ಡಿಸೆಂಬರ್ ವರೆಗೆ ವಿಸ್ತರಿಸಿದ ಸರ್ಕಾರ

ಸೆಪ್ಟೆಂಬರ್ 28, 2022
8:35PM

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಯೋಜನೆಯನ್ನು ಡಿಸೆಂಬರ್ ವರೆಗೆ ವಿಸ್ತರಿಸಿದ ಸರ್ಕಾರ

@PIB_India
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM-GKAY) ಯೋಜನೆಯನ್ನು ಈ ವರ್ಷದ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಇನ್ನೂ ಮೂರು ತಿಂಗಳ ಅವಧಿಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಹೊಸದಿಲ್ಲಿಯಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಈ ನಿರ್ಧಾರದಿಂದ 80 ಕೋಟಿ ಜನರಿಗೆ ಅನುಕೂಲವಾಗಲಿದೆ.

ಮುಂದಿನ ಮೂರು ತಿಂಗಳಲ್ಲಿ 122 ಲಕ್ಷ ಮೆಟ್ರಿಕ್ ಟನ್ ಆಹಾರಧಾನ್ಯಗಳನ್ನು ವಿತರಿಸಲಾಗುವುದು, 7ನೇ ಹಂತದ ಯೋಜನೆಯಡಿ ಒಟ್ಟು 44 ಸಾವಿರ ಕೋಟಿ ರೂ. ಈ ಯೋಜನೆಗೆ ಇದುವರೆಗೆ ಮೂರು ಲಕ್ಷ 45 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದರು. ಮುಂಬರುವ ಹಬ್ಬ ಹರಿದಿನಗಳಲ್ಲಿ ಈ ನಿರ್ಧಾರ ಜನರ ಮುಖದಲ್ಲಿ ಸಂತಸ ತರಲಿದೆ ಎಂದು ಸಚಿವರು ಹೇಳಿದರು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ, ಅರ್ಹ ಫಲಾನುಭವಿಗಳಿಗೆ ತಿಂಗಳಿಗೆ ಐದು ಕಿಲೋಗ್ರಾಂ ಆಹಾರಧಾನ್ಯವನ್ನು ಉಚಿತವಾಗಿ ನೀಡಲಾಗುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಬಡ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಲು ಈ ಯೋಜನೆಯನ್ನು ಮಾರ್ಚ್ 2020 ರಲ್ಲಿ ಪ್ರಾರಂಭಿಸಲಾಯಿತು

Post a Comment

Previous Post Next Post