ರಮೇಶ್ ಅವರ ಪತ್ನಿ ಜಯಮ್ಮ ಅವರಿಗೆ 10 ಲಕ್ಷ ರೂಪಾಯಿ ನೆರವಿನ ಚೆಕ್ ನೀಡಿ, ಸಾಂತ್ವನ ಹೇಳಿದರು ಡಿಕೆಶಿ

[28/10, 3:43 PM] Kpcc official: ಸಾಗರಕ್ಕೆ ತೆರಳುವ ಮಾರ್ಗಮಧ್ಯೆ ಹೊನ್ನಾಳಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಜೈಕಾರ. ಮಾಜಿ ಶಾಸಕ ಮಧು ಬಂಗಾರಪ್ಪ ಜತೆಗಿದ್ದರು.
[28/10, 4:29 PM] Kpcc official: ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ಕೊಟ್ಟು, ರಮೇಶ್ ಅವರ ಪತ್ನಿ ಜಯಮ್ಮ ಅವರಿಗೆ 10 ಲಕ್ಷ ರೂಪಾಯಿ ನೆರವಿನ ಚೆಕ್ ನೀಡಿ, ಸಾಂತ್ವನ ಹೇಳಿದರು. ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಬೇಳೂರು ಗೋಪಾಲಕೃಷ್ಣ, ಡಿಸಿಸಿ ಅಧ್ಯಕ್ಷ ಸುಂದರೇಶ್ ಮತ್ತಿತರರು ಇದ್ದರು.
[28/10, 4:53 PM] Kpcc official: ಸಾಗರದ ಹುತ್ತದಿಂಬ ಗ್ರಾಮದಲ್ಲಿ ದಿವಂಗತ ರಮೇಶ್ ಅವರ ಪತ್ನಿ ಜಯಮ್ಮ ಅವರಿಗೆ ಪರಿಹಾರ ನೀಡಿದ ಸಂದರ್ಭದಲ್ಲಿ ಹಾಗೂ ನಂತರ ಮಾಧ್ಯಮದವರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾತನಾಡಿದ್ದು...
[28/10, 6:41 PM] Kpcc official: *ರಮೇಶ್ ಅವರದು ಸಾಮಾನ್ಯ ಸಾವಲ್ಲ, ದೇಶಕ್ಕಾಗಿ ಆದ ಪ್ರಾಣತ್ಯಾಗ: ಶಿವಕುಮಾರ್ ಬಣ್ಣನೆ*

*ಸಾಗರ:*

‘ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾಗ ಅಪಘಾತದಲ್ಲಿ ಮೃತಪಟ್ಟ ರಮೇಶ್ ಅವರ ಸಾವು ಸಾಮಾನ್ಯವಲ್ಲ. ಅದು ದೇಶಕ್ಕಾಗಿ ಆದ ಪ್ರಾಣತ್ಯಾಗ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ.

ಹುತ್ತದಿಂಬ ಗ್ರಾಮದಲ್ಲಿನ ರಮೇಶ್ ಅವರ ನಿವಾಸಕ್ಕೆ ಶುಕ್ರವಾರ ತೆರಳಿ, ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

ಬಹಳ ದುಃಖದ ವಿಚಾರವಾಗಿ ನಾವೆಲ್ಲ ಇಂದು ಇಲ್ಲಿ ಸೇರಿದ್ದೇವೆ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ನಡುವೆ ನಾವು ಏನು ಸಾಧಿಸುತ್ತೇವೆ ಎಂಬುದು ಮುಖ್ಯವಾಗುತ್ತದೆ. ಹುಟ್ಟಿದವರು ಸಾಯದೇ ಇರಲು ಸಾಧ್ಯವಿಲ್ಲ. ಸಾವು ನಿಶ್ಚಿತ. ಆದರೆ ಬದುಕಿನ ಮಧ್ಯದಲ್ಲಿ ನಾವು ಬಿಟ್ಟು ಹೋಗುವ ಸಾಧನೆಯ ಸಾಕ್ಷಿಗುಡ್ಡೆ ಮುಖ್ಯವಾಗುತ್ತದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಸಂಘಟನೆ, ಮಾನವಿಯತೆ, ಉಪಕಾರ ಸ್ಮರಣೆಯಿಂದ ಇಲ್ಲಿಗೆ ಬಂದಿದ್ದೇನೆ. ನಾನು ಒಂದು ಕಾಲದಲ್ಲಿ ಬೂತ್ ಅಧ್ಯಕ್ಷನಾಗಿದ್ದೆ. ಈ ಪಂಚಾಯ್ತಿ ವ್ಯಾಪ್ತಿಯ ಬೂತ್ ನ ಅಧ್ಯಕ್ಷರಾಗಿ ರಮೇಶ್ ಅವರು ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕ ಸೇವೆ ಮಾಡಿ ದ್ದಾರೆ. 

ಈ ದೇಶವನ್ನು ಒಗ್ಗೂಡಿಸಲು ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಮಾಡುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿ ಸಮಾಜದಲ್ಲಿ ಸಾಮರಸ್ಯ ಸ್ಥಾಪನೆ ಪರ ಹಾಗೂ ನಿರುದ್ಯೋಗ, ಬೆಲೆ ಏರಿಕೆ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ರಮೇಶ್ ಅವರು ಮುಂದಾಗಿದ್ದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಆ ಮೂಲಕ ರಮೇಶ್ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಇದು ಬರೀ ಸಾವಲ್ಲ, ದೇಶಕ್ಕಾಗಿ ಮಾಡಿದ ಪ್ರಾಣತ್ಯಾಗ. ದೇಶಕ್ಕಾಗಿ ಮಾಡಿರುವ ಸೇವೆ. ಹೀಗಾಗಿ ಅವರಿಗೆ ನಮನ ಸಲ್ಲಿಸಿ ಅವರ ಕುಟುಂಬಕ್ಕೆ ಧೈರ್ಯ ತುಂಬಲು ಪಕ್ಷದ ನಾಯಕರು, ಕಾರ್ಯಕರ್ತರೊಡನೆ ಇಂದು ಇಲ್ಲಿಗೆ ಆಗಮಸಿದ್ದೇವೆ. ನಾವು ಕೂಡ ರಮೇಶ್ ಅವರ ಕುಟುಂಬದವರೇ. ಅವರ ಜತೆ ನಾವಿದ್ದೇವೆ. 

ಇದು ಹೋರಾಟಗಾರರ ಭೂಮಿ. ಕಾಗೋಡು ತಿಮ್ಮಪ್ಪನವರು, ಬಂಗಾರಪ್ಪನವರು, ಗೋಪಾಲಗೌಡರು ಇಡೀ ರಾಜ್ಯಕ್ಕೆ ಮಾದರಿ ಹೋರಾಟ ಮಾಡಿದವರು. ನಾನು ಕೂಡ ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಅವರ ಶಿಷ್ಯ. ರಮೇಶ್ ಅವರು ಕೂಡ ಇವರ ಶಿಷ್ಯರಾಗಿ ನಮ್ಮ ಜತೆ ಹೆಜ್ಜೆ ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. ಅವರಿಗೆ ನಮನ ಸಲ್ಲಿಸುತ್ತೇನೆ. ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಧೈರ್ಯವಾಗಿರಬೇಕು. 

ಇಲ್ಲಿಗೆ ಆಗಮಿಸುವಾಗ ದಾರಿ ಮಧ್ಯೆ ಹಲವಾರು ಮಂದಿ ನನಗೆ ಸ್ವಾಗತಕೋರಿ ಶಕ್ತಿ ತುಂಬಿದ್ದೀರಿ. ಮಾನವಧರ್ಮ, ಮಾನವೀಯತೆ, ಉಪಕಾರಸ್ಮರಣೆ ಇಟ್ಟುಕೊಳ್ಳದಿದ್ದರೆ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ನಾನು ಇಲ್ಲಿಗೆ ಬರುವಾಗ ಈ ಭಾಗದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ. ಇಲ್ಲಿ ಬದಲಾವಣೆ ಅವಶ್ಯಕತೆ ಇದೆ. ದೇಶ ಹಾಗೂ ರಾಜ್ಯದಲ್ಲಿ ಬದಲಾವಣೆ ಮಾಡುವ ಸಲುವಾಗಿ ರಾಹುಲ್ ಗಾಂಧಿ ಅವರು ಹೆಜ್ಜೆ ಹಾಕುತ್ತಿದ್ದಾರೆ. 

ಮಹಾತ್ಮ ಗಾಂಧಿ ಅವರು ಒಂದು ಮಾತು ಹೇಳಿದ್ದಾರೆ. ನೀನು ನಿನ್ನನ್ನು ನಿಯಂತ್ರಿಸಿಕೊಳ್ಳಬೇಕಾದರೆ ನಿನ್ನ ಮೆದುಳನ್ನು ಬಳಸು, ಬೇರೆಯವರನ್ನು ನಿಯಂತ್ರಿಸಬೇಕಾದರೆ ನಿನ್ನ ಹೃದಯವನ್ನು ಬಳಸು ಎಂದು. ಅದೇ ರೀತಿ ರಾಹುಲ್ ಗಾಂಧಿ ಅವರು ದೇಶದುದ್ದಗಲಕ್ಕೂ ಜನರ ಹೃದಯ ಗೆಲ್ಲಲು ಮುಂದಾಗಿದ್ದಾರೆ. ನಿಮ್ಮ ಸಹಕಾರ ಸದಾ ಹೀಗೇ ಇರಲಿ.

ರಮೇಶ್ ಅವರ ಧರ್ಮಪತ್ನಿ ಜಯಮ್ಮ ಅವರಿಗೆ ಈ ಸಂದರ್ಭದಲ್ಲಿ ನಾವು ಧೈರ್ಯ ತುಂಬಲು ಬಯಸುತ್ತೇವೆ. ರಾಹುಲ್ ಗಾಂಧಿ ಅವರು ಕೂಡ ನಿಮಗೆ ಶಕ್ತಿ ತುಂಬಲು ಹೇಳಿದ್ದಾರೆ. ಹೀಗಾಗಿ ನಾವು ಅವರಿಗೆ 10 ಲಕ್ಷ ರು. ಪರಿಹಾರದ ಚೆಕ್ ನೀಡುತ್ತಿದ್ದೇವೆ. ಇದು ಈ ಕುಟುಂಬಕ್ಕೆ ನಮ್ಮ ಸಣ್ಣ ಸೇವೆ. 

*ಮಾಧ್ಯಮ ಪ್ರತಿಕ್ರಿಯೆ:*

ನಾವು ಇಂದು ರಮೇಶ್ ಅವರ ಧರ್ಮಪತ್ನಿ ಹಾಗೂ ಅವರ ಮಕ್ಕಳನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದೇವೆ. ಅವರ ಪರವಾಗಿ ಇಡೀ ಕಾಂಗ್ರೆಸ್ ಕುಟುಂಬ ನಿಲ್ಲಲಿದೆ ಎಂಬ ಭರವಸೆ ನೀಡಿದ್ದೇವೆ. ರಮೇಶ್ ಅಪಘಾತದಲ್ಲಿ ಮೃತಪಟ್ಟಿದ್ದರೂ ಇದು ದೇಶಕ್ಕಾಗಿ ಅವರು ಮಾಡಿದ ಪ್ರಾಣತ್ಯಾಗ ಆಗಿದೆ.
 
ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿಯ ಟೀಕೆ ಕುರಿತು ಕೇಳಿದ ಪ್ರಶ್ನೆಗೆ, ‘ಅಸೂಯೆಗೆ ಮದ್ದಿಲ್ಲ. ಅವರು ಇಂತಹ ಸಾಹಸಕ್ಕೆ ಎಂದಾದರೂ ಮುಂದಾಗಿದ್ದಾರಾ? ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾರಾ? ಸ್ವಾತಂತ್ರ್ಯ, ಸಂವಿಧಾನ ತಂದಿದ್ದಾರಾ? ಬಡವರಿಗೆ ಜಮೀನು, ಸೈಟು ಕೊಟ್ಟಿದ್ದಾರಾ? ನಾವು ಕೊಟ್ಟಿರುವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಅಧಿಕಾರಕ್ಕೆ ಬಂದಿದ್ದಾರೆ. ಟೀಕೆ ಮಾಡುವ ಅಧಿಕಾರ ಸಿಕ್ಕಿದೆ. ಅವರು ಟೀಕೆ ಮಾಡುತ್ತಿರಲಿ, ನಾವು ಬಡವರ ಪರವಾಗಿ ಕೆಲಸ ಮಾಡುತ್ತಿರುತ್ತೇವೆ’ ಎಂದು ತಿರುಗೇಟು ನೀಡಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರಿಗೆ ಭಯ ಹುಟ್ಟಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಬಹಳ ಸಂತೋಷ, ಅವರಿಗೆ ಶುಭವಾಗಲಿ. ಅವರ ಸಂತೋಷಕ್ಕೆ ಏನು ಬೇಕೋ ಅದನ್ನು ಮಾತನಾಡಲಿ’ ಎಂದರು.

Post a Comment

Previous Post Next Post