ಬಿಜೆಪಿಯನ್ನು ಮತ್ತೆ ಗೆಲ್ಲಿಸಲು ಶಿವರಾಜ್ ಸಿಂಗ್ ಚೌಹಾಣ್ ಮನವಿ

[30/10, 5:20 PM] Bjp Media: 30-10-202
ಬಿಜೆಪಿಯನ್ನು ಮತ್ತೆ ಗೆಲ್ಲಿಸಲು ಶಿವರಾಜ್ ಸಿಂಗ್ ಚೌಹಾಣ್ ಮನವಿ
ಬೆಂಗಳೂರು: ಕರ್ನಾಟಕದಲ್ಲಿ ಅನೇಕ ಜನಕಲ್ಯಾಣ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಬಿಜೆಪಿಯನ್ನು ಮತ್ತೆ ಗೆಲ್ಲಿಸಿ. ಡಬಲ್ ಎಂಜಿನ್ ಸರಕಾರವನ್ನು ಮುಂದುವರಿಸಿ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮನವಿ ಮಾಡಿದರು.
ಕಲ್ಬುರ್ಗಿಯಲ್ಲಿ ಇಂದು ಬಿಜೆಪಿ ಒಬಿಸಿ ಮೋರ್ಚಾ ವಿರಾಟ್ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿ ಸಾಧಿಸಿದೆ. ಧರ್ಮಕ್ಕೆ ಹಾನಿ ಆದಾಗ ಮತ್ತು ಅಧರ್ಮ ಹೆಚ್ಚಿದಾಗ ಮತ್ತೆ ಬರುವುದಾಗಿ ಭಗವಾನ್ ಕೃಷ್ಣ ಹೇಳಿದ್ದನ್ನು ನೆನಪಿಸಿದ ಅವರು, ಅದೇ ಮಾದರಿಯಲ್ಲಿ ದೇಶದಲ್ಲಿ ಮೋದಿ ಅವರ ನೇತೃತ್ವದಲ್ಲಿ ಸಮೃದ್ಧ ಭಾರತ ನಿರ್ಮಾಣವಾಗುತ್ತಿದೆ ಎಂದು ನುಡಿದರು.
ಮೋದಿಜಿ ಅವರು ನಮ್ಮ ಹೆಮ್ಮೆಯ ನಾಯಕರಾಗಿದ್ದಾರೆ. ಒಂದೆಡೆ ಮೋದಿಜಿ ಇದ್ದರೆ ಮತ್ತೊಂದೆಡೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಹಾಗಿದ್ದರೆ ಭಾರತವನ್ನು ವಿಭಜಿಸಿದ್ದು ನೆಹರೂ ಎಂಬುದು ನಿಮಗೆ ಗೊತ್ತಿಲ್ಲವೇ ಎಂದು ರಾಹುಲ್ ರನ್ನು ಪ್ರಶ್ನಿಸಿದರು. 
ಬಿಜೆಪಿ ಮತ್ತೆ ಅಧಿಕಾರ ಪಡೆಯಲಿದೆ ಎಂಬುದಕ್ಕೆ ಇಲ್ಲಿನ ಜನಸಮುದ್ರವೇ ಸಾಕ್ಷಿ. ಚಿಂಚೋಳಿಗೆ ಬಂದು ಹಿಂತಿರುಗಿದ ಬಳಿಕ ನನಗೆ ನಾಲ್ಕನೇ ಬಾರಿ ಸಿಎಂ ಹುದ್ದೆ ಸಿಕ್ಕಿದೆ ಎಂದು ವಿವರಿಸಿದರು.
ಬಿಜೆಪಿಯಲ್ಲಿ ಸಾಮಾನ್ಯ ಪರಿವಾರದಿಂದ ಬಂದವರು ನಮ್ಮ ಪ್ರಧಾನಿಯಾಗುತ್ತಾರೆ. ಇನ್ನೊಂದೆಡೆ ಕಾಂಗ್ರೆಸ್ ಕೇವಲ ಪರಿವಾರದ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಬಲಿಪಶುವಾಗಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದೊಳಗೆ ಒಳಜಗಳವಿದೆ. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್- ಸಿದ್ದರಾಮಯ್ಯ- ಖರ್ಗೆ ನಡುವೆ ಕಾಂಗ್ರೆಸ್ ಪಕ್ಷ ಹಂಚಿಹೋಗಿದೆ ಎಂದು ಅವರು ವಿಶ್ಲೇಷಿಸಿದರು.
ಒಬಿಸಿ ಕಲ್ಯಾಣಕ್ಕಾಗಿ ಕಾಂಗ್ರೆಸ್ ಯಾಕೆ ಪ್ರಯತ್ನ ಮಾಡಿಲ್ಲ ಎಂದು ಕೇಳಿದ ಅವರು, ಮೊರಾರ್ಜಿ ದೇಸಾಯಿ ಅವರು ಪ್ರಧಾನಿ ಆಗಿದ್ದಾಗ, ಅಟಲ್, ಅಡ್ವಾಣಿ ಅವರು ಸಚಿವರಾಗಿದ್ದಾಗ ಒಬಿಸಿ ಅಭಿವೃದ್ಧಿಗೆ ಶ್ರಮಿಸಿದ್ದರು. ಇದೀಗ ಒಬಿಸಿಗೆ ಸಾಂವಿಧಾನಿಕ ಆಯೋಗ ಮಾಡಿದ ಮೋದಿಜಿ ಅವರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದರು.
ವೈದ್ಯಕೀಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ಮೀಸಲಾತಿ ಹೆಚ್ಚಿಸಿದ ಕೀರ್ತಿ ಮೋದಿಜಿ ಅವರಿಗೆ ಸಲ್ಲುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನೆ- ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಬಿಸಿ ಮೀಸಲಾತಿಗೆ ವಿರುದ್ಧವಾಗಿ ಕೆಲಸ ಮಾಡಿತ್ತು. ಬೊಮ್ಮಾಯಿಯವರು ಎಸ್‍ಸಿ, ಎಸ್‍ಟಿ, ಒಬಿಸಿ ಕಲ್ಯಾಣ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರಲ್ಲದೆ, ಸಿದ್ರಾಮಯ್ಯ ಅವಧಿಯಲ್ಲಿ ಇದೆಲ್ಲವೂ ಕೇವಲ ಕನಸಾಗಿತ್ತು ಎಂದು ಟೀಕಿಸಿದರು.
ಯಡಿಯೂರಪ್ಪ, ಬೊಮ್ಮಾಯಿಯವರು ಶಿಕ್ಷಣ, ಉದ್ಯೋಗ, ಬಜೆಟ್ ಹೆಚ್ಚಳ ವಿಚಾರದಲ್ಲಿ ಒಬಿಸಿ ಪರವಾಗಿ ಕೆಲಸ ಮಾಡಿದ್ದಾರೆ. ಮಧ್ಯಪ್ರದೇಶದಲ್ಲಿ ಉಮಾಶ್ರೀ, ಬಾಬುಲಾಲ್ ಗೌರ್ ಒಬಿಸಿ ಸಮುದಾಯದ ಸಿಎಂ ಆಗಿದ್ದಾರೆ. ಆದರೆ, ಕಾಂಗ್ರೆಸ್ ಒಬಿಸಿಗೆ ಅಂಥ ಅವಕಾಶ ನೀಡಲಿಲ್ಲ ಎಂದು ಆಕ್ಷೇಪಿಸಿದರು.
ಮತಾಂತರ ವಿರುದ್ಧ ಕಾನೂನು ಮಾಡಿದ್ದೇವೆ. ಇಲ್ಲಿಯೂ ಅದೇ ಮಾದರಿಯ ಕಾನೂನು ಮಾಡಿದ್ದೇವೆ. ಕರ್ನಾಟಕದಲ್ಲಿ ಗೋಹತ್ಯಾ ನಿಷೇಧದ ಕಾನೂನು ಜಾರಿಯಾಗಿದೆ. ಪಿಎಫ್‍ಐ ಆತಂಕವಾದಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲ ಕೊಟ್ಟಿತ್ತು. ಆದರೆ, ನಾವು ಪಿಎಫ್‍ಐ ನಿಷೇಧಿಸಿದ್ದೇವೆ ಎಂದರು. ಆತಂಕವಾದಿಗಳು, ದೇಶದ್ರೋಹಿಗಳನ್ನು ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಕರ್ನಾಟಕದಲ್ಲಿ 2023ರಲ್ಲಿ ಬಿಜೆಪಿ ಗೆಲ್ಲಲಿದೆ. ಅಲ್ಲದೆ, 2024ರಲ್ಲಿ ಮೋದಿಜಿ ಮತ್ತೆ ಗೆದ್ದು ಪ್ರಧಾನಿ ಆಗುವುದು ಖಚಿತ ಎಂದು ನುಡಿದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾತನಾಡಿ, ಡಬಲ್ ಎಂಜಿನ್ ಸರಕಾರದ ಕನಸು ನನಸಾಗಲಿದೆ. ಸಿಎಂ ಕುರ್ಚಿಗೆ ಟವೆಲ್ ಹಾಕಿದವರು ಕನಸನ್ನಷ್ಟೇ ಕಾಣಲು ಸಾಧ್ಯ. ರಾಜ್ಯದಲ್ಲಿ ಮತ್ತೆ ಅಧಿಕಾರದ ಕಾಂಗ್ರೆಸ್‍ನ ಕನಸು ಕನಸಾಗಿಯೇ ಉಳಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ಸಿಗರಿಗೆ ಪರಪ್ಪನ ಅಗ್ರಹಾರದ ಪಟ್ಟ ಗ್ಯಾರಂಟಿ ಎಂದು ನುಡಿದರು.
ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಲಕ್ಷ್ಮಣ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಕೇಂದ್ರ- ರಾಜ್ಯದ ಸಚಿವರು, ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಿದ್ದರು.


                                                                    
  (ಕರುಣಾಕರ ಖಾಸಲೆ)
 ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[30/10, 5:20 PM] Bjp Media: 30-10-2022
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಕಾಂಗ್ರೆಸ್‍ಮುಕ್ತ ಕರ್ನಾಟಕ: ನಳಿನ್‍ಕುಮಾರ್ ಕಟೀಲ್ ವಿಶ್ವಾಸ
ಬೆಂಗಳೂರು: ಖರ್ಗೆ ಅವರು ಮುಂದಿನ ಚುನಾವಣೆಯಲ್ಲಿ ಸಿದ್ರಾಮಣ್ಣ ಟಿಕೆಟ್ ಕೊಡುವುದಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ನಾವು ಭವಿಷ್ಯದಲ್ಲಿ ನೋಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ಕಲ್ಬುರ್ಗಿಯಲ್ಲಿ ಇಂದು ಬಿಜೆಪಿ ಒಬಿಸಿ ಮೋರ್ಚಾ ವಿರಾಟ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿ ಹುಲಿಯಾ ಕಾಡಿಗೆ ಹೋಗಲಿದೆ. ಬಿಜೆಪಿಯ ಕಮಲ ಅರಳಲಿದೆ ಎಂದು ತಿಳಿಸಿದರು. ಸಿದ್ರಾಮಣ್ಣ ನರಹಂತಕರಾಗಿದ್ದರು. ಅವರೀಗ ಟವೆಲ್ ಹಿಡಿದು ಓಡಾಡುತ್ತಿದ್ದಾರೆ. ಅವರು ಮುಂದಿನ ದಿನದಲ್ಲಿ ಶಾಶ್ವತ ನಿರುದ್ಯೋಗಿ ಆಗಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು.
ಹಿಂದುಳಿದ ವರ್ಗದವರನ್ನು ಸಿದ್ರಾಮಣ್ಣ ತುಳಿದರು. ಕನಕ ಜಯಂತಿ, ಕನಕನ ಕ್ಷೇತ್ರದ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಕಾರಣರು. ಬೊಮ್ಮಾಯಿ ಅವರು ಮೀಸಲಾತಿ ಪ್ರಮಾಣ ಹೆಚ್ಚಿಸಿದರು ಎಂದು ವಿವರಿಸಿದರು. ಈಡಿಗ, ಪರಿವಾರ, ತಳವಾರರ ಸಮಸ್ಯೆ ಪರಿಹರಿಸಿದ ಸರಕಾರ ನಮ್ಮದು ಎಂದು ಮೆಚ್ಚುಗೆ ಸೂಚಿಸಿದರು.
ಸಿದ್ರಾಮಣ್ಣ ಯಾಕೆ ಹಿಂದುಳಿದವರನ್ನು ಕಡೆಗಣಿಸಿದ್ದರು? ಸಿದ್ರಾಮಣ್ಣನಿಗೆ ಕ್ಷೇತ್ರ ಇಲ್ಲವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಬಿಜೆಪಿ ಮಹಾಭಾರತದ ಯುದ್ಧದಲ್ಲಿ ಗೆದ್ದು, ಕರ್ನಾಟಕದ ಕಲ್ಯಾಣ ಮಾಡಲಿದೆ ಎಂದು ತಿಳಿಸಿದರು.
ಬಿಜೆಪಿ ಸರ್ವಸ್ಪರ್ಶಿಯಾಗಿ ಬೆಳೆಯುತ್ತಿದೆ. ಕಲ್ಬುರ್ಗಿಯ ರಸ್ತೆ ರಸ್ತೆಗಳಲ್ಲಿ ಕೇಸರೀಕರಣ ಆಗಿದೆ. ಒಬಿಸಿ ವರ್ಗ ಬಿಜೆಪಿ ಜೊತೆಗಿದೆ ಎಂಬ ಸಂದೇಶ ಅಹಿಂದದ ಸಿದ್ರಾಮಣ್ಣನಿಗೆ ಹೋಗಿದೆ ಎಂದು ತಿಳಿಸಿದರು.
ಈ ಸಮಾವೇಶದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಲಕ್ಷ್ಮಣ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು, ಕೇಂದ್ರ- ರಾಜ್ಯದ ಸಚಿವರು, ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಿದ್ದರು.


                                                                    
  (ಕರುಣಾಕರ ಖಾಸಲೆ)
 ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[30/10, 5:20 PM] Bjp Media: 30-10-2022
ಗೆ, 
ಸಂಪಾದಕರು / ವರದಿಗಾರರು.

ಪ್ರಕಟಣೆಯ ಕೃಪೆಗಾಗಿ
ರಾಜ್ಯದಲ್ಲಿ ಮತ್ತೆ ಬಿಜೆಪಿಗೇ ಅಧಿಕಾರ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಂದಿನ ವರ್ಷ ನಡೆಯುವÀ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಮತ್ತೆ ವಿಧಾನಸೌಧದಲ್ಲಿ ಅಧಿಕಾರ ಪಡೆಯಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ಸೂಚಿಸಿದರು.
ಕಲ್ಬುರ್ಗಿಯಲ್ಲಿ ಇಂದು ಬಿಜೆಪಿ ಒಬಿಸಿ ಮೋರ್ಚಾ ವಿರಾಟ್ ಸಮಾವೇಶದಲ್ಲಿ ಮಾತನಾಡಿದ ಅವರು, ಬದಲಾವಣೆಯ ಕಾಲ ಬಂದಿದೆ. ಹಿಂದುಳಿದ ವರ್ಗಕ್ಕೆ ಮೋಸ ಮಾಡಿ, ಕತ್ತಲಲ್ಲಿಟ್ಟು ಅಧಿಕಾರ ನಡೆಸಿ ಕರ್ನಾಟಕವನ್ನು ಹಿಂದುಳಿದ ಪ್ರದೇಶವಾಗಿ ಮಾಡಿದ ಸಿದ್ರಾಮಣ್ಣನಿಗೆ ಬದಲಾವಣೆ ಕಾಲ ಬಂದಿದೆ ಎಂದು ತಿಳಿಸಿದರು.
ಕಾಗಿನೆಲೆ ಅಭಿವೃದ್ಧಿ, ಸಂಗೊಳ್ಳಿ ರಾಯಣ್ಣನ ಅಭಿವೃದ್ಧಿ, ಮಿಲಿಟರಿ ಶಾಲೆ ನಾವು ಕೊಟ್ಟಿದ್ದೇವೆ. ಹಿಂದುಳಿದ ವರ್ಗ, ಕುರುಬ ಸಮಾಜವನ್ನು ಕಡೆಗಣಿಸಿ ಕಾಂಗ್ರೆಸ್ ಪಕ್ಷವು ಮೋಸ ಮಾಡಿತ್ತು. ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ನ್ಯಾಯ ಕೊಡುವ ಕೆಲಸವನ್ನು ನಾವು ಮಾಡಿದ್ದೇವೆ ಎಂದರು.
ಮೀಸಲಾತಿ ವಿಚಾರದಲ್ಲಿ ನಮ್ಮದು ಕ್ರಾಂತಿಕಾರಿ ನಿರ್ಣಯ. ಎಸ್‍ಸಿ, ಎಸ್‍ಟಿ ಯವರನ್ನು ಮುಖ್ಯವಾಹಿನಿಗೆ ತರಲು ಸಾಮಾಜಿಕ ನ್ಯಾಯದ ನಿರ್ಧಾರ ಮಾಡಿದ್ದೇವೆ. ಹಿಂದುಳಿದ ವರ್ಗದ ಕುರುಬ ಜನಾಂಗಕ್ಕೆ ಅಮೃತ ಯೋಜನೆ ಜಾರಿಗೊಳಿಸಿದ್ದೇವೆ. 354 ಕೋಟಿ ಅನುದಾನ ನೀಡಿದ್ದೇವೆ. ಸಿದ್ರಾಮಣ್ಣ, ಕಾಂಗ್ರೆಸ್‍ನವರು ಯಾಕೆ ಇದನ್ನು ಮಾಡಿರಲಿಲ್ಲ ಎಂದು ಪ್ರಶ್ನಿಸಿದರು. ಒಬಿಸಿ ಬಗ್ಗೆ ಮಾತನಾಡಲು ನಿಮಗೇನು ಹಕ್ಕಿದೆ ಎಂದು ಕೇಳಿದರು.
ನೈಜ ಸಾಮಾಜಿಕ ನ್ಯಾಯ, ಅವಕಾಶ, ಸಮಾನತೆಯನ್ನು ನಾವು ನೀಡುತ್ತಿದ್ದೇವೆ. ಹಿಂದುಳಿದ ವರ್ಗದ ಮೋದಿಜಿ ಇದಕ್ಕೆ ಪ್ರೇರಣೆ ನೀಡಿದ್ದಾರೆ. ಅವರು ಹಿಂದುಳಿದ ವರ್ಗ ಸೇರಿದಂತೆ ಸಬ್ ಕೆ ಸಾಥ್, ಸಬ್ ಕಾ ವಿಕಾಸ್ ಗಾಗಿ ಶ್ರಮಿಸುತ್ತಿದ್ದಾರೆ. ಆ ದಾರಿಯಲ್ಲಿ ನಾವು ಮುನ್ನಡೆಯುತ್ತಿದ್ದೇವೆ ಎಂದರು.
ಕೋಲಿ ಸಮುದಾಯಕ್ಕೆ ಅವಕಾಶ ಕೊಟ್ಟಿದ್ದೇನೆ. ಅವರಿಗೆ ನ್ಯಾಯ ನೀಡಲು ನಿರ್ಧಾರ ತೆಗೆದುಕೊಂಡಿದ್ದೇನೆ. ಸರಕಾರಿ ಆದೇಶವನ್ನು ತಂದಿದ್ದೇನೆ. ಈ ಸಮ್ಮೇಳನಕ್ಕೆ ಖಾಲಿ ಕೈಯಲ್ಲಿ ಬಂದಿಲ್ಲ. ಆದೇಶವನ್ನು ತಂದಿದ್ದೇನೆ. ಮಾತಿನಲ್ಲಿ ಸಾಮಾಜಿಕ ನ್ಯಾಯ ಕೊಡುವುದಲ್ಲ ಎಂದು ತಿಳಿಸಿದರು.
ಜನರಿಗಾಗಿ ರಾಜಕಾರಣ ಮಾಡುತ್ತೇವೆ. ಒಬಿಸಿ ವರ್ಗಕ್ಕೆ ನ್ಯಾಯ ಕೊಡುತ್ತೇವೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬದ್ಧನಿದ್ದೇನೆ ಎಂದು ಅವರು ಪ್ರಕಟಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ ನಮ್ಮದು. 1500 ಕೋಟಿ ಅನುದಾನವನ್ನು 3 ಸಾವಿರ ಕೋಟಿಗೆ ಈಗಾಗಲೇ ಹೆಚ್ಚಿಸಿದ್ದು, ಮುಂದಿನ ವರ್ಷ ಅದನ್ನು 5 ಸಾವಿರ ಕೋಟಿಗೆ ಏರಿಸುವುದಾಗಿ ತಿಳಿಸಿದರು.
ಹಸಿವು, ಬಡತನ ಮುಕ್ತ ಕಲ್ಯಾಣ ಕರ್ನಾಟಕವನ್ನು ನೋಡಲು ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು. ಮೋದಿಜಿ ಕೈಯನ್ನು ಬಲಪಡಿಸಿ ಎಂದು ವಿನಂತಿಸಿದರು. ನಮ್ಮ ವಿಜಯ ಯಾತ್ರೆಯನ್ನು ನಿಲ್ಲಿಸಲು ಕಾಂಗ್ರೆಸ್‍ಗೆ ತಾಕತ್ತಿಲ್ಲ ಎಂದು ನುಡಿದರು. ಸುಳ್ಳು ಸುದ್ದಿಗಳನ್ನು ನಂಬದಿರಿ. ನಿಮ್ಮ ಸರಕಾರ ಆಯ್ಕೆಯ ಶಕ್ತಿ ನಿಮ್ಮಲ್ಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ರಥಯಾತ್ರೆ- ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಮತಬ್ಯಾಂಕ್ ರಾಜಕೀಯ ಮಾಡಿಕೊಂಡು ಒಬಿಸಿ ಜನರಿಗೆ ದ್ರೋಹ ಮಾಡಿದ ಪಕ್ಷ ಕಾಂಗ್ರೆಸ್ ಎಂದರು.
ರಾಜ್ಯದಲ್ಲಿ ಮೈಸೂರಿನಿಂದ ನನ್ನ ರಥಯಾತ್ರೆ ನಡೆಯಲಿದೆ. ಬೊಮ್ಮಾಯಿ ಮತ್ತಿತರರು ಇನ್ನೊಂದು ರಥಯಾತ್ರೆ ಮಾಡಲಿದ್ದಾರೆ. ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ನಾವು ಸಜ್ಜಾಗಿದ್ದೇವೆ. ಪ್ರಧಾನಿ ಮೋದಿಯವರಂಥ ಮಹಾನ್ ನಾಯಕ ನಮ್ಮ ಜೊತೆಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಡೆಯಲು ಅಸಾಧ್ಯ ಎಂದು ತಿಳಿಸಿದರು.
ಮೋದಿಜಿ ಅವರು ನ. 11ರಂದು ಬೆಂಗಳೂರಿನಲ್ಲಿ ದೊಡ್ಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರಲ್ಲದೆ, ಬಿಜೆಪಿ ಆಡಳಿತಾವಧಿಯಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ವಿವರಿಸಿದರು. ಬಿಜೆಪಿಯಲ್ಲಿ ಅತಿ ಹೆಚ್ಚು ಒಬಿಸಿ ಜನಪ್ರತಿನಿಧಿಗಳಿದ್ದಾರೆ ಎಂದು ತಿಳಿಸಿದರು. ಕೋಲಿ ಸಮಾಜದ ಬಾಬುರಾವ್ ಚಿಂಚನಸೂರ್ ಅವರಿಗೆ ಉತ್ತಮ ಸ್ಥಾನ ಕೊಡಲಿದ್ದೇವೆ ಎಂದು ಭರವಸೆ ನೀಡಿದರು.
ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು. ಎಲ್ಲ ವರ್ಗಗಳ ಅಭಿವೃದ್ಧಿಗೆ ನಾವು ಬದ್ಧರಿದ್ದೇವೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಶಕೆ ಆರಂಭವಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಈ ಭಾಗದ ಅಭಿವೃದ್ಧಿ ಕೇವಲ ಮರೀಚಿಕೆಯಾಗಿತ್ತು. ಆದರೆ, ನಮ್ಮ ಸರಕಾರಗಳು ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿವೆ ಎಂದು ತಿಳಿಸಿದರು.
ಈ ಸಮಾವೇಶದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಲಕ್ಷ್ಮಣ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಕೇಂದ್ರ- ರಾಜ್ಯದ ಸಚಿವರು, ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಿದ್ದರು.


                                                                    
  (ಕರುಣಾಕರ ಖಾಸಲೆ)
 ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[30/10, 5:20 PM] Bjp Media: 30-10-2022
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಒಬಿಸಿ ಸಮುದಾಯವನ್ನು ವಂಚಿಸಿದ ಕಾಂಗ್ರೆಸ್: ಡಾ. ಲಕ್ಷ್ಮಣ್
ಬೆಂಗಳೂರು: ಶೇ 50ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಒಬಿಸಿ ಸಮುದಾಯಕ್ಕೆ ಅವಕಾಶ ಮತ್ತು ಸೌಲಭ್ಯಗಳನ್ನು ನೀಡದೆ ಕಾಂಗ್ರೆಸ್ ಪಕ್ಷವು ವಂಚಿಸಿದೆ ಎಂದು ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಅವರು ಆರೋಪಿಸಿದರು.
ಕಲ್ಬುರ್ಗಿಯಲ್ಲಿ ಇಂದು ಬಿಜೆಪಿ ಒಬಿಸಿ ಮೋರ್ಚಾ ವಿರಾಟ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗಕ್ಕೆ ನಿರಂತರವಾಗಿ ಮೋಸ ಮಾಡಿದೆ ಎಂದು ಟೀಕಿಸಿದರು. ಆದರೆ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಪ್ರಯತ್ನದಿಂದ ಮೀಸಲಾತಿ ಲಭಿಸಿದೆ. ಹಿಂದುಳಿದ ವರ್ಗದವರು ವೈದ್ಯರಾಗುವ ಕನಸು ನನಸಾಗಿದೆ. ಗರಿಷ್ಠ ಸಂಖ್ಯೆಯ ಸಚಿವ ಸ್ಥಾನವನ್ನೂ ತಮ್ಮ ಸಂಪುಟದಲ್ಲಿ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಮೋದಿಜಿ ಅವರು ಅನೇಕ ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅನೇಕ ಐತಿಹಾಸಿಕ ಮತ್ತು ಮಹತ್ವಪೂರ್ಣ ನಿರ್ಣಯಗಳನ್ನು ಮೋದಿಜಿ ಅವರು ಕೈಗೊಂಡಿದ್ದಾರೆ. ಕರ್ನಾಟಕದಲ್ಲೂ ಅನೇಕ ಜನಹಿತದ ಯೋಜನೆಗಳು ಜಾರಿಗೊಂಡಿವೆ. ಮೋದಿಜಿ ಅವರಿಗೆ ಉಡುಗೊರೆ ಕೊಡಲು ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನು ಗೆಲ್ಲಿಸಬೇಕಿದೆ ಎಂದು ಮನವಿ ಮಾಡಿದರು.
ಕಾಕಾ ಕಾಲೇಕರ್ ಶಿಫಾರಸನ್ನು ಪ್ರಧಾನಿ ನೆಹರೂ ಅವರು ಕಡೆಗಣಿಸಿದ್ದರು. ಬಳಿಕ ಮಂಡಲ್ ಕಮಿಷನ್ ಶಿಫಾರಸನ್ನು ರಾಜೀವ್ ಗಾಂಧಿ ವಿರೋಧಿಸಿದ್ದರು. ಒಬಿಸಿಗೆ ಮೀಸಲಾತಿ ಕೊಡುವುದನ್ನು ಕಾಂಗ್ರೆಸ್ ಪಕ್ಷ ಬಯಸಲಿಲ್ಲ ಎಂದು ಟೀಕಿಸಿದರು. ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಒಬಿಸಿ ಸಮುದಾಯದವರನ್ನು ಸಂಘಟಿಸುತ್ತಿರುವ ರಾಜ್ಯ ಒಬಿಸಿ ಘಟಕವನ್ನು ಅಭಿನಂದಿಸಿದರು.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು
ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು ಅವರು ಮಾತನಾಡಿ, ಈ ಸಮಾವೇಶ ಒಬಿಸಿ ಸಮುದಾಯಗಳ ಹೃದಯ ಮಿಡಿತದ ಸಂಕೇತ. ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಯನ್ನು ಅವಕಾಶಗಳನ್ನು ಹಿಂದಿನ ಕಾಂಗ್ರೆಸ್ ಸರಕಾರವು ಕಡೆಗಣಿಸಿತ್ತು. ಆದರೆ, ನರೇಂದ್ರ ಮೋದಿಜಿ ಅವರ ಸರಕಾರವು ಒಬಿಸಿಗೆ ಗರಿಷ್ಠ ಅವಕಾಶ- ಪ್ರಾತಿನಿಧ್ಯ ಮತ್ತು ಯೋಜನೆಗಳನ್ನು ನೀಡಿದೆ ಎಂದು ತಿಳಿಸಿದರು.
ಈ ಸಮಾವೇಶದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ- ರಾಜ್ಯದ ಸಚಿವರು, ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಿದ್ದರು.


                                                                    
  (ಕರುಣಾಕರ ಖಾಸಲೆ)
 ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[30/10, 6:18 PM] Bjp Media: 30-10-2022
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಆರೆಸ್ಸೆಸ್ ಹಿರಿಯ ಪ್ರಚಾರಕ ಚಂದ್ರಶೇಖರ ಭಂಡಾರಿ ಅವರ 
ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು ಹಾಗೂ ಲೇಖಕರಾದ ಚಂದ್ರಶೇಖರ ಭಂಡಾರಿ ಅವರು ನಿಧನರಾದ ಸುದ್ದಿ ಆಘಾತ ತಂದಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಐದು ದಶಕಗಳಿಗಿಂತಲೂ ಹೆಚ್ಚಿನ ಕಾಲ ಪ್ರಚಾರಕರಾಗಿ ದೇಶ ಸೇವೆ ಮಾಡಿರುವ ಭಂಡಾರಿ ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ ಹಾಗೂ ವಿವಿಧ ಕೃತಿಗಳನ್ನು ಭಾμÁಂತರ ಕೂಡ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. 
ಹಲವು ಪ್ರಶಸ್ತಿಗಳಿಗೆ ಭಾಜನರಾಗಿರುವ ಅವರು ತಮ್ಮ ಜೀವನವನ್ನು ತಾಯಿ ಭಾರತಿಗಾಗಿ ಸಮರ್ಪಿಸಿಕೊಂಡಿದ್ದವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಆಪ್ತರಿಗೆ ಈ ದುಃಖ ಭರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.


                                                                    
  (ಕರುಣಾಕರ ಖಾಸಲೆ)
 ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[30/10, 8:25 PM] Bjp Media: 30-10-2022
ಗೆ, 
ಸಂಪಾದಕರು / ವರದಿಗಾರರು.

ಪ್ರಕಟಣೆಯ ಕೃಪೆಗಾಗಿ
ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ಕಾಂಗ್ರೆಸ್ ಸಂಚು: ಆರ್.ಅಶೋಕ್
ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಪತ್ರಕರ್ತರನ್ನು ಗುರಿಯಾಗಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷವು ಪರೋಕ್ಷವಾಗಿ ಬೆದರಿಕೆ ಹಾಕುತ್ತಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರು ಆರೋಪಿಸಿದರು. ಮುಖ್ಯಮಂತ್ರಿಗಳ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
 ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮತಿ ಇಂದಿರಾ ಗಾಂಧಿ ಅವರು ತಮ್ಮ ಆಡಳಿತದ ಅವಧಿಯಲ್ಲಿ ಪ್ರಭಾವಶಾಲಿ ಎನಿಸಿದ್ದ ಮುದ್ರಣ ಮಾಧ್ಯಮವನ್ನು ಗುರಿಯಾಗಿ ಇಟ್ಟುಕೊಂಡಿದ್ದರು. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಇಡೀ ಪತ್ರಕರ್ತರನ್ನು ಜೈಲಿಗೆ ಅಟ್ಟಿದ ಕಳಂಕ ಕಾಂಗ್ರೆಸ್ ಮೇಲಿದೆ. ಇವತ್ತು ಅದೇ ಧಾಟಿಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಹೊರಟಿರುವುದು ಹೇಡಿತನದ ಪರಮಾವಧಿ ಎಂದು ಟೀಕಿಸಿದರು.
ಇದು ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಕಾಂಗ್ರೆಸ್‍ನ ಸಂಚು ಎಂದು ಆಕ್ಷೇಪಿಸಿದ ಅವರು, ಒಂದು ರೀತಿ ಬ್ಲ್ಯಾಕ್‍ಮೈಲ್ ನಡೆದಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಜಿ ಅವರ ಉತ್ತಮ ಕಾರ್ಯಕ್ಕಾಗಿ ರಷ್ಯಾವೂ ಹೊಗಳಿದೆ. ಪಾಕಿಸ್ತಾನ, ಚೀನಾಗೆ ಸರಿಯಾದ ಬುದ್ಧಿ ಕಲಿಸಿ ವಿಶ್ವ ನಾಯಕರಾಗಿದ್ದಾರೆ. ಅಮೆರಿಕದ ಪ್ರಧಾನಿಯೂ ಹೊಗಳಿದ್ದಾರೆ. ಇಂಗ್ಲೆಂಡ್ ಪ್ರಧಾನಿಯೂ ಉತ್ತಮ ಬಾಂಧವ್ಯ ಹೊಂದುವುದಾಗಿ ತಿಳಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಮೋದಿಯವರ ಕಾರ್ಯಕ್ರಮಗಳು ದಿನನಿತ್ಯ ಹೆಚ್ಚಾಗಿ ಪ್ರಸಾರ ಆಗುತ್ತಿರುವ ಕೊರಗು ಕೂಡ ಇದಕ್ಕೆ ಕಾರಣ ಎಂದು ತಿಳಿಸಿದರು.
ಮಾಧ್ಯಮವನ್ನೂ ಒಡೆದ ಕಾಂಗ್ರೆಸ್- ಅಶೋಕ್
ಮುಸ್ಲಿಂ ಪತ್ರಕರ್ತರಿಗೆ ಮಾತ್ರ ಲ್ಯಾಪ್ ಟಾಪ್ ಗಿಫ್ಟ್ ಕೊಡಬೇಕೆಂದು ಸರಕಾರದ ಆದೇಶ ಹೊರಡಿಸಿದ್ದರು. ಕಾಂಗ್ರೆಸ್‍ನವರ ಕಣ್ಣಿಗೆ, ದಿವ್ಯದೃಷ್ಟಿಗೆ ಬೇರೆ ಪತ್ರಕರ್ತರು ಕಾಣಲಿಲ್ಲವೇ? ಲಿಂಗಾಯತ- ವೀರಶೈವರನ್ನು ಒಡೆಯಲು ಮುಂದಾಗಿದ್ದ ಸಿದ್ದರಾಮಯ್ಯರವರು ಪತ್ರಕರ್ತರಲ್ಲೂ ಹಿಂದೂ- ಮುಸ್ಲಿಂ- ಕ್ರಿಶ್ಚಿಯನ್ ಎಂದು ಭೇದಭಾವ ತೋರಿಸುವ ಮೂಲಕ ಪತ್ರಕರ್ತರನ್ನು ದಾಳವಾಗಿ ಮಾಡಿದ್ದರು ಎಂದು ಅಶೋಕ್ ಅವರು ಟೀಕಿಸಿದರು.
ಸಿದ್ದರಾಮಯ್ಯರಿಗೆ ಒಡೆಯುವ ಅಂಟು ಬಂದಿದೆ. ಕಾಂಗ್ರೆಸ್‍ನವರು ಒಡೆದು ಆಳುವ ನೀತಿಯನ್ನು ಪತ್ರಕರ್ತರ ಮೇಲೆ ಪ್ರಯೋಗ ಮಾಡಿದ್ದರು. ಇದೊಂದು ಹೀನ ಕಾರ್ಯ ಎಂದು ಆಕ್ಷೇಪಿಸಿದರು. ಉರ್ದು ಪತ್ರಿಕೆಗೆ ಮಾತ್ರ 61 ಲಕ್ಷದ ಜಾಹೀರಾತು ಕೊಡಲು ಸೂಚಿಸಿದ್ದರು ಎಂದು ಆದೇಶಪತ್ರವನ್ನು ನೀಡಿದರು.
ಮಾಧ್ಯಮವನ್ನು ಒಡೆಯುವ ಪ್ರಯತ್ನ ಕಾಂಗ್ರೆಸ್ ಮತ್ತು ಕಾಂಗ್ರೆಸ್ಸಿಗರಿಗೆ ರಕ್ತಗತವಾಗಿದೆ. ಐ ಫೋನ್ ಲಂಚ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಲಂಚ ಕೊಡುವ ಪ್ರವೃತ್ತಿ ಬಿಡುವಂತೆ ಆಗ ಕುಮಾರಸ್ವಾಮಿ ಅವರು ಸಲಹೆ ನೀಡಿದ್ದರು ಎಂದು ವಿವರ ನೀಡಿದರು.

ಕಾಂಗ್ರೆಸ್‍ನ 2 ಜಿ ಹಗರಣ, ಹೆಲಿಕಾಪ್ಟರ್ ಹಗರಣ, ಕಲ್ಲಿದ್ದಲು ಹಗರಣಗಳಿಂದ ಹಲವರು ಜೈಲಿನಲ್ಲಿದ್ದಾರೆ. ಉಳಿದವರು ಜಾಮೀನಿನಲ್ಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ- ರಾಹುಲ್ ಗಾಂಧಿ ಅವರು ಕೂಡ ಹಗರಣದಲ್ಲಿ ಭಾಗಿಯಾಗಿ ಜಾಮೀನಿನಡಿ ಹೊರಗಿದ್ದಾರೆ. ಭ್ರಷ್ಟಾಚಾರ, ಕೋಮುವಾದ ಮತ್ತು ಗೂಂಡಾಗಿರಿಗೆ ಒಂದು ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ವಿವರಿಸಿದರು.
ಬೆಂಗಳೂರಿನ ಸ್ಟೀಲ್ ಬ್ರಿಡ್ಜ್‍ನಲ್ಲಿ 65 ಕೋಟಿ ಲೂಟಿ ಮಾಡಲು ಟೆಂಡರ್ ಮಾಡಿದ್ದರು. ಜನರ ಹೋರಾಟದ ಪರಿಣಾಮವಾಗಿ ರಾತ್ರೋರಾತ್ರಿ ಅದನ್ನು ವಾಪಸ್ ಪಡೆದರು. ಇವರು ಸತ್ಯ ಹರಿಶ್ಚಂದ್ರರಾಗಿದ್ದರೆ, ಭ್ರಷ್ಟಾಚಾರ ಇಲ್ಲದಿದ್ದರೆ ಆ ಯೋಜನೆಯನ್ನು ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕಾಗಿ ಚಾತಕಪಕ್ಷಿಯಂತೆ ಹವಣಿಸುತ್ತಿದೆ. ಕರ್ನಾಟಕವನ್ನು ದೆಹಲಿಯ ನಾಯಕರಿಗೆ ಎಟಿಎಂ ಮಾಡಲು ಮತ್ತು ವೈಯಕ್ತಿಕವಾಗಿ ಜೇಬು ತುಂಬಿಸಲು ಇಲ್ಲಿ ಅಧಿಕಾರ ಪಡೆಯುವ ಹವಣಿಕೆ ಕಾಂಗ್ರೆಸ್ಸಿಗರದು. ಕರ್ನಾಟಕದ ಮೇಲೆ ಕಾಂಗ್ರೆಸ್ಸಿಗರ ವಕ್ರದೃಷ್ಟಿ ಬಿದ್ದಿದೆ. ಸಿಎಂ ಕಚೇರಿಯಿಂದ ಹಣ ಕೊಟ್ಟ ಬಗ್ಗೆ ಲೋಕಾಯುಕ್ತರಿಗೆ ದೂರು ಕೊಟ್ಟಿದ್ದು ತನಿಖೆ ನಡೆದಿದೆ. ಸತ್ಯಾಸತ್ಯತೆ ಹೊರಕ್ಕೆ ಬರುವ ಮೊದಲೇ ಕಾಂಗ್ರೆಸ್ಸಿಗರು ನ್ಯಾಯಾಧೀಶರಾಗಿ ಪತ್ರಕರ್ತರ ವಿರುದ್ಧ ತೀರ್ಪು ನೀಡಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ತೀರ್ಪು ಎಷ್ಟು ಸರಿ? ಎಂದು ಕೇಳಿದರು. ಕಾಂಗ್ರೆಸ್ ಮುಖಂಡರು ಪತ್ರಕರ್ತರ ಮತ್ತು ಜನರ ಕ್ಷಮಾಪಣೆ ಕೇಳಬೇಕೆಂದು ಆಗ್ರಹಿಸಿದರು. ಪತ್ರಕರ್ತರ ವಿರುದ್ಧ ಕಳಂಕ ತಂದ ಕಾಂಗ್ರೆಸ್ಸಿಗರಿಗೆ ನಾಚಿಕೆ ಆಗಬೇಕು ಎಂದರು.
ಮಾಧ್ಯಮದವರಿಗೆ ಇರುಸು ಮುರುಸುಂಟು ಮಾಡುವ ಕೆಲಸ- ಸುಧಾಕರ್
ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ|| ಕೆ. ಸುಧಾಕರ್ ಅವರು ಮಾತನಾಡಿ, ಇವತ್ತು ಕೆಪಿಸಿಸಿ ಅಧ್ಯಕ್ಷರು ಮತ್ತು ಸಿಎಲ್‍ಪಿ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಎರಡು ವಿಷಯಗಳ ಕುರಿತು ಆಪಾದನೆ ಮಾಡಿದ್ದಾರೆ. ದೀಪಾವಳಿ ಹಬ್ಬದ ಉಡುಗೊರೆ ಕುರಿತು ಉಲ್ಲೇಖಿಸಿ ಸಿಎಂ ಅವರನ್ನು ತೇಜೋವಧೆ ಮಾಡಲು ಯತ್ನಿಸಿದ್ದಾರೆ. ಮಾಧ್ಯಮದವರ ವೃತ್ತಿ ಬದುಕಿಗೆ ಇರುಸು ಮುರುಸುಂಟು ಮಾಡುವ ಕೆಲಸ ಮಾಡಿದ್ದಾರೆ ಎಂದು ವಿವರಿಸಿದರು.
ಹಬ್ಬದ ವೇಳೆ ಉಡುಗೊರೆ ಕೊಡುವುದು, ಸಿಹಿ ಹಂಚುವುದು ಹಿಂದೂ ಧರ್ಮದ ಪರಂಪರೆ ಮತ್ತು ಇತಿಹಾಸ. ಇವರಿಗೆ ಹಿಂದೂ ಧರ್ಮದ ಹಬ್ಬಗಳ ಬಗ್ಗೆ ಇಷ್ಟು ದ್ವೇಷ ಯಾಕೆ? ಹಣ ಕೊಟ್ಟದ್ದು ನಿಜವೇ ಆಗಿದ್ದರೆ ಇವರಿಗೆ ದೂರು ಕೊಟ್ಟವರು ಯಾರೆಂದು ಹೇಳಲಿ. ಸಾಕ್ಷಿ ಇಲ್ಲದೆ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಉಡುಗೊರೆ ಕೊಡುವುದು ತಪ್ಪಾದರೆ ಪಡೆಯುವುದೂ ತಪ್ಪಲ್ಲವೇ? ಕಾಂಗ್ರೆಸ್‍ನವರು ತಮ್ಮ ಅಧಿಕಾರದ ಅವಧಿಯಲ್ಲಿ ಉಡುಗೊರೆ ಕೊಟ್ಟದ್ದಲ್ಲದೇ ಉಡುಗೊರೆ ಪಡೆದಿದ್ದರು. ಅದು ಜಗಜ್ಜಾಹೀರಾಗಿದೆ. ಇಂಥ ವಿಷಯಗಳಲ್ಲಿ ಕ್ಷುಲ್ಲಕ ರಾಜಕೀಯ ಯಾಕೆ? ಕಾಂಗ್ರೆಸ್ಸಿಗರಿಗೆ ನಮ್ಮ ಸರಕಾರದ ಉತ್ತಮ ಕಾರ್ಯಕ್ರಮಗಳನ್ನು ನೋಡಿ ತಡೆದುಕೊಳ್ಳಲಾಗುತ್ತಿಲ್ಲ. ಅಹಿಂದ ಸಮುದಾಯದಲ್ಲಿ ಅತ್ಯಂತ ಎತ್ತರದ ನಾಯಕರಾಗಿ ನಮ್ಮ ಪ್ರಧಾನಿ ಮೋದಿಜಿ ಅವರು ಇದ್ದಾರೆ. ಕಲ್ಬುರ್ಗಿಯ ಒಬಿಸಿ ಸಮಾವೇಶ ಲಕ್ಷಾಂತರ ಜನ ಸೇರಿ ಅತ್ಯಂತ ಯಶಸ್ವಿ ಎನಿಸಿದೆ. ಹಾಗಾಗಿ ಅದನ್ನು ತಡೆದುಕೊಳ್ಳಲು ಸಾಧ್ಯವಾಗಿಲ್ಲ ಎಂದರು.
ನಿಮಗ್ಯಾವ ನೈತಿಕತೆ ಇದೆ -ಡಾ|| ಕೆ. ಸುಧಾಕರ್
ಅಂತ್ಯೋದಯ ವರ್ಗಗಳು, ದಯನೀಯ ಸ್ಥಿತಿಯಲ್ಲಿರುವವರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಮೋದಿಜಿ ಕೊಟ್ಟಿದ್ದಾರೆ. ಅದೇ ಮಾದರಿಯಲ್ಲಿ ರಾಜ್ಯ ಸರಕಾರವೂ ಕಾರ್ಯ ನಿರ್ವಹಿಸುತ್ತಿದೆ. ಆದರೆ, ನಿಮ್ಮದೇ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕೃತವಾಗಿ ಕಿಯೋನಿಕ್ಸ್ ಮೂಲಕ ತಮ್ಮ ಕ್ಷೇತ್ರದ 40 ಜನರಿಗೆ ಉಡುಗೊರೆ ಕೊಟ್ಟಿದ್ದರು. ಚುನಾವಣೆಗೆ ಮೊದಲು 40 ಲ್ಯಾಪ್ ಟಾಪ್ ಗಳನ್ನು 14.09 ಲಕ್ಷದಲ್ಲಿ ವಿತರಿಸಲಾಗಿತ್ತು. ಹೀಗಿದ್ದಾಗ ನಿಮಗ್ಯಾವ ನೈತಿಕತೆ ಇದೆ ಎಂದು ಡಾ|| ಕೆ. ಸುಧಾಕರ್ ಪ್ರಶ್ನಿಸಿದರು.

ನಂದೀಶ್ ಅವರ ಸಾವು ಸರಕಾರದಿಂದಾದ ಕೊಲೆ ಎಂದು ಪ್ರಸ್ತಾಪ ಮಾಡಿದ್ದಾರೆ. ನಮಗೆ ತಿಳಿದಂತೆ ಅದು ಸಹಜ ಸಾವು. ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ. ನಿಮ್ಮ ಕಾಲದಲ್ಲಿ ಎಷ್ಟು ಇಂಥ ಸಮಸ್ಯೆಗಳಾಗಿವೆ ಎಂದು ಪ್ರಶ್ನಿಸಿದರು. ಗಣಪತಿ ಆತ್ಮಹತ್ಯೆ ಮಾಡಿಕೊಂಡರು; ಡಿವೈಎಸ್ಪಿ ಸ್ವಯಂ ನಿವೃತ್ತಿ ಪಡೆಯುವ ಪರಿಸ್ಥಿತಿ ತಂದಿಟ್ಟಿದ್ದೀರಲ್ಲವೇ? ಅನುಪಮಾ ಶೆಣೈ ಆರೋಪಕ್ಕೆ ಸಚಿವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೀರಾ ಎಂದು ಕೇಳಿದರು.
ಕಲ್ಲಪ್ಪ ಬಸಪ್ಪ ಹಂಡಿಭಾಗ್ ಸಾವಾಯಿತು. ಸಚಿವರ ವಿರುದ್ಧ ಆಪಾದನೆ ಮಾಡಿ ಇಷ್ಟೆಲ್ಲ ಪ್ರಕರಣ ನಡೆದರೂ ನೀವೇನು ಮಾಡಿದ್ದೀರಿ ಎಂದರು. ನಂದೀಶ್ ಅವರ ಕುಟುಂಬದವರು ಸರಕಾರದ ಮೇಲೆ ಆರೋಪ ಮಾಡಿ ಹೇಳಿಕೆ ಕೊಟ್ಟಿಲ್ಲ. ನೀವು ರಾಜಕೀಯದ ಬಣ್ಣ ಬೆರೆಸುತ್ತಿದ್ದೀರಿ ಎಂದು ಆಕ್ಷೇಪ ಸೂಚಿಸಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ಘೋಷಣೆ, 438 ನಮ್ಮ ಕ್ಲಿನಿಕ್, ಕಂದಾಯ ಇಲಾಖೆಯ ಉತ್ತಮ ಕಾರ್ಯಗಳು ನಿಮಗೆ ಸಹಿಸಿಕೊಳ್ಳಲು ಆಗುತ್ತಿಲ್ಲವೇ? ಇದು ರಾಜಕೀಯವಲ್ಲದೆ ಮತ್ತೇನಲ್ಲ ಎಂದರು. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಬೆಣ್ಣೆ ಹಚ್ಚುತ್ತ ಬಂದಿತ್ತು. ಆದರೆ, ನಮ್ಮ ಸರಕಾರ ಮೀಸಲಾತಿ ಪ್ರಮಾಣ ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿ ಪ್ರದರ್ಶನ ಮಾಡಿದೆ ಎಂದು ತಿಳಿಸಿದರು.
ನಮ್ಮ ಸರಕಾರದ ಜನಪ್ರಿಯತೆ ತಡೆದುಕೊಳ್ಳಲು ಕಾಂಗ್ರೆಸ್ ನವರಿಗೆ ಸಾಧ್ಯವಾಗುತ್ತಿಲ್ಲ. ಮಾಧ್ಯಮದವರನ್ನು ಲಘುವಾಗಿ ಮಾತನಾಡಿದ್ದನ್ನು ಖಂಡಿಸುತ್ತೇನೆ. ಇಲ್ಲಿನ ಪತ್ರಕರ್ತರು ದೇಶದಲ್ಲಿ ತಮ್ಮದೇ ಆದ ಗೌರವ ಸಂಪಾದಿಸಿದ್ದಾರೆ. ಅದನ್ನು ಹಾಳು ಮಾಡದಿರಿ ಎಂದು ಒತ್ತಾಯಿಸಿದರು.


                                                                    
  (ಕರುಣಾಕರ ಖಾಸಲೆ)
 ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ

Post a Comment

Previous Post Next Post