ಮೀಸಲಾತಿ ಹೆಚ್ಚಳ ಮಾಡುವ ಐತಿಹಾಸಿಕ ತೀರ್ಮಾನವನ್ನು ಕೈಗೊಂಡು ತಳಸಮುದಾಯಗಳನ್ನು ಗೌರವಿಸಿದ್ದಕ್ಕಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ... ಛಲವಾದಿ ನಾರಾಯಣಸ್ವಾಮಿ



ರಾಜ್ಯದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರ ನೇತೃತ್ವದ ಬಿಜೆಪಿ ಸರ್ಕಾರ ಬಹುದಿನಗಳ ಪರಿಶಿಷ್ಟ ಜಾತಿ/ ವರ್ಗಗಳ ಬೇಡಿಕೆಯಾದ  ಮೀಸಲಾತಿ ಹೆಚ್ಚಳ ಮಾಡುವ ಐತಿಹಾಸಿಕ ತೀರ್ಮಾನವನ್ನು ಕೈಗೊಂಡು ತಳಸಮುದಾಯಗಳನ್ನು ಗೌರವಿಸಿದ್ದಕ್ಕಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದ್ದರೂ ಸಹ ದಲಿತ ವಿರೋಧಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರಗಳು ದಲಿತ ದಮನಕಾರಿ ನೀತಿಯನ್ನು ಮುಂದುವರೆಸಿ ದಲಿತರ ನೋವನ್ನು ಮತ್ತು ಬೇಡಿಕೆಯನ್ನು ಈಡೇರಿಸದೆ ತಿರಸ್ಕರಿಸುತ್ತಾ ಬಂದಿದ್ದನ್ನು ಸಮುದಾಯಗಳು ಗಮನಿಸಿ ಬಹುವಾಗಿ ನೊಂದುಕೊಂಡದ್ದನ್ನು ನಾವು ಗಮನಿಸಿದ್ದೆವು. ಆದರೆ ನಮ್ಮ ಬಿಜೆಪಿ ಸರ್ಕಾರ ಶ್ರೀ ಬಸವರಾಜ ಬೊಮ್ಮಾಯಿ ಯವರ ನೇತೃತ್ವದಲ್ಲಿ ಮೀಸಲಾತಿಯನ್ನು ಪರಿಶಿಷ್ಟ ಜಾತಿಗಳಿಗೆ 15% ರಿಂದ 17% ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು 3% ರಿಂದ 7.5 % ಕ್ಕೆ ಏರಿಸುವ ಮೂಲಕ ಸಮುದಾಯಗಳ ಹಕ್ಕೊತ್ತಾಯವನ್ನು ಗೌರವಿಸಿದ್ದಕ್ಕೆ ಪಕ್ಷದ ಅಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಮುಖಂಡರಿಗೆಲ್ಲರಿಗೂ ಧನ್ಯವಾದಗಳು. 

ಬಿಜೆಪಿ ಘನ ಸರ್ಕಾರ ಈಗಾಗಲೇ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯನ್ನು 11,133 ಕಾರ್ಮಿಕರನ್ನು ಖಾಯಂಗೊಳಿಸಿದೆ ಮತ್ತು  ಒಟ್ಟಾರೆ 45,000 ಕಾರ್ಮಿಕರನ್ನು ಹಂತ ಹಂತವಾಗಿ ಖಾಯಂಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು ತೀರ್ಮಾನಿಸಿರುವುದು ಸಹ ಸ್ವಾಗತಾರ್ಹ ಬೆಳವಣಿಗೆ ಯಾಗಿದೆ.

ಛಲವಾದಿ ನಾರಾಯಣಸ್ವಾಮಿ ಶಾಸಕರು ಮತ್ತು ಅಧ್ಯಕ್ಷರು ಎಸ್ ಸಿ ಮೋರ್ಚಾ ಕರ್ನಾಟಕ

Post a Comment

Previous Post Next Post