ದಲಿತರ ಆತಿಥ್ಯ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ*

[12/10, 10:26 AM] +91 99001 58601: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ವಿಜಯನಗರ ಜಿಲ್ಲೆಯ ಕಮಲಾಪುರ  ಗ್ರಾಮದ ಅಂಬೇಡ್ಕರ್ ಕಾಲೋನಿಯ ದಲಿತ ಕುಟುಂಬದ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿ ಉಪಹಾರ ಸೇವಿಸಿದರು. ಹಾಗೂ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್, ಶಾಸಕ ರಾಜುಗೌಡ ಹಾಜರಿದ್ದರು.
[12/10, 10:57 AM] +91 99001 58601: *ದಲಿತರ ಆತಿಥ್ಯ ಸ್ವೀಕರಿಸಿದ ಮುಖ್ಯಮಂತ್ರಿ ಬೊಮ್ಮಾಯಿ*
ಹೊಸಪೇಟೆ, ಅಕ್ಟೋಬರ್ 12-
ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಿಗ್ಗೆಯಿಂದಲೇ ಸಡಗರದ ವಾತಾವರಣ. ಅಡುಗೆ ಮನೆಯಲ್ಲಿ ಅವರ ಪುತ್ರಿಯರಾದ ಹುಲಿಗೆಮ್ಮ ಹಾಗೂ ರೇಣುಕಾ ಬೆಳಗಿನ ಉಪಾಹಾರದ ತಯಾರಿಯಲ್ಲಿ ನಿರತರು.
ಕೆಲವೇ ಕ್ಷಣದಲ್ಲಿ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ಕೇಸರಿಬಾತ್, ಮಂಡಕ್ಕಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟಿನ ತಯಾರಿಯಲ್ಲಿದ್ದರು. 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸವಿದರು. ಕೊಲ್ಲಾರಪ್ಪ ಕುಟುಂಬದವರೊಂದಿಗೆ  ಕುಶಲೋಪರಿ ವಿಚಾರಿಸಿದರು. ಕೊಲ್ಲಾರಪ್ಪ ನವರ ಮೊಮ್ಮಗಳು ಅಶ್ವಿನಿ ತಡಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು. ಅವಳ ಶಿಕ್ಷಣ, ಕಾಲೇಜು ವಾತಾವರಣ ಮೊದಲಾದ ಕುರಿತು ಮಾಹಿತಿ ಪಡೆದರು. 
ಕಾಲೇಜು ಚೆನ್ನಾಗಿದೆ. ಆದರೆ ಮೆಸ್ ಬಿಲ್ ದುಬಾರಿ ಎಂದು ಆಕೆ ಮುಖ್ಯಮಂತ್ರಿಯವರ ಗಮನ ಸೆಳೆದಾಗ ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.
ಮನೆಯವರು ಪ್ರೀತಿಯಿಂದ ಉಣಬಡಿಸಿದ ಉಪಾಹಾರ , ಚಹಾ ಸೇವಿಸಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು.
[12/10, 11:35 AM] +91 99001 58601: ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಹೊಸಪೇಟೆ ನಗರದ ಉಕ್ಕಡಕೇರಿ, ಮ್ಯಾಸಕೇರಿ, ತಳವಾರಕೇರಿ, ಚಿತ್ರಕೇರಿ, ಬಂಡರಕೇರಿ, ಜಮಿನಳ್ಳಕೇರಿ ಪ್ರದೇಶದ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ ಸಿಂಗ್, ಶಶಿಕಲಾ ಜೊಲ್ಲೆ, ಬಿ‌. ಶ್ರೀರಾಮುಲು ಹಾಗೂ  ಶಾಸಕರಾದ ರಾಜು ಗೌಡ ಹಾಜರಿದ್ದರು. ಇದೇ ವೇಳೆ ತೆರೆದ ವಾಹನದಲ್ಲಿ  ರೋಡ್ ಶೋ ನಡೆಸಿದರು.

Post a Comment

Previous Post Next Post