cm, ಇಂದು, ಎಲ್ಲೆಲ್ಲಿ*ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ಬಿಡುಗಡೆಗೆ ಮುಖ್ಯಮಂತ್ರಿ ಆದೇಶ*

[14/10, 9:17 AM] Cm Ps: https://twitter.com/BSBommai/status/1580766226355081216?t=cHwZbovckn36xveP0FJsew&s=08
[14/10, 10:02 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ  ಆರ್‌ ಟಿ ನಗರ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
[14/10, 11:38 AM] Cm Ps: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುವುದನ್ನು ತಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪಶು ಸಂಗೊಪನಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವರಾದ ಪ್ರಭು ಚೌಹ್ವಾಣ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
[14/10, 12:36 PM] Cm Ps: ರಾಜ್ಯ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ತಮ್ಮ ಒಂದು ದಿನದ ಸಂಬಳ ನೀಡಿ, ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡುವ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ನೀಡಿದರು.  ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವ ಪ್ರಭುಚೌಹ್ವಾಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
[14/10, 1:34 PM] Cm Ps: ಬೆಂಗಳೂರಿನ ಸದಾಶಿವನಗರದಲ್ಲಿರುವ ನಾಗಸೇನಾ ವಿದ್ಯಾಲಯದ ಆವರಣದಲ್ಲಿ ಬುದ್ದ ಮಂಟಪ, ಅಂಬೇಡ್ಕರ್ ಮಂಟಪ ಉದ್ಘಾಟನೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಂಕುಸ್ಥಾಪನೆ  ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠಾವಳೆ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತಿತರರು ಹಾಜರಿದ್ದರು.
[14/10, 1:39 PM] Cm Ps: *ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ಬಿಡುಗಡೆಗೆ ಮುಖ್ಯಮಂತ್ರಿ ಆದೇಶ*
ಬೆಂಗಳೂರು, ಅಕ್ಟೋಬರ್ 14- ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳೂ ಆರ್ಥಿಕ ಇಲಾಖೆಗೆ ಸೂಚಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಸಿದರು. ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ ಒಟ್ಟು 8 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ.
*15 ಲಕ್ಷ ಲಸಿಕೆ ಒದಗಿಸಲು ಸೂಚನೆ:*
6.57 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಎಂದು ಅಧಿಕಾರಿಗಳು ತಿಳಿಸಿದರು. ಈ ಹಿನ್ನೆಲೆಯಲ್ಲಿ ರೋಗ ತೀವ್ರವಾಗಿರುವ ಜಿಲ್ಲೆಗಳಲ್ಲಿ ಆದ್ಯತೆಯ ಮೇರೆಗೆ ಲಸಿಕೆಯನ್ನು ಹಾಕಲು ಸೂಚಿಸಿದರಲ್ಲದೆ, ಕೂಡಲೇ 15 ಲಕ್ಷ ಡೋಸ್ ಲಸಿಕೆಗಳನ್ನು ಒದಗಿಸುವಂತೆ ತಿಳಿಸಿದರು. ಲಸಿಕೆ ಪೂರೈಕೆ ಕುರಿತು ಭಾರತ ಸರ್ಕಾರ ಅನುಮೋದಿಸಿದ ಕಂಪೆನಿಗಳೊಂದಿಗೆ ಮಾತುಕತೆ ನಡೆಸಿ, ಲಸಿಕೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಿದರು.
ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕಿಸಲು ಪ್ರತಿ ಗ್ರಾಮದಲ್ಲಿ ವ್ಯವಸ್ಥೆ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.
ಮರಣ ಹೊಂದಿದ ಜಾನುವಾರುಗಳಿಗೆ 2 ಕೋಟಿ ರೂ. ನೀಡಲಾಗಿದ್ದು, 46.15 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಬಾಕಿ ಪರಿಹಾರ ತ್ವರಿತವಾಗಿ ವಿತರಿಸುವಂತೆ ಸೂಚಿಸಲಾಯಿತು. 
*ಮನುಷ್ಯರಿಗೆ ಹರಡುವುದಿಲ್ಲ*
ರೋಗಪೀಡಿತ ರಾಸುಗಳ ಹಾಲಿನಿಂದ ಮನುಷ್ಯರಿಗೆ ರೋಗ ಹರಡುವುದಿಲ್ಲ. ಈ ಕುರಿತು ಜನರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.
ಚರ್ಮಗಂಟು ರೋಗ ತೀವ್ರವಾಗಿರುವ ಹಾವೇರಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ರೋಗನಿಯಂತ್ರಣಕ್ಕೆ ತೀವ್ರ ಕ್ರಮ ಕೈಗೊಳ್ಳಬೇಕು. ಇತರ ಜಿಲ್ಲೆಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಲಸಿಕೆ ಅಭಿಯಾನ ತೀವ್ರಗೊಳಿಸಲು ತಿಳಿಸಿದರು.
ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[14/10, 2:02 PM] Cm Ps: *ಬೆಂಗಳೂರು* , ಅಕ್ಟೋಬರ್ 14 : *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಸದಾಶಿವನಗರದ ನಾಗಸೇನ* *ವಿದ್ಯಾಲಯ ಆವರಣದಲ್ಲಿ* ನಾಗಸೇನ ವಿದ್ಯಾಲಯದ ವತಿಯಿಂದ ಆಯೋಜಿಸಿರುವ ಕಂಚಿನ *ಬುದ್ಧಪ್ರತಿಮೆಯ*  *ಮಂಟಪ, ಡಾ.* *ಬಿ* *.ಆರ್.ಅಂಬೇಡ್ಕರ್ ಮಂಟಪದ* ಉದ್ಘಾಟಿಸಿದರು ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ವಸ್ತು ಸಂಗ್ರಹಾಲಯ ಕಟ್ಟಡ *ನಿರ್ಮಾಣ ಕಾಮಗಾರಿಯ* *ಶಂಕುಸ್ಥಾಪನೆಯನ್ನು ನೆರವೇರಿಸಿ* ಮಾತನಾಡಿದರು.
[14/10, 4:31 PM] Cm Ps: *ಪುಣ್ಯಕೋಟಿ ದತ್ತು ಯೋಜನೆಗೆ ಸರ್ಕಾರಿ ನೌಕರರ ದೇಣಿಗೆ*
ಬೆಂಗಳೂರು, ಅಕ್ಟೋಬರ್ 14-
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ರಾಜ್ಯ ಸರ್ಕಾರದ “ಪುಣ್ಯಕೋಟಿ ದತ್ತು ಯೋಜನೆ”ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಿತರ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವ ಕುರಿತು ಸಮ್ಮತಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.
ಮುಖ್ಯಮಂತ್ರಿಯವರು ಇತ್ತೀಚೆಗೆ ಸಮಾರಂಭವೊಂದರಲ್ಲಿ ಮಾಡಿದ ಮನವಿಗೆ ಸ್ಪಂದಿಸಿದ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರು ಮತ್ತು ಸರ್ಕಾರದ ಇತರ ಸಂಸ್ಥೆಗಳ ನೌಕರರು ಸ್ವ-ಇಚ್ಛೆಯಿಂದ ದೇಣಿಗೆ ನೀಡಲು ಮುಂದಾಗಿದ್ದು, ಗ್ರೂಪ್ ಎ ಅಧಿಕಾರಿಗಳು 11,000 ರೂ., ಗ್ರೂಪ್ ಬಿ ಅಧಿಕಾರಿಗಳು 4000 ರೂ. ಹಾಗೂ ಸಿ ವೃಂದದ ನೌಕರರು 400 ರೂ. ದೇಣಿಗೆಯನ್ನು ಒಂದು ಬಾರಿಗೆ ಪಾವತಿಸಲು ಸಮ್ಮತಿಸಿದ್ದಾರೆ. ಇದನ್ನು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ವೇತನದಲ್ಲಿ ಕಟಾಯಿಸುವಂತೆ ಕೋರಿದ್ದಾರೆ. ಈ ಮೊತ್ತವು ಸುಮಾರು 80 ರಿಂದ 100 ಕೋಟಿ ರೂ. ಗಳಾಗಲಿದೆ ಎಂದು ಅಂದಾಜಿಸಲಾಗಿದೆ.
ನೌಕರರ ಸಂಘದ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರದ ಗೋಶಾಲೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮುದಿ ಗೋವುಗಳು ಆಶ್ರ ಯ ಪಡೆದಿವೆ. ಇವುಗಳ ಸಮರ್ಪಕ ಪಾಲನೆ ಪೋಷಣೆ ನಮ್ಮೆಲ್ಲರ ಕರ್ತವ್ಯವೂ ಹೌದು. ಈ ಪುಣ್ಯದ ಕೆಲಸದಲ್ಲಿ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಕೈಜೋಡಿಸಲು ಮುಂದಾಗಿರುವುದು ಅಭಿನಂದನಾರ್ಹ ಎಂದು ತಿಳಿಸಿದರು.
ಬರ, ಪ್ರವಾಹ, ಕೋವಿಡ್ 19 ಮುಂತಾದ ಸಂಕಷ್ಟದ ಸಂದರ್ಭಗಳಲ್ಲಿ ಸರ್ಕಾರಿ ನೌಕರರು ಅತ್ಯಂತ ಬದ್ಧತೆಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದ ಮುಖ್ಯಮಂತ್ರಿಗಳು ಹಿಂದೆ ಭರವಸೆ ನೀಡಿದಂತೆ, ಈ ತಿಂಗಳಲ್ಲಿಯೇ ವೇತನ ಆಯೋಗ ರಚಿಸಲಾಗುವುದು. ನೌಕರರಿಗೆ ವೇತನ, ಭತ್ಯೆಗಳೊಂದಿಗೆ, ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಪ್ರೋತ್ಸಾಹಕಗಳನ್ನು ನೀಡುವುದು, ಸರ್ಕಾರಿ ನೌಕರರ ಕಾರ್ಯ ನಿರ್ವಹಣೆಯಲ್ಲಿ ತಂತ್ರಜ್ಞಾನದ ಅಳವಡಿಕೆ ಮೊದಲಾದ ಅಂಶಗಳ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಹಿಂ ಮತ್ತು ಸರ್ಕಾರ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
[14/10, 5:48 PM] Cm Ps: *ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮ್ಮ ಆದರ್ಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಅಕ್ಟೋಬರ್, 14:   ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮಗೆ  ಆದರ್ಶ ಹಾಗೂ ಪ್ರೇರಣೆ. ನಮ್ಮ ತೀರ್ಮಾನಗಳಿಗೆ ಈ ಮಹನೀಯರ ಬದುಕು, ವಿಚಾರಧಾರೆಯನ್ನು ಕೇಳಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನಾಗಸೇನಾ ವಿದ್ಯಾಲಯದಲ್ಲಿ ಬುದ್ಧ, ಅಂಬೇಡ್ಕರ್ ಮಂಟಪವನ್ನು ಉದ್ಘಾಟಿಸಿ, ಡಾ: ಬಿ.ಆರ್.ಅಂಬೇಡ್ಕರ್ ಅವರ  ವಸ್ತುಸಂಗ್ರಹಾಲಯಕ್ಕೆ  ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.

ಇವರೆಲ್ಲರೂ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದರಿಂದ ಅವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಡದವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಟ್ಟವರು ಕಾಲಸೀಮಿತವಾಗಿರುತ್ತಾರೆ ಎಂದರು.

*ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನ*

ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನವನ್ನು ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು ನಾನು ಒಬ್ಬ  ಅಂಬೇಡ್ಕರ್, ಬುದ್ದ, ಬಸವ, ವಾಲ್ಮೀಕಿ ಭಕ್ತ.  ಅಂಬೇಡ್ಕರ್ ಅವರ ಇಚ್ಛೆಯಂತೆ ಸಂಸ್ಥೆ  ಬೆಳೆದಿದೆ. ಇದು ಇನ್ನಷ್ಟು ಬೆಳೆಯಬೇಕು. ಇಲ್ಲಿ  ಪ್ರಸ್ತಾಪಿಸಿರುವ 2-3 ವಿಚಾರಗಳಿಗೆ ಸಂಪೂರ್ಣ ಸಹಮತ ಮತ್ತು ಬೆಂಬಲ ನೀಡಲಾಗುವುದು ಸಂಸ್ಥೆಗೆ ಅಗತ್ಯವಿರುವ  ಅನುದಾನವನ್ನು  ಮುಂದಿನ ವರ್ಷ ಪಿಯುಸಿ ಅದರ ಮುಂದಿನ ವರ್ಷ ಪದವಿ ಕೋರ್ಸುಗಳು ಪ್ರಾರಂಭ ಮಾಡಬೇಕೆಂಬ  ಷರತ್ತಿ ಮೇಲೆ ಬಿಡುಗಡೆ ಮಾಡಲಾಗುವುದು ಎಂದರು.

ಬೆಂಗಳೂರಿನ ಕೇಂದ್ರ ಸ್ಥಾನದಲ್ಲಿರುವ  ಸಂಸ್ಥೆ ಇನ್ನೂ ಬೆಳೆಯಬೇಕು. ಕೇಂದ್ರ ಸಚಿವ ರಾಮದಾಸ್ ಅಟಾವಳೆ ಅವರು ಸಹ  ಇದಕ್ಕೆ ಬೆಂಬಲ ನೀಡುವರು ಎಂದರಲ್ಲದೆ, ಸರ್ಕಾರ ಎಸ್.ಸಿ. ಎಸ್.ಪಿ ಟಿ.ಎಸ್ಪಿ ಯೋಜನೆಯಡಿ 100 ಅಂಬೇಡ್ಕರ್ ಹಾಸ್ಟೆಲ್ ಗಳನ್ನು ನಿರ್ಮಿಸಲು ತೀರ್ಮಾನ ಮಾಡಲಾಗಿದೆ. ಈ ಪೈಕಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲ ಮಾಡಿಕೊಡುವುದಾದರೆ ಒಂದು ಹಾಸ್ಟೆಲ್ ನ್ನು ಈ ಆವರಣದಲ್ಲಿ  ನಿರ್ಮಿಸಲಾಗುವುದು. ಅಂಬೇಡ್ಕರ್ ಅವರ ಜೀವನಚರಿತ್ರೆ ಬಿಂಬಿಸುವ ವಸ್ತುಸಂಗ್ರಹಾಲಯ ನಿರ್ಮಿಸುವ ಯೋಜನೆಗೆ ರಾಜ್ಯ ಸರ್ಕಾರದ ಯೋಜನೆಯಡಿ  ಅಂಬೇಡ್ಕರ್ ಭೇಟಿ ನೀಡಿದ ಹತ್ತು ಸ್ಥಳಗಳ ಅಭಿವೃದ್ದಿ ಪಡಿಸುತ್ತಿದ್ದು, ಅದರಲ್ಲಿ ನಾಗಸೇನಾ  ವಿದ್ಯಾಲಯಕ್ಕೂ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಆದರ್ಶ ಜೀವನ ನಡೆಸಬೇಕೆಂದು  ತಿಳಿಸಿದರು.

*ಬುದ್ಧ  ಅಂತ:ಕರಣದ ಪ್ರತೀಕ*

ಪೀಪಲ್ಸ್ ಎಜುಕೇಷನ್ ಸೊಸೈಟಿಯನ್ನು ಅಂಬೇಡ್ಕರ್ ಸ್ಥಾಪನೆ ಮಾಡಿದ್ದಾರೆ‌. ಅಂತಹ ಸಂಸ್ಥೆ ನಮ್ಮ ಬೆಂಗಳೂರಿನಲ್ಲಿರುವುದು  ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಜಗತ್ತಲ್ಲಿ ಮಾನವ ಮನುಷ್ಯನಾಗಿ ಹುಟ್ಟುತ್ತಾರೆ. ಕೆಲವರು ಮಾತ್ರ ಮಾನವರಾಗುತ್ತಾರೆ. ಮನುಷ್ಯರಾಗಿ ಹುಟ್ಟಿ ಕೆಲವರು ದೇವರಾಗುತ್ತಾರೆ. ನ್ಯಾಯ ನೀತಿ, ಧರ್ಮ, ಸತ್ಯ, ಅಹಿಂಸೆ,ಪ್ರೀತಿ, ವಿಶ್ವಾಸಗಳ ಸಂಕೋಲೆಯಲ್ಲಿ ಸಿಕ್ಕವನು ಮಾನವ. ಬುದ್ಧ ಜಾಗೃತಿಯ ಪ್ರತೀಕ. ಬುದ್ಧನಿಗೆ  ಸಮಾಜದಲ್ಲಿರುವ ದು:ಖ, ದುಮ್ಮಾನಗಳನ್ನು ನೋಡಿ ಅಂತರಂಗದಲ್ಲಿ ಜಾಗೃತಿಯಾಯಿತು. ಮುಂದೆ ಆತ ತ್ಯಾಗದ ಪ್ರತೀಕ, ಜ್ಞಾನದ ಪ್ರತೀಕ, ಇಡಿ ವಿಶ್ವದಲ್ಲಿ ಅಂತ:ಕರಣದ ಪ್ರತೀಕವಾಗಿದ್ದಾನೆ. ಬುದ್ದನನ್ನು ಜಗತ್ತಿನ ಎಲ್ಲಾ ದೇಶಗಳಲ್ಲಿ ಪ್ರೀತಿಸುತ್ತಾರೆ. ಅಮೇರಿಕಾದ ಅಧ್ಯಕ್ಷರ ಕಚೇರಿಯಲ್ಲಿ ಬುದ್ಧನ ಪ್ರತಿಮೆಯಿದೆ. ಬುದ್ಧ  ಶ್ರೇಷ್ಠ ದೇವಮಾನವ ಎಂದರು.  

*ಬಸವಣ್ಣ ಜಾಗೃತಿಯ ಪ್ರತೀಕ*
 ಬಸವಣ್ಣ ಕೂಡ ಜಾಗೃತಿಯ ಪ್ರತೀಕ.  ಜಾಗೃತಿಯ ಜೊತೆಗೆ   ವ್ಯವಸ್ಥೆಯ ವಿರುದ್ದ ಸಿಡಿದೆದ್ದು, ಹೊಸ  ಮನ್ವಂತರವನ್ನು ಹಾಡಿದರು. ಸಮಾಜದಲ್ಲಿ ಸಮಾನತೆಯ ಪ್ರತೀಕ ಬಸವಣ್ಣ. ಧರ್ಮಕ್ಕೆ ಅತ್ಯಂತ ಸೂಕ್ತ ವ್ಯಾಖ್ಯಾನವಾದ ದಯವೇ ಧರ್ಮದ ಮೂಲ ಎಂದು ವಿಶ್ವ ಮಾನವರಾದರು. ಅಂಬೇಡ್ಕರ್ ಅವರು ಜ್ಞಾನ, ಜಾಗೃತಿ, ಸಮಾನತೆ,  ತ್ಯಾಗದ ಹಾಗೂ ಭಾರತ ದೇಶದ ಭವ್ಯ ಭವಿಷ್ಯವನ್ನು ಬರೆದ ಧೀಮಂತ. ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ, ಈ ಸಮಾಜದಲ್ಲಿ ಶಾಂತಿ ಸೌಹಾರರ್ದತೆ ಇರುತ್ತಿರಲಿಲ್ಲ. ಶಾಂತಿ, ಸೌಹಾರ್ದತೆ ಇದ್ದರೆ ಮಾತ್ರ ಪ್ರಗತಿಯಾಗಲು ಸಾಧ್ಯ. ಅದಕ್ಕೆ ಸಂಪೂರ್ಣವಾದ,  ಅದ್ಭುತವಾದ ಕಾನೂನಿನ ಸ್ವರೂಪದ ಸಂವಿಧಾನವನ್ನು ನಮಗೆ ಕೊಟ್ಟಿದ್ದು. ಇದನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ, ಸೂರ್ಯಚಂದ್ರ ಇರುವವರೆಗೂ ಅಂಬೇಡ್ಕರ್ ಹೆಸರು ಶಾಶ್ವತವಾಗಿರುತ್ತದೆ ಎಂದರು.

*ಪರಿವರ್ತನೆಯ ಪ್ರತೀಕ*
 ವಾಲ್ಮಿಕಿ ಪರಿವರ್ತನೆಯ ಪ್ರತೀಕ. ತನ್ನ ಹಿಂದಿನ ಜೀವನವನ್ನು ಬದಲಾಯಿಸಿಕೊಂಡು ಮರ್ಹರ್ಷಿಯಾದರು. ವಾಲ್ಮೀಕಿ ರಾಮಾಯಣದ ಮುಖಾಂತರ  ನ್ಯಾಯ, ನೀತಿ, ಧರ್ಮವನ್ನು ಸ್ವಷ್ಟವಾಗಿ ವ್ಯಾಖ್ಯಾನ ಮಾಡಿದ್ದಾರೆ. ವಾಲ್ಮೀಕಿ ಇರದಿದ್ದರೆ ರಾಮಾಯಣ ಇಷ್ಟು ಸುಂದರವಾದ, ಆದರ್ಶವಾದ ರಾಮಾಯಣ  ಇರುತ್ತಿರಲಿಲ್ಲ. ಭೂಮಿಯ ಮೇಲೆ ಮಾನವನ ಜನ್ಮವಿರುವವರೆಗೂ ಶಾಶ್ವತವಾಗಿ ಎಲ್ಲರ ಮನದಾಳದಲ್ಲಿ ಈ ನಾಲ್ಕೂ ಜನ ಇರುತ್ತಾರೆ ಎಂದರು.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಟಾವಲೆ, ನಾಗಸೇನಾ ವಿದ್ಯಾಲಯದ ಅಧ್ಯಕ್ಷ ಡಾ: ಎಂ.ವೆಂಕಟಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
[14/10, 7:09 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅವರ ಗೃಹ ಕಚೇರಿ ಕೃಷ್ಣದಲ್ಲಿ  ಹಿರಿಯ ಪತ್ರಕರ್ತ ಡಾ. ಕೆ.‌ ವಿದ್ಯಾಶಂಕರ ಅವರ *ಬದಲಾದ ಭಾರತ* ಪುಸ್ತಕ ಲೋಕಾರ್ಪಣೆಗೊಳಿಸಿದರು.‌ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಚಂದ್ರಶೇಖರ್ ಬೆಳಗೆರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Post a Comment

Previous Post Next Post