ಕಾಂಗ್ರೆಸ್ ಮುಳುಗುತ್ತಿರುವ ಹಡಗು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*cm, ಎಲ್ಲೆಲ್ಲಿ

[12/10, 10:26 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ವಿಜಯನಗರ ಜಿಲ್ಲೆಯ ಕಮಲಾಪುರ  ಗ್ರಾಮದ ಅಂಬೇಡ್ಕರ್ ಕಾಲೋನಿಯ ದಲಿತ ಕುಟುಂಬದ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿ ಉಪಹಾರ ಸೇವಿಸಿದರು. ಹಾಗೂ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್, ಶಾಸಕ ರಾಜುಗೌಡ ಹಾಜರಿದ್ದರು.
[12/10, 4:14 PM] Cm Ps: *ಕಾಂಗ್ರೆಸ್ ಮುಳುಗುತ್ತಿರುವ ಹಡಗು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

 
ಹೊಸಪೇಟೆ, ಅಕ್ಟೋಬರ್ 12 : 

 ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ಭಯವಿದೆ.. ಮಾಡಿದುಣ್ಣೋ ಮಹಾರಾಯ ಎನ್ನುವಂತೆ, ನಿಮಗೆ ಅಧಿಕಾರ ಬಂದಾಗ, ಜನರನ್ನು ಮರೆತಿರಿ. ಈಗ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ  *ಜನ ಸಂಕಲ್ಪ ಯಾತ್ರೆ* ಯನ್ನು ಉದ್ಘಾಟಿಸಿ ಮಾತನಾಡಿದರು. 

 
ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರ ಭವಿಷ್ಯ ಭದ್ರಗೊಳಿಸಲಾಗಿದ್ದು ಅವರಿಗೆ ಯಾವುದೇ  ಭಯವಿಲ್ಲ.  ಆದರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರಿಗೆ ಭಯ ಇದೆ ಎಂದರು.

*ಕಾಂಗ್ರೆಸ್ ನ ಭ್ರಷ್ಟಾಚಾರ ಬಣ್ಣ ಬಯಲಾಗುತ್ತದೆ :*

ನಿಮ್ಮ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿ ಹಾಕಲು ಎಸಿಬಿ ರಚನೆ ಮಾಡಿ ಲೋಕಾಯುಕ್ತ ಮುಚ್ಚುವ ಕೆಲಸ ಮಾಡಿದ್ದಿರಿ.ಈಗ ‌ಲೋಕಾಯುಕ್ತ ಬಲಗೊಂಡಿದೆ. ನೀವು ಮಾಡಿರುವ ಎಲ್ಲ ಹಗರಣಗಳು ಬೆಳಕಿಗೆ ಬರುತ್ತಿವೆ. ನಿಮ್ಮ ವಿರುದ್ದ ದ ಪ್ರಕರಣಗಳ ತನಿಖೆಯಾಗುತ್ತದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ. ಆಗ ಕಾಂಗ್ರೆಸ್ ನ ಭ್ರಷ್ಟಾಚಾರ ಬಣ್ಣ ಬಯಲಾಗುತ್ತದೆ  ಎಂದರು.

*ರಾಜಾಹುಲಿಯ ಘರ್ಜನೆಗೆ ಕಾಂಗ್ರೆಸ್  ತತ್ತರ:*

ನಿನ್ನೆ ನಮ್ಮ ರಾಜಾಹುಲಿಯ ಘರ್ಜನೆಗೆ ಕಾಂಗ್ರೆಸ್ ನವರು ತತ್ತರಿಸಿದ್ದಾರೆ‌ ಎಂದರು. ಅದಕ್ಕೆ ಯಡಿಯೂರಪ್ಪ ನವರ ಬಗ್ಗೆ ಒಂದು ಮಾತನಾಡಿದ್ದಾರೆ‌ ಯಡಿಯೂರಪ್ಪ ಅವರಿಗೆ ಅರಳು ಮರಳು ಅಂತ ಹೇಳಿದ್ದಾರೆ. ಆದರೆ ರಾಜಾ ಹುಲಿ ಯಾವುದಕ್ಕೂ ಜಗ್ಗುವುದಿಲ್ಲ ಬಗ್ಗುವುದಿಲ್ಲ. ಅವರನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೀರಿ, ಅವರನ್ನು ಅಧಿಕಾರದಿಂದ ದೂರ ಇಡಲು ಅವರ ಮೇಲೆ ಸುಳ್ಳು ಕೇಸ್ ಹಾಕಿಸಿದಿರಿ. ಅವರು ಮತ್ತೆ ಪುಟಿದೆದ್ದು ಮತ್ತೆ ಸಿಎಂ ಆದರು ಎಂದು ತಿಳಿಸಿದರು.

 
*ಸಿದ್ದರಾಮಯ್ಯ ಅವರಿಗೆ ಅರಳು ಮರಳು :*

ಮೋದಿಯವರು ನೆಹರು ಅವರ ಪಾದದ ಧೂಳಿನ ಸಮಾನಾನ ಅಂತ ಕೇಳಿದ್ದಾರೆ‌ ನಾವೂ ಕೇಳಬಹುದು ನೆಹರೂ ಗಾಂಧೀಜಿ ಪಾದದ ಧೂಳಿಗೆ ಸಮಾನಾನಾ . ಕೊರೊನಾ ಸಂದರ್ಭದಲ್ಲಿ ಇಡೀ ದೇಶಕ್ಕೆ ಲಸಿಕೆ ಕೊಡಿಸಿ, ವಿಶ್ವವೇ ಮೆಚ್ಚುವ ಕೆಲಸ ಮಾಡಿದ್ದಾರೆ. ಅನೇಕ ದೇಶಗಳಿಗೆ ಲಸಿಕೆ ನೀಡಿದ್ದಾರೆ‌ ಉಜ್ವಲ ಯೋಜನೆ ಬೇಟಿ ಬಚಾವೋ ಬೇಟಿ ಪಢಾವೋ ಅಂತ ಯೋಜನೆ ಮಾಡಿದರು. ಕಿಸಾನ್ ಸಮ್ಮಾನ ಯೋಜನೆ ಜಾರಿಗೆ ತಂದರು. ಇಡೀ ವಿಶ್ವವೇ ಆರ್ಥಿಕ ಹಿಂಜರಿತ ಕಾಣುತ್ತಿದೆ ಆದರೆ ಭಾರತ ಮಾತ್ರ ಆರ್ಥಿಕವಾಗಿ ಸದೃಢವಾಗಿದೆ. ಸಿದ್ದರಾಮಯ್ಯ ನವರೇ ನಿಮಗೆ ಅರಳು ಮರಳಾಗಿದೆ ಎಂದರು.

 
*ಅಧಿಕಾರಕ್ಕಾಗಿ ದೇಶ ಒಡೆದ ಕಾಂಗ್ರೆಸ್ :*

ರಾಹುಲ್ ಗಾಂಧಿಗೆ ಡಿಕೆಶಿ ಸಿದ್ದರಾಮಯ್ಯ ಅವರನ್ನು ಜೋಡಿಸುವುದರಲ್ಲಿ ಸುಸ್ತಾಗಿ ಹೋಗಿದ್ದಾರೆ‌ .ಎರಡು ದೇಶದ ಕಲ್ಪನೆ ‌ಕೊಟ್ಟಿದ್ದು ಮೌಂಟ್ ಬ್ಯಾಟನ್ ಹಾಗೂ ಮಹಮದ್ ಅಲಿ ಜಿನ್ನಾ ಇಟ್ಟರು.‌ ಅವರ ಮಾತಿಗೆ ಒಪ್ಪಿ ಅಧಿಕಾರದ ಆಸೆಗೆ ಗಾಂಧಿಜಿ ಮಾತು ದಿಕ್ಕರಿಸಿ ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿತು. ನಿಮ್ಮ ಅಧಿಕಾರಕ್ಕಾಗಿ ದೇಶವನ್ನು ಒಡೆದು, ಈಗ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದೀರಿ. ಕಾಲಿಸ್ತಾನಗೆ ಬೆಂಬಲ ಕೊಟ್ಟವರು ಇಂದಿರಾಗಾಂಧಿ , ತಮಿಳುನಾಡಿನಲ್ಲಿ ಎಲ್.ಟಿ.ಟಿ.ಇ ಗೆ ಬೆಂಬಲ ಕೊಟ್ಡವರು ಕಾಂಗ್ರೆಸ್ ನವರು,  ನಿಮ್ಮ ಸ್ವಾರ್ಥಕ್ಕಾಗಿ ದೇಶದ ಹೃದಯದ ಮೇಲೆ ಗಾಯದ ಬರೆಗಳನ್ನು ಹಾಕಿದಿರಿ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್,  ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ  ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ   ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್,ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.
[12/10, 4:20 PM] Cm Ps: *ವಿಜಯನಗರ*  ಅಕ್ಟೋಬರ್ 12: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* *ಜಿಲ್ಲಾ ಭಾ.ಜ.ಪ ದ* ವತಿಯಿಂದ *ಹೊಸಪೇಟೆಯ ಡಾ.* *ಪುನಿತ್ ರಾಜಕುಮಾರ್* ಜಿಲ್ಲಾ *ಕ್ರೀಡಾಂಗಣದಲ್ಲಿ* ಆಯೋಜಿಸಿರುವ *ಜನ ಸಂಕಲ್ಪ* *ಯಾತ್ರೆಯನ್ನು ಉದ್ಘಾಟಿಸಿ* ಮಾತನಾಡಿದರು.
[12/10, 4:25 PM] Cm Ps: *ಎಸ್ಸಿ ಎಸ್ಟಿ ಸಮುದಾಯವರಿಗೆ ನ್ಯಾಯ ಕೊಡಿಸುತ್ತೇನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*


ಹೊಸಪೇಟೆ, ಅಕ್ಟೋಬರ್ 12: 

 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಈ ಸಮುದಾಯಗಳಿಗೆ ನ್ಯಾಯ ಕೊಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ  *ಜನ ಸಂಕಲ್ಪ ಯಾತ್ರೆ* ಯನ್ನು ಉದ್ಘಾಟಿಸಿ ಮಾತನಾಡಿದರು. 

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಭಯವಿಲ್ಲ. ನಮ್ಮ ಸರ್ಕಾರ  ರೈತ ಕೂಲಿಕಾರ್ಮಿಕರಿಗೆ, ನೇಕಾರರು,ಮೀನುಗಾರರು, ಟ್ಯಾಕ್ಸಿ ಹಾಗೂ ಆಟೋಚಾಲಕರ ಮಕ್ಕಳಿಗೂ ವಿದ್ಯಾನಿಧಿ ಕೊಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಬಡಿಗರು, ಕಮ್ಮಾರರು, ವಿಶ್ವಕರ್ಮರು, ಮೇದಾರರು ಸೇರಿದಂತೆ ಕುಶಲಕರ್ಮಿಗಳಿಗೆ 50 ಸಾವಿರ ಧನಸಹಾಯ ನೀಡಲಾಗುತ್ತಿದೆ. ಜಗಜೀವನರಾಂ ಹೆಸರಿನಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀಸಾಮರ್ಥ್ಯ ಯೋಜನೆಯಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಯುವಕರ ಸಂಘಕ್ಕೆ ಆರ್ಥಿಕ ನೆರವು ನೀಡಿ, ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ 5 ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ.

 
*ಈಗ ಜನರಿಗೆ ಭಯವಿಲ್ಲ :*

ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರಿಗೆ ಭಯವಿಲ್ಲ.  ಎಸ್ಸಿ ಎಸ್ಟಿ ಸಮುದಾಯವರಿಗೆ ಮೀಸಲಾತಿ ಹೆಚ್ಚಳ ಮಾಡುವ ಬೇಡಿಕೆ ಇದ್ದರೂ ನೀವು ನಿರ್ಧಾರ ಮಾಡಿಲ್ಲ. ನಾವು ನಿರ್ಧಾರ ಮಾಡಿದರೆ ಅದನ್ನು ಪ್ರಶ್ನಿಸುತ್ತೀರಾ. ನಮಗೂ ಕಾನೂನು ಗೊತ್ತಿದೆ.‌ಈ ಸಮುದಾಯಕ್ಕೆ ನ್ಯಾಯ ಕೊಡಿಸಲು ನಾನು ನಿಲ್ಲುತ್ತೇನೆ‌ ಎಂಬ ವಚನ ಕೊಡುತ್ತೇನೆ.
ಬಿಜೆಪಿ ಸರ್ಕಾರದಲ್ಲಿ  ದೀನ ದಲಿತರು ಭಯಭೀತರಾಗಿದ್ದಾರೆ‌. ಅಂತ ಹೇಳಿದ್ದಿರಿ, ಆದರೆ ನೀವು ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಪ್ರಯತ್ನ ಮಾಡಿದ್ದಿರಿ ಆಗ ಜನರಿಗೆ ಭಯ ಇತ್ತು. ನಾವು ವೀರಶೈವ ಲಿಂಗಾಯತರನ್ನು ಒಂದಾಗುವಂತೆ ಮಾಡಿದ್ದೇವೆ. 
ನಿಮ್ಮ ಕಾಲದಲ್ಲಿ ಕೊಲೆಗಳು ನಡೆಯುತ್ತಿದ್ದವು ಜನರು ಭಯಭೀತರಾಗಿದ್ದರು‌ . ಆ ಭಯ ಈಗ ಇಲ್ಲ ಎಂದರು.

*ಏಕ್ ಭಾರತ ಶ್ರೇಷ್ಟ ಭಾರತ :*

ಪ್ರಧಾನಿ ನರೇಂದ್ರ ಮೊದಿಯವರು ಏಕ್ ಭಾರತ ಶ್ರೇಷ್ಟ ಭಾರತ ಎಂದು ಹೇಳಿದ್ದಾರೆ‌. ಪ್ರಧಾನಿಮೋದಿಯವರ ನಾಯಕತ್ವದಲ್ಲಿ ದೇಶ ಮುನ್ನಡೆಯಲು ಜನ ಬಯಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು, ನವಕರ್ನಾಟಕ ನಿರ್ಮಾಣಕ್ಕಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್,  ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ  ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ   ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್,ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.
[12/10, 5:00 PM] Cm Ps: *ವಿಜಯನಗರದಲ್ಲಿ ಪಿಕೆ ಹಳ್ಳಿಯನ್ನು ಹೋಬಳಿಯಾಗಿ ಪರಿವರ್ತನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಹೊಸಪೇಟೆ, ಅಕ್ಟೋಬರ್ 12: 

 ವಿಜಯನಗರದಲ್ಲಿ ಪಿಕೆ ಹಳ್ಳಿಯನ್ನು ಹೋಬಳಿ ಯಾಗಿ ಪರಿವರ್ತಿಸಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ  *ಜನ ಸಂಕಲ್ಪ ಯಾತ್ರೆ* ಯನ್ನು ಉದ್ಘಾಟಿಸಿ ಮಾತನಾಡಿದರು. 

ಜಿಲ್ಲೆಯ ಮರಿಯಮ್ಮನಹಳ್ಳಿ ಕುಡಿಯುವ ನೀರಿನ ಯೋಜನೆ ಡಿಪಿಆರ್ ಆಗಿದ್ದು, ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಎರಡೂ ಜಿಲ್ಲೆಯಿಂದ 10 ಸೀಟು ಗೆಲ್ಲಿಸಬೇಕು. ಎರಡು‌ ಜಿಲ್ಲೆಗಳಿಗೆ ಸುಪ್ರೀಂ ಕೊರ್ಟ್ ಆದೇಶದಿಂದ 20 ಸಾವಿರ ಕೋಟಿ ಬಂದಿದ್ದು, ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಮಾಡಿ, ಮಾದರಿ ಜಿಲ್ಲೆಗಳನ್ನಾಗಿ ಮಾಡಲಾಗುವುದು. ವಿಜಯನಗರ ಗತವೈಭವವನ್ನು ಪುನರ್ ಸ್ಥಾಪಿಸಲು ಭಾಜಪ ಸರ್ಕಾರ ಶ್ರಮವಹಿಸಲಿದ್ದು, ಜನರ ಆಶೀರ್ವಾದವಿರಲಿ ಎಂದು ತಿಳಿಸಿದರು.


 ಆನಂದ ಸಿಂಗ್ ಅವರು ಹೃದಯ ಶ್ರೀಮಂತಿಕೆಯುಳ್ಳವರು. ಎಲ್ಲ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ‌.  ಜಿಲ್ಲೆಯ ರಚನೆಗೆ ಕಾರಣೀಭೂತರಾಗಿದ್ದಾರೆ. ಜಿಲ್ಲೆಯಲ್ಲಿ ಅವರ ನಾಯಕತ್ವದಲ್ಲಿ ಎಲ್ಲರೂ ಮುಂದುವರೆಯಬೇಕು.75 ಸಮುದಾಯಗಳ ನಾಯಕರನ್ನು ಈ ವೇದಿಕೆಯಲ್ಲಿ ಒಗ್ಗೂಡಿಸಿದ್ದಾರೆ. ಆನಂದ್ ಸಿಂಗ್ ಹಾಗೂ ರಾಮುಲು ಅವರ ಸಂಘಟನಾ ಶಕ್ತಿ ಇದೆ. ಸೋಮಲಿಂಗಪ್ಪ, ಗೋಪಾಲಕೃಷ್ಣ, ಸೋಮಶೇಖರ್ ರೆಡ್ಡಿ ಎಲ್ಲರು ಇದ್ದಾರೆ. ಈ ಭಾಗದ ಜನರ ಒಳಿತಿಗಾಗಿ ಎಲ್ಲರೂ ಶ್ರಮಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್,  ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ  ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ   ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್,ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.
[12/10, 5:13 PM] Cm Ps: ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದ ಬಿಜೆಪಿ *ಜನ ಸಂಕಲ್ಪ ಯಾತ್ರೆ* ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ, ಸಚಿವರಾದ ಆನಂದ್ ಸಿಂಗ್, 
ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್
ಸಂಸದ ಸಂಗಣ್ಣ ಕರಡಿ, ಕೊಪ್ಪಳ 
ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಎನ್.ರವಿಕುಮಾರ್, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸುಗೂರು, ಶಿವನಗೌಡ ನಾಯ್ಕ್, 
ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್,  ಶಶೀಲ್ ನಮೋಶಿ,  ದೊಡ್ಡನಗೌಡ ಪಾಟೀಲ್, ಕೊಪ್ಪಳ ಜಿಲ್ಲಾಧ್ಯಕ್ಷರು ಮತ್ತಿತರರು ಪಾಲ್ಗೊಂಡಿದ್ದರು.
[12/10, 6:01 PM] Cm Ps: *ಕೊಪ್ಪಳ ಜಿಲ್ಲೆ* , ಅಕ್ಟೋಬರ್ 12: *ಮಾನ್ಯ ಮುಖ್ಯಮಂತ್ರಿ* *ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಕುಷ್ಟಗಿ* *ಜಿಲ್ಲಾ ಭಾ.ಜ.ಪ. ಇವರ* ವತಿಯಿಂದ *ಕುಷ್ಟಗಿಯ ಎಂ.ಐ.* *ಕಛೇರಿ* ಹತ್ತಿರ ಆಯೋಜಿಸಿರುವ *ಜನ ಸಂಕಲ್ಪ ಯಾತ್ರೆಯನ್ನು* *ಉದ್ಘಾಟಿಸಿ ಮಾತನಾಡಿದರು.*
[12/10, 7:04 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಕುಷ್ಟಗಿ ಪಟ್ಟದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಮಾಜಿ ಸಿಎಂ ಬಿ.ಎಸ್.‌ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಸಂಸದರಾದ ಕರಡಿ ಸಂಗಣ್ಣ ಹಾಜರಿದ್ದರು. ಆ ನಂತರ ಮುಖ್ಯಮಂತ್ರಿಗಳು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
[12/10, 7:27 PM] Cm Ps: *ಕೊಪ್ಪಳ ಜಿಲ್ಲೆ* ( *ಕುಷ್ಟಗಿ* ), ಅಕ್ಟೋಬರ್ 12: *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು *ಕುಷ್ಟಗಿ ಭಾ.ಜ.ಪ.ದ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.*
[12/10, 7:40 PM] Cm Ps: ಕುಷ್ಟಗಿಯಲ್ಲಿ ನೂತನ ಬಿಜೆಪಿ ಕಚೇರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ಮಾಜಿ‌ ಸಿಎಂ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಿದರು.
[12/10, 8:15 PM] Cm Ps: *ಬದಲಾವಣೆಯ ಗಾಳಿ ಬಿರುಗಾಳಿಯಾಗಿ ಬೀಸಲಿದೆ:  ಬಸವರಾಜ ಬೊಮ್ಮಾಯಿ*
ಕೊಪ್ಪಳ,(ಕುಷ್ಟಗಿ), ಅಕ್ಟೋಬರ್ 12: ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬದಲಾವಣೆಯ ಗಾಳಿ ಬಿರುಗಾಳಿಯಾಗಿ ಬೀಸಲಿದೆ ಎಂದು  ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು  ಕುಷ್ಟಗಿ ಜಿಲ್ಲಾ ಬಾ.ಜ.ಪ ವತಿಯಿಂದ ಕುಷ್ಟಗಿಯ ಐ.ಎಂ ಕಚೇರಿ ಬಳಿ ಆಯೋಜಿಸಿದ್ದ  ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರ ಹಾಲು ಉತ್ಪಾದಕ ರೈತರಿಗೆ,  ರೈತರ ವಿದ್ಯಾರ್ಥಿಗಳ ಮಕ್ಕಳಿಗೆ ರೈತ ವಿದ್ಯಾನಿಧಿಯನ್ನು  ನೇಕಾರರು, ಕೃಷಿ ಕೂಲಿ ಕಾರ್ಮಿಕರು, ಮೀನುಗಾರರು, ಆಟೋ ಹಾಗು ಟ್ಯಾಕ್ಸಿ ಚಾಲಕರ ಮಕ್ಕಳಿಗೂ  ವಿಸ್ತರಿಸಿದೆ.  ದುಡಿಯುವ ಕಾರ್ಮಿಕ ಮಕ್ಕಳಿಗೂ ನೀಡುತ್ತಿದ್ದೇವೆ.  ಎಸ್.ಸಿ. ಎಸ್.ಟಿ ಬಡವರಿಗೆ  75 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ  ಯೋಜನೆ ಈ ತಿಂಗಳಿನಿಂದ ಪ್ರಾರಂಭವಾಗಿದೆ. ಎಸ್.ಸಿ. ಎಸ್.ಟಿ ಯವರಿಗೆ ವಸತಿ ಯೋಜನೆ ಸಹಾಯಧನ 2 ಲಕ್ಷ ರೂ. ನೀಡುತ್ತಿದ್ದು, ಭೂ ಒಡೆತನ ಯೋಜನೆಯ ಘಟಕ ವೆಚ್ಚ 20 ಲಕ್ಷ ರೂ.ವರೆಗೆ ನೀಡುವ ತೀರ್ಮಾನ ಮಾಡಲಾಗಿದೆ. 100 ಹಾಸ್ಟೆಲ್‍ಗಳ ನಿರ್ಮಾಣ,  ಸ್ತ್ರೀ ಸಾಮರ್ಥ್ಯ  ಯೋಜನೆಯ ಮೂಲಕ ಪ್ರತಿ ಗ್ರಾಮದ ಸ್ತ್ರೀಶಕ್ತಿ ಸಂಘಕ್ಕೆ 5 ಲಕ್ಷ ರೂ.ಗಳವರೆಗೆ ಸಹಾಯಧನವನ್ನು ನೀಡುತ್ತಿದ್ದು, ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.  ಒಟ್ಟು 5 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಲಿದೆ. ಪ್ರತಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘಗಳನ್ನು ರಚಿಸಿ ಸ್ವಯಂ ಉದ್ಯೋಗಕ್ಕೆ 5 ಲಕ್ಷ  ರೂ.ಗಳನ್ನು ನೀಡುವ ಕಾರ್ಯಕ್ರಮ  ರೂಪಿಸಲಾಗಿದೆ. ಯುವಕರಿಗೆ ಅವಕಾಶಗಳು, ರೈತರಿಗೆ ಪ್ರೋತ್ಸಾಹ, ನೀರಾವರಿಗೆ ಆದ್ಯತೆ  ಮುಂತಾದ ಕಾಯಕ್ರಮಗಳನ್ನು ಮುಂದಿಟ್ಟುಕೊಂಡು, ನಿಮ್ಮ  ಆಶೀರ್ವಾದ ಮುಂದೆ ಬಂದಿದ್ದೇವೆ.  ಈ ಭಾಗದ ನೀರಾವರಿ, ಹಿಂದುಳಿದವರ, ಪರಿಶಿಷ್ಟ ಜನಾಂಗದವರ ಕಾರ್ಯಕ್ರಮವನ್ನು ರೂಪಿಸಲು ನಾವು ಬದ್ಧ ಎಂದರು.

*ನಮ್ಮ ಸರ್ಕಾರದಿಂದ ದೊಡ್ಡ ಬದಲಾವಣೆ*
ಅದಕ್ಕೆ ದೊಡ್ಡ ಬದಲಾವಣೆಗಳನ್ನು ನಮ್ಮ ಸರ್ಕಾರ ತರುತ್ತಿದೆ. 28000 ಕೋಟಿ ರೂ.ಗಳನ್ನು ಪರಿಶಿಷ್ಟ.  ವರ್ಗದವರ ಕಲ್ಯಾಣಕ್ಕೆ ಮೀಸಲಿಟ್ಟು ಖರ್ಚು ಮಾಡುತ್ತಿದ್ದೇವೆ. 100 ಅಂಬೇಡ್ಕರ್ ವಿದ್ಯಾರ್ಥಿನಿಲಯಗಳನ್ನು  ಇದೇ ವರ್ಷ ನಿರ್ಮಾಣ ಮಾಡಲಾಗುತ್ತಿದ್ದು, 50 ಕನಕದಾಸರ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸುತ್ತಿದ್ದೇವೆ. ಕನಕದಾಸರು ಹುಟ್ಟಿದ ಊರನಿಂದ ನಾನು ಬಂದಿದ್ದೇನೆ. ಬಾಡಾ ನನ್ನ ಕ್ಷೇತ್ರದಲ್ಲಿದೆ.  ಸಂಪೂರ್ಣ ಭಕ್ತಿ ಭಾವ ನಮ್ಮ ಕಣಕಣದಲ್ಲಿ ಅಳವಡಿಸಿಕೊಂಡಿದ್ದೇವೆ. 14 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಅಭಿವೃದ್ಧಿ ಮಾಡಿದ್ದೇವೆ. ಬಾಡ ಅಭಿವೃದ್ಧಿಗೆ  ಬಿ.ಎಸ್ ಯಡಿಯೂರಪ್ಪ ಅವರು ಅನುದಾನ ನೀಡಿ, ಅವರ ವಿಚಾರಗಳನ್ನು ಯಾವ ರೀತಿ ಬಿಂಬಿಸಿದ್ದೇವೆ ಎಂದು ಹಾಲುಮತಸ್ತ ಬಂಧುಗಳು ಬಂದು ನೋಡಬೇಕು. ಯಾವುದೇ ಸಮುದಾಯಕ್ಕೆ ಭೇದಭಾವ ಮಾಡಿಲ್ಲ. ನಿಜವಾದ ಸಾಮಾಜಿಕ ನ್ಯಾಯ ನಾವು ನೀಡುತ್ತಿದ್ದೇವೆ ಎಂದರು.  

*ಕರ್ನಾಟಕದಲ್ಲಿ ಅಭಿವೃದ್ಧಿಯ ಪರ್ವ ಆರಂಭ*
ಕುಷ್ಟಗಿಯ ಸಮಗ್ರ ಅಭಿವೃದ್ಧಿಯನ್ನು ನಾವು ಮಾಡುತ್ತೇವೆ.  ಇಡೀ ದೇಶದಲ್ಲಿ ನರೇಂದ್ರ ಮೋದಿಯವರ ಪರವಾದ ಅಲೆ ಎದ್ದಿದೆ. ಇಡೀ ವಿಶ್ವದಲ್ಲಿ ಭಾರತದ ಬಗ್ಗೆ ಗೌರವ ಹೆಚ್ಚಿಸಿರು ಶ್ರೇಯಸ್ಸು ನರೇಂದ್ರ ಮೋದಿಯವರದ್ದು.  ನರೇಂದ್ರ ಮೋದಿವರ  ಕಾರ್ಯಕ್ರಮಗಳು ಬಡವರ ಪರವಾಗಿದೆ. ಕಿಸಾನ್ ಸಮ್ಮಾನ್, ಆಯುಷ್ಮಾನ್ ಭಾರತ್, ಎಲ್ಲವೂ ಜನರಿಗೆ ತಿಳಿದಿದೆ. ಇವೆಲ್ಲರೂ ಪರಿಣಾಮಕಾರಿಯಾಗಿ ಮುಟ್ಟಲು ಡಬಲ್ ಇಂಜಿನ್ ಸರ್ಕಾರ ಕಾರಣ.  ಡಬಲ್ ಇಂಜಿನ್ ಸರ್ಕಾರ ಬಂದ ನಂತರ ಆರ್ಥಿಕವಾಗಿ, ಸಾಮಾಜಿಕವಾಗಿ ಕರ್ನಾಟಕವನ್ನು  ಮುನ್ನಡೆಸಲಾಗುತ್ತಿದೆ. ಇದು ಮುಂದುವರೆಯಬೇಕಾದರೆ ಬಿಜೆಪಿ ಅಗತ್ಯ. ಮುಂಬರುವ  ಚುನಾವಣೆಯಲ್ಲಿ ವಿಧಾನಸಭೆಯ 3 ನೇ ಮಹಡಿಯಲ್ಲಿ ಕಮಲವನ್ನು ಅರಳಿಸಿ ಮತ್ತೊಮ್ಮೆ ಜನಪರವಾದ ಸರ್ಕಾರವನ್ನು ತರುವ ವಿಶ್ವಾಸವಿದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡಲು ನಿಮ್ಮ ಆಶೀರ್ವಾದ ಅಗತ್ಯ ಎಂದರು. ನಿಮ್ಮ ಮತ, ವಿಶ್ವಾಸಕ್ಕೆ ನೀವು ಖುಷಿ ಪಡುವ ರೀತಿಯಲ್ಲಿ ಕೆಲಸ ಮಾಡುತ್ತೇವೆ.  ಕರ್ನಾಟಕದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದರು.
[12/10, 9:25 PM] Cm Ps: *ಯಶಸ್ವಿನಿ ಯೋಜನೆ ಮರು ಜಾರಿ: ಮಾರ್ಗಸೂಚಿ ನಿಗದಿ* 
 *ನವೆಂಬರ್ 1 ರಿಂದ ನೋಂದಣಿ ಪ್ರಾರಂಭ* 
ಬೆಂಗಳೂರು, ಅಕ್ಟೋಬರ್ 12- 
ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.
ಈ ಕುರಿತು ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು.
ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ  ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.

Post a Comment

Previous Post Next Post