[16/10, 10:44 AM] Cm Ps: ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉದ್ಘಾಟಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವರಾದ ಎಸ್. ಅಂಗಾರ, ಸಚಿವರಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ, ಶಾಸಕ ಸಂಜೀವ ಮಟಂದೂರು, ಫ್ರೀಡಂ ಆ್ಯಪ್ ಸಂಸ್ಥಾಪಕ ಸಿ.ಎಸ್. ಸುಧೀರ್ , ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಹೀಮ್ ಸೇರಿದಂತೆ ಮತ್ತಿತರರು ಹಾಜರಿದ್ದರು.
[16/10, 12:08 PM] Cm Ps: *ಮಂಡ್ಯ* ( *ಕೆ.ಆರ್.ಪೇಟೆ* ), ಅಕ್ಟೋಬರ್ 16 : *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು *ಕೆ.ಆರ್.ಪೇಟೆಯ* *ಅಂಬಿಗ್ರಾಮ ಹೆಲಿಪ್ಯಾಡ್* ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ *ಮಾಧ್ಯಮದವರಿಗೆ ಪ್ರತಿಕ್ರಿಯೆ* ನೀಡಿದರು.
[16/10, 1:22 PM] Cm Ps: *ಕೇಬಲ್ ನೆಟ್ ಮೂಲಕ ಮೀನುಗಾರಿಕೆಗೆ ಸಹಾಯಧನ: ಸಾವಿರ ಮೀನುಗಾರರಿಗೆ ಹೆಚ್ಚಳ:ಸಿಎಂ ಬೊಮ್ಮಾಯಿ*
ಬೆಂಗಳೂರು, ಅಕ್ಟೋಬರ್ 16: ಕೇಬಲ್ ನೆಟ್ ಮೂಲಕ ಮೀನುಗಾರಿಕೆ ಮಾಡಲು 3 ಲಕ್ಷ ರೂ.ಗಳ ಸಹಾಯಧನವನ್ನು ಪ್ರಸ್ತುತ 300 ಜನರಿಗೆ ನೀಡುತ್ತಿದ್ದು, ಇದನ್ನು 1000 ಮೀನುಗಾರರಿಗೆ ಸಹಾಯಧನ ಹೆಚ್ಚಿಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉದ್ಘಾಟಿಸಿ, ಮಾತನಾಡಿದರು.
ಸ್ತ್ರೀ ಸಾಮರ್ಥ್ಯ ಯೋಜನೆಯಡಿ 3 ರಿಂದ 5 ಲಕ್ಷ ನೀಡಲಾಗುತ್ತಿದ್ದು ಒಳನಾಡು ಮೀನುಗಾರಿಕೆ ಕೈಗೊಳ್ಳಲು ಮುಂದೆ ಬರುವ ಸ್ತ್ರೀ ಶಕ್ತಿ ಸಂಘಗಳಿಗೆ ಹಾಗೂ ಸ್ವಾಮಿ ವಿವೇಕಾನಂದರ ಯೋಜನೆಯಡಿ ನೀಡುವ ಸಹಾಯ ಧನವನ್ನು ಬಳಸಿ ಸುಮಾರು 1000 ಸಂಘಗಳಿಗೆ ಮೀನುಗಾರಿಕೆ ಕೈಗೊಳ್ಳಲು ಮುಂದಾಗಬೇಕು ಎಂದರು. ಈಗಾಗಲೇ ಆದೇಶ ನೀಡಿ ಅನುದಾನ ಬಿಡುಗಡೆ ಮಾಡಲಾಗಿದೆ. ಮೀನುಗಾರಿಕೆಯಲ್ಲಿ ರಾಜ್ಯ ಇನ್ನೂ ಸಾಧನೆ ಮಾಡಬೇಕಿದೆ. ರಫ್ತು ಮಾಡುವಲ್ಲಿ ಆಂಧ್ರಪ್ರದೇಶ ಮುಂದುವರೆದಿದೆ. ಒಂದು ತಂಡವನ್ನು ಆಂಧ್ರಪ್ರದೇಶಕ್ಕೆ ಕರೆದೊಯ್ಯಲು ಸೂಚಿಸಿರುವುದಾಗಿ ತಿಳಿಸಿದರು.
ಈಗಿರುವ ಮೀನುಗಾರಿಕೆ ಚಟುವಟಿಕೆಗಳನ್ನು ವಿಸ್ತರಿಸಿ, ಈಗಿನ ರಫ್ತು ಪ್ರಮಾಣಕ್ಕಿಂತ ಮೂರುಪಟ್ಟು ಹೆಚ್ಚು ಮಾಡಬೇಕೆಂದು ಸೂಚಿಸಿದ್ದೇನೆ. ಇದಕ್ಕೆ ಮುಂದಿನ ಆಯವ್ಯಯದಲ್ಲಿ ಅನುದಾನ ಮೀಸಲಿರಿಸಲಾಗುವುದು ಎಂದರು.
*ಕಾಲಮಿತಿಯಲ್ಲಿ ಮೀನುಗಾರರಿಗೆ ಮನೆ ನಿರ್ಮಾಣ*
ಮೀನುಗಾರರು ಆರ್ಥಿಕವಾಗಿ ಸಬಲರಾಗಲು 5000 ಮೀನುಗಾರರ ಮನೆಗಳಿಗೆ ಮಂಜೂರಾತಿ ನೀಡಿದೆ. ಕಾಲಮಿತಿಯಲ್ಲೇ ಈ ಮನೆಗಳನ್ನು ಪೂರ್ಣಗೊಳಿಸಬೇಕು. ಜನವರಿಯೊಳಗೆ ಪೂರ್ಣ ಗೊಳಿಸಿದರೆ ಖುದ್ದಾಗಿ ಬಂದು ಮೀನುಗಾರರಿಗೆ ಹಂಚಲಾಗುವುದು ಎಂದರು.
*ಮೀನುಗಾರಿಕೆ ಬೃಹತ್ ಉದ್ಯಮ*
ಮೀನು ಶತಮಾನಗಳಿಂದ ಮನುಷ್ಯನ ಆಹಾರವಾಗಿದೆ. ಮೀನು ಸಸ್ಯಾಹಾರಿ. ಮೀನನ್ನು ತಿನ್ನುವವರು ಮಾಂಸಾಹಾರಿಗಳು. ವಿದೇಶಗಳಲ್ಲಿ ಮೀನನ್ನು ಸಸ್ಯಾಹಾರ ಎಂದು ವ್ಯಾಖ್ಯಾನ ಮಾಡುತ್ತಾರೆ. ಮೀನಿಗೆ ಬಹಳಷ್ಟು ಬೆಲೆ ಬಂದಿದೆ. ಮೀನುಗಾರಿಕೆ ಬೃಹತ್ ಉದ್ಯಮವಾಗಿ ಬೆಳೆದಿದೆ. ಮೀನು ಬೆಳೆ ಯುವುದರಿಂದ, ಸಾಕುವುದು, ಆಹಾರ ಉತ್ಪಾದನೆಗೆ ಮಾಡಿ, ಮೀನಿನ ಸಂಗ್ರಹ ಹಾಗೂ ಸಾಗಾಣಿಕೆ ಮಾಡಿ ಬಹಳ ದೊಡ್ಡ ಚಟುವಟಿಕೆ ಗಳು ಮೀನುಗಾರಿಕೆ ಒಳಗೊಂಡಿದೆ. ಇದರಿಂದ ಸಾವಿರಾರು ಜನ ಉದ್ಯೋಗದಲ್ಲಿ ತೊಡಗಲು ಸಾಧ್ಯವಿದೆ. ಮೀನುಗಾರಿಕೆಯಲ್ಲಿ ಸಮುದ್ರ ಮೀನುಗಾರಿಕೆ ಇದೆ. ನಮ್ಮ ಮೀನುಗಾರರು ಸಾಕಷ್ಟು ಸಾಹಸವನ್ನು ಮಾಡಬೇಕಾಗಿದೆ. ಒಳನಾಡು ಮೀನುಗಾರಿಕೆಯೂ ಅತ್ಯಂತ ಮಹತ್ವ ಪಡೆದುಕೊಂಡಿದೆ. ಮೀನಿನ ಆಹಾರದ ಮಾರಾಟದ ಬೆಲೆ ಬಹಳ ಕಡಿಮೆ ಇದೆ. ಮೀನು ಹಿಡಿದು ಎಷ್ಟು ಅವಧಿಯೊಳಗೆ ಜನರಿಗೆ ಮುಟ್ಟಿಸುತ್ತೇವೆ ಎನ್ನುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ಸ್ಥಳೀಯವಾಗಿ ಮೀನುಗಾರಿಕೆ ಮಾಡಿ ಉತ್ಪಾದನೆ ಮಾಡಿದರೆ, ಅಲ್ಲಿ ತಾಜಾ ಮೀನುಗಳನ್ನು ನೀಡಬಹುದು. ಸಮುದ್ರದ ಮೀನುಗಳಿಗೂ, ಉತ್ಪಾದಿಸುವ ಮೀನುಗಳಿಗೂ ವ್ಯತ್ಯಾಸವಿದೆ. ನೀರು ಮತ್ತು ಅದರ ಒಟ್ಟು ಪ್ರದೇಶ, ಮಣ್ಣಿನ ಸಾರ ಮುಂತಾದ ವಿಚಾರಗಳಿವೆ. ಸಂಶೋಧಕರು ಒಳನಾಡು ಮೀನುಗಾರಿಕೆಯಲ್ಲಿ ದೊಡ್ಡ ಪ್ರಮಾಣದ ಸಂಶೋಧನೆ ಮಾಡುತ್ತಿದ್ದಾರೆ ಎಂದರು.
*ಒಳನಾಡು ಮೀನುಗಾರಿಕೆಗೆ ಮಹತ್ವ*
ಹೊಸ ತಳಿಗಳನ್ನು ಒಳನಾಡು ಮೀನುಗಾರಿಕೆಯಲ್ಲಿ
ಪ್ರಯೋಗ ಮಾಡಿ ಯಶಸ್ವಿಯಾಗಿ ಸಬೇಕು. ಹೊಸ ತಳಿಗಳನ್ನು ತಯಾರು ಮಾಡಿದರೆ ದೊಡ್ಡ ಮಾರುಕಟ್ಟೆ ಲಭ್ಯವಿದೆ. ಮಾರುಕಟ್ಟೆ ಹಾಗೂ ಉತ್ಪಾದನೆಯ ನಡುವೆ ದೊಡ್ಡ ಅಂತರವಿದೆ. ಈ ಅಂತರ ತುಂಬಲು ಒಳನಾಡು ಮೀನುಗಾರಿಕೆಗೆ ಮಹತ್ವ ನೀಡಿ ಹೊಸ ತಳಿಗಳನ್ನು ಪ್ರಯೋಗ ಮಾಡಿ ದೊಡ್ಡ ಪ್ರಮಾಣದಲ್ಲಿ ಬೆಳಸಬೇಕು. ಸಮುದ್ರದ ಮೀನುಗಾರಿಕೆಗೆ ಹಲವಾರು ಕಾರ್ಯಕ್ರಮಗಳನ್ನು ನಾವು ರೂಪಿಸಿದ್ದೇವೆ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರತಿ ಹೆಕ್ಟೇರ್ ಹೊಸದಾಗಿ ಪ್ರಾರಂಭಿಸಿದರೆ 1 ಲಕ್ಷ ರೂ.ಗಳವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ.
ಕರಾವಳಿಯಲ್ಲಿ ಉತ್ಪಾದನೆ ಯಾಗುವ ಮೀನಿಗೆ ತನ್ನದೇ ಮಾರುಕಟ್ಟೆ ವ್ಯವಸ್ಥೆ ಇದೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದ ಸಮುದ್ರ ಮಟ್ಟದಲ್ಲಿ ಏರಿಕೆಯಾಗಿ ಮೀನು ಉತ್ಪಾದನೆ ಯಲ್ಲಿ ಬಹಳಷ್ಟು ಏರುಪೇರುಗಳಾಗಿವೆ. ಕರಾವಳಿ ಮೀನುಗಾರರು 8 ಅಥವಾ 10 ನಾಟಿಕಲ್ ಮೈಲುಗಳಲ್ಲಿ ಮೀನುಗಾರಿಕೆ ಮಾಡುತ್ತಾರೆ. ಆದರೆ ಬಹಳ ದೊಡ್ಡ ಉತ್ಕೃಷ್ಟ ಮೀನುಗಳು ಆಳ ಸಮುದ್ರದಲ್ಲಿ ದೊರೆಯುತ್ತವೆ. ನಮ್ಮ ಮೀನುಗಾರರು ದೊಡ್ಡ ಟ್ರಾಲರ್ ಬಳಸಿ ಆಳ ಸಮುದ್ರ ಮೀನುಗಾರಿಕೆ ಮಾಡಬೇಕೆಂದು ಈ ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರೋತ್ಸಾಹದಿಂದ ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯಡಿ ನಾವು 100 ಹೊಸ ಆಳ ಸಮುದ್ರ ಬೋಟುಗಳನ್ನು ಒದಗಿಸುತ್ತಿದ್ದು, 40 % ಸಹಾಯಧನವಿದ್ದು ಅತಿ ಸುಲಭ ದರದಲ್ಲಿ ಸಾಲದ ವ್ಯವಸ್ಥೆ ಮಾಡಲಾಗಿದೆ. 100 ಬೋಟುಗಳನ್ನು ನೀಡಿದರೆ, ಮುಂದಿನ ವರ್ಷ 300 ಬೋಟುಗಳಿಗೆ ವಿಸ್ತರಣೆ ಮಾಡುವ ಉದ್ದೇಶವಿದೆ. ಮೀನುಗಾರರ ಸಂಘಗಳು ಕೂಡ ಆಳ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಿ ಹೆಚ್ಚಿನ ಉತ್ಪಾದನೆ ಮಾಡಬೇಕೆಂಬ ಉದ್ದೇಶ ನಮ್ಮದು ಎಂದರು.
*5600 ಗ್ರಾಮ ಪಂಚಾಯಿತಿಯಲ್ಲಿ 5600 ಕೆರೆಗಳಲ್ಲಿ ಮೀನು ಅಭಿವೃದ್ಧಿಗೆ ಅನುದಾನ*
ಕರಾವಳಿ ಪಕ್ಕದಲ್ಲಿ ಕಡಲ ಕೊರೆತವಾಗಿ ಹೂಳು ತುಂಬಿ ತೊಂದರೆಯಾಗುತ್ತಿರುವುದರಿಂದ ಎಂಟು ಮೀನುಗಾರಿಕೆ ಬಂದರುಗಳಿಗೆ ವಿಶೇಷ ಅನುದಾನ ನೀಡಿ ಹೂಳು ತೆಗೆಯಲು ಈ ವರ್ಷ ಅನುಮೋದನೆ ನೀಡಲಾಗಿದೆ.
ಮೀನುಗಾರರಿಗೆ ಡೀಸಲ್ ಹಾಗೂ ಸೀಮೆ ಎಣ್ಣೆ ಸಹಾಯಧನವನ್ನು ಹೆಚ್ಚಿಸಲಾಗಿದೆ. ಪ್ರವಾಹ ಬಂದ ಸಂದರ್ಭದಲ್ಲಿ ಮೀನುಗಾರರ ಹಡುಗುಗಳು ಹಾಳಾಗುತ್ತವೆ. ಅದಕ್ಕೆ ಎನ್.ಡಿ.ಆರ್.ಎಫ್ ನಿಯಮಾವಳಿ ಪ್ರಕಾರ ಅನುದಾನ ನೀಡಲು ಅವಕಾಶವಿಲ್ಲ. ರಾಜ್ಯ ಸರ್ಕಾರ ದಿಂದಲೇ ಮೀನುಗಾರರ ದೋಣಿಗಳಿಗೆ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ. ಒಳನಾಡು ಮೀನುಗಾರಿಕೆಗೂ ಪ್ರೋತ್ಸಾಹ ನೀಡಲು 5600 ಗ್ರಾಮ ಪಂಚಾಯಿತಿಯಲ್ಲಿ 5600 ಕೆರೆಗಳಲ್ಲಿ ಮೀನು ಅಭಿವೃದ್ಧಿಗೆ ಅನುದಾನ ನೀಡಿದೆ. ಆಲಮಟ್ಟಿ, ಕೆ.ಆರ್.ಎಸ್ ಹಿನ್ನೀರಿನಲ್ಲಿ ವ್ಯವಸ್ಥಿತ ರೀತಿಯಲ್ಲಿ ಮೀನುಗಾರಿಕೆ ಆಗುತ್ತಿಲ್ಲ. ಕೆಲವರೇ ಸ್ವಾಮ್ಯತೆ ಮಾಡಿಕೊಂಡಿದ್ದು, ಇದನ್ನು ತಪ್ಪಿಸಿ ಎಲ್ಲರಿಗೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.
*ಎಲ್ಲ ಬಿಬಿಎಂಪಿ ವಾರ್ಡ್ ಗಳಲ್ಲಿ ಮೀನು ಆಹಾರ ಮಳಿಗೆ ಪ್ರಾರಂಭ :*
ಬಿಬಿಎಂಪಿ ವಲಯಗಳಲ್ಲಿ ಮೀನಿನ ಆಹಾರಕ್ಕೆ ಬಹಳ ಬೇಡಿಕೆಯಿದೆ. ಪ್ರತಿಯೊಂದು ವಾರ್ಡಿನಲ್ಲಿ 1500-2000 ಚ.ಮೀ. ವಿಸ್ತೀರ್ಣದಲ್ಲಿ ಮೀನಿನ ಆಹಾರವನ್ನು ಒದಗಿಸುವ ಮಳಿಗೆಯನ್ನು ಪ್ರಾರಂಭಿಸುವ ಯೋಜನೆ ಇದೆ. ಬೆಂಗಳೂರಿನ 243 ವಾರ್ಡ್ ಗಳಲ್ಲಿಯೂ ಇದಕ್ಕೆ ಸ್ಥಳಾವಕಾಶ ಮಾಡಿಕೊಡಲಾಗುವುದು. ಖಾಸಗಿ ವಲಯದವರು ಇಲ್ಲಿ ಮಳಿಗೆಯನ್ನು ತೆರೆಯಬಹುದು. ಬೆಂಗಳೂರು ನಗರದಲ್ಲಿ ಈ ಯೋಜನೆ ಸಫಲವಾದರೆ, ರಾಜ್ಯದ ಎಲ್ಲ ಮಹಾನಗರಪಾಲಿಕೆ ವ್ಯಾಪ್ತಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದರು.
*ಈ ವರ್ಷ 1 ಲಕ್ಷ ಮೀನುಗಾರರ ಮಕ್ಕಳಿಗೆ ರೈತವಿದ್ಯಾನಿಧಿ ನೀಡುವ ಗುರಿ :*
ರೈತಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು 14 ಲಕ್ಷ ಜನ ರೈತಮಕ್ಕಳಿಗೆ ವಿದ್ಯಾನಿಧಿ ಕೊಡುತ್ತಿದ್ದೇನೆ. ರೈತಕೂಲಿಕಾರರು, ಮೀನುಗಾರರು, ನೇಕಾರರು, ಕಾರ್ಮಿಕರು, ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿದಿ ಯೋಜನೆ ವಿಸ್ತರಿಸಲಾಗಿದೆ. ಈಗಾಗಲೇ 1 ಲಕ್ಷ ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಇದೇ ವರ್ಷ ವಿತರಿಸುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದರು.
*ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಸರ್ಕಾರದ ಸಹಕಾರ :*
ಮೀನುಗಾರಿಕೆ, ಮೀನು ಆಹಾರ ಉತ್ಪಾದನೆ, ಮಾರುಕಟ್ಟೆ ವ್ಯವಸ್ಥೆ, ರಫ್ತು , ಸ್ಥಳೀಯ ಮಾರುಕಟ್ಟೆ, ಹೀಗೆ ಮೀನುಗಾರಿಕೆಯ ವಿವಿಧ ವಲಯಗಳಿಗೆ ಈಗ ಬಹಳ ಅವಕಾಶಗಳಿವೆ. ಖಾಸಗಿ ವಲಯದವರು ಆಸಕ್ತಿವಹಿಸಿ ಬಂದರೆ, ಮಾರುಕಟ್ಟೆ ವ್ಯವಸ್ಥೆ, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ನೀಡಲು ಸರ್ಕಾರ ಸಿದ್ಧವಿದೆ. ಮೀನಿನ ಸಂಸ್ಕರಣೆ, ಮೀನು ಆಹಾರ ಉತ್ಪಾದನೆಗೆ ಸರ್ಕಾರ ಸಹಕಾರ ನೀಡುತ್ತದೆ. ಮೀನುಗಾರಿಕೆ ವಲಯದಲ್ಲಿ ಖಾಸಗಿ ವಲಯದ ಆಸಕ್ತಿ, ಹೆಚ್ಚಿನ ಹೂಡಿಕೆ,ಉತ್ಪಾದನೆ, ಮಾರುಕಟ್ಟೆ ಅವಕಾಶಗಳು ಬರಬೇಕೆಂಬ ಉದ್ದೇಶದಿಂದ ಇಂದಿನ ಸಮಾವೇಶ ಆಯೋಜಿಸಲಾಗಿದೆ ಎಂದರು.
*ಜನರ ದುಡಿಮೆಯೇ ರಾಜ್ಯದ ಆರ್ಥಿಕತೆ:*
ಮೀನುಗಾರಿಕೆಯ ವಹಿವಾಟನ್ನು ಎಂಟು ಲಕ್ಷ ಕೋಟಿರೂ.ಗಳಿಗೆ ಹೆಚ್ಚಿಸುವ ಗುರಿಇದ್ದು, ಇದು ರಾಜ್ಯದ ಆಂತರಿಕ ಜಿಡಿಪಿಯನ್ನು ಹೆಚ್ಚಿಸುತ್ತದೆ. ಪ್ರಧಾನಿ ಮೋದಿಯವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿಗೆ ರಾಜ್ಯದಲ್ಲಿನ ಕೃಷಿ,ಮೀನುಗಾರಿಕೆ, ಕುರಿ ಸಾಕಾಣಿಕೆ ಇವೆಲ್ಲವೂ ಕೊಡುಗೆ ನೀಡಲಿವೆ. ಕೃಷಿಯಲ್ಲಿ ಶೇ. 1 ರ ಅಭಿವೃದ್ಧಯಾದರೆ, ಶೇ.4 ರಷ್ಟು ಉತ್ಪಾದನಾ ಹಾಗೂ ಶೇ.10 ರಷ್ಟು ಅಭಿವೃದ್ಧಿ ಸೇವಾ ವಲಯದಲ್ಲಿ ಆಗುತ್ತದೆ. ಜನರ ದುಡಿಮೆಯೇ ರಾಜ್ಯದ ಆರ್ಥಿಕತೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವರಾದ ಎಸ್. ಅಂಗಾರ, ಸಚಿವರಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ, ಶಾಸಕ ಸಂಜೀವ ಮಟಂದೂರು, ಫ್ರೀಡಂ ಆ್ಯಪ್ ಸಂಸ್ಥಾಪಕ ಸಿ.ಎಸ್. ಸುಧೀರ್ , ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಹೀಮ್ ಸೇರಿದಂತೆ ಮತ್ತಿತರರು ಹಾಜರಿದ್ದರು.
[16/10, 2:34 PM] Cm Ps: ಮಂಡ್ಯ ( *ಕೆ.ಆರ್.ಪೇಟೆ),* ಅಕ್ಟೋಬರ್ 16 : *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು *ಕನ್ನಡ ಮತ್ತು ಸಂಸ್ಕøತಿ* *ಮುಜರಾಯಿ ಮತ್ತು ಧಾರ್ಮಿಕ* *ದತ್ತಿ, ಪ್ರವಾಸೋದ್ಯಮ, ಯುವ* *ಸಬಲೀಕರಣ* ಮತ್ತು *ಕ್ರೀಡಾ* *ಇಲಾಖೆ* , ಹಾಗೂ *ಜಿಲ್ಲಾಡಳಿತ ಮಂಡ್ಯ* ಜಿಲ್ಲೆ ಇವರುಗಳ ಸಹಯೋಗದೊಂದಿಗೆ ಸಂಗಮ, ಅಂಬಿಗರಹಳ್ಳಿ - ಸಂಗಾಪುರ - ಪುರದಲ್ಲಿ ಆಯೋಜಿಸಿರುವ *ಶ್ರೀ* *ಮಲೆಮಹದೇಶ್ವರರ ಮಹಾಕುಂಭಾ* **ಮೇಳ*2022* ಮಹೋತ್ಸವದ *ಸಮಾರೋಪ ಸಮಾರಂಭ* ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
[16/10, 2:37 PM] Cm Ps: *ಕಾಂಗ್ರೆಸ್ ಕಾಲದ ಭ್ರಷ್ಟಾಚಾರದ ಸಂಪೂರ್ಣ ಮಾಹಿತಿ ರಾಹುಲ್ ಗಾಂಧಿಗೆ ರವಾನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಡ್ಯ (ಕೆ.ಆರ್.ಪೇಟೆ), ಅಕ್ಟೋಬರ್ 16 : ಕರ್ನಾಟಕದಲ್ಲಿ ದುಡ್ಡಿದ್ದರೆ ಮಾತ್ರ ನೌಕರಿ ದೊರೆಯುತ್ತದೆ ಎಂದಿರುವ ರಾಹುಲ್ ಗಾಂಧಿಯವರಿಗೆ ಎಲ್ಲಾ ಪ್ರಕರಣಗಳ ಮಾಹಿತಿಯನ್ನು ಅಂಕಿಅಂಶಗಳ ಸಮೇತ ಕಳುಹಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್ ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರಾಹುಲ್ ಗಾಂಧಿಗೆ ಬಹುತೇಕವಾಗಿ ಅವರಿಗೆ ಜಾಣ ಮೆರೆವಿರಬೇಕು. ಅಥವಾ ಕಾಂಗ್ರೆಸ್ ನವರು ಅವರಿಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ. ಅವರ ಕಾಲದಲ್ಲಿ ನೇಮಕಾತಿಯಲ್ಲಿ ಆದಷ್ಟು ಭ್ರಷ್ಟಾಚಾರ ಭಾರತ ದೇಶದಲ್ಲಿ ಎಲ್ಲೂ ಆಗಿಲ್ಲ. ಪೊಲೀಸ್ ಪೇದೆ, ಶಿಕ್ಷಕರು, ಪಿ.ಯು.ಸಿಯಲ್ಲಿ ಪ್ರಶೆಪತ್ರಿಕೆ ಸೋರಿಕೆಯಾಗಿರುವುದು ಎಲ್ಲಾ ವಿಚಾರದಲ್ಲಿ ಭ್ರಷ್ಟಾಚಾರವಾಗಿ ತನಿಖೆಯೂ ನಡೆಯುತ್ತಿದೆ. ಅವರಿಗೆ ಕಳುಹಿಸಲಾಗುತ್ತಿದೆ. ಅವರ ಆಡಳಿತದಲ್ಲಿ ಆಗಿರುವ ಭ್ರಷ್ಟಾಚಾರ ವನ್ನು ಕನ್ನಡಿಯಲ್ಲಿ ನೋಡಿಕೊಂಡು ಆಮೇಲೆ ಮಾತನಾಡಲಿ ಎಂದರು.
ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಳೆದ ಬಾರಿ ಅಧಿಕಾರಕ್ಕೆ 100 ಕ್ಕೆ 100 ಬರುವುದಾಗಿ ಹೇಳಿದರು. ಅವರು ಹೇಳಿದ್ದು ಯಾವುದು ನಿಜವಾಗಿದೆ ಎಂದರು. 127 ಸ್ಥಾನಗಳು 79ಕ್ಕೆ ಇಳಿಯಿತು. ಅಪ್ಪನಾಣೆ ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗೋಲ್ಲ ಎಂದಿದ್ದರು. ಅವರಿಬ್ಬರೂ ಒಂದೇ ಅವಧಿಯಲ್ಲಿ ಮುಖ್ಯ ಮಂತ್ರಿಗಳಾದರು. ಅವರು ಎಷ್ಟು ಹೇಳುತ್ತಾರೋ ಅಷ್ಟು ನಮಗೆ ಒಳ್ಳೆಯದು ಎಂದರು.
[16/10, 2:40 PM] Cm Ps: *ಅರಸೀಕೆರೆಯಲ್ಲಿ ಅಪಘಾತ: ಮೃತರ ಕುಟುಂಬಕ್ಕೆ 2.ಲಕ್ಷ ರೂ.ಗಳ ಪರಿಹಾರ: *ಸಿ.ಎಂ.ಬೊಮ್ಮಾಯಿ*
ಮಂಡ್ಯ (ಕೆ.ಆರ್.ಪೇಟೆ), ಅಕ್ಟೋಬರ್ 16 : ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಬಸ್ ಅಪಘಾತವಾಗಿದ್ದು, ದುರಂತವಾಗಿದ್ದು , ಸುಮಾರು 9 ಜನ ತೀರಿಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಅವರು ಇಂದು ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್ ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಟ್ಯಾಂಕರ್ ಮತ್ತು ಬಸ್ಸುಗಳ ನಡುವೆ ಅಪಘಾತವಾಗಿದೆ. ಅಪಘಾತದ ಸ್ಥಳಕ್ಕೆ ಕೂಡಲೇ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಮರಣಿಸಿದವರ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.
*ಮಳೆ:ದೀರ್ಘಕಾಲಿಕ ಹಾಗೂ ತುರ್ತು ಕಾಮಗಾರಿಗಳಿಗೆ ಅನುದಾನ*
ರಾಜ್ಯದಲ್ಲಿ ಮತ್ತೆಯಾಗುತ್ತಿದ್ದು, ದೀರ್ಘಕಾಲಿಕ ಶಾಶ್ವತ ಕಾಮಗಾರಿಗಳು ಮತ್ತು ತುರ್ತು ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಲು ಅಗತ್ಯ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಳೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ಕ್ರಮ ಕೈಗೊಂಡಿದೆ. ನಿರಂತರವಾಗಿ ಕೆಲಸವಾಗುವಂತೆ ಜಿಲ್ಲಾಧಿಕಾರಿ ಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಸೂಚನೆಗಳನ್ನು ನೀಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಹತ್ತು ಹಲವಾರು ಕೆರೆಗಳು ತುಂಬಿ ತೊಂದರೆಯಾಗಿದೆ. ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ತಿಳಿಸಲಾಗಿದೆ. ಮೂಲಭೂತ ಸೌಕರ್ಯಕ್ಕೆ 600 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ದೀರ್ಘಕಾಲಿಕ ಪರಿಹಾರಕ್ಕೆ ಅಗತ್ಯವಿರುವ ಅನುದಾನವನ್ನೂ ಬಿಡುಗಡೆ ಮಾಡಲಾಗುವುದು ಎಂದರು.
ನಾಳೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಯಲಿದ್ದು, ಅಲ್ಲಿ ಈ ವಿಚಾರವನ್ನು ವ್ಯಾಪಕವಾಗಿ ಚರ್ಚಿಸಿ ಪರಿಹಾರ ಸೂಚಿಸಲಾಗುವುದು ಎಂದು ತಿಳಿಸಿದರು.
[16/10, 4:14 PM] Cm Ps: *ಮಳವಳ್ಳಿಯಲ್ಲಿ ಅತ್ಯಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬದವರಿಗೆ ರೂ 10 ಲಕ್ಷ ಪರಿಹಾರ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಡ್ಯ, ಅಕ್ಟೋಬರ್ 16: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶ್ರೀ ಮಲೆಮಹಾದೇಶ್ವರ ಕುಂಭಮೇಳದ ಸಾಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯವಿದು. ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ . ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು. ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರಳು ಕಿವುಚಿಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಲಾಗಿದೆ. ಎಲ್ಲ 302, 307, ಪೋಕ್ಸೋ ಸೆಕ್ಷನ್ ಗಳನ್ನು ಹಾಕಿ ದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ. ಅವರು ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಂಡು ಇನ್ನೊಮ್ಮೆ ಹೀಗಾದರೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆ ಈ ವ್ಯವಸ್ಥೆ ನೀಡಲಿದೆ ಎಂಬ ಸಂದೇಶವನ್ನು ಸಾರಲಾಗುವುದೆಂದು ಈ ಪ್ರಕರಣದಲ್ಲಿ ಸಾಬೀತು ಮಾಡುತ್ತೇವೆ ಎಂದರು.
*ಉಗ್ರ ಶಿಕ್ಷೆ*
ಅಪರಾಧಿಗೆ ಉಗ್ರ ಶಿಕ್ಷೆ ನೀಡಲಾಗುವುದು. ನಿಮ್ಮ ಮನಸ್ಸಿನಲ್ಲಿರುವುದೇ ನಮ್ಮ ಮನಸ್ಸಿನಲ್ಲಿದೆ. ನಿಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೇವೆ. ಮೌಲ್ಯಗಳ ಕುಸಿತದಿಂದ ಇವೆಲ್ಲಾ ಆಗುತ್ತಿದೆ. ಯಾವುದು ಸರಿ, ತಪ್ಪು ಎಂದು ಸ್ಪಷ್ಟ ತೆ ಇಲ್ಲ. ಭಯ, ಭಕ್ತಿ ಇಲ್ಲ. ಇವುಗಳು ಇರಬೇಕಾದರೆ ಸಂಸ್ಕಾರ , ಸಂಸ್ಕೃತಿ ಅಗತ್ಯ. ಅಮಾನುಷ ಕೃತ್ಯ ಸಮಾಜದಲ್ಲಿ ಆಗಬಾರದೆಂದರೆ ನೈತಿಕ ಬದ್ಧತೆ, ಭಯ ಬರಬೇಕಾದರೆ ಸಂಸ್ಕಾರ ಅಗತ್ಯ ಎಂದರು. ನಾವೇನಾಗಿದ್ದೇವೆ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರು ಕೇಳಿಕೊಳ್ಳಬೇಕು ಎಂದರು.
*ಬೆಳೆ ನಾಶಕ್ಕೆ 2.30 ಕೋಟಿ ರೈತರಿಗೆ ಪರಿಹಾರ*
ಮಳೆ ಕರ್ನಾಟಕದ ಉದ್ದಗಲಕ್ಕೂ ಆಗುತ್ತಿದೆ. ಕೆರೆಕಟ್ಟೆಗಳು ತುಂಬಿವೆ.ಆದರೆ ಕೆಲವು ಕಡೆ ಪ್ರವಾಹ ಆಗಿದೆ. ಜನವಸತಿ ತೊಂದರೆಯಾಗಿದ್ದು, ಸಮಸ್ಯೆ ನಿವಾರಣೆಗೆ ಕ್ರಮ ವಹಿಸಿದೆ. ಮಂಡ್ಯಕ್ಕೆ ಸಂಬಂಧಿಸಿದಂತೆ ವೀಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಬೆಳೆ ನಾಶಕ್ಕೆ 2.30 ಕೋಟಿ ರೈತರಿಗೆ ಪರಿಹಾರವನ್ನು ಒದಗಿಸಲಾಗಿದೆ. ಅದರ ಜೊತೆಗೆ ಇಬ್ಬರು ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ನೀಡಿದೆ. ಬಿದ್ದುಹೋಗಿದ್ದ 304 ಮನೆಗಳಿಗಳಿಗೆ 100ಕ್ಕೆ 100 ಪರಿಹಾರ ನೀಡಲಾಗಿದೆ. ಮತ್ತೆ ಒಂದು ವಾರದಿಂದ ಆಗುತ್ತಿರುವ ಮಳೆಗೆ ಕೂಡಲೇ ಬೆಲೆ ನಾಶ, ಮನೆಗಳಿಗೆ ಸಂಬಂಧಿಸಿದಂತೆ ವರದಿ ನೀಡಿದರೆ ಕೂಡಲೇ ಪರಿಹಾರ ನೀಡಲಾಗುವುದು ಎಂದರು.
ಬೆಳೆ ನಾಶ ಆದಾಗ ಒಂದೂವರೆ ವರ್ಷ ಆಗುತ್ತಿತ್ತು. ನಾನು ಮುಖ್ಯ ಮಂತ್ರಿ ಆದಾಗಿನಿಂದ ಒಂದೂವರೆ ತಿಂಗಳಲ್ಲಿ ಡಿಬಿಟಿ ಮುಖಾಂತರ ಪರಿಹಾರ ವಿತರಣೆಯಾಗುತ್ತಿದೆ ಎಂದರು. ಖಾತೆಗಳಿಗೆ ನೇರವಾಗಿ ಹೋಗುತ್ತಿದೆ. ಪರಿಹಾರವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. ಒಣಬೇಸಾಯಕ್ಕೆ 13600ರೂ., ನೀರಾವರಿಗೆ 25 ಸಾವಿರ ಪರಿಹಾರ ನೀಡುತ್ತಿದ್ದೇವೆ. ತೋಟಗಳಿಗೆ ಕೇಂದ್ರ 18 ಸಾವಿರ ರೂ.ಗಳನ್ನು ನೀಡಿದರೆ ರಾಜ್ಯ ಸರ್ಕಾರ 28 ಸಾವಿರ ರೂ.ಗಳನ್ನು ನೀಡುತ್ತಿದೆ . ಮನೆಗಳಿಗೆ ಕೇಂದ್ರ ಸರ್ಕಾರ 95 ಸಾವಿರ ರೂ. ನೀಡುತ್ತದೆ. ನಾವು ಪೂರ್ಣ ಬಿದ್ದಿರುವ ಮನೆಗಳಿಗೆ 5 ಲಕ್ಷ, ಭಾಗಶಃ ಹಾಳಾಗಿರುವ ಮನೆಗಳಿಗೆ 3 ಲಕ್ಷ, ಹಾಗೂ ಸ್ವಲ್ಪ ಹಾಳಾಗಿರುವ ಮನೆಗಳಿಗೆ 50 ಸಾವಿರ ರೂ.ಗಳನ್ನು ನೀಡುತ್ತಿದ್ದೇವೆ. ಹೀಗೆ ಕಷ್ಟದಲ್ಲಿರುವ ಜನರಿಗೆ ನೆರ ವಾಗುತ್ತಿದ್ದೇವೆ ಎಂದರು. ಹಿಂದೆ ಈ ರೀತಿ ಪ್ರಕ್ರಿಯೆಗಳಾಗುತ್ತಿರಲಿಲ್ಲ. ಮನೆಗಳ ಜೊತೆಗೆ ಬೆಳೆಗಳ ನಾಶಕ್ಕೆ ಎರಡು ಪಟ್ಟುಪರಿಹಾರ ನೀಡುತ್ತಿರುವುದು ಬಿಜೆಪಿ ಸರ್ಕಾರ. ರೈತರ ಪರವಾಗಿ ನಾವು ಇದ್ದು, ಏನೇ ಸಂಕಷ್ಟ ಬಂದರೂ ಅವರೊಂದಿಗೆ ನಿಲ್ಲುತ್ತೇವೆ ಎಂದರು.
*ರಾಷ್ಟ್ರೀಯ ಹೆದ್ದಾರಿ: ಶೀಘ್ರ ಕ್ರಮ*
ರಾಷ್ಟ್ರೀಯ ಹೆದ್ದಾರಿ ಗಳ ಬಗ್ಗೆ ಇದೇ ವಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ, ಬೆಂಗಳೂರು- ಮೈಸೂರಿ ಹೆದ್ದಾರಿಯಲ್ಲಿ ಪದೇ ಪದೇ ನೀರು ನಿಂತು ತೊಂದರೆಯಾಗುತ್ತಿದ್ದು, ಇದರಲ್ಲಿ ವಿನ್ಯಾಸದ ಸಮಸ್ಯೆ
ಯೋ ಅಥವಾ ನಿರ್ವಹಣೆಯ ಸಮಸ್ಯೆಯೂ ಎಂದು ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ನೀರು ಬರದಂತೆ ವಿಶೇಷ ವ್ಯವಸ್ಥೆ ಮಾಡಿ, ಬ್ಲಾಕ್ ಸ್ಟಾಟ್ ಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.
[16/10, 7:11 PM] Cm Ps: ಸ್ವಿಟ್ಜರ್ಲೆಂಡ್ ಸಂಸದರಾದ ನಿಕೊಲಸ್ ಗಗ್ಗರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಚರ್ಚಿಸಿದರು.
[16/10, 7:15 PM] Cm Ps: ನ್ಯಾಯವಾದಿ ಬಿ.ಡಿ.ಹಿರೇಮಠ ನೇತೃತ್ವದಲ್ಲಿ ಬೇಡ ಜಂಗಮ ಸಮುದಾಯದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ಚರ್ಚಿಸಿದರು.
Post a Comment