cm, ಇಂದು, ಸವಿವರ

[29/10, 11:11 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ  ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಶನ್ ವತಿಯಿಂದ ಸ್ಥಾಪಿಸಿರುವ ಪುನೀತ್ ಸ್ಯಾಟಲೈಟ್ ವರ್ಕ್  ಸ್ಟೇಷನ್ ಅನ್ನು ಉದ್ಘಾಟಿಸಿದರು. ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
[29/10, 1:33 PM] Cm Ps: *ಮಲ್ಲೇಶ್ವರಂ ಮಾದರಿ ರಾಜ್ಯದ ಸರ್ಕಾರಿ  ಶಾಲೆಗಳಿಗೆ ವಿಸ್ತರಣೆ*: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಅಕ್ಟೋಬರ್ 29:  ಆಧುನಿಕ  ವ್ಯವಸ್ಥೆಗಳನ್ನು ಒದಗಿಸುವ ಮೂಲಕ    ಕರ್ನಾಟಕದ ಸರ್ಕಾರಿ  ಶಾಲೆಗಳಲ್ಲಿ ಮಲ್ಲೇಶ್ವರಂ ಮಾದರಿಯನ್ನು  ಅನುಸರಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 

ಅವರು ಇಂದು  ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಇರುವ ಸರ್ಕಾರ ಪ್ರೌಢಶಾಲೆ ಇಲ್ಲಿ ಆಯೋಜಿಸಿದ್ದ   ಮಲ್ಲೇಶ್ವರಂ ಸ್ಕೂಲ್ ಮಾಡೆಲ್ ಹಾಗೂ ಪುನೀತ್ ಸ್ಯಾಟಿಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿ  ಮಾತನಾಡಿದರು.

ಮಲ್ಲೇಶ್ವರಂ ಮಾದರಿ ಶಾಲೆಯಲ್ಲಿ ಮಕ್ಕಳೇ ತಯಾರಿಸಿರುವ ಸ್ಯಾಟಿಲೈಟ್ ಇಂದು  ಅನಾವರಣವಾಗಿದೆ. ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಆಗಿದ್ದು. ಬಹಳ ಯೋಗ್ಯ ವ್ಯಕ್ತಿಯ ಹೆಸರಿನಲ್ಲಿ ಕೆಲಸವಾಗುತ್ತಿದೆ ಎಂದರು. 

*ಆಕಾಶದೆತ್ತರಕ್ಕೆ ಮಲ್ಲೇಶ್ವರಂ ಶಾಲೆಯ ಖ್ಯಾತಿ ಏರಲಿ*
 ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯಂದು ಅವರಿಗೆ ಗೌರವ ಸಮರ್ಪಣೆ ಮಾಡುವ ರೀತಿಯಲ್ಲಿ ಈ ಸ್ಯಾಟಿಲೈಟ್ ನ್ನು ಗಗನಕ್ಕೇರಿಸುವ ಕೆಲಸ ಶ್ಲಾಘನೀಯ. ಆಕಾಶದೆತ್ತರಕ್ಕೆ ಮಲ್ಲೇಶ್ವರಂ ಶಾಲೆಯ ಖ್ಯಾತಿ ಏರಲಿ ಎಂದರು. ಪುನೀತ್ ರಾಜ್ ಕುಮಾರ್ ಅವರು ಸದಾ ಹೊಸತನ್ನು ಹುಡುಕುವ, ಪ್ರಯೋಗಶೀಲ, ಅಂತ:ಕರಣವುಳ್ಳ ವ್ಯಕ್ತಿ. ಅತ್ಯಂತ ಸಣ್ಣ ವಯಸ್ಸಿನಲ್ಲೇ ಈ ಲೋಕ ಬಿಟ್ಟರೂ ಅವರು ಬದುಕಿದ ಕೆಲ ದಿನಗಳಲ್ಲಿ ತಮ್ಮ ಹೆಜ್ಜೆ ಗುರುತುಗಳನ್ನು ಭೂಮಿಯಲ್ಲಿ ಬಿಟ್ಟುಹೋಗಿದ್ದಾರೆ. ಪರೋಪಕಾರಿ ಕಾರ್ಯಗಳು, ವಿದ್ಯಾಭ್ಯಾಸ ನೀಡುವ ಸಂಸ್ಥೆ, ಅನಾಥ ಮಕ್ಕಳ ಶಕ್ತಿ ಧಾಮ, ಸಹಾಯ, ನಗುಮುಖದಿಂದ  ಎಲ್ಲರ ದುಃಖ ದುಮ್ಮಾನಗಳನ್ನು ದೂರ ಮಾಡಿದ್ದಾರೆ. ಅವರು ನಮ್ಮ ಜೊತೆಗೆ ಎಂದಿಗೂ ಇರುತ್ತಾರೆ.  ರಾಜ್ಯದ ಉದ್ದಗಲಕ್ಕೂ ಅವರ ಖ್ಯಾತಿ ಪಸರಿಸಿದೆ. ಮಲ್ಲೇಶ್ವರಂ ಶಾಲೆ ಪುನೀತ್  ಖ್ಯಾತಿಯನ್ನು ಸ್ಯಾಟಿಲೈಟ್ ಮೂಲಕ ಆಕಾಶದೆತ್ತರಕ್ಕೆ  ಕೊಂಡೊಯ್ಯುತ್ತಾರೆ ಎಂದು ನಂಬಿದ್ದೇನೆ  ಎಂದರು.


*ಪ್ರಾಥಮಿಕ ಶಿಕ್ಷಣ ದಲ್ಲಿ ನೈತಿಕ ಮೌಲ್ಯ*
ಶಿಕ್ಷಣ ಬಹಳ ಮುಖ್ಯ. 21 ನೇ ಶತಮಾನ ಜ್ಞಾನದ ಶತಮಾನ. ಜ್ಞಾನಾರ್ಜನೆ ಬಹಳ ಮುಖ್ಯ ವಾಗುತ್ತದೆ. ಕಲಿಯುವಾಗ ಗುಣಾತ್ಮಕ ಹಾಗೂ  ನೈತಿಕ ವಿದ್ಯೆಯನ್ನು ಕಲಿಯಬೇಕು. ವಿಜ್ಞಾನ ಮತ್ತು ಗಣಿತವನ್ನು ಎಲ್ಲರೂ ಕಲಿಯಲೇಬೇಕು. ಎಲ್ಲರ ಜೀವನದಲ್ಲಿ ಇವು ಉಪಯೋಗಕ್ಕೆ ಬರುತ್ತವೆ. ವಿಜ್ಞಾನ ಮತ್ತು ಗಣಿತದಲ್ಲಿ  ಭದ್ರ ಬುನಾದಿ ಹಾಕಲು ಭಾಷೆಯಲ್ಲಿಯೂ ಭದ್ರ ಬುನಾದಿಯನ್ನು ಹಾಕಬೇಕು. ಮಾತೃಭಾಷೆ ಸಹಜವಾಗಿ ಬರುವ ಭಾಷೆ. ಅದನ್ನು ಅಚ್ಚುಕಟ್ಟಾಗಿ ಕಲಿತರೆ ನಮ್ಮ ಜ್ಞಾನ ಉತ್ತಮಗೊಳ್ಳುತ್ತದೆ. ಪ್ರಶ್ನೆ ಕೇಳುವ ಹಕ್ಕು ಮಕ್ಕಳಿಗಿದೆ. ಮಕ್ಕಳು ಪ್ರಶ್ನೆ ಕೇಳಬೇಕು. ಶಿಕ್ಷಕರು ಕಲಿತು ಮಕ್ಕಳ ಉತ್ಸಾಹವನ್ನು ಪ್ರೋತ್ಸಾಹ ಮಾಡಬೇಕು. ಮಕ್ಕಳ ಗ್ರಹಣಶಕ್ತಿ ಹೆಚ್ಚಿರುವುದರಿಂದ ನೈತಿಕ ಮೌಲ್ಯ, ಭಾಷೆ, ವಿಜ್ಞಾನ ಹಾಗೂ ಗಣಿತವನ್ನು ಮೂಲಭೂತವಾಗಿ ಪ್ರಾಥಮಿಕ ಶಿಕ್ಷಣದಲ್ಲಿ ಕಲಿಸಬೇಕು. ಉನ್ನತ ಶಿಕ್ಷಣ ಕಲಿಯುವಾಗ  ಮಕ್ಕಳಿಗೆ ಅನುಕೂಲವಾಗುತ್ತದೆ ಎಂದರು. 

*ತರ್ಕಬದ್ಧವಾಗಿ ಆಲೋಚಿಸಿ*

ಮಕ್ಕಳು ತರ್ಕಬದ್ಧವಾಗಿ ಯೋಚಿಸಬೇಕು. ಯಾಕೆ, ಏನು, ಎಲ್ಲಿ ಹೇಗೆ ಎಂದು ಪ್ರಶ್ನಿಸಬೇಕು. ಆಗ ತರ್ಕಬದ್ಧವಾಗಿ ಯೋಚಿಸಬಹುದು. ಬಾಯಿಪಾಠದ ಅಗತ್ಯವಿರುವುದಿಲ್ಲ. ಈ ಪಂಚಪ್ರಶ್ನೆಗಳು ಮಕ್ಕಳ ಯಶಸ್ಸಿನ ಮೆಟ್ಟಿಲುಗಳು. ಕಠಿಣ ಗಣಿತವನ್ನು ನಾಲ್ಕು ಜನರಿಗೆ ಹೇಳಿಕೊಟ್ಟರೆ, ಅದನ್ನು ಮರೆಯುವ ಪ್ರಮೇಯವೇ ಇರುವುದಿಲ್ಲ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರಲ್ಲದೇ  ಜ್ಞಾನ ಹಂಚಿಕೊಂಡಷ್ಟೂ ಗಟ್ಟಿಯಾದ ಜ್ಞಾನದ ಭಂಡಾರ ಉಳಿಯಲಿದೆ ಎಂದರು. 

*ಉಜ್ವಲ ಭವಿಷ್ಯ*
ಮಕ್ಕಳನ್ನು ಕಂಡಾಗ ಭಾರತ ಹಾಗೂ ಕನ್ನಡ ನಾಡಿನ ಭವಿಷ್ಯ ಉಜ್ವಲವಾಗಿದೆ ಎಂದು ಅನಿಸುತ್ತದೆ. ಮಕ್ಕಳಲ್ಲಿ  ಉತ್ಸಾಹ, ಕುತೂಹಲ ಬಹಳ ಮುಖ್ಯ. ಮಕ್ಕಳಲ್ಲಿ ಕುತೂಹಲ ಹಾಗೂ ಮುಗ್ಧತೆ ಎರಡನ್ನೂ ಜೀವಂತವಾಗಿಡುವ ಶಿಕ್ಷಕ  ನಂಬರ್ ಒನ್ ಗುರುವಾಗುತ್ತಾರೆ ಎಂದು ಅಭಿಪ್ರಾಯ ಪಟ್ಟರು. 

*ಸ್ಯಾಟಿಲೈಟ್ ನಿರ್ಮಾಣಕ್ಕೆ ಸರ್ಕಾರದ ಸಹಾಯ*
ವಿದ್ಯೆ ಶಕ್ತಿ ಮತ್ತು ಅವಕಾಶಗಳನ್ನು ನೀಡುತ್ತದೆ. ಎಷ್ಟೇ ದೊಡ್ಡ ಸ್ಥಾನ ದಲ್ಲಿದ್ದರೂ  ವಿದ್ಯೆ ಕಲಿಸಿದ ವಿನಯವನ್ನು ಬಿಟ್ಟುಕೊಡಬಾರದು. ಇತರರಿಗಾಗಿ ಬದುಕಿದಾಗ ಸುಖ, ಶಾಂತಿ,  ನೆಮ್ಮದಿಯ ಬದುಕು ನಮ್ಮದಾಗುತ್ತದೆ. ನಾಡಿನ ಭವ್ಯ ಭವಿಷ್ಯಕ್ಕೆ  ತಂತ್ರಜ್ಞಾನ,  ನೈತಿಕತೆ, ವಿಜ್ಞಾನ ಸಹಾಯಕ. ಶಾಲೆಗಳಲ್ಲಿ ಬಹುಪಯೋಗಿ  ಸ್ಯಾಟಿಲೈಟ್ ನಿರ್ಮಾಣ ಮಾಡುವ ಅವಕಾಶವಿದ್ದು, ಅಗತ್ಯವಿರುವ ತರಬೇತಿ, ವಿನ್ಯಾಸಕ್ಕೆ ತಗಲುವ ವೆಚ್ಚವನ್ನು ರಾಜ್ಯ ಸರ್ಕಾರ  ಭರಿಸಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. 

*ಮಲ್ಲೇಶ್ವರಂ ಎಂಬ  ಕುಟುಂಬದ ಮುಖ್ಯಸ್ಥ*

ಸಿ.ಎನ್. ಅಶ್ವಥ್ ನಾರಾಯಣ್ ಅವರು ಮಲ್ಲೇಶ್ವರಂ ಎಂಬ  ಕುಟುಂಬದ ಮುಖ್ಯಸ್ಥನಂತೆ ಕೆಲಸ ಮಾಡುತ್ತಿದ್ದಾರೆ. ಅಂತ:ಕರಣ ಎನ್ನುವುದು ಬಹಳ ಮುಖ್ಯ. ನಮಗೆ ಹುಟ್ಟಿದ ಮಕ್ಕಳು ಮಾತ್ರ ನಮ್ಮ ಮಕ್ಕಳು ಎನ್ನುವುದು ಸಂಕುಚಿತ ಭಾವನೆ. ನನ್ನ ಕ್ಷೇತ್ರದ ಎಲ್ಲಾ ಮಕ್ಕಳೂ ನನ್ನ ಮಕ್ಕಳು ಎಂದು ತಿಳಿದು, ಆ ಮಕ್ಕಳ  ಭವಿಷ್ಯಕ್ಕೆ ಶಾಲೆಗಳ ಅಭಿವೃದ್ಧಿ ಮಾಡುವುದು. ಕೇವಲ ಕಟ್ಟಡಗಳು ಮಾತ್ರವಲ್ಲ ಕಲಿಕಾ ವ್ಯವಸ್ಥೆ, ಆಧುನೀಕರಣ, ಡಿಜಿಟಲೀಕರಣ, ಅಗತ್ಯವಿರುವ ವೈಫೈ, ಬ್ರಾಡ್ ಬ್ಯಾಂಡ್ ಮುಂತಾದ ವ್ಯವಸ್ಥೆ, ಶಿಕ್ಷಕರನ್ನು ತಯಾರಿಸಿ,ಕಲಿಕೆಯಲ್ಲಿ ಆಸಕ್ತಿ ಹುಟ್ಟಿಸಿ ಮಕ್ಕಳ ಬುದ್ಧಿಶಕ್ತಿ, ಪ್ರತಿಭೆಯನ್ನು ಗುರುತಿಸಿ  ಪ್ರೋತ್ಸಾಹಿಸುವ ಕೆಲಸ ಆಗುತ್ತಿದೆ ಇಡೀ ರಾಜ್ಯಕ್ಕೇ ಈ ಶಾಲೆಯನ್ನು ಮಾದರಿಯಾಗಿಸಲಾಗುವುದು ಎಂದರು.
[29/10, 1:59 PM] Cm Ps: ಬೆಂಗಳೂರು, ಅಕ್ಟೋಬರ್ 29: ಮಾನ್ಯ *ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು* ಲಿಟ್‍ ಸ್ಕಿಲ್ಸ್  *ಲರ್ನಿಂಗ್* *ಇಂಡಿಯಾ ಮತ್ತು ನ್ಯೂಸ್ 1st ಕನ್ನಡ ಮತ್ತು *ರಿಪಬ್ಲಿಕ್ ಮೀಡಿಯಾ ನೆಟ್‍ವರ್ಕ್* ಇವರುಗಳ ಸಹಯೋಗದೊಂದಿಗೆ ಹಲಸೂರು ನಲ್ಲಿರುವ *ಹೋಟೆಲ್ ಕಾನ್ರಾಡ್* ಇಲ್ಲಿ ಆಯೋಜಿಸಿರುವ  *“ಶಿಕ್ಷಣದಲ್ಲಿ ನಾಯಕತ್ವಕ್ಕಾಗಿ ಅಂತರರಾಷ್ಟ್ರೀಯ ಶೃಂಗಸಭೆ*ಯನ್ನು *(International Summit for Leadership in Education (ISLE)*) ಉದ್ಘಾಟಿಸಿ *ಮಾತನಾಡಿದರು*.
[29/10, 4:03 PM] Cm Ps: ಕನ್ನಡ ಚಲನಚಿತ್ರ ನಟ ಶಿವರಾಜಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಸಿಎಂ ರೇಸ್ ಕೋರ್ಸ್ ನಿವಾಸದಲ್ಲಿ  ಭೇಟಿ ಮಾಡಿ ಸೌಹಾರ್ದಯುತ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಹಾಜರಿದ್ದರು.
[29/10, 4:27 PM] Cm Ps: *ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಅಕ್ಟೋಬರ್ 29: ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಅವರು ಇಂದು  ಶಿಕ್ಷಣಕ್ಕಾಗಿ ನಾಯಕತ್ವ ಕುರಿತ ಅಂತರರಾಷ್ಟ್ರೀಯ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
 
 ಈ ಕಾರಣಕ್ಕಾಗಿಯೇ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ತೀರ್ಮಾನಿಸಲಾಯಿತು. ಉನ್ನತ ಶಿಕ್ಷಣದಿಂದ ಇದನ್ನು ಪ್ರಾರಂಭಿಸಲಾಗಿದ್ದು, ಈ ವರ್ಷ ಮಾಂಟೆಸರಿಯಿಂದ ಪ್ರಾರಂಭಿಸಲಾಗುತ್ತಿದೆ. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಕರ್ನಾಟಕ.  ರಾಜ್ಯದ ಮಕ್ಕಳು ಎಲ್ಲಾ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮಥ್ರ್ಯವನ್ನು ಬೆಳಸಿಕೊಂಡು ಜ್ಞಾನವಂತರಾಗಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.

ಶಿಕ್ಷಣ ಮನುಷ್ಯನ ಸಹಜ ಗುಣಗಳಲ್ಲಿ ಒಂದು.  ಅದು  ಔಪಚಾರಿಕ ಅಥವಾ ಅನೌಪಚಾರಿಕ ಶಿಕ್ಷಣವಾಗಿರಬಹುದು, ಮನುಷ್ಯನ  ಜ್ಞಾನದಾಹ  ಹಲವಾರು ಶತಮಾನಗಳದ್ದು.  ಆತನ ಎಲ್ಲಾ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಲು ಅವನು ಸತತ ಪ್ರಯತ್ನ ಮಾಡುತ್ತಾನೆ. ಆದರೆ, ಪರಿಪೂರ್ಣ ಶಿಕ್ಷಣ ಇದಕ್ಕೆ ಉತ್ತರವಲ್ಲ.  ಎಲ್ಲಾ ಸಮಸ್ಯೆಗಳಿಗೆ ಅದು ಉತ್ತರವನ್ನು ದೊರಕಿಸಿಕೊಡುವುದಿಲ್ಲ. ಸಮಸ್ಯೆಗಳು ತಾತ್ಕಾಲಿಕವಾದವು. ಶಿಕ್ಷಣ ನೀತಿಯು ಸುಲಭವಾಗಿದ್ದು, ಚಲನಶೀಲವಾಗಿರಬೇಕು. ಇದನ್ನೇ ಎಲ್ಲಾ ಶಿಕ್ಷಣ ತಜ್ಞರು ಪ್ರತಿಪಾದಿಸಿದ್ದರು. ಭಾರತದಲ್ಲಿ ಸಾಂಪ್ರದಾಯಿಕ ಮಾದರಿಯ ಶಿಕ್ಷಣವಿದೆ. ಮಾನವನ ಮೆದುಳಿನ ಪರಿಪೂರ್ಣ ಸಾಮಥ್ರ್ಯವನ್ನು ಬಳಕೆ ಮಾಡಿಲ್ಲವಾದ್ದರಿಂದ ಇನ್ನೂ ಹೆಚ್ಚಿನ ಜ್ಞಾನವನ್ನ ಪಡೆಯಲು ಸಾಧ್ಯವಿದೆ ಎಂದರು.
 
*ಹೊಂದಾಣಿಕೆಯ ಗುಣ*
ಮನುಷ್ಯ ಎಂಥ ಸ್ಥಿತಿಯಲ್ಲಿಯೂ  ಹೊಂದಿಕೊಂಡು ಬದುಕಬಲ್ಲ. ಈ ಹೊಂದಿಕೊಳ್ಳುವ ಗುಣವನ್ನೇ ನಾವು ಶಿಕ್ಷಣದಲ್ಲಿ ಬಳಕೆ ಮಾಡಿಕೊಳ್ಳಬೇಕು. ಶಿಕ್ಷಣ ನೀತಿ ಹೊಂದಕೊಳ್ಳಲು ಸಾಧ್ಯವಿರುವಂಥ ಅಂಶಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ಶಿಕ್ಷಣದ ವೈವಿಧ್ಯತೆಗೆ  ಹೊಂದಿಕೊಳ್ಳುವುದು ಹಾಗೂ ಜ್ಞಾನವನ್ನು ಅತ್ಯಂತ ಸುಲಭವಾಗಿ ವರ್ಗಾಯಿಸುವ ಅಂಶವಿರಬೇಕು. ಆಗ ಮಾತ್ರ ಒಂದು ಮಟ್ಟದಿಂದ ಇನ್ನೊಂದು ಮಟ್ಟಕ್ಕೆ ಸುಲಭವಾಗಿ ಹೊಂದಿಕೊಳ್ಳಲು ಸಾಧ್ಯ.  ನೂತನ ಶಿಕ್ಷಣ ನೀತಿಯಲ್ಲಿ ಈ ಹೊಂದಾಣಿಕೆಯ ಅಂಶವಿದೆ. ಹತ್ತು, ಹನ್ನೆರಡನೇ ತರಗತಿಗಳಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲು ಅಪಾರ ಅವಕಾಶಗಳಿವೆ. ಒಂದು ವಿಷಯದಿಂದ ಇನ್ನೊಂದು ವಿಷಯಕ್ಕೆ ವರ್ಗಾವಣೆ ಮಾಡಿಕೊಂದಾಗ ಹೊಂದಾಣಿಕೆಯನ್ನು ಸುಲಭವಾಗಿಸಲಾಗಿದೆ ಎಂದರು.

*ನಮ್ಮ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಬೇಕು*
 21 ನೇ ಶತಮಾನ ಜ್ಞಾನದ ಶತಮಾನ. ಜ್ಞಾನವುಳ್ಳವರು ಜಗತ್ತನ್ನು ಆಳುತ್ತಾರೆ.  ಭಾರತ ಎಲ್ಲಾ ಜ್ಞಾನಗಳಿಗೆ ತಾಯಿ. ಜ್ಞಾನ ಕೇಂದ್ರಿತವಾದ ಸಮಾಜ ನಮ್ಮದು.  ಪ್ರಾಚೀನ ಕಾಲದಲ್ಲಿಯೂ ಜ್ಞಾನಕ್ಕೆ ಸಂಬಂಧಿಸಿದ ಪ್ರಯೋಗಗಳು ಇಲ್ಲಿ ನಡೆದಿವೆ. ಬಹಳಷ್ಟು ಸಾಧನೆಗಳನ್ನು ಪ್ರಾಚೀನ ಭಾರತ ಮಾಡಿದೆ. ಇಂದು ಜಗತ್ತು ಒಂದು ಹಳ್ಳಿಯಾಗಿದೆ.  ಸರ್ಕಾರಿ ಶಾಲೆಯ ವಿದ್ಯಾರ್ಥಿ ವಿವಿಧ ದೇಶಗಳ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಬೇಕಾದರೆ, ನಮ್ಮ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವಂತೆ ತಯಾರು ಮಾಡಬೇಕು.  ಸ್ಪರ್ಧೆಗಳು ಇಂದು ಜಾಗತಿಕ ಮಟ್ಟದಲ್ಲಿವೆ. ಆದ್ದರಿಂದಲೇ ನಮ್ಮ ಪ್ರಧಾನಮಂತ್ರಿಗಳು ನೂತನ ಶಿಕ್ಷಣ ನೀತಿ ಸೇರಿದಂತೆ ಕೌಶಲ್ಯಾಭಿವೃದ್ಧಿ,  ಮೇಕ್ ಇನ್ ಇಂಡಿಯಾ, ವಿಜ್ಞಾನಿಗಳಿಗೆ ನೆರವು, ವಿಜ್ಞಾನಕ್ಕೆ ಒತ್ತು ನೀಡಿದ್ದಾರೆ. ನಮ್ಮ ಪ್ರಧಾನಮಂತ್ರಿಗಳು ವಿಜ್ಞಾನ ಮತ್ತು ಆಧ್ಯಾತ್ಮ ಎರಡರ ಕುರಿತು ಮಹತ್ವ ನೀಡಿದ್ದಾರೆ ಎಂದರು.

*ಕರ್ನಾಟಕ ಶಿಕ್ಷಣ ಮತ್ತು ಜ್ಞಾನದ ಕೇಂದ್ರ ಸ್ಥಾನ*
ಖಾಸಗಿ ವಲಯವೂ ಸಹ ಶಿಕ್ಷಣವನ್ನು ನೀಡುವುದರಲ್ಲಿ ಹಾಗೂ ಕೌಶಲ್ಯ ಒದಗಿಸುವಲ್ಲಿ ಮಹತ್ವದ ಪಾತ್ರವನ್ನು  ವಹಿಸಿದೆ. ಮಲ್ಲೇಶ್ವರಂ ಸರ್ಕಾರಿ ಶಾಲೆಯನ್ನೂ ಸಂಪೂರ್ಣವಾಗಿ ಡಿಜಿಟಲೀಕರಣ ಮಾಡಿದ್ದು, ರಾಜ್ಯಕ್ಕೇ ಮಾದರಿಯಾಗಿದೆ. ಖಾಸಗಿ ವಲಯದವರೂ ಇದಕ್ಕೆ ಸಹಕರಿಸಿದ್ದಾರೆ. ಯಶಸ್ಸು ಮತ್ತು ಸಾಧನೆ ಎರಡೂ ವಿಭಿನ್ನ. ಯಶಸ್ಸು ಮಾರ್ಗವಾದರೆ, ಸಾಧನೆ ಒಂದು ಸಿದ್ದಿ.  ಇದು ಪರಿಪೂರ್ಣವಾದರೆ, ಸಿದ್ದಿಸಿರುವುದು ರಾಜ್ಯ, ರಾಷ್ಟ್ರದ ಸಾಧನೆಯಾಗುತ್ತದೆ ಎಂದರಲ್ಲದೇ  ಕರ್ನಾಟಕ ರಾಜ್ಯವನ್ನು  ಶಿಕ್ಷಣ 
ಮತ್ತು ಜ್ಞಾನದ ಕೇಂದ್ರ ಸ್ಥಾನವನ್ನಾಗಿಸಲು ಸಾಧ್ಯವಿದೆ. ಅದಕ್ಕಾಗಿ ಈ ವರ್ಷ ಅತ್ಯಧಿಕ ಮೊತ್ತವನ್ನು ಬಜೆಟ್ ನಲ್ಲಿ ಮೀಸಲಿರಿಸಿದೆ. 8000 ಶಾಲಾ ಕೊಠಡಿಗಳನ್ನು 6 ತಿಂಗಳ ಅವಧಿಯಲ್ಲಿ ನಿರ್ಮಿಸಲಾಗುತ್ತಿದೆ. ಆಗಸ್ಟ್ 15 ರೊಳಗೆ  ಸರ್ಕಾರಿ ಶಾಲೆಗಳಲ್ಲಿ  ಶೌಚಾಲಯ, ಪ್ರತಿ ಬ್ಲಾಕ್‍ನಲ್ಲಿ ಆಧುನಿಕವಾದ ಡಿಜಿಟಲ್  ಶಾಲೆಯನ್ನು ನಿರ್ಮಿಸಲಾಗುವುದು ಎಂದರು.  ಕಲಿಕೆಯ ಆಸಕ್ತಿ ಎಂದಿಗೂ ಇರಬೇಕು.  ಶಾಲೆಗಳಲ್ಲಿ ಪಠ್ಯಕ್ರಮವಿರುತ್ತದೆ. ಆದರೆ ಜೀವನದಲ್ಲಿ ಮೊದಲು ಪರೀಕ್ಷೆ ನಂತರ ಕಲಿಕೆ ಉಂಟಾಗುತ್ತದೆ.  ಇದಕ್ಕೆ ತಯಾರಾಗಲು ಸೂಕ್ತ ಶಿಕ್ಷಣ ಅಗತ್ಯ. ಇದನ್ನು ನೂತನ  ಶಿಕ್ಷಣ ನೀತಿ ಸಾಧ್ಯವಾಗಿಸುತ್ತದೆ ಎಂದರು.
 
ಐ.ಎಸ್.ಎಲ್.ಇ ಪ್ರಶಸ್ತಿಯನ್ನು ಅತ್ಯುತ್ತಮ  ಸಾಧಕರಿಗೆ ನೀಡಲಾಗುತ್ತಿದೆ. ಇನ್ನಷ್ಟು ಸಾಧಿಸಲು ಈ ಪ್ರಶಸ್ತಿ ಸ್ಪೂರ್ತಿಯಾಗಿದೆ.  ಈ ಪ್ರಶಸ್ತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕು. ನಮ್ಮ ಸರ್ಕಾರ ಈ ಎಲ್ಲಾ ಕೆಲಸಗಳಿಗೆ ಬೆಂಬಲ ಒದಗಿಸಲಿದೆ ಎಂದರು.  

ಇಸ್ರೋ ಖ್ಯಾತ ವಿಜ್ಞಾನಿ ಪದ್ಮಭೂಷಣ  ನಂಬಿ ನಾರಾಯಣ್, ಪ್ರಧಾನಮಂತ್ರಿಗಳ ಆರ್ಥಿಕ  ಸಲಹಾ ಮಂಡಳಿಯ ಜಂಟಿ ಕಾರ್ಯದರ್ಶಿ ಪವನ್ ಕುಮಾರ್ ಜೈನ್, ನ್ಯೂಸ್ ಫಸ್ಟ್ ಮುಖ್ಯಸ್ಥ ರವಿಕುಮಾರ್, ಹ್ಯೂಡಿ ಟೆಕ್ ನ ಕಾರ್ತಿಕ ನಾರಾಯಣ್, ಸಮಾಲೋಚಕ ಆಂಡಿ ಕೌಲ್ ಉಪಸ್ಥಿತರಿದ್ದರು.
[29/10, 4:40 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ. ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ  ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪಿ. ಮಣಿವಣ್ಣನ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ರೂಪ್ ಕೌರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್.ಶ್ರೀಕರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[29/10, 5:51 PM] Cm Ps: *ವಿದ್ಯಾರ್ಥಿ ನಿಲಯ ಕಾಮಗಾರಿ ಶೀಘ್ರ ಪ್ರಾರಂಭಕ್ಕೆ ಮುಖ್ಯಮಂತ್ರಿ ಸೂಚನೆ*
ಬೆಂಗಳೂರು, ಅಕ್ಟೋಬರ್ 29- 
ಮುಂದಿನ ಸಚಿವ ಸಂಪುಟ ಸಭೆಯ ನಂತರ ಆಯವ್ಯಯದಲ್ಲಿ ಘೋಷಿಸಿರುವ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ, 100 ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳು ಹಾಗೂ 12 ವಸತಿ ಶಾಲೆಗಳ ನಿರ್ಮಾಣಕ್ಕೆ ಚಾಲನೆ ನೀಡಲು ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ. ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
400 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 5 ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಂದ ಅನುದಾನ ಒಟ್ಟುಗೂಡಿಸಿ, ವೆಚ್ಚ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಕ್ರಮ ವಹಿಸುವಂತೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಯೋಜನೆಯಡಿ 100 ಅಂಬೇಡ್ಕರ್ ವಸತಿ ಶಾಲೆಗಳು ಹಾಗೂ 12 ಕ್ರೈಸ್ ವಸತಿ ಶಾಲೆಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಲಭ್ಯವಿರುವ 243 ಕೋಟಿ ರೂ. ಬಳಸಿಕೊಂಡು ಕಾಮಗಾರಿ ಪ್ರಾರಂಭಿಸುವಂತೆ ಹಾಗೂ ಯೋಜನೆಯ ಪ್ರಗತಿಗನುಸಾರವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿಯೂ ಎಸ್.ಸಿ.ಪಿ. / ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆ ಮಾಡಿರುವ ಅನುದಾನವನ್ನು ನಿಗದಿತ ವೇಳಾಪಟ್ಟಿಯಂತೆ ವೆಚ್ಚ ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪಿ. ಮಣಿವಣ್ಣನ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ರೂಪ್ ಕೌರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್.ಶ್ರೀಕರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[29/10, 6:28 PM] Cm Ps: *ದಲಿತ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನ ಹಂಚಿಕೆ ಕೊರತೆ ಭರ್ತಿ ಮಾಡಲು ಮುಖ್ಯಮಂತ್ರಿ ಸೂಚನೆ*
ಬೆಂಗಳೂರು, ಅಕ್ಟೋಬರ್ 29-
ದಲಿತ ಉದ್ದಿಮೆದಾರರಿಗೆ 2009ರಲ್ಲಿ ನಿಗದಿ ಪಡಿಸಿದ ಮೀಸಲಾತಿಯಂತೆ ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿನ ಕೊರತೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ತಮ್ಮನ್ನು ಭೇಟಿಯಾದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ನಿಯೋಗದ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿ, ಈ ವಿಷಯ ತಿಳಿಸಿದರು. ಇದಕ್ಕಾಗಿ ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ  ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಜೊತೆಯಾಗಿ ಲ್ಯಾಂಡ್ ಆಡಿಟ್ ಮಾಡಿ ವರದಿ ಸಲ್ಲಿಸಿ, ಕೊರತೆಯಾಗಿರುವ ಭೂಮಿ ಹಂಚಿಕೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನವನ್ನು ಶೇ. 60 ರಷ್ಟು ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಹಾಗೂ ಶೇ. 40 ರಷ್ಟು ರಾಜ್ಯಮಟ್ಟದ ಸಮಿತಿಯಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಆದರೆ ದಲಿತ ಉದ್ದಿಮೆದಾರರಲ್ಲಿ ಬಹುತೇಕ ಮಂದಿಯ ಯೋಜನಾ ವೆಚ್ಚ 15 ಕೋಟಿಗಿಂತ ಕಡಿಮೆ ಇರುವುದರಿಂದ ಜಿಲ್ಲಾ ಮಟ್ಟದಲ್ಲಿನ ಹಂಚಿಕೆಯ ಪ್ರಮಾಣವನ್ನು ಹೆಚ್ಚಿಸುವಂತೆ ಸಂಘದವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಮಟ್ಟದಲ್ಲಿ ಶೇ. 70 ರಷ್ಟು ಹಾಗೂ ರಾಜ್ಯ ಮಟ್ಟದಲ್ಲಿ ಶೇ. 30 ರಷ್ಟು ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕೆ.ಎಸ್.ಎಫ್.ಸಿ.ಯಲ್ಲಿ ಸಾಲ ಸೌಲಭ್ಯ ಪಡೆಯುವಾಗ ಸಮಾನಾಂತರ ಭದ್ರತೆಗೆ ಕೈಗಾರಿಕಾ ಭೂಮಿಯ ವಾಸ್ತವ ಬೆಲೆಯನ್ನು ಪರಿಗಣಿಸುವಂತೆ ಸಂಘದವರು ಮಾಡಿದ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ದಲಿತ ಉದ್ದಿಮೆದಾರರ ಕೈಗಾರಿಕೆಯಲ್ಲಿ ಕನಿಷ್ಠ 10 ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದರೆ ವೇತನ ಪ್ರೋತ್ಸಾಹಕವನ್ನು ನೀಡುವಂತೆ ಸಂಘವು ಮಾಡಿದ ಮನವಿಯನ್ನು ಮುಂದಿನ ಆಯವ್ಯಯದಲ್ಲಿ ಪರಿಶೀಲಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಅಧ್ಯಕ್ಷ ಎಲ್. ಹನುಮಂತಯ್ಯ, ಕಾರ್ಯಾಧ್ಯಕ್ಷ ಸಿ.ಜಿ. ಶ್ರೀನಿವಾಸನ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ರೂಪ್ ಕೌರ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
[29/10, 6:28 PM] Cm Ps: ಬೆಂಗಳೂರು, ಅಕ್ಟೋಬರ್ 29-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ನಿಯೋಗದ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ, ಕಾರ್ಯಾಧ್ಯಕ್ಷ ಸಿ.ಜಿ. ಶ್ರೀನಿವಾಸನ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ರೂಪ್ ಕೌರ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
[29/10, 6:36 PM] Cm Ps: *ಬೆಂಗಳೂರು* , ಅಕ್ಟೋಬರ್ 29: *ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು*  *ಹೊಟೇಲ್ ಐ.ಟಿ.ಸಿ.* *ಗಾರ್ಡೇನಿಯಾ* , ರೆಸಿಡೆಸ್ಸಿ ರಸ್ತೆ ಇಲ್ಲಿ ಆಯೋಜಿಸಿರುವ *"ರಾಕೆಟ್ ಹಡಗಿನಲ್ಲಿ" (Onto a Rocket Ship) ಪುಸ್ತಕವನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.*

Post a Comment

Previous Post Next Post