ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ
ಬೆಂಗಳೂರು: ಪ್ರತಿ ವಿಷಯಕ್ಕೂ ಸಿಎಂ ರಾಜೀನಾಮೆ ಕೇಳುವುದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಾಲಿಶ ವರ್ತನೆ; ಇದು ಕಾಂಗ್ರೆಸ್ ಪಕ್ಷದ ಟೂಲ್ಕಿಟ್ನ ಒಂದು ಭಾಗ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಖಂಡಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ರಾಜೀನಾಮೆ ಕೇಳುವುದು ಹುಡುಗಾಟಿಕೆಯೇ ಎಂದು ಕೇಳಿದರು. ಮತದಾರರ ಜಾಗೃತಿ ಮತ್ತು ಮಾಹಿತಿ ಸಂಗ್ರಹಕ್ಕೆ ಸಂಬಂಧಿಸಿದ ವಿಷಯದಲ್ಲಿ ಮುಖ್ಯಮಂತ್ರಿಯವರ ರಾಜೀನಾಮೆ ನೀಡುವುದು ಅಥವಾ ಕೇಳುವುದು ದೂರದ ಸಂಗತಿ ಎಂದು ಅವರು ಸ್ಪಷ್ಟಪಡಿಸಿದರು.
ಇದರಲ್ಲಿ ಏನು ಅವ್ಯವಹಾರ ಆಗಿದೆ? ಎಷ್ಟು ಕೋಟಿ ಆಗಿದೆ? ಎಂದು ಕೇಳಿದ ಅವರು, “ನೀವೇ ಅನುಮತಿ ಕೊಟ್ಟಿದ್ದೀರಿ. ಇದರಲ್ಲೇನೂ ಅಕ್ರಮ ನಡೆದಿಲ್ಲ. ಬಿಎಲ್ಒಗಳಿಗೆ ಗುರುತು ಚೀಟಿ ಕೊಟ್ಟದ್ದು ಗೊತ್ತಾದೊಡನೆ ಆದೇಶವನ್ನು ಹಿಂದಕ್ಕೆ ಪಡೆದಿದ್ದೇವೆ’ ಎಂದು ತಿಳಿಸಿದರು. ಕಾಂಗ್ರೆಸ್ ನವರು ತಮ್ಮಲ್ಲಿರುವ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.
ಮತದಾರರ ಮಾಹಿತಿ ಸಂಗ್ರಹ ಮತ್ತು ಮತದಾರರ ಜಾಗೃತಿಯ ಕಾರ್ಯವನ್ನು ‘ಚಿಲುಮೆ’ ಸಂಸ್ಥೆಗೆ 2018ರಲ್ಲಿ ಸಮ್ಮಿಶ್ರ ಸರಕಾರ ಕೊಟ್ಟಿತ್ತು. ಟೆಂಡರನ್ನು ಕರೆಯದೆ ಈ ಕೆಲಸವನ್ನು ನೀಡಲಾಗಿತ್ತು. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಈ ಕೆಲಸ ನೀಡಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.
ಹಾಗಿದ್ದರೆ ರಾಜೀನಾಮೆ ಕೊಡಬೇಕಾದವರು ಯಾರು? ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ಕೊಡಬೇಕು. ಇದರಲ್ಲೇನೂ ಅವ್ಯವಹಾರ ಆಗಿಲ್ಲ. ಬಿಎಲ್ಒಗಳಿಗೆ ಐಡಿ ಕೊಟ್ಟ ವಿಚಾರ ಗೊತ್ತಾದೊಡನೆ ಚಿಲುಮೆ ಸಂಸ್ಥೆಗೆ ಕೊಟ್ಟಿದ್ದ ಆದೇಶವನ್ನು ಬಿಬಿಎಂಪಿ ಹಿಂದಕ್ಕೆ ಪಡೆದಿದೆ ಎಂದು ಸ್ಪಷ್ಟಪಡಿಸಿದರು.
2018ರಲ್ಲಿ ಒಂದು ದಿನಕ್ಕೆ 5 ಸಾವಿರ ರೂಪಾಯಿಯಂತೆ ಈ ಸಂಸ್ಥೆಗೆ ಕೊಟ್ಟಿದ್ದಾರೆ. ಬಿಬಿಎಂಪಿ ಕಡೆಯಿಂದ ಲ್ಯಾಪ್ ಟಾಪ್ ಕೊಟ್ಟಿದ್ದು, ಜಾಗೃತಿ ಮೂಡಿಸಲು ಬೇಕಿದ್ದ ಕರಪತ್ರಗಳು, ಬ್ಯಾನರ್ ಗಳು, ಶಾಮಿಯಾನ ಮೈಕ್ ವ್ಯವಸ್ಥೆಗೆ ಸ್ವಲ್ಪ ಹಣ ಖರ್ಚು ಮಾಡಿದ್ದಾರೆ. ಇದರಲ್ಲಿ ಅವ್ಯವಹಾರ ಆಗಿದ್ದರೆ, ನ್ಯೂನತೆ ಇದ್ದರೆ ಪೊಲೀಸ್ ಕಮೀಷನರ್ ಗೆ ದೂರು ಕೊಡಲಾಗುತ್ತದೆ. ಅಗತ್ಯ ಕ್ರಮ ತೆಗೆದುಕೊಳ್ಳಲು ಸರಕಾರ ನಿರ್ಧರಿಸಿದೆ ಎಂದು ವಿವರಿಸಿದರು.
2018ರಲ್ಲಿ ಆದೇಶ ನೀಡಿದಾಗ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಾಳೆಹಣ್ಣು ತಿನ್ನುತ್ತಿದ್ದರೇ ಎಂದೂ ಅವರು ಪ್ರಶ್ನಿಸಿದರು. ಅಕ್ರಮದ ತನಿಖೆ ಆಗಲಿ; ಉಪ್ಪು ತಿಂದವನು ನೀರು ಕುಡಿಯಲಿ ಎಂದು ಅವರು ಈ ಸಂಬಂಧ ಪ್ರಶ್ನೆಗೆ ಉತ್ತರ ನೀಡಿದರು.
ಮೈಸೂರಿನ ಪ್ರತಾಪಸಿಂಹ ಮತ್ತು ರಾಮದಾಸ್ ಅವರ ಕುರಿತ ಅನೇಕ ವಿಚಾರಗಳು ರಾಜ್ಯಾಧ್ಯಕ್ಷರ ಗಮನಕ್ಕೆ ಬಂದಿವೆÉ. ಅವರೊಂದಿಗೆ ಮಾತನಾಡಿ ಸಮಸ್ಯೆಯನ್ನು ಪರಿಹರಿಸಲಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಮತದಾರರ ಪಟ್ಟಿ ಎಂಬುದು ಸಾರ್ವಜನಿಕ ದಾಖಲೆ. ಇದರಲ್ಲಿ ಮಾಹಿತಿ ಸೋರಿಕೆ ಆಗಲು ಏನಿದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ನಿನ್ನೆ ಆದೇಶ ಹಿಂಪಡೆದ ಮೇಲೆ ಇವತ್ತು ಪತ್ರಿಕಾಗೋಷ್ಠಿ ಮಾಡಿದ್ದಾರೆ ಎಂದು ಅವರು ಟೀಕಿಸಿದರು. ಸರಕಾರ ಆದೇಶ ರದ್ದು ಮಾಡಿದ್ದನ್ನು ಮೆಚ್ಚಿಕೊಳ್ಳಬೇಕಿತ್ತು. ಅದರ ಬದಲಾಗಿ ರಾಜೀನಾಮೆ ಕೊಡಲು ಕೇಳುತ್ತಿದ್ದಾರೆ ಎಂದರು. ಈ ವಿಷಯದಲ್ಲಿ ನಾವು ತನಿಖೆ ಮಾಡುತ್ತೇವೆ ಎಂದ ಅವರು, ಮಾತು ಮಾತಿಗೆ 40 ಶೇಕಡಾ ಎನ್ನುವ ನಿಮ್ಮ ಯೋಗ್ಯತೆಗೆ ಅದನ್ನು ಪ್ರೂವ್ ಮಾಡಲು ಸಾಧ್ಯವಾಯಿತೇ ಎಂದು ಕೇಳಿದರು.
ಸಿದ್ದರಾಮಯ್ಯರನ್ನು ಮೊದಲು ಬಂಧಿಸಲು ಒತ್ತಾಯ
2018ರಲ್ಲಿ ಮೊದಲು ಆದೇಶ ಕೊಟ್ಟಿದ್ದು, ಅದನ್ನು ಮುಂದುವರಿಸಿಕೊಂಡು ಬಂದಿದ್ದಾರೆ ಎಂದ ಛಲವಾದಿ ನಾರಾಯಣಸ್ವಾಮಿ ಅವರು, ಸಿದ್ದರಾಮಯ್ಯರವರು ಜಾತಿ ಗಣತಿಗೆ ರೂ. 200 ಕೋಟಿ ಕೊಟ್ಟಿದ್ದೇನೆ ಎಂದಿದ್ದರು. 158 ಕೋಟಿ ಖರ್ಚಾಗಿದೆ. ಆದರೆ, ಆ ವರದಿಯನ್ನೇ ಅಂಗೀಕರಿಸಿಲ್ಲ. ಅದು ಏನಾಗಿದೆ? ಇದು ಜನರ ಹಣ. ಸಿದ್ದರಾಮಯ್ಯರನ್ನು ಮೊದಲು ಬಂಧಿಸಿ ಎಂದು ಮುಖ್ಯಮಂತ್ರಿಯವರನ್ನು ಆಗ್ರಹಿಸಿದರು. ಆಗ ಎಲ್ಲವೂ ಹೊರಗೆ ಬರುತ್ತದೆ ಎಂದರು.
ಪುರಾವೆ ಇಲ್ಲದೆ ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರು ನಿರುದ್ಯೋಗಿಯಾಗಿ ಬಹಳ ಬಿಡುವಾಗಿದ್ದಾರೆ. ಅವರ ಅಲೆಮಾರಿತನಕ್ಕೆ ನಾವೇನು ಮಾಡಲು ಸಾಧ್ಯ? ಅವರು ಕಂಗೆಟ್ಟು ಏನೇನೋ ಆಪಾದನೆ ಮಾಡುತ್ತಾರೆ. ಇದೊಂದು ಟೂಲ್ ಕಿಟ್. ಈ ಟೂಲ್ ಕಿಟ್ ಗೆ ನಾವು ಬೆದರುವುದಿಲ್ಲ. ಹೆದರುವವರೂ ಅಲ್ಲ; ಇದಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದು ನುಡಿದರು.
ಮುಖ್ಯಮಂತ್ರಿಯವರು ಯಾರ ಕಣ್ತಪ್ಪಿಸಿ ಎಲ್ಲೂ ಹೋಗಲಾಗುವುದಿಲ್ಲ. ಸಿಎಂ ಅವರು 24-7 ಕೆಲಸ ಮಾಡುತ್ತಾರೆ. ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಎಲ್ಲಿ ಇರುತ್ತಿದ್ದರೆಂದು ಎಲ್ಲರಿಗೂ ಗೊತ್ತಿದೆ. ಮುಕುಡಪ್ಪ ಅವರು ಎಲ್ಲ ಹೇಳಿದ್ದಾರೆ. ವೈಯಕ್ತಿಕ ವಿಚಾರಗಳಿಗೆ ನಾವು ಹೋಗುವುದಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
[18/11, 11:42 AM] +91 83103 04771: 18-11-2022
ಗೆ,
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಶ್ರೀಮತಿ ಗಿರಿಜಾ ಮಠಪತಿ ಅವರ ನಿಧನಕ್ಕೆ
ನಳಿನ್ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕಿ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿಯ ಮಾಜಿ ಸದಸ್ಯೆ ಶ್ರೀಮತಿ ಗಿರಿಜಾ ಮಠಪತಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಬೆಳಗಾವಿ ಜಿಲ್ಲೆಯವರಾದ ಅವರು ಸಮಾಜಸೇವಕರೂ ಆಗಿದ್ದರು. ಅವರ ನಿಧನದಿಂದ ಪಕ್ಷಕ್ಕೆ ಅಪಾರ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ. ಮೃತರ ಕುಟುಂಬದವರು, ಬಂಧುಮಿತ್ರರಿಗೆ ಹಿರಿಯರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
[18/11, 2:41 PM] Bjp Media: 18-11-2022
ಗೆ,
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಳ್ಳಾರಿಯಲ್ಲಿ ಸಾಧನಾ ಸಮಾವೇಶ
ಎಸ್.ಸಿ, ಎಸ್.ಟಿ. ಸಮುದಾಯಗಳ ವಿಷಯದಲ್ಲಿ
ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ- ಬಿ.ಶ್ರೀರಾಮುಲು
ಬೆಂಗಳೂರು: ಕಾಂಗ್ರೆಸ್ ಮುಖಂಡರು ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದವು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಟೀಕಿಸಿದರಲ್ಲದೆ, ಬಿಜೆಪಿ ನುಡಿದಂತೆ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಳ್ಳಾರಿಯಲ್ಲಿ ಇದೇ 20ರಂದು ಬಿಜೆಪಿ ಎಸ್ಟಿ ಮೋರ್ಚಾ ನವಶಕ್ತಿ ಸಮಾವೇಶ ನಡೆಯುವ ಸ್ಥಳವನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ನ್ಯಾಯದ ವಿಚಾರದಲ್ಲಿ ನುಡಿದಂತೆ ನಡೆದಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ಸಾಮಾಜಿಕ ನ್ಯಾಯ ನೀಡಿದ್ದಾರೆ ಎಂದು ತಿಳಿಸಿದರು. ಈ ಸಮಾವೇಶವನ್ನು ಸಾಧನಾ ಸಮಾವೇಶದ ಮಾದರಿಯಲ್ಲಿ ಏರ್ಪಡಿಸಲಾಗುತ್ತಿದೆ. ಇದಕ್ಕೆ ಅವಕಾಶ ಮಾಡಿಕೊಟ್ಟ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು ಎಂದರು.
ಕಾಂಗ್ರೆಸ್ಸಿಗರು ಕಪಟ ರಾಜಕಾರಣ ಮಾಡಿದರು. ನಮ್ಮ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಾಮಾಜಿಕ ನ್ಯಾಯ ಕೊಡಲಿಲ್ಲ ಎಂದು ಆರೋಪಿಸಿದರು. ಕಾಂಗ್ರೆಸ್ ಸಾಧನೆ ಸೊನ್ನೆ ಎಂದು ಟೀಕಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಬಿಜೆಪಿಯ ಶಕ್ತಿಯಾಗಿದ್ದವು. ಈಗಲೂ ಶಕ್ತಿಯಾಗಿಯೇ ಮುಂದುವರಿದಿದ್ದು, ಮುಂದೆಯೂ ಬಿಜೆಪಿಗೆ ಬೆಂಬಲ ಕೊಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿಂದಿನ ಸಿಎಂ ಯಡಿಯೂರಪ್ಪ ಅವರು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಪ್ರಕಟಿಸಿ ರಜೆ ಘೋಷಿಸಿದ್ದಲ್ಲದೆ, ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದರು. ಬಿಜೆಪಿ ಆಡಳಿತದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಗಂಗಾ ಕಲ್ಯಾಣ ಯೋಜನೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಪರಿಶಿಷ್ಟ ವರ್ಗಗಳಿಗೆ ಸಚಿವಾಲಯ ಮಾಡಿ ಒಬ್ಬರು ಮಂತ್ರಿಯನ್ನಾಗಿ ನನಗೆ ಅವಕಾಶ ಕೊಟ್ಟಿದ್ದಾರೆ. ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲೂ ಶಕ್ತಿ ತುಂಬುವ ಕಾರ್ಯ ಮಾಡಿದೆ ಎಂದು ತಿಳಿಸಿದರು.
ಪ್ರಧಾನಿ ಮೋದಿಜಿಯವರು ಮಹರ್ಷಿ ವಾಲ್ಮೀಕಿ- ಕನಕದಾಸರವರ ಪುತ್ಥಳಿಗೆ ಗೌರವಾರ್ಪಣೆ ಮಾಡಿದ್ದು, ಹಿಂದುಳಿದ ಜಾತಿಗಳ ಏಳಿಗೆಗೆ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಧನ್ಯವಾದ ಸಮರ್ಪಿಸಿದರು. ಸಮಾವೇಶದಲ್ಲಿ ಬೊಮ್ಮಾಯಿ ಮತ್ತು ಮೋದಿಜಿ ಅವರಿಗೆ ಅಭಿನಂದನೆ ಮತ್ತು ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮವೂ ನಡೆಯಲಿದೆ ಎಂದರು.
ಈ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸರಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆದ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಕೇಂದ್ರ – ರಾಜ್ಯ ಸರಕಾರಗಳ ಸಚಿವರು, ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕಾಗಿ ಎಲ್ಲ ಪೂರ್ವತಯಾರಿ ನಡೆದಿದೆ ಎಂದು ವಿವರಿಸಿದರು.
ತಾಕತ್ತು- ಧಮ್ ಪ್ರದರ್ಶಿಸಿದ ಬಿಜೆಪಿ
2013ರಿಂದ 5 ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ, ತಾಕತ್ತು, ಧಮ್ ಬಗ್ಗೆ ಮಾತನಾಡುತ್ತಾರೆ. ತಾಕತ್ತು ಮತ್ತು ಧಮ್ ಇರುವ ಕಾರಣ ಬಿಜೆಪಿ ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿ ಹೆಚ್ಚಳ ಮಾಡಿದೆ. ನೀವು ಮೀಸಲಾತಿ ಹೆಚ್ಚಿಸಿಲ್ಲವೇಕೆ ಎಂದು ಕಾಂಗ್ರೆಸ್ ನಾಯಕರನ್ನು ಶ್ರೀರಾಮುಲು ಅವರು ಪ್ರಶ್ನಿಸಿದರು.
ಎಸ್ಸಿ, ಎಸ್ಟಿ ಸಮುದಾಯಗಳ ಮತ ಗಳಿಸಲು ಸುಳ್ಳು ಕಥೆಗಳ ಮೂಲಕ ಕಾಂಗ್ರೆಸ್ಸಿಗರು ಸುಳ್ಳು ಸಾಮ್ರಾಜ್ಯ ನಿರ್ಮಿಸುತ್ತಿದ್ದರು. ಹಿಂದುಳಿದ ಸಮಾಜಗಳಿಗೆ ಕಾಂಗ್ರೆಸ್ಸಿಗರ ಮೋಸ ಅರ್ಥವಾಗಿದೆ ಎಂದು ತಿಳಿಸಿದರು.
ಹೊಸ ವಾಹನಗಳ ನಂಬರ್ ಪ್ಲೇಟ್ ಮಾದರಿಯಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯ ರಾಜಕಾರಣ ಮಾಡುತ್ತ ಬಂದಿದ್ದಾರೆ. ಹಿಂದುಳಿದ ನಾಯಕರು, ವರ್ಗ, ಜನರ ಬಗ್ಗೆ ಮಾತನಾಡುವ ಅವರು, ಹಿಂದುಳಿದ ವರ್ಗದವರು ಮುಖ್ಯಮಂತ್ರಿ ಆಗಬೇಕೆನ್ನುತ್ತಾರೆ. ಅಹಿಂದಕ್ಕಾಗಿ ಸಿದ್ದರಾಮಯ್ಯ ಏನೂ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಬೀದರ್ನಿಂದ ಚಾಮರಾಜನಗರದ ವರೆಗೆ ಪಕ್ಷದ ಈ ಸಮುದಾಯಗಳ ಕಾರ್ಯಕರ್ತರು, ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಹಿರಿಯ ನಾಯಕರೂ ಭಾಗವಹಿಸುತ್ತಾರೆ ಎಂದು ತಿಳಿಸಿದರು. ಆರೋಗ್ಯ ವ್ಯವಸ್ಥೆ ನೋಡಿಕೊಳ್ಳಲು ಆಂಬುಲೆನ್ಸ್, ಆರೋಗ್ಯ ಕೇಂದ್ರವೂ ಇರಲಿದೆ ಎಂದು ವಿವರ ಕೊಟ್ಟರು.
10 ಸಾವಿರ ಬಸ್, 25 ಸಾವಿರ ಕ್ರೂಸರ್ ವ್ಯವಸ್ಥೆ
ಸಮಾವೇಶದ ಯಶಸ್ವಿಗೆ 41 ಸಮಿತಿ ರಚಿಸಿದ್ದು, 5 ಸಾವಿರ ಕಾರ್ಯಕರ್ತರನ್ನು ಜೋಡಿಸಿದ್ದೇವೆ. 200ಕ್ಕೂ ಅಧಿಕ ಶೌಚಾಲಯಗಳಿರುತ್ತವೆ. 28 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದೇವೆ. 8 ಸಾವಿರದಿಂದ 10 ಸಾವಿರ ಬಸ್ಸುಗಳು ಬರಲಿವೆ. 25 ಸಾವಿರ ಕ್ರೂಸರ್ ವಾಹನಗಳು, 10 ಸಾವಿರ ಕಾರುಗಳು, 25 ಸಾವಿರ ಬೈಕ್ಗಳು ಬರಲಿವೆ; 2 ಹೆಲಿಪ್ಯಾಡ್ಗಳೂ ಇರಲಿವೆ ಎಂದು ಶ್ರೀರಾಮುಲು ತಿಳಿಸಿದರು.
15ರಿಂದ 20 ಸಾವಿರ ಮಹಿಳೆಯರು ಪಾಲ್ಗೊಳ್ಳುತ್ತಾರೆ. ಶಾಸಕ ಸೋಮಶೇಖರ ರೆಡ್ಡಿಯವರು ಕಾಲ್ನಡಿಗೆಯಲ್ಲಿ ಬರಲಿದ್ದಾರೆ. 160 ಕಲಾತಂಡಗಳು ಭಾಗವಹಿಸಲಿವೆ ಎಂದು ವಿವರಿಸಿದರು.
130 ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯುತ್ತಿದೆ. ಸಮಾವೇಶದ ವೇದಿಕೆ ಮತ್ತು ಕಲಾವಿದರಿಂದ ಮನೋರಂಜನೆ ನೀಡುವ ವೇದಿಕೆ ರಚಿಸಲಾಗಿದೆ. 3.20 ಲಕ್ಷ ಚದರಡಿ ಪೆಂಡಾಲ್ ವ್ಯವಸ್ಥೆ ಮಾಡಿದ್ದೇವೆ. 1 ಲಕ್ಷ ಚದರ ಅಡಿಯಲ್ಲಿ ಅಡುಗೆ ಸಿದ್ಧಗೊಳ್ಳಲಿದೆ. ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಊಟದ ವ್ಯವಸ್ಥೆ ಮಾಡಲಿದ್ದೇವೆ. 300ಕ್ಕೂ ಹೆಚ್ಚು ಊಟದ ಕೌಂಟರ್ ಇರಲಿವೆ. 3 ಸಾವಿರ ಕಾರ್ಯಕರ್ತರು ಊಟದ ವ್ಯವಸ್ಥೆಗೆ ಸಹಕರಿಸಲಿದ್ದಾರೆ ಎಂದರು. ಬಿಜೆಪಿ ಸರಕಾರಗಳ ಜನಪರ ಕಾರ್ಯಕ್ರಮಗಳನ್ನು ಎಸ್ಸಿ, ಎಸ್ಟಿ ಸಮುದಾಯ ಮತ್ತು ಜನರಿಗೆ ತಿಳಿಸಲಾಗುತ್ತದೆ ಎಂದು ವಿವರಿಸಿದರು. ಮೀಸಲಾತಿ ಹೆಚ್ಚಳವನ್ನು ಸಂಭ್ರಮಿಸುವ ಹಬ್ಬ- ಐತಿಹಾಸಿಕ ಸಮಾವೇಶ ಇದಾಗಲಿದೆ ಎಂದು ತಿಳಿಸಿದರು.
‘ನ ಭೂತೋ...’ ಎಂಬಂತೆ ಕಾರ್ಯಕ್ರಮ ನಡೆಯಲಿದೆ. ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಿದ್ದೇವೆ. ಸಣ್ಣಪುಟ್ಟ ವ್ಯತ್ಯಾಸವಾದರೆ ಸಹಕರಿಸಿ ಎಂದು ಜನರಲ್ಲಿ ಮನವಿ ಮಾಡಿದರು. ಮನೆಮನೆಯೂ ಕೇಸರಿಮಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಓಲೆಕಾರ್, ನರಸಿಂಹ ನಾಯಕ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ವೀರೇಂದ್ರ ಸಿಂಹ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಮತ್ತು ಬಳ್ಳಾರಿ ಪ್ರಭಾರಿಗಳಾದ ಸಿದ್ದೇಶ್ ಯಾದವ್, ಬಳ್ಳಾರಿ ಜಿಲ್ಲಾಧ್ಯಕ್ಷ ಮುರಹರಿಗೌಡ, ಬಳ್ಳಾರಿ ಸಂಸದ ವೈ ದೇವೆಂದ್ರಪ್ಪ, ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಬುಡ ಅಧ್ಯಕ್ಷ ಮಾರುತಿ ಪ್ರಸಾದ್, ಎಪಿಎಂಸಿ ಅಧ್ಯಕ್ಷ ಬಸಲಿಂಗಪ್ಪ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಶಿವಕುಮಾರ್, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಓಬಳೇಶ ಹೆಚ್, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ಎಸ್. ದಿವಾಕರ್, ಹಿರಿಯರಾದ ಮಹಿಪಲ್ ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment