ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ CM ದೆಹಲಿಯಲ್ಲಿ

[28/11, 8:57 PM] Cm Ps: *ಸುಲಭ ದರದಲ್ಲಿ ಔಷದೋಪಚಾರಗಳು ದೊರಕಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಮೈಸೂರು, ನವೆಂಬರ್ 28 :

 ತಳಮಟ್ಟದ ದುಡಿಯುವ ವರ್ಗದವರ ಆರೋಗ್ಯ ಸರ್ಕಾರಕ್ಕೆ ಬಹಳ ಮುಖ್ಯ. ಮುಂದಿನ ದಿನಗಳಲ್ಲಿ ವಿಜ್ಞಾನಿ ಬಳಗದ ಸಂಶೋಧನೆಗಳಿಂದ ಅತ್ಯಂತ ಕಡಿಮೆ ದರದಲ್ಲಿ ಔಷದೋಪಚಾರಗಳು ದೊರಕುವಂತಾಗಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿ ನಿಲಯಗಳು, ಸ್ಕಿಲ್ ಲ್ಯಾಬ್ ಮತ್ತು ಇತರ ಸೌಲಭ್ಯಗಳನ್ನು ಹಾಗೂ ಕೆ.ಆರ್. ಆಸ್ಪತ್ರೆ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಹಾಗೂ ಕೆ.ಆರ್. ಆಸ್ಪತ್ರೆಯೂ ಸೇರಿದಂತೆ ರಾಜ್ಯದ 41 ತಾಲ್ಲೂಕು ಆಸ್ಪತ್ರೆಗಳಲ್ಲಿ  10 ಹಾಸಿಗೆಗಳ ಟೆಲಿ-ಐಸಿಯು ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದರು.

*ವೈದ್ಯಕೀಯ ಕಾಲೇಜು ಸಂಶೋಧನೆಗಳಲ್ಲಿ ತೊಡಗಬೇಕು:*
ಗ್ರಾಮಗಳಲ್ಲಿ ಜನರಿಗೆ ಚಿಕಿತ್ಸೆ ಸಮರ್ಪಕವಾಗಿ ದೊರೆಯುವುದಿಲ್ಲ. ಜನರಿಗೆ ಸರಿಯಾದ ಮಾಹಿತಿಯಿಲ್ಲದಿರುವುದು ಮತ್ತು ಚಿಕಿತ್ಸೆ ಹಣಕಾಸಿನ ಶಕ್ತಿಯಿಲ್ಲದಿರುವುದೂ ಇದಕ್ಕೆ ಕಾರಣವಾಗಿದೆ. ಆರೋಗ್ಯ ಕ್ಷೇತ್ರದ ವಿಜ್ಞಾನಿಗಳು ತಮ್ಮ ಸಂಶೋಧನೆಗಳು ಜನಸಾಮಾನ್ಯರ ಕೈಗೆ ತಲುಪುವಂತಿರಬೇಕು. ತಳಮಟ್ಟದ ದುಡಿಯುವ ವರ್ಗದವರಿಂದ ರಾಜ್ಯದ ಆರ್ಥಿಕತೆ ಬೆಳೆಯುತ್ತದೆ. ವೈದ್ಯಕೀಯ ಕಾಲೇಜುಗಳು ತಮಗೆ ಸಂಬಂಧಪಟ್ಟ ಯಾವುದೇ ಕ್ಷೇತ್ರದಲ್ಲಿ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿಕೊಂಡು, ಸಂಶೋಧನೆಗಳ ಮೂಲಕ ಪರಿಹಾರಗಳನ್ನು ಹುಡುಕಬೇಕು. ವೈದ್ಯಕೀಯ ಕ್ಷೇತ್ರದ ಸಂಪೂರ್ಣ ಜ್ಞಾನವುಳ್ಳವರು ನೀವಾಗಿದ್ದು, ನಿಸ್ಸಹಾಯಕರಾಗಬೇಡಿ, ಜನರಿಗೆ ಸಹಾಯವನ್ನು ಮಾಡಬೇಕು. ಆಗ ಪರಿಹಾರಗಳಿಗೆ ಯಾವುದೇ ಬಹುರಾಷ್ಟ್ರೀಯ ಕಂಪನಿಗಳ ಮೇಲೆ ಅವಲಂಬಿತವಾಗುವ ಅವಶ್ಯಕತೆಯಿರುವುದಿಲ್ಲ. ಇಂತಹ ಸಂಸ್ಥೆಗಳು ಉತ್ಪಾದಿಸುವ ಔಷಧಿಗಳು ಸಾಮಾನ್ಯ ಜನರ ಕೈಗೆ ಎಟುಕುವುದಿಲ್ಲ ಎಂದರು.

*ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಆರ್ ಎಂಡ್ ಡಿ ಕೇಂದ್ರ ಸ್ಥಾಪನೆ :*

ಮೈಸೂರು ವೈದ್ಯಕೀಯ ಕಾಲೇಜು ಸೇವೆಗೆ ಹೆಸರಾಗಿದೆ. 100 ವರ್ಷದ ಇತಿಹಾಸವಿರುವ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಆರ್ ಎಂಡ್ ಡಿ ಕೇಂದ್ರವನ್ನು ಸ್ಥಾಪಿಸಲು ಮುಂದಿನ ಬಜೆಟ್ ನಲ್ಲಿ ಅನುದಾನವನ್ನು ನೀಡಲಾಗುವುದು. ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವುಳ್ಳ ಆಸ್ಪತ್ರೆಯಾಗಬೇಕು ಎಂದರು.

*ಯುವ ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು :*
ಪ್ರತಿವರ್ಷ 5 ಸಾವಿರ ವೈದ್ಯರು ವೈದ್ಯಲೋಕಕ್ಕೆ ಬರುತ್ತಿದ್ದಾರೆ. ಆದರೂ ವೈದ್ಯರ ಕೊರತೆ ಕಾಣುತ್ತದೆ. ಕನಿಷ್ಟ 2 ವರ್ಷಗಳಾದರೂ ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಬೇಕು. ಅತ್ಯಂತ ಕ್ಲಿಷ್ಟಕರ ವೈದ್ಯಕೀಯ ಸವಾಲುಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಣಬಹುದು.ಇದು ಯುವ ವೈದ್ಯರಿಗೆ ಅತ್ಯಂತ ಸಹಕಾರಿಯಾಗುತ್ತದೆ.  ವೈದ್ಯರು ನೋವನ್ನು ಶಮನ ಮಾಡುವ ಉದಾತ್ತವಾದ ಸೇವೆಯನ್ನು ಸಲ್ಲಿಸುತ್ತಾರೆ. ಬಡವರ ಸೇವೆಯನ್ನೂ ಸಹ ಯುವ ವೈದ್ಯರು ಗಮನಹರಿಸಬೇಕು ಎಂದರು.

*ರಾಜ್ಯದ ನಗರಗಳಲ್ಲಿ ನಮ್ಮ ಕ್ಲಿನಿಕ್ :*
ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ.  ಸರ್ಕಾರ ಕಿವುಡರಿಗೆ ಶ್ರವಣ ಸಾಧನವನ್ನು ಉಚಿತವಾಗಿ  ನೀಡಲಾಗುತ್ತಿದ್ದು, ಇದಕ್ಕಾಗಿ 500  ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಡಯಾಲಿಸಿಸ್ನ್ನು 60 ಸೈಕಲ್ಸ್ ಗಳಿಗೆ ಹೆಚ್ಚಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. ರಾಜ್ಯದ ಎಲ್ಲ ನಗರಗಳಲ್ಲಿ ನಮ್ಮ ಕ್ಲಿನಿಕ್ ನ್ನು ಸ್ಥಾಪಿಸಲಾಗುತ್ತಿದೆ ಎಂದರು.

*ಆರೋಗ್ಯಕರ ದೇಹ ಹಾಗೂ ಮನಸ್ಸು ಅಗತ್ಯ :*
ಮನುಷ್ಯ ಒತ್ತಡವನ್ನು ತಡೆಯಲು ಆರೋಗ್ಯಕರ ದೇಹ ಹಾಗೂ ಮನಸ್ಸು ಅಗತ್ಯ. ಕೋವಿಡ್ ಸಂದರ್ಭದಲ್ಲಿ  ಸದೃಢ ಆರೋಗ್ಯವಿಲ್ಲದಿದ್ದವರೂ ತೊಂದರೆಯನ್ನು ಅನುಭವಿಸಿದರು. ದೇಹದ ಮೆಕ್ಯಾನಿಸಂ ನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಆರೋಗ್ಯ ಹದಗೆಡುವ ಸಾಧ್ಯತೆಯಿರುತ್ತದೆ. ಇಂದಿನ ಆಧುನಿಕ ಚಿಕಿತ್ಸೆಯಲ್ಲಿ ಬಹಳಷ್ಟು ಬದಲಾವಣೆಯಾಗುತ್ತಿದೆ.  ತಂತ್ರಜ್ಞಾನ ಮತ್ತು ಸಂಶೋಧನೆಗಳಿಂದ ವೈದ್ಯಕೀಯ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದು, ವೈದ್ಯರು ಹಾಗೂ ರೋಗಿಗಳ ಪಾಲಿಗೆ ಸಹಕಾರಿಯಾಗಿದೆ. ಆರೋಗ್ಯ ಚಿಕಿತ್ಸೆಯ ದರಗಳು ಸಾಮಾನ್ಯ ಜನರ ಕೈಗೆ ಎಟುಕದಂತಾಗಿದೆ.  ವಿಜ್ಞಾನಿಗಳು, ಆಸ್ಪತ್ರೆಗಳು, ತಜ್ಞರು, ವಿಶ್ವವಿದ್ಯಾಲಯಗಳು ಜನರಿಗೆ ಸುಲಭ ದರದಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಮೈಸೂರಿನ ಶಾಸಕರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
[28/11, 10:15 PM] Cm Ps: *ಮೈಸೂರು ಪೇಂಟ್ ಆಧುನೀಕರಣಕ್ಕೆ ಅಗತ್ಯ ನೆರವು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಮೈಸೂರು, ನವೆಂಬರ್ 28:

 ಮೈಸೂರು ಪೇಂಟ್ ಆಧುನೀಕರಣ, ವಿಸ್ತರಣೆ ಹಾಗೂ ಸಾಮಥ್ರ್ಯ ಆಭಿವೃದ್ಧಿಗೆ ಸರ್ಕಾರ ಅಗತ್ಯ ನೆರವು  ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು  ಮೈಸೂರು ಪೇಂಟ್ ಮತ್ತು ವಾರ್ನಿಶ್ ಸಂಸ್ಥೆಯ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇದು ನಮ್ಮ ಹೆಮ್ಮೆಯ ಸಂಸ್ಥೆಯಾದ ಇದು  ಪೈಪೋಟಿಯನ್ನು ಎದುರಿಸುತ್ತಿದೆ. ಖಾಸಗಿ ವಲಯದಲ್ಲಿ ಬಹಳಷ್ಟು ಪೈಪೋಟಿ ಇದೆ. ಸರ್ಕಾರಿ ವಲಯದಲ್ಲಿ ಸಾಕಷ್ಟು ಬೆಂಬಲವಿರುವುದರಿಂದ ಲಾಭ ಮಾಡುತ್ತಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ವಿಸ್ತರಣೆಯಾಗಲು ಆಧುನೀಕರಣ, ತಂತ್ರಜ್ಞಾನ, ಮಾರುಕಟ್ಟೆ ತಂತ್ರಗಾರಿಕೆಯ ಅವಶ್ಯಕತೆ ಇದೆ ಎಂದರು.
ಗುಣಮಟ್ಟವನ್ನು ಕಾಪಾಡಿಕೊಂಡಿದ್ದರಿಂದ ಪೈಪೋಟಿ ಎದುರಿಸಲು ಸಾಧ್ಯವಾಗಿದೆ
ಮಹಾರಾಜರ ಕಾಲದಲ್ಲಿ ಮನುಷ್ಯನಿಗೆ ಅಗತ್ಯವಿರುವ ಎಲ್ಲವನ್ನೂ ತಯಾರು ಮಾಡುವ ಕೆಲಸವಾಗಿತ್ತು.  ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ, ಪೇಪರ್ ಸೋಪ್ ಅಂಡ್ ಡಿಟರ್ಜೆಂಟ್ ವರೆಗೂ ಎಲ್ಲವೂ ತಯಾರಾಗುತ್ತಿತ್ತು. ಕೆಲವು ಸಂಸ್ಥೆಗಳು ಜಾಗತೀಕರಣವಾದ ಸಂದರ್ಭದಲ್ಲಿಯೂ ಕೂಡ ನಮ್ಮ ಗುಣಮಟ್ಟವನ್ನು ಕಾಪಾಡಿಕೊಂಡಿದ್ದರಿಂದ ಪೈಪೋಟಿಯನ್ನು ಎದುರಿಸಿ ನಿಲ್ಲಲು ಸಾಧ್ಯವಾಗಿದೆ. ಹೊಸ ತಂತ್ರಜ್ಞಾನ ಬಳಕೆ ಮಾಡುವ ಅನಿವಾರ್ಯತೆ ಹಾಗೂ ಅವಶ್ಯಕತೆ ಇದೆ ಎಂದರು.  

*ವಾಣಿವಿಲಾಸ ಸಾಗರದಲ್ಲಿ ಮಹಾರಾಜರ ಪ್ರತಿಮೆ ಸ್ಥಾಪನೆ*
88 ವರ್ಷಗಳ ನಂತರ ವಾಣಿವಿಲಾಸ ಸಾಗರ ಅಣೆಕಟ್ಟು ತುಂಬಿದೆ.  ಅಂದು ಪಶ್ಚಿಮ ಘಟ್ಟದಿಂದ ಬರು ನೀರನ್ನು ಹಿಡಿದಿಟ್ಟ ಕಾರಣದಿಂದ ವಾಣಿ ವಿಲಾಸ ಸಾಗರ ತುಂಬಿರಲಿಲ್ಲ.  ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿವಿಲಾಸಸಾಗರ 130 ಅಡಿಗಿಂತ ಹೆಚ್ಚು ತುಂಬಿದೆ. ಆ ಸಂದರ್ಭದಲ್ಲಿಯೂ ನಾವು  ಮಹಾರಾಜರನ್ನು ಸ್ಮರಿಸಿದೆವು. ಅವರ ಪ್ರತಿಮೆಗಳನ್ನು ಅಲ್ಲಿ ಸ್ಥಾಪಿಸಲಾಗುತ್ತಿದೆ. ಆ ಸಂದರ್ಭದಲ್ಲಿ ಮಹಾರಾಜರನ್ನು ಆಹ್ವಾನಿಸುವ ತೀರ್ಮಾನ ಮಾಡಲಾಗಿದೆ. ಕೆಆರ್‍ಎಸ್  ರೀತಿಯಲ್ಲಿಯೇ ಇಡೀ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸುವ ಗ್ರಿಡ್ ಇದಾಗಿದೆ. ಈ ಎರಡೂ ಚಿರಸ್ಥಾಯಿಯಾಗಿ ರೈತರಿಗೆ ವರದಾನವಾಗಿರುವ ಅಣೆಕಟ್ಟುಗಳನ್ನು ಉಳಿಸಿಕೊಳ್ಳಬೇಕಿದೆ ಎಂದರು.

*ಕೆ.ಆರ್.ಎಸ್ ಅದ್ಭುತ ಕಟ್ಟಡ*
75 ವರ್ಷಗಳ ಆಚರಣೆಯ ಸಂದರ್ಭದಲ್ಲಿ ಕೆ.ಆರ್.ಎಸ್ ಗೇಟುಗಳಿಗೆ ಹೊಸ ಸ್ಲೂಯಿಸ್ ಗೇಟುಗಳನ್ನು ಅಳವಡಿಸುವ ಅವಕಾಶ ನನಗೆ ದೊರೆಯಿತು. 300 ಕ್ಯೂಸೆಕ್ಸ್ ನೀರು ಹರಿದುಹೋಗುತ್ತಿತ್ತು. ಮಹಾರಾಜರು ಕಟ್ಟಿರುವುದನ್ನು ಉಳಿಸಲು  ಸರ್ಕಾರಿ ವಲಯದಲ್ಲಿ ಆಗದೇ ಇರುವುದನ್ನು ಖಾಸಗಿ ವಲಯದ ಪರಿಣಿತರಿಂದ ಗೇಟ್‍ಗಳನ್ನು ಅಳವಡಿಸಲಾಗಿದೆ. ಈಗ ಒಂದು ಹನಿಯೂ ಸೋರಿಕೆಯಾಗುತ್ತಿಲ್ಲ. ನೂರಕ್ಕೂ ಹೆಚ್ಚು ಗೇಟುಗಳನ್ನು ಅಳವಡಿಸಲಾಗುತ್ತಿದೆ. ಇದು ಕನಿಷ್ಠ 50 ವರ್ಷಗಳ ಕಾಲ ಬಾಳಿಕೆ ಬರಲಿದೆ.  ಕಟ್ಟಡ ಮಾತ್ರ ಒಂದು ಸಾವಿರ ವರ್ಷವಾದರೂ ಉಳಿಯುವ ಅದ್ಭುತ ಕಟ್ಟಡ. ಸಿಮೆಂಟ್ ಬಳಕೆಯಿಲ್ಲದೇ ಗಾರೆ ಬಳಸಿ ಕಟ್ಟಲಾಗಿದೆ.  ಮೈಸೂರು ಪೇಯಿಂಟ್ ಮತ್ತು ವಾರ್ನಿಶ್ ಉಳಿಯುವ ಕೆಲಸ ಮಾಡುತ್ತೇವೆ ಎಂದರು.

ಮೈಸೂರು ರಾಜ ವಂಶಸ್ಥರಾದ ಮನೆತನದ ಪ್ರಮೋದಾ ದೇವಿ, ಸಚಿವ ಗೊವಿಂದ ಕಾರಜೋಳ, ಶಾಸಕ ನಾಗೇಂದ್ರ, ಸಂಸ್ಥೆಯ ಅಧ್ಯಕ್ಷ ರಘು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
[29/11, 11:17 AM] Cm Ps: *ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆ*

*ರಾಜ್ಯದ ಪರ  ಸಮರ್ಥ ವಾದ ನಡೆಸುವ ಭರವಸೆ *: *ಬಸವರಾಜ ಬೊಮ್ಮಾಯಿ*

ನವದೆಹಲಿ, ನವೆಂಬರ್ 29:ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ  ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ  ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು  ಪ್ರತಿಕ್ರಿಯೆ ನೀಡಿದರು. 

ಮುಕುಲ್ ರೋಹಟಗಿ  ಹಿರಿಯ ವಕೀಲರಾಗಿದ್ದು,   ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು  ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ.  ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ.  ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು  ತಿಳಿಸಿರುವುದಾಗಿ ಹೇಳಿದರು.  

ಮಹಾರಾಷ್ಟ್ರ ಸರ್ಕಾರ ಹಾಕಿರುವ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ ನಡೆಯಲಿದೆ. 

ಹಿಂದಿನ ಸಿಜೆಐ ದೀಪಕ್ ಮಿಶ್ರ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ ಎಂದು ತಿಳಿಸಿದರು. 

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಹಾರಾಷ್ಟ್ರದ ನಾಯಕರುಗಳು, ನಾವು ಗಂಭೀರವಾಗಿ ಇದೀವಿ ಅಂತ ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಎಂದರು.


*ಕರ್ನಾಟಕಕ್ಕೆ ಸೇರಲು ಗ್ರಾಮಸ್ಥರ ನಿರ್ಧಾರ*:*ನಿಯಮಗಳಿವೆ*

ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು  ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ.  ಜತ್ ತಾಲೂಕಿನ 42 ಗ್ರಾಮಸ್ಥರು ಸಿಎಂ  ಭೇಟಿಗೆ ಅವಕಾಶ ಕೇಳಿರುವ ಬಗ್ಗೆ ಉತ್ತರಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನಲೆಯಲ್ಲಿ  ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ‌ ನೀಡುತ್ತಿದ್ದಾರೆ.  ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು,  ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು.  ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು. 

*ರಾಜಕೀಯ ಹೇಳಿಕೆ*
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ
ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಕುಡಿಯುವ ‌ನೀರು ನೀಡುವ ನಿರ್ಣಯ ಮಾಡಿದ್ದರು.  ಅವರು ಯಾಕೆ ಸೇರಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು.  ಜವಬ್ದಾರಿಯುತ ಸ್ಥಾನ ದಲ್ಲಿದ್ದು ಎಲ್ಲವನ್ನೂ  ಕಾನೂನು ಮತ್ತು ಸಂವಿಧಾನದ ಅಡಿಯಲ್ಲಿ ಕ್ರಮ‌ಕೈಗೊಳ್ಳಲಾಗುವುದು ಎಂದರು.  

*ರಾಜ್ಯಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿ* *ಪರಿಸ್ಥಿತಿ ನಿಯಂತ್ರಣದಲ್ಲಿದೆ*

ರಾಜ್ಯಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, 
ಮಹಾರಾಷ್ಟ್ರ ಗೃಹ ಇಲಾಖೆಗೆ ಜೊತೆಗೆ ಈಗಾಗಲೇ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.
[29/11, 11:21 AM] Cm Ps: *ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ*

ನವದೆಹಲಿ, ನವೆಂಬರ್ 29: ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು  ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. 

ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.

*ಕೇಂದ್ರ ಸಚಿವರ ಭೇಟಿ*
ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು. 

ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ , ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು,  ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್   ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು. 

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು  ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ  ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Post a Comment

Previous Post Next Post