ಕೇಂದ್ರ ಸಚಿವ ಡಾ. ವೀರೇಂದ್ರ ಕುಮಾರ್ ನವದೆಹಲಿಯಲ್ಲಿ ಭಾರತೀಯ ಅಂಧರ ಕ್ರಿಕೆಟ್ ಟಿ-20 ವಿಶ್ವಕಪ್ ಸದಸ್ಯರನ್ನು ಭೇಟಿ ಮಾಡಿದರು

ಡಿಸೆಂಬರ್ 22, 2022
7:32PM

ಕೇಂದ್ರ ಸಚಿವ ಡಾ. ವೀರೇಂದ್ರ ಕುಮಾರ್ ನವದೆಹಲಿಯಲ್ಲಿ ಭಾರತೀಯ ಅಂಧರ ಕ್ರಿಕೆಟ್ ಟಿ-20 ವಿಶ್ವಕಪ್ ಸದಸ್ಯರನ್ನು ಭೇಟಿ ಮಾಡಿದರು

@Drvirendrakum13
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ. ವೀರೇಂದ್ರ ಕುಮಾರ್ ಅವರು ಇಂದು ನವದೆಹಲಿಯಲ್ಲಿ ಅಂಧರ ಕ್ರಿಕೆಟ್ ಟಿ-20 ವಿಶ್ವಕಪ್ ವಿಜೇತ ತಂಡದ ಸದಸ್ಯರನ್ನು ಭೇಟಿ ಮಾಡಿ ಐತಿಹಾಸಿಕ ವಿಜಯಕ್ಕಾಗಿ ಅಭಿನಂದಿಸಿದರು.

ಇದೇ ತಿಂಗಳ 17ರಂದು ಬೆಂಗಳೂರಿನಲ್ಲಿ ನಡೆದ ಟಿ-20 ವಿಶ್ವಕಪ್‌ನ ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 120 ರನ್‌ಗಳಿಂದ ಸೋಲಿಸಿದ ಭಾರತ ಅಂಧರ ಕ್ರಿಕೆಟ್ ತಂಡ ಇತಿಹಾಸ ನಿರ್ಮಿಸಿದೆ. ಅಂಧರ ಟಿ-20 ಕ್ರಿಕೆಟ್ ವಿಶ್ವಕಪ್ ಅನ್ನು ಭಾರತ ಸತತ ಮೂರನೇ ಬಾರಿಗೆ ಗೆದ್ದಿರುವುದು ದೇಶಕ್ಕೆ ಹೆಮ್ಮೆಯ ವಿಷಯವಾಗಿದೆ. ಭಾರತ ಈ ಹಿಂದೆ 2012 ಮತ್ತು 2017 ರಲ್ಲಿ ಈ ಚಾಂಪಿಯನ್‌ಶಿಪ್ ಗೆದ್ದಿತ್ತು. 

Post a Comment

Previous Post Next Post