ತುಮಕೂರಿನಲ್ಲಿ cm, BJP ಕಚೇರಿ ಉದ್ಘಾಟನೆ

[07/12, 3:58 PM] Cm Ps: ತುಮಕೂರಿನಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ  : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು, ಡಿಸೆಂಬರ್ 07 :

 ತುಮಕೂರಿನಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ಬರಲಿದ್ದು, ಇಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತುಮಕೂರಿನ ಗೂಳೂರಿನಲ್ಲಿ ಇರುವ ಭಾರತೀಯ ಜನತಾ ಪಾರ್ಟಿಯ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ತುಮಕೂರು ಜಿಲ್ಲೆ ಬೆಂಗಳೂರು ನಂತರ ಅಭಿವೃದ್ದಿಯಾಗುತ್ತಿದೆ. ಇಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ಬರಲಿದೆ. ವಿಶೇಷ ಹೂಡಿಕಾ ಪ್ರದೇಶ  ವಿಶೇಷ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡ ಮತ್ತು ತುಮಕೂರಿನಲ್ಲಿ ಮಾತ್ರ ವಿಶೇಷ ಯೋಜನೆ ಮಾಡಿದ್ದೇವೆ ತುಮಕೂರಿನಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ ಆಗಲಿದೆ. ರಕ್ಷಣಾ ಇಲಾಖೆಯ ಉತ್ಪಾದನೆ ಕೂಡ ಈ ಭಾಗದಲ್ಲಿ ಆಗುತ್ತಿದೆ ಎಂದರು.

ಎಸ್ ಸಿ ಎಸ್ ಟಿ ಸಮುದಾಯಗಳ ವಿದ್ಯಾಭ್ಯಾಸ ಹಾಗೂ ಉದ್ಯೋಗಗಳಿಗೆ ಆದ್ಯತೆ :
ನಮ್ಮ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ರೈತರ ಮಕ್ಕಳು ಶಾಲೆ ಕಲಿಯಬೇಕೆಂದು ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದೇವೆ. 10 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿದ್ಯಾನಿಧಿಯನ್ನು ಪಡೆಯುತ್ತಿದ್ದಾರೆ. ಕಾರ್ಮಿಕರ ಮಕ್ಕಳು, ನೇಕಾರರ ಮಕ್ಕಳು, ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಿದ್ದೇವೆ. ದುಡಿಯುವ ವರ್ಗವನ್ನು ಸಧೃಡಗೊಳಿಸುವ ಕೆಲಸ ಮಾಡಲಾಗುತ್ತಿದೆ. ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಿಸುವ ಮೂಲಕ ಅವರ ವಿದ್ಯಾಭ್ಯಾಸ ಹಾಗೂ ಉದ್ಯೋಗಗಳಿಗೆ ಆದ್ಯತೆಯನ್ನು ನೀಡಲಾಗಿದೆ ಎಂದರು.

ತುಮಕೂರಿನ ಅಭಿವೃದ್ಧಿಗಾಗಿ ಸುರೇಶ್ ಗೌಡರ ಕೈ ಬಲ ಪಡಿಸಬೇಕು :

ಸುರೇಶ್ ಗೌಡ ಸ್ವಚ್ಚ ಮನಸಿನ್ನ ವ್ಯಕ್ತಿ. ಅವರು ಶಾಸಕರಾಗಿ ಸಾಕಷ್ಡು ಕೆಲಸ ಮಾಡಿದ್ದಾರೆ. ಸರ್ಕಾರದ ಕಾರ್ಯಕ್ರಮದಲ್ಲಿ ಇರುವ ಕೆಲಸವನ್ನು ಹುಡುಕಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಾರೆ. ಕೆಲವು ಬಾರಿ ಸತ್ಯ ನಿಷ್ಟುರರಿಗೆ ಕಾಲ ಇರುವುದಿಲ್ಲ. ಅವರಿಗೆ ತಾತ್ಕಾಲಿಕವಾಗಿ ವಿಧಾನಸೌಧದಲ್ಲಿ ಸ್ಥಾನ ಇಲ್ಲದಿರಬಹುದು. ಆದರೆ ಜನರ ಮಸನಸ್ಸಿನಲ್ಲಿ ಇದಾರೆ. ನಮಗೆ ಜನಪ್ರಿಯ ಶಾಸಕರು ಬೇಡ ಜನೊಪಯೋಗಿ ಶಾಸಕರು ಬೇಕು. ಸುರೇಶ್ ಗೌಡರು ಈ ಬಾರಿ 25000 ಮತಗಳಿಂದ ಆಯ್ಕೆಯಾಗುವುದು ಖಚಿತ. ಅದನ್ನ ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದರು.

ಈ ಕ್ಷೇತ್ರದಲ್ಲಿ ಗೂಳೂರು ಹೆಬ್ಬೂರು ಏತ ನೀರಾವರಿ ಯೋಜನೆ ಜಾರಿ ಮಾಡುವ ಸಂದರ್ಭದಲ್ಲಿ ಜನರನ್ನು ಮನವೊಲಿಸಿ ಯೋಜನೆಯ ಅನುಷ್ಟಾನಕ್ಮೆ ಅವಕಾಶ ಕಲ್ಪಿಸಿದರು. ಅವರ ಸಹಕಾರದಿಂದ ನಮ್ಮ ಅವಧಿಯಲ್ಲಿಯೇ ನಮ್ಮ ಸರ್ಕಾರದ ಅವಧಿಯಲ್ಲಿಯೇ ಅಡಿಗಲ್ಲು ಹಾಕಿ ನಾವೇ ಉದ್ಘಾಟನೆ ಮಾಡಿದ್ದೇವೆ   ಅಭಿವೃದ್ಧಿ ನಿರಂತರವಾಗಿದ್ದು, ಜನರು ಈ ಭಾಗದ ಅಭಿವೃದ್ಧಿಗಾಗಿ ಸುರೇಶ್ ಗೌಡರ ಕೈ ಬಲ ಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಅಬಕಾರಿ ಸಚಿವ ಗೋಪಾಲಯ್ಯ, ಶಾಸಕ ಎನ್. ರವಿಕುಮಾರ್, ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
[07/12, 4:43 PM] Cm Ps: ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. 
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ,  ಬಿ.ಸಿ‌. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ  ರವಿಕುಮಾರ್, ವೈ.ಎ. ನಾರಾಯಣಸ್ವಾಮಿ,  ವಿಧಾನ ಪರಿಷತ್  ಮಾಜಿ ಸದಸ್ಯ ಅಶ್ವತ್ಥ್ ನಾರಾಯಣ, ಸಂಸದ ಬಸವರಾಜು, ಬಿಜೆಪಿ ಮುಖಂಡ ಬಿ.ಎಚ್. ಅನಿಲ್ ಕುಮಾರ್  ಹಾಗೂ ಮತ್ತಿತರರು ಹಾಜರಿದ್ದರು.

Post a Comment

Previous Post Next Post