[02/12, 10:20 AM] Cm Ps: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ದ ಅಧ್ಯಕ್ಷ ಡಾ ಸಿ. ಸೋಮಶೇಖರ ಅವರ ಅಧ್ಯಕ್ಷ ಅವಧಿಯ ಎರಡು ವರ್ಷಗಳ ಪ್ರಾಧಿಕಾರದ ಸಾಧನೆಯ "ಸಾಧನಾ ದರ್ಶನ " ಕಿರು ಹೊತ್ತಿಗೆಯನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಶ್ರೀ ಪ್ರಕಾಶ್ ಮತ್ತಿಹಳ್ಳಿ ಇದ್ದರು
[02/12, 12:14 PM] Cm Ps: *ಮತದಾರರ ಪಟ್ಟಿ: ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ : ಸಿಎಂ ಬೊಮ್ಮಾಯಿ*
ಧಾರವಾಡ, ಡಿಸೆಂಬರ್ 02: ರಾಜ್ಯಾದ್ಯಂತ ಅನಧಿಕೃ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಭಾರತ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ. ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು.
*ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಆದೇಶ*
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.
[02/12, 3:23 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮದುರ್ಗದ ಬಸವೇಶ್ವರ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ,ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ ಹಾಗೂ ಸ್ಥಳೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
[02/12, 3:30 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸವದತ್ತಿ ತಾಲ್ಲೂಕಿನ ಬಾಲಲಿಂಗೇಶ್ವರ ಮಠಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ, ಮತ್ತಿತರರು ಉಪಸ್ಥಿತರಿದ್ದರು.
[02/12, 3:35 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮದುರ್ಗದ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ,ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ, ಶಶಿಕಲಾ.ಜೊಲ್ಲೆ, ಸಂಸದೆ ಮಂಗಳಾ ಅಂಗಡಿ, ಕೆ.ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕ ಮಹಾದೇವಪ್ಪ ಶಿ ಯಾದವಾಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
[02/12, 3:41 PM] Cm Ps: ಬೆಳಗಾವಿ ಜಿಲ್ಲೆ ( *ರಾಮದುರ್ಗ):* ಡಿಸೆಂಬರ್ 02: *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಳಗಾವಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಹಯೋಗದೊಂದಿಗೆ *ರಾಮದುರ್ಗದ ಸಾಲಹಳ್ಳಿಯ ಡಾ.* *ಶ್ಯಾಮ ಪ್ರಸಾದ್ ಮುಖರ್ಜಿ* ವೇದಿಕೆ, ಆಯೋಜಿಸಿರುವ “ *ರಾಮದುರ್ಗ ತಾಲ್ಲೂಕಿನ ವಿವಿಧ* *ಅಭಿವೃದ್ಧಿ ಕಾಮಗಾರಿಗಳ* *ಶಿಲಾನ್ಯಾಸ* ಹಾಗೂ *ಉದ್ಘಾಟನಾ* *ಕಾರ್ಯವನ್ಮ್ನ ನೆರವೇರಿಸಿ* ಮಾತನಾಡಿದರು.
Post a Comment