KPCC, ಕಲಬುರ್ಗಿಯಲ್ಲಿ

[01/12, 12:51 PM] Kpcc official: ಕಲ್ಬುರ್ಗಿಗೆ ಗುರುವಾರ ಬಂದಿಳಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮುಖಂಡರು ಹಾಗೂ ಕಾರ್ಯಕರ್ತರಿಂದ ಭವ್ಯ ಸ್ವಾಗತ...
[01/12, 1:05 PM] Kpcc official: ಡಿಸೆಂಬರ್ 10 ರಂದು ಬೃಹತ್ ಸಮಾವೇಶ ನಡೆಯಲಿರುವ ಕಲ್ಬುರ್ಗಿ ನಗರದ ಎನ್ ವಿ ಮೈದಾನವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗುರುವಾರ ಪರಿಶೀಲನೆ ಮಾಡಿದರು. ವಿಧಾನಸಭೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕ ಡಾ ಅಜಯ್ ಸಿಂಗ್ ಮತ್ತಿತರರು ಜತೆಗಿದ್ದರು.
[01/12, 1:15 PM] Kpcc official: *ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ನೀಡಿದ ಮಾಧ್ಯಮ ಪ್ರತಿಕ್ರಿಯೆ:*

'ಚುನಾವಣೆ ಸಮಯದಲ್ಲಿ ರಾಜ್ಯದ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ. ಮಹಾರಾಷ್ಟ್ರದ ಯಾವುದೇ ಪಕ್ಷದವರಾಗಿರಲಿ ಗಡಿ ವಿವಾದದ ಹೆಸರಲ್ಲಿ ಶಾಂತಿ ಕದಡುವುದು, ಇದರಲ್ಲಿ ಭಾಗಿಯಾಗುವುದು ಸರಿಯಲ್ಲ. ನಮ್ಮ ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಮೇಲಿರುವ ಕಳಂಕ ಮರೆಮಾಚಿಕೊಳ್ಳಲು ಇದನ್ನು ದೊಡ್ಡದಾಗಿ ಮಾಡುತ್ತಿದ್ದಾರೆ. ಇದರ ಹಿಂದೆ ಸಂಚು ಇದೆ.

ಗಡಿ ವಿವಾದ ಈಗಾಗಲೇ ಇತ್ಯರ್ಥ ಆಗಿರುವ ವಿಚಾರ. ನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಗಡಿಯೊಳಗಿನ ಪ್ರದೇಶ ಅವರದ್ದು. ಇಲ್ಲಿರುವವರೆಲ್ಲ ನಮ್ಮವರೇ.

ಬೆಳಗಾವಿಯಲ್ಲಿ ನಾವು ಸುವರ್ಣಸೌಧ ಕಟ್ಟಿದ್ದು, ಯಾರೂ ಶಾಂತಿ ಭಂಗ ಕೆಲಸ ಮಾಡಬಾರದು.'

ಬಿಜೆಪಿಗೆ ಸಾಲು, ಸಾಲು ರೌಡಿ ಶೀಟರ್ ಗಳ ಸೇರ್ಪಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ  ಬಿಡಿ ' ಎಂದು ಛೇಡಿಸಿದರು.

ಚುನಾವಣೆಗಾಗಿ ಬಿಜೆಪಿ ಸಿದ್ಧಾಂತ ಮರೆಯುತ್ತಿದೆಯೇ ಎಂಬ ಪ್ರಶ್ನೆಗೆ, ' ಬಿಜೆಪಿಗೆ ಯಾವಾಗ ಯಾವ ಸಿದ್ಧಾಂತ ಇತ್ತು? ಅವರು ಸಿದ್ಧಾಂತದ ಬಗ್ಗೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಅವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ಭಾವನೆಗೂ, ಬದುಕಿಗೂ ವ್ಯತ್ಯಾಸವಿದೆ. ಬದುಕಿನ ಮೇಲೆ ರಾಜಕಾರಣ ಮಾಡಿಲ್ಲ. ಜನರ ಹೊಟ್ಟೆ ತುಂಬಿಸಿ, ಅವರಿಗೆ ಉದ್ಯೋಗ ಕೊಟ್ಟು, ಬದುಕು ಕಟ್ಟಿಕೊಳ್ಳುವ ಅವಕಾಶ ನೀಡಬೇಕು ಎಂಬುದು ಅವರಲ್ಲಿ ಇಲ್ಲ. ಅವರಿಗೇನಿದ್ದರೂ ಭಾವನೆಗಳ ವಿಚಾರದ ಮೇಲಷ್ಟೇ ಆಸಕ್ತಿ' ಎಂದರು.
[01/12, 1:34 PM] Kpcc official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಲ್ಬುರ್ಗಿಯಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ್ದು...
[01/12, 2:58 PM] Kpcc official: ನಮ್ಮ ಅವಧಿಯಲ್ಲಿ ಸಮಾಜ ಕಂಟಕರಾಗಿದ್ದ ರೌಡಿಗಳ ಎನ್ಕೌಂಟರ್‌ಗಳಾಗಿದ್ದವು, ರೌಡಿಗಳನ್ನು ಮಟ್ಟಹಾಕಲು ಪೊಲೀಸರಿಗೆ ಸ್ವತಂತ್ರ ನೀಡಲಾಗಿತ್ತು.

ಆದರೆ ಈಗ ಬಿಜೆಪಿಗರ ಸಖ್ಯದಿಂದ ರೌಡಿಗಳು ಪೊಲೀಸರೆದುರು ಎದೆ ಉಬ್ಬಿಸಿಕೊಂಡು ನಡೆಯುತ್ತಿದ್ದಾರೆ,

ಪೊಲೀಸರೇ ರೌಡಿಗಳೆದುರು ತಲೆ ತಗ್ಗಿಸಿ ನಿಲ್ಲುವಂತೆ ಅವರ ನೈತಿಕ ಸ್ಥೈರ್ಯ ಕುಸಿದಿದೆ.
[01/12, 2:58 PM] Kpcc official: ಬಿಜೆಪಿ ನಾಯಕರು, ಸಚಿವರೆಲ್ಲ ಸಾಲು ಸಾಲಾಗಿ ರೌಡಿಗಳೊಂದಿಗೆ ಕುಚಿಕು ಕುಚಿಕು ಡಾನ್ಸ್ ಆಡುತ್ತಾ ಭುಗತಲೋಕವನ್ನು ಮಟ್ಟ ಹಾಕುವ ಪೊಲೀಸರ ಸ್ಥೈರ್ಯವನ್ನು ಕುಸಿಯುವಂತೆ ಮಾಡಿದ್ದಾರೆ.

ರೌಡಿಗಳ ಕಾಲರ್ ಹಿಡಿದು ಎಳೆದು ತರುತ್ತಿದ್ದ ಪೊಲೀಸರು ಈಗ ಅದೇ ರೌಡಿಗಳಿಗೆ ಎಸ್ಕಾರ್ಟ್ ಒದಗಿಸುವಂತಹ ಸ್ಥಿತಿ ನಿರ್ಮಿಸಿದೆ @BJP4Karnataka
[01/12, 2:58 PM] Kpcc official: ಹಣಬಲದಲ್ಲಿ ರಾಜಕಾರಣ ಮಾಡ್ತಿದ್ದ ಬಿಜೆಪಿ ಈಗ ತೋಳ್ಬಲದ ರಾಜಕೀಯ ಮಾಡಲು ಮುಂದಾಗಿದೆ.

ಹಗರಣ, ವೈಫಲ್ಯಗಳ ಸರಮಾಲೆಯನ್ನೇ ಹೊತ್ತಿರುವ ಬಿಜೆಪಿ ಚುನಾವಣೆ ಗೆಲ್ಲುವುದಕ್ಕೆ ಎಲ್ಲಾ ದುಷ್ಟ ಮಾರ್ಗಗಳನ್ನೂ ಹಿಡಿಯುತ್ತಿದೆ.

ಮತದಾರ ಮಾಹಿತಿ ಕಳ್ಳತನ ಒಂದೆಡೆಯಾದರೆ, ರೌಡಿಗಳನ್ನು ಬಳಸಿ ಬೆದರಿಸಿ ಮತ ಪಡೆಯಲು ರೌಡಿ ಮೋರ್ಚಾ ಸ್ಥಾಪನೆಗೆ ಹೊಂಚು ಹಾಕಿದೆ.
[01/12, 4:25 PM] Kpcc official: *ಕಲಬುರ್ಗಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*

ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರಕಿಸಿಕೊಟ್ಟು 10 ವರ್ಷ ಪೂರ್ಣಗೊಂಡಿದ್ದು, ಇದರಿಂದ ಈ ಭಾಗದ ಜನರಿಗೆ ಆಗಿರುವ ಅನುಕೂಲಗಳ ಬಗ್ಗೆ ಅರಿವು ಮಾಡಿಕೊಡಬೇಕು. ನಮ್ಮ ಪಕ್ಷದ ಆಚಾರ, ವಿಚಾರ ತಿಳಿಸಬೇಕು. ಈ ನಿಟ್ಟಿನಲ್ಲಿ ಇಂದು ಪೂರ್ವಭಾವಿ ಸಭೆ ಮಾಡಲಾಗಿದೆ. 

ಇಡೀ ಕಲ್ಯಾಣ ಕರ್ನಾಟಕ ಭಾಗದ ಜನ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ಯಾತ್ರೆ ಸಂದರ್ಭದಲ್ಲಿ ಅತ್ಯಂತ ಉತ್ಸಾಹ ಹಾಗೂ ಪ್ರೀತಿ ತೋರಿದ್ದಾರೆ. ಬಳ್ಳಾರಿಯಲ್ಲಿ ಐತಿಹಾಸಿಕ ಪಕ್ಷದ ಶಕ್ತಿ ಪ್ರದರ್ಶನ ಮಾಡಲಾಗಿತ್ತು. 

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರ ಭರವಸೆ ಕೇವಲ ಕಾಗದದ ಮೇಲೆ ಉಳಿದಿದ್ದು, ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೇ 10 ರಂದು 371 ಜೆ ತಿದ್ದುಪಡಿ ಜಾರಿಗೆ ಪರಿಶ್ರಮ ಹಾಗೂ ಅದು ಜಾರಿಯಾದ ನಂತರ ಜನರ ಬದುಕಿನಲ್ಲಿ ಆಗುವ ಬದಲಾವಣೆ ಬಗ್ಗೆ ತಿಳಿಸಲಾಗುವುದು.

ಬಿಜೆಪಿ ಕೇವಲ ಭಾವನೆಗಳ ವಿಚಾರದ ಮೇಲೆ ರಾಜಕೀಯ ಮಾಡುತ್ತದೆ. ನಮ್ಮ ಪಕ್ಷ ಜನರ ಬದುಕಿನ ಬಗ್ಗೆ ಚಿಂತನೆ ನಡೆಸಿದೆ.

ಕಲ್ಬುರ್ಗಿ ಕಾರ್ಯಕ್ರಮದಲ್ಲಿ ಯಾರೆಲ್ಲಾ ರಾಷ್ಟ್ರೀಯ ನಾಯಕರು ಭಾಗಿಯಾಗಲಿದ್ದಾರೆ ಎಂಬ ಪ್ರಶ್ನೆಗೆ, ' ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆಹ್ವಾನ ನೀಡುತ್ತೇವೆ ' ಎಂದರು.

ಕಾಂಗ್ರೆಸ್ ನಲ್ಲಿ ಬಹಳಷ್ಟು ರೌಡಿಗಳಿದ್ದು, ಲೆಕ್ಕ ಹಾಕಿ ಹೇಳಲಿ ಎಂಬ ಬಿಜೆಪಿ ಮುಖಂಡರ ಹೇಳಿಕೆ ಬಗ್ಗೆ ಕೇಳಿದಾಗ, ' ಈಗ ಅವರು ಯಾರ ಜತೆ ಪ್ರೀತಿ, ವಿಶ್ವಾಸ ಹೊಂದಿದ್ದಾರೆ, ಅವರ ಸಂಸ್ಕೃತಿ ಏನು ಎಂಬುದು ಎಲ್ಲವೂ ಬಹಿರಂಗವಾಗುತ್ತಿದೆ. ಇದೇನು ಹೊಸತಲ್ಲ. ತಮ್ಮಲ್ಲಿರುವ ಕಲಹ ಬಿಟ್ಟು ಬೇರೆಯವರ ಕಲಹದ ಬಗ್ಗೆ ಮಾತನಾಡುತ್ತಾರೆ ' ಎಂದರು.

ಪಕ್ಷಕ್ಕೆ ಬೇರೆ ಪಕ್ಷದ ನಾಯಕರ ಸೇರ್ಪಡೆ ಬಗ್ಗೆ ಕೇಳಲಾದ ಪ್ರಶ್ನೆಗೆ, ' ನಮ್ಮ ಪಕ್ಷದ ಸಿದ್ಧಾಂತ ಹಾಗೂ ನಾಯಕತ್ವ ಒಪ್ಪಿ ಯಾರೆಲ್ಲಾ ಷರತ್ತುರಹಿತವಾಗಿ ಪಕ್ಷ ಸೇರಲು ಬಯಸುತ್ತಾರೋ ಅವರು ಅರ್ಜಿ ಹಾಕಲಿ. ಇದುವರೆಗೂ ನಾವು ಯಾರ ಜತೆ ಸಂಪರ್ಕ ಹೊಂದಿದ್ದೇವೆ ಎಂಬುದರ ಬಗ್ಗೆ ಈಗ ಬಹಿರಂಗಪಡಿಸುವುದಿಲ್ಲ. ಈ ವಿಚಾರವಾಗಿ ಅಲ್ಲಂ ವೀರಭದ್ರಪ್ಪ ಅವರ ಸಮಿತಿ ಇದೆ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಂದ ಹಿಡಿದು ಸ್ಥಳೀಯ ಮಟ್ಟದ ನಾಯಕರವರೆಗೆ ಎಲ್ಲರ ಜತೆ ಚರ್ಚೆ ಮಾಡಿ, ಪಕ್ಷಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳಲಾಗುವುದು ' ಎಂದು ತಿಳಿಸಿದರು. 

ಪಕ್ಷದ ನಾಯಕರಲ್ಲಿ ಅಂತರ ಹೆಚ್ಚಾಗುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ' ನಮ್ಮಲ್ಲಿ ಯಾವುದೇ ಅಂತರವಿಲ್ಲ. ಇದನ್ನು ಬಿಜೆಪಿ ಹಾಗೂ ಮಾಧ್ಯಮದವರು ಸೃಷ್ಟಿಸುತ್ತಿದ್ದಾರೆ. ರಾಜಕೀಯ ನಿಂತ ನೀರಲ್ಲ. ಇಲ್ಲಿ ಯಾರೂ ಶಾಶ್ವತವಲ್ಲ. ಪಿಜಿಆರ್ ಸಿಂಧ್ಯಾ ಅವರ ಜತೆ ನಾನು ಚುನಾವಣೆಯಲ್ಲಿ ಹೋರಾಡಿದರೂ, ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲವೇ?. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರ ಮಧ್ಯೆ ಅಂತರ ಇದ್ದರೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಪತ್ರ ನೀಡಲಿಲ್ಲವೇ? ಬಿಜೆಪಿಯಲ್ಲಿ ಬಿರುಕಿದ್ದು, ನಮ್ಮಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅವರ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸನಗೌಡ ಯತ್ನಾಳ್, ಯಡಿೂರಪ್ಪನವರ ಗುಂಪು ಇಲ್ಲವೇ. ಅವರ ಪಕ್ಷದಲ್ಲಿ ಸಾಕಷ್ಟು ಸಮಸ್ಯೆಗಳಿವೆ ' ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಯಾವ ಕ್ಷೇತ್ರಕ್ಕೆ ಟಿಕೆಟ್ ಬೇಕು ಎಂದು ಅರ್ಜಿ ಹಾಕಿದ್ದಾರೆ ಎಂದು ಕೇಳಿದಾಗ, ' ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಅವರು ಪಕ್ಷದ ಹೈಕಮಾಂಡ್ ಗೆ ಜವಾಬ್ದಾರಿ ಬಿಟ್ಟಿದ್ದಾರೆ. ನಮ್ಮ ಪಕ್ಷದಲ್ಲಿ ಈ ಮಟ್ಟದ ಶಿಸ್ತು ಇದೆ. ಯತೀಂದ್ರ ಅವರು ಹೇಳಿದ್ದರಲ್ಲಿ ತಪ್ಪೇನಿದೆ? ' ಎಂದರು.

ರೌಡಿ ನಾಗ ಸಚಿವ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಅವರ ಪಕ್ಷದಲ್ಲಿ ಕಾರ್ಯಕರ್ತರು ಇಲ್ಲ. ಹೀಗಾಗಿ ರೌಡಿಗಳನ್ನು ಸೇರಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದು, ಹೀಗಾಗಿ ಅವರು ರೌಡಿಗಳನ್ನು ಸೇರಿಸಿಕೊಳ್ಳುತ್ತಿದ್ದಾರೆ ' ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆ ಹೆಚ್ಚಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ' ಅವರು ಅಧಿಕಾರ ಕಳೆದುಕೊಂಡು, ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಗಾಬರಿಯಲ್ಲಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ನೇಮಕಾತಿ, ಗುತ್ತಿಗೆಯಲ್ಲಿ ಲೂಟಿ ಮಾಡಿ ಆಯಿತು. ಕಡೆಗೆ ಈಗ ಮತ ಕದಿಯುತ್ತಿದ್ದಾರೆ. ಪರಿಶಿಷ್ಟರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಮತದಾರರ ಹೆಸರು ಕೈಬಿಡಲಾಗಿದೆ. ಇದರಿಂದ ರಾಜ್ಯದ ಗೌರವ ನಾಶ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಜಾಗತಿಕ ಮಟ್ಟದಲ್ಲಿ ಇದ್ದ ಕೀರ್ತಿಯನ್ನು ಅಳಿಸಿ, ದೇಶದ ಭ್ರಷ್ಟಾಚಾರದ ರಾಜಧಾನಿ ಎಂಬ ಕುಖ್ಯಾತಿ ನೀಡಿದ್ದಾರೆ ' ಎಂದರು.

ಬೆಳಗಾವಿ ಗಡಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ಸರ್ಕಾರ ಈ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ನಮ್ಮ ಊರು, ನಮ್ಮ ಹಳ್ಳಿ ನಮ್ಮದು. ಅವರದು ಅವರಿಗೆ. ಇದರಲ್ಲಿ ಬದಲಾವಣೆ ಅಸಾಧ್ಯ. ಜನ ನೆಮ್ಮದಿಯಾಗಿ ಬದುಕಲು ಬಿಡಬೇಕು' ಎಂದು ತಿಳಿಸಿದರು.
[01/12, 4:27 PM] Kpcc official: ಎಐಸಿಸಿ ಪ್ರಧಾನ ಕಾರ್ಯದರ್ಶಿ  ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಲ್ಬುರ್ಗಿಯಲ್ಲಿ ಗುರುವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರರು ಉಪಸ್ಥಿತರಿದ್ದರು.
[01/12, 5:08 PM] Kpcc official: *ಕಲಬುರ್ಗಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿ ಮುಖ್ಯಾಂಶಗಳು:*

*ರಣದೀಪ್ ಸಿಂಗ್ ಸುರ್ಜೇವಾಲ:*

ಕಲ್ಯಾಣ ಕರ್ನಾಟಕದ ಜನರ ಮೇಲೆ ಬೊಮ್ಮಾಯಿ ಅವರ ಸರ್ಕಾರ ದ್ವೇಷ ಸಾಧಿಸುತ್ತಿದೆ. ದ್ವೇಷ, ಬೇಧ ಭಾವದ ಮೂಲಕ, ಈ ಭಾಗದ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಈ ಮಹತ್ವದ ಪ್ರದೇಶಕ್ಕೆ ಸಂವಿಧಾನಬದ್ಧವಾಗಿ ವಿಶೇಷ ಸ್ಥಾನಮಾನ ನೀಡಲು ಸಂಸತ್ತಿನಲ್ಲಿ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. 

ಬಿಜೆಪಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವುದರ ವಿರುದ್ಧ ನಿಂತಿತ್ತು. ಬಿಜೆಪಿಯ ಆಗಿನ ಅಧ್ಯಕ್ಷರು ಹಾಗೂ ಉಪಪ್ರಧಾನಿಯಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಅವರು ಕಲ್ಬುರ್ಗಿಯಿಂದ ವಿಜಯಪುರದವರೆಗೂ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದರು. 

ಆದರೆ ಕಾಂಗ್ರೆಸ್ ಪಕ್ಷ ಈ ಭಾಗದ ಜನರಿಗೆ ವಿಶೇಷ ಸ್ಥಾನಮಾನ ನೀಡಲು ಸಂಕಲ್ಪ ಮಾಡಿ, 2013 ರಲ್ಲಿ ಇದನ್ನು ಮಾಡಿ ತೋರಿಸಿತು. ನಾವು ದೇಶದ ಎಲ್ಲ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿ ಹೊರತು ಉಳಿದ ಎಲ್ಲಾ ಪಕ್ಷಗಳ ಒಪ್ಪಿಗೆ ಪಡೆದು 371ಜೆ ವಿಶೇಷ ಸ್ಥಾನಮಾನ ನೀಡುವಲ್ಲಿ ಯಶಸ್ವಿಯಾದೆವು.

ಈ ದೇಶದ ಎರಡು ಕಡೆ ಅತಿಹೆಚ್ಚು ಒಣ ಪ್ರದೇಶಗಳಿವೆ. ಒಂದು ರಾಜಸ್ಥಾನ ಮತ್ತೊಂದು ಕಲ್ಯಾಣ ಕರ್ನಾಟಕ. ಇಲ್ಲಿನ ಜನರು ಶ್ರಮಜೀವಿಗಳು, ಧೈರ್ಯಶಾಲಿಗಳಾದರೂ ಪ್ರಾಕೃತಿಕ ಅನಾನುಕೂಲ ಹಾಗೂ ನೀರಿನ ಕೊರತೆ ಹೆಚ್ಚಾಗಿದೆ.

ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ದಿವಂಗತ ಧರಂಸಿಂಗ್ ಅವರು ಒಟ್ಟಾಗಿ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ಆರಂಭಿಸಿದರು. ಸ್ವಾತಂತ್ರ್ಯ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದ ದೊಡ್ಡ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಈ ಭಾಗದಲ್ಲಿ ತುಂಗಭದ್ರಾ ಆಣೆಕಟ್ಟು, ರಾಯಚೂರಿನಲ್ಲಿ ರಾಜೀವ್ ಗಾಂಧಿ ಥರ್ಮಲ್ ಕೇಂದ್ರ, ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ, ಇಎಸ್ಐ ಆಸ್ಪತ್ರೆ ನಿರ್ಮಾಣ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ, ವಿಶೇಷ ಸ್ಥಾನಮಾನ ನೀಡುವುದರವರೆಗೂ ಎಲ್ಲವನ್ನೂ ಕಾಂಗ್ರೆಸ್ ಪಕ್ಷ ಮಾಡಿದೆ.

ಈ ವಿಶೇಷ ಸ್ಥಾನಮಾನದ ಪರಿಣಾಮ ಈ ಭಾಗದ ಸುಮಾರು 40 ಸಾವಿರ ಮಕ್ಕಳಿಗೆ ವೈದ್ಯಕೀಯ ಸೀಟು ಲಭಿಸಿದೆ. ಕಾಂಗ್ರೆಸ್ ಸರ್ಕಾರದ 5 ವರ್ಷಗಳ ಅವಧಿಯಲ್ಲಿ 30 ಸಾವಿರ ಯುವಕರಿಗೆ ಸರ್ಕಾರಿ ನೌಕರಿ ನೀಡಲಾಗಿದೆ. ಈಗ ಈ ಎಲ್ಲಾ ಕಾರ್ಯಗಳನ್ನು ಪ್ರಶ್ನೆ ಮಾಡಲಾಗುತ್ತಿದೆ.

ಈಗ ಈ ಭಾಗದ ಅಭಿವೃದ್ಧಿಗೆ ಹೊಸ ಯಜ್ಞ ಆರಂಭವಾಗಬೇಕಿದೆ. ಇದರಿಂದ ಈ ಭಾಗದ ಜನರಿಗೆ ಉದ್ಯೋಗ, ಶಿಕ್ಷಣ ಸಿಗುವಂತೆ ಆಗಬೇಕು. ಈಗ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ ಹಾಗೂ ಎಲ್ಲಾ ನಾಯಕರ ನೇತೃತ್ವದಲ್ಲಿ  ಡಿ.10 ರಂದು ಹೊಸ ಸಂಕಲ್ಪದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಯಜ್ಞ ಆರಂಭಿಸಬೇಕಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿದ 40 ಸಾವಿರ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಆರೋಗ್ಯ, ಶಿಕ್ಷಣ, ಉದ್ಯೋಗ, ವಿದ್ಯುತ್, ನೀರಿನ ವಿಚಾರವಾಗಿ ಹಲವು ಭಾಗಗಳಲ್ಲಿ ಸಮಸ್ಯೆ ಇವೆ. 

ಈ ಭಾಗದಲ್ಲಿ ಬಡವರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಒಂದನೇ ತರಗತಿಯಿಂದ 8 ನೇ ತರಗತಿವರೆಗಿನ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ದಶಕಗಳಿಂದ ಕಾಂಗ್ರೆಸ್ ಸರ್ಕಾರ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಮೋದಿ ಸರ್ಕಾರ ನಿಲ್ಲಿಸಿದೆ. ಆಮೂಲಕ ಬಡವರಿಂದ ಶಿಕ್ಷಣದ ಹಕ್ಕು ಕಸಿಯಲಾಗಿದೆ.

ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ನಿರ್ಲಕ್ಷ ವಹಿಸಿದೆ. ಕಾಗದದ ಮೇಲೆ ಮೀಸಲಾತಿ ಹೆಚ್ಚಳ ಮಾಡಿದರೆ ಸಾಲದು. ಅದನ್ನು ಸಂವಿಧಾನದಲ್ಲಿ ಸೇರಿಸಬೇಕು. ಈ ಭಾಗದ ರಕ್ಷಣೆಗಾಗಿ ನಾವು ಸಂವಿಧಾನದಲ್ಲಿ ಬದಲಾವಣೆ ತಂದಿದ್ದೇವೆ. ನಾವು ಕೂಡ ವಿಶೇಷ ಸ್ಥಾನಮಾನ ಅಸಾಧ್ಯ ಎಂದು ಭಾವಿಸಿದ್ದರೆ ಇದು ಸಾಧ್ಯವಾಗುತ್ತಿತ್ತೆ?

ಈಗ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬೊಮ್ಮಾಯಿ ಅವರ ಸರ್ಕಾರ ಕೇವಲ ಆಸೆ ತೋರಿಸುತ್ತಿದೆ. ಈ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ಕಸದ ಬುಟ್ಟಿಗೆ ಎಸೆದಿದೆ. ಹೀಗಾಗಿ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಬಿಜೆಪಿಯಿಂದ ಅಸಾಧ್ಯ. ಇದು ಕೇವಲ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ನಾವು ಅದನ್ನು ಮಾಡಲು ಕಟಿಬದ್ಧರಾಗಿದ್ದೇವೆ. 

ಬಡವರು, ರೈತರು, ಯುವಕರು, ಮಹಿಳೆಯರ ಮೇಲೆ ಆಗುತ್ತಿರುವ ಪ್ರಹಾರದ ವಿರುದ್ಧ ನಾವು ಜನಾಂದೋಲನ ರೂಪಿಸುತ್ತಿದ್ದು, ಮುಂದಿನ 10 ರಂದು ಸಮಾವೇಶ ಮಾಡಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧ್ಯಕ್ಷರು ಸೂಚನೆ ನೀಡಲಿದ್ದಾರೆ. 

ಜನರ ಬದುಕಿನ ಜತೆ ಚೆಲ್ಲಾಟ ಆಡುವುದು ಬಿಜೆಪಿ ಕೆಲಸ. ಆದರೆ ಕಾಂಗ್ರೆಸ್ ದು ಜನರ ಬದುಕು ಕಟ್ಟುವ ಕೆಲಸವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜನರ ಜತೆ ಬಿಜೆಪಿ ಸರ್ಕಾರ ಆಡುತ್ತಿರುವ ಆಟವನ್ನು ನಿಲ್ಲಿಸಬೇಕಿದೆ. ಬಿಜೆಪಿ ಸಮಾಜ ಒಡೆದರೆ, ನಾವು ಸಮಾಜ ಒಂದುಗೂಡಿಸುತ್ತೇವೆ.

*ಡಿ.ಕೆ. ಶಿವಕುಮಾರ್:*

ಕಲ್ಯಾಣ ಕರ್ನಾಟಕದ ಭಾಗದ ಕಲ್ಯಾಣಕ್ಕೆ ಶಕ್ತಿ ತಂದ 371 ಜೆ ವಿಶೇಷ ಸ್ಥಾನಮಾನಕ್ಕೆ 10 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಡಿ.10 ರಂದು ದೊಡ್ಡ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಇಂದು ನಮ್ಮ ಎಲ್ಲಾ ನಾಯಕರ ಜತೆ ಚರ್ಚೆ ಮಾಡಲಾಗಿದೆ. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಅವರು ತಮ್ಮ ರಾಜಕೀಯ ಜೀವನದಲ್ಲಿ ಅತಿ ದೊಡ್ಡ ಸಾಕ್ಷಿ ಗುಡ್ಡೆ ಹಾಕಿದ್ದಾರೆ. ಆ ಮೂಲಕ ಈ ಭಾಗದ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ತಮ್ಮ ಜನ್ಮ ಭೂಮಿಗೆ ಆಗಮಿಸುತ್ತಿದ್ದಾರೆ.

ಖರ್ಗೆ ಅವರು ಸಂವಿಧಾನ ತಿದ್ದುಪಡಿ ಮೂಲಕ ಈ ಭಾಗದ ಜನರ ಬದುಕಿನಲ್ಲಿ ಬದಲಾವಣೆ ತಂದರು. ಹೀಗಾಗಿ ನಾವು ಅವರಿಗೆ ಅಭಿನದನೆ ಸಲ್ಲಿಸಬೇಕು. ಇಂತಹ ಹಲವು ಹೋರಾಟಗಳ ಮೂಲಕ ಇಂದು ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ.

ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಮ್ಮ ನಾಯಕರಿಗೆ ಕೆಲವು ಮಾರ್ಗದರ್ಶನ ನೀಡಲು ಇಲ್ಲಿಗೆ ಬಂದಿದ್ದೇವೆ. ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮೈತ್ರಿ ಸರ್ಕಾರದ ರೀತಿ ಕೆಲಸ ಮಾಡುತ್ತಿದೆ. ಈ ಭಾಗದಿಂದ ಹೆಚ್ಚಿನ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಲಿಲ್ಲ ಎಂಬ ಒಂದೇ ಕಾರಣಕ್ಕೆ ಈ ಭಾಗದ ಜನರ ಮೇಲೆ ದ್ವೇಷದ ಮನೋಭಾವ ತೋರುತ್ತಿದೆ. ಹೀಗಾಗಿ ಈ ಭಾಗದ ಅಭಿವೃದ್ಧಿಗೆ ಬೇಕಾದ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಈ ಬಗ್ಗೆ ನಮ್ಮ ನಾಯಕರು ಸಾಕಷ್ಟು ಬಾರಿ ಧ್ವನಿ ಎತ್ತಿದ್ದಾರೆ.

ಸರ್ಕಾರದ ತಪ್ಪುಗಳನ್ನು ನಾವು ತೋರಿಸಿ, ಅವರು ಎಲ್ಲಿ ತಿದ್ದಿಕೊಳ್ಳಬೇಕು ಎಂದು ತೋರಿಸಬೇಕಾದ ಅಗತ್ಯವಿದೆ. ನಮ್ಮ ಪಕ್ಷದ ಉದ್ದೇಶ ಜನರ ಬದುಕು ಸುಧಾರಣೆ ಕಾಣುವುದು. ಬಿಜೆಪಿ ಅವರ ಉದ್ದೇಶ ಭಾವನೆಗಳ ಮೇಲೆ ರಾಜಕೀಯ ಮಾಡುವುದು. ಭಾವನೆ ಹಾಗೂ ಬದುಕಿನ ಮಧ್ಯೆ ಸಾಕಷ್ಟು ವ್ಯತ್ಯಾಸವಿದೆ. ಬಿಜೆಪಿ ಭಾವನಾತ್ಮಕ ವಿಷಯಗಳಿಗೆ ಒತ್ತು ನೀಡಿದರೆ, ನಾವು ಜನರ ಬದುಕಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಈ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸಲು ಈ ಬೃಹತ್ ಕಾರ್ಯಕ್ರಮವನ್ನು ನಮ್ಮ ಎಲ್ಲಾ ನಾಯಕರು ರೂಪಿಸಿದ್ದಾರೆ.
[01/12, 7:30 PM] Kpcc official: *ಕೆಪಿಸಿಸಿ ವಕ್ತಾರರಾದ ಎಂ ಲಕ್ಷ್ಮಣ್ ಹಾಗೂ ರಮೇಶ್ ಬಾಬು ಅವರ ಜಂಟಿ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು*

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ ಕಂಪನಿಯು 9 ವಿವಿಧ ಬ್ಯಾಂಕ್ ಗಳ ಸಾಲ ಸೇರಿದಂತೆ ಒಟ್ಟು 850 ಕೋಟಿ ರೂಪಾಯಿ ಗುದು ಮಾಡಲು ಕಳೆದ ಏಳೆಂಟು ತಿಂಗಳಿನಿಂದ ಸತತ ಪ್ರಯತ್ನ ಮಾಡುತ್ತಿದ್ದಾರೆ. ಈಗ ಈ ಪ್ರಯತ್ನ ಅಂತಿಮ ಹಂತಕ್ಕೆ ಬಂದು ನಿಂತಿದೆ. 

22.11.2022ರಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಂಪನಿಯಿಂದ ಹಣ ಪಡೆಯಬೇಕಿರುವವರ ಹಿತಾಸಕ್ತಿ ಅರ್ಜಿಯನ್ನು ಕರೆಯಲಾಗಿದೆ.

ರಾಜ್ಯದ ಎಲ್ಲಾ ಸಹಕಾರಿ ಬ್ಯಾಂಕುಗಳ ನೇತೃತ್ವ ವಹಿಸಿರುವ ಪಿಕ್ಸ್ ಬ್ಯಾಂಕ್ ಈ ಸಂಸ್ಥೆಯನ್ನು ದಿವಾಳಿ ಸಂಸ್ಥೆಯೆಂದು ಘೋಷಣೆ ಮಾಡುತ್ತದೆ. ಇದರ ವಿರುದ್ಧ ಧಾರ್ವಾಡ್ ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ಕೋರುತ್ತಾರೆ. ಆಗ ನ್ಯಾಯ ಬೇಕು ನೀವು ಮಾಡಿರುವ ಸಾಲದ ಶೇಕಡ 50ರಷ್ಟು ಹಣವನ್ನು ತೀರಿಸಿ ನಂತರ ನ್ಯಾಯ ಬೇಕು ಆಗಮಿಸಬೇಕು ಎಂದು ಆರು ತಿಂಗಳ ಗಡಗು ನೀಡುತ್ತಾರೆ. ಆದರೆ ಈ ಸಂಸ್ಥೆ ಒಂದು ಪೈಸೆ ಸಾಲವನ್ನು ತೀರಿಸಲಿಲ್ಲ. ನಂತರ 2021ರ ನವೆಂಬರ್ ನಲ್ಲಿ ಅಪೆಕ್ಸ್ ಬ್ಯಾಂಕ್ಸ್ ನ ಮುಖ್ಯಸ್ಥರಾದ ಬೆಳ್ಳಿ ಪ್ರಕಾಶ್ ಎಂಬುವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಈ ಸಕ್ಕರೆ ಕಾರ್ಖಾನೆ ಆಸ್ತಿಯನ್ನು ಮುಟ್ಟೋಗೋಲು ಹಾಕಿಕೊಂಡು ಅದರಿಂದ ಬರುವ ಹಣವನ್ನು ಬ್ಯಾಂಕುಗಳ ಸಾಲ ತೀರಿಸಲು ನೀಡಬೇಕು ಎಂದು ತಿಳಿಸುತ್ತಾರೆ.

ಬಿಜೆಪಿ ಸರ್ಕಾರ ದೇಶದಾದ್ಯಂತ ಮೋಸಗಾರರು ರೌಡಿಗಳ ರಕ್ಷಣೆಗೆ ನಿಂತಿದೆ. 2019ರಲ್ಲಿ ಸಮ್ಮಿಶ್ರ ಸರ್ಕಾರವನ್ನು ಕೆಳಮಿದ ನಂತರ ಕೇಂದ್ರ ಸಹಕಾರ ಸಚಿವರಾದ ಅಮಿತ್ ಶಾ ಅವರು ರಮೇಶ್ ಜಾರಕಿಹೊಳಿ ಅವರ ರಕ್ಷಣೆಗೆ ನಿಂತಿದ್ದಾರೆ. ಇವರ ಜೊತೆಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಫಡ್ನವೀಸ್, ರಾಜ್ಯ ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್, ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಕೂಡ ರಮೇಶ್ ಜಾರಕಿಹೊಳಿ ಅವರ ರಕ್ಷಣೆಗೆ ನಿಂತಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಸಾಲ ಮಾಡಿರುವ 9 ಸಹಕಾರಿ ಬ್ಯಾಂಕುಗಳ ಪೈಕಿ ಹರಿಹಂತ್ ಕೋ ಆಪರೇಟಿವ್ ಬ್ಯಾಂಕ್ ಕೂಡ ಒಂದು. ಇದರ ಮಾಲೀಕರಾದ ಅಭಿನಂದನ್ ಪಾಟೀಲ್ ಅವರು ರಮೇಶ್ ಜಾರಕಿಹೊಳಿಯವರ ಬೇನಾಮಿ ವ್ಯಕ್ತಿಯಾಗಿದ್ದಾರೆ. ರಮೇಶ್ ಜಾರಕಿಹೊಳಿಯವರು ಇವರ ಸಹಕಾರಿ ಬ್ಯಾಂಕ್ ನಿಂದ 42 ಕೋಟಿ ಸಾಲವನ್ನು ಪಡೆದಿರುತ್ತಾರೆ. 

ಈ ಬ್ಯಾಂಕ್ ನವರು ನ್ಯಾಷನಲ್ ಕಂಪನಿ ಲಾ ಟ್ರಿಬ್ಯುನಲ್ (NCLT) ಮೊರೆ ಹೋಗಿ, ತಮ್ಮ ಸಾಲ ವಸೂಲಾತಿಗೆ ಅರ್ಜಿ ಹಾಕುತ್ತಾರೆ. ಈ ಅರ್ಜಿ ಆಧಾರದ ಮೇಲೆ NCLTಯು ಐ ಆರ್ ಸಿ (ವಸೂಲಿ) ಪ್ರಕ್ರಿಯೆಗೆ ಆದೇಶ ನೀಡುತ್ತಾರೆ. 

ಈ ಸಂದರ್ಭದಲ್ಲಿ ಕೇವಲ ಹರಿಹಂತ್ ಬ್ಯಾಂಕ್ ಹೊರತುಪಡಿಸಿ ಉಳಿದ ಯಾವುದೇ ಬ್ಯಾಂಕ್ ಗಳು ಸಾಲ ಮರುಪಾವತಿ ಮಾಡಲು NCLT ಗೆ ಅರ್ಜಿ ಹಾಕಿಲ್ಲ ಏಕೆ ಎಂದು ನಾವು ಇತರೆ ಎಂಟು ಬ್ಯಾಂಕುಗಳಿಗೆ ಪತ್ರ ಬರೆಯಲಾಯಿತು.

ನಮ್ಮ ಪತ್ರವನ್ನು ಪರಿಗಣಿಸಿದ NCLT ಕಳೆದ ತಿಂಗಳು ತಾನು ಆದೇಶಿಸಿದ ಪ್ರಕ್ರಿಯೆಗೆ ಸಂಪೂರ್ಣ ತಡೆ ನೀಡಿತು. ಈಗ ಒಂದು ವಾರದ ಹಿಂದೆ ತಡೆಯಾಜ್ಞೆಯನ್ನು ಹಿಂಪಡೆದು ಬಿಡ್ ಪ್ರಕ್ರಿಯೆ ಆರಂಭವಾಗಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಜಾಹಿರಾತು ನೀಡಲಾಗಿದ್ದು, ದಿವಾಳಿಯಾಗಿರುವ ಸೌಭಾಗ್ಯ ಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿಯನ್ನು ಖರೀದಿಸಲು ಬಯಸುವವರು ಅರ್ಜಿ ಹಾಕಬಹುದು ಎಂದು ಕೆಲವು ಷರತ್ತುಗಳನ್ನು ಪ್ರಕಟಿಸಿದೆ.

ಈ ಷರತ್ತುಗಳು ಏನೆಂದರೆ, ಈ ಕಂಪನಿ ಖರೀದಿಸುವವರು ಶುಗರ್ ಕಂಪನಿ ನಡೆಸಿರಬೇಕು. ಜೊತೆಗೆ ಫೈನಾನ್ಸ್ ಕಂಪನಿಗಳು ಕೂಡ ಈ ಕಾರ್ಖಾನೆಯನ್ನು ಖರೀದಿಸಬಹುದು ಎಂದು ತಿಳಿಸಲಾಗಿದೆ. ಇಲ್ಲಿ ಪ್ರಮುಖ ವಿಚಾರ ಎಂದರೆ, ಈ ಜಾಹೀರಾತಿನ 5ನೇ ಅಂಶದಲ್ಲಿ ಮುಖ್ಯ ಉತ್ಪನ್ನಗಳ ಅಳವಡಿಕೆ ಸಾಮರ್ಥ್ಯ ಎಂದು ನಮೂದಿಸಿ, ಕಬ್ಬಿನ ಕಾಕಂಬಿಯಿಂದ 60 ಕೆಎಲ್ ಪಿಡಿ ಎಥೆನಾಲ್ ಇಂಧನ ಘಟಕ ಇದೆ ಅದನ್ನು ಮಾರಾಟಕ್ಕೆ ಒಳಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕಾರ್ಖಾನೆಯಲ್ಲಿ ಈ ಘಟಕವನ್ನು ತೋರಿಸಬೇಕೆಂದು ನಾನು ಈ ಮೂಲಕ ಅಪೇಕ್ಸ್ ಬ್ಯಾಂಕ್ NCLT ಸೇರಿದಂತೆ ಎಲ್ಲರಿಗೂ ಸವಾಲು ಹಾಕುತ್ತೇನೆ. ಕಾರಣ ಕಾರ್ಖಾನೆಯಲ್ಲಿ ಈ ಘಟಕ ಇಲ್ಲ. ಈ ಘಟಕ ನಿರ್ಮಾಣಕ್ಕಾಗಿ ಬ್ಯಾಂಕಿನಿಂದ 60 ಕೋಟಿ ಸಾಲ ಪಡೆಯಲಾಗಿದೆ. ಈ ಸಾಲವನ್ನು ಹೈಟೆಕ್ ಇಂಜಿನಿಯರ್ಸ್ ಕಾರ್ಪೊರೇಷನ್ ಲಿಮಿಟೆಡ್ ಎಂಬ ಮಹಾರಾಷ್ಟ್ರದ ಕಂಪನಿಗೆ ಈ ಘಟಕವನ್ನು ಖರೀದಿಸಲು ಬ್ಯಾಂಕ್ನಿಂದ ಹಣ ವರ್ಗಾವಣೆ ಆಗುತ್ತದೆ. ಇದು ಈ ಘಟಕ ಸ್ಥಾಪನೆಗೆ ಅಗತ್ಯವಿರುವ ಯಂತ್ರೋಪಕರಣಗಳ ಸರಬರಾಜು ಕಂಪನಿಯಾಗಿದೆ. ಈ ಕಂಪನಿಗೆ ಹಣ ವರ್ಗಾವಣೆಯಾದರೂ ಯಂತ್ರೋಪಕರಣಗಳು ಬರುವುದಿಲ್ಲ ಹಾಗೂ ಈ ಘಟಕ ಸ್ಥಾಪನೆ ಆಗುವುದೇ ಇಲ್ಲ. ಈ ಕಂಪನಿ ಮೂಲಕ ಈ 60 ಕೋಟಿ ಹಣವನ್ನು ರಮೇಶ್ ಜಾರಕಿಹೊಳಿಯವರ ಬೇನಾಮಿ ಖಾತೆಗಳಿಗೆ ಜಮಾವಣೆ ಆಗುತ್ತದೆ. 

ಈಗ ಈ ಘಟಕ ಇದೆ ಎಂದು ಪತ್ರಿಕೆಯಲ್ಲಿ ಬಹಿರಂಗವಾಗಿ ಜಾಹೀರಾತು ನೀಡುತ್ತಿದ್ದಾರೆ. ಮುಂದಿನ ವಾರ ನಾನು ಮಾಧ್ಯಮಗಳ ಜೊತೆ ಈ ಸೌಭಾಗ್ಯ ಲಕ್ಷ್ಮಿ ಶುಗರ್ ಕಾರ್ಖಾನೆಗೆ ತೆರಳಲ್ಲಿದ್ದೇನೆ. ಅಲ್ಲಿ ಹೋಗಿ ಈ ಘಟಕ ಇದೆಯಾ ಇಲ್ಲವೇ ಎಂದು ಪರಿಶೀಲನೆ ಮಾಡಬೇಕಿದೆ. ಸದ್ಯ ಈ ಕಾಕಾಣೆ ಸುತ್ತಮುತ್ತ 150ಕ್ಕೂ ಹೆಚ್ಚು ಪೊಲೀಸರು ಇದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಭದ್ರತೆ ಯಾಕೆ ನಿಯೋಜಿಸಿದ್ದಾರೆ ಎಂದು ಗೊತ್ತಿಲ್ಲ.

ಕಂಪನಿಯನ್ನು ಖರೀದಿಸುತ್ತೇವೆ ಎಂದು ಅರ್ಜಿ ಹಾಕುವವರ ಪರಿಶೀಲನೆಯನ್ನು ಸಾಲ ಪಡೆಯಲಾಗಿರುವ ಈ ಒಂಬತ್ತು ಬ್ಯಾಂಕುಗಳು ವೋಟಿಂಗ್ ಮೂಲಕ ನಿರ್ಧರಿಸುತ್ತವೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ ಈ ಪ್ರತಿ ಬ್ಯಾಂಕಿನ ಅಧಿಕಾರಿಗಳಿಗೆ 3 ಕೋಟಿ ನೀಡಲಾಗಿದ್ದು, ರಮೇಶ್ ಜಾರಕಿಹೊಳಿ ಅವರು ಯಾವ ಕಂಪನಿ ಸೂಚಿಸುತ್ತಾರೆ ಆ ಕಂಪನಿಗೆ ಈ ಕಾರ್ಖಾನೆಯನ್ನು ಮಾರಾಟ ಮಾಡಲು ಈ ಬ್ಯಾಂಕುಗಳು ಆಯ್ಕೆ ಮಾಡಬೇಕು. ಕಾರ್ಖಾನೆ ಖರೀದಿಸುವರು ಈ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿನ ಯಂತ್ರೋಪಕರಣಗಳ ಮೌಲ್ಯವನ್ನು ಪರಿಶೀಲಿಸಿದ ನಂತರ ಆತ ತಾನು ಖರೀದಿಸಲು ಇಚ್ಚಿಸುವ ಮೊತ್ತವನ್ನು ನಿಗದಿ ಮಾಡುತ್ತಾನೆ. ಹೀಗಾಗಿ ಇವರೇ ತಮ್ಮ ಸುಳ್ಳು ಭೀಮಾಂಬಿಗಳ ಮೂಲಕ ಈ ಪ್ರಕ್ರಿಯೆ ನಡೆಸುವ ಸಾಧ್ಯತೆ ಇದೆ. ಯಾರೇ ಈ ಕ ಕಾರ್ಖಾನೆ ಖರೀದಿಸಲು ಮುಂದೆ ಬಂದರೂ 150 ಕೋಟಿಗೂ ಹೆಚ್ಚಿನ ದರವನ್ನು ನಿಗದಿ ಮಾಡುವುದಿಲ್ಲ. ಒಂದು ವೇಳೆ 900 ಕೋಟಿ ಕೊಟ್ಟು ಈ ಕಾರ್ಖಾನೆ ಖರೀದಿ ಮಾಡುತ್ತೇನೆ ಎಂದು ಯಾರಾದರೂ ಮುಂದೆ ಬಂದರೂ ಅವರನ್ನು ಈ ಒಂಬತ್ತು ಬ್ಯಾಂಕ್ ಗಳು ಆಯ್ಕೆ ಮಾಡುವುದಿಲ್ಲ. ಅಂತಿಮವಾಗಿ ರಮೇಶ್ ಜಾರಕಿ ಹೋಳಿ ಅವರ ಬೇನಾಮಿಯಾಗಿರುವ ಹರಿಹಂತ್ ಅವರಿಗೆ ಈ ಕಾರ್ಖಾನೆ ಮಾರಾಟವಾಗುವಂತೆ ನೋಡಿಕೊಳ್ಳುತ್ತಾರೆ. ಇದೊಂದು ವ್ಯವಸ್ಥಿತವಾದ ವಂಚನೆ. ಆ ಮೂಲಕ ರಾಜ್ಯದ ಜನರ 850 ಕೋಟಿ ರೂಪಾಯಿಯನ್ನು ಲೂಟಿ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಸರ್ಕಾರ ಇದುವರೆಗೂ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಕುರಿತ ಒಂದು ವರದಿಯನ್ನು ಸರ್ಕಾರ ತರಿಸಿಕೊಂಡಿಲ್ಲ.

ಸರ್ಕಾರಕ್ಕೆ ಕಾರ್ಖಾನೆ ಹಾಗೂ ರೈತರು, ಜನರ ಹಣದ ಬಗ್ಗೆ ಕಾಳಜಿ ಇದ್ದರೆ, ಈ ಕಾರ್ಖಾನೆಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಆ ಮೂಲಕ 9 ಬ್ಯಾಂಕುಗಳ ಸಾಲ, ರೈತರಿಗೆ ಸಿಗಬೇಕಾಗಿರುವ ಬಾಕಿ ಹಣ, ಸರಬರಾಜು ದಾರರಿಗೆ ಆಗಬೇಕಿರುವ ಬಾಕಿ ಪಾವತಿಯನ್ನು ನೀವೇ ನೀಡಿ ಎಂದು ಆಗ್ರಹಿಸುತ್ತೇವೆ.

ಒಂದು ವೇಳೆ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದಿದ್ದರೆ, ಸುಮ್ಮನೆ ಕೂರುತ್ತಿದ್ದರೆ. ಇದೇ ಕಾರಣಕ್ಕೆ ದೇಶದಾದ್ಯಂತ ಮೋಸಗಾರರು ವಂಚಕರು ರೌಡಿಗಳು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ. ಬಿಜೆಪಿ ಸೇರಿದರೆ ನಮಗೆ ರಕ್ಷಣೆ ಸಿಗಲಿದೆ ಎಂದು ಇವರು ಆಲೋಚಿಸುತ್ತಿದ್ದಾರೆ.

ರಾಜ್ಯದ್ಯಂತ 60 ರೂಡಿಗಳು ಬಿಜೆಪಿ ಸೇರಲು ಪಟ್ಟಿ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಈ ರೌಡಿಗಳನ್ನು ಕಣಕ್ಕಿಳಿಸಲು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. 

ನಾಗಮಂಗಲದಲ್ಲಿ ಫೈಟರ್ ರವಿ ಎಂಬಾತ ಈಗಾಗಲೇ ಧಮಕಿಹಾಕಲು ಶುರು ಮಾಡಿಕೊಂಡಿದ್ದಾರೆ. ಇನ್ನು ರಾಜ್ಯದ 47 ಬಿಜೆಪಿ ಶಾಸಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿವೆ. ಅವರಿಗೆ ಕ್ರಿಮಿನಲ್ ಹಿನ್ನೆಲೆಗಳಿವೆ. 224 ಕ್ಷೇತ್ರದ ಪೈಕಿ ಬಿಜೆಪಿಯ 47, ಕಾಂಗ್ರೆಸ್ ನ 13 ಹಾಗೂ ಜೆಡಿಎಸ್ ನ ಹನ್ನೊಂದು ಶಾಸಕರ ಮೇಲೆ ಕ್ರಿಮಿನಲ್ ಹಿನ್ನಲೆ ಇದೆ. ಇನ್ನು ಮೂರು ಜನ ಸಂಸದರ ಮೇಲು ಕ್ರಿಮಿನಲ್ ಕೇಸ್ಗಳಿದ್ದು ಆ ಮೂರು ಜನ ಸಂಸದರು ಬಿಜೆಪಿಯವರಾಗಿದ್ದಾರೆ. 16 ಮಂತ್ರಿಗಳ ಪೈಕಿ 13 ಜನ ಮಂತ್ರಿಗಳ ಮೇಲೆ ಲೈಂಗಿಕ ಸಿಡಿ ಪ್ರಕರಣಗಳಿವೆ. ಈ 13 ಮಂದಿಯು ಈ ವಿಚಾರವಾಗಿ ಸುದ್ದಿ ಪ್ರಕಟಿಸಿದಂತೆ ತಡೆಯಾಜ್ಞೆ ತಂದಿದ್ದಾರೆ. ಇದು ಬಿಜೆಪಿಯವರ ಸಂಸ್ಕೃತಿ.

ಸೌಭಾಗ್ಯ ಲಕ್ಷ್ಮಿ ಶುಗರ್ ಕಂಪನಿ ವಿಚಾರದಲ್ಲಿ ನಾವು ಯಾವುದೇ ಹಂತದಲ್ಲೂ ಸುಮ್ಮನೆ ಕೂರುವುದಿಲ್ಲ. ಈ ವಿಚಾರವನ್ನು ನಾವು ಹೈಕೋರ್ಟ್ ಗೆ ತೆಗೆದುಕೊಂಡು ಹೋಗಲಿದ್ದು ಅಲ್ಲಿ ಪ್ರಕ್ರಿಯೆ ಆರಂಭವಾಗಲಿ. ಸರಿಯಾದ ರೀತಿಯಲ್ಲಿ ಪ್ರಕ್ರಿಯೆ ನಡೆಯದಿದ್ದರೆ NCLT ಯ irc ಪ್ರಕ್ರಿಯೆ ವಿರುದ್ಧ ಕೋರ್ಟ್ ಮೆಟ್ಟಿಲು ಏರುತ್ತೇವೆ. ಬ್ಯಾಂಕ್ ಹಾಗೂ ಇತರ ಎಲ್ಲಾ ಸಾಲ ಹಾಗೂ ಬಾಕಿ ಪಾವತಿಗಳನ್ನು ತೀರಿಸುವ ಅವಕಾಶ ಸಿಗದಿದ್ದರೆ ಈ ಕಾರ್ಖಾನೆಯನ್ನು ಯಾರಿಗೂ ಮಾರಾಟ ಮಾಡದೆ ಸರ್ಕಾರವೇ ಉಳಿಸಿಕೊಳ್ಳಬೇಕು. ಕಾರಣ ಈ ಕಾರ್ಖಾನೆಯ ಒಟ್ಟು ಆಸ್ತಿಯ ಮೌಲ್ಯ ಸುಮಾರು ಒಂದು ಸಾವಿರ ಕೋಟಿ ಇದೆ.

ಇನ್ನು ಎರಡನೇ ವಿಚಾರ ಎಂದರೆ ಮೈಸೂರಿನ ಸಂಸದರು ಬಸ್ ತಂಗು ತಾಣಗಳ ಮೇಲಿದ್ದ ಮೂರು ಗುಂಬಜ್ ಗಳಿದ್ದ ಕಾರಣ ಅದು ಮಸೀದಿ ರೀತಿಯಲ್ಲಿ ಕಾಣುತ್ತಿದೆ ಎಂದು ಎರಡು ಗುಂಬಜ್ ಗಳನ್ನು ಹೊಡೆದು ಹಾಕಿದ್ದಾರೆ. ಇಂದಿನ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತಿನ ಪ್ರಕಾರ ಮುಂದಿನ ಜಿ 20 ಶೃಂಗಸಭೆಯು ಭಾರತದಲ್ಲಿ ನಡೆಯಲಿದೆ. 

ಇದಕ್ಕಾಗಿ ದೇಶದಲ್ಲಿ ನೂರು ಪಾರಂಪರಿಕ ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ವಿಶೇಷ ದೀಪಗಳ ಅಳವಡಿಕೆ ಕಾರ್ಯ ಆರಂಭವಾಗಲಿದೆ. ಈ 100 ಕಟ್ಟಡಗಳ ಪೈಕಿ ಟಿಪ್ಪು ಅರಮನೆ ಕೂಡ ಒಂದು. ಗೋಲ್ ಗುಂಬಜ್ ಎರಡನೆಯದಾಗಿದೆ. ಬಿಜೆಪಿ ನಾಯಕರು ಟಿಪ್ಪುವಿನ ಬಗ್ಗೆ ಬಾಯಿಗೆ ಬಂದಂತೆ ಬೈಯುತ್ತಿದ್ದಾರೆ. ಸಿಟಿ ರವಿ ಹಾಗೂ ಪ್ರತಾಪ್ ಸಿಂಹ ಅವರೇ, ದಯಮಾಡಿ ನೀವು   ನರೇಂದ್ರ ಮೋದಿ ಅವರನ್ನು ಈ ವಿಚಾರವಾಗಿ ಕೇಳಬೇಕು. ಟಿಪ್ಪುವಿನ ವಿರುದ್ಧ ಮತಂಗ ಕೊಲೆಗಡುಕ ಎಂಬ ಪದಗಳನ್ನು ಬಳಸುತ್ತೀರಿ. ಆದರೆ ಈಗ ನರೇಂದ್ರ ಮೋದಿ ಅವರೇ ಟಿಪ್ಪು ಅವರ ಮನೆ ಹಾಗೂ ಗೋಲ್ ಗುಂಬಜ್ ಗೆ ದೀಪಾಲಂಕಾರ ಮಾಡುತ್ತಿದ್ದಾರೆ. ಇದು ನಿಮ್ಮ ಇಬ್ಬಗೆಯ ನೀತಿಯಲ್ಲವೇ? ಇದೆಲ್ಲವೂ ಜನಗಳಿಗೆ ಅರ್ಥವಾಗುತ್ತದೆ. ಮುಂದಿನ ದಿನಗಳಲ್ಲಿ ಇದಕ್ಕೆ ನೀವು ಉತ್ತರ ನೀಡಬೇಕು. ಈ ಬಗ್ಗೆ ಸಿಟಿ ರವಿ ಹಾಗೂ ಪ್ರತಾಪ್ ಸಿಂಹ ಅವರು ಹೇಳಿಕೆ ನೀಡಬೇಕು.

*ರಮೇಶ್ ಬಾಬು:*

ಬಿಜೆಪಿಯ 40% ಸರ್ಕಾರ ಬೆಂಗಳೂರಿನ ಭೂಗಳ್ಳರ ಜೊತೆಯು ಶಾಮಿಲಾಗಿದೆ. ಸರ್ಕಾರಿ ಜಾಗವನ್ನು ಕಬ್ಬಡಿಸುವವರಿಗೆ ಇಲಾಖೆಯೇ ಹಸಿರು ನಿಶಾನೆ ನೀಡುತ್ತಿದೆ. ಇದಕ್ಕೆ ಉದಾಹರಣೆ ಬಿ ಟಿ ಎಂ ಲೇಔಟ್ಗೆ ಸಂಬಂಧಿಸಿದ ಸಿಎ ನಿವೇಶನ 12/1, ಇದನ್ನು 2019ರಲ್ಲಿ ಬಿಡಿಎ ನಿಯಮಾನುಸಾರ ಕೇಂದ್ರ ಸರ್ಕಾರದ ಸ್ವಾಮೀಜಿಗೆ ಒಳಪಟ್ಟಂತಹ ಭಾರತ್ ಆಯಿಲ್ ಕಾರ್ಪೊರೇಷನ್ ಗೆ ಹಂಚಿಕೆ ಮಾಡುತ್ತಾರೆ. ಈ ಕಂಪನಿ ಅಲ್ಲಿ ಕೆಲಸ ಮಾಡಲು ಹೋದಾಗ ಸ್ಥಳೀಯರು ಬಿಜೆಪಿ ನಾಯಕರು ಅದಕ್ಕೆ ಅಡ್ಡಿಪಡಿಸುತ್ತಾರೆ. ಈ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿದರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ಇದ್ದರೂ ಕೂಡ ಈ ನಿವೇಶನವನ್ನು ಈ ಸಂಸ್ಥೆಗೆ ನೀಡಿಲ್ಲ.

ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಡಬಲ್ ಇಂಜಿನ್ ಎನ್ನುವ ಸರ್ಕಾರ ಕಮಿಷನ್ ಸಿಗುತ್ತದೆ ಎಂದರೆ ಯಾವುದಕ್ಕೂ ಆದ್ಯತೆ ನೀಡುವುದಿಲ್ಲ. ಕೇಂದ್ರ ಸರ್ಕಾರದ ಸಂಸ್ಥೆಗೆ ಹಂಚಿಕೆಯಾಗಿರುವ ಸಿಎನಿವೇಶನ ಎರಡು ಮೂರು ವರ್ಷವಾದರೂ ನೀಡುವುದಿಲ್ಲ ಎಂದರೆ ಭೂಗಳ್ಳರು ಇದಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದರೆ, ಇವರಿಂದ ಸಂಸ್ಥೆ ಗೆ ಸೇರಬೇಕಾದ ಜಾಗ  ರಕ್ಷಣೆ ಮಾಡುತ್ತಿಲ್ಲ ಎಂದರೆ, ಕೇಂದ್ರವನ್ನು ಲೆಕ್ಕಿಸದೆ ಕಮಿಷನ್ ಧಂದೆಗೆ ಇಳಿದಿದೆ ಎಂಬುದು ಸ್ಪಷ್ಟವಾಗುತ್ತದೆ. 

ಜುಲೈ 28ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಈ ವಿಚಾರವನ್ನು ಗಮನಕ್ಕೆ ತಂದಿದ್ದೆ. ನಂತರ ಇಪ್ಪತ್ರವನ್ನು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಕಳುಹಿಸಿ ಕ್ರಮ ಕೈಗೊಳ್ಳುವಂತೆ ಹೆಸರಿಗಷ್ಟೇ ಸೂಚಿಸುತ್ತಾರೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. 

ಆಯಿಲ್ ಕಾರ್ಪೊರೇಷನ್ ಅಧಿಕಾರಿಗಳು ಪೊಲೀಸ್ ಕಮಿಷನರ್, ಬಿಡಿಎ ಆಯುಕ್ತರು, ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದರು ಯಾವುದೇ ಪ್ರಯೋಜನವಾಗಿಲ್ಲ. ಬಿಜೆಪಿಯವರು ಮಾತೆತ್ತಿದರೆ ದಾಖಲೆ ನೀಡಿ ಎಂದು ಕೇಳುತ್ತಾರೆ. 

ಮತದಾರರ ಮಾಹಿತಿ ಕೊಡಗು ಪ್ರಕರಣದಲ್ಲೂ ಕೂಡ ಬಿಜೆಪಿ ನಾಯಕರು ದಾಖಲೆ ನೀಡಿ ಎಂದು ಹಾರೈಕೆ ಉತ್ತರ ನೀಡಿದ್ದರು. ಆದರೆ ಈಗ ಇಬ್ಬರು ಈ ಎಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂತಹ ಬೆಳವಣಿಗೆ ನಡೆದಿದೆ. 40% ಕಮಿಷನ್ ಧಂದೆಗಾಗಿ ಇಡೀ ವ್ಯವಸ್ಥೆಯನ್ನೇ ಕಲುಷಿತಗೊಳಿಸಲಾಗಿದೆ.

ಮುಖ್ಯಮಂತ್ರಿಗಳು ಬಾಯಿ ಮಾತಲ್ಲಿ ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿದರೆ ಆಗುವುದಿಲ್ಲ. 40% ಕಮಿಷನ್ ಗಾಗಿ ಸರ್ಕಾರವನ್ನೇ ಮಾರಾಟ ಮಾಡುವ ಕೆಲಸಕ್ಕೆ ಮುಂದಾಗಬೇಡಿ. ಕೇಂದ್ರ ಸರ್ಕಾರದ ಸಮಯದ ಕಂಪನಿಗೆ ಅಡ್ಡಿಪಡಿಸುತ್ತಿರುವ ಅಧಿಕಾರಿಗಳು ಹಾಗೂ ಭೂಗಳ್ಳರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು. 

ಎರಡನೇ ವಿಚಾರ ಎಂದರೆ, ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡುವಾಗ ರಾವಣ ಎಂಬ ಪದವನ್ನು ಬಳಸಿದ್ದಾರೆ. ಇನ್ನು ಮುಂದೆ ಬಿಜೆಪಿಯವರೇ ವಿರೋಧಪಕ್ಷದ ನಾಯಕರು ಏನು ಮಾತನಾಡಬೇಕು ಎಂದು ಭಾಷಣ ಬರೆದುಕೊಟ್ಟರೆ ಚೆನ್ನಾಗಿರುತ್ತದೆ. 

ಮಂಗಳೂರಿನ ಭಾಗದ ಕಾಲೇಜಿನಲ್ಲಿ ಶಿಕ್ಷಕರು ಒಬ್ಬರು ವಿದ್ಯಾರ್ಥಿಗೆ ಕಸಬ್ ಎಂದು ಕರೆದಿದ್ದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವರು ನಮ್ಮಲ್ಲಿ ಹಲವು ಬಾರಿ ರಾವಣ ಎಂಬ ಪದ ಪ್ರಯೋಗವನ್ನು ಮಾಡುತ್ತೇವೆ ಹೀಗಾಗಿ ಕಸಬ್ ಎಂದು ಹೇಳಿರುವುದು ತಪ್ಪೇನಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. 

ಅತ್ತ ಗುಜರಾತಿನಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ರಾವಣ ಎಂಬ ಪದ ಬಳಕೆಗೆ ಸಹಿಸಿಕೊಳ್ಳಲಾಗದ ಬಿಜೆಪಿಯವರು ಈ ದೇಶವನ್ನು ಯಾವ ಕಡೆ ತೆಗೆದುಕೊಂಡು ಹೋಗುತ್ತಿದ್ದಾರೆ. ಬಿಜೆಪಿ ನಾಯಕರು ಖರ್ಗೆಯವರು ಕೊಟ್ಟಿರುವ ಹೇಳಿಕೆಯನ್ನು ಆರೋಗ್ಯಕರ ರೀತಿಯಲ್ಲಿ ಸ್ವೀಕರಿಸು ಬೇಕು. ಸಂಸದೀಯ ವ್ಯವಸ್ಥೆಯಲ್ಲಿ ಆರೋಗ್ಯಕರ ಟೀಕೆಗೆ ಅವಕಾಶ ಇರುತ್ತದೆ. ಖರ್ಗೆಯವರು ತಮ್ಮ ಸಂಸದೀಯ ಜೀವನದ ಹಾದಿಯಲ್ಲಿ ಇಂದಿಗೂ ಆ ಸಂಸದೀಯ ಪದದಿಂದ ಟೀಕೆ ಮಾಡಿದ ಉದಾಹರಣೆಗಳಿಲ್ಲ. ಪ್ರಧಾನ ಮಂತ್ರಿಗಳು ಇಂತಹ ಟೀಕೆಗಳನ್ನು ಸ್ವೀಕರಿಸಿ ರಾಜಕೀಯವಾಗಿ ಉತ್ತರ ನೀಡಬೇಕು. ಅದನ್ನು ಬಿಟ್ಟು ಹವಾ ಹೇಳನ ಮಾಡುವುದು ಒಳ್ಳೆಯ ರೀತಿಯ ಬೆಳವಣಿಗೆಯಲ್ಲ.

*ಪ್ರಶ್ನೋತ್ತರ*

ಬಿಜೆಪಿ ಸೇರಲು ಒಂದಾಗಿರುವ 60 ಜನ ರೌಡಿಗಳ ಪಟ್ಟಿ ಇದೆಯೇ ಎಂಬ ಪ್ರಶ್ನೆಗೆ, ' ಈ ಬಗ್ಗೆ ನಮಗೆ ಮಾಹಿತಿ ಇದೆ ಯಾವ ಜಿಲ್ಲೆಯಿಂದ ಎಷ್ಟು ಜನ ಸೇರುತ್ತಿದ್ದಾರೆ ಎಂಬ ಮಾಹಿತಿಯು ಇದೆ. ಬೆಂಗಳೂರಿನಲ್ಲಿ 26 ಜನರಿದ್ದಾರೆ. ಈ ವಿಚಾರದಲ್ಲಿ ಕುತೂಹಲ ಹೀಗೆ ಇರಲಿ. ಸ್ಪೀಕರ್ ಅವರು ಸೇರಿದಂತೆ ನಾವು ಆರ್ ಎಸ್ ಎಸ್ ಹಿನ್ನೆಲೆಯಿಂದ ಬಂದವರು ಆರ್ ಎಸ್ ಎಸ್ ನಲ್ಲಿ ವ್ಯಕ್ತಿ, ವ್ಯಕ್ತಿತ್ವ ಹಾಗೂ ಸಂಸ್ಕೃತಿ, ದೇಶ ನಿರ್ಮಾಣ ಬೆಳವಣಿಗೆಗೆ ಅವಕಾಶವಿದೆ ಎಂದು ಹೇಳುತ್ತಾರೆ. ಆದರೆ ರೌಡಿಗಳನ್ನು ಯಾಕೆ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಸಮರ್ಥನೆ ಮಾಡಿಕೊಂಡವರು ಮುಖ್ಯಮಂತ್ರಿಗಳು ಹಾಗೂ ಸಚಿವ ಅಶ್ವತ್ ನಾರಾಯಣ ಅವರು. ಮಾಧ್ಯಮಗಳಲ್ಲಿ ಟೀಕೆ ಹೆಚ್ಚಾದ ಬಳಿಕ ನಮಗೂವರೆಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಕೊಡಗೇರಿ ಪ್ರದೇಶಗಳಲ್ಲಿ ಮತ ಸೆಳೆಯುವ ಉದ್ದೇಶದಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿತ್ತು ಎಂದು ಅವರದೇ ಪಕ್ಷದ ನಾಯಕರು ಹೇಳುತ್ತಿದ್ದಾರೆ. ಈ ಪಟ್ಟಿಯನ್ನು ಸಮಯ ಬಂದಾಗ ತಿಳಿಸುತ್ತೇವೆ. ಈ ಪಟ್ಟಿಯನ್ನು ಬಿಜೆಪಿಯವರೇ ನೀಡಬಹುದು ಅದಕ್ಕಾಗಿ ಕಾಯೋಣ. ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರ ಮೇಲೆ ನಾಲ್ಕು ಪ್ರಕರಣ, ಕೇಂದ್ರ ಸಚಿವ ಪ್ರಹಲ್ಲಾ ಜೋಶಿಯವರ ಮೇಲೆ ಒಂದು ಕ್ರಿಮಿನಲ್ ಪ್ರಕರಣ ಇದೆ. ಸಚಿವ ಶ್ರೀರಾಮುಲು, ಸಚಿವ ಗೋಪಾಲಯ್ಯ ಅವರು ಈ ಹಿಂದೆ ಎರಡು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದರು. ನಾವಿಲ್ಲಿ ಯಾವುದೇ ವ್ಯಕ್ತಿಗಳ ಮೇಲೆ ಟೀಕೆ ಮಾಡುತ್ತಿಲ್ಲ ಬಿಜೆಪಿಯವರು ಬೇರೆಯವರ ಮೇಲೆ ಕೆಸರು ಎರಚಿಸುವ ಮುನ್ನ ತಮ್ಮ ಸ್ಥಾನದ ಬಗ್ಗೆ ಆಲೋಚಿಸಬೇಕು ' ಎಂದು ತಿಳಿಸಿದರು.

ಸಿಡಿ ವಿಚಾರದಲ್ಲಿ ಯಾರ ವಿರುದ್ಧ ಪ್ರಕರಣ ಇದೆ ಎಂದು ಕೇಳಿದ ಪ್ರಶ್ನೆಗೆ, ' ಈ ವಿಚಾರವಾಗಿ ಸಚಿವ ಸುಧಾಕರ್, ಗೋಪಾಲಯ್ಯ, ಎಸ್ ಟಿ ಸೋಮಶೇಖರ್ ಸೇರಿದಂತೆ 13 ಸಚಿವರು ಜಾಮೀನು ಪಡೆದಿದ್ದಾರೆ. 13 ಶಾಸಕರ ಹೆಸರು ಕೂಡ ಇದೆ. ಸದಾನಂದ ಗೌಡರು ಕೂಡ ಈ ವಿಚಾರವಾಗಿ ಜಾಮೀನು ತೆಗೆದುಕೊಂಡಿದ್ದಾರೆ. ಮೈಸೂರು ಸಂಸದರು ಈ ವಿಚಾರದಲ್ಲಿ ನಾಲ್ಕು ಜಾಮೀನನ್ನು ತೆಗೆದುಕೊಂಡಿದ್ದಾರೆ. ನನ್ನ ಪ್ರಕಾರ ಅವರದು 26 ಸಂಚಿಕೆಗಳಿವೆ ' ಎಂದು ತಿಳಿಸಿದರು.

Post a Comment

Previous Post Next Post