[12/01, 1:06 PM] Cm Ps: *ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ: ಸಿಎಂ ಬೊಮ್ಮಾಯಿ*
ಹುಬ್ಬಳ್ಳಿ, ಜನವರಿ12 : ಕೆಟ್ಟ ಸಂಸ್ಕೃತಿಯು ರಾಜಕಾರಣ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
*ಅವರ ಮನೆ ಸ್ವಚ್ಛ ಮಾಡಿಕೊಳ್ಳಲಿ*
ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎನ್ನುವ ಬಗ್ಗೆ ಶಾಸಕ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿ ಕಾರ್ಯಕರ್ತ ಹೌದೋ ಅಲ್ಲವೋ ಎಂದು ಪರಿಶೀಲಿಸಲು ಸೂಚಿಸಲಾಗಿದೆ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ತಿಳಿದಿದೆ. ನಾನು ಅವರ ಮಟ್ಟಕ್ಕೆ ಇಳಿಯಲಾಗದು. ಮೊದಲು ಅವರ ಮನೆ ಸ್ವಚ್ಛ ಮಾಡಿಕೊಳ್ಳುವುದನ್ನು ಕಲಿಯಲಿ ಎಂದರು.
ಸ್ಯಾಂಟ್ರೋ ರವಿ ಬಂಧವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಡಿ.ಕೆ.ಶಿವಕುಮಾರ್ ಅವರು ಉಚಿತ ವಿದ್ಯುತ್ ನೀಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ ಡಿ.ಕೆ.ಶಿವಕುಮಾರ್ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.ಈ ಹೇಳಿಕೆಗಳನ್ನು ಗಮನಿಸಿದರೆ, ಮುಂದೆ ಅನುಷ್ಠಾನ ಮಾಡುವ ಉದ್ದೇಶ ಅವರಿಗಿಲ್ಲ. ಹೇಗಾದರೂ ಮಾಡಿ, ಸುಳ್ಳು ಭರವಸೆ ನೀಡಿ ಚುನಾವಣೆ ಗೆಲ್ಲಬೇಕೆನ್ನುವುದು ಸ್ಪಷ್ಟವಾಗಿದೆ. ಇಷ್ಟು ವರ್ಷ ಆಡಳಿತ ಮಾಡಿದ ಜವಾಬ್ದಾರಿಯುತ ಪಕ್ಷ ಕಾಂಗ್ರೆಸ್ ಹೀಗೆ ಹೇಳುವುದು ಸಲ್ಲದು. ಅರವಿಂದ ಕೇಜ್ರಿವಾಲ್ ಹೇಳಿದರೆ ನಡೆಯುತ್ತದೆ. ಅವರಿನ್ನೂ ಹೊಸಬರು. ಕಾಂಗ್ರೆಸ್ ಕಾಲದಲ್ಲಿ 6 ತಾಸು ವಿದ್ಯುತ್ ಸರಿಯಾಗಿ ನೀಡಲಾಗಲಿಲ್ಲ. ಇನ್ನು ಉಚಿತ ವಿದ್ಯುತ್ ಹೇಗೆ ನೀಡಲಿದ್ದಾರೆ ಎಂದರು.
[12/01, 3:59 PM] Cm Ps: ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಲ್ಹೋತ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಹಾಜರಿದ್ದರು.
Post a Comment