ರೈತರ ಬದುಕಿನ ಅನಿಶ್ಚಿತತೆಯನ್ನು ಬದಲಾಯಿಸಲು ಔಟ್ ಲುಕ್ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

[20/01, 11:23 AM] Cm Ps: ಬೆಂಗಳೂರು, ಜನವರಿ 20: *ಮಾನ್ಯ* *ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ತೋಟಗಾರಿಕೆ ಇಲಾಖೆ* ಮತ್ತು *ಮೈಸೂರು ಉದ್ಯಾನಕಲಾ* ಸಂಘದ ವತಿಯಿಂದ *ಲಾಲ್‍ಬಾಗ್ ಗಾಜಿನ* ಮನೆಯಲ್ಲಿ ಆಯೋಜಿಸಿರುವ *ಬೆಂಗಳೂರು* *ನಗರದ ಇತಿಹಾಸ* ವಿಷಯಾಧಾರಿತದ “ *ಗಣರಾಜ್ಯೋತ್ಸವ ಫಲಪುಷ್ಪ* *ಪ್ರದರ್ಶನ - 2023” ಉದ್ಘಾಟಿಸಿ* ನಂತರ *ಮಾಧ್ಯಮದವರಿಗೆ* ಪ್ರತಿಕ್ರಿಯೆ ನೀಡಿದರು.
[20/01, 11:43 AM] Cm Ps: ಬೆಂಗಳೂರು, ಜನವರಿ 20: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ  ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ 
ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತದ  ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ - 2023 ಉದ್ಘಾಟಿಸಿದರು. 

ತೋಟಗಾರಿಕಾ ಸಚಿವ ಮುನಿರತ್ನ, ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಮೊದಲಾದವರು ಉಪಸ್ಥಿತರಿದ್ದರು.
[20/01, 12:09 PM] Cm Ps: . 

*ಉದ್ಯಾನ ನಗರದ ಗತ ವೈಭವವನ್ನು ಮರುಕಳಿಸಲು ಕ್ರಮ:ಸಿಎಂ ಬೊಮ್ಮಾಯಿ*

ಬೆಂಗಳೂರು, ಜನವರಿ 20: ಬೆಂಗಳೂರು ಉದ್ಯಾನ ನಗರ ಎಂದು ಈಗಾಗಲೇ ಪ್ರಸಿದ್ಧಿಯಾಗಿದೆ. ಅಭಿವೃದ್ಧಿಯಲ್ಲಿ ಈ ಹೆಸರು ಹಿಂದೆ ಸರಿದಿದ್ದು, ಮತ್ತೊಮ್ಮೆ ಉದ್ಯಾನ ನಗರದ ಗತ ವೈಭವವನ್ನು ಮರುಕಳಿಸುವಂತೆ ಸರ್ಕಾರ ಕ್ರಮ ವಹಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು  ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ  ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ 
ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತದ  ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ - 2023 ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

*ಉದ್ಯಾನನಗರ ಹೆಸರು ಖಾಯಂ*
ಬೆಂಗಳೂರಿನ  ಲಾಲ್ ಬಾಗ್ , ಕಬ್ಬನ್ ಪಾರ್ಕ್ ಸೇರಿದಂತೆ ಪ್ರಮುಖ ಉದ್ಯಾನಗಳನ್ನು ಉತ್ತಮವಾಗಿಟ್ಟುಕೊಂಡು ಬಿಬಿಎಂಪಿ ನಿರ್ವಹಿಸುವ ಹೊಸ ಉದ್ಯಾನವನ ಗಳಲ್ಲಿ ಹೆಚ್ಚಿನ ಸಸ್ಯ ಸಂಪತ್ತನ್ನು ಬೆಳೆಸುವುದು ಹಾಗೂ ಹೊರವಲಯದಲ್ಲಿ ಹೊಸ ಉದ್ಯಾನ ಗಳನ್ನು ನಿರ್ಮಿಸುವ ಮೂಲಕ ಉದ್ಯಾನ ನಗರ ಹೆಸರನ್ನು ಖಾಯಂ ಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದರು. 

*ರಾಜ್ಯದಲ್ಲಿ ಹಸಿರು ಪದರ ವಿಸ್ತರಣೆಯಾಗಬೇಕು*
213 ನೇ ಫಲಪುಷ್ಪ ಪ್ರದರ್ಶನವನ್ನು  ಉದ್ಘಾಟಿಸಿದ್ದು,  ಫಲಪುಷ್ಪ ಪ್ರದರ್ಶನ ಅತ್ಯಂತ ಜನಪ್ರಿಯವಾಗಿದ್ದು, ಪ್ರತಿ ವರ್ಷ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಈ ಬಾರಿ 10- 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಅದಕ್ಕಾಗಿ ತೋಟಗಾರಿಕಾ ಇಲಾಖೆ ವ್ಯವಸ್ಥೆ ಗಳನ್ನು ಮಾಡಿಕೊಂಡಿದೆ. ಫಲಪುಷ್ಪ ಎಲ್ಲರಿಗೂ ಬಹಳ ಪ್ರಿಯವಾಗಿರುವಂಥದ್ದು, ಇಲ್ಲಿ ಪ್ರದರ್ಶನದ ಮುಖಾಂತರ ರಾಜ್ಯದ ಸಸ್ಯಸಂಪತ್ತು ಎಷ್ಟು ದೊಡ್ಡದಿದೆ, ವಿಭಿನ್ನ, ವಿಸ್ತಾರವಾಗಿದೆ ಎಂದು ಪ್ರದರ್ಶನವಾಗುತ್ತದೆ. ಸಸ್ಯಸಂಪತ್ತನ್ನು ಹೆಚ್ಚಿಗೆ ಮಾಡುವುದು ನಮ್ಮ ಉದ್ದೇಶ. ರಾಜ್ಯದಲ್ಲಿ ಹಸಿರು ಪದರ ವಿಸ್ತರಣೆಯಾಗಬೇಕು. ಅದಕ್ಕಾಗಿ  ಹಸಿರು ಆಯವ್ಯಯವನ್ನು ರೂಪಿಸಲಾಗಿದೆ. 100 ಕೋಟಿ ರೂ.ಗಳನ್ನು ಹಸಿರು ವಿಸ್ತರಣೆಗಾಗಿ ಮೀಸಲಿರಿಸಿದೆ. ಅದರ ಅನುಷ್ಠಾನ ವೂ ಆಗುತ್ತಿದೆ. ಗುಡ್ಡಗಾಡು ಪ್ರದೇಶಗಳ ಸಂಪೂರ್ಣ ಹಸಿರು ಮಾಡಿ ಪರಿಸರ ಸಮತೋಲನ ಕಾಯ್ದುಕೊಳ್ಳಲು.ರಾಜ್ಯದಲ್ಲಿ ಪ್ರಥಮ ಬಾರಿಗೆ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ತೋಟಗಾರಿಕೆ ವಿಸ್ತರಣೆಯೂ ಆಗಬೇಕು.ಲಾಲ್ ಬಾಗ್ ನಿಂದ ಹಿಡಿದು ರಾಜ್ಯದೆಲ್ಲೆಡೆ ತೋಟಗಾರಿಕೆ ಇದೆ. ಇವುಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸುತ್ತಿದ್ದು, ಬಜೆಟ್ ನಲ್ಲಿ ಅನುದಾನ ನೀಡಬೇಕೆನ್ನುವ ಚಿಂತನೆಯೂ ಇದೆ. ತೋಟಗಾರಿಕೆಯಿಂದ ಹಸಿರು ಹೆಚ್ಚುವುದರ ಜೊತೆಗೆ ಅಲ್ಲಿ ಉತ್ಪಾದನೆ, ಉತ್ಪನ್ನ ಹೆಚ್ಚಾಗುತ್ತದೆ ಹಾಗೂ ಪೌಷ್ಟಿಕ ಆಹಾರವನ್ನು ಒದಗಿಸಲು ಸಾಧ್ಯವಿದೆ. ದೊಡ್ಡ ಪ್ರಮಾಣದಲ್ಲಿ ತೋಟಗಾರಿಕೆಯನ್ನು ವಿಸ್ತರಿಸಿ, ಫಾರ್ಮ್ ಗಳನ್ನು ಬೆಳೆಸುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದರು. 

*ಜನಫಲಪುಷ್ಪಗಳನ್ನು ಬೆಳೆಸಲು  ಪ್ರಯತ್ನಿಸಬೇಕು*
ಜನ ಫಲಪುಷ್ಪ ಪ್ರದರ್ಶನದ ಲಾಭ ಪಡೆಯಲಿ ಹಾಗೂ  ತಮ್ಮದೇ ರೀತಿಯಲ್ಲಿ  ಫಲಪುಷ್ಪಗಳನ್ನು ಬೆಳೆಸಲು ತಮ್ಮ ಪ್ರಯತ್ನ ಮಾಡಬೇಕು ಎಂದರು.


ಈ ಸಂದರ್ಭದಲ್ಲಿ ತೋಟಗಾರಿಕಾ ಸಚಿವ ಮುನಿರತ್ನ, ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಮೊದಲಾದವರು ಉಪಸ್ಥಿತರಿದ್ದರು.
[20/01, 1:26 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ- 2023 ನ್ನು ಉದ್ಘಾಟಿಸಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವ ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್,  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ  ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯರಾದ ಟಿ. ಎ. ಶರವಣ, ಛಲವಾದಿ ನಾರಾಯಣಸ್ವಾಮಿ,  ಮೊದಲಾದವರು ಉಪಸ್ಥಿತರಿದ್ದರು.
[20/01, 3:26 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಂಪಿ ಉತ್ಸವದ ಲೋಗೊ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು. 
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಆನಂದ ಸಿಂಗ್, ಶಶಿಕಲಾ ಜೊಲ್ಲೆ, ಎಂ.ಟಿ.ಬಿ ನಾಗರಾಜ್ ಹಾಜರಿದ್ದರು.
[20/01, 5:02 PM] Cm Ps: *ರೈತರ ಬದುಕಿನ ಅನಿಶ್ಚಿತತೆಯನ್ನು ಹೋಗಲಾಡಿಸಲು  ವೈಜ್ಞಾನಿಕ ಔಟ್ ಲುಕ್ ವರದಿ ಅಗತ್ಯ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜನವರಿ 20:  

ರೈತರ ಬದುಕಿನ ಅನಿಶ್ಚಿತತೆಯನ್ನು ಬದಲಾಯಿಸಲು ಔಟ್ ಲುಕ್ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಅವರು ಇಂದು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ, ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ- 2023 ಉದ್ಘಾಟಿಸ ಮಾತನಾಡಿದರು.  


ಬೇರೆ ದೇಶಗಳಲ್ಲಿ ಮುಂದಿನ ಋತುವಿಗೆ ಎಷ್ಟು ಮಳೆಯಾಗಬಹುದು ಎಂದು ಕಳೆದ 10 ವರ್ಷಗಳ ಮಳೆ  ಮಾದರಿಯನ್ನು ಆಧರಿಸಿ, ಎಷ್ಟು ಬಿತ್ತನೆ, ಉತ್ಪಾದನೆ, ಅಂತರರಾಷ್ಟ್ರೀಯ ಮಾರುಕಟ್ಟೆ, ಸ್ಥಳೀಯ ಮಾರುಕಟ್ಟೆಗಳನ್ನು ಪರಿಶೀಲಿಸಿ,  ಒಂದು ಬೆಲೆಯನ್ನು ನಿಗದಿ ಮಾಡುವ ಔಟ್‍ಲುಕ್  ವರದಿ ತಯಾರಿಸುತ್ತಾರೆ.   ಈ ವರದಿಯನ್ನು ಸಿದ್ಧಪಡಿಸಬೇಕು. ರೈತ ಬೆಳೆಯುವ ಬೆಳೆಗೆ ಎಷ್ಟು ಖರ್ಚು ತಗಲಿ, ಎಷ್ಟು ಧಾರಣೆ ದೊರೆಯುತ್ತದೆ ಎಂದು ತಿಳಿದರೆ, ಈ ಮೊತ್ತದೊಳಗೆಯೇ ಖರ್ಚು ಮಾಡುತ್ತಾನೆ. ಬೆಳೆ ಉಳಿಸುವ ಸಲುವಾಗಿ ಖರ್ಚು ಮಾಡುವ ಈ ವಿಧಾನದ ಬಗ್ಗೆ ಚರ್ಚೆ ಮಾಡಿ ನಿರ್ಧಾರಕ್ಕೆ ಬರಲಾಗುವದು. ಈ ವರದಿಯನ್ನು ಇಲಾಖೆ ಹಾಗೂ  ಕೃಷಿ ದರ ಆಯೋಗದ ಸಹಯೋಗದೊಂದಿಗೆ ಸಿದ್ಧಪಡಿಸಬೇಕು ಎಂದರು.

*ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು:*
ಗ್ರಾಮೀಣ ಆರ್ಥಿಕತೆ  ಸುಧಾರಿಸಲು ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು.  ಭೂಮಿಯಿಂದ ಸಾಲದ ಅನುಪಾತವನ್ನು ಯಾರೂ ನಿರ್ವಹಣೆ ಮಾಡಿಲ್ಲ. 20 ಸಾವಿರ ನೀಡಬೇಕಾದರೆ 7 ರಿಂದ 8 ಸಾವಿರ ನೀಡಲಾಗುತ್ತದೆ.  ನಿಖರವಾಗಿ ಸಾಲ ನೀಡಿದರೆ ರೈತ ಮಾರವಾಡಿಗಳ ಎದುರು ಕೈ ಚಾಚುವುದನ್ನು ನಿಲ್ಲಿಸುತ್ತಾನೆ. ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು ಎಂದು ಕೇಂದ್ರ ಹಣಕಾಸು ಸಚಿವರು ಹಾಗೂ ಕೃಷಿ ಸಚಿವರಿಗೆ ಒತ್ತಾಯವನ್ನು ಮಾಡಿದ್ದು, ರಚನೆ ಬದಲಾಯಿಸಿ, ನಬಾರ್ಡ್  ಈ ಸಾಲ ಪದ್ದತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಈ ಕೆಲಸಗಳಾದರೆ ರೈತರ ಬದುಕಿಗೆ ನಿಶ್ಚಿತತೆಯನ್ನು ತರಬಹುದು. ರಾಜ್ಯ ಸರ್ಕಾರ ಈ ವರ್ಷ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲದ ನೆರವು ನೀಡಿದ್ದು, 3 ಲಕ್ಷ ಹೊಸ ರೈತರಿಗೆ ಸಾಲ ನೀಡಲಾಗಿದ್ದು ಇದೊಂದು ದಾಖಲೆ. ರೈತಶಕ್ತಿ  ಯೋಜನೆ 10 ದಿನಗಳ ಕಾಲದಲ್ಲಿ ಪ್ರಾರಂಭಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರುಪ್ರಾರಂಭಿಸಲಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಗೆ  ಶುಲ್ಕ ಪಡೆಯಬೇಕೆಂದು ಹಿಂದಿನ ಸರ್ಕಾರಗಳು ಆಜ್ಞೆ ಮಾಡಿದ್ದವು. ಒಂದು ಪಂಪ್ ಗೆ 10 ಸಾವಿರ ರೂ.ಗಳನ್ನು ಪಡೆಯಬೇಕೆಂಬ ಪ್ರಸ್ತಾವನೆ ಹಿಂದಿನ ಸರ್ಕಾರದಲ್ಲಿತ್ತು.ಆದರೆ ಈ ಪ್ರಸ್ತಾವನೆಯನ್ನು ಅನುಷ್ಠಾನ ಮಾಡುವ ಧೈರ್ಯ ಮಾಡಲಿಲ್ಲ. ನಮ್ಮ ರಾಜ್ಯ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದರಿಂದ ಹಾಗೂ ಸೋಲಾರ್ ಕೃಷಿ ಪಂಪ್‍ಸೆಟ್ ಗಳಿಗೆ ನರೇಂದ್ರ ಮೋದಿಯವರ ಸರ್ಕಾರ ಯೋಜನೆಗಳನ್ನು ನೀಡಿ ದೊಡ್ಡ ಪ್ರಾಮಾಣದಲ್ಲಿ ಪ್ರೋತ್ಸಾಹಿಸಲಾಗುತ್ತಿದೆ. ರೈತ ವಿದ್ಯಾ ನಿಧಿಯಡಿ 11 ಲಕ್ಷ  ರೈತರ ಮಕ್ಕಳು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.   

 *ಸಿರಿಧಾನ್ಯದ ಬೆಳೆ ಬಗ್ಗೆ ರೈತರಲ್ಲಿ ಜಾಗೃತಿ :*
ರಾಜ್ಯದಲ್ಲಿ ನವಣಿ, ಸಾವೆ, ರಾಗಿ ಜೋಳ ಸೇರಿದಂತೆ ಎಲ್ಲ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಆಗ ಕೃಷಿ ಕೇವಲ ಆಹಾರ ಉತ್ಪಾದನೆಗೆ ಮಾತ್ರ  ಸೀಮಿತವಾಗಿತ್ತು. ಈಗ ವಾಣಿಜ್ಯ ಉದ್ದೇಶಕ್ಕೆ ಕೃಷಿ ಮಾಡಲಾಗುತ್ತಿದೆ. ಆಹಾರ ಧಾನ್ಯ ಉತ್ಪಾದನೆ ಹಾಗೂ ವಾಣಿಜ್ಯ ಬೆಳೆಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತೆಗೆ ತೊಂದರೆಯುಂಟಾಗಬಹುದು. ಬರುವ ದಿನಮಾನದಲ್ಲಿ ಆಹಾರ ಕೊರತೆ ಉಂಟಾಗಬಹುದೆಂದು ವಿಶ್ವ ಆಹಾರ ತಜ್ಞರು  ತಿಳಿಸಿದ್ದಾರೆ. ಆಹಾರದ ಪ್ರಮಾಣ, ಧಾನ್ಯಗಳು, ನಾರಿನಾಂಶ,ಪೌಷ್ಟಿಕಾಂಶ ಇರಬೇಕು ಎಂಬ ಬಗ್ಗೆ ಅಧ್ಯಯನ ಮಾಡಿ ಈ ವಿಷಯಗಳಲ್ಲಿ ರೈತರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು.

*ಪಡಿತರದಲ್ಲಿ ಜೋಳ ಮತ್ತು ರಾಗಿ :*
ವಾಣಿಜ್ಯ ಬೆಳೆಯಾದ ಅಡಿಕೆ ಕಳೆದ ಎರಡು ವರ್ಷದಲ್ಲಿ ಇಳುವರಿ ಹೆಚ್ಚಾಗಿದೆ. ಸಿರಿಧಾನ್ಯಗಳ ಉತ್ತಮ ನೀರಾವರಿ ಹೆಚ್ಚಾಗಿದ್ದರಿಂದ ದೊಡ್ಡ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದೆ. ರಾಜ್ಯದಲ್ಲಿ ಜೋಳ ಮತ್ತು ರಾಗಿಯನ್ನು ಜನ ಹೆಚ್ಚಾಗಿ ಬಳಸುತ್ತಾರೆ. ಕಳೆದ ಮೂರು ವರ್ಷದಿಂದ ಜೋಳ ಮತ್ತು ರಾಗಿಯನ್ನು  ನಮ್ಮ ಪಡಿತರ ವ್ಯವಸ್ಥೆಯಲ್ಲಿ ಕೊಡಲಾಗುತ್ತಿದೆ. ಇದರಿಂದ ರೈತರು ಬೆಳೆದ ಬೆಳೆಗೆ ಹೆಚ್ಚಿನ ಬೆಲೆ ದೊರೆಯುತ್ತದೆ. ರಾಗಿಗೆ ದೊಡ್ಡ ಪ್ರಮಾಣದಲ್ಲಿ ಬೇಡಿಕೆ ಇದ್ದು, ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಿ ರಾಗಿ ಖರೀದಿಸುವದರಿಂದ ರೈತರಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

*ಸಿರಿಧಾನ್ಯ ಕೃಷಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪ್ರೋತ್ಸಾಹ :*
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರೆಯುತ್ತಿದೆ. ಈ ವರ್ಷ ಅಂತಾರಾಷ್ಟ್ರೀಯ ಸಿರಿ ಧಾನ್ಯ ವರ್ಷ ಎಂದು ಘೋಷಣೆ ಮಾಡಿದ್ದರಿಂದ ರಾಜ್ಯದಲ್ಲಿ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ಕೇಂದ್ರ ಸರ್ಕಾರ ಸಿರಿ ಧಾನ್ಯ ಬೆಳೆಗೆ ಹೆಚ್ಚಿನ ಪ್ರೋತ್ಸಾಹ  ಹಾಗೂ ಅನುದಾನವನ್ನು ರಾಜ್ಯಕ್ಕೆ ನೀಡಿದೆ. ಜನರಿಗೆ ಆರೋಗ್ಯ ಹಾಗೂ ರೈತರಿಗೆ ಲಾಭವನ್ನು ತರುವಂತಹ ಸಿರಿಧಾನ್ಯ ಕೃಷಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡಲು ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದೆ ಎಂದರು.

*ಕೃಷಿ ವಿವಿಗಳು ಕ್ಯಾಂಪಸನ್ನು ಬಿಟ್ಟು ಹೊರಬೇಕು :*
ಕೃಷಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ.ಹವಾಮಾನದ ಬದಲಾವಣೆಗೆ ಅನುಗುಣವಾಗಿ ಕೃಷಿ ಕ್ಷೇತ್ರವನ್ನು ಸಜ್ಜುಗೊಳಿಸಲು ಕೃಷಿ ವಿಶ್ವವಿದ್ಯಾಲಯಗಳು ಸನ್ನದ್ದವಾಗಬೇಕು.ಕೃಷಿ ಕ್ಷೇತ್ರದಲ್ಲಿನ ಇಂದಿನ ಸವಾಲುಗಳ ಬಗ್ಗೆ ಸಂಶೋಧನೆಗಳನ್ನು ಮಾಡಬೇಕು. ಹವಾಮಾನ ಬದಲಾವಣೆ, ಮಣ್ಣಿನ ಸವಕಳಿ, ಹೆಚ್ಚಿನ ನೀರು ಬಳಕೆ, ಜವುಳು, ಭೂಮಿಯ ಮೆಲೆ ರಾಸಾಯನಿಕದಿಂದ ಆಗುತ್ತಿರುವ ಸಮಸ್ಯೆ, ಕಳಪೆ ಹಾಗೂ ನಕಲಿ ಬೀಜ ಮಾರಾಟ ತಡೆಯುವ ಬಗ್ಗೆ ವಿಶ್ವ ವಿದ್ಯಾಲಯಗಳು ಕ್ರಮ ಕೈಗೊಳ್ಳಬೇಕು. ಕೃಷಿ ವಿವಿಗಳು ಕ್ಯಾಂಪಸನ್ನು ಬಿಟ್ಟು ಹೊರ ಬನ್ನಿ ರೈತನ ಹೊಲವನ್ನೇ ಕ್ಯಾಂಪಸನ್ನಾಗಿ‌ ಮಾಡಿಕೊಳ್ಳಿ. ರೈತನ ಹೊಲದಲ್ಲಿ ಎಲ್ಲವೂ ಅನಿಶ್ಚಿತತೆಯಿಂದ ಕೂಡಿದೆ. ರೈತರ ಈ ಅನಿಶ್ಚಿತತೆಯನ್ನು ನಿವಾರಿಸಲು ಉತ್ತಮ ಬೀಜ, ಕೃಷಿ ವಿಧಾನ, ಒಳ್ಳೆಯ ಔಷಧಿ ಸಿಂಪಡನೆ ಅಗತ್ಯವಿದೆ ಎಂದರು.

ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವ ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್,  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ  ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯರಾದ ಟಿ. ಎ. ಶರವಣ, ಛಲವಾದಿ ನಾರಾಯಣಸ್ವಾಮಿ,  ಮೊದಲಾದವರು ಉಪಸ್ಥಿತರಿದ್ದರು.
[20/01, 6:59 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿ.ಕೆ.ಆರ್.ವಿ ರಾವ್ ಹಾಸ್ಟೆಲ್ ಉದ್ಘಾಟಿಸಿದರು. 

ಐಸೆಕ್ ನಿರ್ದೇಶಕ ಡಿ.ರಾಜಶೇಖರ್,  ರಿಜಿಸ್ಟ್ರಾರ್ ಅಶೋಕ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
[20/01, 7:01 PM] Cm Ps: *ರಾಜ್ಯದ ನಾಲ್ಕು ದಿಕ್ಕುಗಳಿಂದ ಭಾಜಪ ರಥಯಾತ್ರೆಗೆ ತಯಾರಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜನವರಿ 20 :

 ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು  ಫೆಬ್ರವರಿ ಅಂತ್ಯದಲ್ಲಿ ಆರಂಭಿಸಲು ರೂಪರೇಷೆ ಸಿದ್ಧತೆ ಸೇರಿದಂತೆ ಹಲವು ವಿಷಯಗಳ  ಬಗ್ಗೆ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಲ್ಲೇಶ್ವರಂ ನ ಭಾರತೀಯ ಜನತಾ ಪಕ್ಷದ  ಜಗನ್ನಾಥ ಭವನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತೀಯ ಜನತಾ ಪಕ್ಷದ ಸಭೆ ನಡೆದಿದೆ. ಬರುವ ಜನವರಿ ಮತ್ತು ಫೆಬ್ರವರಿ  ತಿಂಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳು, ಅಧಿವೇಶನದ ಜೊತೆಜೊತೆಗೆ ಪಕ್ಷದ ಸಂಘಟನೆ, ಫೆಬ್ರವರಿ ಅಂತ್ಯದವರೆಗೆ ಜನ ಸಂಕಲ್ಪ ಯಾತ್ರೆ ಮುಂದುವರೆಸುವುದು.ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಣಾಳಿಕೆ ಸಿದ್ದ ಪಡಿಸುವುದು. ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ ಎಂದರು.

ನಾಳೆ  ಪ್ರಾರಂಭವಾಗುವ ಬೂತ್ ಮಟ್ಟದ ವಿಜಯಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ  ಅವರು ಭಾಗವಹಿಸಲು ಬರುತ್ತಿದ್ದಾರೆ. ವಿಜಯ ಯಾತ್ರೆ ಅರಂಭಿಸುತ್ತಿದ್ದಾರೆ. ನಾನು ತುಮಕೂರಿನಲ್ಲಿ ಯಾತ್ರೆಯನ್ನು ಆರಂಭಿಸುತ್ತಿದ್ದೇನೆ ಎಂದು ತಿಳಿಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಪಟ್ಟಿಯನ್ನು ಮನೆಮನೆಗೆ ತಲುಪಿಸುವುದು, ತಾಲ್ಲೂಕು ಮಟ್ಟದ ಸಮ್ಮೇಳನಗಳನ್ನು , ಹಲವು ಮೋರ್ಚಾಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಎಲ್ಲೆಡೆ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದರು.

ಭಾಜಪ ಪಕ್ಷದ ಅಬ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ.  ಚುನಾವಣೆ ತಯಾರಿ, ಪಕ್ಷದ ಸಂಘಟನೆ ಹಾಗೂ ಜನಸಂಪರ್ಕದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ನಾವು ಈಗ ಪ್ರಾಥಮಿಕ ಹಂತದ ಚರ್ಚೆ ಮಾಡಿದ್ದೇವೆ. ಮುಂದಿನ ಹಂತದಲ್ಲಿ ಯಡಿಯೂರಪ್ಪ ಅವರ ಜೊತೆ ಚರ್ಚಿಸುತ್ತೇವೆ ಎಂದರು.

ಹಾವೇರಿಯಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷದಲ್ಲಿ ಯಾರು ಉಳಿಯಲಿದ್ದಾರೆ ಎಂಬುದನ್ನು ಅವರು ಗಮನಿಸಲಿ. ಅವರು ಹತಾಶೆಯಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ  ಎಂದರು.
[20/01, 8:19 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನ್ ಕ್ಲೇವ್ 2023 ಉದ್ಘಾಟಿಸಿದರು. 
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ‌. ಎಸ್. ಯಡಿಯೂರಪ್ಪ, ಸಚಿವರಾದ ಮುರುಗೇಶ್ ನಿರಾಣಿ, ಬಿ.ಸಿ.ಪಾಟೀಲ್, ಶಾಸಕರಾದ ಅರವಿಂದ ಬೆಲ್ಲದ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
[20/01, 8:38 PM] Cm Ps: *ಜನರ  ಸಾಮಾಜಿಕ,  ಆರ್ಥಿಕ ಬದಲಾವಣೆಗೆ ಸರ್ಕಾರಿ ಯೋಜನೆಗಳ ಪರಿಣಾಮದ ಬಗ್ಗೆ ಸಮೀಕ್ಷೆ ಅಗತ್ಯ: ಸಿಎಂ ಬೊಮ್ಮಾಯಿ*
ಬೆಂಗಳೂರು, ಜನವರಿ 20: ನಮ್ಮ ಸರ್ಕಾರದ ಯೋಜನೆಗಳು ಜನರ ಸಾಮಾಜಿಕ,  ಆರ್ಥಿಕ ಬದಲಾವಣೆಗೆ ಎಷ್ಟು ಕಾರಣವಾಗಿದೆ ಎನ್ನುವ ಬಗ್ಗೆ ಸಮೀಕ್ಷೆ ನಡೆಸಬೇಕು ಅದಕ್ಕಾಗಿ ವಿಶೇಷ ಆರ್ಥಿಕ ನೆರವು ನೀಡಲು ಸರ್ಕಾರ ಸಿದ್ದವಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

 ಅವರು ಇಂದು ನಾಗರಭಾವಿಯ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ(ಐಸೆಕ್) ಆವರಣದಲ್ಲಿ ವಿ.ಕೆ.ಆರ್.ವಿ ರಾವ್ ಹಾಸ್ಟೆಲ್  ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಪಿಎಚ್ ಡಿಗಳು   ಸಾಮಾಜಿಕ ಬದಲಾವಣೆಗೆ ಕಾರಣವಾಗಬೇಕು. 
ನಮ್ಮ ಪ್ರಧಾನಿಗಳು ದೇಶದ ಅಮೃತ‌ಕಾಲದ ಬಗ್ಗೆ ಹೊಸ ಆಲೋಚನೆ ನೀಡಿದ್ದಾರೆ.‌ ಇಡೀ ವಿಶ್ವವೇ ನಮ್ಮನ್ನು ಗೌರವದಿಂದ ನೋಡುವ ಕಾಲ ಬಂದಿದೆ. ಪ್ರಧಾನಿಗಳು  ತಳ ಹಂತದ ಬಗ್ಗೆ ಯೋಚನೆ ಮಾಡುತ್ತಾರೆ. ಪ್ರಧಾನಿಗಳ ಐದು ಲಕ್ಷ ಟ್ರಿಲಿಯನ್ ಡಾಲರ್ ಕನಸಿಗೆ  ರಾಜ್ಯ ಒಂದು ಲಕ್ಷ ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ನಮ್ಮದು.   ರಾಜ್ಯದ ಆದಾಯ ಹೆಚ್ಚಳದಿಂದ ಸಾಮಾನ್ಯ ಜನರ ಜೀವನದಲ್ಲಿ ಎಷ್ಟು ಬದಲಾವಣೆ ಅಯಿತು ಎನ್ನುವ ಬಗ್ಗೆ ವರದಿ ನೀಡಿದರೆ  ಉಪಯೋಗವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

*ಪರಿಹಾರದ ಬಗ್ಗೆ ಚಿಂತನೆ* 

ಪ್ರೊ. ರಾವ್ ಅವರು 60 ರ ದಶಕದಲ್ಲಿಯೇ ಸಾಮಾಜಿಕ ಸವಾಲುಗಳ ಬಗ್ಗೆ  ಚಿಂತನೆ ಮಾಡಿ ಈ ಸಂಸ್ಥೆಯನ್ನು ಕಟ್ಟಿದರು. ಮನುಷ್ಯ  ಬದಲಾದರೂ ,  ಮೌಲ್ಯಗಳು ಶಾಶ್ವತವಾಗಿರುತ್ತವೆ‌. 
ಮನುಷ್ಯ ಬೆಳೆದಂತೆ ಬದಲಾಗುತ್ತಾ  ಹೋಗುತ್ತಾನೆ. ನಾಗರಿಕತೆ ಹೆಚ್ಚಾಗುತ್ತಿರುವಂತೆ ಸಾಂಸ್ಕೃತಿಕ ಮೌಲ್ಯಗಳು ಕಡಿಮೆಯಾಗುತ್ತವೆ. 
ಗೊಂದಲಗಳು ಯಾವಾಗಲೂ ಇರುತ್ತವೆ. ಅದಕ್ಕೆ ಪರಿಹಾರ ಇದೆ. ನಾವು ಕೇವಲ ಸಮಸ್ಯೆಯ ಬಗ್ಗೆ ಆಲೋಚನೆ ಮಾಡದೇ ಪರಿಹಾರದ ಬಗ್ಗೆಯೂ ಆಲೋಚನೆ ಮಾಡುತ್ತೇವೆ ಎಂದರು. 

 *ಸಂಸ್ಕೃತಿ ಮರೆಯಬಾರದು*

ನಾಗರಿಕತೆ ಮತ್ತು ಸಂಸ್ಕೃತಿಯ ವ್ಯತ್ಯಾಸ ತಿಳಿದುಕೊಳ್ಳ ಬೇಕಿದೆ. ಸಾಕಷ್ಟು  ಸಾಧನೆ ಮಾಡಿದ್ದೇವಾದರೂ,   ಸಂಸ್ಕೃತಿ ಮರೆಯುತ್ತಿದ್ದೇವೆ. ಈಗ ಯಾವ ಹಂತದಲ್ಲಿದ್ದೇವೆ ಎನ್ನುವ ಬಗ್ಗೆ ಅಧ್ಯಯನವಾಗಬೇಕಿದೆ ಎಂದರು. 


ವಿದ್ಯಾರ್ಥಿಗಳು ಪಿಎಚ್ ಡಿ ಪಡೆಯುವ ಗುರಿ ನಂತರ ಉದೋಗ, ಬಡ್ತಿ, ಮುಖ್ಯಸ್ಥರಾಗುವುದು ಬಯಕೆಗಳು ಹೆಚ್ಚಾಗುತ್ತ ಹೋಗುತ್ತವೆ. ಆದರೆ‌, ವಿದ್ಯಾರ್ಥಿಗಳಿದ್ದಾಗ ಸಿಗುವ ಖುಷಿ ಮುಖ್ಯಸ್ಥರಾದಾಗ  ದೊರೆಯುವುದಿಲ್ಲ.
ರಾಜಕಾರಣಿಗಳು ಆಡಳಿತ ಮಾಡುವುದರ ಬಗ್ಗೆ ಆಲೋಚನೆ ಮಾಡುತ್ತಾರೆ. ಆಡಳಿತ ಮಾಡುವವರು ಯಾವ ರೀತಿ ನಿಯಂತ್ರ ಲ್ಣ ಮಾಡಬೇಕು ಎಂದು ಆಲೋಚಿಸುತ್ತಾರೆ.
ಆರ್ಥಿಕತೆ ಮತ್ತು ಅರ್ಥಶಾಸ್ತ್ರದ ವ್ಯತ್ಯಾಸವನ್ನು ತಿಳಿಯಬೇಕು.  ಸಾಮಾಜಿಕ ಬದಲಾವಣೆ ಆರ್ಥಿಕ ಬದಲಾವಣೆ ತರುತ್ತದೆ. 
ನಮ್ಮ ತಂದೆಗೂ ಈ ಸಂಸ್ಥೆಗೂ ನಂಟಿತ್ತು ಎಂದು ಸ್ಮರಿಸಿದ ಮುಖ್ಯ ಮಂತ್ರಿಗಳು,  ಪೊಲಿಟಿಕಲ್ ಸೈನ್ಸ್ ಎಲ್ಲ ಸೈನ್ಸ್ ಗಳಿಗಿಂತ ಮಿಗಿಲು.  ಯಾರು ಏನೇ ಮಾಡಿದರೂ ರಾಜಕೀಯ ತೀರ್ಮಾನ ಮುಖ್ಯವಾಗಿರುತ್ತದೆ ಎಂದು ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತ ರಿಸಿದ್ದರು ಎಂದು ಮೆಲುಕು ಹಾಕಿದರು. 


ದೇಶವೊಂದರ  ಜಿಡಿಪಿ ಆ ದೇಶದ ಜನರ ಸಂತೋಷದ ಮೇಲೆ ನಿರ್ಧಾರವಾಗುತ್ತದೆ ಎಂದು ಬೂತಾನ್ ದೊರೆ  ಹೋರಾಟ ನಡೆಸಿ, ವರ್ಲ್ಡ್ ಬ್ಯಾಂಕ್ ಅದನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದರು. 


ಐಸೆಕ್ ನಿರ್ದೇಶಕ ಡಿ.ರಾಜಶೇಖರ್,  ರಿಜಿಸ್ಟ್ರಾರ್ ಅಶೋಕ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
[20/01, 9:34 PM] Cm Ps: ಬೆಂಗಳೂರು, ಜನವರಿ 20: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂಟರ್ ನ್ಯಾಷನಲ್ ಲಿಂಗಾಯತ್ ಯೂತ್ ಫೋರಮ್ ಹಾಗೂ ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ. ವತಿಯಿಂದ ಅರಮನೆ ಮೈದಾನದ ವೈಟ್‍ಪೆಟಲ್ಸ್‍ನಲ್ಲಿ ಆಯೋಜಿಸಿರುವ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನ್‍ಕ್ಲೇವ್ -2023 ಹಾಗೂ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.
[20/01, 10:21 PM] Cm Ps: *ಎಲ್ಲರಿಗೂ ಅವಕಾಶ ಕಲ್ಪಿಸಿ  ಬೆಳೆಯುವುದೇ ಕಾಯಕ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಜನವರಿ 20 :

 ಕಾಯಕ ಮತ್ತು ಕರ್ತವ್ಯದ ನಡುವೆ ವ್ಯತ್ಯಾಸ ಇದ್ದು,ಕರ್ತವ್ಯ ನಮಗೋಸ್ಕರ ಮಾಡುವುದು, ನಮ್ಮೊಂದಿಗೆ ಬೇರೆಯವರಿಗೂ ಅವಕಾಶ ಕಲ್ಪಿಸಿ ಎಲ್ಲರೂ ಒಟ್ಟಾಗಿ ಬೆಳೆಯುವುದು ಕಾಯಕ, ಬಸವಣ್ಣನವರು ಕಾಯಕವೇ ಕೈಲಾಸ  ಎಂಬುದು ಇದೇ ಚಿಂತನೆಯನ್ನು ಒಳಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.

ಅವರು  ಇಂದು ಇಂಟರ್ ನ್ಯಾಷನಲ್ ಲಿಂಗಾಯತ್ ಯೂತ್ ಫೋರಮ್ ಹಾಗೂ ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ. ವತಿಯಿಂದ ಅರಮನೆ ಮೈದಾನದ ವೈಟ್‍ಪೆಟಲ್ಸ್‍ನಲ್ಲಿ ಆಯೋಜಿಸಿರುವ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನ್‍ಕ್ಲೇವ್ -2023 ಹಾಗೂ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

ಸಾಮಾನ್ಯವಾಗಿ ಒಂದು ಸಮುದಾಯವನ್ನು ಕಟ್ಟುವಾಗ ಬಹುತೇಕ ಹಿರಿಯರು ಇರುತ್ತಾರೆ. ಆದರೆ, ಇಲ್ಲಿ ಯುವಕರೇ ಮುಂದೆ  ಬಂದು ಸಮುದಾಯ ಕಟ್ಟುವ ಕೆಲಸ ಮಾಡುತ್ತಿದ್ದಾರೆ.
ಈ ಸಂಘ ಪ್ರಾಂಜಲ ಮನಸಿನಿಂದ ಸ್ಥಾಪಿಸಿದ್ದಾರೆ. ಅವರಿಗೆ ಯಾವುದೇ ಮಾರ್ಗದರ್ಶನ ಬೇಕಿಲ್ಲ. ನಿಮ್ಮ ಆತ್ಮಸಾಕ್ಷಿಗೆ ತಕ್ಕಹಾಗೆ ಕೆಲಸ ಮಾಡಿ, ಬಸವಣ್ಣನವರು ಕಾಯಕವೇ ಕೈಲಾಸ ಅಂದರು,

ದುಡ್ಡೆ ದೊಡ್ಡಪ್ಪ ಅಲ್ಲ ದುಡಿಮೆಯೇ ದೊಡ್ಡಪ್ಪ, ನಮ್ಮ‌ನಾಯಕರಾದ ಯಡಿಯೂರಪ್ಪನವರು ಪರಿಶ್ರಮದಿಂದ ಬೆಳೆದಿದ್ದಾರೆ‌. ಅವರು ಕೇವಲ ಮುಖ್ಯಮಂತ್ರಿಯಷ್ಟೆ ಆದವರಲ್ಲ, ಅವರೊಬ್ಬ ನಾಯಕ, ಜನರ ಮನಸಿನಲ್ಲಿ ಉಳಿಯುವವರೇ ನಿಜವಾದ ನಾಯಕ. ಯಡಿಯೂರಪ್ಪ ಅವರೇ ನಮ್ಮ ರೋಲ್ ಮಾಡೆಲ್  ಎಂದರು.

*ನಿರಂತರ ಪರಿಶ್ರಮಕ್ಕೆ ಪ್ರತಿಫಲ ಸಿಗುತ್ತದೆ :*
ನಮ್ಮ ಸಮುದಾಯದಲ್ಲಿ ಅನೇಕ ಉದ್ಯಮಿಗಳಿದ್ದಾರೆ. ವಿಜಯ್ ಸಂಕೇಶ್ವರ್ , ಮುರುಗೇಶ್ ನಿರಾಣಿ, ಪ್ರಭಾಕರ್ ಕೊರೆ ಎಲ್ಲರೂ ದೊಡ್ಡ ಮಟ್ಟದ ಸಾಧನೆ ಮಾಡಿದ್ದಾರೆ. 
ಸಣ್ಣ ಸಣ್ಣ ಉದ್ಯಮ ‌ಮಾಡಿ ದೊಡ್ಡ ಮಟ್ಟದಲ್ಲಿ ಬೆಳೆದಿದ್ದಾರೆ‌. ನಮ್ಮದು ರೈತಾಪಿ ಸಮಾಜ, ಮಣ್ಣಿನ ಜೊತೆ  ನಮ್ಮ ಸಂಬಂಧ, ಯಾರು ಮಣ್ಣಿನ ಜೊತೆ ಸಂಬಂಧ ಇಟ್ಟುಕೊಂಡಿರುತ್ತಾರೊ ಅವರು ಪ್ರಾಮಾಣಿಕರಾಗಿರುತ್ತಾರೆ‌. ಗುಡ್ಡಗಾಡು ಜನರು ಬಲಿಷ್ಟರಾಗಿರುತ್ತಾರೆ. ಕರಾವಳಿ ಜನರು ಸಾಹಸಿಗಳಾಗಿರುತ್ತಾರೆ. ಲಿಂಗಾಯತ ಸಮುದಾಯವನ್ನು ದುಡಿಮೆಯೇ ಕಾಪಾಡುತ್ತದೆ. ಲಕ್ ಅನ್ನುವುದು ಇಲ್ಲ. ನಿರಂತರ ಶ್ರಮ ವಹಿಸಿದಾಗ ಮಾತ್ರ ಪ್ರತಿಫಲ ಸಿಗುತ್ತದೆ. ಸಮಾಜಕ್ಕೆ ಏನು ಬೇಕೊ ಅದಕ್ಕೆ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಬಸವ ಕಲ್ಯಾಣ, ಕೂಡಲ ಸಂಗಮ ಅಭಿವೃದ್ದಿ ಮಾಡುತ್ತಿದ್ದೇವೆ. ಸಮಾಜಕ್ಕೆ ಏನು ಬೇಕೊ ಎಲ್ಲವನ್ನು ನೀಡಲು ಸರ್ಕಾರ ಸಿದ್ದವಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ‌. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಮುರುಗೇಶ್ ನಿರಾಣಿ, ಬಿ.ಸಿ.ಪಾಟೀಲ್, ಶಾಸಕರಾದ ಅರವಿಂದ ಬೆಲ್ಲದ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

Post a Comment

Previous Post Next Post