[20/01, 3:52 PM] Kpcc official: *ಬೀದಿ ವ್ಯಾಪಾರಿ ಸಂಘಟನೆಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*
ಸರ್ವಜ್ಞ ಒಂದು ಮಾತು ಹೇಳಿದ್ದಾರೆ, ನಿಂಬೆಗಿಂತ ಶ್ರೇಷ್ಠವಾದ ಹುಳಿಯಿಲ್ಲ, ದುಂಬಿಗಿಂತ ಶ್ರೇಷ್ಠವಾದ ಕಪ್ಪು ಬಣ್ಣ ಇಲ್ಲ, ಈಶ್ವರನಿಗಿಂತ ಶ್ರೇಷ್ಠವಾದ ದೇವರಿಲ್ಲ, ನಂಬಿಕೆಗಿಂತ ಶ್ರೇಷ್ಠವಾದ ಗುಣವಿಲ್ಲ'.
ನೀವು ಬೀದಿಯಲ್ಲಿ ವ್ಯಾಪಾರ ಮಾಡುತ್ತಿರುವ ಜನರು ಕಾಂಗ್ರೆಸ್ ಪಕ್ಷ ಮಾತ್ರ ನಿಮಗೆ ನೆಮ್ಮದಿ ಬದುಕು ನೀಡಲಿದೆ ಎಂದು ನಂಬಿಕೆ ಇಟ್ಟು ಇಲ್ಲಿಗೆ ಬಂದಿದ್ದೀರಿ. ನಿಮಗೆ ಕೋಟಿ ನಮನಗಳು.
ನಿಮ್ಮ ಜನಸಂಖ್ಯೆ ಕಮ್ಮಿ ಇಲ್ಲ. ನೀವು ಸ್ವಂತ ಅಂಗಡಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ನೀವು ಕೆಟ್ಟ ದಾರಿ ಹಿಡಿಯದೇ, ಸಮಾಜದಲ್ಲಿ ಗೌರವಯುತವಾಗಿ, ಸ್ವಾಭಿಮಾನದ ಬದುಕು, ಬದುಕಲು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ನಿಮಗೆ ಹೃತ್ಪೂರ್ವಕ ಅಭಿನಂದನೆಗಳು.
ನಿಮ್ಮ ನಾಯಕರು ನಿಮ್ಮ ನೋವನ್ನು ತಿಳಿಸಿದ್ದಾರೆ. ಆಮೂಲಕ ತಮ್ಮ ಸಮಸ್ಯೆಗಳನ್ನು ನಮ್ಮ ಮುಂದೆ ಇಟ್ಟಿದ್ದಾರೆ. ನಿಮಗೆ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದಂತೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಜವಾಬ್ದಾರಿ.
ಈ ದೇಶಕ್ಕೆ ನೀವೆಲ್ಲರೂ ಆಸ್ತಿ. ಮಾಲ್ ಗಳಲ್ಲಿ, ಎಸಿ ಮಳಿಗೆಗಳಲ್ಲಿ ಖರೀದಿ ಮಾಡುವುದು ಒಂದು ಕಡೆಯಾದರೆ, ಅದೇ ಗುಣಮಟ್ಟದ ಆಹಾರ, ವಸ್ತುಗಳನ್ನು ಅವರಿಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿಕೊಂಡು ಬರುತ್ತಿದ್ದೀರಿ.
ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ರಾತ್ರಿ ವೇಳೆ ಬೀದಿ ಬಡಿ ವ್ಯಾಪಾರಿಗಳ ಬಳಿ ಹೋಗಿ ಚಿತ್ರಾನ್ನ ತಿಂದು ಬದುಕುತ್ತಿದ್ದೇವು. ಆಗ 1 ರೂ.ಗೆ ಒಂದು ಪ್ಯಾಕೆಟ್ ಚಿತ್ರಾನ್ನ ಸಿಗುತ್ತಿತ್ತು. ನಾವು ಎಷ್ಟೇ ಎತ್ತರಕ್ಕೆ ಬೆಳೆದರು ನಾವು ಬಂದ ಹಾದಿ ಮರೆಯಬಾರದು.
ಕಾಂಗ್ರೆಸ್ ಪಕ್ಷ ಈ ವರ್ಗದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷ ಸದಾ ನೊಂದು ಬೆಂದ ಬಡವರ ಪರವಾದ ಪಕ್ಷ. ನಿಮ್ಮ ಬದುಕನ್ನು ದಿನ ಬಡ್ಡಿ ನಿಯಂತ್ರಣದಿಂದ ತಪ್ಪಿಸಬೇಕು.
ಇಂದಿರಾಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ ಮಾಡಿ, ನಿಮಗೆ ಬಂಡವಾಳಶಾಹಿಗಳ ಕಾಟ ತಪ್ಪಿಸಿದರು. ಆಮೂಲಕ ಜನರಿಗೆ ಸುಲಭ ಸಾಲ ಸೌಲಭ್ಯ ಕಲ್ಪಿಸುವಂತೆ ಮಾಡಿದರು. ಈಗ ಬ್ಯಾಂಕ್ ಗಳು 10-15 ಸಾವಿರದಷ್ಟು ಸಣ್ಣ ಸಾಲ ನೀಡುವ ವ್ಯವಸ್ಥೆ ಮಾಡಿಕೊಡಲಾಗಿದೆ.
ಇನ್ನು ದೇಶದಲ್ಲಿ ಉಳುವವನೇ ಭೂಮಿಯ ಒಡೆಯ ಎಂದು ಮಾಡಿದ್ದು, ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟಿದ್ದು, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಕಾಯ್ದೆ ತಂದಿದ್ದರೆ, ಆಹಾರ ಬದ್ಧತೆ ಕಾಯ್ದೆ ಮೂಲಕ ನಿಮಗೆ 5-7 ಕೆ.ಜಿ ಅಕ್ಕಿ ನೀಡುತ್ತಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಇದೇ ಕಾರಣಕ್ಕೆ ನಾವು ನಿಮ್ಮ ಮುಂದೆ ಧೈರ್ಯವಾಗಿ ನಿಂತಿದ್ದೇವೆ.
ರಂಗಸ್ವಾಮಿ ಅವರು ನಿಮ್ಮ ಸಮಸ್ಯೆಗಳ ಬಗೆಹರಿಸಲು ಒಂದು ಪಟ್ಟಿ ನೀಡಿದ್ದಾರೆ. ಇದರಲ್ಲಿ ಪ್ರಮುಖವಾದುದು, ಪಾಲಿಕೆ ಹಾಗೂ ಪೊಲೀಸರಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸುವುದು. ಇದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ.
ಕೋವಿಡ್ ಸಮಯದಲ್ಲಿ ನಾವು ನಿಮ್ಮ ಪರ ಧ್ವನಿ ಎತ್ತಿದ್ದೇವು. ವಲಸೆ ಕಾರ್ಮಿಕರಿಂದ ಸರ್ಕಾರ ಬಸ್ ಟಿಕೆಟ್ ದುಪ್ಪಟ್ಟು ಮಾಡಿ ಸುಲಿಗೆ ಮಾಡಲು ಮುಂದಾದಾಗ, ಈ ಕಾರ್ಮಿಕರು ದೇಶ ನಿರ್ಮಾತೃಗಳು ಅವರಿಗೆ ಉಚಿತ ಸಾರಿಗೆ ವ್ಯವಸ್ಥೆ ನೀಡಿ ಎಂದು ನಾವು ಪಕ್ಷದ ವತಿಯಿಂದ 1 ಕೋಟಿ ಚೆಕ್ ನೀಡಿದೆವು. ನಂತರ ಉತ್ತರ ಕರ್ನಾಟಕದ ಭಾಗದ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಯಿತು.
ಇನ್ನು ಸಾಂಪ್ರದಾಯಿಕ ವೃತ್ತಿ ಮಾಡಿಕೊಂಡು ಬಂದಿರುವ ಕಾರ್ಮಿಕರಿಗೆ ಸಹಾಯ ಮಾಡಲು ಸರ್ಕಾರದಿಂದ ಸಾಧ್ಯವಾಗಲಿಲ್ಲ. ಕೆಲವರಿಗೆ ಒಂದಿಷ್ಟು ಹಣ ಕೊಟ್ಟು ಮುಗಿಸಿದರು. ರಂಗಸ್ವಾಮಿ ಅವರು ತಮ್ಮ ಬೇಡಿಕೆ ಪಟ್ಟಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರ ಸೇರ್ಪಡೆ ಮಾಡುತ್ತೇವೆ.
ನಿಮಗೆ ಪ್ರತ್ಯೇಕ ಮಾರುಕಟ್ಟೆ ಸ್ಥಾಪಿಸಿದರೆ ನೀವು ಅಲ್ಲಿ ಹೋಗಲು ಸಿದ್ಧರಿಲ್ಲ. ಹೀಗಾಗಿ ನಗರದ ಸೌಂದರ್ಯ ಕಾಪಾಡಿ, ನಿಮಗೂ ರಕ್ಷಣೆ ಸಿಗಬೇಕು. ಇದನ್ನು ಯಾವ ರೀತಿ ಮಾಡಬೇಕು ಎಂದು ನಿಮ್ಮ ಜತೆಯೇ ಚರ್ಚೆ ಮಾಡಿ ನಿಮ್ಮ ವಾರ್ಡ್ ಗಳಲ್ಲಿ ನಿಮ್ಮ ವಿಶ್ವಾಸ ತೆಗೆದುಕೊಂಡು ಸಮಿತಿ ಜತೆ ಸಭೆ ಮಾಡಿ ಸಹಾಯ ಮಾಡಬೇಕು. ಇದಕ್ಕೆ ಕಾನೂನು ಚೌಕಟ್ಟನ್ನು ಕಾಂಗ್ರೆಸ್ ಕಟ್ಟಿಕೊಡಲಿದೆ.
ನಿಮ್ಮ ನೆಮ್ಮದಿಯ ಬದುಕಿಗಾಗಿ ನಿಮ್ಮ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣ ಸಿಗಲು ಚುನಾವಣೆ ಪ್ರಣಾಳಿಕೆಯಲ್ಲಿ ಕಾರ್ಯಕ್ರಮ ನೀಡಲಾಗುವುದು.
ಈ ಜನರ ಸಮಸ್ಯೆ ಅರ್ಥ ಮಾಡಿಕೊಂಡು ಕಾರ್ಯಕ್ರಮ ರೂಪಿಸುತ್ತಿದೆ. ಕಳೆದ ಮೂರೂವರೆ ವರ್ಷ ಆಡಳಿತದಲ್ಲಿ ಸರ್ಕಾರ ಬಡವರಿಗಾಗಿ ಯಾವುದಾದರೂ ಒಂದು ಕಾರ್ಯಕ್ರಮದ ಕೊಟ್ಟಿದ್ದರೆ, ಕೋವಿಡ್ ಸತ್ತವರ ಕುಟುಂಬಕ್ಕೆ ಪರಿಹಾರ, ಆಸ್ಪತ್ರೆ ವೆಚ್ಚ ಭರಿಸುತ್ತೇವೆ, ಚಾಲಕರಿಗೆ ಸಹಾಯಧನ, ಬೀದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುತ್ತೇವೆ ಎಂದಿದ್ದರು. ಯಾರಿಗಾದರೂ ಅನುಕೂಲ ಆಯಿತಾ? ಸರ್ಕಾರ ಕೊಡುವ ಆಹಾರ ಸಾಮಾಗ್ರಿಗೆ ಶಾಸಕರು ತಾವು ಹಂಚುತ್ತಿದ್ದೇವೆ ಎಂದು ಅವರ ಫೋಟೋ ಹಾಕಿ ಹಂಚಿದರು.
ನಮ್ಮ ನಾಯಕರಾದ ರಾಮಲಿಂಗಾ ರೆಡ್ಡಿ, ಪದ್ಮಾವತಿ, ದೇವರಾಜ್, ಜಮೀರ್, ಕೃಷ್ಣ ಭೈರೆಗೌಡ ಸೇರಿದಂತೆ ಹಲವರು ತಮ್ಮ ಜೇಬಿನ ಹಣದಿಂದ ನಿಮಗೆ ನೆರವು ನೀಡಿದ್ದಾರೆ.
ಈಗ ನಾವು ಜನರ ಧ್ವನಿಯಾಗಲು ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ನಾವು ನಿಮ್ಮ ನೋವು ಕೇಳಲು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಧ್ವನಿ ನಮ್ಮ ಧ್ವನಿ.
ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿದ್ದ ಬೆಳಗಾವಿಯ ವೀರಸೌಧದಿಂದ ಯಾತ್ರೆ ಆರಂಭಿಸಿ ಅಲ್ಲಿ ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದೆವು. ಅದೇನೆಂದರೆ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಆಮೂಲಕ ತಿಂಗಳಿಗೆ 1500 ರೂಪಾಯಿ ಉಳಿತಾಯ ಆಗಲಿದೆ.
ಇನ್ನು ಮಹಿಳೆಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಅವರಿಗೆ ಮನೆ ನಡೆಸಲು ಸಮಸ್ಯೆ ಎದುರಾಗಿದೆ. ಹೀಗಾಗಿ ಅವರಿಗೆ ನೆರವಾಗಲು ಪ್ರತಿ ಮನೆಯೋಡತಿಗೆ ತಿಂಗಳಿಗೆ 2 ಸಾವಿರಾದಂತೆ ವರ್ಷಕ್ಕೆ 24 ಸಾವಿರ ಹಣ ನೀಡಲಾಗುವುದು.
ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಹರಿಯಾಣದಲ್ಲಿ ಪಾದಯಾತ್ರೆ ಮಾಡುವಾಗ ನಾನು ಅಲ್ಲಿಗೆ ಹೋಗಿ ಅವರ ಜತೆ ಚರ್ಚೆ ಮಾಡಿದೆ. ನಂತರ ಪ್ರಿಯಾಂಕಾ ಗಾಂಧಿ ಅವರು ಈ ಯೋಜನೆ ಘೋಷಣೆ ಮಾಡಿದರು.
ಈ ಬೀದಿ ಬದಿ ವ್ಯಾಪಾರಿಗಳಲ್ಲಿ ಮಹಿಳೆಯರೇ ಹೆಚ್ಚು. ಆಕೆಯೇ ಮನೆಯ ಜವಾಬ್ದಾರಿ ನಿಭಾಯಿಸುತ್ತಾರೆ. ನಿಮಗೆ ನೆರವಾಗಲು ನಮ್ಮ ಪಕ್ಷ ಬದ್ಧವಾಗಿದೆ.
ಈ ಸರ್ಕಾರಕ್ಕೆ ಕೋವಿಡ್ ಸಂತ್ರಸ್ತರಿಗೆ ನೆರವಾಗಲು ಸಾಧ್ಯವಾಗಲಿಲ್ಲ. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಸುಮಾರು 36 ಜನ ಸತ್ತಿದ್ದಾರೆ. ನಾನು ಸಿದ್ದರಾಮಯ್ಯ ಅವರು ಅಲ್ಲಿ ಪರಿಶೀಲನೆ ನಡೆಸಿದೆವು. ನಾನು ಎಲ್ಲಾ ಮನೆಗೂ ಹೋಗಿ ತಲಾ ಒಂದು ಲಕ್ಷ ಪರಿಹಾರ ಕೊಟ್ಟು ಬಂದೆವು.
ಬಿಜೆಪಿಗೆ ಅಧಿಕಾರ ಇದ್ದಾಗ ಜನರಿಗೆ ಯಾವುದೇ ಸಹಾಯ ಮಾಡಲಿಲ್ಲ. ನಾವು ಅನ್ನಭಾಗ್ಯ, ಶಾಲೆಯಲ್ಲಿ ಬಿಸಿಯೂಟ ಕಾರ್ಯಕ್ರಮ ಹೀಗೆ ಜನಪರ ಕಾರ್ಯಕ್ರಮ ಕೊಟ್ಟಾಗ ಜಾತಿ ನೋಡಿ ಕೊಡಲಿಲ್ಲ. ಹೀಗೆ ಕಾಂಗ್ರೆಸ್ ಪಕ್ಷ ನಿಮ್ಮ ಬದುಕಲ್ಲಿ ಬದಲಾವಣೆ ತರಲು ಬದ್ಧವಾಗಿದೆ. ನೀವು ನಮಗೆ ಶಕ್ತಿ ತುಂಬಬೇಕು.
[21/01, 11:19 AM] Kpcc official: *ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು ಬಾಯಿ: ಡಿ.ಕೆ. ಶಿವಕುಮಾರ್ ತಿರುಗೇಟು*
ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ನಮ್ಮ ಹಳ್ಳಿ ಕಡೆ ಇಂತಹವರಿಗೆ ಬಚ್ಚಲು ಬಾಯಿ ಅಂತಾರೆ. ಕಟೀಲ್ ಒಂದು ಪಕ್ಷದ ರಾಜ್ಯಾಧ್ಯಕ್ಷರು, ಸಂಸದರು. ಅವರು ಮಾತನಾಡಿದರೆ ಅದಕ್ಕೆ ಸಾಕ್ಷಿ ಇರಬೇಕು. ಅವರು ಇದುವರೆಗೂ ಮಾತನಾಡಿರುವ ಯಾವುದಾದರೂ ವಿಚಾರದಲ್ಲಿ ಏನಾದರೂ ಸಾಕ್ಷಿ ಇದೆಯಾ?
ಕಟೀಲ್ ಅವರು ಮೊದಲು ಯತ್ನಾಳ್, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಅವರ ಮಾತಿಗೆ ಉತ್ತರ ನೀಡಲಿ. ಕಟೀಲ್ ಅವರಿಗೆ ಪಕ್ಷದಲ್ಲಿ ಹಿಡಿತವಿಲ್ಲ. ಅವರು ಪಕ್ಷದ ಅಧ್ಯಕ್ಷರು, ನಮ್ಮ ಪಕ್ಷದ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನೆ. ಇಲ್ಲದಿದ್ದರೆ ನನ್ನಂತಹವರ ಪ್ರತಿಕ್ರಿಯೆ ಪಡೆಯಲು ಅವರು ಯೋಗ್ಯರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ನಾಯಕರು ಸಭೆ ಮಾಡಿದರೆ ಚಪ್ಪಲಿಗಳು ಕೈಗೆ ಬರುತ್ತವೆ ಎಂಬ ಕಟೀಲ್ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಕೆಪಿಸಿಸಿ ಕಚೇರಿ ಬಳಿ ಶನಿವಾರ ಪ್ರಶ್ನೆ ಮಾಡಿದಾಗ ಶಿವಕುಮಾರ್ ಅವರಿಂದ ಈ ಪ್ರತಿಕ್ರಿಯೆ ವ್ಯಕ್ತವಾಯಿತು.
ಕಾಂಗ್ರೆಸ್ ಒಡೆಯಲು ಟಿಆರ್ ಎಸ್ ನಾಯಕ ಕೆ.ಸಿ ಚಂದ್ರಶೇಖರರಾವ್ ಅವರು ಹಣ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಈ ಬಗ್ಗೆ ನನಗೆ ಗೊತ್ತಿಲ್ಲ. ಹಣ್ಣ ಕೊಟ್ಟಿರುವವರು ಹಾಗೂ ತೆಗೆದುಕೊಂಡವರನ್ನು ಕೇಳಿ. ಬೇರೆಯವರು ವೈಯಕ್ತಿಕ ವಿಚಾರವಾಗಿ ಚಂದ್ರಶೇಖರ್ ಅವರನ್ನು ಭೇಟಿ ಮಾಡಿರಬಹುದು, ಅದಕ್ಕೆ ನಾವು ಪ್ರಶ್ನೆ ಮಾಡಲು ಆಗುವುದಿಲ್ಲ ' ಎಂದು ತಿಳಿಸಿದರು.
ಮೊದಲ ಟಿಕೆಟ್ ಪಟ್ಟಿ ಬಗ್ಗೆ ಕೇಳಿದಾಗ, ' ಫೆ.2 ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈಗಾಗಲೇ ನಮ್ಮ ನಾಯಕರು ಆಕಾಂಕ್ಷಿಗಳ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಾವು ನಮ್ಮ ಪ್ರವಾಸ ಮುಗಿಸಿ ಚರ್ಚೆ ಮಾಡಿ ಆದಷ್ಟು ಬೇಗ ತೀರ್ಮಾನ ಮಾಡುತ್ತೇವೆ' ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಿಂದ ತಮ್ಮ ಪಕ್ಷಕ್ಕೆ ನಾಯಕರು ಬರುವವರಿದ್ದಾರೆ ಎಂಬ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಕೇಳಿದಾಗ, ' ತಡಮಾಡದೆ ಆದಷ್ಟು ಬೇಗ ಕರೆದುಕೊಳ್ಳಲಿ' ಎಂದು ತಿಳಿಸಿದರು.
ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಬಗ್ಗೆ ಕೇಳಿದಾಗ, ' ಅಮಿತ್ ಶಾ ಅವರು ಮೊದಲು ಬೊಮ್ಮಾಯಿ ಅವರ ನೇತತ್ವದಲ್ಲಿ ರಾಜ್ಯ ಚುನಾವಣೆ ಎದುರಿಸಲಾಗುವುದು ಎಂದು ತಿಳಿಸಿದರು. ಆದರೆ ಈಗ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಆ ಮೂಲಕ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ನಾವು ಜನರ ಭಾವನೆ ಅರಿತು ಪ್ರಜಾಧ್ವನಿ ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ಅದಾದ ನಂತರ ಬಿಜೆಪಿಯವರು ನಾವು ಕೂಡ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕಳೆದ ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿ ಇದ್ದರೂ ಯಾಕೆ ಮಾಡಲಿಲ್ಲ? ನಾವು ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದ್ದೇವೆ. ಇನ್ನು ಎರಡನೇ ಗ್ಯಾರೆಂಟಿ ಯೋಜನೆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಮಹಿಳೆಯರಿಗೆ ನೆರವಾಗಲು ಮನೆಯೊಡತಿಗೆ ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದೇವೆ. ಈ ಯೋಜನೆ ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲವರು ಈ ಸೌಲಭ್ಯ ಬೇಡ ಎಂದರೆ ನಾವು ಏನೂ ಮಾಡಲು ಸಾಧ್ಯವಿಲ್ಲ ' ಎಂದರು.
[21/01, 1:05 PM] Kpcc official: ಅಮಿತ್ ಶಾ, ಮೋದಿ ಕರ್ನಾಟಕಕ್ಕೆ ಬರುವುದು ಚುನಾವಣಾ ಪ್ರಚಾರಕ್ಕೆ ಮಾತ್ರವಲ್ಲ, ರಾಜ್ಯದ ಸೌಲಭ್ಯಗಳನ್ನು ಕಿತ್ತುಕೊಂಡು ಹೋಗಲು ಬರುತ್ತಾರೆ.
ಯುಜಿಸಿ ಪ್ರಾದೇಶಿಕ ಕಚೇರಿಯನ್ನು ದೆಹಲಿಗೆ ಸ್ಥಳಾಂತರಿಸಿದರೂ 25 ಬಿಜೆಪಿ ಸಂಸದರು, @BSBommai ಸರ್ಕಾರ ಬಾಯ್ಮುಚ್ಚಿರುವುದೇಕೆ?
@BJP4Karnataka ಗೆ ರಾಜ್ಯದ ಮುಖ್ಯವೋ, ಮೋದಿಯ ಗುಲಾಮಗಿರಿ ಮುಖ್ಯವೋ?
Post a Comment