[21/01, 10:20 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತುಮಕೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ನೆಲಮಂಗಲದಲ್ಲಿ ಮಾಜಿ ಶಾಸಕ ನಾಗರಾಜ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಿದರು.
[21/01, 12:26 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪರಮಪೂಜ್ಯ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ 4 ನೇ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಂಡರು.
ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ಎಸ್.ಟಿ. ಸೋಮಶೇಖರ್, ಸಂಸದ ಭಗವಂತ ಖೂಬಾ, ಭಾಜಪ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸೇರಿದಂತೆ ತುಮಕೂರಿನ ಜನಪ್ರತಿನಿಧಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದರು.
[21/01, 12:49 PM] Cm Ps: .
*ಫೆ.ಮಾಹೆಯಲ್ಲಿ ರಾಜ್ಯದಲ್ಲಿ ದಾಸೋಹ ದಿನದ ವಿಶಿಷ್ಟ ಆಚರಣೆ*:*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ತುಮಕೂರಿ, ಜನವರಿ 21: ಫೆಬ್ರವರಿ ಮಾಹೆಯಲ್ಲಿ ದಾಸೋಹ ದಿನವನ್ನು ವಿಶಿಷ್ಟವಾದ ಕಾರ್ಯಕ್ರಮವಾಗಿ ಇಡೀ ರಾಜ್ಯದಲ್ಲಿ ಆಚರಣೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಡಾ: ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
*ದಾಸೋಹ ದಿನ: ರಜೆ ಘೋಷಣೆ ಇಲ್ಲ*
ದಾಸೋಹ ದಿನದ ಪ್ರಯುಕ್ತ ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ದಾಸೋಹ ಮಂಟಪಗಳು ಮಠಮಾನ್ಯಗಳಲ್ಲಿ ಆಗಬೇಕು. ಇದರ ಆಚರಣೆಗೆಂದು ರಜೆ ಘೋಷಿಸುವುದಿಲ್ಲ. ಆದರೆ ಗೌರವ ಸಲ್ಲಿಸುವ ಕೆಲಸ ಮಾಡಲಾಗುವುದು. ಬಸವಣ್ಣ ಹಾಗೂ ಶಿವಕುಮಾರ ಸ್ವಾಮೀಜಿಗಳು ಕಾಯಕತತ್ವವನ್ನು ಪ್ರತಿಪಾದಿಸಿದ್ದು, ಅದರಂತೆ ನಾವು ನಡೆಯುತ್ತೇವೆ ಎಂದರು.
*ಸ್ವಾಮೀಜಿಗಳ ಆಶೀರ್ವಾದ ನಾಡಿನ ಜನತೆ ಮೇಲಿದೆ*
ನಡೆದಾಡುವ ದೇವರು , ಪರಮಪೂಜ್ಯ ಡಾ: ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸಂಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು, ಗದ್ದುಗೆ ನಮಸ್ಕಾರ ಮಾಡಿದ್ದು, ಸಂತೋಷ, ಸಮಾಧಾನವಾವಿದೆ. ಅವರ ಆಶೀರ್ವಾದ ಈ ನಾಡಿನ ಜನತೆ ಮೇಲೆ ಇದೆ ಎಂಬ ಭಾವನೆಯಿಂದ ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.
*ಪ್ರತಿಮೆ ಸ್ಥಾಪನೆಗೆ ವೇಗ*
ಸ್ವಾಮೀಜಿ ಹುಟ್ಟೂರಿನಲ್ಲಿ ಅವರ ಪ್ರತಿಮೆ ಸ್ಥಾಪನೆ ಕುರಿತು ಪರಿಶೀಲಿಸಿದ್ದು, ಅದಕ್ಕೆ ವೇಗ ನೀಡಲಾಗುತ್ತಿದೆ ಎಂದರು.
[21/01, 2:25 PM] Cm Ps: ತುಮಕೂರು, ಜನವರಿ 21: *ಮಾನ್ಯ* *ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ತುಮಕೂರಿನ ನಗರ* *ಅಶೋಕನಗರ ದಲ್ಲಿ ಭಾರತೀಯ* *ಜನತಾ ಪಾರ್ಟಿಯ* ವತಿಯಿಂದ ಆಯೋಜಿಸಿರುವ “ *ವಿಜಯ* *ಸಂಕಲ್ಪ ಅಭಿಯಾನ”ಕ್ಕೆ* ಚಾಲನೆ ನೀಡಿ ಮಾತನಾಡಿದರು.
[21/01, 3:15 PM] Cm Ps: *ಭಾಜಪಕ್ಕೆ 130 ಸ್ಥಾನಗಳ ಬಹುಮತ : ಸಿಎಂ ಬೊಮ್ಮಾಯಿ*
ತುಮಕೂರು, ಜನವರಿ 21: ಭಾರತೀಯ ಜನತಾ ಪಕ್ಷ ಸಂಪೂರ್ಣ ಬಹುಮತ ಅಂದರೆ 130 ಸ್ಥಾನಗಳನ್ನು ಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ತುಮಕೂರಿನ ಸಿದ್ದಗಂಗಾ ಮಠದ ಬಳಿ, ಮಾಧ್ಯದವರೊಂದಿಗೆ ಮಾತನಾಡಿದರು.
ಈಗಾಗಲೇ ಅಮಿತ್ ಶಾ ಅವರು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚುನಾವಣೆ ಎದುರಿಸುವುದು ಎಂದು ಹೇಳಿದ್ದಾರೆ. ಅದರರ್ಥ ಕೇವಲ ಮುಖ್ಯಮಂತ್ರಿಯಲ್ಲ, ನಮ್ಮ ಸಂಪೂರ್ಣ ತಂಡ ಪಕ್ಷ, ಹಾಗೂ ಸರ್ಕಾರದ ಎಲ್ಲಾ ಪ್ರಮುಖರು ಸೇರಿ ಶ್ರಮಿಸುತ್ತೇವೆ. ಚುನಾವಣೆ ಎನ್ನುವುದು ಎಲ್ಲರೂ ಸೇರಿ ಮಾಡಬೇಕು ಎನ್ನುವ ಸತ್ಯದ ಅರಿವಿನಿಂದ ಕ್ರಮ ಕೈಗೊಳ್ಳುತ್ತೇವೆ ಎಂದರು.
*ಸರ್ಕಾರದ ಸಾಧನೆಗಳನ್ನುಜನರಿಗೆ ತಲುಪಿಸಲಾಗುವುದು*
ವಿಜಯ ಸಂಕಲ್ಪ ಯಾತ್ರೆ ಇಡೀ ರಾಜ್ಯದಲ್ಲಿ ಆಗುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ನಡೆಯುವ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೂಡ ಮತ್ತೊಂದೆಡೆ ಭಾಗವಹಿಸುತ್ತಿದ್ದಾರೆ. ಪಕ್ಷದ ಪ್ರಮುಖರೆಲ್ಲರೂ ವಿವಿದೆಡೆ ಭಾಗವಹಿಸುತ್ತಿದ್ದಾರೆ. ಮನೆ ಮನೆಗೆ ಅಭಿಯಾನ ಕೈಗೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಹಾಗೂ ಸಾಧನೆಗಳ ಬಗ್ಗೆ ಜನರಿಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
*ಬೆಂಕಿಲ್ಲದೆ ಹೊಗೆಯಾಡುವುದಿಲ್ಲ*
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಉರುಳಿಸಲು ಕಾಂಗ್ರೆಸ್ ಮುಖಂಡರಿಗೆ 500 ಕೋಟಿ ನೀಡಲಾಗಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷರು ಆಪಾದನೆ ಮಾಡಿರುವ ಬಗ್ಗೆ ಮಾತನಾಡಿ, ಕಾಂಗ್ರೆಸ್ ನವರೆ ಇದಕ್ಕೆ ಉತ್ತರ ಕೊಡಬೇಕು. ಕಾಂಗ್ರೆಸ್ ನವರ ಆಪಾದನೆಗೆ ಕಾಂಗ್ರೆಸ್ ನವರೇ ಸ್ಪಷ್ಟೀಕರಣ ನೀಡಬೇಕು. ಈ ಬಗ್ಗೆ ಖುಷಿಯಾಗುವ ಪ್ರಶ್ನೆಯಿಲ್ಲ. ನಾವು ಗೆಲ್ಲುವುದು ನಮ್ಮ ಶಕ್ತಿಯ ಆಧಾರದ ಮೇಲೆ, ಇನ್ನೊಬ್ಬರ ದುರ್ಬಲತೆಯ ಮೇಲೆ ಅಲ್ಲ. ಕಾಂಗ್ರೆಸ್ ಅಧ್ಯಕ್ಷರೇ ಇದನ್ನು ಹೇಳುವಾಗ ಕಾಂಗ್ರೆಸ್ ನವರು ಇದನ್ನು ಮರೆಮಾಚುವ ಪ್ರಯತ್ನ ಮಾಡುತ್ತಿದ್ದಾರೆ ಅನಿಸುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸ್ಪಷ್ಟೀಕರಣ ನೀಡಬೇಕು. ಬೆಂಕಿಲ್ಲದೆ ಹೊಗೆಯಾಡುವುದಿಲ್ಲ ಎಂದರು.
ಸುದ್ದಿಗಾರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಸಚಿವ ಮಾಧುಸ್ವಾಮಿ ಯವರು ವೈಯಕ್ತಿಕ ಕಾರಣಗಲಿಂದ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದರು.
[21/01, 3:16 PM] Cm Ps: *ಬಸವಣ್ಣನವರ ತತ್ವಾದರ್ಶಗಳ ಬಗ್ಗೆ ಚಿಂತನೆ ಅತ್ಯಗತ್ಯ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ತುಮಕೂರು, ಜನವರಿ 21 :
ಬಸವಣ್ಣನವರ ತತ್ವಾದರ್ಶಗಳ ಬಗ್ಗೆ ಚಿಂತನೆ ಅತ್ಯಗತ್ಯವಾಗಿದ್ದು, ಅಸಮಾನತೆ, ಲಿಂಗಭೇದ, ಮೇಲುಕೀಳುಗಳನ್ನು ಹೋಗಲಾಡಿಸಲು ನಾವೇನು ಮಾಡಬೇಕು ಎಂಬ ಬಗ್ಗೆ ಚಿಂತಿಸಬೇಕು. ಸಾಮಾಜಿಕ ಕ್ರಾಂತಿಯನ್ನುಂಟು ಮಾಡುವ ಕಾಯಕದಲ್ಲಿ ಮಠಗಳು ಮುಂಚೂಣಿಯಲ್ಲಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಪರಮಪೂಜ್ಯ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ 4 ನೇ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
*ಮುಗ್ಧತೆ ಹಾಗೂ ಆತ್ಮಸಾಕ್ಷಿಯಿಂದ ಆತ್ಮಬಲ :*
ಬದುಕಿನಲ್ಲಿ ಮುಗ್ಧತೆಯನ್ನು ಸದಾ ಕಾಯ್ದುಕೊಂಡು ಆತ್ಮಸಾಕ್ಷಿಯಿಂದ ನಡೆದುಕೊಳ್ಳುವುದು ಬಹಳ ಕಷ್ಟ. ಸತ್ಯವೆಂಬ ಸಾತ್ವಿಕ ವಿಚಾರವನ್ನಿಟ್ಟುಕೊಂಡು, ಲೌಕಿಕ ಲಾಭನಷ್ಟಗಳಿಂದ ದೂರವಿರುವವರು ಮಾತ್ರ ಆತ್ಮಸಾಕ್ಷಿಯಿಂದ ನಡೆದುಕೊಳ್ಳಲು ಸಾಧ್ಯ. ತಮ್ಮ ಬದುಕಿನುದ್ದಕ್ಕೂ ಮುಗ್ಧತೆ ಹಾಗೂ ಆತ್ಮಸಾಕ್ಷಿಯಂತೆ ನಡೆದುಕೊಂಡವರೇ ನಮ್ಮ ನಡೆದಾಡುವ ದೇವರಾದ ಶಿವಕುಮಾರ ಸ್ವಾಮೀಜಿಗಳು. ಪ್ರತಿನಿತ್ಯ ಪರೀಕ್ಷೆಗೆ ಒಳಪಟ್ಟು ಆತ್ಮಬಲ ಹೆಚ್ಚುವುದರಿಂದ ಪ್ರಕಾಶಮಯವಾದ ಆತ್ಮಬಲ ದೊರೆಯುತ್ತದೆ ಎಂದರು.
*ಜ್ಞಾನವನ್ನು ಲೋಕಕಲ್ಯಾಣಕ್ಕಾಗಿ ಸಮರ್ಪಿಸುವುದೇ ಕಾಯಕ :*
ಸ್ವಾಮಿ ವಿವೇಕಾನಂದರು ಅತಿ ಸಣ್ಣ ವಯಸ್ಸಿನಲ್ಲಿ ಮುಕ್ತಿಮಾರ್ಗವನ್ನು ಕಂಡುಕೊಂಡವರು.ಅವರ ಗುರು ಪರಮಹಂಸರು ಸಾಧನೆ ಒಬ್ಬರ ಸ್ವತ್ತಲ್ಲ. ನಿನ್ನ ಸಾಧನೆಯಿಂದ ಸಾವಿರಾರು ಜನ ಬೆಳಕು ಕಾಣುವಂತಾಗಬೇಕೆಂದು ಬೋಧಿಸಿದ್ದರ ಪರಿಣಾಮ ಸ್ವಾಮಿವಿವೇಕಾನಂದರು ವಿಶ್ವಗುರುವಾದರು. ಅದೇ ರೀತಿಯಲ್ಲಿ ಶಿವಕುಮಾರ ಸ್ವಾಮೀಜಿ ತಮ್ಮ ಜ್ಞಾನವನ್ನು ಲೋಕಕಲ್ಯಾಣಕ್ಕಾಗಿ ಅರ್ಪಿಸಿದ್ದಾರೆ. ನನಗಾಗಿ ದುಡಿಯುವುದು ಕರ್ತವ್ಯ ಆದರೆ ಲೋಕಕಲ್ಯಾಣಕ್ಕಾಗಿ ಸಮರ್ಪಿಸುವುದು ಕಾಯಕ ಎಂದರು.
*ಉದಾತ್ತ ಚಿಂತನೆಯುಳ್ಳ ತ್ರಿವಿಧ ದಾಸೋಹ :*
ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಿಗಳು, ಕಾಯಕ ಯೋಗಿಗಳಾಗಿದ್ದಾರೆ. ಬಡಮಕ್ಕಳು ಶ್ರೀ ಕ್ಷೇತ್ರಕ್ಕೆ ಬಂದು ಅನ್ನ, ಆರೋಗ್ಯ, ವಿದ್ಯೆ, ಆಶ್ರಯ ಎಲ್ಲವನ್ನೂ ಪಡೆಯುತ್ತಿದ್ದಾರೆ. ಇದರೊಂದಿಗೆ ಸಂಸ್ಕಾರ, ಸಂಸ್ಕೃತಿಯನ್ನು ನೀಡುತ್ತಿದೆ. ಭಕ್ತರೇ ಮಠದ ಆಸ್ತಿ ಹಾಗೂ ಪರಮಾತ್ಮನೇ ಅಕ್ಷಯಪಾತ್ರೆ, ಎಲ್ಲ ಸೇವಾ ಕಾರ್ಯಗಳಿಗೆ ಶರಣರು, ದೀನದಲಿತರೇ ಒಡೆಯರು ಎಂದು ಶಿವಕುಮಾರ ಸ್ವಾಮೀಜಿಗಳು ಎಂದು ನಂಬಿದವರು. ಉದಾತ್ತ ಚಿಂತನೆಯ ಫಲವಾಗಿ ತ್ರಿವಿಧ ದಾಸೋಹ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದರು.
*ರಾಜ್ಯ ಸರ್ಕಾರದ ವತಿಯಿಮದ ದಾಸೋಹ ದಿನ ಆಚರಣೆ :*
ಸ್ವಾಮಿ ವಿವೇಕಾನಂದರು ನುಡಿದಂತೆ ಸಾಧಕನಿಗೆ ಸಾವು ಆಂತ್ಯವಲ್ಲ, ಸಾವಿನ ನಂತರವೂ ಬದುಕುವವನು ಸಾಧಕ. ಅಂತಹ ಸಾಧಕರಲ್ಲಿ ಶಿವಕುಮಾರ ಸ್ವಾಮಿಗಳು ಪ್ರಮುಖರಾಗಿದ್ದಾರೆ. ಭಕ್ತರಲ್ಲಿ ಅವರು ಜೀವಂತವಾಗಿದ್ದಾರೆ. ಶ್ರೀಮಠದ ಈಗಿನ ಗುರುಗಳು ಶಿವಕುಮಾರ ಸ್ವಾಮೀಜಿಗಳ ದಾಸೋಹ ಕಾಯಕವನ್ನು ಹತ್ತು ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಆಶ್ರಯವನ್ನು ನೀಡುವ ಮೂಲಕ ದಾಸೋಹ ಪರಂಪರೆಯನ್ನು ಮುಂದುವರೆಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದಲೂ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಜನ್ಮದಿನದಂದು ದಾಸೋಹ ದಿನವೆಂದು ಆಚರಿಸಲಾಗುತ್ತದೆ. ಮಠಮಾನ್ಯಗಳಲ್ಲಿ ದಾಸೋಹಗಳನ್ನು ಮಾಡಲಾಗುತ್ತಿದೆ. ಈ ಕ್ಷೇತ್ರಕ್ಕೆ ದಾಸೋಹಕ್ಕೆ ವ್ಯವಸ್ಥೆಗಳನ್ನು ಮಾಡುವ ಮೂಲಕ ದಾಸೋಹ ದಿನವನವನ್ನು ಆಚರಿಸಲಾಗುವುದು. ವಿಶ್ವಮಟ್ಟದಲ್ಲಿಯೂ ದಾಸೋಹ ದಿನವನ್ನು ಆಚರಿಸುವ ಮೂಲಕ ವಿಶ್ವದಾಖಲೆಯನ್ನು ಮಾಡಲಾಗುವುದು. ಬಸವಣ್ಣನವರ ವಿಚಾರಧಾರೆಗಳನ್ನು ಪಾಲಿಸುವ ನಿಜವಾದ ಭಕ್ತರಾಗುತ್ತೇವೆ. ಭಕ್ತಿಯೆಂದರೆ ಕರಾರುರಹಿತ ಪ್ರೀತಿ. ಬಸವಣ್ಣನವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಕನ್ನಡ ನಾಡನ್ನು ಸುಭಿಕ್ಷವಾಗಿಸೋಣ ಎಂದು ತಿಳಿಸಿದರು.
ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ಎಸ್.ಟಿ. ಸೋಮಶೇಖರ್, ಸಂಸದ ಭಗವಂತ ಖೂಬಾ, ಭಾಜಪ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸೇರಿದಂತೆ ತುಮಕೂರಿನ ಜನಪ್ರತಿನಿಧಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದರು.
[21/01, 5:37 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರಿನ ಅಶೋಕನಗರದಲ್ಲಿ ಆಯೋಜಿಸಲಾಗಿದ್ದ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಜ್ಯೋತಿ ಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
[21/01, 5:42 PM] Cm Ps: *ಮಹಿಳೆಯರ ಬಗ್ಗೆ ವಿಶಾಲ ದೃಷ್ಟಿಕೋನವವುಳ್ಳ ಏಕೈಕ ಪಕ್ಷ ಭಾಜಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ತುಮಕೂರು, ಜನವರಿ 21: ಮಹಿಳೆÉಯರ ಕುರಿತಾಗಿ ವಿಶಾಲ ದೃಷ್ಟಿಕೋನವನ್ನು ಹೊಂದಿರುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಇಂದು ತುಮಕೂರಿನಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತಾಡಿದರು.
ಆರ್ಥಿಕತೆಯಲ್ಲಿಯೂ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ನಮ್ಮದು ಉಳಿತಾಯದ ಸಂಸ್ಕøತಿ. ಈ ಉಳಿತಾಯ ಕುಟುಂಬದ ಆಸ್ತಿಯಾಗುತ್ತದೆ. ಕಷ್ಟದ ದಿನಗಳಲ್ಲಿ ಈ ಹಣ ನೆರವಿಗೆ ಬರಲಿದೆ. ಆದ್ದರಿಂದಲೇ ನಮ್ಮ ದೇಶದಲ್ಲಿ ಅತ್ಯಂತ ಕಡಿಮೆ ಬ್ಯಾಂಕುಗಳು ದಿವಾಳಿಯಾಗುತ್ತವೆ. ಪಾಶ್ಚಿಮಾತ್ಯ ದೇಶಗಳ ಬ್ಯಾಂಕುಗಳು ಹಾಗೂ ಮನೆಗಳಲ್ಲಿ ಉಳಿತಾಯ ಮಾಡುವ ಹಣದೊಂದಿಗೆ ನೇರವಾದ ಆರ್ಥಿಕ ಸ್ಪರ್ಧೆಯಿದೆ. ಉಳಿತಾಯ ಮಹಿಳೆಯರ ಶಕ್ತಿಯೂ ಹೌದು. ಸಾಕಷ್ಟು ವಿಚಾರಗಳಲ್ಲಿ ಮಹಿಳೆ ಅಭ್ಯಾಸದಿಂದಲೇ ಸಂಸ್ಕøತಿಯನ್ನು ಬೆಳೆಸಿದ್ದಾರೆ. ನಮ್ಮ ತಾಯಂದಿರು ಶಿಕ್ಷಣ ಪಡೆಯದಿದ್ದರೂ ಅವರಲ್ಲಿ ಜ್ಞಾನ ಭಂಡಾರವೇ ಇತ್ತು. ಆಧ್ಯಾತ್ಮ, ಮೌಲ್ಯಗಳ ಜ್ಞಾನವರಲ್ಲಿತ್ತು. ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಕಾರ್ಯಕಾರಿ ಸಮತಿಯಲ್ಲಿ ಹೆಣ್ಣುಮಗುವಿನ ಭ್ರೂಣಹತ್ಯೆಯ ಬಗ್ಗೆ ಮಾತನಾಡಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ನಮ್ಮ ಪ್ರಧಾನಿಗಳು ಅತ್ಯಂತ ಮೃದು ಹೃದಯದ, ಕರುಣೆಯುಳ್ಳ ವ್ಯಕ್ತಿ. ಇನ್ನೂ 25 ವರ್ಷಗಳ ಕಾಲ ಅವರೇ ಈ ದೇಶವನ್ನು ಮುನ್ನಡೆಸುತ್ತಾರೆ ಎನ್ನುವ ಬಗ್ಗೆ ಸಂಶಯವಿಲ್ಲ ಎಂದರು.
*ನಾಳೆಗಳು ನಿಮ್ಮವೇ*
ಮಹಿಳೆಯರು ಸಂಘಟಿತರಾಗಿ, ಭಾಜಪದಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕು. ಬಿಜೆಪಿ ಮಹಿಳಾ ಮೋರ್ಚಾಕ್ಕೆ ಮಾತ್ರವಲ್ಲದೇ ಬಿಜೆಪಿಯ ನಾಯಕಿಯರೂ ಆಗಬೇಕು. ಸುಶ್ಮಾ ಸ್ವರಾಜ್ ಅವರು ಪಕ್ಷದ ಪ್ರಮುಖ ನಾಯಕಿಯಾಗಿದ್ದರು. ಎಲ್ಲಾ ಪ್ರಮುಖರೊಂದಿಗೆ ಹೆಗಲಿಗೆ ಹೆಗಲು ನೀಡಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕದೊಂದಿಗೆ ಅವರಿಗೆ ವಿಶೇಷ ಸಂಬಂಧವಿತ್ತು. ಕನ್ನಡಿಗರ ಹೃದಯಗಳನ್ನು ಅವರು ತಲುಪಿದ್ದರು ಎಂದರು. ಯಾವುದೇ ತರಬೇತಿಯಿಲ್ಲದೇ ಅವರು ಇದನ್ನು ಸಾಧಿಸಿದ್ದರು. ಆದರೆ ನಿಮಗೆ ಮಾಹಿತಿ ತಂತ್ರಜ್ಞಾನ, ಡಿಜಿಟಲ್ ಶಿಕ್ಷಣ. ಆರ್ಥಿಕ ಶಿಕ್ಷಣದ ಲಭ್ಯತೆ ಇದೆ. ಶಿಕ್ಷಣ ಮತ್ತು ಆರ್ಥಿಕ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಮಹಿಳೆಯರು ಇದನ್ನು ಸಾಧಿಸಿದರೆ ಅದಕ್ಕಿಂತ ದೊಡ್ಡ ಅಸ್ತ್ರವಿಲ್ಲ. ದೊಡ್ಡದಾಗಿ ಆಲೋಚಿಸಿ, ಕ್ರಮಗಳೂ ದೊಡ್ಡದಾಗಿರಲಿ. ಮಹಿಳೆಯರು ಶ್ರಮಜೀವಿಗಳು, ಪ್ರಾಮಾಣಿಕರು. ನ್ಯಾಯ, ಸಮಾನ ಅವಕಾಶಗಳಿಗಾಗಿ ಮಾತನಾಡಬೇಕು. ತನ್ಮೂಲಕ ದೇಶಕ್ಕೆ ಕೀರ್ತಿ ತರಬೇಕು ಎಂದರಲ್ಲದೇ ನಾಳೆಗಳು ನಿಮ್ಮವೇ ಎಂದರು.
*ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ*
ತಾಯಿಯೊಂದಿಗೆ ಜನ್ಮಪೂರ್ವದ ಸಂಬಂಧವಿರುತ್ತದೆ. ದೇಶವನ್ನು ನಾವು ಭಾರತ ಮಾತೆ ಎಂದು ಕರೆಯುತ್ತೇವೆ. ಭೂಮಿ ತಾಯಿ ಎಲ್ಲರ ಭಾರವನ್ನು ಹೊರುತ್ತಾಳೆ. ಅಂತೆಯೇ ತಾಯಿಯೊಬ್ಬಳು ತನ್ನ ಮಕ್ಕಳು. ಸಮಾಜದ ಭಾರವನ್ನು ಹೊರುತ್ತಾಳೆ. ದೇಶದ ಬಡವರಲ್ಲಿ ಬಡವರಾದ ತಾಯಂದಿರಿಗೆ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಒದಗಿಸಬೇಕು. ನಮ್ಮ ಸರ್ಕಾರ ಇದ್ದನೇ ಮಾಡುತ್ತಿದೆ. ನಮ್ಮ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ್ದು, ರೈತ ವಿದ್ಯಾ ನಿಧಿ ಮೂಲಕ ರೈತರ ಮಕ್ಕಳು, ಕಾರ್ಮಿಕರ ಮಕ್ಕಳಿಗೆ ಈ ವಿದ್ಯಾರ್ಥಿಏತನವನ್ನು ನೀಡಲಾಗುತ್ತಿದೆ. ಎಲ್ಲಾ ಹೆಣ್ಣುಮಕ್ಕಳಿಗೆ ಅವಕಾಶ ದೊರೆತರೆ ಗಂಡುಮಕ್ಕಳನ್ನು ಎಲ್ಲಾ ಕ್ಷೇತ್ರಗಳಲ್ಲಿ ಹಿಂದಿಕ್ಕಿ ಮುಂದುವರೆಯುತ್ತಿದ್ದಾರೆ ಎಂದರು.
*ಮಹಿಳೆಯರು ದೇಶದ ಅಭಿವೃದ್ಧಿಯ ಕೇಂದ್ರವಾಗಬೇಕು*
ಕಾಲ ಬದಲಾವಣೆಯಾಗುತ್ತಿದೆ. ಜನಸಂಖ್ಯೆಯ ಶೇ 50 ರಷ್ಟು ಮಹಿಳೆಯರ ಕೊಡುಗೆ ಕೇವಲ ಯುವಕರಿಂದ ಮಾತ್ರವಲ್ಲದೇ ಮಹಿಳೆಯರ ಮೂಲಕವೂ ಪ್ರಾರಂಭವಾಗಬೇಕು. 150 ಕೋಟಿ ಕೈಗಳು ಕೆಲಸ ಮಾಡಿದರೆ ದೇಶವೇ ಮುನ್ನೆಡೆಯುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳುವ ಅಮೃತ ಕಾಲ ಸನ್ನಿಹಿತವಾಗಿದೆ. ಅದು ಮಹಿಳೆಯರ ಸಹಭಾಗಿತ್ವವಿಲ್ಲದೇ ಪೂರ್ಣವಾಗುವುದಿಲ್ಲ. ಮಹಿಳೆಯರು ದೇಶದ ಅಭಿವೃದ್ಧಿಯ ಕೇಂದ್ರವಾಗಬೇಕು. ವಿಜ್ಞಾನ, ಏರೋಸ್ಪೇಸ್, ಇಂಜಿನಿಯರಿಂಗ್, ಐಟಿ ಬಿಟಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.
*ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕಳ್ಳಲು ನೆರವು*
ಕಷ್ಟಕರ, ಸೂಕ್ಷ್ಮ ಹಾಗೂ ಬುದ್ದಿವಂತ ಕೆಲಸಗಳನ್ನು ಮಾಡಲು ಮಹಿಳೆಯರು ಸಮರ್ಥರಿದ್ದು ಕೇವಲ ಅವಕಾಶಗಳನ್ನು ನೀಡಬೇಕಿದೆ. ನಮ್ಮ ಸರ್ಕಾರ ಅವಕಾಶಗಳನ್ನು ನೀಡುವ ಕೆಲಸ ಮಾಡುತ್ತಿದ್ದು, ಈ ವರ್ಷ 5 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗವನ್ನು ನೀಡುತ್ತಿದೆ. ಸ್ತ್ರೀ ಸಾಮಥ್ರ್ಯ ಯೋಜನೆಯಡಿ ಯೋಜನೆಗಳಿಗೆ ಆರ್ಥಿಕ ನೆರವು, ಉತ್ಪಾದನೆ, ಮಾರುಕಟ್ಟೆ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಸ್ವಾವಲಂಬೀ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕಳ್ಳಲು ಸರ್ಕಾರ ನೆರವು ನೀಡುತ್ತಿದೆ ಎಂದು ತಿಳಿಸಿದರು.
--
[21/01, 7:14 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಗಳ ಆಯವ್ಯಯ ಪೂರ್ವ ಸಭೆ ನಡೆಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ , ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಸಭೆಯಲ್ಲಿ ಹಾಜರಿದ್ದರು.
[21/01, 7:26 PM] Cm Ps: *ರಾಜ್ಯ ಹಾಗೂ ಜಿಲ್ಲಾ ಮಟ್ಟದ ಚುನಾವಣಾ ಪ್ರಣಾಳಿಕೆಗೆ ಸಿದ್ಧತೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ತುಮಕೂರು, ಜನವರಿ 21 :
ರಾಜ್ಯ ಮಟ್ಟದಲ್ಲಿ ಹಾಗೂ ಪ್ರತಿ ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು. ತುಮಕೂರು ಜಿಲ್ಲೆಯ ಜನರ ಆಶೋತ್ತರಗಳು ಹಾಗೂ ಬೇಡಿಕೆಗಳನ್ನು ಪಡೆದು ತುಮಕೂರು ಜಿಲ್ಲೆಗೆ ಒಂದು ಚುನಾವನಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು *ತುಮಕೂರಿನ ನಗರ* *ಅಶೋಕನಗರ ದಲ್ಲಿ ಭಾರತೀಯ* *ಜನತಾ ಪಾರ್ಟಿಯ* ವತಿಯಿಂದ ಆಯೋಜಿಸಿರುವ “ *ವಿಜಯ* *ಸಂಕಲ್ಪ ಅಭಿಯಾನ”ಕ್ಕೆ* ಚಾಲನೆ ನೀಡಿ ಮಾತನಾಡಿದರು.
ತುಮಕೂರಿನ ವಾರ್ಡ್ ನಂ. 26 , ಬೂತ್ ನಂ. 157 ನಲ್ಲಿ ವಿಜಯಸಂಕಲ್ಪ ಅಭಿಯಾನಕ್ಕೆ ಇಂದು ಚಾಲನೆ ನೀಡಿದ್ದೇನೆ. ಈ ಬೂತ್ ನಲ್ಲಿ ಅತಿ ಹೆಚ್ಚು ಸದಸ್ಯರ ಅಭಿಯಾನ ಆಗಬೇಕು. ಮಿಸ್ ಕಾಲನ್ನು ಸಾರ್ವಜನಿಕರಿಗೂ ಮಾಡಿ, ಅವರ ಸದಸ್ಯತ್ವವನ್ನೂ ಪಡೆಯಬೇಕು. ಎರಡು ಮನೆಗೆ ಒಂದು ಸ್ಟಿಕರ್ ನ್ನು ಅಂಟಿಸುವ ಕಾರ್ಯವನ್ನು ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಿಳಿಸುವ ಕೆಲಸವನ್ನು ಬೂತ್ ಮಟ್ಟದ ಪದಾಧಿಕಾರಿಗಳು ಮಾಡಬೇಕು. ಇದು 9 ದಿನದ ಅಭಿಯಾನವಾಗಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿ ಸುಮಾರು 1 ಲಕ್ಷ ಕಾರ್ಯಕರ್ತರ ನೋಂದಣಿ ಮಿಸ್ ಕಾಲ ಕೊಡುವ ಮುಖಾಂತರ ಮಾಡಬೇಕು ಎಂಬ ುದ್ದೇಶವಿದೆ. ತುಮಕೂರು ಜಿಲ್ಲೆಯ ಪ್ರತಿಯೊಂದು ವಾರ್ಡ್ ನಲ್ಲಿ ಪ್ರತಿಯೊಂದು ಬೂತ್ ನಲ್ಲಿ ಅಭಿಯಾನವಾಗಬೆಕು. ಈ ಅಭಿಯಾನದ ಮೂಲಕ ಸಂಘಟನೆಗೆ ಬಲ ಬರುತ್ತದೆ. ಪಕ್ಷದ ಸದಸ್ಯತ್ವ ವಿಸ್ತಾರವಾಗುತ್ತದೆ ಎಂದರು.
*ಪ್ರತಿಯೊಂದು ವಾರ್ಡ್ ನಲ್ಲಿ ವಿಜಯ ಸಂಕಲ್ಪ ಅಭಿಯಾನ :*
ಪ್ರತಿಯೊಂದು ವಾರ್ಡ್ ನಲ್ಲಿ ವಿಜಯ ಸಂಕಲ್ಪ ಅಭಿಯಾನ ಪ್ರಾರಂಭಿಸಲಾಗಿದ್ದು, ಪ್ರತಿ ಮಂಡಲದಲ್ಲಿ ಹಾಗೂ ಇಡೀ ರಾಜ್ಯದಲ್ಲಿ ನಡೆಯುತ್ತಿದೆ. ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರು ಈ ವಿಜಯ ಸಂಕಲ್ಪ ಅಭಿಯಾನವನ್ನು ಬಿಜಾಪುರದಲ್ಲಿ ಉದ್ಘಾಟಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ವರಿಷ್ಠ ಅರುಣ್ ಸಿಂಗ್,ಸಚಿವರು, ನಾನೂ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದೇವೆ ಎಂದರು.
*ಮಿಸ್ ಕಾಲ್ ಮೂಲಕ ಸದಸ್ಯತ್ವ ನೋಂದಣಿ :*
ಜನಸಂಕಲ್ಪ ಯಾತ್ರೆಯನ್ನು ವಿಜಯ ಸಂಕಲ್ಪ ಯಾತ್ರೆಯನ್ನಾಗಿಸಲು ಬೂತ್ ಮಟ್ಟದಲ್ಲಿ ಸಶಕ್ತೀಕರಣವನ್ನು ಮಾಡಲಾಗಿದೆ. ಬೂತ್ ಸಮಿತಿ, ಪೇಜ್ ಸಮಿತಿಗಳ ನಿರ್ಮಾಣ,ಈ ಅಭಿಯಾನದಲ್ಲಿ ಮಿಸ್ ಕಾಲ್ ಕೊಡುವ ಮುಖಾಂತರ ಈಗಾಗಲೇ ಇರುವ ಸದಸ್ಯತ್ವವನ್ನು ನವೀಕರಿಸು ಕೆಲಸವನ್ನು ಮಾಡಬೇಕು. ಬರುವ ಚುನಾವಣೆಯಲ್ಲಿ ಅತ್ಯಂತ ಸಶಕ್ತವಾಗಿ ಚುನಾವಣೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ವರಿಷ್ಟರು ನೀಡಲಿದ್ದಾರೆ. ನಾಲ್ಕು ದಿಕ್ಕಿನಿಂದಲೂ ರಥಯಾತ್ರೆಯನ್ನು ಆರಂಭಿಸಲಾಗುವುದು. ಪ್ರತಿಯೊಂದು ಕ್ಷೇತ್ರಕ್ಕೂ ನಾಲ್ಕು ರಥಗಳು ಹೋಗುವ ಮೂಲಕ ಜನಜಾಗೃತಿ ತರಲಾಗುವುದು. ಚುನಾವಣೆಯಲ್ಲಿ ಘೋಷಣಾ ಪತ್ರದಲ್ಲಿರುವ ಅಂಶಗಳ ಬಗ್ಗೆ ಜನರಿಂದ ಅಭಿಪ್ರಾಯ ಪಡೆದು ಸಿದ್ಧತೆಯನ್ನು ಮಾಡಿಕೊಳ್ಳಲಾಗುವುದು ಎಂದರು.
*ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು:*
ಸರ್ಕಾರ ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದೆ. 8000 ಶಾಲಾ ಕೊಠಡಿಗಳ ನಿರ್ಮಾಣದ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮುಂದಿನ ಆಗಸ್ಟ್ ಒಳಗೆ ಶೌಚಾಲಯ ನಿರ್ಮಾಣಕ್ಕೆ 250 ಕೋಟಿ ರೂ. ನೀಡಲಾಗಿದೆ. ರೈತರ , ಮೀನುಗಾರರು ,ರೈತ ಕಾರ್ಮಿಕರು. ನೇಕಾರರು, ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾ ನಿಧಿ, ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ 5 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ, ಭೂರಹಿತ ರೈತ ಕೂಲಿಕಾರರಿಗೆ ಮಕ್ಕಳ ಆರೈಕೆಗಾಗಿ 4000 ಅಂಗನವಾಡಿಗಳ ನಿರ್ಮಾಣ ಮಾಡಲಾಗುತ್ತಿದೆ.
*ಎಲ್ಲಾ ಸಮಾಜಗಳಿಗೆ ನ್ಯಾಯ :*
ಮೀಸಲಾತಿ ಹೆಚ್ಚಳದ ಜೊತೆಗೆ 100 ಅಂಬೇಡ್ಕರ್ ಹಾಸ್ಟೆಲ್ ಹಾಗೂ 50 ಕನಕದಾಸ ಹಾಸ್ಟೆಲ್ ಗಳ ನಿರ್ಮಾಣ, 5 ಮೆಗಾ ಹಾಸ್ಟೆಲ್ ಗಳು, 29 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ ಎಸ್ ಪಿ –ಟಿ ಎಸ್ ಪಿ ಯೋಜನೆಗಳಿಗೆ ನೀಡಲಾಗಿದೆ. ಎಸ್ ಸಿ ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ತಲಾ 5 ಲಕ್ಷ ಮಹಿಳೆಯರು ಹಾಗೂ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಯನ್ನು ಫೆಬ್ರವರಿ ತಿಂಗಳಿನಿಂದ ಪ್ರಾರಂಭಿಸಲಾಗುವುದು. ಪ್ರತಿ ಗ್ರಾಮ ಹಾಗೂ ವಾರ್ಡ್ ನಲ್ಲಿ ಸ್ತ್ರೀ ಶಕ್ತಿ ಸಂಘಕ್ಕೆ ಉತ್ಪನ್ನಗಳ ತಯಾರಿಗೆ ಆರ್ಥಿಕ ಸಹಾಯ ಹಾಗೂ ಮಾರುಕಟ್ಟೆ ಜೋಡಣೆ ಮಾಡಲಾಗುವುದು. ಎಲ್ಲ ಸಮಾಜಗಳಿಗೆ ನ್ಯಾಯ ಕೊಡುವ ಕೆಲಸವನ್ನು ಮಾಡಲಾಗುತ್ತಿದೆ. ಸಮಾನತೆಯನ್ನು ನೀಡಲಾಗುತ್ತಿದೆ ಎಂದರು.
*ತುಮಕೂರಿನಲ್ಲಿ ಕೈಗಾರೀಕರಣ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು :*
ನಗರ ಪ್ರದೇಶಗಳ ಅಭಿವೃದ್ಧಿಯಡಿ ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಯಲ್ಲಿದೆ. 5 ಲಕ್ಷ ಮನೆ ಬಡವರಿಗಾಗಿ ಮನೆ ನೀಡಲಾಗುತ್ತಿದೆ. ಧಾರವಾಡ ಮತ್ತು ತುಮಕೂರು ಜಿಲ್ಲೆಯ ವಿಶೇಷ ಅಧಿಕಾರದಡಿ ಉದ್ಯೋಗ ನೀಡುವ ಯೋಜನೆಯನ್ನು ಜಾರಿಮಾಡಲಾಗುತ್ತಿದೆ. ತುಮಕೂರಿನಲ್ಲಿ ಯುವಕರಿಗೆ ಉದ್ಯೋಗ ನೀಡುವಂತಹ ಕೈಗಾರಿಕೆಗಳಿಗೆ ಎಲ್ಲ ಕ್ಲಿಯರೆನ್ಸ್ ಗಳನ್ನು ನೀಡುವ ಅಧಿಕಾರವನ್ನು ಎಸ್ ಐ ಆರ್ ಹೊಂದಿರುತ್ತದೆ. ತುಮಕೂರಿನಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ತುಮಕೂರಿನಲ್ಲಿ ಯೋಜನಾಬದ್ಧ ಬೆಳವಣಿಗೆಗೆ ಸರ್ಕಾರ ಒತ್ತು ನೀಡುತ್ತಿದೆ ಎಂದರು.
[21/01, 9:34 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನಲ್ಲಿ ಬಿ ಹೈವ್ ಸಂಸ್ಥೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸತೀಶ್ ರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಹಾಗೂ ಮತ್ತಿತರರು ಹಾಜರಿದ್ದರು.
[21/01, 10:41 PM] Cm Ps: ಬಿ ಹೈವ್ ಶಟಲ್ ಪಾಯಿಂಟ್ ಕಾರ್ಯಕ್ರಮದಲ್ಲಿ ಸಿಎಂ ಭಾಷಣ.
*ನಮ್ಮ ಯುವಕರು ಬಿಲ್ ಗೇಟ್ಸ್ ಅವರನ್ನೂ ಸೋಲಿಸುವ ಮಟ್ಟಕ್ಕೆ ಬೆಳೆಯಬೇಕು - ಸಿಎಂ ಬೊಮ್ಮಾಯಿ*
ಬೆಂಗಳೂರು: ಕೋ ವರ್ಕಿಂಗ್ ಸ್ಪೇಸ್ ಪರಿಕಲ್ಪನೆಯನ್ನು ಬೆಂಬಲಿಸಲು ಬಜೆಟ್ ನಲ್ಲಿ ದೊಡ್ಡ ಮಟ್ಟದ ಯೋಜನೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಎಚ್ ಎಸ್ ಆರ್ ಲೇಔಟ್ ನಲ್ಲಿ ಹೊಸದಾಗಿ ಪ್ರಾರಂಭವಾಗಿರುವ ವಿಶ್ವದ ಅತಿ ದೊಡ್ಡ ಖಾಸಗೀ ಕೋ ವರ್ಕಿಂಗ್ ಸ್ಪೇಸ್ "ಬಿಹೈವ್" ಅನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸ್ಥಳೀಯ ಹುಡುಗರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರು ಬಹಳ ದೊಡ್ಡ ಕೋ ವರ್ಕಿಂಗ್ ಸ್ಪೇಸ್ ಪ್ರಾರಂಭಿಸಿದ್ದಾರೆ. ಬಜೆಟ್ ಸಭೆಗಳ ಮಧ್ಯೆಯೂ ನಾನು ಇಲ್ಲಿಗೆ ಬಂದಿರುವುದು ಇವರನ್ನು ಪ್ರೋತ್ಸಾಹಿಸೋಕೆ. ಕೋ ವರ್ಕ್ ಸ್ಪೇಸ್ ಗಳಿಂದ ಯುವಕರು ಮತ್ತು ಸ್ಟಾರ್ಟ್ ಅಪ್ ಗಳು ಹೆಚ್ಚಿನ ಬಂಡವಾಳ ಇಲ್ಲದೇ ತಮ್ಮ ಕಂಪನಿಯನ್ನು ಪ್ರಾರಂಭಿಸಬಹುದು. ಇದರಿಂದ ಹೆಚ್ಚಿನ ಉದ್ಯೋಗಗಳೂ ಸೃಷ್ಟಿ ಆಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
*ಜನರೇ ಆರ್ಥಿಕತೆ ಸೃಷ್ಟಿಸುತ್ತಾರೆ:*
ಹಣ ಆರ್ಥಿಕತೆ ಅಲ್ಲ. ಕಠಿಣ ಕೆಲಸ ಮಾಡುವ ಸಮಾಜದಿಂದ ಆರ್ಥಿಕತೆ ಸೃಷ್ಟಿಯಾಗುತ್ತದೆ. ನಾನು ಈಗಿನ ಯುವಕ ಯುವತಿಯರ ಬೆಳವಣಿಗೆಯನ್ನು ಬೆಂಬಲಿಸುತ್ತೇನೆ. ನಮ್ಮ ದೇಶದ 46% ಜನಸಂಖ್ಯೆ ಯುವಪಡೆ. ನಮ್ಮ ಪ್ರಧಾನಿಯವರ ಕನಸಿನಂತೆ ನಮ್ಮ ದೇಶ ಅಭಿವೃದ್ದಿಯಾಗುತ್ತಿದೆ. ಇಡಿ ವಿಶ್ವದ ಆರ್ಥಿಕ ಬೆಳವಣಿಗೆ ಶೇ 1-2 ಇದ್ದರೆ, ಭಾರತದ ಆರ್ಥಿಕತೆ ಶೇ 7% ರಷ್ಟಿದೆ. ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಭಾರತ ವಿಶ್ವ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
*ನಮ್ಮ ದೇಶದಲ್ಲೇ ವಾಣಿಜ್ಯೋದ್ಯಮಿ ಆಗಿ:*
ನಮ್ಮ ಯುವಕರು ಭಾರತದಲ್ಲಿರುವುದು ಮುಖ್ಯ. ಭಾರತದಲ್ಲಿ ವಿದ್ಯಾಭ್ಯಾಸ ಪಡೆಯುವುದೂ ಮುಖ್ಯ. ಭಾರತದಲ್ಲೇ ಕೆಲಸ ಮಾಡುವುದು ಸಹ ಅತಿ ಮುಖ್ಯ. ಆದರೆ ಅದಕ್ಕಿಂತಲೂ ಮುಖ್ಯ ಅಂದರೆ ಭಾರತದಲ್ಲೇ ವಾಣಿಜ್ಯೋದ್ಯಮಿ ಆಗುವುದು. ಮುಂದಿನ ಒಂದೆರಡು ದಶಕಗಳಲ್ಲಿ ಇವರುಗಳು ವಿಶ್ವದಲ್ಲೆ ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ. ನಮ್ಮ ಯುವಕರು ಬಿಲ್ ಗೇಟ್ಸ್, ಸ್ಟೀವ್ ಜಾಬ್ಸ್ ಅವರನ್ನೂ ಸೋಲಿಸುವ ಮಟ್ಟಕ್ಕೆ ಬೆಳೆಯಬೇಕು. ನಮ್ಮ ಯುವಕರು ಆಕಾಶದೆತ್ತರಕ್ಕೆ ಬೆಳೆದು ವಿಶ್ವವನ್ನು ಗೆಲ್ಲಬೇಕು.
ಕೋ ವರ್ಕಿಂಗ್ ಸ್ಪೇಸ್ ಗೆ ಬಿಹೈವ್ ಅನ್ನುವ ಹೆಸರು ಅತ್ಯಂತ ಸೂಕ್ತವಾಗಿದೆ. ಬೇರೆ ಬೇರೆ ಹೂಗಳಿಂದ ಸಂಗ್ರಹಿಸಿದ ಮಧುವನ್ನು ಒಂದೇ ಕಡೆ ಜೇನು ಉತ್ಪಾದಿಸುವ ಸ್ಥಳ. ಕಠಿಣ ಪರಿಶ್ರಮದಿಂದ ಜೇನು ತಯಾರಾಗುತ್ತದೆ. ಅದೇ ರೀತಿ ಇಲ್ಲಿ ಸ್ಥಳ ಪಡೆಯುವ ಪ್ರತಿಯೊಬ್ಬರೂ ದುಂಬಿಯಂತೆ ತಮ್ಮ ಜ್ಞಾನವೆಂಬ ಮಧುವನ್ನು ಸಂಗ್ರಹಿಸಿ ಇಲ್ಲಿ ಜೇನನ್ನು ಉತ್ಪಾದಿಸಬೇಕು ಎನ್ನುವುದು ನನ್ನ ಆಸೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸತೀಶ್ ರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Post a Comment