[21/01, 5:42 PM] Cm Ps: *ಮಹಿಳೆಯರ ಬಗ್ಗೆ ವಿಶಾಲ ದೃಷ್ಟಿಕೋನವವುಳ್ಳ ಏಕೈಕ ಪಕ್ಷ ಭಾಜಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ತುಮಕೂರು, ಜನವರಿ 21: ಮಹಿಳೆÉಯರ ಕುರಿತಾಗಿ ವಿಶಾಲ ದೃಷ್ಟಿಕೋನವನ್ನು ಹೊಂದಿರುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಇಂದು ತುಮಕೂರಿನಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತಾಡಿದರು.
ಆರ್ಥಿಕತೆಯಲ್ಲಿಯೂ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ನಮ್ಮದು ಉಳಿತಾಯದ ಸಂಸ್ಕøತಿ. ಈ ಉಳಿತಾಯ ಕುಟುಂಬದ ಆಸ್ತಿಯಾಗುತ್ತದೆ. ಕಷ್ಟದ ದಿನಗಳಲ್ಲಿ ಈ ಹಣ ನೆರವಿಗೆ ಬರಲಿದೆ. ಆದ್ದರಿಂದಲೇ ನಮ್ಮ ದೇಶದಲ್ಲಿ ಅತ್ಯಂತ ಕಡಿಮೆ ಬ್ಯಾಂಕುಗಳು ದಿವಾಳಿಯಾಗುತ್ತವೆ. ಪಾಶ್ಚಿಮಾತ್ಯ ದೇಶಗಳ ಬ್ಯಾಂಕುಗಳು ಹಾಗೂ ಮನೆಗಳಲ್ಲಿ ಉಳಿತಾಯ ಮಾಡುವ ಹಣದೊಂದಿಗೆ ನೇರವಾದ ಆರ್ಥಿಕ ಸ್ಪರ್ಧೆಯಿದೆ. ಉಳಿತಾಯ ಮಹಿಳೆಯರ ಶಕ್ತಿಯೂ ಹೌದು. ಸಾಕಷ್ಟು ವಿಚಾರಗಳಲ್ಲಿ ಮಹಿಳೆ ಅಭ್ಯಾಸದಿಂದಲೇ ಸಂಸ್ಕøತಿಯನ್ನು ಬೆಳೆಸಿದ್ದಾರೆ. ನಮ್ಮ ತಾಯಂದಿರು ಶಿಕ್ಷಣ ಪಡೆಯದಿದ್ದರೂ ಅವರಲ್ಲಿ ಜ್ಞಾನ ಭಂಡಾರವೇ ಇತ್ತು. ಆಧ್ಯಾತ್ಮ, ಮೌಲ್ಯಗಳ ಜ್ಞಾನವರಲ್ಲಿತ್ತು. ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಕಾರ್ಯಕಾರಿ ಸಮತಿಯಲ್ಲಿ ಹೆಣ್ಣುಮಗುವಿನ ಭ್ರೂಣಹತ್ಯೆಯ ಬಗ್ಗೆ ಮಾತನಾಡಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ನಮ್ಮ ಪ್ರಧಾನಿಗಳು ಅತ್ಯಂತ ಮೃದು ಹೃದಯದ, ಕರುಣೆಯುಳ್ಳ ವ್ಯಕ್ತಿ. ಇನ್ನೂ 25 ವರ್ಷಗಳ ಕಾಲ ಅವರೇ ಈ ದೇಶವನ್ನು ಮುನ್ನಡೆಸುತ್ತಾರೆ ಎನ್ನುವ ಬಗ್ಗೆ ಸಂಶಯವಿಲ್ಲ ಎಂದರು.
*ನಾಳೆಗಳು ನಿಮ್ಮವೇ*
ಮಹಿಳೆಯರು ಸಂಘಟಿತರಾಗಿ, ಭಾಜಪದಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕು. ಬಿಜೆಪಿ ಮಹಿಳಾ ಮೋರ್ಚಾಕ್ಕೆ ಮಾತ್ರವಲ್ಲದೇ ಬಿಜೆಪಿಯ ನಾಯಕಿಯರೂ ಆಗಬೇಕು. ಸುಶ್ಮಾ ಸ್ವರಾಜ್ ಅವರು ಪಕ್ಷದ ಪ್ರಮುಖ ನಾಯಕಿಯಾಗಿದ್ದರು. ಎಲ್ಲಾ ಪ್ರಮುಖರೊಂದಿಗೆ ಹೆಗಲಿಗೆ ಹೆಗಲು ನೀಡಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕದೊಂದಿಗೆ ಅವರಿಗೆ ವಿಶೇಷ ಸಂಬಂಧವಿತ್ತು. ಕನ್ನಡಿಗರ ಹೃದಯಗಳನ್ನು ಅವರು ತಲುಪಿದ್ದರು ಎಂದರು. ಯಾವುದೇ ತರಬೇತಿಯಿಲ್ಲದೇ ಅವರು ಇದನ್ನು ಸಾಧಿಸಿದ್ದರು. ಆದರೆ ನಿಮಗೆ ಮಾಹಿತಿ ತಂತ್ರಜ್ಞಾನ, ಡಿಜಿಟಲ್ ಶಿಕ್ಷಣ. ಆರ್ಥಿಕ ಶಿಕ್ಷಣದ ಲಭ್ಯತೆ ಇದೆ. ಶಿಕ್ಷಣ ಮತ್ತು ಆರ್ಥಿಕ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಮಹಿಳೆಯರು ಇದನ್ನು ಸಾಧಿಸಿದರೆ ಅದಕ್ಕಿಂತ ದೊಡ್ಡ ಅಸ್ತ್ರವಿಲ್ಲ. ದೊಡ್ಡದಾಗಿ ಆಲೋಚಿಸಿ, ಕ್ರಮಗಳೂ ದೊಡ್ಡದಾಗಿರಲಿ. ಮಹಿಳೆಯರು ಶ್ರಮಜೀವಿಗಳು, ಪ್ರಾಮಾಣಿಕರು. ನ್ಯಾಯ, ಸಮಾನ ಅವಕಾಶಗಳಿಗಾಗಿ ಮಾತನಾಡಬೇಕು. ತನ್ಮೂಲಕ ದೇಶಕ್ಕೆ ಕೀರ್ತಿ ತರಬೇಕು ಎಂದರಲ್ಲದೇ ನಾಳೆಗಳು ನಿಮ್ಮವೇ ಎಂದರು.
*ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ*
ತಾಯಿಯೊಂದಿಗೆ ಜನ್ಮಪೂರ್ವದ ಸಂಬಂಧವಿರುತ್ತದೆ. ದೇಶವನ್ನು ನಾವು ಭಾರತ ಮಾತೆ ಎಂದು ಕರೆಯುತ್ತೇವೆ. ಭೂಮಿ ತಾಯಿ ಎಲ್ಲರ ಭಾರವನ್ನು ಹೊರುತ್ತಾಳೆ. ಅಂತೆಯೇ ತಾಯಿಯೊಬ್ಬಳು ತನ್ನ ಮಕ್ಕಳು. ಸಮಾಜದ ಭಾರವನ್ನು ಹೊರುತ್ತಾಳೆ. ದೇಶದ ಬಡವರಲ್ಲಿ ಬಡವರಾದ ತಾಯಂದಿರಿಗೆ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಒದಗಿಸಬೇಕು. ನಮ್ಮ ಸರ್ಕಾರ ಇದ್ದನೇ ಮಾಡುತ್ತಿದೆ. ನಮ್ಮ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ್ದು, ರೈತ ವಿದ್ಯಾ ನಿಧಿ ಮೂಲಕ ರೈತರ ಮಕ್ಕಳು, ಕಾರ್ಮಿಕರ ಮಕ್ಕಳಿಗೆ ಈ ವಿದ್ಯಾರ್ಥಿಏತನವನ್ನು ನೀಡಲಾಗುತ್ತಿದೆ. ಎಲ್ಲಾ ಹೆಣ್ಣುಮಕ್ಕಳಿಗೆ ಅವಕಾಶ ದೊರೆತರೆ ಗಂಡುಮಕ್ಕಳನ್ನು ಎಲ್ಲಾ ಕ್ಷೇತ್ರಗಳಲ್ಲಿ ಹಿಂದಿಕ್ಕಿ ಮುಂದುವರೆಯುತ್ತಿದ್ದಾರೆ ಎಂದರು.
*ಮಹಿಳೆಯರು ದೇಶದ ಅಭಿವೃದ್ಧಿಯ ಕೇಂದ್ರವಾಗಬೇಕು*
ಕಾಲ ಬದಲಾವಣೆಯಾಗುತ್ತಿದೆ. ಜನಸಂಖ್ಯೆಯ ಶೇ 50 ರಷ್ಟು ಮಹಿಳೆಯರ ಕೊಡುಗೆ ಕೇವಲ ಯುವಕರಿಂದ ಮಾತ್ರವಲ್ಲದೇ ಮಹಿಳೆಯರ ಮೂಲಕವೂ ಪ್ರಾರಂಭವಾಗಬೇಕು. 150 ಕೋಟಿ ಕೈಗಳು ಕೆಲಸ ಮಾಡಿದರೆ ದೇಶವೇ ಮುನ್ನೆಡೆಯುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳುವ ಅಮೃತ ಕಾಲ ಸನ್ನಿಹಿತವಾಗಿದೆ. ಅದು ಮಹಿಳೆಯರ ಸಹಭಾಗಿತ್ವವಿಲ್ಲದೇ ಪೂರ್ಣವಾಗುವುದಿಲ್ಲ. ಮಹಿಳೆಯರು ದೇಶದ ಅಭಿವೃದ್ಧಿಯ ಕೇಂದ್ರವಾಗಬೇಕು. ವಿಜ್ಞಾನ, ಏರೋಸ್ಪೇಸ್, ಇಂಜಿನಿಯರಿಂಗ್, ಐಟಿ ಬಿಟಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.
*ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕಳ್ಳಲು ನೆರವು*
ಕಷ್ಟಕರ, ಸೂಕ್ಷ್ಮ ಹಾಗೂ ಬುದ್ದಿವಂತ ಕೆಲಸಗಳನ್ನು ಮಾಡಲು ಮಹಿಳೆಯರು ಸಮರ್ಥರಿದ್ದು ಕೇವಲ ಅವಕಾಶಗಳನ್ನು ನೀಡಬೇಕಿದೆ. ನಮ್ಮ ಸರ್ಕಾರ ಅವಕಾಶಗಳನ್ನು ನೀಡುವ ಕೆಲಸ ಮಾಡುತ್ತಿದ್ದು, ಈ ವರ್ಷ 5 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗವನ್ನು ನೀಡುತ್ತಿದೆ. ಸ್ತ್ರೀ ಸಾಮಥ್ರ್ಯ ಯೋಜನೆಯಡಿ ಯೋಜನೆಗಳಿಗೆ ಆರ್ಥಿಕ ನೆರವು, ಉತ್ಪಾದನೆ, ಮಾರುಕಟ್ಟೆ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಸ್ವಾವಲಂಬೀ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕಳ್ಳಲು ಸರ್ಕಾರ ನೆರವು ನೀಡುತ್ತಿದೆ ಎಂದು ತಿಳಿಸಿದರು.
--
[21/01, 7:14 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಗಳ ಆಯವ್ಯಯ ಪೂರ್ವ ಸಭೆ ನಡೆಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ , ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಸಭೆಯಲ್ಲಿ ಹಾಜರಿದ್ದರು.
[21/01, 7:26 PM] Cm Ps: *ರಾಜ್ಯ ಹಾಗೂ ಜಿಲ್ಲಾ ಮಟ್ಟದ ಚುನಾವಣಾ ಪ್ರಣಾಳಿಕೆಗೆ ಸಿದ್ಧತೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ತುಮಕೂರು, ಜನವರಿ 21 :
ರಾಜ್ಯ ಮಟ್ಟದಲ್ಲಿ ಹಾಗೂ ಪ್ರತಿ ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು. ತುಮಕೂರು ಜಿಲ್ಲೆಯ ಜನರ ಆಶೋತ್ತರಗಳು ಹಾಗೂ ಬೇಡಿಕೆಗಳನ್ನು ಪಡೆದು ತುಮಕೂರು ಜಿಲ್ಲೆಗೆ ಒಂದು ಚುನಾವನಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು *ತುಮಕೂರಿನ ನಗರ* *ಅಶೋಕನಗರ ದಲ್ಲಿ ಭಾರತೀಯ* *ಜನತಾ ಪಾರ್ಟಿಯ* ವತಿಯಿಂದ ಆಯೋಜಿಸಿರುವ “ *ವಿಜಯ* *ಸಂಕಲ್ಪ ಅಭಿಯಾನ”ಕ್ಕೆ* ಚಾಲನೆ ನೀಡಿ ಮಾತನಾಡಿದರು.
ತುಮಕೂರಿನ ವಾರ್ಡ್ ನಂ. 26 , ಬೂತ್ ನಂ. 157 ನಲ್ಲಿ ವಿಜಯಸಂಕಲ್ಪ ಅಭಿಯಾನಕ್ಕೆ ಇಂದು ಚಾಲನೆ ನೀಡಿದ್ದೇನೆ. ಈ ಬೂತ್ ನಲ್ಲಿ ಅತಿ ಹೆಚ್ಚು ಸದಸ್ಯರ ಅಭಿಯಾನ ಆಗಬೇಕು. ಮಿಸ್ ಕಾಲನ್ನು ಸಾರ್ವಜನಿಕರಿಗೂ ಮಾಡಿ, ಅವರ ಸದಸ್ಯತ್ವವನ್ನೂ ಪಡೆಯಬೇಕು. ಎರಡು ಮನೆಗೆ ಒಂದು ಸ್ಟಿಕರ್ ನ್ನು ಅಂಟಿಸುವ ಕಾರ್ಯವನ್ನು ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಿಳಿಸುವ ಕೆಲಸವನ್ನು ಬೂತ್ ಮಟ್ಟದ ಪದಾಧಿಕಾರಿಗಳು ಮಾಡಬೇಕು. ಇದು 9 ದಿನದ ಅಭಿಯಾನವಾಗಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿ ಸುಮಾರು 1 ಲಕ್ಷ ಕಾರ್ಯಕರ್ತರ ನೋಂದಣಿ ಮಿಸ್ ಕಾಲ ಕೊಡುವ ಮುಖಾಂತರ ಮಾಡಬೇಕು ಎಂಬ ುದ್ದೇಶವಿದೆ. ತುಮಕೂರು ಜಿಲ್ಲೆಯ ಪ್ರತಿಯೊಂದು ವಾರ್ಡ್ ನಲ್ಲಿ ಪ್ರತಿಯೊಂದು ಬೂತ್ ನಲ್ಲಿ ಅಭಿಯಾನವಾಗಬೆಕು. ಈ ಅಭಿಯಾನದ ಮೂಲಕ ಸಂಘಟನೆಗೆ ಬಲ ಬರುತ್ತದೆ. ಪಕ್ಷದ ಸದಸ್ಯತ್ವ ವಿಸ್ತಾರವಾಗುತ್ತದೆ ಎಂದರು.
*ಪ್ರತಿಯೊಂದು ವಾರ್ಡ್ ನಲ್ಲಿ ವಿಜಯ ಸಂಕಲ್ಪ ಅಭಿಯಾನ :*
ಪ್ರತಿಯೊಂದು ವಾರ್ಡ್ ನಲ್ಲಿ ವಿಜಯ ಸಂಕಲ್ಪ ಅಭಿಯಾನ ಪ್ರಾರಂಭಿಸಲಾಗಿದ್ದು, ಪ್ರತಿ ಮಂಡಲದಲ್ಲಿ ಹಾಗೂ ಇಡೀ ರಾಜ್ಯದಲ್ಲಿ ನಡೆಯುತ್ತಿದೆ. ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರು ಈ ವಿಜಯ ಸಂಕಲ್ಪ ಅಭಿಯಾನವನ್ನು ಬಿಜಾಪುರದಲ್ಲಿ ಉದ್ಘಾಟಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ವರಿಷ್ಠ ಅರುಣ್ ಸಿಂಗ್,ಸಚಿವರು, ನಾನೂ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದೇವೆ ಎಂದರು.
*ಮಿಸ್ ಕಾಲ್ ಮೂಲಕ ಸದಸ್ಯತ್ವ ನೋಂದಣಿ :*
ಜನಸಂಕಲ್ಪ ಯಾತ್ರೆಯನ್ನು ವಿಜಯ ಸಂಕಲ್ಪ ಯಾತ್ರೆಯನ್ನಾಗಿಸಲು ಬೂತ್ ಮಟ್ಟದಲ್ಲಿ ಸಶಕ್ತೀಕರಣವನ್ನು ಮಾಡಲಾಗಿದೆ. ಬೂತ್ ಸಮಿತಿ, ಪೇಜ್ ಸಮಿತಿಗಳ ನಿರ್ಮಾಣ,ಈ ಅಭಿಯಾನದಲ್ಲಿ ಮಿಸ್ ಕಾಲ್ ಕೊಡುವ ಮುಖಾಂತರ ಈಗಾಗಲೇ ಇರುವ ಸದಸ್ಯತ್ವವನ್ನು ನವೀಕರಿಸು ಕೆಲಸವನ್ನು ಮಾಡಬೇಕು. ಬರುವ ಚುನಾವಣೆಯಲ್ಲಿ ಅತ್ಯಂತ ಸಶಕ್ತವಾಗಿ ಚುನಾವಣೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ವರಿಷ್ಟರು ನೀಡಲಿದ್ದಾರೆ. ನಾಲ್ಕು ದಿಕ್ಕಿನಿಂದಲೂ ರಥಯಾತ್ರೆಯನ್ನು ಆರಂಭಿಸಲಾಗುವುದು. ಪ್ರತಿಯೊಂದು ಕ್ಷೇತ್ರಕ್ಕೂ ನಾಲ್ಕು ರಥಗಳು ಹೋಗುವ ಮೂಲಕ ಜನಜಾಗೃತಿ ತರಲಾಗುವುದು. ಚುನಾವಣೆಯಲ್ಲಿ ಘೋಷಣಾ ಪತ್ರದಲ್ಲಿರುವ ಅಂಶಗಳ ಬಗ್ಗೆ ಜನರಿಂದ ಅಭಿಪ್ರಾಯ ಪಡೆದು ಸಿದ್ಧತೆಯನ್ನು ಮಾಡಿಕೊಳ್ಳಲಾಗುವುದು ಎಂದರು.
*ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು:*
ಸರ್ಕಾರ ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದೆ. 8000 ಶಾಲಾ ಕೊಠಡಿಗಳ ನಿರ್ಮಾಣದ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮುಂದಿನ ಆಗಸ್ಟ್ ಒಳಗೆ ಶೌಚಾಲಯ ನಿರ್ಮಾಣಕ್ಕೆ 250 ಕೋಟಿ ರೂ. ನೀಡಲಾಗಿದೆ. ರೈತರ , ಮೀನುಗಾರರು ,ರೈತ ಕಾರ್ಮಿಕರು. ನೇಕಾರರು, ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾ ನಿಧಿ, ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ 5 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ, ಭೂರಹಿತ ರೈತ ಕೂಲಿಕಾರರಿಗೆ ಮಕ್ಕಳ ಆರೈಕೆಗಾಗಿ 4000 ಅಂಗನವಾಡಿಗಳ ನಿರ್ಮಾಣ ಮಾಡಲಾಗುತ್ತಿದೆ.
*ಎಲ್ಲಾ ಸಮಾಜಗಳಿಗೆ ನ್ಯಾಯ :*
ಮೀಸಲಾತಿ ಹೆಚ್ಚಳದ ಜೊತೆಗೆ 100 ಅಂಬೇಡ್ಕರ್ ಹಾಸ್ಟೆಲ್ ಹಾಗೂ 50 ಕನಕದಾಸ ಹಾಸ್ಟೆಲ್ ಗಳ ನಿರ್ಮಾಣ, 5 ಮೆಗಾ ಹಾಸ್ಟೆಲ್ ಗಳು, 29 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ ಎಸ್ ಪಿ –ಟಿ ಎಸ್ ಪಿ ಯೋಜನೆಗಳಿಗೆ ನೀಡಲಾಗಿದೆ. ಎಸ್ ಸಿ ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ತಲಾ 5 ಲಕ್ಷ ಮಹಿಳೆಯರು ಹಾಗೂ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಯನ್ನು ಫೆಬ್ರವರಿ ತಿಂಗಳಿನಿಂದ ಪ್ರಾರಂಭಿಸಲಾಗುವುದು. ಪ್ರತಿ ಗ್ರಾಮ ಹಾಗೂ ವಾರ್ಡ್ ನಲ್ಲಿ ಸ್ತ್ರೀ ಶಕ್ತಿ ಸಂಘಕ್ಕೆ ಉತ್ಪನ್ನಗಳ ತಯಾರಿಗೆ ಆರ್ಥಿಕ ಸಹಾಯ ಹಾಗೂ ಮಾರುಕಟ್ಟೆ ಜೋಡಣೆ ಮಾಡಲಾಗುವುದು. ಎಲ್ಲ ಸಮಾಜಗಳಿಗೆ ನ್ಯಾಯ ಕೊಡುವ ಕೆಲಸವನ್ನು ಮಾಡಲಾಗುತ್ತಿದೆ. ಸಮಾನತೆಯನ್ನು ನೀಡಲಾಗುತ್ತಿದೆ ಎಂದರು.
*ತುಮಕೂರಿನಲ್ಲಿ ಕೈಗಾರೀಕರಣ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು :*
ನಗರ ಪ್ರದೇಶಗಳ ಅಭಿವೃದ್ಧಿಯಡಿ ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಯಲ್ಲಿದೆ. 5 ಲಕ್ಷ ಮನೆ ಬಡವರಿಗಾಗಿ ಮನೆ ನೀಡಲಾಗುತ್ತಿದೆ. ಧಾರವಾಡ ಮತ್ತು ತುಮಕೂರು ಜಿಲ್ಲೆಯ ವಿಶೇಷ ಅಧಿಕಾರದಡಿ ಉದ್ಯೋಗ ನೀಡುವ ಯೋಜನೆಯನ್ನು ಜಾರಿಮಾಡಲಾಗುತ್ತಿದೆ. ತುಮಕೂರಿನಲ್ಲಿ ಯುವಕರಿಗೆ ಉದ್ಯೋಗ ನೀಡುವಂತಹ ಕೈಗಾರಿಕೆಗಳಿಗೆ ಎಲ್ಲ ಕ್ಲಿಯರೆನ್ಸ್ ಗಳನ್ನು ನೀಡುವ ಅಧಿಕಾರವನ್ನು ಎಸ್ ಐ ಆರ್ ಹೊಂದಿರುತ್ತದೆ. ತುಮಕೂರಿನಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ತುಮಕೂರಿನಲ್ಲಿ ಯೋಜನಾಬದ್ಧ ಬೆಳವಣಿಗೆಗೆ ಸರ್ಕಾರ ಒತ್ತು ನೀಡುತ್ತಿದೆ ಎಂದರು.
[21/01, 10:41 PM] Cm Ps: ಬಿ ಹೈವ್ ಶಟಲ್ ಪಾಯಿಂಟ್ ಕಾರ್ಯಕ್ರಮದಲ್ಲಿ ಸಿಎಂ ಭಾಷಣ.
*ನಮ್ಮ ಯುವಕರು ಬಿಲ್ ಗೇಟ್ಸ್ ಅವರನ್ನೂ ಸೋಲಿಸುವ ಮಟ್ಟಕ್ಕೆ ಬೆಳೆಯಬೇಕು - ಸಿಎಂ ಬೊಮ್ಮಾಯಿ*
ಬೆಂಗಳೂರು: ಕೋ ವರ್ಕಿಂಗ್ ಸ್ಪೇಸ್ ಪರಿಕಲ್ಪನೆಯನ್ನು ಬೆಂಬಲಿಸಲು ಬಜೆಟ್ ನಲ್ಲಿ ದೊಡ್ಡ ಮಟ್ಟದ ಯೋಜನೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಎಚ್ ಎಸ್ ಆರ್ ಲೇಔಟ್ ನಲ್ಲಿ ಹೊಸದಾಗಿ ಪ್ರಾರಂಭವಾಗಿರುವ ವಿಶ್ವದ ಅತಿ ದೊಡ್ಡ ಖಾಸಗೀ ಕೋ ವರ್ಕಿಂಗ್ ಸ್ಪೇಸ್ "ಬಿಹೈವ್" ಅನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸ್ಥಳೀಯ ಹುಡುಗರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರು ಬಹಳ ದೊಡ್ಡ ಕೋ ವರ್ಕಿಂಗ್ ಸ್ಪೇಸ್ ಪ್ರಾರಂಭಿಸಿದ್ದಾರೆ. ಬಜೆಟ್ ಸಭೆಗಳ ಮಧ್ಯೆಯೂ ನಾನು ಇಲ್ಲಿಗೆ ಬಂದಿರುವುದು ಇವರನ್ನು ಪ್ರೋತ್ಸಾಹಿಸೋಕೆ. ಕೋ ವರ್ಕ್ ಸ್ಪೇಸ್ ಗಳಿಂದ ಯುವಕರು ಮತ್ತು ಸ್ಟಾರ್ಟ್ ಅಪ್ ಗಳು ಹೆಚ್ಚಿನ ಬಂಡವಾಳ ಇಲ್ಲದೇ ತಮ್ಮ ಕಂಪನಿಯನ್ನು ಪ್ರಾರಂಭಿಸಬಹುದು. ಇದರಿಂದ ಹೆಚ್ಚಿನ ಉದ್ಯೋಗಗಳೂ ಸೃಷ್ಟಿ ಆಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
*ಜನರೇ ಆರ್ಥಿಕತೆ ಸೃಷ್ಟಿಸುತ್ತಾರೆ:*
ಹಣ ಆರ್ಥಿಕತೆ ಅಲ್ಲ. ಕಠಿಣ ಕೆಲಸ ಮಾಡುವ ಸಮಾಜದಿಂದ ಆರ್ಥಿಕತೆ ಸೃಷ್ಟಿಯಾಗುತ್ತದೆ. ನಾನು ಈಗಿನ ಯುವಕ ಯುವತಿಯರ ಬೆಳವಣಿಗೆಯನ್ನು ಬೆಂಬಲಿಸುತ್ತೇನೆ. ನಮ್ಮ ದೇಶದ 46% ಜನಸಂಖ್ಯೆ ಯುವಪಡೆ. ನಮ್ಮ ಪ್ರಧಾನಿಯವರ ಕನಸಿನಂತೆ ನಮ್ಮ ದೇಶ ಅಭಿವೃದ್ದಿಯಾಗುತ್ತಿದೆ. ಇಡಿ ವಿಶ್ವದ ಆರ್ಥಿಕ ಬೆಳವಣಿಗೆ ಶೇ 1-2 ಇದ್ದರೆ, ಭಾರತದ ಆರ್ಥಿಕತೆ ಶೇ 7% ರಷ್ಟಿದೆ. ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಭಾರತ ವಿಶ್ವ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
*ನಮ್ಮ ದೇಶದಲ್ಲೇ ವಾಣಿಜ್ಯೋದ್ಯಮಿ ಆಗಿ:*
ನಮ್ಮ ಯುವಕರು ಭಾರತದಲ್ಲಿರುವುದು ಮುಖ್ಯ. ಭಾರತದಲ್ಲಿ ವಿದ್ಯಾಭ್ಯಾಸ ಪಡೆಯುವುದೂ ಮುಖ್ಯ. ಭಾರತದಲ್ಲೇ ಕೆಲಸ ಮಾಡುವುದು ಸಹ ಅತಿ ಮುಖ್ಯ. ಆದರೆ ಅದಕ್ಕಿಂತಲೂ ಮುಖ್ಯ ಅಂದರೆ ಭಾರತದಲ್ಲೇ ವಾಣಿಜ್ಯೋದ್ಯಮಿ ಆಗುವುದು. ಮುಂದಿನ ಒಂದೆರಡು ದಶಕಗಳಲ್ಲಿ ಇವರುಗಳು ವಿಶ್ವದಲ್ಲೆ ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ. ನಮ್ಮ ಯುವಕರು ಬಿಲ್ ಗೇಟ್ಸ್, ಸ್ಟೀವ್ ಜಾಬ್ಸ್ ಅವರನ್ನೂ ಸೋಲಿಸುವ ಮಟ್ಟಕ್ಕೆ ಬೆಳೆಯಬೇಕು. ನಮ್ಮ ಯುವಕರು ಆಕಾಶದೆತ್ತರಕ್ಕೆ ಬೆಳೆದು ವಿಶ್ವವನ್ನು ಗೆಲ್ಲಬೇಕು.
ಕೋ ವರ್ಕಿಂಗ್ ಸ್ಪೇಸ್ ಗೆ ಬಿಹೈವ್ ಅನ್ನುವ ಹೆಸರು ಅತ್ಯಂತ ಸೂಕ್ತವಾಗಿದೆ. ಬೇರೆ ಬೇರೆ ಹೂಗಳಿಂದ ಸಂಗ್ರಹಿಸಿದ ಮಧುವನ್ನು ಒಂದೇ ಕಡೆ ಜೇನು ಉತ್ಪಾದಿಸುವ ಸ್ಥಳ. ಕಠಿಣ ಪರಿಶ್ರಮದಿಂದ ಜೇನು ತಯಾರಾಗುತ್ತದೆ. ಅದೇ ರೀತಿ ಇಲ್ಲಿ ಸ್ಥಳ ಪಡೆಯುವ ಪ್ರತಿಯೊಬ್ಬರೂ ದುಂಬಿಯಂತೆ ತಮ್ಮ ಜ್ಞಾನವೆಂಬ ಮಧುವನ್ನು ಸಂಗ್ರಹಿಸಿ ಇಲ್ಲಿ ಜೇನನ್ನು ಉತ್ಪಾದಿಸಬೇಕು ಎನ್ನುವುದು ನನ್ನ ಆಸೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸತೀಶ್ ರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
[22/01, 12:37 PM] Cm Ps: ಬೆಂಗಳೂರು, ಜನವರಿ 22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ವತಿಯಿಂದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿರುವ ಸಂಘದ "ಅಮೃತ ಮಹೋತ್ಸವ 2023" ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಚಿವ ಕೆ.ಸಿ.ನಾರಾಯಣಗೌಡ, ಸಂಸದ ಪಿ.ಸಿ.ಮೋಹನ್, ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘ ಅಧ್ಯಕ್ಷ ಬಿ.ಎಸ್.ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.
[22/01, 4:37 PM] Cm Ps: ಮೈಸೂರು (ನಂಜನಗೂಡು), ಜನವರಿ 22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಾಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ಆಯೋಜಿಸಿರುವ “ಸುತ್ತೂರು ಜಾತ್ರಾ ಮಹೋತ್ಸವ”ದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್,ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು
[22/01, 4:59 PM] Cm Ps: *ಮುಂಬರುವ ಬಜೆಟ್ ನಲ್ಲಿ ನೇಕಾರರಿಗೆ ಇನ್ನಷ್ಟು ಬೆಂಬಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜನವರಿ 22: ಮುಂಬರುವ ಬಜೆಟ್ ನಲ್ಲಿ ನೇಕಾರರಿಗೆ ಇನ್ನಷ್ಟು ಬೆಂಬಲ ನೀಡಲು, ಕಚ್ಚಾ ವಸ್ತುವಿನಿಂದ ಹಿಡಿದು, ತಂತ್ರಜ್ಞಾನ ಅಭಿವೃದ್ಧಿಯವರಿಗೆ ಸಹಾಯ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು
ಕರ್ನಾಟಕ ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ವತಿಯಿಂದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿರುವ ಸಂಘದ "ಅಮೃತ ಮಹೋತ್ಸವ 2023" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
*ನೇಕಾರರ ಮೂಲ ವೃತ್ತಿ ಉಳಿಯಬೇಕು ಬೆಳೆಯಬೇಕು*.
ಕಾಯಕ, ಕರ್ತವ್ಯನಿಷ್ಠ, ಸಮಾಜಕ್ಕೆ ಮಾರ್ಯಾದೆ ತುಂಬುವ ಸಮಾಜ ನೇಕಾರರ ಸಮಾಜ. ಮಾನವನಿಗೆ ಗೌರವ ಕೊಡುವ ನೇಕಾರ, ಅನ್ನ ನೀಡುವ ರೈತ ಕುಲ ಅನಾದಿ ಕಾಲದಿಂದ ಮನುಷ್ಯನನ್ನು ರಕ್ಷಿಸಿಕೊಂಡು ಬಂದಿವೆ.
ನೇಕಾರರ ಮೂಲ ವೃತ್ತಿ ಉಳಿಯಬೇಕು ಬೆಳೆಯಬೇಕು. ಅದರ ಜೊತೆಗೆ ನೇಕಾರರು ಬೆಳೆಯಬೇಕು ಅವರ ಮಕ್ಕಳು ಬೇರೆ ಬೇರೆ ವೃತ್ತಿಗೆ ಹೋಗಬೇಕು.
1990 ರ ನಂತರ ಜಾಗತಿಕರಣ ಆದ ಮೇಲೆ ನೇಕಾರರ ವೃತ್ತಿ ಗೆ ಹೊಡೆತ ಬಿದ್ದಿದೆ. ಅದಕ್ಕೆ ನೇಕಾರರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ದೊರೆತಾಗ ಮಾತ್ರ ನೇಕಾರರು ಬೆಳೆಯಲು ಸಾಧ್ಯ. ಪಾಲಿಯಸ್ಟರ್ ಬಟ್ಟೆಗಳ ಉತ್ಪಾದನೆಯಾಗುತ್ತಿದ್ದಂತೆ ಮೂಲ ನೇಕಾರಿಕೆಗೆ ತೊಂದರೆಯಾಗಿದೆ. ಸರ್ಕಾರಗಳು ಹಲವಾರು ಸಂದರ್ಭಗಳಲ್ಲಿ ಸಹಾಯ ಮಾಡಿವೆ. ಶಾಶ್ವತವಾಗಿ ಸಹಾಯವಾಗಲು ನೇಕಾರರ ಬಟ್ಟೆಗಳಿಗೆ ನಿರಂತರವಾಗಿ ಮಾರುಕಟ್ಟೆ ದೊರೆಯಬೇಕು ಎಂದರು.
*ನೇಕಾರರು ಉತ್ಪಾದಿಸುವ ಅಷ್ಟೂ ಬಟ್ಟೆಯನ್ನು ಖರೀದಿಸಲು ಆದೇಶ*
ಹಿಂದೆ ನಮ್ಮ ತಂದೆ ಕೈಗಾರಿಕಾ ಸಚಿವರಾಗಿದ್ದ ಸಂದರ್ಭದಲ್ಲಿ ಜನತಾ ಧೋತಿ, ಸಮವಸ್ತ್ರ, ಸೀರೆ ನೀಡುವ ಕಾರ್ಯಕ್ರಮ ರೂಪಿಸಿದ್ದರು. ಮೈಮುಚ್ಚಿಕೊಳ್ಳಲು ಸಾಧ್ಯವಿಲ್ಲದ ಬಡವರಿಗೆ ಗೌರವ ನ್ಯೂಡುವ ಕೆಲಸ ಮಾಡುತ್ತಿದ್ದೇವೆ. ನೇಕಾರರಿಂದ ನೆಯಿಸಿ ಬಡವಾಯಿಗೆ ನೀಡಿದರೆ ನೇಕಾರರೂ ಉಳಿದು ಬಡವರ ಗೌರವವೂ ಉಳಿಯಲಿದೆ ಎಂದಿದ್ದರು. ಅದೇ ತತ್ವ ಆಧರಿಸಿ ನಾವು ಶಾಲಾ ಮಕ್ಕಳಿಗೆ ಸಮವಸ್ತ್ರ ಒದಗಿಸುತ್ತಿದ್ದು,
ನೇಕಾರರ ಮಂಡಳಿಯಿಂದ ಪಡೆಯಲು ತೀರ್ಮಾನ ಮಾಡಲಾಗಿದೆ. ಪ್ರತಿ ವರ್ಷ ನೇಕಾರರು ಉತ್ಪಾದಿಸುವ ಅಷ್ಟೂ ಬಟ್ಟೆಯನ್ನು ಖರೀದಿಸಲು ಆದೇಶ ನೀಡಲಾಗಿದೆ. ಆರು ತಿಂಗಳು ಮೊದಲೇ ನೇಕಾರರಿಗೆ ಆದೇಶ ನೀಡಲು ಸೂಚಿಸಿದ್ದೇನೆ ಎಂದರು.
*ಎಲ್ಲಾ ಬೇಡಿಕೆಗಳ ಈಡೇರಿಕೆ*
ನೇಕಾರರೊಂದಿಗೆ ಈವರೆಗೆ ಎರಡು ಸಭೆಗಳು ಜರುಗಿದ್ದು ಕೈಮಗ್ಗ ನೇಕಾರರಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಅನುದಾನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಒಪ್ಪಿ 5 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಎಲ್ಲಾ ನೇಕಾರರಿಗೆ ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ಮತ್ತೊಂದು ಸಭೆಯಲ್ಲಿ ಸಲ್ಲಿಸಿದ ಎಲ್ಲಾ ಬೇಡಿಕೆಗಳನ್ನು ನಾವು ಈಡೇರಿಸಿದ್ದೇವೆ. ನೇಕಾರರನ್ನು ಉಳಿಸಬೇಕೆಂಬ ಪ್ರಬಲ ಭಾವನೆ ಹೃದಯದಲ್ಲಿದೆ. ಈ ಕುಲಕಸುಬುಗಳು ಕಂಬಾರರು, ಕುಂಬಾರರರು, ಬಡಿಗೇರರು, ವಿಶ್ವಕರ್ಮರು ಇವರನ್ನು ಉಳಿಸಿದಾಗ ಗ್ರಾಮೀಣ ಪ್ರದೇಶದ ಬಡವರ ಆರ್ಥಿಕ ಅಭಿವೃದ್ಧಿ ಯಾಗುತ್ತದೆ. ದುಡಿಯುವ ವರ್ಗಕ್ಕೆ ಶಕ್ತಿಯನ್ನು ತುಂಬಿದಾಗ ಮಾತ್ರ ದೇಶವನ್ನು ಉಳಿಸಲು ಸಾಧ್ಯ. ದೊಡ್ಡ ಪ್ರಮಾಣದಲ್ಲಿ ಕಾರ್ಖಾನೆಗಳಿಂದ ಉತ್ಪಾದನೆ ಅಗತ್ಯವಿಲ್ಲ. ಆದರೆ ದೊಡ್ಡ ಪ್ರಮಾಣದ ಜನರಿಂದ ಉತ್ಪಾದನೆಯಾಗಬೇಕು. ಎಲ್ಲರ ಕೈಗೆ ಕೆಲಸ ಸಿಗಬೇಕು ಎಂದು ಮಹಾತ್ಮಾ ಗಾಂಧಿಯವರು ಹೇಳಿದ್ದರು ಎಂದರು.
*ಜವಳಿ ಉದ್ದಿಮೆ ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಕ್ಷೇತ್ರ*
ಇಂದು ಜವಳಿ ಕ್ಷೇತ್ರ, ನೇಕಾರರು ಗಾರ್ಮೆಂಟ್ಸ್ ದೇಶದಲ್ಲಿಯೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಉದ್ದಿಮೆಗಳು. ಇದನ್ನು ಸರಿಯಾಗಿ ಉಪಯೋಗಿಸಿದರೆ ದೇಶದಲ್ಲಿಯೇ ಉದ್ಯೋಗ ನೀಡಬಹುದು. ಬಾಂಗ್ಲಾ ದೇಶ ನೇಕಾರಿಕೆಯಿಂದಲೇ ತನ್ನ ಆರ್ಥಿಕತೆಯನ್ನು ನಿಭಾಯಿಸುತ್ತಿದೆ. ಅದೇ ರೀತಿ ನಮ್ಮ ದೇಶ ಹಾಗೂ ಕರ್ನಾಟಕದಲ್ಲಿ ವಿಶೇಷವಾಗಿ ಆಗಬೇಕಿದೆ. ಅದಕ್ಕಾಗಿ ಎಲ್ಲಾ ಬೇಡಿಕೆಗಳನ್ನು ಒಪ್ಪಲಾಗಿದೆ. ಪವರ್ ಲೂಮ್ ಗೆ ಸಹ 5 ಸಾವಿರ ರೂ. ಪ್ರತಿ ಯೂನಿಟ್ ಗೆ ನೇಕಾರರಿಗೆ ನೀಡುವ ವಿದ್ಯುತ್ ಮೊತ್ತವನ್ನು ಇಳಿಸಲಾಗಿದೆ. 2 ಲಕ್ಷ ರೂ.ಗಳವರೆಗೆ ಸಹಾಯಧನವನ್ನು 30% ರಿಂದ ಶೇ 50% ಕ್ಕೆ ಹೆಚ್ಚಳ ಮಾಡುವಂತೆ ಮಾಡಿರುವ ಮನವಿಯನ್ನು ಪರಿಗಣಿಸಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ.ಗಳ ಸಾಲ, ಕಾಟೇಜ್ ಉದ್ದಿಮೆ ಮಾಡಲು ಒಪ್ಪಲಾಗಿದೆ ಎಂದರು. ಬೇಡಿಕೆಗಳನ್ನು ಈಡೇರಿಸಿ ಇಲ್ಲಿಗೆ ಬಂದಿದ್ದು, ಈ ಸಮುದಾಯದ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಈ ಸಮುದಾಯಕ್ಕೆ ಶಾಶ್ವತವಾಗಿ ಗೌರವ, ಆದಾಯ ಬರಬೇಕು, ಸ್ವಾವಲಂಬಿ, ಸ್ವಾಭಿಮಾನಿ ಬದುಕುಕಟ್ಟಿಕೊಡಲು
ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗಿದೆ. ಅದೇ ರೀತಿ ಸಣ್ಣ ಕಸುಬು ಮಾಡುವ ಮೀನುಗಾರಿಕೆ, ಚಾಲಕರು ಸೇರಿದಂತೆ ಸಣ್ಣ ಸಣ್ಣ ಸಮುದಾಯಗಳಿಗೆ ಎಲ್ಲ ರೀತಿಯ ಸಹಾಯ ಮಾಡಲಾಗುವುದು. ಸರ್ಕಾರ ದುಡಿಯುವ ವರ್ಗಕ್ಕೆ ಮಹತ್ವ ನೀಡಿದೆ. ಅದು ನಮ್ಮ ಕರ್ತವ್ಯ. ದುಡಿಮೆಗೆ ಗೌರವ ನೀಡುವ ದೇಶ ಉದ್ದಾರವಾಗುತ್ತದೆ. ಈಗ ದುಡಿಮೆಯೇ ದೊಡ್ಡಪ್ಪ ಎನ್ನುವ ಮಾತಿಗೆ ಚಾಲನೆ ದೊರೆತಿದೆ. ದುಡಿಯುವ ಸಮುದಾಯ ನೇಕಾರರದ್ದಾಗಿದೆ. ಇನ್ನಷ್ಟು ಆರ್ಥಿಕ, ಸಾಮಾಜಿಕವಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ಮಹತ್ವ ನೀಡಿ, ಸಮುದಾಯದ ಮಕ್ಕಳು ಬೇರೆ ಬೇರೆ ವೃತ್ತಿಯಲ್ಲಿ ತೊಡಗಿ ಬೆಳೆಯುವಂತಾಗಬೇಕು. ಆಧುನಿಕ ಮಗ್ಗಗಳಿದ್ದು, ಉತ್ಕೃಷ್ಟವಾದ ಬಟ್ಟೆಗಳನ್ನು ನೀಯುತ್ತವೆ. ಇವುಗಳ ಬಳಕೆ ಮಾಡಿಕೊಳ್ಳಬೇಕು ಎಂದರು.
*ಮಾರುಕಟ್ಟೆ ಸೃಷ್ಟಿಸಿ,ನೇಕಾರರಿಗೆ ಲಾಭ ದೊರೆಯಬೇಕು*
ದೊಡ್ಡ ಪ್ರಮಾಣದಲ್ಲಿ ಗ್ರಾಮೀಣ ಮತ್ತು ನಗರದ ಕೊಳಗೇರಿಗಳಲ್ಲಿ ಮಹಿಳೆಯರಿಗೆ ನೇಕಾರಿಕೆ ತರಬೇತಿ ನೀಡಿದರೆ ಅವರ ಮನೆ ಉದ್ಧಾರವಾಗುತ್ತದೆ. ಶಿಡ್ಲಘಟ್ಟ, ಮೊಳಕಾಲ್ಮೂರು ಪ್ರದೇಶದಲ್ಲಿ ಹೀಗೆ ಮಾಡುತ್ತಾರೆ. ಮಹಿಳಾ ಸಂಘಗಳು ತಯಾರಿಸುವ ಉತ್ಪನ್ನ ಗಳಿಗೆ ಈಗಾಗಲೇ ಅಮೆಜಾನ್, ಪ್ಲಿಪ್ ಕಾರ್ಟ್ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿವೆ. ನೇಕಾರರು ನೇಯ್ದ ಸೀರೆಗಳನ್ನು ಮಹಾನಗರಗಳಲ್ಲಿ ನಾಲ್ಕು ಐದು ಪಟ್ಟು ಹೆಚ್ಚು ದರಕ್ಕೆ ಮಾರಾಟ ಮಾಡುತ್ತಾರೆ. ನಾವೇ ಮಾರುಕಟ್ಟೆ ಸೃಷ್ಟಿಸಿದರೆ, ಅದರ ಲಾಭ ನೇಕಾರರಿಗೆ ಸಿಗಬೇಕು. ಬೆಂಗಳೂರಿನಲ್ಲಿ ಸ್ಥಳಾವಕಾಶ ಕೋರಿದ್ದು, ಈ ಬಗ್ಗೆ ಪರಿಶೀಲನೆ ಮಾಡಲಾಗುವುದು. ಈ ವೃತ್ತಿಯನ್ನು ಉಳಿಸಿ, ನೀವು ಆತ್ಮ ಸ್ಥೈರ್ಯದಿಂದ ಮುನ್ನುಗ್ಗಿ, ಮುನ್ನಡೆಸಿ, ನಿಮ್ಮ ಜೊತೆಗೆ ಸರ್ಕಾರವಿದೆ. ಕೈಹಿಡಿಯುವುದಲ್ಲದೆ ಹೆಜ್ಜೆಗೆ ಹೆಜ್ಜೆ ಹಾಕಲಾಗುವುದು ಎಂದರು.
ಈ ಸಂದರ್ಭದಲ್ಲಿ ಶ್ರೀ ದಿವ್ಯಾನಂದ ಗಿರಿ ಮಹಾಸ್ವಾಮಿಗಳು, ಪೂರ್ಣಾನಂದ ಸ್ವಾಮೀಜಿ, ಸಚಿವ ಕೆ.ಸಿ.ನಾರಾಯಣಗೌಡ, ಸಂಸದ ಪಿ.ಸಿ.ಮೋಹನ್, ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘ ಅಧ್ಯಕ್ಷ ಬಿ.ಎಸ್.ಸೋಮಶೇಖರ್.ಎಸ್. ಹರೀಶ್, ಎಂ.ಡಿ ಹರೀಶ್, ಲಕ್ಷ್ಮೀ ನಾರಾಯಣ, ಅಶ್ವತ್ಥ್ ನಾರಾಯಣ್ ಮೊದಲಾದವರು ಉಪಸ್ಥಿತರಿದ್ದರು.
Post a Comment