KPCC ಕಿಡಿ ಕಿಡಿ

[19/01, 4:16 PM] Kpcc official: *ಹಾವೇರಿ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು*

ಇಂದು ನಾವು ಒಂದು ಉದ್ದೇಶ ಮನದಲ್ಲಿಟ್ಟುಕೊಂಡು ನಿಮ್ಮ ಮುಂದೆ ಬಂದಿದ್ದೇವೆ, ಕರ್ನಾಟಕ ರಾಜ್ಯದ ಜನರ ನೋವು, ಸಮಸ್ಯೆ, ಭಾವನೆ, ಅಭಿಪ್ರಾಯಗಳನ್ನು ಶೇಖರಿಸಿ, ನಿಮಗೆ ಶಕ್ತಿ ನೀಡುವುದೇ ಪ್ರಜಾಧ್ವನಿ ಯಾತ್ರೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಹೊಸಪೇಟೆ, ಕೊಪ್ಪಳ, ಗದಗ ಮುಗಿಸಿ ಇಲ್ಲಿಗೆ ಬಂದಿದ್ದೇವೆ. ಮಧ್ಯಾಹ್ನ ಕಾರ್ಯಕ್ರಮದಲ್ಲಿ ಹಾವೇರಿಯಲ್ಲಿ ಬಹಳ ದೊಡ್ಡ ಮಟ್ಟದ ಜನ ಸೇರಿದ್ದೀರಿ. ಎಲ್ಲ ಕಡೆಗಳಲ್ಲಿ ನಮಗೆ ಉತ್ತಮ ಜನ ಬೆಂಬಲ ಸಿಗುತ್ತಿದೆ. ಕಾಂಗ್ರೆಸ್ ಮಹಾ ಅಲೆಯನ್ನು ನೀವೆಲ್ಲರೂ ಆರಂಭಿಸಿದ್ದೀರಿ.

ನೀವು ಬಿಜೆಪಿಗೆ ಯಾಕೆ ಬೆಂಬಲ ನೀಡಬೇಕು? ಈ ಸರ್ಕಾರ 40% ಕಮಿಷನ್ ಪಡೆದಿದ್ದಕ್ಕಾ, ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡಲು ಹಣ ಪಡೆದಿದ್ದಕ್ಕಾ, ಹೊಟೇಲ್ ಗಳಲ್ಲಿ ತಿಂಡಿಗಳಿಗೆ ಬೆಲೆ ನಿಗದಿ ಮಾಡಿದಂತೆ ಒಂದೊಂದು ಹುದ್ದೆಗೂ ಹಣ ನಿಗದಿ ಮಾಡಿರುವುದಕ್ಕಾ, ಕೋವಿಡ್ ಸಮಯದಲ್ಲಿ ಜನ ಸತ್ತಿದ್ದಾಕ್ಕಾ?ಅವರ ಬದುಕು ನಿರ್ನಾಮ ಮಾಡಿದ್ದಕ್ಕಾ, ರೈತರ ಆದಾಯ ಡಬಲ್ ಮಾಡದಿರುವುದಕ್ಕೆ ಬಿಜೆಪಿಗೆ ಬೆಂಬಲ ನೀಡಬೇಕಾ?

ನಾವು ಕಲ್ಯಾಣ ಕರ್ನಾಟಕದಲ್ಲಿ ಆರ್ಥಿಕ ನೀತಿ ಹಾಗೂ 5 ಸಾವಿರ ಕೋಟಿ ಅನುದಾನ ಘೋಷಿಸಿದ್ದೇವೆ. ರಾಜ್ಯದ ಮುಖ್ಯಮಂತ್ರಿಗಳು ಈ ಜಿಲ್ಲೆಯವರು. ಇತ್ತೀಚೆಗೆ ಅವರು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಮಾಡಿದರು. ಇದರಲ್ಲಿ ರಾಜ್ಯಕ್ಕೆ 10 ಲಕ್ಷ ಕೋಟಿ ಬಂಡವಾಳ ಬರಲಿದೆ ಎಂದರು. ಬೊಮ್ಮಾಯಿ ಅವರೇ, ನೀವು ಸಿಎಂ ಆಗಿದ್ದೀರಿ, ನಿಮ್ಮ ಜಿಲ್ಲೆಗೆ ಯಾರು ಎಷ್ಟು ಬಂಡವಾಳ ಹೂಡಿಕೆ ಮಾಡಲು ಮುಂದಾಗಿದ್ದಾರೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿ. 

ಯಾವುದಾದರೂ ಒಂದು ಕಾರ್ಖಾನೆ ಬಂದಿದೆಯಾ? ನಮ್ಮ ಅವಧಿಯಲ್ಲಿ ಗಾಳಿಯಲ್ಲಿ ವಿದ್ಯುತ್ ಶಕ್ತಿ ಉತ್ಪಾದನೆ ಮಾಡಲಾಗುತ್ತಿತ್ತು. ರಾಜ್ಯದಲ್ಲಿ 10 ಸಾವಿರ ಮೆ.ವ್ಯಾ. ಉತ್ಪಾದನೆಯಾಗುತ್ತಿದ್ದ ವಿದ್ಯುತ್ ಅನ್ನು 21 ಸಾವಿರ ಮೆ.ವ್ಯಾ ಗೆ ಹೆಚ್ಚಿಸಿದ್ದೇವೆ. ವಿಂಡ್ ಮಿಲ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಪಾವಗಡದಲ್ಲಿ ರೈತರ ಜತೆ ಒಡಂಬಡಿಕೆ ಮಾಡಿಕೊಂಡು ಅವರಿಂದ ಭೂಮಿ ಖರೀದಿ  ಮಾಡದೇ, ಅವರ ಒಡೆತನದಲ್ಲೇ ಉಳಿಸಿ 14 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಇದು ಕಾಂಗ್ರೆಸ್ ಕಾರ್ಯಕ್ರಮ.

ನಾವು ಗೃಹಜ್ಯೋತಿ ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ಪ್ರತಿ ಕುಟುಂಬಕ್ಕೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ನಿರ್ಧಾರಿಸಿದ್ದೇವೆ. 200 ಯುನಿಟ್ ಗೆ ಈಗಿನ ದರದಲ್ಲಿ 1500 ರೂ. ಆಗುತ್ತದೆ. ನೀವು 200 ಯುನಿಟ್ ವರೆಗೂ ವಿದ್ಯುತ್  ಬಿಲ್ ಪಾವತಿ ಮಾಡುವಂತಿಲ್ಲ. ಇದು ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆ. ಈ ಯೋಜನೆ ಬಗ್ಗೆ ಅಶೋಕ್ ಹಾಗೂ ಸಚಿವ ಸುನೀಲ್ ಅವರು ಈ ವಿದ್ಯುತ್ ಎಲ್ಲಿಂದ ತರುತ್ತಾರೆ ಎಂದು ಕೇಳುತ್ತಿದ್ದಾರೆ. ಮುಖ್ಯಮಂತ್ರಿಗಳಾಗಲಿ, ಸಚಿವರಾಗಲಿ, ಯಾರಾದರೂ ಯಾವುದೇ ಮಾಧ್ಯಮ ವೇದಿಕೆ ಅಥವಾ ಬಹಿರಂಗ ವೇದಿಕೆಯಲ್ಲಿ ಚರ್ಚೆಗೆ ಬರಲಿ, ವಿದ್ಯುತ್ ಹೇಗೆ ನೀಡುತ್ತೇವೆ ಎಂದು ವಿವರಿಸುತ್ತೇವೆ. ನಾವು ಕನಕದಾಸರು, ಬಸವಣ್ಣ, ಶಿಶುನಾಳ ಶರೀಫರ ನಾಡಿನಲ್ಲಿ ಬದುಕುತ್ತಿರುವ ಜನ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ.

ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ. ನಾವು ಎಷ್ಟೇ ದೊಡ್ಡವರಾದರೂ ತಾಯಿ, ಪತ್ನಿ, ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತೇವೆ. ಈ ಭೂಮಿಗೆ ತಾಯಿ ಎಂದು ಪೂಜಿಸುತ್ತೇವೆ. ಭಾಷೆಯನ್ನು ಮಾತೃಭಾಷೆ ಎನ್ನುತ್ತೇವೆ. ಈ ಹೆಣ್ಣು ಅಡುಗೆ ಅನಿಲ, ಅಡುಗೆ ಎಣ್ಣೆ, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತತ್ತರಿಸುತ್ತಿದ್ದಾರೆ. ಕೋವಿಡ್ ನಿಂದ ಮೃತಪಟ್ಟವರಿಗೆ ಆಸ್ಪತ್ರೆ ಬಿಲ್ ನೀಡುವುದಾಗಿ ಹೇಳಿದ್ದರು. ಆದರೆ ನೀಡಲಿಲ್ಲ. ಆದರೆ ಶ್ರೀನಿವಾಸ ಮಾನೆ ಅವರು ಆಪದ್ಬಾಂದವ ಎಂಬ ಕಾರ್ಯಕ್ರಮ ಮಾಡಿ ಕೋವಿಂಡ್ ಸಂತ್ರಸ್ತರಿಗೆ ನೆರವು ನೀಡಿದರು. ನೀವು ಅವರಿಗೆ ಬೆಂಬಲ ನೀಡಿದ್ದೀರಿ. ಜನ ಕಷ್ಟದಲ್ಲಿದ್ದಾಗ ಕಣ್ಣು ತೆರೆಯದೇ, ಈಗ ನಾವು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ನೀಡುವುದಾಗಿ ಘೋಷಿಸಿದ ನಂತರ ಇವರು ಮುಂದಿನ ಬಜೆಟ್ ನಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದಾರೆ.. ನಿಮ್ಮ ಚೇರು ಖಾಲಿ ಆಗುತ್ತಿರುವ ಸಮಯದಲ್ಲಿ ನೀವು ನೀಡುತ್ತೀರಾ? ನಿಮ್ಮ ಸ್ಥಾನ ಕೇವಲ 2 ತಿಂಗಳು, ಆನಂತರ ನೀವು ಮಾಜಿ ಮುಖ್ಯಮಂತ್ರಿಗಳು. ಈ ವೇದಿಕೆ ಮೇಲೆ ಕೂತಿರುವವರ ಸರ್ಕಾರ ಬರಲಿದೆ.

ಪ್ರಧಾನಮಂತ್ರಿಗಳು ರಾಜ್ಯಕ್ಕೆ ಬಂದಿದ್ದು, ಅವರು ಗುತ್ತಿಗೆದಾರರ ಸಂಘದ ಅದ್ಯಕ್ಷ ಕೆಂಪಣ್ಣ ಅವರು 40% ಕಮಿಷನ್ ವಿಚಾರವಾಗಿ ನೀಡಿದ ದೂರಿನ ಬಗ್ಗೆ ಉತ್ತರ ನೀಡಬೇಕು. ತಾಂಡಾಗಳಿಗೆ ಸರ್ಟಿಫಿಕೇಟ್ ನೀಡಲು ಬಂದಿದ್ದಾರೆ. ತಾಂಡಾ ಗಳನ್ನು ನಿರ್ಮಿಸಿ ಕಂದಾಯ ತಾಂಡ ಎಂದು ಪರಿವರ್ತನೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ನೀವು ಇಂದು ಕೇವಲ ಸರ್ಟಿಫಿಕೇಟ್ ನೀಡುತ್ತಿದ್ದೀರಿ. ಆದರೆ ಈ ತಾಂಡಾಗಳನ್ನು ಮಾಡಿದ್ದು ಕಾಂಗ್ರೆಸ್. ಉಳುವವನಿಗೆ ಭೂಮಿ ಕೊಟ್ಟಿದ್ದು ಕಾಂಗ್ರೆಸ್.

ಭಾರತ ಜೋಡೋ ಪಾದಯಾತ್ರೆ ವೇಳೆ ಈ ಭಾಗದ ಜನರೂ ಭಾಗವಹಿಸಿದ್ದರು. ಈ ಸಮಯದಲ್ಲಿ ಹಿರಿಯ ಮಹಿಳೆ ಬಂದು ಸೌತೇಕಾಯಿ ತಂದು ರಾಹುಲ್ ಗಾಂಧಿ ಅವರಿಗೆ ಕೊಟ್ಟರು. ಆಗ ಆ ಮಹಿಳೆ ಇದು ನಿಮ್ಮ ಅಜ್ಜಿ ಇಂದಿರಾ ಗಾಂಧಿ ಅವರು ಕೊಟ್ಟ ಭೂಮಿಯಲ್ಲಿ ಬೆಳೆದ ಸೌತೇಕಾಯಿ ಎಂದು ಕೊಟ್ಟರು. ರೈತರಿಗೆ ಜಮಮೀನು, ಬಗರ್ ಹುಕುಂ ಸಾಗುವಳಿ, ನಿವೇಶನ, ಮನೆ, ಪಿಂಚಣಿ, ಅಂಗನವಾಡಿ ಕಾರ್ಯಕ್ರಮ, 7 ಕೆ.ಜಿ ಅಕ್ಕಿ, ಶೂ, ಹಾಲಿಗೆ ಪ್ರೋತ್ಸಾಹ ಧನ ನೀಡಿದ್ದು ಕಾಂಗ್ರೆಸ್. ಇದನ್ನು ಯಡಿಯೂರಪ್ಪ ಅಥವಾ ಬೊಮ್ಮಾಯಿ ಕೊಟ್ಟಿದ್ದಾರಾ? ಯಡಿಯೂರಪ್ಪನವರು ಒಂದು ಸೈಕಲ್ ಹಾಗೂ ಒಂದು ಸೀರೆ ಕೊಟ್ಟಿದ್ದು ಬಿಟ್ಟರೆ ಬೇರೆ ಏನು ಕೊಟ್ಟಿದ್ದಾರೆ? 

ಆದರೆ ಕಾಂಗ್ರೆಸ್ ಪಕ್ಷ ನಿಮಗೆ ವಿದ್ಯುತ್ ಮೂಲಕ ವರ್ಷಕ್ಕೆ 18 ಸಾವಿರ, ಮಹಿಳೆಯರ ಭತ್ಯೆಗಾಗಿ ವರ್ಷಕ್ಕೆ 24 ಸಾವಿರ ನೀಡಲಿದೆ. ನಮ್ಮದು ಜನಧನ್ ಖಾತೆಯಂತೆ ಆಗುವುದಿಲ್ಲ. ನಿಮ್ಮ ಮನೆಯೊಡತಿಯ ಖಾತೆಗೆ ನೇರವಾಗಿ ಹಣ ಸೇರಲಿದೆ. ಬಸವಣ್ಣ, ತಾಯಿ ಭುವನೇಶ್ವರಿ, ಕನಕದಾಸರು, ಶಿಶುನಾಳ ಶರೀಫರು, ಕುವೆಂಪು ಅವರ ಆಣೆಗೂ ನಮ್ಮ ಕಾರ್ಯಕ್ರಮವನ್ನು ಜಾರಿ ಮಾಡುತ್ತೇವೆ.

ರೈತರ ಬದುಕು ಹಸನಾಗಿಸಲು ನೀರಾವರಿ ಯೋಜನೆ ಪೂರ್ಣಗೊಳಿಸಲು ಐದು ವರ್ಷಗಳಲ್ಲಿ 2 ಸಾವಿರ ಕೋಟಿಯನ್ನು ಮೀಸಲಿಡುವುದಾಗಿ ಮಾತು ಕೊಟ್ಟಿದ್ದೇವೆ. ನಿಮ್ಮ ಅಂತರ್ಜಲ ಹೆಚ್ಚಳ, ನೀರಾವರಿ ಹೆಚ್ಚಳ ಮಾಡಬೇಕು ಎಂದು ಕಾರ್ಯಕ್ರಮ ರೂಪಿಸಿದ್ದೇವೆ.

ಬಿಜೆಪಿ ಕೇವಲ ಆಶ್ವಾಸನೆ ನೀಡುತ್ತದೆ. ಬೊಮ್ಮಾಯಿ ಅವರೇ ಕಳೆದ ಬಜೆಟ್ ನಲ್ಲಿ ನೀವು ಘೋಷಣೆ ಮಾಡಿದರಲ್ಲಿ ಶೇ.50ರಷ್ಟು ಹಣವನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಒಬ್ಬರಿಗೆ ಉದ್ಯೋಗ ನೀಡಲಿಲ್ಲ. ಕೇವಲ ಲಂಚದಲ್ಲಿ ಲೂಟಿ ಮಾಡಿದ್ದೀರಿ. ವಿಧಾನಸೌಧದಿಂದ ಸರ್ಕಾರಿ ಕಚೇರಿವೆರೆಗೂ ಎಲ್ಲ ಕಡೆ ಲಂಚ. ನಿಮ್ಮ ತಾಲೂಕು ಕಚೇರಿಗಳಲ್ಲಿ ಕಾಸಿಲ್ಲದೇ ಯಾವುದಾದರೂ ಕೆಲಸ ಆಗುತ್ತದಾ? ನೀವು ಈ ಬೊಮ್ಮಾಯಿ ಸರ್ಕಾರವನ್ನು ಕಿತ್ತೊಗೆಯಬೇಕು. ಬೊಮ್ಮಾಯಿ ಅವರು ನಮ್ಮ ಧಮ್ಮು ತಾಕತ್ತಿನ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಬರಲಿ, ನನಗೆ, ಸಿದ್ದರಾಮಯ್ಯ, ಹೆಚ್.ಕೆ ಪಾಟೀಲ್ ಅವರಿಗೆ ಎಷ್ಟು ಧಮ್ ಇದೆ ಎಂದು ತೋರಿಸುತ್ತೇವೆ. ನಿಮ್ಮ ಲಂಚದ ವಿಚಾರದಲ್ಲಿ ನಮ್ಮ ಧಮ್ ಇಲ್ಲ, ಬಡವರ ಬದುಕಿನಲ್ಲಿ ಬದಲಾವಣೆ ತರುವ ಧಮ್ ಇದೆ. ಜನರಿಗೆ ನೆರವಾಗಲು ನಮ್ಮ ಬಳಿ ಧಮ್ ಇದೆ.

ನಾವು ಇಲ್ಲಿಗೆ ಬರುವ ಮುನ್ನ ಬಿಜೆಪಿಯ ಪಾಪದ ಪುರಾಣ ಮಾಡಿದ್ದೇವೆ. ಈ ಪಾಪದ ಪುರಾಣವನ್ನು ನಿಮಗೆ ಕಳಿಹಿಸಿಕೊಡುತ್ತೇವೆ. ಇದನ್ನು ಮನೆ ಮನೆಗೂ ತಲುಪಿಸಬೇಕು. ಜತೆಗೆ ನಾವು ಅರ್ಜಿಯನ್ನು ಕೊಡುತ್ತೇವೆ. ಯಾರಿಗೆ ಉಚಿತ ವಿದ್ಯುತ್ ಹಾಗೂ ಮನೆಯೊಡತಿಗೆ ಪ್ರೋತ್ಸಾಹ ಧನ ಬೇಕೋ ಅವರಿಂದ ಅರ್ಜಿ ತುಂಬಿಸಿ, ಸಹಿ ಸಂಗ್ರಹಿಸಿ. ಆ ಮೂಲಕ ನಮ್ಮ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು.

ಈಗ ಬಿಜೆಪಿಯವರು ಬಜೆಟ್ ನಲ್ಲಿ ನಾವು ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಹೇಳುತ್ತಿದ್ದಾರೆ. ಅಲ್ಲಮಪ್ರಭುಗಳು ಒಂದು ಮಾತು ಹೇಳಿದ್ದಾರೆ. ಕೊಟ್ಟ ಕುದುರೆ ಏರಲಾಗದೇ, ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ ಶೂರನೂ ಅಲ್ಲ. ಅದೇ ರೀತಿ ಅಧಿಕಾರ ಇದ್ದಾಗ ಜನಪರ ಕಾರ್ಯಕ್ರಮ ನೀಡದ ಬಿಜೆಪಿ ಸರ್ಕಾರ ಅಧಿಕಾರ ಅಂತ್ಯವಾಗುವ ಸಮಯದಲ್ಲಿ ಕಾರ್ಯಕ್ರಮ ಘೋಷಣೆ ಮಾಡುತ್ತಿದೆ.

ಯತ್ನಾಳ್, ವಿಶ್ವನಾಥ್, ನಿರಾಣಿ, ಯೋಗೇಶ್ವರ್ ಅವರು ಹೇಳಿಕೆಗಳನ್ನು ನೀಡಿರುವ ಬಗ್ಗೆ ಉತ್ತರವನ್ನು ನೀಡಲಿಲ್ಲ, ಅವರ ವಿರುದ್ಧ ಶಿಸ್ತುಕ್ರಮವನ್ನು ತೆಗೆದುಕೊಳ್ಳಲಿಲ್ಲ. ಇದು ಬಿಜೆಪಿ ಸಾಧನೆ. ಈ ದೊಂಬರಾಟವನ್ನು ಮಾಧ್ಯಮಗಳ ಮೂಲಕ ನೋಡುತ್ತಿದ್ದೇವೆ. 

ಸಿದ್ದರಾಮಯ್ಯ ಅವರ ಮೇಲೆ ಅವಿಶ್ವಾಸ ನಿರ್ಣಯ ಮಂಡಿಸಿದಾಗ ನಾನು ಡಿವಿಜಿ ಅವರ ಸಾಲುಗಳನ್ನು ಸದನದಲ್ಲಿ ಹೇಳಿದ್ದೆ. ‘ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ ।
ಗದ್ದಲವ ತುಂಬಿ ಪ್ರಸಿದ್ದನಾಗುತಿಹೆ ।।
ಉದ್ಧರಿಸುವೆನು ಜಗವನೆನ್ನುತಿಹ ಸಖನೆ, 
ನಿನ್ನುದ್ಧಾರವೆಷ್ಟಾಯ್ತೊ? – ಮಂಕುತಿಮ್ಮ ।।’

ಅದೇ ರೀತಿ ಬೊಮ್ಮಾಯಿ, ಈಶ್ವರಪ್ಪ, ಕಟೀಲ್ ಅವರೇ ನಿಮ್ಮ ಉದ್ಧಾರ ಎಷ್ಟಾಯ್ತು? ಮುಂದೆ ಕಾಂಗ್ರೆಸ್ 140 ಸೀಟುಗಳನ್ನು ಪಡೆದು ಅಧಿಕಾರಕ್ಕೆ ಬರಲಿದೆ. ಜನರಿಗೆ ಅಧಿಕಾರ ಸಿಗಲಿದೆ. ಹಾವೇರಿಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು. ಯು.ಬಿ ಬಣಕಾರ್ ಅವರು ಸುಮ್ಮನೆ ಕಾಂಗ್ರೆಸ್ ಸೇರಲು ದಡ್ಡಾರಾ? ಬಿಜೆಪಿಯಿಂದ ಕಾಂಗ್ರೆಸ್ ಸೇರಲು ಎಷ್ಟು ಮಂದಿ ಸಿದ್ಧರಿದ್ದಾರೆ ಗೊತ್ತಾ? ಶಾಸಕರುಗಳೇ ಸಿದ್ಧರಿದ್ದಾರೆ. ನನ್ನ ಹತ್ತಿರ ಜಾಗ, ಕುರ್ಚಿ ಇಲ್ಲ, ಸ್ವಲ್ಪ ಕಾಲ ಕಾಯಿರಿ ಎಂದು ನಾನೇ ತಡೆದಿದ್ದೇನೆ.
[19/01, 5:06 PM] Kpcc official: *ಹಾವೇರಿ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು*

*ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ*

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 104 ಸ್ಥಾನಗಳಲ್ಲಿ ಜಯಗಳಿಸಿದ್ದರಿಂದ ನಮ್ಮ ರಾಜ್ಯಪಾಲರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಲು ಕರೆದು, ನೀವು ಸದನದಲ್ಲಿ ಬಹುಮತ ಸಾಬೀತು ಮಾಡಬೇಕು ಎಂದಿದದ್ರು. ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತು ಮಾಡಲು ಸಾಧ್ಯವಾಗದ್ದರಿಂದ ಕೇವಲ ಮೂರು ನಾಲ್ಕು ದಿನದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಅವರು ಕಳೆದುಕೊಳ್ಳಬೇಕಾಯಿತು. ನಂತರ ಜೆಡಿಎಸ್‌ ಜೊತೆಸೇರಿ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದೆವು. ನಾವು 80 ಶಾಸಕರು ಇದ್ದರೂ ಕೂಡ 37 ಶಾಸಕರಿರುವ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಇದಕ್ಕೆ ಕಾರಣ ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬುದು. ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸೆ, ಅಸಹಿಷ್ಣುತೆ, ಸೇಡಿನ ರಾಜಕಾರಣ ಆರಂಭವಾಗುತ್ತದೆ ಎಂಬುದು ನಮ್ಮ ಆತಂಕವಾಗಿತ್ತು. ಜಾತಿ ಧರ್ಮಗಳ ಆಧಾರದ ಮೇಲೆ ಜನರನ್ನು ಕೆರಳಿಸಿ, ಸಮಾಜ ಒಡೆಯುವ ಕೆಲಸ ಮಾಡುತ್ತಾರೆ. 

2 ವರ್ಷ 2 ತಿಂಗಳು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರ ಅನೈತಿಕ ರಾಜಕಾರಣದಿಂದ ಅಧಿಕಾರ ಕಳೆದುಕೊಂಡರು. ನಮ್ಮ ಪಕ್ಷದ 14 ಶಾಸಕರು ತಮ್ಮನ್ನು ತಾವು ಮಾರಿಕೊಂಡು, ಜನರ ಅಭಿಪ್ರಾಯಕ್ಕೆ ಬೆಲೆ ಕೊಡದೆ ಬಿಜೆಪಿ ಸೇರಿದರು. ಈ ಆಪರೇಷನ್‌ ಕಮಲಕ್ಕೆ ಸುಮಾರು 1,000 ಕೋಟಿ ಹಣ ಖರ್ಚಾಗಿರಬಹುದು. ಇದು ರಾಜಕೀಯ ವ್ಯಭಿಚಾರ ಎಂದು ನಾನು ಅಂದೇ ಹೇಳಿದ್ದೆ. ಹೀಗೆ ಅನೈತಿಕ ಮಾರ್ಗದಲ್ಲಿ ಸರ್ಕಾರ ರಚನೆ ಆದರೆ ಜನರಿಗೆ ಒಳ್ಳೆಯ ಕೆಲಸ ಮಾಡಲು ಸಾಧ್ಯವಿಲ್ಲ ಎಂದಿದ್ದೆ. ಆಪರೇಷನ್‌ ಕಮಲಕ್ಕೆ ಶಾಸಕರಿಗೆ 30 ರಿಂದ 35 ಕೋಟಿ ಹಣ ಕೊಟ್ಟಿದ್ದು ಯಡಿಯೂರಪ್ಪ ಅವರದ್ದು. ಯಡಿಯೂರಪ್ಪ ಅವರ ಮನೆಯಲ್ಲೇ ಯಾರಿಗೆ ಗುತ್ತಿಗೆ ಕೆಲಸ ಕೊಡಬೇಕು, ಯಾರಿಂದ ಎಷ್ಟು ವಸೂಲಿ ಮಾಡಬೇಕು ಎಂದು ತೀರ್ಮಾನವಾಗುತ್ತದೆ. ಇದನ್ನು ಹೇಳಿದ್ದು ಬಿಜೆಪಿಯ ಬಸನಗೌಡ‌ ಪಾಟೀಲ್ ಯತ್ನಾಳ್. ಯತ್ನಾಳ್‌ ಅವರು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದರು. ಆದರೆ ತಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಆಗಲು 3000 ಕೋಟಿ ಮತ್ತು ಸಚಿವರಾಗಲು 100 ಕೋಟಿ ಹಣ ಕೊಡಬೇಕು ಎಂದರು. ಇದೆಲ್ಲ ನಿಮ್ಮ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಲ್ವ?

ನರೇಂದ್ರ ಮೋದಿ ಅವರೇ ಬಿಜೆಪಿಯ ಬಂಡವಾಳ. ಯಾಕೆಂದರೆ ರಾಜ್ಯದ ಬಿಜೆಪಿ ಜನರಿಗೆ ಹಳಸಲಾಗಿದೆ. ನಮ್ಮದು ಭ್ರಷ್ಟ ಸರ್ಕಾರ ಆದರೂ ಕೂಡ ಮೋದಿ ಅವರನ್ನು ನೋಡಿ ಜನ ನಮಗೆ ಮತ್ತೆ ಮತ ನೀಡುತ್ತಾರೆ ಎಂಬ ಭ್ರಮೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಇದ್ದಾರೆ. “ ನ ಖಾವೂಂಗ, ನ ಖಾನೆದೂಂಗ” ಎಂದಿದ್ದ ಮೋದಿ ಅವರು ರಾಜ್ಯ ಬಿಜೆಪಿ ನಾಯಕರಿಗೆ ಯಾಕೆ ಲಂಚ ತಿನ್ನಲು ಬಿಟ್ಟಿದ್ದೀರಿ ಮೋದಿಜೀ? ಕೆಂಪಣ್ಣ ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ. ಇವರು ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಹೈಕೋರ್ಟ್‌ ನ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ, ಅದಕ್ಕೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದು ಕೆಂಪಣ್ಣ ಅವರು ಹೇಳಿದ್ದರು. ಬೇರೆಯವರ ಧಮ್‌, ತಾಕತ್‌ ಪ್ರಶ್ನೆ ಮಾಡುವ ಬೊಮ್ಮಾಯಿ ಅವರಿಗೆ ಧಮ್‌, ತಾಕತ್‌ ಇದ್ದರೆ ನ್ಯಾಯಾಂಗ ತನಿಖೆ ಮಾಡಿಸಲಿ. 

ಕಳೆದ ಹಾನಗಲ್ ಉಪಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ 15 ದಿನ ಹಾನಗಲ್‌ ನಲ್ಲಿ ಟಿಕಾಣಿ ಹೂಡಿದ್ದರು. ಮಾವನ ಮನೆಯಲ್ಲಿ ಉಳಿದುಕೊಂಡು ಹೇಗಾದರೂ ಮಾಡಿ ಶ್ರೀನಿವಾಸ್‌ ಮಾನೆ ಅವರನ್ನು ಸೋಲಿಸಬೇಕು ಎಂದು ಕೆಲಸ ಮಾಡಿದ್ರು ಆದರೂ ಜನರು ನಮ್ಮ ಮಾತಿಗೆ ಬೆಲೆ ಕೊಟ್ಟು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ, ನಮ್ಮ ಮಾನೆ ಅವರನ್ನು ಗೆಲ್ಲಿಸಿದ್ರು. ಪಕ್ಕದ ಕ್ಷೇತ್ರದಲ್ಲೇ ಸೋತರೂ ಬೊಮ್ಮಾಯಿಗೆ ಇನ್ನು ಬುದ್ದಿ ಬಂದಿಲ್ಲ. ಭ್ರಷ್ಟಾಚಾರದಲ್ಲೇ ಇನ್ನೂ ಮುಳುಗಿ ಕೂತಿದ್ದಾರೆ. ದುರಂತ ಎಂದರೆ ಶಿಕ್ಷಣ ಕ್ಷೇತ್ರದ ಉಪ ಕುಲಪತಿಗಳಿಗೆ 10 ಕೋಟಿ ಲಂಚ ನಿಗದಿ ಮಾಡಿದ್ದಾರೆ. 

ಪ್ರೀತಿ, ಸ್ನೇಹ, ಸಹೋದರತ್ವ ಇರಬೇಕಾದ ಜನ ಮನಸಿನಲ್ಲಿ ದ್ವೇಷ, ವೈರತ್ವ ತುಂಬಿದ್ದಾರೆ. ಒಡೆದಿರುವ ಸಮಾಜವನ್ನು ಒಂದು ಮಾಡಲು ರಾಹುಲ್‌ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಭಾರತ್‌ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಈ ತಿಂಗಳ 30 ರಂದು ಈ ಯಾತ್ರೆ ಕೊನೆಯಾಗಲಿದೆ, ನಾವು ಅಲ್ಲಿಗೆ ಹೋಗಬೇಕು ಎಂದು ಯೋಚನೆ ಮಾಡಿದ್ದೇವೆ. ರಾಹುಲ್‌ ಗಾಂಧಿ ಅವರು ಇಂದು ಜನರ ಮನಸಲ್ಲಿ ನೆಲೆಯೂರಿದ್ದಾರೆ. ಇಲ್ಲಿ ಬಡಜನರ, ಅಲ್ಪಸಂಖ್ಯಾತರ, ಮಹಿಳೆಯರ, ಮಕ್ಕಳ, ಕಾರ್ಮಿಕರ, ರೈತರ ವಿರೋಧಿ ಸರ್ಕಾರ ಇದೆ. ಈ ಸರ್ಕಾರ ಇರುವವರೆಗೆ ರಾಜ್ಯ ಉದ್ಧಾರವಾಗಲ್ಲ. ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಬೊಮ್ಮಾಯಿ ಅವರು ಸಾಲ ಮಾಡಿ ಹೋಳಿಗೆ ತಿನ್ನಲು ಶುರು ಮಾಡಿದ್ದಾರೆ. 

ಇಂದು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಸಾಮಾನ್ಯ ಜನ ಬದುಕುವು ಕಷ್ಟವಾಗಿದೆ. ಗ್ಯಾಸ್‌ ಹಾಗೂ ದಿನಸಿ ಕೊಳ್ಳಲು ಬಡವರಿಗೆ ಕಷ್ಟವಾಗುತ್ತದೆ ಎಂದು ನಾವು ಕುಟುಂಬದ ಯಜಮಾನಿಗೆ ತಿಂಗಳಿಗೆ 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದೇವೆ, ನಾವು ನುಡಿದಂತೆ ನಡೆಯುವವರು. ಬಡವ ಬಲ್ಲಿದನೆನ್ನದೆ ಪ್ರತೀ ಮನೆಗೆ 200 ಯುನಿಟ್‌ ವಿದ್ಯುತ್‌ ನೀಡುವ ಯೋಜನೆ ಘೋಷಣೆ ಮಾಡಿದ್ದೇವೆ. ಈ ಎಲ್ಲಾ ಯೋಜನೆಗಳು ನಿಮಗೆ ಬೇಕು ಎನ್ನುವುದಾದರೆ ಜನಪರವಾದ ಕಾಂಗ್ರೆಸ್‌ ಪಕ್ಷಕ್ಕೆ ತಾವೆಲ್ಲ ಬೆಂಬಲ ನೀಡಿ, ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು ಎಂದು ತಮ್ಮಲ್ಲಿ ಕೈಮುಗಿದು ಮನವಿ ಮಾಡುತ್ತೇನೆ. 

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಇಲ್ಲಿನ ರೈತರು ಗೊಬ್ಬರ, ಬೀಜ, ಔಷಧಿ ಕೇಳಿದ್ದಕ್ಕೆ ಗೋಲಿಬಾರ್‌ ಮಾಡಿಸಿ, ಅಮಾಯಕ ರೈತರನ್ನು ಕೊಂದರು. ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಂಬಾಣಿ ತಾಂಡಗಳು, ಗೊಲ್ಲರ ಹಟ್ಟಿಗಳು ಹೀಗೆ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಅವರಿಗೆ ಭೂಒಡೆತನ ಹಕ್ಕು ನೀಡಿದ್ದು ನಮ್ಮ ಸರ್ಕಾರ. ಬಿಜೆಪಿಯವರು ಓಟಿನಾಸೆಗೆ ಇದನ್ನು ತಾವು ಮಾಡಿದ್ದು ಎನ್ನುತ್ತಿದ್ದಾರೆ. ಲಂಬಾಣಿ ಜನರ ಆರಾಧ್ಯ ವ್ಯಕ್ತಿ ಸಂತ ಸೇವಾಲಾಲ್‌ ಅವರ ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಲು ಆರಂಬಿಸಿದವರು ನಾವು. ಸೇವಾಲಾಲ್‌ ಹುಟ್ಟಿದ ಜಾಗವನ್ನು ಅಭಿವೃದ್ಧಿ ಮಾಡಲು 130 ಕೋಟಿ ರೂ. ಹಣ ನೀಡಿದ್ದು ನಮ್ಮ ಸರ್ಕಾರ. 

ಸಂತೋಷ್‌ ಪಾಟೀಲ್‌ ಅವರ ಸಾವಿಗೆ ಕಾರಣರಾದ ಈಶ್ವರಪ್ಪ ಅವರಿಗೆ ಮೂರೇ ತಿಂಗಳಲ್ಲಿ ಪೊಲೀಸರ ಮೂಲಕ ಬಿ ರಿಪೋರ್ಟ್‌ ಹಾಕಿಸಿದ್ರು. ಹೀಗೆ ಹಲವು ಜನ ಸರ್ಕಾರದ ಲಂಚಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು. ಈ ಸರ್ಕಾರ ಗುತ್ತಿಗೆದಾರರಿಗೆ ಕೊಡಬೇಕಾದ 25,000 ಕೋಟಿ ಹಣವನ್ನು ಬಾಕಿ ಇಟ್ಟುಕೊಂಡಿದೆ ಎಂಬ ಕಾರಣಕ್ಕೆ ನಿನ್ನೆ ಗುತ್ತಿಗೆದಾರರ ಸಂಘದವರು ಪ್ರತಿಭಟನೆ ಮಾಡಿದ್ರು. ಈ ಸರ್ಕಾರದಲ್ಲಿ ಬರೀ ಲಂಚ, ಲಂಚ, ಲಂಚ ಮಾತ್ರ ಇದೆ. ಇಂಥಾ ಭ್ರಷ್ಟ ಸರ್ಕಾರ ನಿಮಗೆ ಬೇಕಾ ಬೇಡ್ವಾ ಎಂದು ರಾಜ್ಯದ ಜನ ತೀರ್ಮಾನ ಮಾಡಬೇಕು.

*ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್*

ಮುಖ್ಯಮಂತ್ರಿ ಜಿಲ್ಲೆಯಲ್ಲಿ ಇಷ್ಟು ಜನಸಾಗರ ಸೇರಿದೆ ಎಂದರೆ ಮುಖ್ಯಮಂತ್ರಿಗಳು ಹಾಗೂ ಅವರ ಸರ್ಕಾರ ಎಷ್ಟು ಜನಪ್ರಿಯವಾಗಿದೆ ಎಂದು ತಿಳಿಯುತ್ತದೆ. ನಿಮ್ಮ ಈ ಬೆಂಬಲಕ್ಕೆ ಶತಕೋಟಿ  ನಮನ ಸಲ್ಲಿಸುತ್ತೇನೆ. ಪ್ರಜಾಧ್ವನಿ ಮೂಲ ಉದ್ದೇಶ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳ ಆಡಳಿತ ಮಾಡಿ ಈಗ ಪರಿಕ್ಷೆ ಎದುರಿಸಲಿದೆ. ಈ ಪರೀಕ್ಷೆಯಲ್ಲಿ ನೀವು ಹಣೆಬರಹ ಬರೆಯಲಿದ್ದೀರಿ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಹಾಗೂ ನೀವು ಕಷ್ಟದಲ್ಲಿದ್ದಾಗ ಕಾಂಗ್ರೆಸ್ ಹೇಗೆ ಸ್ಪಂದಿಸಿದೆ ಎಂಬುದನ್ನು ಅರಿತು ನೀವು ಹಣೆಬರಹ ಬರೆಯಬೇಕಾಗುತ್ತದೆ. 

ಈ ಪರೀಕ್ಷೆ ರಾಜ್ಯ ಹಾಗೂ ರಾಷ್ಟರದ ಭವಿಷ್ಯ ಅಡಗಿದೆ. ಅದೃಷ್ಟವೋ, ದುರಾದೃಷ್ಟವೋ, ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಹಾವೇರಿ ಜಿಲ್ಲೆಯಲ್ಲಿ ಯಾವುದಾದರೂ ಅನಾಹುತ ನಡೆಯುತ್ತದೆ. ಹೆಚ್.ಕೆ ಪಾಟೀಲ್ ಅವರು ಹೇಳಿದಂತೆ ಯಡಿಯೂರಪ್ಪ ಅವರು ಮೊದಲು ಸಿಎಂ ಆದಾಗ ರೈತರ ಮೇಲೆ ಗೋಲಿಬಾರ್ ನಡೆದು 6 ಮಂದಿ ಪ್ರಾಣ ಕಳೆದುಕೊಂಡರು. ರೈತರ ತಪ್ಪೇನು ಎಂದರೆ ಗೊಬ್ಬರ ಬೆಲೆ ಏಱಿಕೆಯಾಗಿದೆ, ನಮಗೆ ಸಿಗುತ್ತಿಲ್ಲ ಎಂದು ಆಗ್ರಹಿಸಿದಾಗ ಗೋಲಿಬಾರ್ ಮಾಡಿದರು. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರು ತೀವ್ರ ಹೋರಾಟ ಮಾಡಿದಾಗ ನಾವು ವಿಚಾರಣೆ ಮಾಡುತ್ತೇವೆ ಎಂದರು. ವಿಚಾರಣೆ ಮಾಡಿ ರೈತರಿಗೆ ಗಾಯದ ಮೇಲೆ ಬರೆ ಹಾಕಿದರು. ರೈತರನ್ನು ಗೂಂಡಾಗಳು ಎಂದು ಹೇಳಿದ ನೀತಿಗೆಟ್ಟ ಸರ್ಕಾರ ಇದು.

ಹಾವೇರಿ ಜಿಲ್ಲೆ ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರದಲ್ಲಿ ಬಾವೈಕ್ಯತೆಗೆ ಸಾಕ್ಷಿಯಾಗಿರುವ ಜಿಲ್ಲೆ, ಶಿಶುನಾಳ ಷರೀಫರು, ಪಂಚಾಕ್ಷರಿ ಗವಾಯ್, ಗಂಗೂಬಾಯಿ ಹಾನಗಲ್, ಕನಕದಾಸರು, ನಾಸು ಹರ್ಡಿಕರ್ ಅವರ ಊರಿದು. ಆದರೆ ಈ ಜಿಲ್ಲೆ ಈಗ ಕುಖ್ಯಾತಿಗೆ ಸಿಲುಕಿದೆ. ಈಗ ಬೊಮ್ಮಾಯಿ ಅವರು ಏನು ಮಾಡುತ್ತಿದ್ದಾರೆ ನೋಡಿ. ಅವರು ಸಿದ್ದರಾಮಯ್ಯ ಅವರ ಗರಡಿಯಲ್ಲಿ ಬೆಳೆದವರು. ಸಮಾಜವಾದದ ಹಿನ್ನೆಲೆಯಲ್ಲಿದ್ದವರು. ಸಿದ್ದರಾಮಯ್ಯ ಅವರು ಸಿದ್ಧಾಂತದ ಜತೆ ರಾಜಿ ಆಗಲಿಲ್ಲ. ಬೊಮ್ಮಾಯಿ ಅವರು ಅಧಿಕಾರಕ್ಕಾಗಿ ಸಮಾಜವಾದದಿಂದ ಕೋಮುವಾದಕ್ಕೆ ಪರಿವರ್ತನೆಗೆ ಆಗಿದ್ದಾರೆ. 

ಹಿಂದುತ್ವ ಹಾಗೂ ಹಿಂದೂ ಧರ್ಮ ಇರುವ ವ್ಯತ್ಯಾಸ ಎಂದರೆ ಬಿಜೆಪಿಗೆ ಸುಳ್ಳೇ ಮನೆ ದೇವರು ಎನ್ನುವಂತೆ, ಹಿಂದುತ್ವ ಎಂಬುದೇ ಸುಳ್ಳು. ಹಿಂಸೆ ಅವರ ಸಿದ್ಧಾಂತ. ಹಿಂದೂ ಧರ್ಮದ ಸಿದ್ಧಾಂತ ಎಂದರೆ ಗಾಂಧಿ ಹಾಗೂ ವಿವೇಕಾನಂದರು ಹೇಳಿರುವಂತಹ ಅಹಿಂಸೆ ತತ್ವದ ಮೇಲೆ ನಿಂತಿದೆ. ಇದನ್ನು ಕಾಂಗ್ರೆಸ್ ಪಾಲಿಸುತ್ತಾ ಬಂದಿದೆ. ಈ ಪವಿತ್ರ ನಾಡಿನಲ್ಲಿ ನಾವು ಪ್ರಜಾಧ್ವನಿ ಮಾಡುತ್ತಿದ್ದೇವೆ.

ಹಲವಾರು ಧ್ರಮ, ಭಾಷೆ, ಜಾತಿ, ಪ್ರಾಂತ್ಯಗಳಿದ್ದರೂ ನಾವೆಲ್ಲರೂ ಒಂದು ಎನ್ನುವ ತತ್ವವನ್ನು ನಾವು ಈ ಪುಣ್ಯಭೂಮಿಯಲ್ಲಿ ಸಾರಬೇಕಿದೆ. ನಮ್ಮ ಧರ್ಮ, ನಮ್ಮ ಜವಾಬ್ದಾರಿ ಭಾವೈಕ್ಯತೆಯನ್ನು ಕಾಪಾಡಬೇಕು. ನೀವು ಎಂತಹ ಮಹಾನುಭಾವರನ್ನು ಆರಿಸಿದ್ದೀರಿ. ಬೊಮ್ಮಾಯಿ ಅವರು ಮೋದಿ ಅವರ ಜತೆ ಸುಳ್ಳು ಹೇಳುವುದರಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ.

ಇನ್ನೊಬ್ಬ ಪಕ್ಷದ ಕ್ಷೇತ್ರದ ಶಾಸಕರು ಹಿಂದೆ ಪೊಲೀಸ್ ಆಗಿದ್ದರು. ಯಶವಂತಪುರ ಠಾಣೆಯಲ್ಲಿ ಅವರಿಗೆ ಪೊರಕೆ, ಚಪ್ಪಲಿಯಲ್ಲಿ ಹೊಡೆದು ಓಡಿಸಿದರು. ನಂತರ ಸಿನಿಮಾ ಮಾಡಿ ತಾನು ದೊಡ್ಡ ಚಿತ್ರನಟ ಎಂದು ಬೀಗುತ್ತಿರುವ ವ್ಯಕ್ತಿ ತನ್ನನ್ನೇ ತಾನು ಮಾರಿಕೊಂಡರು. ಅವರು ಕೇವಲ ತಮ್ಮನ್ನು ತಾವು ಮಾರಿಕೊಂಡಿಲ್ಲ. ಮತದಾರರನ್ನು ಮಾರುವ ನೀಚ ಕೆಲಸ ಮಾಡಿದ್ದಾರೆ. ಎಂತಹ ಜಿಲ್ಲೆಯನ್ನು ಯಾವ ಮಟ್ಟಕ್ಕೆ ತಂದಿದ್ದಾರೆ. ಇನ್ನು ಅವರು ಯಡಿಯೂರಪ್ಪ ಅವರಿಗೆ ಫೋನ್ ಮಾಡಿ ಎಷ್ಟು ಕೊಡುತ್ತೀರಾ ಎಂಬ ದೂರವಾಣಿ ಸಂಭಾಷಣೆ ಕೂಡ ಇದೆ.

ಕಾಂಗ್ರೆಸ್ ಪಕ್ಷ ನಿರಂತರವಾಗಿ ಇಷ್ಟು ವರ್ಷ ಆಡಳಿತ ಮಾಡಿದರೂ ಯಾರೊಬ್ಬರೂ ಒಂದು ಸಂಭಾಷಣೆ, ಲಂಚದ ಪ್ರಕರಣದಲ್ಲಿ ಸಿಕ್ಕಿಬಿದ್ದಿಲ್ಲ. ಇವರು ಒಬ್ಬರಾದ ಮೇಲೆ ಒಬ್ಬರಂತೆ ಲಂಚ ಮಾಡುತ್ತಿದ್ದಾರೆ.

ವಿಶ್ವದ ಮಹಾಗುರು ಎನಿಸಿಕೊಂಡಿರುವ, ಸುಳ್ಳಿನ ಸರದಾರ ಮೋದಿ ಅವರು ರಾಜ್ಯಕ್ಕೆ ಬರುತ್ತಿದ್ದಾರೆ. ಇಂದು ಕಲಬುರ್ಗಿಗೆ ಲಗ್ಗೆ ಎಂದು ಹೇಳುತ್ತಿದ್ದಾರೆ. ನಾವು 60 ಕೋಟಿ ಕೊಟ್ಟು ದಕ್ಷಿಣ ಆಫ್ರಿಕಾದಲ್ಲಿ 30 ಚಿರತೆ ಕಳಿಸಲು ಮನಮೋಹನ್ ಸಿಂಗ್ ಸರ್ಕಾರ ಹಣ ಕಟ್ಟಿತ್ತು. ಆ ಚಿರತೆ ಅಧೃಷ್ಟವೋ ದುರಾದೃಷ್ಟವೋ ಈತನ ಸಮಯದಲ್ಲಿ 6 ತಿಂಗಳ ಹಿಂದೆ ಭಾರತಕ್ಕೆ ಬಂದಿವೆ. ಚಿರತೆಯನ್ನು ಕಾಡಲ್ಲಿ ಬಿಡುವುದಕ್ಕೂ ಮಾಧ್ಯಮಗಳನ್ನು ಕರೆದುಕೊಂಡು ಹೋಗಿ ಪ್ರಚಾರ ಮಾಡಿದ್ದರು. ಈ ವ್ಯಕ್ತಿ ಮಹದಾಯಿ ಯೋಜನೆ ಕುರಿತು ಹುಬ್ಬಳ್ಳಿಯಲ್ಲಿ ನಾವು ಸಭೆ ಮಾಡಲು ಮುಂದಾದಾಗ ಮಹದಾಯಿಗೆ ಒಪ್ಪಿಗೆ ನೀಡಿರುವುದಾಗಿ ಸುದ್ದಿ ಮಾಡಿದರು. ಹುಬ್ಬಳ್ಳಿಗೆ ಬಂದ ಮೋದಿ ನಾನು ಮಹಾದಾಯಿ ಯೋಜನೆ ಪೂರ್ಣ ಮಾಡುತ್ತೇನೆ ಎಂದು ಬಾಯಿ ಬಿಡಲಿಲ್ಲ. ಇದು ಬಿಜೆಪಿ ನಾಯಕರು.

ಅವರು ನಮ್ಮ ತ್ರಿವರ್ಣ ಧ್ವಜಕ್ಕೆ ಹೇಗೆ ಅಪಮಾನ ಮಾಡುತ್ತಾರೆ ಎಂದರೆ, ಅವರು ವಿವಾನಂದರ ಜನ್ಮದಿನದಂದು ಯುವಮಹೋತ್ಸವ ಕಾರ್ಯಕ್ರಮಕ್ಕೆ ಹುಬ್ಬಳ್ಳಿಗೆ ಬಂದಿದ್ದರು. ಅಂದು ಸರ್ಕಾರದ ಕಾರ್ಯಕ್ರಮ ಆಗುವಾಗ ತ್ರಿವರ್ಣ ಧ್ವಜ ಇರಬೇಕಾಗಿತ್ತು, ಆದರೆ ಕೇವಲ ಬಿಜೆಪಿ ಬಾವುಟ ಹಾರಿಸಿದ್ದಾರೆ. ಅಧಿಕಾರಕ್ಕೆ ಬರಲು ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಇಟ್ಟುಕೊಂಡು ರಾಜಕಾರಣ ಮಾಡಿದರು. ಇಂದು ಅದೇ ತ್ರಿವರ್ಣ ಧ್ವಜ ಮರೆತಿದ್ದಾರೆ.
[19/01, 7:17 PM] Kpcc official: ದಾವಣಗೆರೆಯಲ್ಲಿ ಗುರುವಾರ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ಎಚ್ ಎಂ ರೇವಣ್ಣ, ಎಸ್ ಎಸ್ ಮಲ್ಲಿಕಾರ್ಜುನ, ಎಚ್ ಕೆ ಪಾಟೀಲ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.
[20/01, 11:29 AM] Kpcc official: *ನೆಲಮಂಗಲ ನಗರಸಭೆ ಜೆಡಿಎಸ್ ಅಧ್ಯಕ್ಷೆ, 10 ಸದಸ್ಯರ ಸಾಮೂಹಿಕ ಕಾಂಗ್ರೆಸ್ ಸೇರ್ಪಡೆ*

ಮಾಜಿ ವಿಧಾನ ಪರಿಷತ್ ಸದಸ್ಯ, ಬೆಮಲ್ ಕಾಂತರಾಜು, ಕೆಪಿಸಿಸಿ ಸದಸ್ಯರು ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎನ್. ಶ್ರೀನಿವಾಸ್ ಇವರ ನೇತೃತ್ವದಲ್ಲಿ ನೆಲಮಂಗಲ ನಗರಸಭೆಯ ಜೆಡಿಎಸ್ನ ಹಾಲಿ ಅಧ್ಯಕ್ಷರು ಮತ್ತು 11 ಜನ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು,  ಪ್ರಮುಖ ಮುಖಂಡರು ಹಾಗೂ ನೂರಾರು ಜೆಡಿಎಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ನೆಲಮಂಗಲ ನಗರಸಭೆಯಲ್ಲಿ 14 ಮಂದಿ ಜೆಡಿಸ್ ಸದಸ್ಯರಿದ್ದು, ಅವರಲ್ಲಿ 11 ಮಂದಿ ಕಾಂಗ್ರೆಸ್ ಗೆ ಬೆಷರತ್ ಸೇರ್ಪಡೆಯಾಗಿದ್ದಾರೆ.

ಡಿ ಕೆ ಶಿವಕುಮಾರ್ ಅವರ ಸದಾಶಿವನಗರ ಗೃಹಕಛೇರಿ ಬಳಿ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾದ ಪ್ರಮುಖರ ಪಟ್ಟಿ:

1.ಲತಾ ಹೇಮಂತ್ ಕುಮಾರ್, ಅಧ್ಯಕ್ಷರು
2.ರಾಜಮ್ಮ ಪಿಳ್ಳಪ್ಪ, ಸದಸ್ಯರು 
3.ಆನಂದ್,ಸದಸ್ಯರು
5.ಆಂಜಿನಪ್ಪ,ಸದಸ್ಯರು
6.ಅಂಜನಮೂರ್ತಿ( ಪಾಪಣಿ),ಸದಸ್ಯರು
7.ದಾಕ್ಷಾಯಿಣಿ ರವಿ ಕುಮಾರ್, ಸದಸ್ಯರು
8.ಪ್ರಸಾದ್, ಸದಸ್ಯರು
9.ಚೇತನ್, ಸದಸ್ಯರು
10.ಪುಷ್ಪಲತಾ ಮಾರೇಗೌಡ, ಸದಸ್ಯರು
11.ಭಾರತಿ ಬಾಯಿ ನಾರಾಯಣ್ ರಾವ್ ,
ಸದಸ್ಯರು
[20/01, 12:27 PM] Kpcc official: ◆ಶ್ರೀರಾಮುಲು ಆಪ್ತರ ಮೇಲಿಂದ ಐಟಿ ದಾಳಿ.

◆ಜನಾರ್ದನ ರೆಡ್ಡಿಯವರ ಪಕ್ಷಕ್ಕೆ ಸೇರುವಂತೆ ಕರೆ ನೀಡಿ ಶ್ರೀರಾಮುಲು ಟ್ವೀಟ್.

◆ಪ್ರಧಾನಿ ಕಾರ್ಯಕ್ರಮಕ್ಕೆ ಶ್ರೀರಾಮುಲುಗೆ ಇಲ್ಲದ ಆಹ್ವಾನ

BSY, ಈಶ್ವರಪ್ಪ, ಶೆಟ್ಟರ್ ಜೊತೆಗೆ ಈಗ @sriramulubjp ಅವರೂ ಬಿಜೆಪಿಯ "ಕಿಕ್ ಔಟ್ ಲಿಸ್ಟ್"ಗೆ ಸೇರ್ಪಡೆಯಾದರೇ @BJP4Karnataka?

#BJPvsBJP
[20/01, 1:02 PM] Kpcc official: *ನೆಲಮಂಗಲ ನಗರಸಭೆ ಜೆಡಿಎಸ್ ಮುಖಂಡರ ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:*

ಕಾಂಗ್ರೆಸ್ ಪಕ್ಷದ ನಾಯಕರೆಲ್ಲರೂ ಪ್ರಜಾಧ್ವನಿ ಯಾತ್ರೆಯಲ್ಲಿ ನಿರತರಾಗಿದ್ದು, ಬೆಳಗಾವಿಯಿಂದ ಆರಂಭವಾದ ಯಾತ್ರೆ ನಿನ್ನೆ ದಾವಣಗೆರೆ ತಲುಪಿದೆ.

ಈ ಮಧ್ಯೆ ನೆಲಮಂಗಲ ನಗರ ಸಭೆಯ ಅಧ್ಯಕ್ಷರು ಹಾಗೂ ಇತರ ಸದಸ್ಯರು ಬೆಮೆಲ್ ಕಾಂತರಾಜು ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ನೆಲಮಂಗಲದಲ್ಲಿ ದೊಡ್ಡ ಸಭೆ ಇದ್ದು, ಅಲ್ಲಿ ಮತ್ತಷ್ಟು ಜನ ಸೇರ್ಪಡೆ ಆಗಲಿದ್ದಾರೆ. ನನಗೆ ಬೇರೆ ಕಾರ್ಯಕ್ರಮಗಳು ಇರುವ ಹಿನ್ನೆಲೆಯಲ್ಲಿ ಪ್ರಮುಖರನ್ನು ಇಲ್ಲಿ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಜೆಡಿಎಸ್ ನ ಈ ನಾಯಕರು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದಾರೆ. ಅಲ್ಲಿನ ಶಾಸಕರು ಸರ್ಕಾರದ ಜತೆ ಸೇರಿಕೊಂಡು ಇವರ ಮುನ್ಸಿಪಲ್ ಸದಸ್ಯತ್ವದ ಅಸ್ತಿತ್ವವನ್ನು ತೆಗೆದುಹಾಕಲು ದೊಡ್ಡ ಪ್ರಯತ್ನವನ್ನು  ಮಾಡಿದ್ದರು. ಕಾನೂನು ಪ್ರಕಾರ ಇವರ ಅವಧಿ ಮುಕ್ತಾಯವಾಗುವವರೆಗೂ ಇವರು ಸೇವೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು.

ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಿದ್ದು, ಅನೇಕರು ಬಿಜೆಪಿ ಹಾಗೂ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ನಾವು ಅವರಿಗೆ ಶಕ್ತಿ ನೀಡಿ, ಅವರನ್ನು ಪಕ್ಷಕ್ಕೆ ಸ್ವಾಗತ ಮಾಡುತ್ತೇನೆ. ನಮ್ಮಲ್ಲಿ ಹೊಸಬರು, ಹಳಬರು ಎಂಬ ಬೇಧವಿಲ್ಲ. ಇವರಲ್ಲಿ ಬಹುತೇಕರು ನನ್ನ ಜತೆ ಕೆಲಸ ಮಾಡಿದ್ದರು. ಈ ಬಾರಿ ನಾವು ಯಾರಿಗೆ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಇವರು ಕೆಲಸ ಮಾಡಲಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷದಿಂದ ಹೆಚ್ಚಾಗಿ ಆಗಮಿಸುತ್ತಿದ್ದಾರೆ ಎಂಬ ಪ್ರಶ್ನೆಗೆ, ' ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷದಿಂದ ನಾಯಕರು ಆಗಮಿಸುತ್ತಿದ್ದಾರೆ. ಎಚ್ ವಿಶ್ವನಾಥ್ ಅವರು ಪಕ್ಷ ಸೇರ್ಪಡೆಯಾಗಲು ದಿನಾಂಕ ನಿಗದಿ ಆಗಿದೆ. ಅದನ್ನು ಶೀಘ್ರ ಘೋಷಣೆ ಮಾಡುತ್ತೇವೆ. ಉಳಿದಂತೆ ಯಾರೆಲ್ಲಾ ಬರುತ್ತಾರೆ ಎಂದು ನಾನು ಈಗ ಹೇಳುವುದಿಲ್ಲ' ಎಂದು ತಿಳಿಸಿದರು.

ಬಿಜೆಪಿ ಹಾಲಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಹೌದು ಬಹಳ ಜನ ನಮ್ಮನ್ನು ಸಂಪರ್ಕಿಸಿದ್ದಾರೆ. ಆದರೆ ಪಕ್ಷದಲ್ಲಿ ಅವರಿಗೆ ಸ್ಥಾನ ನೀಡಬೇಕಾಗುತ್ತದೆ. ಕೆಲವು ಕಡೆ ಅದು ಸಾಧ್ಯ ಆಗುವುದಿಲ್ಲ. ಯಾರೆಲ್ಲಾ ಬರಲಿದ್ದಾರೆ ಎಂದು ನಾನು ಇಂದು ಬಹಿರಂಗ ಪಡಿಸುವುದಿಲ್ಲ ' ಎಂದು ತಿಳಿಸಿದರು.

ಇನ್ನು ಹಾವೇರಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅರ್ಜಿ ನೀಡುವ ಹೇಳಿಕೆ ಬಗ್ಗೆ ಕೇಳಿದಾಗ, ' ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎಂದು ಜನರಿಗೆ ತಲುಪಬೇಕು. ಹೀಗಾಗಿ ಕಾರ್ಯಕರ್ತರು ಪ್ರತಿ ಮನೆಗೆ ಹೋಗಿ ಈ ವಿಚಾರ ಮುಟ್ಟಿಸಬೇಕು. ಅಲ್ಲದೆ ಈ ಯೋಜನೆ ಬಗ್ಗೆ ಯಾರಿಗೆಲ್ಲ ಆಸಕ್ತಿ ಇದೆ ಎಂದು ತಿಳಿಯಬೇಕು. ಬಿಜೆಪಿ ನಾಯಕರು ಈ ಯೋಜನೆ ಜಾರಿಗೆ ಹಣ ಎಲ್ಲಿಂದ ತರುತ್ತಾರೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಅದನ್ನು ಹೇಗೆ ತರಬೇಕು ಎಂದು ನಮಗೆ ಗೊತ್ತಿದೆ. ಸಿದ್ದರಾಮಯ್ಯ ಅವರು 13 ಬಜೆಟ್ ಮಂಡನೆ ಮಾಡಿದ್ದಾರೆ. ನಾನು ಕೂಡ 35-40 ವರ್ಷಗಳಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ಈ ಯೋಜನೆಗಳಿಗೆ ಹೇಗೆ ಸಂಪನ್ಮೂಲ ಕ್ರೋಢೀಕರಣ ಮಾಡಬೇಕು ಎಂದು ತಿಳಿದಿದೆ. ನಾವು ಘೋಷಣೆ ಪ್ರಕಟಿಸಿದ ಮೇಲೆ ಈಗ ಮುಖ್ಯಮಂತ್ರಿಗಳು ಹಾಗೂ ಸಚಿವ ಅಶೋಕ್ ಅವರು ಬಜೆಟ್ ನಲ್ಲಿ ಈ ಯೋಜನೆ ತರುತ್ತೇವೆ ಎಂದು ಹೇಳಿದ್ದಾರೆ. ಕಳೆದ ಮೂರುವರೆ ವರ್ಷಗಳಿಂದ ಸರ್ಕಾರ ಯಾಕೆ ಈ ಕಾರ್ಯಕ್ರಮ ನೀಡಲಿಲ್ಲ. ಕೋವಿಡ್ ಸಮಯದಲ್ಲಿ ಸಾಂಪ್ರದಾಯಿಕ ವೃತ್ತಿ ಮಾಡಿಕೊಂಡು ಬಂದವರಿಗೆ 10 ಸಾವಿರ ಪ್ರೋತ್ಸಾಹ ಧನ ನೀಡುವಂತೆ ನಾವು ಆಗ್ರಹಿಸಿದೆವು. ಅದನ್ನು ಅವರಿಂದ ನೀಡಲು ಆಗಲಿಲ್ಲ. 5 ಸಾವಿರ ನೀಡುವುದಾಗಿ ಘೋಷಣೆ ಮಾಡಿ ಅದನ್ನು ಸರಿಯಾಗಿ ನೀಡಲಿಲ್ಲ. 1800 ಕೋಟಿ ಪ್ಯಾಕೆಜ್ ಘೋಷಣೆ ಮಾಡಿದರು. ಆದರೆ ಅದು ಜನರಿಗೆ ತಲುಪಲಿಲ್ಲ. 25 ಲಕ್ಷ ಚಾಲಕರ ಪೈಕಿ ಕೇವಲ 6 ಲಕ್ಷ ಮಂದಿಗೆ ಮಾತ್ರ 5 ಸಾವಿರ ನೀಡಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್  ಅಧಿಕಾರದಲ್ಲಿ ಇದ್ದಾಗ ಅಡುಗೆ ಅನಿಲಕ್ಕೆ ಸಬ್ಸಿಡಿ ನೀಡಿ 410 ರೂ.ಗೆ ಸಿಲಿಂಡರ್ ನೀಡುತ್ತಿದ್ದೆವು. ಈಗ ಅದು 1100 ರೂಪಾಯಿ ಆಗಿದೆ. ಹೀಗಾಗಿ ಬೆಲೆ ಏರಿಕೆ ಹೊರೆ ತಗ್ಗಿಸಲು ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲು ಘೋಷಣೆ ಮಾಡಿದ್ದೇವೆ. ಇದರಿಂದ ಪ್ರತಿ ಮನೆಗೆ 1500ರಂತೆ ವರ್ಷಕ್ಕೆ 18,000 ಉಳಿತಾಯವಾಗುತ್ತದೆ. ಇನ್ನು ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ನೀಡುವ ಘೋಷಣೆ ಮಾಡಲಾಗಿದೆ. ಇವೆರದರಿಂದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 42 ಸಾವಿರ ಉಳಿತಾಯ ಆಗುತ್ತದೆ. ಈಗ ಮುಖ್ಯಮಂತ್ರಿಗಳು ನಾವು ಈ ಯೋಜನೆ ಬಗ್ಗೆ ಯೋಚನೆ ಮಾಡಿದ್ದೆವು ಎಂದು ಹೇಳುತ್ತಿದ್ದಾರೆ. ಅವರು ಎಲ್ಲರ ಖಾತೆಗೆ 15 ಲಕ್ಷ ಹಾಕುವುದಾಗಿ ಜನಧನ್ ಖಾತೆ ತೆರೆಸಿದರು. ಆದರೆ ಯಾವ ಖಾತೆಗೂ ಬರಲಿಲ್ಲ. ಆದರೆ ನಾವು ಘೋಷಣೆ ಮಾಡಿರುವ ಯೋಜನೆಗಳು ಗ್ಯಾರೆಂಟಿ ಯೋಜನೆ. ಸಿದ್ದರಾಮಯ್ಯ ಅವರು ಈಗ ನೀಡಲಾಗುತ್ತಿರುವ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಕೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಇನ್ನು ಕೆಲವು ಯೋಜನೆಗಳ ಘೋಷಣೆ ಬಾಕಿ ಇವೆ ' ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಟಾರ್ಗೆಟ್ ಆಗುತ್ತಿದೆಯೇ ಎಂದು ಕೇಳಿದಾಗ, ' ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು ಗೊತ್ತಾಗಿದೆ. ಅಮಿತ್ ಶಾ ಅವರು ಕೆಲ ತಿಂಗಳ ಹಿಂದೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ತಿಳಿಸಿದರು. ಈಗ ಪ್ರಧಾನಮಂತ್ರಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ. ಅಂದರೆ ರಾಜ್ಯದ ನಾಯಕತ್ವ ವಿಫಲವಾಗಿದ್ದು, ಜನರ ಬದುಕಿನಲ್ಲಿ ಸುಧಾರಣೆ ತರಲು ಸಾಧ್ಯವಾಗಿಲ್ಲ. ಮುಂದಿನ ಬಜೆಟ್ ನಲ್ಲಿ ಕಾರ್ಯಕ್ರಮ ನೀಡುತ್ತೇವೆ ಎನ್ನುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಡಬಹುದಾಗಿತ್ತು. ಸಬ್ಸಿಡಿ ಮೂಲಕ ಪೆಟ್ರೋಲ್, ಅಡುಗೆ ಅನಿಲ ಬೆಲೆ ಕಡಿಮೆ ಮಾಡಬಹುದಾಗಿತ್ತು. ಅಚ್ಚೆ ದಿನ ಬರುತ್ತದೆ ಎಂದಿದ್ದರು. ಯಾರಿಗೆ ಬಂತು ಅಚ್ಚೆ ದಿನ? ಮಂತ್ರಿಗಳು ಬಹಳಷ್ಟು ಮಾತನಾಡುತ್ತಾರೆ. ಕೋವಿಡ್ ಬೆಡ್ ಹಗರಣ, ಹೆಣದ ಮೇಲೆ ಹಣ ಮಾಡಿದ್ದು ಯಾರು? ಕೆಂಪಣ್ಣ ಅವರ ದೂರು, ತಿಪ್ಪಾರೆಡ್ಡಿ ಅವರ ಮೇಲೆ ಆರೋಪ, ಯತ್ನಾಳ್, ವಿಶ್ವನಾಥ್ ಅವರ ಆರೋಪ ನಾವು ಮಾಡಿದ್ದೇವಾ? ಆತ್ಮಹತ್ಯೆ, ದಯಾಮರಣಕ್ಕೆ ಅರ್ಜಿ ನಾವು ಹಾಕಿದ್ದೇವಾ? ಪೊಲೀಸ್ ನೇಮಕಾತಿ ಹಗರಣ, ಕೆಪಿಎಸ್ ಸಿ ಹಗರಣದ ಬಗ್ಗೆ ಮಾಧ್ಯಮ ವರದಿ ನಾವು ಮಾಡಿದ್ದೇವಾ? ರಾಜ್ಯಪಾಲರು ನೇಮಕ ಮಾಡುವ ಉಪಕುಲಪತಿ ಹುದ್ದೆಗೂ 4-5 ಕೋಟಿ ನೀಡಬೇಕು ಎಂದು ಬಿಜೆಪಿ ಸಂಸದ ಹೇಳಿದ್ದಾರೆ ಹೊರತು ನಾವು ಹೇಳಿಲ್ಲ. ಇದೆಲ್ಲವೂ ಬಿಜೆಪಿ ಸಾಧನೆ. ಮಾಧ್ಯಮಗಳು ಈ ವಿಚಾರದಲ್ಲಿ ಬಹಳ ಉತ್ತಮ ಕೆಲಸ ಮಾಡಿದೆ. ಮುಂದೆ ರಾಜ್ಯದ ಭವಿಷ್ಯ ಕಾಂಗ್ರೆಸ್ ಜತೆ ಉತ್ತಮವಾಗಿದೆ ಎಂದು ಅರಿತು ಬೇರೆ ಪಕ್ಷದ ನಾಯಕರು ಯಾವುದೇ ಷರತ್ತು ಇಲ್ಲದೆ ನಮ್ಮ ಪಕ್ಷ ಸೇರುತ್ತಿದ್ದಾರೆ' ಎಂದರು.

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಗೊಂದಲ ವಿಚಾರವಾಗಿ ಕೇಳಿದಾಗ, ' ಯಾವುದೇ ಗೊಂದಲ ಇಲ್ಲ. ಪಕ್ಷ ಈಗಾಗಲೇ ತೀರ್ಮಾನ ಮಾಡಿದೆ. ಫೆ.2ರಂದು ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ನಂತರ ಸ್ಕ್ರೀನಿಂಗ್ ಕಮಿಟಿ ಸಭೆ ಮಾಡಿ ಆದಷ್ಟು ಬೇಗ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಯಾರು ಅರ್ಜಿ ಹಾಕಿಲ್ಲ. ಕೆಲವರು ಮಾತ್ರ ಎಲ್ಲಿ ಬೇಕಾದರೂ ಟಿಕೆಟ್ ನೀಡಿ ಎಂದು ಅರ್ಜಿ ಹಾಕಿದ್ದಾರೆ' ಎಂದು ತಿಳಿಸಿದರು.

ಪಂಚಮಸಾಲಿ ಹಾಗೂ ಒಕ್ಕಲಿಗರ ಮೀಸಲಾತಿ ಹೋರಾಟ ಕಾಂಗ್ರೆಸ್ ಗೆ ವರದಾನವೇ ಎಂದು ಕೇಳಿದ ಪ್ರಶ್ನೆಗೆ, ' ಪಂಚಮಸಾಲಿ, ಒಕ್ಕಲಿಗರು, ಪರಿಶಿಷ್ಟರ ಮೀಸಲಾತಿ ವಿಚಾರದಲ್ಲಿ ಸರ್ಕಾರ ಎಲ್ಲರಿಗೂ ಮೋಸ ಮಾಡುತ್ತಿದೆ. ಬಿಜೆಪಿ ಯಾವ ನಿರ್ಧಾರವನ್ನು ಕಾನೂನು ಪ್ರಕಾರ ಮಾಡಿಲ್ಲ. ಅವರು ಮೀಸಲಾತಿ ನೀಡಬೇಕಾದರೆ ಸಂವಿಧಾನದಲ್ಲಿ ತಿದ್ದುಪಡಿ ತರಬೇಕು. ದೆಹಲಿಯಲ್ಲಿ ತಿದ್ದುಪಡಿ ಮಾಡಿ ಕಳುಹಿಸಬೇಕಿತ್ತು. ಕೇಂದ್ರ ಸಚಿವರು ನಮ್ಮ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದಾರೆ. ಇವರು ಕೇವಲ ಘೋಷಣೆ ಮಾಡಿ ನಾವು ಗೆದ್ದಿದ್ದೇನೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲವೆ? ಈ ವಿಚಾರದಲ್ಲಿ ಮುಖ್ಯಮಂತ್ರಿ ಯಾಕೆ ಘೋಷಣೆ ಮಾಡಲಿಲ್ಲ? ಘೋಷಣೆ ಮಾಡಿದ ನಂತರ 3 ತಿಂಗಳು ಕಳೆದ ಬಳಿಕ ವರದಿ ತರಿಸಿಕೊಂಡು ತೀರ್ಮಾನ ಮಾಡುತ್ತಾರಂತೆ. ಫೆಬ್ರವರಿ ಅಂತ್ಯಕ್ಕೆ ಇವರ ಅಧಿಕಾರ ಬಹುತೇಕ ಅಂತ್ಯವಾಗುತ್ತದೆ. ಅಧಿಕಾರಿಗಳ ಕೈಯಲ್ಲಿ 48 ದಿನಗಳ ಕಾಲ ಅಧಿಕಾರ ಇರುತ್ತದೆ. ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ' ಎಂದು ತಿಳಿಸಿದರು.
[20/01, 2:21 PM] Kpcc official: ಬಿಜೆಪಿ ಎಂಎಲ್ಸಿ, ಮಾಜಿ ಸಚಿವ ಎಚ್ ವಿಶ್ವನಾಥ್ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಎಚ್ ಎಂ ರೇವಣ್ಣ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಉಪಸ್ಥಿತರಿದ್ದರು.
[20/01, 3:52 PM] Kpcc official: *ಬೀದಿ ವ್ಯಾಪಾರಿ ಸಂಘಟನೆಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*

ಸರ್ವಜ್ಞ ಒಂದು ಮಾತು ಹೇಳಿದ್ದಾರೆ, ನಿಂಬೆಗಿಂತ ಶ್ರೇಷ್ಠವಾದ ಹುಳಿಯಿಲ್ಲ, ದುಂಬಿಗಿಂತ ಶ್ರೇಷ್ಠವಾದ ಕಪ್ಪು ಬಣ್ಣ ಇಲ್ಲ, ಈಶ್ವರನಿಗಿಂತ ಶ್ರೇಷ್ಠವಾದ ದೇವರಿಲ್ಲ, ನಂಬಿಕೆಗಿಂತ ಶ್ರೇಷ್ಠವಾದ ಗುಣವಿಲ್ಲ'.

ನೀವು ಬೀದಿಯಲ್ಲಿ ವ್ಯಾಪಾರ ಮಾಡುತ್ತಿರುವ ಜನರು ಕಾಂಗ್ರೆಸ್ ಪಕ್ಷ ಮಾತ್ರ ನಿಮಗೆ ನೆಮ್ಮದಿ ಬದುಕು ನೀಡಲಿದೆ ಎಂದು ನಂಬಿಕೆ ಇಟ್ಟು ಇಲ್ಲಿಗೆ ಬಂದಿದ್ದೀರಿ. ನಿಮಗೆ ಕೋಟಿ ನಮನಗಳು.

ನಿಮ್ಮ ಜನಸಂಖ್ಯೆ ಕಮ್ಮಿ ಇಲ್ಲ. ನೀವು ಸ್ವಂತ ಅಂಗಡಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ನೀವು ಕೆಟ್ಟ ದಾರಿ ಹಿಡಿಯದೇ, ಸಮಾಜದಲ್ಲಿ ಗೌರವಯುತವಾಗಿ, ಸ್ವಾಭಿಮಾನದ ಬದುಕು, ಬದುಕಲು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ನಿಮಗೆ ಹೃತ್ಪೂರ್ವಕ ಅಭಿನಂದನೆಗಳು.

ನಿಮ್ಮ ನಾಯಕರು ನಿಮ್ಮ ನೋವನ್ನು ತಿಳಿಸಿದ್ದಾರೆ. ಆಮೂಲಕ ತಮ್ಮ ಸಮಸ್ಯೆಗಳನ್ನು ನಮ್ಮ ಮುಂದೆ ಇಟ್ಟಿದ್ದಾರೆ. ನಿಮಗೆ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದಂತೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಜವಾಬ್ದಾರಿ. 

ಈ ದೇಶಕ್ಕೆ ನೀವೆಲ್ಲರೂ ಆಸ್ತಿ. ಮಾಲ್ ಗಳಲ್ಲಿ, ಎಸಿ ಮಳಿಗೆಗಳಲ್ಲಿ ಖರೀದಿ ಮಾಡುವುದು ಒಂದು ಕಡೆಯಾದರೆ, ಅದೇ ಗುಣಮಟ್ಟದ ಆಹಾರ, ವಸ್ತುಗಳನ್ನು ಅವರಿಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿಕೊಂಡು ಬರುತ್ತಿದ್ದೀರಿ.

ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ರಾತ್ರಿ ವೇಳೆ ಬೀದಿ ಬಡಿ ವ್ಯಾಪಾರಿಗಳ ಬಳಿ ಹೋಗಿ ಚಿತ್ರಾನ್ನ ತಿಂದು ಬದುಕುತ್ತಿದ್ದೇವು. ಆಗ 1 ರೂ.ಗೆ ಒಂದು ಪ್ಯಾಕೆಟ್ ಚಿತ್ರಾನ್ನ ಸಿಗುತ್ತಿತ್ತು. ನಾವು ಎಷ್ಟೇ ಎತ್ತರಕ್ಕೆ ಬೆಳೆದರು ನಾವು ಬಂದ ಹಾದಿ ಮರೆಯಬಾರದು.

ಕಾಂಗ್ರೆಸ್ ಪಕ್ಷ ಈ ವರ್ಗದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷ ಸದಾ ನೊಂದು ಬೆಂದ ಬಡವರ ಪರವಾದ ಪಕ್ಷ. ನಿಮ್ಮ ಬದುಕನ್ನು ದಿನ ಬಡ್ಡಿ ನಿಯಂತ್ರಣದಿಂದ ತಪ್ಪಿಸಬೇಕು.

ಇಂದಿರಾಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ ಮಾಡಿ, ನಿಮಗೆ ಬಂಡವಾಳಶಾಹಿಗಳ ಕಾಟ ತಪ್ಪಿಸಿದರು. ಆಮೂಲಕ ಜನರಿಗೆ ಸುಲಭ ಸಾಲ ಸೌಲಭ್ಯ ಕಲ್ಪಿಸುವಂತೆ ಮಾಡಿದರು. ಈಗ ಬ್ಯಾಂಕ್ ಗಳು 10-15 ಸಾವಿರದಷ್ಟು ಸಣ್ಣ ಸಾಲ ನೀಡುವ ವ್ಯವಸ್ಥೆ ಮಾಡಿಕೊಡಲಾಗಿದೆ.

ಇನ್ನು ದೇಶದಲ್ಲಿ ಉಳುವವನೇ ಭೂಮಿಯ ಒಡೆಯ ಎಂದು ಮಾಡಿದ್ದು, ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟಿದ್ದು, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಕಾಯ್ದೆ ತಂದಿದ್ದರೆ, ಆಹಾರ ಬದ್ಧತೆ ಕಾಯ್ದೆ ಮೂಲಕ ನಿಮಗೆ 5-7 ಕೆ.ಜಿ ಅಕ್ಕಿ ನೀಡುತ್ತಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಇದೇ ಕಾರಣಕ್ಕೆ ನಾವು ನಿಮ್ಮ ಮುಂದೆ ಧೈರ್ಯವಾಗಿ ನಿಂತಿದ್ದೇವೆ. 

ರಂಗಸ್ವಾಮಿ ಅವರು ನಿಮ್ಮ ಸಮಸ್ಯೆಗಳ ಬಗೆಹರಿಸಲು ಒಂದು ಪಟ್ಟಿ ನೀಡಿದ್ದಾರೆ. ಇದರಲ್ಲಿ ಪ್ರಮುಖವಾದುದು, ಪಾಲಿಕೆ ಹಾಗೂ ಪೊಲೀಸರಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸುವುದು. ಇದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. 

ಕೋವಿಡ್ ಸಮಯದಲ್ಲಿ ನಾವು ನಿಮ್ಮ ಪರ ಧ್ವನಿ ಎತ್ತಿದ್ದೇವು. ವಲಸೆ ಕಾರ್ಮಿಕರಿಂದ ಸರ್ಕಾರ ಬಸ್ ಟಿಕೆಟ್ ದುಪ್ಪಟ್ಟು ಮಾಡಿ ಸುಲಿಗೆ ಮಾಡಲು ಮುಂದಾದಾಗ, ಈ ಕಾರ್ಮಿಕರು ದೇಶ ನಿರ್ಮಾತೃಗಳು ಅವರಿಗೆ ಉಚಿತ ಸಾರಿಗೆ ವ್ಯವಸ್ಥೆ ನೀಡಿ ಎಂದು ನಾವು ಪಕ್ಷದ ವತಿಯಿಂದ 1 ಕೋಟಿ ಚೆಕ್ ನೀಡಿದೆವು. ನಂತರ ಉತ್ತರ ಕರ್ನಾಟಕದ ಭಾಗದ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಯಿತು.

ಇನ್ನು ಸಾಂಪ್ರದಾಯಿಕ ವೃತ್ತಿ ಮಾಡಿಕೊಂಡು ಬಂದಿರುವ ಕಾರ್ಮಿಕರಿಗೆ ಸಹಾಯ ಮಾಡಲು ಸರ್ಕಾರದಿಂದ ಸಾಧ್ಯವಾಗಲಿಲ್ಲ. ಕೆಲವರಿಗೆ ಒಂದಿಷ್ಟು ಹಣ ಕೊಟ್ಟು ಮುಗಿಸಿದರು. ರಂಗಸ್ವಾಮಿ ಅವರು ತಮ್ಮ ಬೇಡಿಕೆ ಪಟ್ಟಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರ ಸೇರ್ಪಡೆ ಮಾಡುತ್ತೇವೆ.

ನಿಮಗೆ ಪ್ರತ್ಯೇಕ ಮಾರುಕಟ್ಟೆ ಸ್ಥಾಪಿಸಿದರೆ ನೀವು ಅಲ್ಲಿ ಹೋಗಲು ಸಿದ್ಧರಿಲ್ಲ. ಹೀಗಾಗಿ ನಗರದ ಸೌಂದರ್ಯ ಕಾಪಾಡಿ, ನಿಮಗೂ ರಕ್ಷಣೆ ಸಿಗಬೇಕು. ಇದನ್ನು ಯಾವ ರೀತಿ ಮಾಡಬೇಕು ಎಂದು ನಿಮ್ಮ ಜತೆಯೇ ಚರ್ಚೆ ಮಾಡಿ ನಿಮ್ಮ ವಾರ್ಡ್ ಗಳಲ್ಲಿ ನಿಮ್ಮ ವಿಶ್ವಾಸ ತೆಗೆದುಕೊಂಡು ಸಮಿತಿ ಜತೆ ಸಭೆ ಮಾಡಿ ಸಹಾಯ ಮಾಡಬೇಕು. ಇದಕ್ಕೆ ಕಾನೂನು ಚೌಕಟ್ಟನ್ನು ಕಾಂಗ್ರೆಸ್ ಕಟ್ಟಿಕೊಡಲಿದೆ.

ನಿಮ್ಮ ನೆಮ್ಮದಿಯ ಬದುಕಿಗಾಗಿ ನಿಮ್ಮ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣ ಸಿಗಲು ಚುನಾವಣೆ ಪ್ರಣಾಳಿಕೆಯಲ್ಲಿ ಕಾರ್ಯಕ್ರಮ ನೀಡಲಾಗುವುದು. 

ಈ ಜನರ ಸಮಸ್ಯೆ ಅರ್ಥ ಮಾಡಿಕೊಂಡು ಕಾರ್ಯಕ್ರಮ ರೂಪಿಸುತ್ತಿದೆ. ಕಳೆದ ಮೂರೂವರೆ ವರ್ಷ ಆಡಳಿತದಲ್ಲಿ ಸರ್ಕಾರ ಬಡವರಿಗಾಗಿ ಯಾವುದಾದರೂ ಒಂದು ಕಾರ್ಯಕ್ರಮದ ಕೊಟ್ಟಿದ್ದರೆ, ಕೋವಿಡ್ ಸತ್ತವರ ಕುಟುಂಬಕ್ಕೆ ಪರಿಹಾರ, ಆಸ್ಪತ್ರೆ ವೆಚ್ಚ ಭರಿಸುತ್ತೇವೆ, ಚಾಲಕರಿಗೆ ಸಹಾಯಧನ, ಬೀದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುತ್ತೇವೆ ಎಂದಿದ್ದರು. ಯಾರಿಗಾದರೂ ಅನುಕೂಲ ಆಯಿತಾ? ಸರ್ಕಾರ ಕೊಡುವ ಆಹಾರ ಸಾಮಾಗ್ರಿಗೆ ಶಾಸಕರು ತಾವು ಹಂಚುತ್ತಿದ್ದೇವೆ ಎಂದು ಅವರ ಫೋಟೋ ಹಾಕಿ ಹಂಚಿದರು. 

ನಮ್ಮ ನಾಯಕರಾದ ರಾಮಲಿಂಗಾ ರೆಡ್ಡಿ, ಪದ್ಮಾವತಿ, ದೇವರಾಜ್, ಜಮೀರ್, ಕೃಷ್ಣ ಭೈರೆಗೌಡ ಸೇರಿದಂತೆ ಹಲವರು  ತಮ್ಮ ಜೇಬಿನ ಹಣದಿಂದ ನಿಮಗೆ ನೆರವು ನೀಡಿದ್ದಾರೆ.

ಈಗ ನಾವು ಜನರ ಧ್ವನಿಯಾಗಲು ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ನಾವು ನಿಮ್ಮ ನೋವು ಕೇಳಲು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಧ್ವನಿ ನಮ್ಮ ಧ್ವನಿ. 

ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿದ್ದ ಬೆಳಗಾವಿಯ ವೀರಸೌಧದಿಂದ ಯಾತ್ರೆ ಆರಂಭಿಸಿ ಅಲ್ಲಿ ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದೆವು. ಅದೇನೆಂದರೆ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಆಮೂಲಕ ತಿಂಗಳಿಗೆ 1500 ರೂಪಾಯಿ ಉಳಿತಾಯ ಆಗಲಿದೆ.

ಇನ್ನು ಮಹಿಳೆಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಅವರಿಗೆ ಮನೆ ನಡೆಸಲು ಸಮಸ್ಯೆ ಎದುರಾಗಿದೆ. ಹೀಗಾಗಿ ಅವರಿಗೆ ನೆರವಾಗಲು ಪ್ರತಿ ಮನೆಯೋಡತಿಗೆ ತಿಂಗಳಿಗೆ 2 ಸಾವಿರಾದಂತೆ ವರ್ಷಕ್ಕೆ 24 ಸಾವಿರ ಹಣ ನೀಡಲಾಗುವುದು.

ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಹರಿಯಾಣದಲ್ಲಿ ಪಾದಯಾತ್ರೆ ಮಾಡುವಾಗ ನಾನು ಅಲ್ಲಿಗೆ ಹೋಗಿ ಅವರ ಜತೆ ಚರ್ಚೆ ಮಾಡಿದೆ. ನಂತರ ಪ್ರಿಯಾಂಕಾ ಗಾಂಧಿ ಅವರು ಈ ಯೋಜನೆ ಘೋಷಣೆ ಮಾಡಿದರು.

ಈ ಬೀದಿ ಬದಿ ವ್ಯಾಪಾರಿಗಳಲ್ಲಿ ಮಹಿಳೆಯರೇ ಹೆಚ್ಚು. ಆಕೆಯೇ ಮನೆಯ ಜವಾಬ್ದಾರಿ ನಿಭಾಯಿಸುತ್ತಾರೆ. ನಿಮಗೆ ನೆರವಾಗಲು ನಮ್ಮ ಪಕ್ಷ ಬದ್ಧವಾಗಿದೆ.

ಈ ಸರ್ಕಾರಕ್ಕೆ ಕೋವಿಡ್ ಸಂತ್ರಸ್ತರಿಗೆ ನೆರವಾಗಲು ಸಾಧ್ಯವಾಗಲಿಲ್ಲ. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಸುಮಾರು 36 ಜನ ಸತ್ತಿದ್ದಾರೆ. ನಾನು ಸಿದ್ದರಾಮಯ್ಯ ಅವರು ಅಲ್ಲಿ ಪರಿಶೀಲನೆ ನಡೆಸಿದೆವು. ನಾನು ಎಲ್ಲಾ ಮನೆಗೂ ಹೋಗಿ ತಲಾ ಒಂದು ಲಕ್ಷ ಪರಿಹಾರ ಕೊಟ್ಟು ಬಂದೆವು.

ಬಿಜೆಪಿಗೆ ಅಧಿಕಾರ ಇದ್ದಾಗ ಜನರಿಗೆ ಯಾವುದೇ ಸಹಾಯ ಮಾಡಲಿಲ್ಲ. ನಾವು ಅನ್ನಭಾಗ್ಯ, ಶಾಲೆಯಲ್ಲಿ ಬಿಸಿಯೂಟ ಕಾರ್ಯಕ್ರಮ ಹೀಗೆ ಜನಪರ ಕಾರ್ಯಕ್ರಮ ಕೊಟ್ಟಾಗ ಜಾತಿ ನೋಡಿ ಕೊಡಲಿಲ್ಲ. ಹೀಗೆ ಕಾಂಗ್ರೆಸ್ ಪಕ್ಷ ನಿಮ್ಮ ಬದುಕಲ್ಲಿ ಬದಲಾವಣೆ ತರಲು ಬದ್ಧವಾಗಿದೆ. ನೀವು ನಮಗೆ ಶಕ್ತಿ ತುಂಬಬೇಕು.
[21/01, 11:19 AM] Kpcc official: *ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು ಬಾಯಿ: ಡಿ.ಕೆ. ಶಿವಕುಮಾರ್ ತಿರುಗೇಟು*

ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ನಮ್ಮ ಹಳ್ಳಿ ಕಡೆ ಇಂತಹವರಿಗೆ ಬಚ್ಚಲು ಬಾಯಿ ಅಂತಾರೆ. ಕಟೀಲ್ ಒಂದು ಪಕ್ಷದ ರಾಜ್ಯಾಧ್ಯಕ್ಷರು, ಸಂಸದರು. ಅವರು ಮಾತನಾಡಿದರೆ ಅದಕ್ಕೆ ಸಾಕ್ಷಿ ಇರಬೇಕು.  ಅವರು ಇದುವರೆಗೂ ಮಾತನಾಡಿರುವ ಯಾವುದಾದರೂ ವಿಚಾರದಲ್ಲಿ ಏನಾದರೂ ಸಾಕ್ಷಿ ಇದೆಯಾ? 

ಕಟೀಲ್ ಅವರು ಮೊದಲು ಯತ್ನಾಳ್, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಅವರ ಮಾತಿಗೆ ಉತ್ತರ ನೀಡಲಿ. ಕಟೀಲ್ ಅವರಿಗೆ ಪಕ್ಷದಲ್ಲಿ ಹಿಡಿತವಿಲ್ಲ. ಅವರು ಪಕ್ಷದ ಅಧ್ಯಕ್ಷರು, ನಮ್ಮ ಪಕ್ಷದ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನೆ. ಇಲ್ಲದಿದ್ದರೆ ನನ್ನಂತಹವರ ಪ್ರತಿಕ್ರಿಯೆ ಪಡೆಯಲು ಅವರು ಯೋಗ್ಯರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ನಾಯಕರು ಸಭೆ ಮಾಡಿದರೆ ಚಪ್ಪಲಿಗಳು ಕೈಗೆ ಬರುತ್ತವೆ ಎಂಬ ಕಟೀಲ್ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಕೆಪಿಸಿಸಿ ಕಚೇರಿ ಬಳಿ ಶನಿವಾರ ಪ್ರಶ್ನೆ ಮಾಡಿದಾಗ ಶಿವಕುಮಾರ್ ಅವರಿಂದ ಈ ಪ್ರತಿಕ್ರಿಯೆ ವ್ಯಕ್ತವಾಯಿತು.

ಕಾಂಗ್ರೆಸ್ ಒಡೆಯಲು ಟಿಆರ್ ಎಸ್ ನಾಯಕ ಕೆ.ಸಿ ಚಂದ್ರಶೇಖರರಾವ್ ಅವರು ಹಣ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಈ ಬಗ್ಗೆ ನನಗೆ ಗೊತ್ತಿಲ್ಲ. ಹಣ್ಣ ಕೊಟ್ಟಿರುವವರು ಹಾಗೂ ತೆಗೆದುಕೊಂಡವರನ್ನು ಕೇಳಿ. ಬೇರೆಯವರು ವೈಯಕ್ತಿಕ ವಿಚಾರವಾಗಿ ಚಂದ್ರಶೇಖರ್ ಅವರನ್ನು ಭೇಟಿ ಮಾಡಿರಬಹುದು, ಅದಕ್ಕೆ ನಾವು ಪ್ರಶ್ನೆ ಮಾಡಲು ಆಗುವುದಿಲ್ಲ ' ಎಂದು ತಿಳಿಸಿದರು.

ಮೊದಲ ಟಿಕೆಟ್ ಪಟ್ಟಿ ಬಗ್ಗೆ ಕೇಳಿದಾಗ, ' ಫೆ.2 ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈಗಾಗಲೇ ನಮ್ಮ ನಾಯಕರು ಆಕಾಂಕ್ಷಿಗಳ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಾವು ನಮ್ಮ ಪ್ರವಾಸ ಮುಗಿಸಿ ಚರ್ಚೆ ಮಾಡಿ ಆದಷ್ಟು ಬೇಗ ತೀರ್ಮಾನ ಮಾಡುತ್ತೇವೆ' ಎಂದು ತಿಳಿಸಿದರು. 

ಕಾಂಗ್ರೆಸ್ ಪಕ್ಷದಿಂದ ತಮ್ಮ ಪಕ್ಷಕ್ಕೆ ನಾಯಕರು ಬರುವವರಿದ್ದಾರೆ ಎಂಬ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಕೇಳಿದಾಗ, ' ತಡಮಾಡದೆ ಆದಷ್ಟು ಬೇಗ ಕರೆದುಕೊಳ್ಳಲಿ' ಎಂದು ತಿಳಿಸಿದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಬಗ್ಗೆ ಕೇಳಿದಾಗ, ' ಅಮಿತ್ ಶಾ ಅವರು ಮೊದಲು ಬೊಮ್ಮಾಯಿ ಅವರ ನೇತತ್ವದಲ್ಲಿ ರಾಜ್ಯ ಚುನಾವಣೆ ಎದುರಿಸಲಾಗುವುದು ಎಂದು ತಿಳಿಸಿದರು. ಆದರೆ ಈಗ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಆ ಮೂಲಕ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ನಾವು ಜನರ ಭಾವನೆ ಅರಿತು ಪ್ರಜಾಧ್ವನಿ ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ಅದಾದ ನಂತರ ಬಿಜೆಪಿಯವರು ನಾವು ಕೂಡ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕಳೆದ ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿ ಇದ್ದರೂ ಯಾಕೆ ಮಾಡಲಿಲ್ಲ? ನಾವು ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದ್ದೇವೆ. ಇನ್ನು ಎರಡನೇ ಗ್ಯಾರೆಂಟಿ ಯೋಜನೆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಮಹಿಳೆಯರಿಗೆ ನೆರವಾಗಲು ಮನೆಯೊಡತಿಗೆ ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದೇವೆ.  ಈ ಯೋಜನೆ ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲವರು ಈ ಸೌಲಭ್ಯ ಬೇಡ ಎಂದರೆ ನಾವು ಏನೂ ಮಾಡಲು ಸಾಧ್ಯವಿಲ್ಲ ' ಎಂದರು.
[21/01, 1:05 PM] Kpcc official: ಅಮಿತ್ ಶಾ, ಮೋದಿ ಕರ್ನಾಟಕಕ್ಕೆ ಬರುವುದು ಚುನಾವಣಾ ಪ್ರಚಾರಕ್ಕೆ ಮಾತ್ರವಲ್ಲ, ರಾಜ್ಯದ ಸೌಲಭ್ಯಗಳನ್ನು ಕಿತ್ತುಕೊಂಡು ಹೋಗಲು ಬರುತ್ತಾರೆ.

ಯುಜಿಸಿ ಪ್ರಾದೇಶಿಕ ಕಚೇರಿಯನ್ನು ದೆಹಲಿಗೆ ಸ್ಥಳಾಂತರಿಸಿದರೂ 25 ಬಿಜೆಪಿ ಸಂಸದರು, @BSBommai ಸರ್ಕಾರ ಬಾಯ್ಮುಚ್ಚಿರುವುದೇಕೆ?

@BJP4Karnataka ಗೆ ರಾಜ್ಯದ ಮುಖ್ಯವೋ, ಮೋದಿಯ ಗುಲಾಮಗಿರಿ ಮುಖ್ಯವೋ?
[21/01, 2:13 PM] Kpcc official: *ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗ ಪ್ರಿಯಾಂಕ್ ಖರ್ಗೆ ಹಾಗೂ ಪ್ರೋ. ಬಿ.ಕೆ. ಚಂದ್ರಶೇಖರ್ ಅವರ ಜಂಟಿ ಪತ್ರಿಕಾಗೋಷ್ಠಿ ಮುಖ್ಯಾಂಶಗಳು:*

*ಪ್ರೊ.ಬಿ.ಕೆ. ಚಂದ್ರಶೇಖರ್:*

ಭಾರತದ ಸಂವಿಧಾನವನ್ನು ಬಿಜೆಪಿಯವರು ವ್ಯವಸ್ಥಿತವಾಗಿ ನಾಶ ಮಾಡಲು ಮುಂದಾಗುತ್ತಿದೆ.

ಈ ಹಿಂದೆ ಮುರುಳಿ ಮನೋಹರ್ ಜೋಷಿ ಅವರು ನಾವು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ತಿಳಿಸಿದರು. ಇನ್ನು ಅನಂತ ಕುಮಾರ್ ಹೆಗಡೆ ಅವರು ಯಾವುದೇ ಮುಸಲ್ಮಾನ ಹುಡುಗ ಹಿಂದೂ ಹೆಣ್ಣಿನ ಜತೆ ಮಾತನಾಡಿದರೆ ಆತನ ಕೈ ಕತ್ತರಿಸಬೇಕು ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಮುರಳಿ ಮನೋಹರ್ ಜೋಷಿ ಅವರಿಗೆ ಪತ್ರಕರ್ತರು ದೆಹಲಿಯಲ್ಲಿ ಪ್ರಶ್ನೆ ಮಾಡಿದಾಗ, ನಾವು ಸಂವಿಧಾನ ಬದಲಾವಣೆಗೆ ಬದ್ಧ ಎಂದು ಹೇಳಿದ್ದರು.

ಬಿಜೆಪಿ ಅವರು ನಮ್ಮ ಸಂವಿಧಾನ ನಮ್ಮ ಸಂಸ್ಕೃತಿಯಲ್ಲ ಅದು ಬ್ರಿಟನ್ ನ್ನಿಂದ ಪರಭಾರೆ ಮಾಡಿಕೊಂಡಿರುವ ಸಂವಿಧಾನ ಎಂದು ಹೇಳುತ್ತಾರೆ. ನಮ್ಮ ಸಂವಿಧಾನವನ್ನು ದೇಶದ ಪ್ರಮುಖರು ಸೇರಿ ರಚನೆ ಮಾಡಿದ್ದಾರೆ. ಇಲ್ಲಿ ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾದ ವರ್ಗದ ಜನರಿಗೆ ಮೀಸಲಾತಿ ನೀಡಿದೆ. ಬ್ರಿಟನ್ ಸಂವಿಧಾನದಲ್ಲಿ ಮೀಸಲಾತಿ ಇದೆಯೇ? ನಮ್ಮದು ಪಾಶ್ಚಿಮಾತ್ಯ ಸಂವಿಧಾನದ ಪರಭಾರೆಯಲ್ಲ. ಬೇರೆ ದೇಶಗಳಲ್ಲಿನ ಕೆಲ ಅಂಶಗಳನ್ನು ತೆಗೆದುಕೊಳ್ಳಲಾಗಿದೆ.

ಈಗ ದೇಶದ ನ್ಯಾಯಾಂಗ ವ್ಯವ್ಥೆಯ ಮೇಲೆ ದಾಳಿ ನಡೆಯುತ್ತಿದೆ. ಉಪರಾಷ್ಟ್ರಪತಿ ದಂಕರ್ ಅವರು ನ್ಯಾಯಾಂಗ ವ್ಯವಸ್ಥೆ ಮೇಲೆ ದಾಳಿ ಆರಂಭಿಸಿದರು. ಇವರಿಗೆ ತಾಳ ಮದ್ದಳೆಯಂತೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ನ್ಯಾಯಾಂಗದ ಮೇಲೆ ಮುಗಿ ಬಿದ್ದಿದ್ದಾರೆ. ನ್ಯಾಯಾಂಗ ವ್ಯವಸ್ಥೆಗಿಂತ ಸಂಸತ್ತು ಶ್ರೇಷ್ಠ ಎಂದು ಹೇಳುತ್ತಿದ್ದಾರೆ. 

ರಾಜ್ಯದಲ್ಲಿ ಅಧಿವೇಶನಗಳಲ್ಲಿ ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಆಮೂಲಕ ಯಾವುದೇ ವಿಚಾರ ಜನರಿಗೆ ತಲುಪದಂತೆ ಮಾಡುತ್ತಿದ್ದಾರೆ.

ರಿಜಿಜು ಅವರ ಪ್ರಕಾರ ನ್ಯಾಯಾಧೀಶ ನೇಮಕಾತಿಯಲ್ಲಿ ಪಾರದರ್ಶಕತೆ ಇಲ್ಲವಂತೆ. ಕತ್ತಲಲ್ಲಿ ನೋಟು ರದ್ದತಿ ತೀರ್ಮಾನ ಮಾಡಿದ ಬಿಜೆಪಿಯವರು ಈಗ ಈ ರೀತಿ ಹೇಳುತ್ತಿದ್ದಾರೆ. ಪಿಎಂ ಕೇರ್ ನಿಧಿಯಲ್ಲಿ ಪಾರದರ್ಶಕತೆ ಇಲ್ಲ. 

 ಈ ಕಾರಣಕ್ಕೆ ಸುಪ್ರೀಂ ಕೋರ್ಟ್ ನಿನ್ನೆ ನ್ಯಾಯಾಧೀಶರ ನೇಮಕಕ್ಕೆ ಶಿಫಾರಸ್ಸು ಮಾಡಿರುವ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಸರ್ಕಾರದ ಪ್ರತಿನಿಧಿ ಇರಬೇಕು ಎಂದು ಹೇಳುತ್ತಿದ್ದಾರೆ. ಆಮೂಲಕ ನ್ಯಾಯಾಂಗ ವ್ಯವಸ್ಥೆಯನ್ನೆ ತನ್ನ ಇಲಾಖೆ ಮಾಡಿಕೊಳ್ಳಲು ಬಿಜೆಪಿ ಸರ್ಕಾರ ಮುಂದಾಗಿದೆ.

ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಬೇಕಿದೆ. ನ್ಯಾಯಾಂಗ ವ್ಯವಸ್ಥೆ ಮೇಲಿನ ದಬ್ಬಾಳಿಕೆ ವಿರುದ್ಧ ಸಮಾವೇಶ ಮಾಡಬೇಕು.

*ಪ್ರಿಯಾಂಕ್ ಖರ್ಗೆ:*

ರಾಜ್ಯದಲ್ಲಿ ಬಿಜೆಪಿ ಆರ್ ಎಸ್ ಎಸ್ ತತ್ವ ಸಿದ್ಧಾಂತವನ್ನು ಸರ್ಕಾರದ ನೀತಿಯಾಗಿ ಮಾಡಲಾಗುತ್ತಿದೆ ಎಂದು ನಾನು ಸದನದಲ್ಲಿ ಪ್ರಶ್ನೆ ಎತ್ತಿದಾಗ ಸಿ. ಟಿ ರವಿ ಅವರು ಇದನ್ನು ಒಪ್ಪದೇ, ಆರ್ ಎಸ್ ಎಸ್ ಎಂದಿಗೂ ಸಂವಿಧಾನ ವಿರೋಧ ಮಾಡಿಲ್ಲ. ಮನುಸ್ಮೃತಿಯನ್ನು ಸಮರ್ಥಿಸಿಕೊಂಡಿಲ್ಲ. ಈ ಬಗ್ಗೆ ದಾಖಲೆ ನೀಡುವಂತೆ ಆಗ್ರಹಿಸಿದರು. ದುರಾದೃಷ್ಟವಶಾತ್ ಇದಕ್ಕೆ ಸ್ಪೀಕರ್ ಅವರು ಅವಕಾಶ ನೀಡಿ, ದಾಖಲಾತಿ ನೀಡದಿದ್ದರೆ ನನ್ನ ಹೇಳಿಕೆಯನ್ನು ದಾಖಲೆಯಿಂದ ತೆಗೆದುಹಾಕುವುದಾಗಿ ಹೇಳಿದರು. ನಾನು ಅಲ್ಲಿಗೆ ನಿಲ್ಲಿಸಿದೆ, ಮರು ದಿನ ಸಂವಿಧಾನ ಜಾರಿ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖಂಡರು, ಆರ್ ಎಸ್ ಎಸ್ ನ ಮುಖವಾಣಿಗಳಲ್ಲಿ ಬಂದಿರುವ ಲೇಖನಗಳನ್ನು ಕಲೆಹಾಕಿ ಸ್ಪೀಕರ್ ಅವರಿಗೆ ನೀಡಿದ್ದೆ.

ಬಿಜೆಪಿ ಹೆಸರಲ್ಲಿ ಕೇಶವಕೃಪ ಆಡಳಿತ ಮಾಡುತ್ತಿದೆ. ಬಿಜೆಪಿ ಇಲ್ಲದ ರಾಜ್ಯಗಳಲ್ಲಿ ರಾಜ್ಯಪಾಲರನ್ನು ನಾಗ್ಪುರದ ನೌಕರರಂತೆ ನಡೆಸಿಕೊಳ್ಳುತ್ತಿದ್ದಾರೆ.

ಬಿಜೆಪಿ ಹೇಗೆ ಸಂವಿಧಾನದ ಮೇಲೆ ದಬ್ಬಾಳಿಕೆ ಮಾಡುತ್ತಿದೆ ಎಂಬ ವಿಚಾರವಾಗಿ ನಾವು ಸಾರ್ವಜನಿಕ ಚರ್ಚೆ ಮಾಡಬೇಕು. ಜನರ ಮುಂದೆ ಬಿಜೆಪಿಯವರ ಬಣ್ಣ ಬಯಲು ಮಾಡಬೇಕು. 

ಇದೆಲ್ಲದರ ವಿರುದ್ಧ ನಾವು ಸಂವಿಧಾನ ಜಾರಿಯಾದ ದಿನವಾದ ಜನವರಿ 26ರಂದು ಸಮಾವೇಶ ಮಾಡುವ ಬಗ್ಗೆ ನಮ್ಮ ನಾಯಕರ ಜತೆ ಚರ್ಚೆ ಮಾಡುತ್ತೇವೆ.

*ಪ್ರಶ್ನೋತ್ತರ*

ಕಾಂಗ್ರೆಸ್ ಪಕ್ಷದ ಬಗ್ಗೆ ನಳೀನ್ ಕುಮಾರ್ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, 'ಯತ್ನಾಳ್ ಅವರು ಸರ್ಕಾರದ ಸಚಿವರನ್ನು ಪಿಂಪ್ ಎಂದು ಕರೆದಿದ್ದಾರೆ. ಈಶ್ವರಪ್ಪ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳದ ಕಟೀಲ್ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಾರೆ. ನಳೀನ್ ಕುಮಾರ್ ಕಟೀಲ್ ಅವರು ಎಂದಾದರೂ ನಾವು ಕಳೆದ ಮೂರೂವರೆ ವರ್ಷಗಳಿಂದ ಇಂತಹ ಜನಪರ ಕಾರ್ಯಕ್ರಮ ಕೊಟ್ಟಿದ್ದೇವೆ, ನಾವು ಮುಂದಿನ ಬಾರಿ ಸರ್ಕಾರ ಬಂದರೆ ಯಾವ ರೀತಿಯ ಕಾರ್ಯಕ್ರಮ ರೂಪಿಸುತ್ತೇವೆ ಎಂಬ ನೀಲ ನಕ್ಷೆ ಕುರಿತು ಮಾತನಾಡಿದ್ದಾರಾ? ಅವರು ಅಭಿವೃದ್ಧಿಯ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎನ್ನುತ್ತಾರೆ. ಇಂತಹವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಿದರೆ ನಾವು ಕೇಳಬೇಕೆ? ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲವಾಗಿದೆ ಇದೇ ಕಾರಣಕ್ಕೆ ಪ್ರಧಾನಿ ಮೋದಿ ಅವರು ಚುನಾವಣೆ ಸಮಯದಲ್ಲಿ 40 ಬಾರಿ, ಜೆಪಿ ನಡ್ಡಾ ಹಾಗೂ ಅಮಿತ್ ಶಾ 25ಕ್ಕೂ ಹೆಚ್ಚು ಬಾರಿ ರಾಜ್ಯಕ್ಕೆ ಪೊಲಿಟಿಕಲ್ ಟೂರ್ ಮಾಡುತ್ತಿದ್ದಾರೆ' ಎಂದು ಹರಿಹಾಯ್ದರು.
[21/01, 3:45 PM] Kpcc official: ◆ಅಂಗನವಾಡಿಗಳಿಗೆ ಅನುದಾನವಿಲ್ಲ,
◆ಮೊಟ್ಟೆ ಖರೀದಿಯಲ್ಲಿ ಹಗರಣ,
◆ಮಕ್ಕಳಿಗೆ ಹುಳು ಹಿಡಿದ ಆಹಾರ,
◆ಈಗ ಕಾರ್ಯಕರ್ತೆಯರ ಮೇಲೆ ಅಮಾನುಷ ಹಲ್ಲೆ.

@BSBommai ಅವರೇ, ನಿಮ್ಮ ಸರ್ಕಾರ ನಡೆಸಿದ ಈ ದೌರ್ಜನ್ಯಕ್ಕೆ ಕ್ಷಮೆ ಇಲ್ಲ.

ಭ್ರಷ್ಟರು, ಬ್ರೋಕರ್‌ಗಳು, ರೌಡಿಗಳಿಗೆ ಘನ ಮರ್ಯಾದೆ ನೀಡುವ ಬಿಜೆಪಿಗೆ ಅಂಗನವಾಡಿ ತಾಯಂದಿರೆಂದರೆ ತಾತ್ಸಾರವೇ?
[21/01, 3:53 PM] Kpcc official: ಸಮಯ ಮುಗಿದಿದ್ದು ಬಿಜೆಪಿ ಸರ್ಕಾರದ್ದು,
ಸಮಯ ಮುಗಿದಿದ್ದು @BSBommai ಅವರ ಅಧಿಕಾರದ್ದು,
ಅಂಗನವಾಡಿ ಕಾರ್ಯಕರ್ತೆಯರದ್ದಲ್ಲ,

ಪೊಲೀಸರೆದುರೇ PSI ಹಗರಣದ ಆರೋಪಿಯನ್ನು ಓಡಿಹೋಗಲು ಬಿಡುವ ಸರ್ಕಾರ ಅಂಗನವಾಡಿ ತಾಯಂದಿರ ಮೇಲೆ ದೌರ್ಜನ್ಯ ಎಸಗಿದೆ.

ಸಂವಿಧಾನದತ್ತವಾಗಿರುವ ಪ್ರತಿಭಟನೆ ಹಕ್ಕು ಕಸಿಯುತ್ತಿರುವ ಬೊಮ್ಮಾಯಿಯವರು ಕರ್ನಾಟಕದ ಹಿಟ್ಲರ್!
[21/01, 4:53 PM] Kpcc official: ಹಾಸನದಲ್ಲಿ ಶನಿವಾರ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್,  ಹಾಸನ ಜಿಲ್ಲೆ ಕಾಂಗ್ರೆಸ್ ಉಸ್ತುವಾರಿ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ ಕೆ ಸುರೇಶ್, ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಮಾಜಿ ಸಚಿವ ಎಚ್ ಎಂ ರೇವಣ್ಣ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್, ಮಾಜಿ ಎಂಎಲ್ಸಿ ಗೋಪಾಲಸ್ವಾಮಿ, ಜಿಲ್ಲಾಧ್ಯಕ್ಷ ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.
[21/01, 6:13 PM] Kpcc official: *ಹಾಸನ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*

ಹಾಸನದ ಜನ ಕೊಟ್ಟ ಸ್ವಾಗತ, ಪ್ರೀತಿ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲಿದೆ. ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕರು ಇಲ್ಲದಿದ್ದರೂ ಇಷ್ಟು ದೊಡ್ಡ ಜನಸಾಗರ ಸೇರುವ ಮೂಲಕ ಹಾಸನದಲ್ಲಿ ಬದಲಾವಣೆ ತರುತ್ತೇವೆ ಎಂಬ ಸಂದೇಶ ನೀಡಿದ್ದೀರಿ. ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ಆಗಿದೆ.

ರಾಜ್ಯದ ಜನರ ನೋವು, ಅಭಿಪ್ರಾಯವನ್ನು ಆಲಿಸಿ ನಿಮ್ಮ ಪರ ಧ್ವನಿಯಾಗಲು ನಾವು ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ರಾಜ್ಯದ ರೈತರು, ಕಾರ್ಮಿಕರು, ಮಕ್ಕಳು ಯುವಕರು ತಮ್ಮದೇ ಆದ ನೋವು ಅನುಭವಿಸುತ್ತಿದ್ದಾರೆ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 80 ಸೀಟುಗಳು ಬಂದಿದ್ದವು.  ಬಹುಮತ ಬರಲಿಲ್ಲ. ಹೀಗಾಗಿ ಈ ರಾಜ್ಯದ ಆಡಳಿತ ಕೆಟ್ಟ ಬಿಜೆಪಿ ಸರ್ಕಾರದ ಕೈಗೆ ಹೋಗಬಾರದು ಎಂದು ನಾವು ಜಾತ್ಯಾತೀತ ತತ್ವದ ಆಧಾರದ ಮೇಲೆ ಎಲ್ಲಾ ವರ್ಗದವರ ರಕ್ಷಣೆ ಮಾಡಲೆಂದು ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು 5 ವರ್ಷಗಳ ಕಾಲ ಅಧಿಕಾರ ಮಾಡಿ ಎಂದು ಬೆಂಬಲ ನೀಡಿದೆವು. 

ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕರಾಗಿ, ನಾನು ಪಕ್ಷದ ನಾಯಕನಾಗಿ ಕುಮಾರಸ್ವಾಮಿ ಅವರ ಜತೆ ಸರ್ಕಾರ ಮಾಡುವುದಾಗಿ  ರಾಜ್ಯಪಾಲರಿಗೆ ಪತ್ರ ನೀಡಿದೆವು.

ಕುಮಾರಸ್ವಾಮಿ ಅವರ ಮೇಲೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಜವಾಬ್ದಾರಿ ಇತ್ತು. ಬಿಜೆಪಿ ಆಪರೇಷನ್ ಕಮಲ ಮಾಡಿದ ಪರಿಣಾಮ ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ. ಕೆಟ್ಟ ಬಿಜೆಪಿ ಕೈಗೆ ಅಧಿಕಾರ ಹೋಗಬಾರದು ಎಂದು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ನಾವು ತಪ್ಪು ಮಾಡಿದ್ದರೆ, ನಿಮ್ಮ ವಿವೇಚನೆಗೆ ತಕ್ಕಂತೆ ಶಿಕ್ಷೆ ನೀಡಿ, ಅನುಭವಿಸುತ್ತೇವೆ. ನಾಯಕನಾದವನಿಗೆ ಯೋಗಕ್ಕಿಂತ ಯೋಗಕ್ಷೇಮ ಮುಖ್ಯ. ಆಪರೇಶನ್ ಕಮಲದಲ್ಲಿ ನಮ್ಮ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಬಲಿಯಾಗಿ ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ.

ರಾಜ್ಯದಲ್ಲಿ ಈಗ ಅತ್ಯಂತ ಭ್ರಷ್ಟ ಸರ್ಕಾರ ಇದೆ. ಇದು ಕಳಂಕಿತ ಸರ್ಕಾರ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು, ಮಾಡಲಿಲ್ಲ. ಪೊಲೀಸ್, ಇಂಜಿನಿಯರ್, ಸಹಾಯಕ ಪ್ರಾಧ್ಯಾಪಕ ಹುದ್ದೆಯಿಂದ ಹಿಡಿದು ಎಲ್ಲಾ ನೇಮಕಾತಿಯಲ್ಲೂ ಅಕ್ರಮ ಮಾಡಿದರು. ಈ ಸರ್ಕಾರ ಬರಲು ಯಾರು ಕಾರಣ, ಇದನ್ನು ನೀವೇ ಆಲೋಚಿಸಿ.

ನಮ್ಮ ಆಡಳಿತ ನಾವು ಸರಿಯಾಗಿ ನಡೆಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ನಾವು ಕಳೆದ ಚುನಾವಣೆ ಸೋಲು ಒಪ್ಪಿದ್ದೇವೆ. ಈ ಜಿಲ್ಲೆಯಲ್ಲಿ ಒಂದು ಬಿಜೆಪಿ, ಉಳಿದ ಎಲ್ಲರನ್ನೂ ಜೆಡಿಎಸ್ ಪಕ್ಷದಿಂದ ಆರಿಸಿದ್ದೀರಿ.

ಇತ್ತೀಚೆಗೆ ನಿಮ್ಮ ಜಿಲ್ಲೆಯ ನಾಯಕರಾದ ವೈಎಸ್ ವಿ ದತ್ತಾ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇನ್ನು ಇಬ್ಬರು ಶಾಸಕರು ಸಂಪರ್ಕದಲ್ಲಿ ಇದ್ದಾರೆ . ಅವರ ಹೆಸರು ಹೇಳುವುದಿಲ್ಲ. ಪಕ್ಕದ ಜಿಲ್ಲೆಯ ಗುಬ್ಬಿ ಶಾಸಕ ಶ್ರೀನಿವಾಸ್, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ, ಕೋಲಾರದ ಶ್ರೀನಿವಾಸಗೌಡರು, ದಾವಣಗೆರೆಯ ದೇವೇಂದ್ರಪ್ಪ ಸೇರಿದಂತೆ ಹಲವು ನಾಯಕರು ಪಕ್ಷ ಸೇರಿದ್ದಾರೆ. ಇವರು ಸುಮ್ಮನೆ ಕಾಂಗ್ರೆಸ್ ಸೇರಲು ದಡ್ಡರೇ? ಕಳೆದ ಚುನಾವಣೆಯಲ್ಲಿ ಪರಿಷತ್ ಸದಸ್ಯರಾಗಿದ್ದ, ಕೋಲಾರದ ಮನೋಹರ್ ಕೂಡ ಪಕ್ಷ ಸೇರಿದ್ದಾರೆ.

ನೀವು ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಆಶೀರ್ವಾದ ಮಾಡಿದ್ದೀರಿ. ಕುಮಾರಸ್ವಾಮಿ ಅವರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿದ್ದೀರಿ. ಕಾಂಗ್ರೆಸ್ ಬೆಂಬಲದೊಂದಿಗೆ ದೇವೇಗೌಡರು ಪ್ರಧಾನಮಂತ್ರಿ ಆದರು. ನೀವು ಅವರಿಗೆ ಅವಕಾಶ ನೀಡಿದ್ದೀರಿ. ಈಗ ಕಾಂಗ್ರೆಸ್ ಪಕ್ಷ ಹಾಗೂ ಡಿ.ಕೆ ಶಿವಕುಮಾರ್ ನಿಮಗೆ ಕೈ ಮುಗಿದು ಕೇಳುತ್ತಿದ್ದೇನೆ. ನಿಮ್ಮ ಸೇವೆ ಮಾಡಲು, ಅಧಿಕಾರಕ್ಕೆ ಬಂದು ನಿಮ್ಮ ಋಣ ತೀರಿಸಲು ಒಂದು ಅವಕಾಶ ಮಾಡಿ ಕೊಡಿ.

ಕಾಂಗ್ರೆಸ್ ಪಕ್ಷ ಜನರಿಗೆ ಉತ್ತಮವಾದ, ಭ್ರಷ್ಟ ರಹಿತ, ನುಡಿದಂತೆ ನಡೆವ ಆಡಳಿತ ನೀಡುತ್ತದೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ. ರೈತರ ಬದುಕು ಹಸನ ಮಾಡುತ್ತೇವೆ. ಇದು ನಮ್ಮ ಸಂಕಲ್ಪ. ಅದಕ್ಕಾಗಿ ನಮಗೆ ಶಕ್ತಿ ನೀಡಿ ಎಂದು ಕೇಳುತ್ತಿದ್ದೇನೆ. ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ರೈತರಿಗೆ ಅನುಕೂಲ ಮಾಡಿಕೊಡಲು ಬೆಂಬಲ ನೀಡಿದೆವು. ಆದರೆ ಅಧಿಕಾರ ಉಳಿಸಿಕೊಳ್ಳಲು ಆಗಲಿಲ್ಲ ಯಾಕೆ ಎಂದು ನೀವು ಅವರನ್ನು ಕೇಳಬೇಕು.

ಹಾಸನದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಗೆ ಕೈ ಮುಗಿದು ಕೇಳುತ್ತಿದ್ದೇನೆ, ಹೊಸ ಬದಲಾವಣೆ ನೀಡಲು ನೀವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ. ಎಸ್.ಎಂ ಕೃಷ್ಣ ಅವರ ನಾಯಕತ್ವದಲ್ಲಿ ನೀವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೀರಿ. ಅದೇ ರೀತಿ ಈ ಬಾರಿ ನನ್ನ ಹಾಗೂ ಸಿದ್ದರಾಮಯ್ಯ ಅವರ ನಾಯಕತ್ವದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು. 

ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಅವರ ನಾಯಕತ್ವಕ್ಕೆ ಶಕ್ತಿ ನೀಡಬೇಕು.

ರೈತರ ಬದುಕು ಹಸನು ಮಾಡಲು, ಕೃಷ್ಣ, ಮಹದಾಯಿ, ಮೇಕೆದಾಟು ಸೇರಿದಂತೆ ಎಲ್ಲ ನೀರಾವರಿ ಯೋಜನೆ ಪೂರ್ಣಗೊಳಿಸಲು ಐದು ವರ್ಷಗಳಲ್ಲಿ 2 ಲಕ್ಷ ಕೋಟಿ ರೂ. ಮೀಸಲಿಟ್ಟು, ನಿಮ್ಮ ಬದುಕಿನಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿದ್ದೇವೆ. ಇದಲ್ಲದೆ ಪ್ರಜಾಧ್ವನಿ ಯಾತ್ರೆ ಆರಂಭದ ಸಮಯದಲ್ಲಿ ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರೆಂಟಿ ಯೋಜನೆ ಗೃಹ ಜ್ಯೋತಿ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತ ನೀಡಲು ಘೋಷಣೆ ಮಾಡಿದ್ದೇವೆ. ಅಂದರೆ ತಿಂಗಳಿಗೆ 1500 ರಂತೆ ವರ್ಷಕ್ಕೆ 18 ಸಾವಿರ ಉಳಿತಾಯವಾಗುತ್ತದೆ. ಇನ್ನು ಮಹಿಳೆಯರ ಕಷ್ಟ ಅರಿತು ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24 ಸಾವಿರ ರೂ ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಪಕ್ಷದ ಎರಡನೇ ಗ್ಯಾರೆಂಟಿ ಯೋಜನೆ ಆಗಿ ಘೋಷಣೆ ಮಾಡಿದ್ದೇವೆ. ಇಂದಿರಾ ಗಾಂಧಿ ಅವರ ಮೊಮ್ಮಗಳು, ರಾಜೀವ್ ಗಾಂಧಿ ಹಾಗೂ 10 ವರ್ಷ ಪ್ರಧಾನ ಮಂತ್ರಿ ಹುದ್ದೆ ತ್ಯಾಗ ಮಾಡಿದ ಸೋನಿಯಾ ಗಾಂಧಿ ಅವರ ಮಗಳು ಪ್ರಿಯಾಂಕಾ ಗಾಂಧಿ ಅವರು ಈ ಯೋಜನೆ ಘೋಷಣೆ ಮಾಡಿದರು. ನಮ್ಮ ಪಕ್ಷದ ಎಲ್ಲಾ ನಾಯಕರು ಸೇರಿ ಚರ್ಚೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ.

ಹಿಂದೆ ಸಿದ್ದರಾಮಯ್ಯ ಅವರು ನಿಮಗೆ ಉಚಿತವಾಗಿ ಅಕ್ಕಿ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. ನಾವು ಅಧಿಕಾರಕ್ಕೆ ಬಂದ ಮೊದಲ ದಿನ ಸಂಪುಟ ಸಭೆ ಮಾಡಿ 5 ಕೆ.ಜಿ ಅಕ್ಕಿ ಬಸವಣ್ಣ ಹುಟ್ಟಿದ ದಿನ ಅನ್ನಭಾಗ್ಯ ಯೋಜನೆ ಜಾರಿ ಮಾಡಿದೆವು. ಮುಂದಿನ ಬಾರಿ 10 ಕೆ.ಜಿ ಅಕ್ಕಿ ನೀಡುವ ಭರವಸೆ ನೀಡಿದ್ದೇವೆ. ಇದು ಪಕ್ಷದ ಮೂರನೇ ಗ್ಯಾರೆಂಟಿ ಯೋಜನೆ ಆಗಿದೆ. 

ಈಗ ಬಿಜೆಪಿ ಅವರು ನಾವು ಈ ಕಾರ್ಯಕ್ರಮ ನೀಡುತ್ತೇವೆ ಎಂದು ಜಾಹೀರಾತು ನೀಡುತ್ತಿದ್ದಾರೆ. ನೀವು ಮನೆ ಮನೆಗೆ ಹೋಗಿ ಇದು ಕಾಂಗ್ರೆಸ್ ಪಕ್ಷದ ಯೋಜನೆ ನಾವು ನುಡಿದಂತೆ ನಡೆಯುತ್ತೇವೆ ಎಂದು ಜನರಿಗೆ ಸಂದೇಶ ಮುಟ್ಟಿಸಬೇಕು. ಈ ಜಿಲ್ಲೆಯಲ್ಲಿ 7 ಕ್ಕೆ 7 ಸೀಟು ಗೆಲ್ಲಿಸಿ ನಮ್ಮನ್ನು ವಿಧಾನಸೌಧದ ಮೂರನೇ ಮಹಡಿಗೆ ಕೂರಿಸುವ ಜವಾಬ್ದಾರಿ ನಿಮ್ಮದು.

ನಾವು ಬಿಜೆಪಿಯ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಗೆ ಮತ್ತೆ ಅವಕಾಶ ಬೇಡ, ಜನತಾ ದಳಕ್ಕೆ ಬೆಂಬಲ ಸಾಕು. ನಮಗೆ ಒಂದು ಅವಕಾಶ ಮಾಡಿಕೊಡಿ. ನಾವು ಎಲ್ಲರಿಗೂ ಅಧಿಕಾರ ಹಂಚುತ್ತೇವೆ. ಕಾಂಗ್ರೆಸ್ ಪಕ್ಷ ಇರುವುದೇ ಜನರಿಗಾಗಿ. ಜಿಲ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ವಿವಿಧ ಘಟಕಗಳ ಬೆಂಬಲದಲ್ಲಿ ಈ ಐತಿಹಾಸಿಕ ಕಾರ್ಯಕ್ರಮ ಕೊಟ್ಟಿದ್ದೀರಿ ನಿಮಗೆ ಧನ್ಯವಾದಗಳು.

ನನಗೆ ಹೊಳೆನರಸೀಪುರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಕಾಂಗ್ರೆಸ್ 135ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ.
[21/01, 7:01 PM] Kpcc official: *ಅಂಗನವಾಡಿ ಕಾರ್ಯಕರ್ತೆಯರ ಹೋರಾಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರ ಮಾತುಗಳು:*

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆ ಇಂದು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ನಿರಂತರ ಹೋರಾಟದ ಪರಿಣಾಮ ಅಂಗನವಾಡಿ ಕಾರ್ಯಕರ್ತೆಯರು ಇಂದು ತಿಂಗಳಿಗೆ 11 ಸಾವಿರ ವೇತನ ಪಡೆಯುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರ್ಕಾರದಲ್ಲಿ 1 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಮಕ್ಕಳ ಪೋಷಣೆ, ಗರ್ಭಿಣಿಯರಿಗೆ ಪೋಷಕಾಂಶ ಆಹಾರ ತಯಾರು ಮಾಡುತ್ತಾ ಕೆಲಸ ಮಾಡುತ್ತಿದ್ದಾರೆ. ಮಕ್ಕಳು ಪ್ರಾಥಮಿಕ ಶಿಕ್ಷಣ ಪಡೆಯುವ ಮುನ್ನ ಅವರನ್ನು ನೋಡಿಕೊಳ್ಳುವ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರದ್ದಾಗಿದೆ. 

ನಿಮ್ಮ ಹೋರಾಟ ನ್ಯಾಯಯುತವಾಗಿದೆ. ನಿಮಗೆ ಸಿಗಬೇಕಾದ ಸೌಕರ್ಯ ಆಗ್ರಹಿಸಿ ಹೋರಾಟ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ನಿಮ್ಮ ಬೇಡಿಕೆ ಈಡೇರಿಸುವಂತೆ ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ.  ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚಿನ ವೇತನ ನೀಡಲಾಗುತ್ತಿದೆ. ಗೋವಾ ಪುದುಚೇರಿ ರಾಜ್ಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು    ಶಾಶ್ವತ ನೌಕರರನ್ನಾಗಿ ಮಾಡಲಾಗಿದೆ ಎಂದು ನೀವು ಹೇಳುತ್ತಿದ್ದೀರಿ. ಈ ಸಂದರ್ಭದಲ್ಲಿ ನಿಮ್ಮ ಹುದ್ದೆ ಖಾಯಂ ಹಾಗೂ ನೀವು ಸಂಸಾರ ಮಾಡಲು ನಿಮಗೆ ಅಗತ್ಯವಿರುವಷ್ಟು ವೇತನ, ಪಿಂಚನೆ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸುತ್ತೇನೆ. ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಈ ಬೇಡಿಕೆಗಳ ಜತೆಗೆ ಅಂಗನವಾಡಿ ಮೂಲಸೌಕರ್ಯಕ್ಕೆ ಸರ್ಕಾರ ಆದ್ಯತೆ ನೀಡಬೇಕು ಎಂದು ನೀವು ಸರ್ಕಾರಕ್ಕೆ ಆಗ್ರಹಿಸಬೇಕು. ಅಲ್ಲಿಗೆ ಸಣ್ಣ ಮಕ್ಕಳು ಬರುತ್ತಾರೆ. ಅವರ ಸುರಕ್ಷತೆ ಹಾಗೂ ಶೌಚಾಲಯದಂತಹ ಸೌಕರ್ಯ ನೀಡಬೇಕು. ಆಗ ಮಕ್ಕಳು ಬೆಳೆಯುವ ವಾತಾವರಣ ನಿರ್ಮಾಣವಾಗುತ್ತದೆ. 

ನಿಮ್ಮ ಹೋರಾಟಕ್ಕೆ ನಾನು ವೈಯಕ್ತಿಕವಾಗಿ ಹಾಗೂ ನಮ್ಮ ಪಕ್ಷ ನಿಮ್ಮ ಬೆಂಬಲಕ್ಕೆ ನಿಲ್ಲಲಿದೆ. ನಿಮ್ಮ ಹೋರಾಟಕ್ಕೆ ಯಶಸ್ಸು ಸಿಗಲಿ ಎಂದು ಆಶಿಸುತ್ತೇನೆ.
[21/01, 7:41 PM] Kpcc official: *ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ವಕ್ತಾರರಾದ ರಮೇಶ್ ಬಾಬು ಹಾಗೂ ಶಂಕರ್ ಗುಹಾ ಅವರ ಜಂಟಿ ಪತ್ರಿಕಾಗೋಷ್ಠಿ ಮುಖ್ಯಾಂಶಗಳು*

ಗುರು ರಾಘವೇಂದ್ರ ಬ್ಯಾಂಕ್ ಪ್ರತಿಷ್ಠಿತ ಬ್ಯಾಂಕ್ ಎಂದು ನಂಬಿ ಜನ ತಮ್ಮ ಸಂಪಾದನೆ ಹಣವನ್ನು ಹಾಕಿದ್ದರು. ಆರ್ ಬಿಐ ಕೂಡ 11 ವರ್ಷಗಳ ಕಾಲ ಈ ಬ್ಯಾಂಕ್ ಅತ್ಯುತ್ತಮ ಬ್ಯಾಂಕ್ ಎಂದು ಪ್ರಶಸ್ತಿ ನೀಡಿತ್ತು.

ಇದ್ದಕ್ಕಿದ್ದಂತೆ 2017ರಲ್ಲಿ ಇವರ ಬ್ಯಾಲೆನ್ಸ್ ನೋಡಿದಾಗ 0.5% ಎನ್ ಪಿಎ ಇತ್ತು. 2019ರಲ್ಲಿ 94.56% ಎನ್ ಪಿಎ ಆಗಿತ್ತು. ಕೇವಲ 2 ವರ್ಷಗಳಲ್ಲಿ ಇಷ್ಟು ನಷ್ಟ ಹೇಗೆ ಎಂದು ಕೇಳಿದಾಗ ಆರ್ ಬಿಐ ನವರು 2013-14ರಿಂದ ಆಡಿಟ್ ಮಾಡಬೇಕು ಎಂದು ಹೇಳಿದ್ದಾರೆ. ಪ್ರತಿ ವರ್ಷ ಆಡಿಟ್ ಮಾಡುತ್ತಿದ್ದಾರೆ. ನಾವು ವಿಧಾನ ಪರಿಷತ್ ನಲ್ಲಿ ಮೊದಲು ಈ ವಿಚಾರ ಪ್ರಸ್ತಾಪ ಮಾಡಿ ಆಗ್ರಹಿಸಿದೆವೆ. ಶಂಕರ್ ಗುಹಾ ಅವರು ಬೀದಿಗಳಲ್ಲಿ ಈ ವಿಚಾರವಾಗಿ ಹೋರಾಟ ಮಾಡಿದ್ದಾರೆ.

ಮಂತ್ರಿಗಳು ಸದನದಲ್ಲಿ ಬ್ಯಾಂಕ್ ನ ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಸೀಜ್ ಮಾಡಿದ್ದು, ಅದು ಸಿಐಡಿ ಬಳಿ ಇದೆ. ನಾವು ಹೂಡಿಕೆದಾರರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದ್ದರು. ಕಳೆದ ಸದನದಲ್ಲಿ ನಾವು ಬಾವಿಗಿಳಿದು ಹೋರಾಟ ಮಾಡಿ ಸಿಬಿಐ ತನಿಖೆಗೆ ಆಗ್ರಹಿಸಿದ ನಂತರ ಜ.3,4,5 ಸಭೆ ಮಾಡಿ ತೀರ್ಮಾನ ಮಾಡುತ್ತೇವೆ. ಇಲ್ಲದಿದ್ದರೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಸಿಬಿಐ ತನಿಖೆಗೆ ನೀಡುವುದಾಗಿ ಹೇಳಿದ್ದರು.

ಈ ಸಭೆ ಕಳೆದ ಮಂಗಳವಾರ ಸಚಿವರು, ಶಾಸಕರು, ಸೌಮ್ಯರೆಡ್ಡಿ ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚೆ ನಡೆಯಿತು. ಈ ಸಮಯದಲ್ಲಿ ಈ ಬ್ಯಾಂಕ್ ಮುಚ್ಚಿ 3 ವರ್ಷವಾಗಿದೆ ಇಲ್ಲಿಯವರೆಗೆ ಎಷ್ಟು ಪ್ರಗತಿ ಆಗಿದೆ ಎಂದು ಕೇಳಿದಾಗ, ಇದುವರೆಗೂ ಒಂದೂ ರೂಪಾಯಿ ವಸೂಲಿ ಆಗಿಲ್ಲ. ಆದರೆ ನಷ್ಟ 1294 ಕೋಟಿ ಆಗಿದೆ. 

ಪ್ರತಿ ಬಾರಿ 1000 ಕೋಟಿ ಆಸ್ತಿ ಜಪ್ತಿ ಎನ್ನುತ್ತೀರಿ. ಅದನ್ನು ಹರಾಜಿಗೆ ಹಾಕಿ ಠೇವಣಿದಾರರ ಹಣ ನೀಡಿ ಎಂದು ಹೇಳಿದೆ. ವಿಜಯ ಎಂಬ ಹಿರಿಯ ಮಹಿಳೆ ತಮ್ಮ ಗಂಡನಿಗೆ ಮಿದುಳು ಸಮಸ್ಯೆ ಎದುರಾಗಿ ಇದುವರೆಗೂ 30 ಲಕ್ಷ ವೆಚ್ಚವಾಗಿದೆ. ಆಸ್ಪತ್ರೆಯವರಿಗೆ ಇನ್ನೂ 5-6 ಲಕ್ಷ ಬಾಕಿ ಇದೆ. ಬೇರೆ ಆಸ್ಪತ್ರೆ ಸೇರಿಸಲು ಹಣ ಇಲ್ಲ. ಇಲ್ಲಿ ಇಟ್ಟಿರುವ ಹಣ ಬಂದರೆ ದಾನ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಇಂತಹ ಅನೇಕ ಜನ ಸಂಕಷ್ಟದಲ್ಲಿ ಇದ್ದಾರೆ. 

ಇಲ್ಲಿ ಮೊದಲ ತಪ್ಪಿತಸ್ಥರು ಆರ್ಬಿಐ. ಅವರು ಹೇಳಿದಂತೆ ಬ್ಯಾಂಕ್ ನಡೆಯುತ್ತಿದೆ. ಪಿಎಂಸಿ ಬ್ಯಾಂಕ್ 8 ಸಾವಿರ ಕೋಟಿ ನಷ್ಟವಾದರೂ ಸರ್ಕಾರ ಎಷ್ಟು ಬೇಗ ಸಮಸ್ಯೆ ಬಗೆಹರಿಸಿದೆ. ಆದರೆ ಇಲ್ಲಿ 1300 ಕೋಟಿ ನಷ್ಟವಾಗಿದ್ದು, ಇದನ್ನು ಬಗೆಹರಿಸಲು ಮುಂದಾಗಿ ಎಂದು ವಿವರಿಸಿದೆವು. ಇದುವರೆಗೂ ಅನೇಕ ಮಂದಿ ಸತ್ತಿದ್ದು, ಇನ್ನು ಎಷ್ಟು ಮಂದಿ ಸಾಯುತ್ತಾರೋ ಗೊತ್ತಿಲ್ಲ. 

ಇಲ್ಲಿ ಬಹುತೇಕ ಬೋಗಸ್ ಲೋನ್ ನೀಡಲಾಗಿದೆ. ಇವರು ಯಾರು ಎಂದು ಸರ್ಕಾರಕ್ಕೂ ಗೊತ್ತಿದೆ. ವರದಕ್ಷಿಣೆ ಕಿರುಕುಳ ದೂರು ಬಂದರೆ ಇಡೀ ಮನೆಯವರನ್ನು ಪೊಲೀಸರು ಕರೆದೊಯ್ಯುತ್ತಾರೆ. ಆದರೆ ಇಲ್ಲಿ ಸಾಲ ಮಾಡಿರುವವರ ಮನೆಯವರು ಹಾಗೂ ಅವರ ಆಸ್ತಿ ಯಾಕೆ ಮುಟ್ಟುಗೋಲು ಹಾಕಿಕೊಳ್ಳುವುದಿಲ್ಲ?

ನಾವು ಹೋರಾಟ ಮಾಡಿದ್ದಕ್ಕೆ ಸಿಬಿಐ ತನಿಖೆಗೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ನಿನ್ನೆಯ ಸಂಪುಟ ಸಭೆಯಲ್ಲಿ ಪ್ರಸ್ತಾಪ ಆಗಿಲ್ಲ. ಇನ್ನು ಮುಂದಿನ ಸಭೆಯಲ್ಲಿ ನಿರ್ಣಯವಾಗುವುದೆ ಎಂದು ಕಾಯುತ್ತಿದ್ದೇವೆ. 

ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಸರಿಯಾದ ತನಿಖೆ ಮಾಡಿದರೆ ಸರ್ಕಾರ ಯಾರ ರಕ್ಷಣೆ ಮಾಡುತ್ತಿದೆ ಎಂದು ಗೊತ್ತಾಗುತ್ತದೆ. ಇಲ್ಲಿ ಕಾನೂನಾತ್ಮಕವಾಗಿ ಏನೂ ನಡೆದಿಲ್ಲ. ಇದರಲ್ಲಿ ದೊಡ್ಡವರ ಪಾತ್ರ ಇದೆ. ಸಿಬಿಐ ತನಿಖೆಗೆ ನೀಡಿದರೆ ನಾವು ನಮ್ಮ ಬಳಿ ಇರುವ ಸಾಕ್ಷಿ ನೀಡುತ್ತೇವೆ.

*ಶಂಕರ್ ಗುಹಾ:*

ಇಲ್ಲಿ ಫಲಾನುಭವಿಗಳ ಬಗ್ಗೆ ನೋಡುವುದಾದರೆ ನರಸಿಂಹ ಎಂಬುವವರಿಗೆ ಒಂದು ಬಾರಿ 51 ಕೋಟಿ, ಮತ್ತೊಂದು ಬಾರಿ 52 ಕೋಟಿ ಸಾಲ ನೀಡಲಾಗಿದೆ. ಇವರಿಗೆ ಬ್ಯಾಂಕ್ ಖಾತೆಯಿಂದ ಅವರ ಖಾತೆಗೆ ಹೋಗಿರುವ ಹಣ ಕೇವಲ 8-10 ಕೋಟಿ ಮಾತ್ರ. ಮತ್ತೊಂದು ಪ್ರಕರಣದಲ್ಲಿ ಎಮೆಸ್ಕೆ ಷೆಲ್ಟರ್ಸ್ ಎಂಬ ಸಂಸ್ಥೆಯ ಸುರೇಶ್ ಕುಮಾರ್ ಎಂಬುವವರಿಗೆ 150 ಕೋಟಿ ಸಾಲ ನೀಡಲಾಗಿದ್ದು, ಇವರಿಗೆ ಅಧಿಕೃತವಾಗಿ ವರ್ಗಾವಣೆ ಆಗಿರುವುದು ಕೇವಲ 10 ಕೋಟಿ ಮಾತ್ರ. ಉಳಿದ ಹಣ ಯಾರು ಬಳಸಿಕೊಂಡಿದ್ದಾರೆ? ಇವರು ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ  ಎಂದು ತನಿಖಾ ಸಂಸ್ಥೆಗಳಿಂದ ತಿಳಿಯಬೇಕು. ಸಿನಿಮಾ ನಿರ್ದೇಶಕರು 300 ಕೋಟಿ ಸಾಲ ಮಾಡಿದ್ದು, ಬಡ್ಡಿ ಎಲ್ಲಾ ಬೆಳೆದು 800 ಕೋಟಿ ಆಗಿದ್ದೆ. ಬಿಜೆಪಿ ಎಂಎಲ್ಸಿ 12 ಕೋಟಿ ಸಾಲ ಇದೆ. ಇವರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇವರೆಲ್ಲರ ಪ್ರಕರಣ ಇಡಿಗೆ ರವಾನೆಯಾಗಿದೆ.

ಈ ಪ್ರಕರಣದಲ್ಲಿ ಜನ ಸಂಸದರ ಬಳಿ ಹೋದರು. ಅವರು ಆರಂಭದಲ್ಲಿ ಎಲ್ಲಾ ಸರಿ ಮಾಡುತ್ತೇವೆ ಎಂದರು. ಆದರೆ ನಂತರದ ಆರು ತಿಂಗಳು ಕಳ್ಳರೇ ಆ ಬ್ಯಾಂಕ್ ಆಡಳಿತ ನಡೆಸಿದ್ದಾರೆ. ಈ ವಿಚಾರದಲ್ಲಿ ಸಂಸದರು ಯಾವುದೇ ರಾಜ್ಯ ನಾಯಕರನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಮಣ್ಯ ಹೊರತಾಗಿ ಬೇರೆ ಯಾವ ನಾಯಕರು ಈ ಬಗ್ಗೆ ಮಾತನಾಡಲಿಲ್ಲ. ಮುಖ್ಯಮಂತ್ರಿಗಳು ಆರ್ಬಿಐ ಅಥವಾ ಕೇಂದ್ರ ಹಣಕಾಸು ಮಂತ್ರಿ ಬಳಿ ಮಾತನಾಡುವುದಕ್ಕೆ ಹಾಗೂ ಸಂಸದರು ಮಾತನಾಡುವುದಕ್ಕೆ ಬಹಳ ವ್ಯತ್ಯಸವಿದೆ. ಈ ವಿಚಾರದಲ್ಲಿ ಸಂಸದರು ವಿಫಲರಾಗಿದ್ದಾರೆ. ನಾನು ಹಲವು ಬಾರಿ ಸಿಬಿಐಗೆ ವಿಚಾರಣೆ ನೀಡಿ ಎಂದು ಮನವಿ ಮಾಡಿದರೂ ಇದುವರೆಗೂ ಪರಿಗಣಿಸಲಿಲ್ಲ. ಆದರೆ ಈಗ ಮುಂದಾಗಿರುವುದು ರಾಜಕೀಯ ಪ್ರೇರಣೆಯೋ, ಅಥವಾ ಇಲ್ಲಿ ಏನೂ ಸಿಗಲ್ಲ ಬ ಖಚಿತತೆ ಸಿಕ್ಕಿದೆಯೇ ಗೊತ್ತಿಲ್ಲ. 

ವಸಿಷ್ಠ ಹಗರಣ ಕೂಡ ಇದರ ಜತೆಗೆ ಬಂದರು 2013-14, 2014-15ರ ಆಡಿಟ್ ಆಗಿತ್ತು. ಅಲ್ಲಿ 91 ಕೋಟಿ ಮೋಸ ಆಗಿದೆ ಎಂದು ತಿಳಿಯಿತು. ನಂತರ ಆಡಿಟ್ ನಡೆಯಲಿಲ್ಲ. ವಸಿಷ್ಠ ಸಂಸ್ಥೆ ಹಾಗೂ ಅಲ್ಲಿನ ಶಾಸಕರಿಗೆ ಉತ್ತಮ ಸಂಬಂಧವಿತ್ತು. 2021ರ ಏಪ್ರಿಲ್ ನಲ್ಲಿ ಹಣ ಬಾರದೆ ಠೇವಣಿದಾರರು ಆಕ್ರೋಶ ವ್ಯಕ್ತಪಡಿಸಿದಾಗ ಆ ಸಭೆಯಲ್ಲಿ ಶಾಸಕರು ಭಾಗಿಯಾಗಿ ಇದು ರಾಘವೇಂದ್ರ ಬ್ಯಾಂಕ್ ನಂತೆ ಆಗುವುದಿಲ್ಲ ಎಲ್ಲರಿಗೂ ಹಣ ಬರಲಿದೆ ಎಂದರು. ಎರಡು ವರ್ಷ ಕಳೆದರೂ ಇದುವರೆಗೂ ಯಾರಿಗೂ ಹಣ ಬಂದಿಲ್ಲ.

ಇನ್ನು ಸಚಿವರು ಸದನದಲ್ಲಿ 28 ಕೋಟಿ ಹಣ ಪಾವತಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಯಾರಿಗೆ ಈ ಹಣ ನೀಡಲಾಗಿದೆ ಎಂದು ಪಟ್ಟಿ ನೀಡಿದರೆ ನಾವು ಅದನ್ನು ಪರಿಶೀಲನೆ ಮಾಡುತ್ತೇವೆ. ಈ ಹಣ ಯಾರಿಗೂ ಸಿಕ್ಕಿಲ್ಲ. ಇದೆಲ್ಲವೂ ಶುದ್ಧ ಸುಳ್ಳು.

ಯಾರಿಗೆ ಎಷ್ಟು ನೀಡಿದ್ದಾರೆ, ಸಮಾನ ಹಂಚಿಕೆ ಆಗಿದೆಯಾ ಎಂಬ ಮಾಹಿತಿ ಇಲ್ಲ. ಸಾಲ ತೆಗೆದುಕೊಂಡಿರುವ ದಾಖಲೆ ಇದೆ, ಅದಕ್ಕೆ ನೀಡಿರುವ ಆಸ್ತಿ ದಾಖಲೆ ಇದೆ. ಆದರೆ ಸಾಲದ ಹಣ ವರ್ಗಾವಣೆ ಆಗಿರುವ ದಾಖಲೆ ಇಲ್ಲವಾಗಿದೆ.

ಕಣ್ವ ಹಗರಣ 2019ರಲ್ಲಿ ಬೆಳಕಿಗೆ ಬಂದಿದ್ದು, ಇದುವರೆಗೂ ಸುಮಾರು 150 ಮಂದಿ ಸತ್ತಿದ್ದಾರೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ.

*ರಮೇಶ್ ಬಾಬು:*

ಬ್ಯಾಂಕ್ ಆಡಳಿತಾಧಿಕಾರಿ ಮಾಹಿತಿ ಪ್ರಕಾರ 2000 ಕೋಟಿ ರೂಪಾಯಿ ಮಾಹಿತಿ ನೀಡಿದ್ದೇವೆ. ಕಾಂಗ್ರೆಸ್ ಪಕ್ಷ ಠೇವಣಿದಾರರಿಗೆ ನ್ಯಾಯ ಒದಗಿಸಲು ಬದ್ಧವಾಗಿದೆ. ಇದಕ್ಕಾಗಿ ನಮ್ಮ ನಾಯಕರು ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಇದು ಚುನಾವಣೆ ಪ್ರಕ್ರಿಯೆಗೆ ಸೀಮಿತವಾಗಿಲ್ಲ. 

ಇಂತಹ ಹಗರಣ ಬಯಲು ಮಾಡಿ ಸತ್ಯಾಂಶ ಹೊರ ತರುವುದು ಕಾಂಗ್ರೆಸ್ ಉದ್ದೇಶ. ಸಚಿವರು ಈಗ ಸಿಬಿಐ ತನಿಖೆಗೆ ನೀಡಲು ನಿರ್ಧರಿಸಿದ್ದು, ನಾವು ಸ್ವಾಗತಿಸುತ್ತೇವೆ. ಆದರೆ ಈ ವಿಚಾರ ಇನ್ನು ಸಂಪುಟ ಸಭೆ ಮುಂದೆ ಬರಬೇಕಿದೆ. 

ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರ ಸಂಕಟ ಜೊತೆ ಚರ್ಚೆ ನಡೆಸಿ ಕ್ಲೇಮ್ ಮಾಡಬೇಕೆ ಹೊರತು ಈ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಲಾಗುತ್ತಿದೆ. ಹೀಗಾಗಿ ಪಕ್ಷದ ನಾಯಕರಾದ ಯುಬಿ  ವೆಂಕಟೇಶ್, ಶಾಸಕಿ ಸೌಮ್ಯ ರೆಡ್ಡಿ ಹಾಗೂ ಶಂಕರ್ ಗುಹಾ ಅವರು ಹೋರಾಟ ಮುಂದುವರಿಸಿದ್ದಾರೆ.

ಪ್ರಕರಣವನ್ನು ಕೂಡಲೇ ಸಿಪಿಐ ತನಿಖೆಗೆ ನೀಡಿ ಠೇವಣಿದಾರರಿಗೆ ನ್ಯಾಯ ಒದಗಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಅಗ್ರಹ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಹಾಗೂ ಠೇವಣಿ ದಾರರಿಗೆ ತಮ್ಮ ಹಣ ವಾಪಸ್ ಸಿಗುವಂತೆ ಮಾಡಬೇಕು. ಇದು ಕಾಂಗ್ರೆಸ್ ಆಗ್ರಹ.
[21/01, 9:40 PM] Kpcc official: ಚಿಕ್ಕಮಗಳೂರಿನಲ್ಲಿ ಶನಿವಾರ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಮಾಜಿ ಸಚಿವೆ ಡಿ ಕೆ ತಾರಾದೇವಿ, ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ, ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ , ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್, ಡಿಸಿಸಿ ಅಧ್ಯಕ್ಷ ಡಾ. ಅನ್ಸುಮಾನ್ ಮತ್ತಿತರರು ಭಾಗವಹಿಸಿದ್ದರು.
[22/01, 11:13 AM] Kpcc official: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿಗೆ ನೆರವಾಗುವಂತೆ OPS ಹೋರಾಟಗಾರರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಉಡುಪಿಯ ಪ್ರವಾಸಿ ಮಂದಿರದಲ್ಲಿ ಭಾನುವಾರ ಮನವಿ ಸಲ್ಲಿಸಿದರು.
[22/01, 11:15 AM] Kpcc official: https://twitter.com/rssurjewala/status/1617034785389686789?s=48&t=D-8n-6llQiDtW-doyN4hsw

@BSBommai ಅವರೇ ನಿಮ್ಮ ಸರ್ಕಾರದ ಮನೆಬಾಗಿಲಿಗೆ ಸರ್ಕಾರದ ಸವಲತ್ತು ತಲುಪಿಸುವ ಯೋಜನೆ ಪ್ರಚಾರಕ್ಕೆ ಮಾತ್ರ ಸೀಮಿತವಾ?

COVID ಸಮಯದಲ್ಲಿ ಜನಸಾಮಾನ್ಯರ ಹೆಣದ ಮೇಲೆ ಹಣ ಹೊಡೆದ ಭ್ರಷ್ಟ@BJP4Karnataka ಸರ್ಕಾರ ಹಿರಿಯ ನಾಗರಿಕರ ಮಾಶಾಸನ ಸ್ಥಗಿತಗೊಳಿಸಿ ಕನಿಷ್ಟ ಮಾನವೀಯತೆಯು ಇಲ್ಲ ಎಂಬುದನ್ನು ನಿರೂಪಿಸಿದೆ.
ಬಿಜೆಪಿ ಚಿತ್ತ ಕೊಳ್ಳೆಹೊಡೆಯುವತ್ತ
[22/01, 12:25 PM] Kpcc official: ಪುತ್ತೂರಿನಲ್ಲಿ ಭಾನುವಾರ ನಡೆದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ವರ್ಧಂತ್ಯೋತ್ಸವ ಹಾಗೂ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಪಟ್ಟಾಭಿಷೇಕದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು ಭಾಗವಹಿಸಿದ್ದರು.
[22/01, 2:46 PM] Kpcc official: *ಜ.23ಕ್ಕೆ ಬೆಂಗಳೂರಿನ 300ಕ್ಕೂ ಹೆಚ್ಚು ಕಡೆಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ*

*ಬೆಂಗಳೂರು:*

'ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಜ.23, ಸೋಮವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ನಗರದ 300ಕ್ಕೂ ಹೆಚ್ಚು ಕಡೆಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಎಂಬ ಮೌನ ಪ್ರತಿಭಟನೆ ಮಾಡಲಾಗುವುದು' ಎಂದು ಕಾಂಗ್ರೆಸ್ ಶಾಸಕರಾದ ಎನ್.ಎ ಹ್ಯಾರಿಸ್ ಅವರು ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್ ಅವರ ಜತೆ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹ್ಯಾರಿಸ್ ಅವರು, ಗಂಟೆವರೆಗೆ 51 ಮೆಟ್ರೋ ನಿಲ್ದಾಣಗಳಲ್ಲಿ, 26 ಫ್ಲೈ ಓವರ್, 200 ಟ್ರಾಫಿಕ್ ಸಿಗ್ನಲ್ ಗಳಲ್ಲಿ ನಾವು ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ನಾವು ಗಲಾಟೆ ಮಾಡಿ, ಸಂಚಾರಕ್ಕೆ ಅಡ್ಡಿ ಮಾಡಿ ಹೋರಾಟ ಮಾಡುವುದಿಲ್ಲ. ನಮ್ಮ ಕಾರ್ಯಕರ್ತರು ಪ್ಲೆಕಾರ್ಡ್ ಹಿಡಿದು ಹೋರಾಟ ಮಾಡುತ್ತಾರೆ’ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು.    

‘ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ಮಟ್ಟಿಗೆ ಹರಡಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಬೆಂಗಳೂರು ಉಳಿಸುತ್ತಾ ರಾಜ್ಯವನ್ನು ಉಳಿಸಿ ಎಂಬ ಸಂದೇಶ ನೀಡುತ್ತೇವೆ. ನಾಳೆ ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಮಾಡಿ ನಂತರ ರಾಜ್ಯಕ್ಕೆ ವಿಸ್ತರಿಸುತ್ತೇವೆ. 

ರಾಜ್ಯದಲ್ಲಿ 40% ಕಮಿಷನ್ ಹಾಗೂ ಲಂಚಾವತಾರ ಹೆಚ್ಚಾಗಿದ್ದು, ಇದಕ್ಕೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ವಿಚಾರವಾಗಿ ಸರ್ಕಾರ ಯಾವುದೇ ಉತ್ತರ ನೀಡುತ್ತಿಲ್ಲ. ಮಂತ್ರಿಗಳು ಉತ್ತರ ನೀಡುತ್ತಿಲ್ಲ. ಭ್ರಷ್ಟಾಚಾರ ಆರೋಪ ಕೇಳಿಬಂದ ಮಂತ್ರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಭ್ರಷ್ಟಾಚಾರ ಆರೋಪ ಬಂದಾಗ ಅಂತಹವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಆದರೆ ಈ ಸರ್ಕಾರದಲ್ಲಿ ಎಷ್ಟೇ ಭ್ರಷ್ಟಾಚಾರದ ಆರೋಪ ಬಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ, ಇಡೀ ಸರ್ಕಾರವೇ ಇದರಲ್ಲಿ ಭಾಗಿಯಾಗಿದೆಯೇ ಎಂಬ ಅನುಮಾನ ಮೂಡುತ್ತದೆ. 

ವಿರೋಧ ಪಕ್ಷವಾಗಿ ಇದನ್ನೆಲ್ಲ ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ವಿರೋಧ ಪಕ್ಷವಾಗಿ ನಗರ, ರಾಜ್ಯ ಹಾಗೂ ಜನರನ್ನು ರಕ್ಷಣೆ ಮಾಡಿ ಅವರ ಕೆಲಸ ಮಾಡಿಸಿಕೊಡುವುದು ನಮ್ಮ ಜವಾಬ್ದಾರಿ. ರಾಜ್ಯದಲ್ಲಿನ ಭ್ರಷ್ಟಾಚಾರ ವಿಚಾರವಾಗಿ ಮಾಧ್ಯಮಗಳು ಕೂಡ ಸಾಕಷ್ಟು ಆರೋಪ ಮಾಡಿವೆ. ಗುತ್ತಿಗೆದಾರರ ಸಂಘದ ಅದ್ಯಕ್ಷರು ಪ್ರಧಾನಿಗೆ ಕಾಗದ ಬರೆದರೂ ಪ್ರಧಾನಮಂತ್ರಿಗಳು ಉತ್ತರ ನೀಡಲಿಲ್ಲ. 

ಪಿಎಸ್ಐ, ಪಿಡ್ಬ್ಲ್ಯೂ ಡಿ ಜೆಇಇ, ಕೆಪಿಟಿಸಿಎಲ್ ಸೇರಿದಂತೆ ಭ್ರಷ್ಟಾಚಾರದ ಪರ್ವತವನ್ನೇ ನಿರ್ಮಿಸಿದ್ದಾರೆ. ಆದರೂ ಸತ್ಯಹರಿಶ್ಚಂದ್ರರ ಮೊಮ್ಮಕ್ಕಳಂತೆ ಮಾತನಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿಗಳು ರಾಜ್ಯಕ್ಕೆ  ಪದೇ ಪದೆ ಬರುತ್ತಿದ್ದಾರೆ. ರಾಜ್ಯಕ್ಕೆ ಬರುವ ಮೋದಿ ಅವರು ಈ ಭ್ರಷ್ಟಾಚಾರದ ವಿಚಾರವಾಗಿ ಏನಾದರೂ ಮಾತನಾಡುತ್ತಿದ್ದಾರಾ? ಸುಳ್ಳನೇ ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ. 

ಈ ಸರ್ಕಾರ ಕಳೆದ ಏಳೆಂಟು ತಿಂಗಳಿಂದ ವಿಧವಾ, ಅಂಗವಿಕಲರ, ವೃದ್ಧಾಪ್ಯ ವೇತನವನ್ನು ನೀಡುತ್ತಿಲ್ಲ. ಸರ್ಕಾರದ ಬಳಿ ಹಣವಿಲ್ಲವೇ? ಇದಕ್ಕೆ ಸರ್ಕಾರ ಉತ್ತರಿಸುತ್ತಿಲ್ಲ. ಹೀಗಾಗಿ ಜನರಿಗೆ ಎಚ್ಛರಿಕೆ ನೀಡಲು ಹೊಸ ಕಾರ್ಯಕ್ರಮ ಮಾಡಿದ್ದೇವೆ.

ಬಿಜೆಪಿ ಸರ್ಕಾರದ ಅವಧಿ ಕೇವಲ 100 ದಿನಗಳೂ ಇಲ್ಲ. ಆದರೂ ತನ್ನ ಪ್ರಣಾಳಿಕೆಯ ಶೇ.90ರಷ್ಟು ಭರವಸೆ ಈಡಡೇರಿಸಿಲಿಲ್ಲ. ಆದರೂ ಹೊಸ ಪ್ರಣಾಳಿಕೆ ಬಿಡುಗಡೆ ಮಾಡಲು ತಯಾರಿ ಮಾಡುತ್ತಿದ್ದಾರೆ. ಜನರಿಗೆ ಯಾವುದೇ ಅನುಕೂಲ ಮಾಡಿಕೊಡದೆ ಸರ್ಕಾರ ತನ್ನ ಆಡಳಿತ ಮುಗಿಸುತ್ತಿದೆ. ಇದನ್ನೆಲ್ಲ ಅರ್ಥ ಮಾಡಿಕೊಂಡು ಬೆಂಗಳೂರಿನ ಎಲ್ಲ ನಾಯಕರು ಕಾರ್ಯಕರ್ತರು ರಸ್ತೆಯಲ್ಲಿ ಪ್ರತಿಭಟನೆ ಮಾಡುತ್ತೇವೆ. ಬೆಂಗಳೂರಿನ ಎಲ್ಲೆಡೆ ಈ ಪ್ರತಿಭಟನೆ ಮಾಡುತ್ತೇವೆ. 

ನಾಳೆ ಟ್ರಿನಿಟಿ ಸರ್ಕಲ್ ಬಳಿ ಕೆಪಿಸಿಸಿ ಅಧ್ಯಕ್ಷರು, ಸಿಎಲ್ ಪಿ ನಾಯಕರಾದ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಅಭಿಶೇಕ್ ದತ್ ಅವರು ಭಾಗವಹಿಸಲಿದ್ದಾರೆ. ಬೆಂಗಳೂರಿನ ಎಲ್ಲ 28 ಕ್ಷೇತ್ರಗಳಲ್ಲಿ ಶಆಸಕರು, ಪರಾಜಿತ ಅಭ್ಯರ್ಥಿಗಳು 300ಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಇದರ ವಿರುದ್ಧ ಹೋರಾಟ ಮಾಡಿದರಷ್ಟೇ ನಾವು ಮುಂದೆ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ.

ಪಕ್ಷ ಅಧಿಕಾರಕ್ಕೆ ಬಂದರೆ ಮಾಡುವ ಗ್ಯಾರೆಂಟಿ ಯೋಜನೆಗಳನ್ನು ಪ್ರಕಟಿಸಲಾಗಿದೆ. 200 ಯುನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಘೋಷಿಸಿದ್ದೇವೆ. ರಾಜ್ಯದ ಬಹುತೇಕ 80% ಮಂದಿಗೆ ವಿದ್ಯುತ್ ಬಿಲ್ ಪಾವತಿಸುವ ಹೊರೆ ಇರುವುದಿಲ್ಲ. ಇನ್ನು ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆ ಪ್ರಕಟಿಸಿದ್ದೇವೆ. ನಾವು ಹಿಂದೆ ಹೇಳಿರುವುದನ್ನು ಮಾಡಿದ್ದೇವೆ, ಮುಂದೆಯೂ ಮಾಡುತ್ತೇವೆ. ಬಿಜೆಪಿ ಅವರು ಹೇಳಿರುವುದರಲ್ಲಿ ಯಾವುದನ್ನು ಮಾಡಿಲ್ಲ.’
[22/01, 4:53 PM] Kpcc official: ಬೆಂಗಳೂರಿನ ರಸ್ತೆಗಳು ಭ್ರಷ್ಟ ಸರ್ಕಾರದ ಆಡಳಿತದಲ್ಲಿ ಕಂದಕಗಳಾಗಿ ಮಾರ್ಪಟ್ಟಿವೆ!

ಈ #ನಾಲಾಯಕ್‍ಸರ್ಕಾರ ದ ಆಡಳಿತದಲ್ಲಿ ಜನ ರಸ್ತೆಗೆ ಇಳಿಯಲು ಭಯ ಪಡುವಂತಾಗಿದೆ!

ಯಾವಾಗ ಯಾವ ರಸ್ತೆ ಬಾಯಿ ತೆರೆದು ಬಲಿಯಾಗುತ್ತೇವೋ ಎಂದು!

ಬೆಂಗಳೂರಿನ ಘನತೆ ಮಣ್ಣು ಪಾಲಾಗಿಸಿ ಜನರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿರುವುದೇ @BSBommai ಸರ್ಕಾರದ ಸಾಧನೆ!!

https://twitter.com/rssurjewala/status/1617059046963707905?s=46&t=CGl3ATtCxKCW_ZzuyaQ5ng

Post a Comment

Previous Post Next Post