ಗ್ರಾಹಕರಿಗೆ ಬಿಗ್​ ಶಾಕ್​! ಕರ್ನಾಟಕದ ಈ ಬ್ಯಾಂಕ್ ಇಂದಿನಿಂದ ಬಂದ್

RBI Restrictions: ಗ್ರಾಹಕರಿಗೆ ಬಿಗ್​ ಶಾಕ್​! ಕರ್ನಾಟಕದ ಈ ಬ್ಯಾಂಕ್ ಇಂದಿನಿಂದ ಬಂದ್

ಆರ್​ಬಿಐ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ಐದು ಬ್ಯಾಂಕ್​ಗಳು ಮುಂದಿನ 6 ತಿಂಗಳ ಕಾಲ ಯಾವುದೇ ಸಾಲವನ್ನು ನೀಡುವಂತಿಲ್ಲ.

1/ 7

ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ಶುಕ್ರವಾರ ಐದು ಸಹಕಾರಿ ಬ್ಯಾಂಕ್‌ಗಳ ಮೇಲೆ ಹಣ ಡ್ರಾ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ನಿರ್ಬಂಧಗಳನ್ನು ವಿಧಿಸಿ ಆದೇಶ ಜಾರಿ ಮಾಡಿದೆ. ಬ್ಯಾಂಕ್​​ನ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಆರ್​ಬಿಐ ಈ ಆದೇಶ ಹೊರಡಿಸಿದೆ.

2/ 7

ಆರ್​ಬಿಐ ಆದೇಶ ಪ್ರತಿಯಲ್ಲಿ ನೀಡಿರುವ ಮಾಹಿತಿಯಂತೆ ಈ ನಿರ್ಬಂಧಗಳು ಆರು ತಿಂಗಳವರೆಗೆ ಜಾರಿಯಲ್ಲಿರುತ್ತವೆ. ಆರ್​ಬಿಐ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳು ಆರ್‌ಬಿಐನ ಪೂರ್ವಾನುಮತಿ ಇಲ್ಲದೆ, ಸಾಲಗಳನ್ನು ನೀಡಲು, ಯಾವುದೇ ಹೂಡಿಕೆ ಮಾಡಲು ಮತ್ತು ಯಾವುದೇ ಜವಾಬ್ದಾರಿಯನ್ನು ಹೊಂದಲು ಮತ್ತು ಅದರ ಯಾವುದೇ ಆಸ್ತಿಯನ್ನು ವರ್ಗಾಯಿಸಲು ಅಥವಾ ವಿಲೇವಾರಿ ಮಾಡಲು ಸಾಧ್ಯವಿಲ್ಲ.

3/ 7

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿರುವ ಶಿಂಷಾ ಸಹಕಾರ ಬ್ಯಾಂಕ್​ ಮೇಲೆ ಆರ್​ಬಿಐ ನಿರ್ಬಂಧ ವಿಧಿಸಿದೆ. ಈ ಬ್ಯಾಂಕ್​ನಲ್ಲಿ ಹಣ ಇಟ್ಟಿರುವ ಗ್ರಾಹಕರು ಮುಂದಿನ ಆರು ತಿಂಗಳವರೆಗೂ ಯಾವುದೇ ರೀತಿಯಲ್ಲಿ ಹಣ ಡ್ರಾ ಮಾಡುವಂತಿಲ್ಲ ಎಂದು ತಿಳಿಸಿದೆ.

4/ 7

ಉಳಿದಂತೆ ಉತ್ತರ ಪ್ರದೇಶದ ಲಕ್ನೋದಲ್ಲಿರುವ HCBL ಸಹಕಾರ ಬ್ಯಾಂಕ್, ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿರುವ ಆದರ್ಶ ಮಹಿಳಾ ನಗರಿ ಸಹಕಾರಿ ಬ್ಯಾಂಕ್ ಮೇಲೂ ಇದೇ ರೀತಿ ನಿರ್ಬಂಧ ವಿಧಿಸಲಾಗಿದೆ.

5/ 7

ಆಂಧ್ರ ಪ್ರದೇಶದ ಅನಂತಪುರದ ಜಿಲ್ಲೆಯ ಉರವಕೊಂಡ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಮತ್ತು ಮಹಾರಾಷ್ಟ್ರದ ಅಕ್ಲುಜ್​ನಲ್ಲಿರುವ ಶಂಕರರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್ ಮೇಲೂ ನಿರ್ಬಂಧ ವಿಧಿಸಿದ್ದು, ಆದರೆ ಗ್ರಾಹಕರು ಗರಿಷ್ಠ 5,000 ರೂಪಾಯಿಗಳನ್ನು ವಿತ್​​ಡ್ರಾ ಮಾಡಬಹುದಾಗಿದೆ.

6/ 7

ಆದರೆ, ಎಲ್ಲಾ ಐದು ಸಹಕಾರಿ ಬ್ಯಾಂಕ್‌ಗಳ ಅರ್ಹ ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್​​ನಿಂದ ತಮ್ಮ ತಮ್ಮ ಠೇವಣಿ ವಿಮೆ ಕ್ಲೈಮ್​ ಮೊತ್ತದಲ್ಲಿ 5 ಲಕ್ಷ ರೂಪಾಯಿ ವರೆಗಿನ ಮೊತ್ತವನ್ನು ಪಡೆದುಕೊಳ್ಳಬಹುದು ಎಂದು ಆರ್​ಬಿಐ ತಿಳಿದಿದೆ.

7/ 7

ಆರ್​ಬಿಐ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ಐದು ಬ್ಯಾಂಕ್​ಗಳು ಮುಂದಿನ 6 ತಿಂಗಳ ಕಾಲ ಯಾವುದೇ ಸಾಲವನ್ನು ನೀಡುವಂತಿಲ್ಲ.

Published by:Sumanth SN

Post a Comment

Previous Post Next Post