ಸ್ರೇಲ್: ಭಾರತವು ಇಸ್ರೇಲ್ನಲ್ಲಿರುವ ತನ್ನ ಪ್ರಜೆಗಳಿಗೆ ಸಲಹೆಯನ್ನು ನೀಡಿದ್ದು ಜಾಗರೂಕರಾಗಿರಲು ಮತ್ತು ಸುರಕ್ಷತಾ ಪ್ರೋಟೋಕಾಲ್ಗಳನ್ನು ಗಮನಿಸಲು ಕೇಳಿಕೊಂಡಿದೆ.
ರಾಯಭಾರ ಕಚೇರಿಯು ಸಲಹೆಯೊಂದನ್ನು ನೀಡಿದ್ದು, "ಇಸ್ರೇಲ್ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸಲು ವಿನಂತಿಸಲಾಗಿದೆ.ಅನಗತ್ಯ ಸಂಚಾರ ಬೇಡ. ಸುರಕ್ಷಿತ ಸ್ಥಳಗಳಲ್ಲಿ ಇರಿ' ಎಂದು ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಗತ್ಯ ಬಿದ್ದರೆ +97235226748 ಈ ಮೊಬೈಲ್ ಸಂಖ್ಯೆ ಅಥವಾ, [email protected] ಈ ಇ-ಮೇಲ್ ಐಡಿಗೆ ಸಂಪರ್ಕಿಸಲು ಕೋರಿದೆ.
Post a Comment