ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ದಾಸರ ಹಳ್ಳಿ ಮಂಜುನಾಥ್ ಅವರ ಪಕ್ಷ ಸೇರ್ಪಡೆ

[15/11, 1:28 PM] Kpcc official: ಜೆಡಿಎಸ್ ಮುಖಂಡರು, ಮಾಜಿ ಶಾಸಕರಾದ ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್, ಬೆಂಗಳೂರು ದಾಸರಹಳ್ಳಿಯ ಆರ್ ಮಂಜುನಾಥ್ ಅವರು ಅಪಾರ ಬೆಂಬಲಿಗ ನಾಯಕರು, ಬೆಂಬಲಿಗರ ಜತೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಉಪಾಧ್ಯಕ್ಷ ಬಿ ಎಲ್ ಶಂಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಶಾಸಕರಾದ ನರೇಂದ್ರಸ್ವಾಮಿ,  ಡಾ. ರಂಗನಾಥ, ನೆಲಮಂಗಲ ಶ್ರೀನಿವಾಸಯ್ಯ, ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಕೆ ಗೋವಿಂದರಾಜು,  ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
[15/11, 4:12 PM] Kpcc official: *ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಕುಮಾರಸ್ವಾಮಿ ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನೂ ದಡ್ಡನೇ?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ*

*ಬೆಂಗಳೂರು:*

“ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದರೆ, ಮುಂಬೈಯಿಂದ ಮರಳಿ ಬರುವುದಾಗಿ ಗೋಪಾಲಯ್ಯ ಮತ್ತು ಎಸ್.ಟಿ.ಸೋಮಶೇಖರ್ ಫೋನ್ ಮಾಡಿ ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರು ನನ್ನ ಹೆಸರು ಹೇಳಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು:

“ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಅನ್ನುವ ಕುಮಾರಸ್ವಾಮಿ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಅನ್ನುತ್ತಾರೆ. ಅವರ ಮಾತು ಕೇಳಲು ನಾವೇನು ದಡ್ಡರೇ?

ಸರ್ಕಾರಕ್ಕೆ ನಮ್ಮ ಪಕ್ಷದ 136 ಜನ ಶಾಸಕರು ಮತ್ತು ಪಕ್ಷೇತರರ ಬೆಂಬಲವಿದೆ. ಕುಮಾರಸ್ವಾಮಿ ಅವರೇ ಎನ್ ಡಿಎಯಿಂದ ಮೊದಲು ಹೊರಬನ್ನಿ, ಒಬ್ಬ ವ್ಯಕ್ತಿಗೆ ಸ್ಪಷ್ಟವಾದ ರಾಜಕೀಯ ನಿಲುವು ಇರಬೇಕು ಎಂದು ಅವರಿಗೆ ಹೇಳಿದೆ. ನಂತರ ಈ ಕುರಿತು ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗಲೇಇಲ್ಲ.

ಕುಮಾರಸ್ವಾಮಿ ಅವರ ದ್ವಂದ್ವ ನಿಲುವು ಅವರಿಗೆ ಅರ್ಥವಾಗುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ, ತೆಲಂಗಾಣದಲ್ಲಿ ಕೆಸಿಆರ್ಗೆ ಪರವಾಗಿ ಮಾತನಾಡುತ್ತಾರೆ. ಕೆಸಿಆರ್ ಅವರ ಮಗ ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾರೆ. 18 ಜನ ಶಾಸಕರನ್ನು ಕರೆದುಕೊಂಡು, ಅವರನ್ನು ಖುರ್ಚಿಯಿಂದ ಇಳಿಸಿದವರ ಜತೆಗೆ ಮಿಲನವಾಗಿದ್ದೇವೆ, ಸಂಸಾರ ನಡೆಸುತ್ತೇವೆ ಎಂದರೆ ಸಿದ್ದಾಂತ ಎನ್ನುವುದು ಎಲ್ಲಿಗೆ ಹೋಯಿತು?

ಜೆಡಿಎಸ್ ಜಾತ್ಯಾತೀತ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟ ಪಕ್ಷ ಎನ್ನುವ ಕಾರಣಕ್ಕೆ 80 ಜನ ಕಾಂಗ್ರೆಸ್ ಶಾಸಕರು ಇದ್ದರೂ 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಈಗ ಸರ್ಕಾರ ಬೀಳಿಸಿದವರ ಜತೆಗೇ ಅವರು ನೆಂಟಸ್ಥನ ಮಾಡಿದ್ದಾರೆ.

ಕುಮಾರಸ್ವಾಮಿ ಅವರೇ, ನೀವು ಸಹ 20 ಮತ್ತು 14 ತಿಂಗಳು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದೀರಿ. ನಿಮಗೆ ಆಡಳಿತ ಮಾಡಲು ಬಿಡಲಿಲ್ಲವೇ? ವಿರೋಧ ಪಕ್ಷವಾಗಿ ಟೀಕೆಗಳನ್ನು ಮಾಡಿದರೂ ಬಿಜೆಪಿಯವರಿಗೆ ನಾವು ಆಡಳಿತ ಮಾಡಲು ಬಿಡಲಿಲ್ಲವೇ? ಆದರೆ ನೀವು ಅಧಿಕಾರ ನನಗೆ ಸಿಗಲಿಲ್ಲ ಎಂದು ಅಸೂಯೆಯಿಂದ ಕೈ, ಕೈ ಉಜ್ಜಿಕೊಂಡು ಕುಳಿತರೇ ಏನು ಪ್ರಯೋಜನ?.

ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ನಮ್ಮ ಆಡಳಿತವನ್ನು ನೋಡಿಕೊಂಡು ಇರಲು ನಿಮಗೆ ಆಗುತ್ತಿಲ್ಲ. ಗ್ಯಾರಂಟಿಗಳ ಬಗ್ಗೆ, ಆಡಳಿತದ ಬಗ್ಗೆ ಎಲ್ಲದರ ಬಗ್ಗೆಯೂ ಕುಹಕವಾಡುತ್ತಿದ್ದೀರಿ. ನಮ್ಮ ತಪ್ಪುಗಳನ್ನು ಹೇಳಿದರೆ ತಿದ್ದಿಕೊಂಡು ಕೆಲಸ ಮಾಡುತ್ತೇವೆ, ಅನವಶ್ಯಕ ಟೀಕೆಗಳು ಸಲ್ಲದು.

ನಮ್ಮ ಆಡಳಿತ ವೈಫಲ್ಯಗಳನ್ನು ಎತ್ತಿ ತೋರಿಸಲಿ, ಅದರ ಬದಲು ನಮ್ಮ ಶಾಸಕರಿಗೆ ಕರೆ ಮಾಡುವುದು ಸೇರಿದಂತೆ ಇತರೇ ಕೆಲಸಗಳನ್ನು ಮಾಡಿದರೆ, ಇದನ್ನು ಏನೆಂದು ಕರೆಯಬೇಕು? ನಮಗೆ ಎಲ್ಲಾ ವಿಚಾರ ಗೊತ್ತಿದೆ! ವಿರೋಧ ಪಕ್ಷಕ್ಕೆ ಅಷ್ಟೊಂದು ಶಕ್ತಿ ಇರುವಾಗ ನಮಗೆ ಇನ್ನೆಷ್ಟು ಶಕ್ತಿ ಇರಬೇಕು.

ಬಿಜೆಪಿಯವರು 6 ತಿಂಗಳ ನಂತರ ನೂತನ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಿದ್ದಾರೆ. ಅದು ಅವರ ಪಕ್ಷದ ಆಂತರಿಕ ವಿಚಾರ. ಅವರು ನಮ್ಮನ್ನು ರಚನಾತ್ಮಕವಾಗಿ ಟೀಕೆ ಮಾಡಿದರೆ ಒಪ್ಪಿಕೊಳ್ಳುತ್ತೇವೆ, ಇದೇ ಪ್ರಜಾಪ್ರಭುತ್ವ.

*ಕುಮಾರಸ್ವಾಮಿ ಒಂದು ನಿಮಿಷ ಇದ್ದಂತೆ ಇನ್ನೊಂದು ನಿಮಿಷ ಇರುವುದಿಲ್ಲ*

ಮಂಜುನಾಥ್, ಗೌರಿಶಂಕರ್ ಸೇರಿದಂತೆ ಜೆಡಿಎಸ್ ಪಕ್ಷದ ಅನೇಕರ ಬಳಿ ಕೇಳಿದ್ದೇನೆ, ʼಕುಮಾರಸ್ವಾಮಿ ಅವರು ಹೇಗೆʼ ಎಂದು. ಒಂದು ನಿಮಿಷ ಇದ್ದ ನಿರ್ಧಾರ ಇನ್ನೊಂದು ನಿಮಿಷ ಇರುವುದಿಲ್ಲ, ಅದಕ್ಕೆ ನಮಗೆ ಅವರ ಬಳಿ ಕೆಲಸ ಮಾಡಲು ಆಗುವುದಿಲ್ಲ.  ನಮಗೆ ಕಾಂಗ್ರೆಸ್ ಪಕ್ಷವೇ ಸರಿ ಎಂದು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

ಪಕ್ಷ ಬಿಟ್ಟು ಕಾಂಗ್ರೆಸ್ ಸೇರ್ತೀನಿ ಅಂದವರಿಗೆ ಕುಮಾರಸ್ವಾಮಿ, "ನೀನು ದಳದಲ್ಲೇ ಇರು, ಆದರೆ ಬಿಜೆಪಿಗೆ ಕೆಲಸ ಮಾಡುವ ಬದಲು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡು" ಎಂದು ಹೇಳಿದ್ದಾರಂತೆ. ಇದು ಹೇಗೆ ಸಾಧ್ಯ? ಮೋಸ ಮಾಡಿದಂತೆ ಅಲ್ಲವೇ? ಇದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಗೌರಿಶಂಕರ್ ಮತ್ತು ಮಂಜುನಾಥ್ ಅವರನ್ನೇ ಕೇಳಬೇಕು. ಈ ಕಾರಣಕ್ಕೆ ಇವರಿಬ್ಬರು ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ನಮ್ಮ  ಪಕ್ಷದ ಬಿ.ಎಲ್.ಶಂಕರ್, ನರೇಂದ್ರಸ್ವಾಮಿ, ವಿನಯ್ ಕುಲಕರ್ಣಿ ಸೇರಿದಂತೆ ಇವರಿಗೆ ಪಕ್ಷದಲ್ಲಿ ಇರುವಂತಹ ಹಿರಿತನ ಹೊಸದಾಗಿ ಪಕ್ಷ ಸೇರ್ಪಡೆ ಆದವರಿಗೂ ಇದೆ. ಎಷ್ಟೇ ಮತಗಳನ್ನು ಪಡೆದುಕೊಂಡು ಸೋತಿದ್ದರೂ ನಮ್ಮ ಪಕ್ಷದ ಕಷ್ಟಕಾಲದಲ್ಲಿ ಜೊತೆಗೆ ನಿಂತ ಕಾರ್ಯಕರ್ತರು, ನಾಯಕರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ.

ದಿವಂಗತ ಧೃವನಾರಾಯಣ ಅವರು ಕೇವಲ 1 ಮತಗಳ ಅಂತರದಲ್ಲಿ ಗೆದ್ದಿದ್ದರು, ನಂತರದ ಲೋಕಸಭಾ ಚುನಾವಣೆಯಲ್ಲಿ ಒಂದೊಂದು ಬೂತಿನಲ್ಲಿ ಒಂದೊಂದೇ ಮತಗಳು ಕಡಿಮೆಯಾಗಿ 1200 ಮತಗಳ ಅಂತರದಲ್ಲಿ ಸೋತರು, ಅವರ ಮಗ 50 ಸಾವಿರ ಮತಗಳ ಅಂತರದಲ್ಲಿ ಗೆದ್ದಿದ್ದಾನೆ. ಸೌಮ್ಯಾ ರೆಡ್ಡಿ, ದಿನೇಶ್ ಗುಂಡೂರಾವ್ ಅವರು ಕಡಿಮೆ ಅಂತರದಲ್ಲಿ ಸೋಲು ಗೆಲುವು ಕಂಡಿದ್ದಾರೆ. ಅಂದರೆ ನಾವು ಯಾರನ್ನೂ ಕೂಡ ಎಂತಹ ಸಂದರ್ಭದಲ್ಲಿಯೂ ದೂರ ಮಾಡುವುದಿಲ್ಲ ಎನ್ನುವುದಕ್ಕೆ ಈ ಫಲಿತಾಂಶಗಳು ಉದಾಹರಣೆ ನೀಡಿವೆ.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನುಗ್ಗಬೇಕು, ಹಳಬರು, ಹೊಸಬರು ಎಲ್ಲರಿಗೂ ಅವಕಾಶ ನೀಡುತ್ತಿದ್ದೇವೆ, ಮುಂದೆಯೂ ನೀಡುತ್ತೇವೆ.

ಕುಮಾರಸ್ವಾಮಿ ಅವರೇ, ಗೌರಿಶಂಕರ್ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ನೋಟಿಸ್ ನೀಡಿ, ಮತ್ತೆ ನಿಮ್ಮ ಜತೆಯೇ ಕೆಲಸ ಮಾಡು ಎಂದರೆ ಅದು ಹೇಗೆ ಸಾಧ್ಯ. ಮನುಷ್ಯನಿಗೆ ತನ್ನದೇ ಆದ ಸ್ವಾಭಿಮಾನವಿರುತ್ತದೆ ಅಲ್ಲವೇ?

ನಾನು ಮತ್ತು ಚೆನ್ನಿಗಪ್ಪ ಅವರು ಒಂದೇ ಜಿಲ್ಲೆಯವರು, ಒಟ್ಟಿಗೆ ರಾಜಕಾರಣ ಮಾಡುತ್ತಾ ಬೆಳೆದವರು. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಅವರನ್ನು ನೋಡಲು ಹೋಗಿದ್ದೆ. ಈ ವೇಳೆ ‘ಯಾವ ಕಾರಣಕ್ಕೆ ಚುಂಚನಗಿರಿ ಸ್ವಾಮೀಜಿಗಳ ಮೇಲೆ ಪ್ರಕರಣ ದಾಖಲಿಸಬೇಕಾಯಿತು’ ಎಂದು ಹೇಳಿ ಬೇಸರ ವ್ಯಕ್ತಪಡಿಸಿದ್ದರು. 

ಡಿ.ಸಿ.ಗೌರಿಶಂಕರ್ ಅವರನ್ನು ಸೋಲಿಸಲು ನಾವು ಸಾಕಷ್ಟು ಕೆಲಸ ಮಾಡಿದೆವು, ನಮ್ಮ ಅಭ್ಯರ್ಥಿ 6 ಸಾವಿರ ಮತಗಳನ್ನು ಪಡೆದರೆ ಗೌರಿಶಂಕರ್ ಅವರು 2 ಸಾವಿರ ಮತಗಳ ಅಂತರದಿಂದ ಸೋತರು. ಈಗ ನಮ್ಮವರೇ ಆಗಿದ್ದಾರೆ, ಪ್ರಬಲ ಶಕ್ತಿಯೊಂದು ತುಮಕೂರಿನ ಭಾಗದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದೆ.

*ಬಿಜೆಪಿಯವರು ನಮ್ಮ ಮುಹೂರ್ತವನ್ನೇ ಹುಡುಕಿದ್ದಾರೆ*

ಗೌರಿಶಂಕರ್ ಮತ್ತು ಮಂಜುನಾಥ್ ಅವರು ನ.15 ರಂದೆ ಪಕ್ಷ ಸೇರ್ಪಡೆಯಾಗಬೇಕು ಎಂದು ಇಚ್ಚಿಸಿದ್ದರು, ವಿಜಯೇಂದ್ರ ಅವರು ಈ ದಿನವೇ ಅಧಿಕಾರ ಸ್ವೀಕಾರ ಮಾಡುತ್ತಿದ್ದಾರೆ ಎಂದರೆ ನಿಮ್ಮಿಬ್ಬರ ಮುಹೂರ್ತ ಚೆನ್ನಾಗಿದೆ ಅಂತ ಅಲ್ಲವೇ?

ಕಾಂಗ್ರೆಸ್ ಪಕ್ಷದಲ್ಲಿ ಯಾವ ಸ್ಥಾನ ಸಿಗದೇ ಇರಬಹುದು, ಆದರೆ ತ್ರಿವರ್ಣ ಧ್ವಜವನ್ನು ಹೆಗಲ ಮೇಲೆ ಹಾಕಿಕೊಳ್ಳುವ ಪುಣ್ಯ ಸಿಗುತ್ತದೆ. ಬೇರೆ ಯಾವ ಪಕ್ಷದಲ್ಲಿಯೂ ಈ ಅವಕಾಶ ಸಿಗಲು ಸಾಧ್ಯವಿಲ್ಲ.

ಯಾರೇ ಏನೂ ತಿಪ್ಪರಲಾಗ ಹೊಡೆದರೂ ಯಾರು ಏನೂ ಮಾಡಲು ಆಗುವುದಿಲ್ಲ, ಮುಂದಿನ ಚುನಾವಣೆಯನ್ನು ಎಲ್ಲರೂ ಎದುರಿಸೋಣ. ಮುಂದಿನ ವಾರ ಇನ್ನಷ್ಟು ಪ್ರಮುಖ ನಾಯಕರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ಹೊಸದಾಗಿ ಪಕ್ಷ ಸೇರ್ಪಡೆಯಾದ ಕ್ಷೇತ್ರಗಳಲ್ಲಿ ನಾನೇ ಖುದ್ದಾಗಿ ಬಂದು ಕಾರ್ಯಕರ್ತರ ಸಭೆ ನಡೆಸಲಿದ್ದು, ದಾಸರಹಳ್ಳಿ, ತುಮಕೂರು ಗ್ರಾಮಾಂತರದಲ್ಲಿ ಶೀಘ್ರ ಸಭೆ ನಡೆಸುತ್ತೇನೆ.
[15/11, 5:56 PM] +91 99000 09614: *ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಮಾಜಿ ಶಾಸಕರಾದ ಗೌರಿಶಂಕರ್ ಹಾಗೂ ಆರ್ ಮಂಜುನಾಥ್ ಅವರ ಮಾತುಗಳು*

*ಆರ್ ಮಂಜುನಾಥ್*
ನಮ್ಮ ಕ್ಷೇತ್ರದ ಮತದಾರ ಬಂಧುಗಳಿಗೆ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ಹಾಗೂ ಡಿ.ಕೆ. ಶಿವಕುಮಾರ್ ಅವರ ನಾಯಕತ್ವ ಮೆಚ್ಚಿ ನಾನು, ಗೌರಿಶಂಕರ್ ಹಾಗೂ ಪ್ರಸಾದ್ ಗೌಡ ಅವರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇವೆ.

20-25 ವರ್ಷಗಳ ಕಾಲ ನಾನು ಕಾಂಗ್ರೆಸಿಗನಾಗಿಯೇ ಇದ್ದೆ. ಎಸ್.ಎಂ ಕೃಷ್ಣ ಅವರ ಜೊತೆ ನಾನು 19 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಅವರು ರಾಜ್ಯಪಾಲರಾದ ನಂತರ ನಾನು ಚುನಾವಣೆಗೆ ಸ್ಪರ್ಧಿಸಿದೆ. ನಾನು ಕೋವಿಡ್ ಸೇರಿದಂತೆ ಎಲ್ಲಾ ಸಂದರ್ಭಗಳಲ್ಲೂ 24/7 ಕೆಲಸ ಮಾಡಿದೆ. ಆದರೂ ನಾಲ್ಕೂವರೆ ಸಾವಿರ ಮತಗಳ ಅಂತರದಲ್ಲಿ ಚುನಾವಣೆಯಲ್ಲಿ ಸೋತಿದ್ದೇನೆ. 

ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ನಾವು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದೇವೆ. ನಮಗೆ  ಕಳೆದ 15 ವರ್ಷಗಳಿಂದ ಬಿಜೆಪಿ ನಾಯಕರು ಎಷ್ಟು ತೊಂದರೆ ಕಿರುಕುಳ ನೀಡಿದ್ದಾರೆ. ಅಂತಹವರ ಜೊತೆ ನಾವು ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅಡ್ಡಗಾಲು ಹಾಕಿಕೊಂಡು ವಿರೋಧ ಮಾಡಿಕೊಂಡು ಬಂದವರ ಜೊತೆ ಮೈತ್ರಿ ಮಾಡಿಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ. ನಾನು ಶಾಸಕನಾಗಿದ್ದರೂ ಅನುದಾನ ನೀಡುವ ವಿಚಾರದಲ್ಲಿ ಅಯ್ಯೋ ಎನಿಸಿದ್ದಾರೆ. ನಾಲ್ಕು ವರ್ಷಗಳ ಕಾಲ ತೊಂದರೆ ನೀಡಿದ್ದಾರೆ. ಇದರಿಂದಾಗಿ ಕ್ಷೇತ್ರದ ಜನರೇ ಕಾಂಗ್ರೆಸ್ ಸೇರೋಣ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನರಿಗೆ ತಲುಪಿದರೂ ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ಆದರೆ ಬಿಜೆಪಿ ಸತ್ಯದ ತಲೆ ಮೇಲೆ ಹೊಡೆಯುವಂತೆ ಸುಳ್ಳು ಹೇಳುತ್ತಾರೆ. ಈ ಸರ್ಕಾರ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪಿವೆ. ಪಾಲಿಕೆ ವ್ಯಾಪ್ತಿಯಲ್ಲಿ ಅನೇಕ ಯೋಜನೆಗಳು ಎಲ್ಲಾ ವರ್ಗದ ಜನರನ್ನು ತಲುಪುತ್ತಿದೆ. ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಎಷ್ಟು ಮಂತ್ರಿಗಳು ಜೈಲು ಸೇರಿದರು. ಅಂತಹ ಕಳಂಕ ಎಂದಿಗೂ ಕಾಂಗ್ರೆಸ್ ಸರ್ಕಾರಕ್ಕೆ ಬಂದಿಲ್ಲ. 

ನಮಗೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಮೇಲೆ ಬಹಳ ಅಭಿಮಾನವಿದೆ. ಅವರು ನಮ್ಮನ್ನು ಬಹಳ ಪ್ರೀತಿ ವಿಶ್ವಾಸದಿಂದ ಕಂಡಿದ್ದಾರೆ. ನಾವು ಕೋಮುವಾದಿ ಬಿಜೆಪಿ ಜತೆ ಸೇರಿ ಹೋಗಲು ಸಾಧ್ಯವಿಲ್ಲ. ನಾವು ಬಹಳ ಸ್ವಚ್ಛ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ನಮಗೆ ಸರ್ಕಾರದಿಂದ ಸಹಕಾರ ನೀಡಬೇಕು. ನಮ್ಮ ಕ್ಷೇತ್ರದ ಜನರಿಗೆ ಒಳ್ಳೆಯದಾಗಬೇಕು.

ಬಿಜೆಪಿ ಸರ್ಕಾರದಲ್ಲಿ ಇಡೀ ದೇಶದಲ್ಲಿ ಹೈಕೋರ್ಟ್ ಮೆಟ್ಟಿಲೇರಿ ಕ್ಷೇತ್ರಕ್ಕೆ ಅನುದಾನ ತಂದಿರುವವನು ನಾನು. ಆದರೂ ಕೆಲಸ ಮಾಡಲು ಅವಕಾಶ ನೀಡಲಿಲ್ಲ. ಅಧಿಕಾರಿಗಳ ವರ್ಗಾವಣೆ ಮಾಡಿ ಕೆಲಸ ಮುಂದಕ್ಕೆ ಹೋಗುವಂತೆ ಮಾಡಿದರು. ನಾನು ಪಕ್ಷ ನಿಷ್ಠೆ ಹಾಗೂ ಶಿಸ್ತಿನಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿಯುತ್ತೇನೆ.

*ಗೌರಿ ಶಂಕರ್*

ಚನ್ನಿಗಪ್ಪ ಅವರ ಕುಟುಂಬ 35 ವರ್ಷಗಳ ಕಾಲ ದೆವೇಗೌಡರ ಕುಟುಂಬಕ್ಕೆ ಹೆಗಲಿಗೆ ಹೆಗಲು ಕೊಟ್ಟು ದುಡಿದಿದೆ. ಆದರೆ ಇಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ನಾವು ಇಂದು ನಿಮ್ಮ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇವೆ. ಇಡೀ ದೇಶದಲ್ಲಿ ಸರ್ವಜನಾಂಗದ ಹಿತಕ್ಕಾಗಿ ಅನೇಕ ಭಾಗ್ಯಗಳನ್ನು ಕೊಟ್ಟಿರುವ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ ಅವರು. 

ಡಿ.ಕೆ. ಶಿವಕುಮಾರ್ ಅವರು ಡೈನಾಮಿಕ್ ನಾಯಕರು. ಯಾರು ಯಾವುದೇ ಸಮಯದಲ್ಲಿ ಕರೆ ಮಾಡಿದರೂ ನಮ್ಮ ಸಮಸ್ಯೆ ಏನು ಎಂದು ಕೇಳುವ ನಾಯಕ ಶಿವಕುಮಾರ್ ಅವರು. ನಾನು ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿದ ನಂತರ ನಮ್ಮ ತಂದೆ ನನ್ನನ್ನು ಮಿನಿ ಡಿಕೆ ಅಂತಲೇ ಕರೆಯುತ್ತಿದ್ದರೆ. ಡಿ.ಕೆ. ಶಿವಕುಮಾರ್ ಅವರಲ್ಲಿ ಗತ್ತಿ ಇದೆ ಎಂದು ನಮ್ಮ ತಂದೆಗೆ ಗೊತ್ತಿತ್ತು. ಆ ಕಾರಣಕ್ಕೆ ಅವರು ಆ ರೀತಿ ಕರೆಯುತ್ತಿದ್ದರು. ಅವರ ರಾಜಕೀಯ ಶೈಲಿ ಇಷ್ಟವಾದರೂ ನಾನು ಬೇರೆ ಪಕ್ಷದಲ್ಲಿದ್ದ ಕಾರಣ ಅವರಂತೆ ಮಾತನಾಡಲು ಆಗುತ್ತಿರಲಿಲ್ಲ. ನನ್ನ ಸೌಭಾಗ್ಯ ನುಡಿದಂತೆ ನಡೆಯುವ ಉಪಮುಖ್ಯಮಂತ್ರಿಗಳು ನಮ್ಮ ಡಿ.ಕೆ. ಶಿವಕುಮಾರ್ ಅವರು. 

ಅನೇಕರು ಭವಿಷ್ಯ ನುಡಿಯುತ್ತಾರೆ. ಆದರೆ ಅದ್ಯಾವುದೂ ಆಗುವುದಿಲ್ಲ. ಆದರೆ ಶಿವಕುಮಾರ್ ಅವರು ಚುನಾವಣೆಗೂ ಮುನ್ನ ಕಾಂಗ್ರೆಸ್ 135 ಸೀಟುಗಳನ್ನು ಗೆಲ್ಲಲಿದೆ ಎಂಬ ಭವಿಷ್ಯ ನುಡಿದರು. ಅದರಂತೆ ಕಾಂಗ್ರೆಸ್ ಪಕ್ಷ 135 ಸೀಟುಗಳನ್ನು ಗೆದ್ದಿದೆ. ಅವರ ಭವಿಷ್ಯ ಸತ್ಯವಾಯಿತು. ನಾನು ಶಿವಕುಮಾರ್ ಅವರಿಗೆ ಕೇಳಿದೆ ಅದೇಗೆ ಅಷ್ಟು ನಿಖರವಾಗಿ ಹೇಳಿದಿರಿ ಎಂದು. ಅದು ನಾವು ಪಕ್ಷಕ್ಕೆ ನೀಡುವ ಬದ್ಧತೆ. ಆ ಬದ್ಧತೆ ಇದ್ದು, ಎಲ್ಲರೂ ಕೈಜೋಡಿಸಿದರೆ ಅದು ಸಾಧ್ಯ ಎಂದರು. 

ದಾಸರಹಳ್ಳಿ ಹಾಗೂ ತುಮಕೂರು ಗ್ರಾಮಾಂತರ ಕ್ಷೇತ್ರಗಳು ಅವಳಿ ಕ್ಷೇತ್ರಗಳಿದ್ದಂತೆ. ನಾನು ಹಾಗೂ ಮಂಜುನಾಥ್ ಅವರು ಒಟ್ಟಿಗೆ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಟ್ಟಿಗೆ ಕಾಂಗ್ರೆಸ್ ಪಕ್ಷ ಸೇರಿ ಅವರೊಟ್ಟಿಗೆ ಕಲಸ ಮಾಡೋಣ ಎಂದು ತೀರ್ಮಾನ ಮಾಡಿದೆವು. ಇಲ್ಲದಿದ್ದರೆ ರಾಜಕಾರಣ ಮಾಡದೇ ಮನೆಯಲ್ಲಿರೋಣ ಎಂದು ತೀರ್ಮಾನ ಮಾಡಿದೆವು.

ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರೆ ನಾವು ಪಕ್ಷದಲ್ಲಿ ಮುಂದುವರಿಯುವುದಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಭೇಟಿ ಮಾಡಿ ಹೇಳಿ ಬಂದಿದ್ದೇವೆ. ನನ್ನ ಕ್ಷೇತ್ರದ ಹಳ್ಳಿಗಳಲ್ಲಿ ನಮ್ಮ ಕಾರ್ಯಕರ್ತರು ಬಿಜೆಪಿಯವರ ಜತೆ ಸೇರುವುದಿಲ್ಲ. ಅಷ್ಟರ ಮಟ್ಟಿಗೆ ಜಿದ್ದಾಜಿದ್ದಿನ ರಾಜಕೀಯ ಮಾಡುತ್ತೇವೆ. ನನ್ನ ವಿರುದ್ಧ ಗೆದ್ದಿರುವ ಶಾಸಕರ ಜತೆ ನಾನು ಕಳೆದ 15 ವರ್ಷಗಳಿಂದ ವ್ಯಕ್ತಿಗತವಾಗಿ ಯುದ್ಧ ಮಾಡಿದ್ದೇವೆ. ಈಗ ಅವರ ಜತೆ ಕೈಕುಲುಕಿ ರಾಜಕೀಯ ಮಾಡಲು ನಾನು ಮುಂದಾದರೂ ಕಾರ್ಯಕರ್ತರು ಮಾತ್ರ ಯಾವುದೇ ಕಾರಣಕ್ಕೂ ಅವರ ಜತೆ ಕೈಜೋಡಿಸುವುದಿಲ್ಲ. ನನ್ನ ಕಾರ್ಯಕರ್ತರು ಬಿಜೆಪಿ ಜೊತೆ ಹೋಗಬಾರದು ಹೋಗುವುದೇ ಆದರೆ ನಮಗೆ ವಿಷ ಕೊಟ್ಟು ಹೋಗಿ ಎಂದು ಕಾರ್ಯಕರ್ತರು ಆದೇಶ ನೀಡಿದರು.

ನಾನು ಈ ಮಟ್ಟಕ್ಕೆ ಬೆಳೆಯಲು ನಮ್ಮ ಕಾರ್ಯಕರ್ತರು ಕಾರಣ. ಅವರನ್ನು ಕಳೆದುಕೊಂಡು ನಾನೆಲ್ಲಿಗೆ ಹೋಗಲಿ. ಅವರೇ ನನ್ನ ಪಾಲಿನ ದೇವರು. ನನಗೆ ಮೈತ್ರಿಗಿಂತ ಕಾರ್ಯಕರ್ತರು ಮುಖ್ಯ. ಹೀಗಾಗಿ ಕಾರ್ಯಕರ್ತರ ಅಭಿಪ್ರಾಯದಂತೆ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸೂಚಿಸುವ ಅಭ್ಯರ್ಥಿಗೆ ನನ್ನ ವಿಧಾನಸಭಾ ಕ್ಷೇತ್ರದಿಂದ ಅತಿ ಹೆಚ್ಚು ಮತಗಳನ್ನು ಕೊಡಿಸುವ ಮೂಲಕ ನಮ್ಮ ಶಕ್ತಿಯನ್ನು ಪ್ರದರ್ಶಿಸೋಣ ಎಂದು ಈ ವೇದಿಕೆ ಮೂಲಕ ಹೇಳುತ್ತೇವೆ.

ಪರಮೇಶ್ವರ್, ವಾಸಣ್ಣ ಹಾಗೂ ರಾಜಣ್ಣ ಸೇರಿದಂತೆ ತುಮಕೂರು ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ಮಾಡಿದ್ದೇನೆ.  ಬೇರೆ ತಾಲೂಕು ಹಾಗೂ ಕ್ಷೇತ್ರಗಳಲ್ಲೂ ಅನೇಕರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ. ಪಕ್ಷದ ಅಧ್ಯಕ್ಷರು ಹಾಗೂ ನಾಯಕರು ನಮಗೆ ಶಕ್ತಿ ನೀಡಿದರೆ ಮತ್ತಷ್ಟು ಪ್ರಮುಖರನ್ನು ಪಕ್ಷಕ್ಕೆ ಸೇರುವಂತೆ ಮಾಡಿ ಶಕ್ತಿ ತುಂಬುತ್ತೇವೆ. ನಾವು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಬೇಕಿದೆ. ಈಗಾಗಲೇ ನಮಗೆ ಯಾವ ರೀತಿ ತೊಂದರೆ ಕೊಡಬೇಕು ಎಂದು ನಿನ್ನೆಯಿಂದಲೇ ಆರಂಭವಾಗಿದೆ. ಅದಕ್ಕೆ ನಾವು ಚಿಂತೆ ಮಾಡುವ ಅಗತ್ಯವಿಲ್ಲ. ನಾವು ನೇರವಾಗಿ ಯುದ್ಧ ಮಾಡೋಣ. ನಾವೆಲ್ಲರೂ ಒಮ್ಮತವಾಗಿ ಕಾಂಗ್ರೆಸ್ ಪಕ್ಷವನ್ನು ಕಟ್ಟೋಣ.

Post a Comment

Previous Post Next Post